Dakshina Kannada
ಸರಕಾರಿ ಆರೋಗ್ಯ ವ್ಯವಸ್ಥೆ ಖಾಸಗೀಕರಣ: ಜನರ ಹಕ್ಕುಗಳ ಮೇಲಿನ ದಾಳಿ – ರಾಮಣ್ಣ ವಿಟ್ಲ ಆಕ್ರೋಶ
ಮಂಗಳೂರು : ಸರಕಾರಿ ಆಸ್ಪತ್ರೆಗಳ ನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ) ಲಿಬರೇಶನ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ.ಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರ ಜನರ ಹಕ್ಕುಗಳ ಮೇಲೆ ದಾಳಿ ಯಾಗಿದೆ ಎಂದು ಆರೋಪಿಸಿದರು

ಜನಸಾಮಾನ್ಯರ ಆರೋಗ್ಯವನ್ನು ರಕ್ಷಿಸಬೇಕಾದ ಸರ್ಕಾರವೇ ಇಂದು ಖಾಸಗಿ ಆಸ್ಪತ್ರೆಗಳ ಲಾಭದಾಸೆಗೆ ತಲೆಬಾಗುತ್ತಿದ್ದು, ಸರಕಾರಿ ಆಸ್ಪತ್ರೆಗಳನ್ನೇ ಹಂತ ಹಂತವಾಗಿ ಖಾಸಗೀಕರಣದ ಹಾದಿಗೆ ಒಯ್ಯುತ್ತಿದೆ. ಇದು ಬಡಜನರ ಬದುಕಿನ ಮೇಲೆ ನಡೆಸುತ್ತಿರುವ ದಾಳಿ ಯಾಗಿದ್ದು ಈ ಒಪ್ಪಂದ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.ಚಿಕಿತ್ಸೆ ಎಂಬ ಹೆಸರಿನಲ್ಲಿ ಸಾವಿರಾರು ರೂಪಾಯಿಗಳನ್ನು ಕಿತ್ತುಕೊಳ್ಳುವ ವ್ಯವಸ್ಥೆಗೆ ಈಗ ಸರ್ಕಾರವೇ ಕಾನೂನುಬದ್ಧ ಬಲ ನೀಡುತ್ತಿದೆ.
ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವುದು ಸರ್ಕಾರದ ಮೊದಲ ಕರ್ತವ್ಯ. ಆದರೆ ಅದನ್ನು ಬಿಟ್ಟು ಖಾಸಗೀಕರಣದ ದಾರಿಗೆ ಹೋಗುವುದು ಎಂದರೆ, ಬಡವರನ್ನು ಆರೋಗ್ಯ ಸೇವೆಯಿಂದ ದೂರ ತಳ್ಳುವುದು ಅನ್ಯಾಯವಾಗಿದ್ದು ,
ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಬಹುಕಾಲದಿಂದ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಅದನ್ನು ಕಡೆಗಣಿಸಿ ಇರುವ ವ್ಯವಸ್ಥೆಯನ್ನೇ ಕುಸಿತಗೊಳಿಸುತ್ತಿದೆ. ಇದು ಜನತೆಗೆ ಮಾಡಿರುವ ದ್ರೋಹವಾಗಿದೆ ಎಂದು ಆರೋಪಿಸಿದರು.

ಸಿ.ಪಿ.ಐ.ಎಂ.ಎಲ್.ಲಿಬರೇಶನ್ ರಾಜ್ಯ ಸಮಿತಿ ಸದಸ್ಯರಾದ ಮೋಹನ್ ಕೊಡಗು ಮಾತನಾಡಿ
ಸರಕಾರಿ ಆಸ್ಪತ್ರೆಗಳು ಜನರ ಹಕ್ಕು ಅದು ಸಂವಿಧಾನಿಕ ಹಕ್ಕು. ಆದರೆ, ಆ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಆರೋಪಿಸಿದರು.
ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಪಾರ್ ಜಸ್ಟೀಸ್ ( AILAJ) ಮುಖಂಡರಾದ ಅಡ್ವಕೇಟ್ ಮಹಮ್ಮದ್ ಲುಕ್ಮಾನ್ ಮಾತನಾಡಿ “ಸೌಲಭ್ಯಗಳ ಕೊರತೆ” ಎಂಬ ನೆಪದಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ಎಂದರೆ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿರುವುದಕ್ಕೆ ಸ್ಪಷ್ಟ ಸಾಕ್ಷಿ ಯಾಗಿದೆ ಹಾಗೂ ಇದು ಸರಕಾರದ ಜನಪರ ನೀತಿಯಲ್ಲ ಬದಲಾಗಿ ಬಂಡವಾಳ ಶಾಹಿ ಗಳ ಪರ ನೀತಿಯಾಗಿದೆ ಎಂದು ಆರೋಪಿಸಿದರು

ಸಿ.ಪಿ.ಐ.ಎಂ.ಎಲ್.ಲಿಬರೇಶನ್ ಜಿಲ್ಲಾ ಸಮಿತಿ ಸದಸ್ಯರಾದ ಅಡ್ವಕೇಟ್ ತುಳಸೀದಾಸ್.ಆರ್ ಮಾತನಾಡಿ ಸರಕಾರಿ ಆಸ್ಪತ್ರೆಗಳಿಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕಾದ ಸರಕಾರ ಖಾಸಗಿಯವರ ಲಾಬಿಗೆ ಮಣಿದಿದ್ದು ಇದನ್ನು ವಿರೋಧಿಸಬೇಕಾದ ವಿರೋಧ ಪಕ್ಷಗಳು ಕೂಡಾ ಕಣ್ಣು ಮುಚ್ಚಿ ಕುಳಿತಿದೆ ಎಂದು ಆರೋಪಿಸಿದರು. ಕಾರ್ಮಿಕ ಮುಖಂಡರಾದ ಮಹಮ್ಮದ್ ಅನ್ಸಾರ್ ಬಜಾಲ್ ಮಾತನಾಡಿ
ಬೆಳ್ತಂಗಡಿ, ಮೂಡಬಿದ್ರೆ, ಬಂಟ್ವಾಳ, ವಿಟ್ಲ ಪ್ರದೇಶಗಳಲ್ಲಿನ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆ ಗಳಿಗೆ ವಹಿಸಿರುವುದರಿಂದ ಲಾಭವಾಗುವುದು ಜನರಿಗೆ ಅಲ್ಲ, ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಮಾತ್ರ,ಇಂದು ಖಾಸಗಿ ಆಸ್ಪತ್ರೆಗಳು ಹೇಗೆ ಜನರನ್ನು ಸುಲಿಗೆ ಮಾಡುತ್ತಿವೆ ಎಂಬುದಕ್ಕೆ ನಿದರ್ಶನ ವಾಗಿದೆ ಎಂದರು.

ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮುಖಂಡರಾದ ಸುಧಾ ರಾವ್ ಬೆಳ್ತಂಗಡಿ, ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಸಿ.ಪಿ.ಐ.ಎಂ.ಎಲ್ ಲಿಬರೇಶನ್ ರಾಜ್ಯ ಸಮಿತಿ ಸದಸ್ಯ ರಾದ ಮೋಹನ್ ಕೆ.ಇ ಪ್ರಾಸ್ತವಿಕ ವಾಗಿ ಮಾತನಾಡಿ ಸ್ವಾಗತಿಸಿ ಈ ಹೋರಾಟ ವನ್ನು ಜಿಲ್ಲಾದ್ಯಂತ ನಡೆಸಬೇಕಾಗಿ ಕರೆ ನೀಡಿದರು.
ಪ್ರತಿಭಟನೆ ಯಲ್ಲಿ ಮುಖಂಡರುಗಳಾದ ಸಂಜೀವ ಬೆಳ್ತಂಗಡಿ, ವಿದ್ಯಾರ್ಥಿ ಮುಖಂಡರಾದ ಪ್ರಜ್ವಲ್ , ರವಿ ಕೊಡಗು, ವಿಲ್ಲಿ ವಿಲ್ಸನ್, ಸರಸ್ವತಿ ಕಡೇಶಿವಾಲಯ, ಜಿಲಾನಿ ಮಂಗಳೂರು, ದೀಕ್ಷಾ ಬಜಾಲ್,ಸುಹೈಲ್, ಶೇಖರ ಪುತ್ತೂರು, ಸುಧಾ.ಜಿ.ರಾವ್ ಬೆಳ್ತಂಗಡಿ, ಕುಸುಮಾವತಿ ಬೆಳ್ತಂಗಡಿ
ಅಚ್ಯುತ ಕಟ್ಟೆ, ಬದ್ರುದ್ದೀನ್, ಅಝೀಂ, ಇಬ್ರಾಹಿಂ, ಹರೀಶ್ ಮುಂತಾದವರು ಪ್ರತಿಭಟನೆಯ ನೇತ್ರತ್ವ ವಹಿಸಿದ್ದರು.

