health
ಮಂಜೇಶ್ವರ: ಅನಾಥ, ವೃದ್ಧ, ಅಸ್ವಸ್ಥರ ಪಾಲಿನ ಆಶಾಕಿರಣ – ಸಾಯಿ ನಿಕೇತನದ ‘ಸಾಕೇತ’ ನೂತನ ಕಟ್ಟಡ ನಾಳೆ ಲೋಕಾರ್ಪಣೆ
ದೈಗೋಳಿ, ಮಂಜೇಶ್ವರ: ಕಳೆದ ಹಲವು ವರ್ಷಗಳಿಂದ ನೊಂದವರ, ಮಾನಸಿಕ ಅಸ್ವಸ್ಥರ ಮತ್ತು ಅನಾಥರಾಗಿ ಬೀದಿ ಅಲೆಯುತ್ತಿದ್ದ ನೂರಾರು ಜೀವಗಳಿಗೆ ಮರುಜನ್ಮ ನೀಡುತ್ತಿರುವ ಮಂಜೇಶ್ವರ ತಾಲೂಕಿನ ದೈಗೋಳಿಯ ಶ್ರೀ ಸಾಯಿ ನಿಕೇತನ ಸೇವಾಶ್ರಮದ ನೂತನ ಕಟ್ಟಡ ‘ಸಾಕೇತ’ ನಾಳೆ, ಶುಕ್ರವಾರ 24 ಏಪ್ರಿಲ್ 2026ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ.

ಭಗವಾನ್ ಸತ್ಯ ಸಾಯಿ ಬಾಬಾ ಜನ್ಮಶತಾಬ್ದಿ ಸಂದರ್ಭ: ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಜನ್ಮಶತಾಬ್ದಿ ಸಂದರ್ಭದಲ್ಲಿ ದಾನಿಗಳ ಹಾಗೂ ಹೃದಯವಂತರ ಸಹಕಾರದಿಂದ ನಿರ್ಮಾಣಗೊಂಡಿರುವ ‘ಸಾಕೇತ’ ಕಟ್ಟಡವು ಅನಾಥರು, ವೃದ್ಧರು ಹಾಗೂ ಅಸ್ವಸ್ಥರ ಬದುಕಿಗೆ ಬೆಳಕಾಗಲಿದೆ.

ದಿವ್ಯ ಸಾನಿಧ್ಯ: ರಾಮಚಂದ್ರಾಪುರ ಮಠದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ‘ಸಾಕೇತ’ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಸಭಾಧ್ಯಕ್ಷತೆ: ಭಟ್ ಬಯೋಟೆಕ್ ಇಂಡಿಯಾ ಪ್ರೈ. ಲಿ. ಸ್ಥಾಪಕರು ಹಾಗೂ ಅಧ್ಯಕ್ಷರು, ನವಚೇತನ ಹಿರಿಯರ ಬಡಾವಣೆ ಪುತ್ತೂರಿನ ಸ್ಥಾಪಕ ಡಾ. ಶಾಮ ಭಟ್ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಗಣ್ಯರ ದಂಡು:
ವಿಶೇಷ ಆಹ್ವಾನಿತರು: ಸಿಂಗಾಪುರದ ಸೆಂಗ್ಕಾಂಗ್ ಜನರಲ್ ಆಸ್ಪತ್ರೆಯ ಹಿರಿಯ ನೆಫ್ರಾಲಜಿಸ್ಟ್ ಡಾ. ಶಶಿಧರ್ ಬೈಕುಂಜೆ, ಹಿರಿಯ ರೇಡಿಯಾಲಜಿಸ್ಟ್ ಡಾ. ವಿದ್ಯಾ ಉಪಾಧ್ಯಾಯ, ಕರ್ನಾಟಕ ಬ್ಯಾಂಕ್ ಸಿಇಒ ಬಿ. ಎಸ್. ರಾಜ್, ಎಮ್.ಆರ್.ಪಿ.ಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಶಾಂತ್ ಬಾಳಿಗ, ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ. ಶಾಮ ಭಟ್, ಹೇರಂಬ ಇಂಡಸ್ಟ್ರೀಸ್ ಅಧ್ಯಕ್ಷ ಡಾ. ಕನ್ಯಾನ ಸದಾಶಿವ ಶೆಟ್ಟಿ ಸೇರಿದಂತೆ ಹಲವು ಗಣ್ಯರು.
ಮುಖ್ಯ ಅತಿಥಿಗಳು: ವರ್ಕಾಡಿ ಸೇಕ್ರೆಡ್ ಹಾರ್ಟ್ ಚರ್ಚ್ನ ಫಾದರ್ ಬೇಸಿಲ್ ವಾಸ್, ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಡಾ. ವಿಕ್ರಮ್ ಶೆಟ್ಟಿ, SCDCC ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ ಭಟ್, ವರ್ಕಾಡಿ ಪಂಚಾಯತ್ ಅಧ್ಯಕ್ಷ ಉಮ್ಮರ್ ಬೋರ್ಕಳ ಮೊದಲಾದವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮ ವಿವರ:
ಬೆಳಿಗ್ಗೆ 6:14: ದೀಪ ಪ್ರಜ್ವಲನ
ಬೆಳಿಗ್ಗೆ 10:00: ಸಾಯಿ ಸಂಗೀತ್ ಮೆಲೊಡೀಸ್ ಕಾಸರಗೋಡು ತಂಡದಿಂದ ‘ಭಕ್ತಿ ಭಾವ ರಾಗ ಸಂಗಮ’

