Missing
ಪೊಳಲಿ ದೇವಸ್ಥಾನಕ್ಕೆ ಹೋದ ಹತ್ತನೇ ತರಗತಿ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು
ಮಂಗಳೂರು: ಉಳ್ಳಾಲ ತಾಲೂಕಿನ ಪಜೀರ್ ಅಡ್ಕ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರಿ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಜೀರ್ ಅಡ್ಕ ನಿವಾಸಿ ಗುಲಾಬಿ ಮತ್ತು ಜಗದೀಶ್ ಪೂಜಾರಿ ದಂಪತಿಯ ಪುತ್ರಿ, ಹರೇಕಳ ರಾಮಕೃಷ್ಣ ಹೈಸ್ಕೂಲ್ನ 10ನೇ ತರಗತಿ ವಿದ್ಯಾರ್ಥಿನಿ ಚೈತನ್ಯ (16) ನಾಪತ್ತೆಯಾದವಳು. ಏಪ್ರಿಲ್ 12ರಂದು ಬೆಳಗ್ಗೆ 7:30ಕ್ಕೆ ಸ್ನೇಹಿತರ ಜೊತೆ ಪೊಳಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಈಕೆ, ರಾತ್ರಿಯಾದರೂ ಮನೆಗೆ ಮರಳದಿದ್ದಾಗ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಸಂಬಂಧಿಕರ ಹಾಗೂ ಸ್ನೇಹಿತರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಸುಳಿವು ಸಿಗದ ಕಾರಣ ಏಪ್ರಿಲ್ 15ರಂದು ಪೊಲೀಸರಿಗೆ ದೂರು ನೀಡಲಾಗಿದೆ.

ಕೊಣಾಜೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಾಣೆಯಾದ ಬಾಲಕಿಯು ಸುಮಾರು 5 ಅಡಿ ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾಳೆ. ನಾಪತ್ತೆಯಾದ ದಿನ ಈಕೆ ನೇರಳೆ ಬಣ್ಣದ ಗೌನ್ ಹಾಗೂ ಕಪ್ಪು ಬಣ್ಣದ ಕೋಟ್ ಧರಿಸಿದ್ದಳು.
ಈ ಬಾಲಕಿಯ ಬಗ್ಗೆ ಮಾಹಿತಿ ಇರುವವರು ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ (0824-2220800) ಅಥವಾ ಕೊಣಾಜೆ ಪೊಲೀಸ್ ಠಾಣೆ (0824-2220536 / 9480802350) ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

-
crime3 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