Bantawala
ಬಡವರ ಮರಣಶಾಸನವಾದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ತೀರ್ಮಾನ: ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ (MoU) ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರದ ಈ ನಡೆ ಬಡಜನರ ಪಾಲಿಗೆ ಮರಣಶಾಸನವಾಗಿದೆ ಎಂದು ಸಮಿತಿಯ ಬೆಳ್ತಂಗಡಿ ಸಂಚಾಲಕರಾದ ಶೇಖರ್ ಎಲ್. ಅವರು ಕಿಡಿಕಾರಿದ್ದಾರೆ.
ಆರೋಗ್ಯ ಇಲಾಖೆಯ ಇತ್ತೀಚಿನ ಆದೇಶದಂತೆ, ಬಂಟ್ವಾಳ ತಾಲ್ಲೂಕು ಆಸ್ಪತ್ರೆಯನ್ನು ಎ.ಜೆ ವೈದ್ಯಕೀಯ ಕಾಲೇಜಿನೊಂದಿಗೆ, ವಿಟ್ಲ ಆರೋಗ್ಯ ಕೇಂದ್ರವನ್ನು ಯನೋಪೋಯಾ ಸಂಸ್ಥೆಯೊಂದಿಗೆ ಹಾಗೂ ಬೆಳ್ತಂಗಡಿ ಮತ್ತು ಮೂಡಬಿದ್ರೆ ಕೇಂದ್ರಗಳನ್ನು ಆಳ್ವಾಸ್ ಹೆಲ್ತ್ ಸೆಂಟರ್ನೊಂದಿಗೆ ಒಂದು ವರ್ಷದ ಅವಧಿಗೆ ಒಪ್ಪಂದ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ.
ಬಡರೋಗಿಗಳ ಸುಲಿಗೆಗೆ ದಾರಿ:
ಜನಸಾಮಾನ್ಯರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿದ್ದ ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿಗೆ ವರದಾನವಾಗಿದ್ದವು. ಆದರೆ ಈಗ ಏಕಾಏಕಿ ಖಾಸಗಿ ಸಂಸ್ಥೆಗಳೊಂದಿಗೆ ಕರಾರು ಮಾಡಿಕೊಳ್ಳುವ ಮೂಲಕ ಸರ್ಕಾರಿ ಆಸ್ಪತ್ರೆಗಳನ್ನು ಬಡಜನರ ಸುಲಿಗೆ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಬಡರೋಗಿಗಳನ್ನು ಖಾಸಗಿ ಸಂಸ್ಥೆಗಳ ಪ್ರಯೋಗಶಾಲೆಯಲ್ಲಿ ಗುರಾಣಿಯಂತೆ ಬಳಸಿಕೊಳ್ಳಲು ಈ ಮೂಲಕ ಅವಕಾಶ ಮಾಡಿಕೊಡಲಾಗಿದೆ. ಇದು ಸರ್ಕಾರದ ಅವಿವೇಕತನದ ತೀರ್ಮಾನವಾಗಿದ್ದು, ಸಂವಿಧಾನಬದ್ಧವಾಗಿ ಉಚಿತ ಆರೋಗ್ಯ ಸೇವೆ ನೀಡಲು ತನಗೆ ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಒಪ್ಪಿಕೊಂಡಂತಾಗಿದೆ ಎಂದು ಶೇಖರ್ ಎಲ್. ಟೀಕಿಸಿದ್ದಾರೆ.
ಖಾಸಗಿ ಸಂಸ್ಥೆಗಳ ಹಿತಾಸಕ್ತಿ ರಕ್ಷಣೆ:
ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಮಂಜೂರುಗೊಳಿಸಿ ಖಾಸಗಿ ಮೆಡಿಕಲ್ ಕಾಲೇಜ್ಗಳ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ, ಈಗ ಅವರನ್ನು ಸಂತೋಷಪಡಿಸಲು ಜಿಲ್ಲೆಯ ಬಡಜನರನ್ನು ಬಲಿಕೊಡುತ್ತಿದೆ. ಸರ್ಕಾರಿ ಆಸ್ಪತ್ರೆಗಳನ್ನೇ ಖಾಸಗಿಯವರಿಗೆ ಮಾರಲು ಹೊರಟಿರುವ ಈ ಕ್ರಮವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಮಿತಿ ಎಚ್ಚರಿಸಿದೆ.