ಬೆಳಿಗ್ಗೆ 11:00: ಸಭಾ ಕಾರ್ಯಕ್ರಮ
ಅಪರಾಹ್ನ 3:00: ಕು. ಸಾನ್ವಿ ಜಿ. ಮತ್ತು ಕು. ಸಮನ್ವಿ ಜಿ. ಅವರಿಂದ ಭರತನಾಟ್ಯ
ಸಂಜೆ 3:30: ಶ್ರೀ ಗಿರೀಶ್ ಕಕ್ಕೆಪದವು ಮತ್ತು ಬಳಗದಿಂದ ಯಕ್ಷಗಾನ ‘ಪುಣ್ಯಕೋಟಿ’

ಸಾರ್ವಜನಿಕರಿಗೆ ಆಹ್ವಾನ: “ಬನ್ನಿ, ನೊಂದ ಜೀವಕ್ಕೆ ಸಾಂತ್ವನ ನೀಡುವ ಈ ಪುಣ್ಯ ಕಾರ್ಯಕ್ಕೆ ಸಾಕ್ಷಿಗಳಾಗೋಣ” ಎಂದು ಶ್ರೀ ಸಾಯಿ ಸೇವಾ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಆತ್ಮೀಯವಾಗಿ ಆಮಂತ್ರಿಸಿದ್ದಾರೆ. ಹೂವು, ಹಣ್ಣು, ತರಕಾರಿ, ಅಕ್ಕಿ ಹಾಗೂ ಧನ ಸಹಾಯವನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಸ್ಥಳ: ಸಾಯಿ ನಿಕೇತನ ಸೇವಾಶ್ರಮ ವಠಾರ, ದೈಗೋಳಿ, ಮಂಜೇಶ್ವರ ತಾಲೂಕು.
ದೂರವಾಣಿ: 9645126739, 9449966209
health
ಜಿಲ್ಲಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ತಾಂಡವ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೋಗಿಗಳು ಹೈರಾಣ!
ರಾಜ್ಯದ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯೊಂದು ಅವ್ಯವಸ್ಥೆಯ ಆಗರವಾಗಿದೆ. ಬಡ ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಈ ಆಸ್ಪತ್ರೆ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನರಕಸದೃಶವಾಗಿ ಮಾರ್ಪಟ್ಟಿದೆ. ಆಸ್ಪತ್ರೆಯ ಮೂಲೆ ಮೂಲೆಯಲ್ಲೂ ಗಲೀಜು, ಮುರಿದ ಪೀಠೋಪಕರಣಗಳು ರೋಗಿಗಳನ್ನು ಅಣಕಿಸುತ್ತಿವೆ. ಇದು ರಾಜ್ಯದ ಪ್ರತಿಷ್ಠಿತ ಶಿವಮೊಗ್ಗ ಜಿಲ್ಲೆಯ ಸರಕಾರಿ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ

ಆಸ್ಪತ್ರೆಯ ಒಳಗೆ ಕಾಲಿಟ್ಟರೆ ಸಾಕು, ವಿಲೇವಾರಿಯಾಗದ ತ್ಯಾಜ್ಯದ ರಾಶಿ ಸ್ವಾಗತಿಸುತ್ತದೆ. ಪ್ಲ್ಯಾಸ್ಟಿಕ್ ಚೀಲಗಳಲ್ಲಿ ತುಂಬಿರುವ ಕಸ ದಿನಗಟ್ಟಲೆ ಕೊಳೆಯುತ್ತಿದ್ದು, ಆಸ್ಪತ್ರೆಯಾದ್ಯಂತ ವಿಪರೀತ ದುರ್ವಾಸನೆ ಹರಡಿದೆ. ಇದರಿಂದಾಗಿ ರೋಗಿಗಳಿಗೆ ಇರುವ ಕಾಯಿಲೆಗಿಂತ ಹೊಸ ಸೋಂಕು ಹರಡುವ ಭೀತಿ ಎದುರಾಗಿದೆ. ಇನ್ನು ವಾರ್ಡ್ಗಳ ಸ್ಥಿತಿಯಂತೂ ಹೇಳತೀರದಾಗಿದೆ. ಕಿಟಕಿ-ಬಾಗಿಲುಗಳು ಮುರಿದು ಬಿದ್ದಿದ್ದು, ಸೊಳ್ಳೆಗಳ ಕಾಟದಿಂದ ರೋಗಿಗಳು ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ.

ಬಿಸಿಲಿನ ತಾಪ ಹೆಚ್ಚಾಗಿದ್ದರೂ ರೋಗಿಗಳ ಕೊಠಡಿಗಳಲ್ಲಿ ಫ್ಯಾನ್ಗಳು ಕೆಟ್ಟು ನಿಂತಿವೆ. ಬೆವರಿನಲ್ಲೇ ಮಿಂದೇಳುತ್ತಿರುವ ರೋಗಿಗಳು ಗಾಳಿಗಾಗಿ ಹಾತೊರೆಯುತ್ತಿದ್ದರೂ, ಅದನ್ನು ದುರಸ್ತಿ ಮಾಡುವ ಮನಸ್ಸು ಆಸ್ಪತ್ರೆ ಆಡಳಿತ ಮಂಡಳಿ ಮಾಡುತ್ತಿಲ್ಲ. ಮಹಿಳಾ ರೋಗಿಗಳ ಪಾಡಂತೂ ಕೇಳುವವರೇ ಇಲ್ಲ. ಶೌಚಾಲಯಗಳಲ್ಲಿ ವಿದ್ಯುತ್ ದೀಪಗಳಿಲ್ಲದೆ ಕಗ್ಗತ್ತಲು ಆವರಿಸಿದ್ದು, ಬಾಗಿಲುಗಳು ಮುರಿದು ಬಿದ್ದಿರುವುದರಿಂದ ಮಹಿಳೆಯರು ತೀವ್ರ ಮುಜುಗರ ಹಾಗೂ ಅಸಹಾಯಕತೆ ಅನುಭವಿಸುತ್ತಿದ್ದಾರೆ.

ಲಕ್ಷಾಂತರ ರೂಪಾಯಿ ಅನುದಾನ ಬರುತ್ತಿದ್ದರೂ ಮೆಗ್ಗಾನ್ ಆಸ್ಪತ್ರೆಯ ಮೂಲಭೂತ ಸೌಕರ್ಯಗಳು ಮಾತ್ರ ಸುಧಾರಿಸುತ್ತಿಲ್ಲ. ಅಧಿಕಾರಿಗಳು ಈ ನರಕಯಾತನೆಯನ್ನು ಕಣ್ಣಾರೆ ಕಂಡೂ ಸುಮ್ಮನಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. “ನಾವು ಗುಣಮುಖರಾಗಲು ಬರುತ್ತೇವೆಯೋ ಅಥವಾ ಮತ್ತಷ್ಟು ಕಾಯಿಲೆ ತಂದುಕೊಳ್ಳಲು ಬರುತ್ತೇವೆಯೋ ತಿಳಿಯುತ್ತಿಲ್ಲ” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಡುತ್ತಿದ್ದಾರೆ.
ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಈ ‘ನರಕ’ಕ್ಕೆ ಮುಕ್ತಿ ನೀಡಬೇಕಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಸಿದ್ದಾರೆ.