ಹೋರಾಟದ ಎಚ್ಚರಿಕೆ:
ಯಾವುದೇ ಕಾರಣಕ್ಕೂ ಬಡವರ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಸರ್ಕಾರ ಈ ಒಪ್ಪಂದದಿಂದ ತಕ್ಷಣ ಹಿಂದೆ ಸರಿಯದಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಸಚಿವರು ಜಿಲ್ಲೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಹಾಕಲಾಗುವುದು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸಂಚಾಲಕ ಶೇಖರ್ ಎಲ್. ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಸರಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಮುನೀರ್ ಕಾಟಿಪಳ್ಳ ತೀವ್ರ ವಿರೋಧ
ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಒಪ್ಪಿಸುವ ಸರಕಾರದ ತೀರ್ಮಾನವನ್ನು ‘ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ಯ ಸಂಚಾಲಕ ಮುನೀರ್ ಕಾಟಿಪಳ್ಳ ಕಟುವಾಗಿ ಟೀಕಿಸಿದ್ದಾರೆ.
ಬೆಳ್ತಂಗಡಿ, ಮೂಡಬಿದ್ರೆ, ವಿಟ್ಲ ಹಾಗೂ ಬಂಟ್ವಾಳ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ಆದೇಶವು ಜಿಲ್ಲೆಯ ಮಟ್ಟಿಗೆ ಒಂದು ‘ಕರಾಳ ಆದೇಶ’ವಾಗಿದೆ. ಈಗಾಗಲೆ ವೆನ್ಲಾಕ್ ಜಿಲ್ಲಾಸ್ಪತ್ರೆ ಮಣಿಪಾಲ್ ಗುಂಪಿಗೂ, ಉಳ್ಳಾಲ ಸಮುದಾಯ ಆಸ್ಪತ್ರೆ ಯೆನಪೋಯ ಗುಂಪಿಗೂ ಹಸ್ತಾಂತರಗೊಂಡಿದೆ. ರಾಜ್ಶ ಸರಕಾರದ ಈ ತೀರ್ಮಾನ ಖಾಸಗಿ ಆಸ್ಪತ್ರೆಗಳ ಸುಲಿಗೆ ನೀತಿಯಿಂದ ಕಂಗೆಟ್ಟಿರುವ ಜನಸಾಮಾನ್ಯರ ಸಂಕಟಗಳನ್ನು ಮತ್ತಷ್ಟು ತೀವ್ರಗೊಳಿಸಿದೆ. ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ತೆರಳುವವರು ಇನ್ನು ಮುಂದೆ ಗುಣಮಟ್ಟದ ಚಿಕಿತ್ಸೆ ನಿರೀಕ್ಷಿಸುವಂತಿಲ್ಲ ಜನಸಾಮಾನ್ಯರ ಆರೋಗ್ಯ ಈಗ ಪೂರ್ಣಪ್ರಮಾಣದಲ್ಲಿ ವ್ಯಾಪಾರದ ಸರಕಾಗುತ್ತಿದೆ. ಸರಕಾರಿ ಆಸ್ಪತ್ರೆಗೆ ಬರುವ ಬಡವರು ಕೇವಲ ಖಾಸಗಿ ಮೆಡಿಕಲ್ ವಿದ್ಯಾರ್ಥಿಗಳ ‘ಕಲಿಕಾ ಸಾಧನ’ವಾಗುವ ಭೀತಿ ಎದುರಾಗಿದೆ. ಆಡಳಿತಾರೂಢ ಸರಕಾರದ ಈ ಜನವಿರೋಧಿ ನೀತಿಯ ವಿರುದ್ಧ ವಿರೋಧ ಪಕ್ಷದ ಶಾಸಕರೂ ಸೊಲ್ಲೆತ್ತುತ್ತಿಲ್ಲ. ಇವರೆಲ್ಲರೂ ಖಾಸಗಿ ಮೆಡಿಕಲ್ ಲಾಬಿಯ ಪರವಾಗಿದ್ದಾರೆ. ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ನಾಶಪಡಿಸುವ ಈ ನಿರ್ಧಾರವನ್ನು ಸರಕಾರ ತಕ್ಷಣ ಹಿಂಪಡೆಯಬೇಕು. ಈ ಕುರಿತು ಜಿಲ್ಲೆಯಾದ್ಯಂತ ಬೃಹತ್ ಜನಹೋರಾಟ ಸಂಘಟಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ
,

crime
ಆದಾಯ ಮೀರಿ ಆಸ್ತಿ ಗಳಿಕೆ: ಮಂಗಳೂರು ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಒಟ್ಟು 6 ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿವೆ. ಬಾಬು ಬಿ.ಎನ್. ಅವರಿಗೆ ಸಂಬಂಧಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ವಾಸದ ಮನೆ ಹಾಗೂ ವಾಣಿಜ್ಯ ಮಳಿಗೆಗಳು, ಬೆಂಗಳೂರಿನ ಫ್ಲಾಟ್ ಮತ್ತು ವಾಸದ ಮನೆಗಳು ಹಾಗೂ ಮಂಗಳೂರಿನಲ್ಲಿರುವ ವಾಸ್ತವ್ಯದ ಮನೆ ಮತ್ತು ಕಚೇರಿಗಳ ಮೇಲೆ ಈ ಕಾರ್ಯಾಚರಣೆ ನಡೆದಿದೆ.
ಪತ್ತೆಯಾದ ಆಸ್ತಿ ಪಾಸ್ತಿ: ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಕೆ.ಎನ್. ಅವರು ನೀಡಿದ ಸೋರ್ಸ್ ವರದಿ ಆಧಾರದ ಮೇಲೆ ಏಪ್ರಿಲ್ 6ರಂದು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇಂದಿನ ದಾಳಿಯಲ್ಲಿ ಅಧಿಕಾರಿಗೆ ಸೇರಿದ ಒಟ್ಟು 3,37,04,000 ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಪತ್ತೆ ಹಚ್ಚಲಾಗಿದೆ. ಇವುಗಳ ಪೈಕಿ ಬೆಂಗಳೂರಿನ ವಾಸದ ಮನೆಯಲ್ಲಿ 23,64,000 ರೂಪಾಯಿ ನಗದು ಹಾಗೂ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಈ ದಾಳಿ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ವಿಭಾಗದ ಡಿವೈಎಸ್ಪಿಗಳಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ಭಾರತಿ ಜಿ., ಶಿವರಾಜ್ಕುಮಾರ್, ರಾಜೇಂದ್ರ ನಾಯ್ಕ್ ಮತ್ತು ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು. ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.

Dakshina Kannada
ದಕ್ಷಿಣ ಕನ್ನಡದಲ್ಲಿ ‘ಟೋಲ್’ ಅನ್ಯಾಯ: ಮತ್ತೆ ವಸೂಲಿಗೆ ಸಿದ್ದವಾಗುವ 3 ಟೋಲ್ ಗೇಟ್ ? ನಿಯಮ ಗಾಳಿಗೆ ತೂರಿ ಜನಸಾಮಾನ್ಯರ ಸುಲಿಗೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ನಿಯಮಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗಿವೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು “60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದೇ ಟೋಲ್ ಪ್ಲಾಜಾ ಇರಬೇಕು” ಎಂದು ಸಂಸತ್ತಿನಲ್ಲಿ ಘೋಷಿಸಿದ್ದರೂ, ದಕ್ಷಿಣ ಕನ್ನಡದಲ್ಲಿ ಮಾತ್ರ ಪರಿಸ್ಥಿತಿ ತದ್ವಿರುದ್ಧವಾಗಿದೆ. ಈಗಾಗಲೇ ಇರುವ 3 ಟೋಲ್ಗಳ ನಡುವೆಯೇ ಹೊಸದಾಗಿ 3 ಟೋಲ್ ಗೇಟ್ ನಿರ್ಮಿಸುವ ಸರ್ಕಾರದ ನಿರ್ಧಾರ ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ.
60 ಕಿ.ಮೀ ವ್ಯಾಪ್ತಿ.. 6 ಟೋಲ್ ಗೇಟ್ : ಹಗಲು ದರೋಡೆಯ ಎಚ್ಚರಿಕೆ!
ಪ್ರಸ್ತುತ ಜಿಲ್ಲೆಯಲ್ಲಿ 3 ಟೋಲ್ ಪ್ಲಾಜಾಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಹೊಸ ಪ್ರಸ್ತಾವನೆಯಂತೆ ಇನ್ನೂ 3 ಟೋಲ್ಗಳು ಸೇರ್ಪಡೆಯಾದರೆ ಜಿಲ್ಲೆಯ ಒಟ್ಟು ಟೋಲ್ಗಳ ಸಂಖ್ಯೆ 6ಕ್ಕೆ ಏರಲಿದೆ. ಹೋರಾಟಗಾರ ಮುನೀರ್ ಕಾಟಿಪಳ್ಳ ಅವರ ಪ್ರಕಾರ, ಇದು ಕೇವಲ ನಿಯಮ ಉಲ್ಲಂಘನೆಯಲ್ಲ, ಜಿಲ್ಲೆಯ ವ್ಯಾಪಾರ ಮತ್ತು ಕೈಗಾರಿಕಾ ಕ್ಷೇತ್ರದ ಮೇಲೆ ನಡೆಸುತ್ತಿರುವ ಗಂಭೀರ ಪ್ರಹಾರವಾಗಿದೆ. ಹೊಸದಾಗಿ ಪ್ರಸ್ತಾಪಿಸಲಾಗಿರುವ ಟೋಲ್ ಪ್ಲಾಜಾಗಳು ಅಂತರದ ನಿಯಮವನ್ನು ಸಂಪೂರ್ಣವಾಗಿ ಗಾಳಿಗೆ ತೂರಿವೆ.

ಗಂಜಿಮಠ (NH 169): ಮಂಗಳೂರು-ಮೂಡುಬಿದಿರೆ ಹೆದ್ದಾರಿಯ ಸೂರಲ್ಪಾಡಿ ಬಳಿ ನಿರ್ಮಾಣವಾಗುತ್ತಿರುವ ಈ ಟೋಲ್, ಮಂಗಳೂರಿನಿಂದ ಕೇವಲ 17 ಕಿ.ಮೀ ದೂರದಲ್ಲಿದೆ. ಇದು ಅಸ್ತಿತ್ವದಲ್ಲಿರುವ ಇತರ ಟೋಲ್ಗಳಿಂದ ಕೇವಲ 30 ಕಿ.ಮೀ ಅಂತರದಲ್ಲಿದೆ.
ವಳಾಲು (NH 75): ಬ್ರಹ್ಮರಕೂಟ್ಲು ಟೋಲ್ನಿಂದ ಕೇವಲ 35 ಕಿ.ಮೀ ಅಂತರದ ಉಪ್ಪಿನಂಗಡಿ ಸಮೀಪದ ವಳಾಲು ಎಂಬಲ್ಲಿ ಹೊಸ ಟೋಲ್ ಸಂಗ್ರಹಕ್ಕೆ ಸಿದ್ಧವಾಗಿ ನಿಂತಿದೆ.

ಪಣಪಿಲ: ಕಾರ್ಕಳ ರಸ್ತೆಯ ಪಣಪಿಲ ಎಂಬಲ್ಲಿಯೂ ಮತ್ತೊಂದು ಟೋಲ್ ಸ್ಥಾಪನೆಯ ಪ್ರಸ್ತಾವನೆಯಿದೆ.
ಬ್ರಹ್ಮರಕೂಟ್ಲು: ಅವಧಿ ಮುಗಿದರೂ ನಿಲ್ಲದ ವಸೂಲಿ
ಇನ್ನು ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ ಗೇಟ್ ವಿಚಾರದಲ್ಲಿ ಸಾರ್ವಜನಿಕರ ಆಕ್ರೋಶ ಮುಗಿಲು ಮುಟ್ಟಿದೆ. ಕಳೆದ 23 ವರ್ಷಗಳಿಂದ ಇಲ್ಲಿ ಹಣ ಸಂಗ್ರಹಿಸಲಾಗುತ್ತಿದ್ದರೂ, ತುರ್ತು ವಾಹನಗಳಿಗಾಗಿ ಪ್ರತ್ಯೇಕ ಲೇನ್ ಅಥವಾ ಆಂಬ್ಯುಲೆನ್ಸ್ ಸಂಚಾರಕ್ಕೆ ಸರಿಯಾದ ವ್ಯವಸ್ಥೆ ಇಲ್ಲದೆ ನಿತ್ಯ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ರಸ್ತೆಯನ್ನು ಎತ್ತರಿಸಿದ ಕಾರಣಕ್ಕೆ ಟೋಲ್ ವಸೂಲಿ ಮಾಡುವುದು ಕಾನೂನುಬಾಹಿರ ಎಂದು ಸ್ಥಳೀಯರು ಆರೋಪಿಸಿದ್ದು, ರಸ್ತೆಗಾಗಿ ಜಮೀನು ನೀಡಿದವರಿಗೂ ರಿಯಾಯಿತಿ ನೀಡದೆ ದಂಡ ವಸೂಲಿ ಮಾಡುತ್ತಿರುವುದು ದರೋಡೆಯಂತಿದೆ ಎಂದು ಹೋರಾಟಗಾರರು ದೂರಿದ್ದಾರೆ.

ಅವಧಿ ಮುಗಿದಿದ್ದರೂ ನವೀಕರಣದ ಹೆಸರಲ್ಲಿ ಹಣ ಪೀಕುತ್ತಿರುವ ಈ ಅವೈಜ್ಞಾನಿಕ ಟೋಲ್ ಪ್ಲಾಜಾಗಳು ಜಿಲ್ಲೆಯ ವ್ಯಾಪಾರ ಮತ್ತು ಕೈಗಾರಿಕಾ ರಂಗದ ಮೇಲೆ ತೀವ್ರ ಪೆಟ್ಟು ನೀಡುತ್ತಿವೆ. ಈ ಅನ್ಯಾಯದ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈಗ ಬೃಹತ್ ಪ್ರತಿಭಟನೆಗೆ ಸಜ್ಜಾಗುತ್ತಿದೆ.
ಜಿಲ್ಲೆಯ ಪ್ರಸ್ತುತ ಟೋಲ್ ಸ್ಥಿತಿ:
ಈಗಾಗಲೇ ನಿಯಮ ಮೀರಿ ಬ್ರಹ್ಮರಕೂಟ್ಲು NH 75 (ಮಂಗಳೂರು-ಬೆಂಗಳೂರು) ತಲಪಾಡಿ NH 66 (ಕೇರಳ ಗಡಿ) ಮತ್ತು ಹೆಜಮಾಡಿ NH 66 (ಉಡುಪಿ ಗಡಿ) ಚಾಲ್ತಿಯಲ್ಲಿದೆ. ಗಂಜಿಮಠ NH 169 (ಮಂಗಳೂರು-ಕಾರ್ಕಳ) ಪ್ರಸ್ತಾವಿತ/ನಿರ್ಮಾಣ ವಳಾಲುNH 75 (ಉಪ್ಪಿನಂಗಡಿ ಬಳಿ) ಮತ್ತು ಪಣಪಿಲNH 169 ಪ್ರಸ್ತಾವಿತ ನಿರ್ಮಾಣದಲ್ಲಿದೆ. ಹೋರಾಟದ ಹಾದಿಯಲ್ಲಿ ಸಾರ್ವಜನಿಕರು ಈಗಾಗಲೇ ಸುರತ್ಕಲ್ ಟೋಲ್ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದ ‘ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ’ ಈಗ ಮತ್ತೆ ಸಕ್ರಿಯವಾಗಿದೆ. ಕೇಂದ್ರ ಸರ್ಕಾರದ 60 ಕಿ.ಮೀ ನಿಯಮವನ್ನು ಪಾಲಿಸದಿದ್ದರೆ ಮತ್ತು ಅಕ್ರಮವಾಗಿ ಹಣ ಸಂಗ್ರಹಿಸುತ್ತಿರುವ ಟೋಲ್ಗಳನ್ನು ಮುಚ್ಚದಿದ್ದರೆ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.ಜಿಲ್ಲೆಯ ಆರ್ಥಿಕತೆಯ ಮೇಲೆ ಹೊರೆಯಾಗಲಿರುವ ಈ “ಟೋಲ್ ಸಂಸ್ಕೃತಿ”ಗೆ ಬ್ರೇಕ್ ಬೀಳುವುದೇ ಅಥವಾ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದನ್ನು ಮುಂದುವರಿಸುವುದೇ ಎಂದು ಕಾದು ನೋಡಬೇಕಿದೆ.
-
crime3 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