health
ಡಯಾಲಿಸಿಸ್ ರೋಗಿಯ ವಾಹನ ತಡೆದು ಕಿರುಕುಳ – ಸಾರ್ವಜನಿಕ ಆಕ್ರೋಶ ಕಮೀಷನರ್ ಹೇಳಿದ್ದೇನು ? ಮಾನವೀಯತೆ ಮತ್ತು ಕಾನೂನಿನ ನಡುವೆ ಪೊಲೀಸರ ಕರ್ತವ್ಯ ನಿಷ್ಠೆ…
ಮಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ ಸೌಹಾರ್ದತೆ ಮತ್ತು ಪರಸ್ಪರ ಸಹಕಾರ ಮುಖ್ಯವಾಗಿರಬೇಕಾದ ಹೊತ್ತಿನಲ್ಲಿ, ಮಂಗಳೂರಿನ ದೇರಳಕಟ್ಟೆ ಸಮೀಪ ಟ್ರಾಫಿಕ್ ಪೊಲೀಸರು ನಡೆದುಕೊಂಡ ರೀತಿ ಅಮಾನವೀಯತೆಯ ಪರಮಾವಧಿಯಾಗಿದೆ ಮತ್ತು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ರೋಗಿಯಿದ್ದ ವಾಹನವನ್ನು ತಡೆದು, ದಂಡದ ಹೆಸರಿನಲ್ಲಿ ಕಿರುಕುಳ ನೀಡಿದ್ದಾರೆ ಎಂದು ಸಾರ್ವಜನಿಕವಾಗಿ ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿರುವಾಗಲೇ ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ನಗರದ ಸಂಚಾರಿ ನಿಯಮಗಳ ಉಲ್ಲಂಘನೆ ಮತ್ತು ಅಕ್ರಮ ವಾಹನಗಳ ಕಾರ್ಯಾಚರಣೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇತ್ತೀಚೆಗೆ ಕೇರಳ ನೋಂದಣಿಯ ಖಾಸಗಿ ವಾಹನವೊಂದನ್ನು ಬಾಡಿಗೆಗೆ ಬಳಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ತಡೆದ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕಾನೂನು ಮತ್ತು ಮಾನವೀಯತೆಯ ದೃಷ್ಟಿಕೋನದ ವಿಶ್ಲೇಷಣೆಯನ್ನು ಪೊಲೀಸರು ನೀಡಿದ್ದಾರೆ.
ಕೇರಳ ನೋಂದಣಿಯ ಖಾಸಗಿ ರಿಕ್ಷಾವೊಂದು ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದಾಗ ಕರ್ತವ್ಯದಲ್ಲಿದ್ದ ಎಎಸ್ಐ (ASI) ವಾಹನವನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ವಾಹನದಲ್ಲಿ ರೋಗಿಗಳಿರುವುದು ಕಂಡುಬಂದಿದೆ. ಆದರೆ, ಈ ಸಂದರ್ಭವನ್ನು ಬಳಸಿಕೊಂಡು ಕಾನೂನು ಉಲ್ಲಂಘನೆಯನ್ನು ಸಮರ್ಥಿಸಿಕೊಳ್ಳುವುದು ಎಷ್ಟು ಸರಿ ಎಂಬ ಪ್ರಶ್ನೆ ಈಗ ಎದ್ದಿದೆ.
ಖಾಸಗಿ ವಾಹನ – ವಾಣಿಜ್ಯ ಬಳಕೆ: ವಾಹನವು ಖಾಸಗಿ ನೋಂದಣಿ (White Board) ಹೊಂದಿದ್ದರೂ ಅದನ್ನು ಬಾಡಿಗೆಗೆ ಪ್ರಯಾಣಿಕರನ್ನು ಸಾಗಿಸಲು ಬಳಸಲಾಗುತ್ತಿದೆ ಎಂದು ಚಾಲಕನೇ ಒಪ್ಪಿಕೊಂಡಿದ್ದಾನೆ. ಇದು ಮೋಟಾರು ವಾಹನ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ.
ರೋಗಿಗಳ ನೆಪದಲ್ಲಿ ನಿಯಮ ಉಲ್ಲಂಘನೆ: ವಾಹನದಲ್ಲಿ ರೋಗಿಗಳಿದ್ದಾರೆ ಎಂಬ ಕಾರಣಕ್ಕೆ ಖಾಸಗಿ ವಾಹನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲು ಕಾನೂನಿನಲ್ಲಿ ಅವಕಾಶವಿಲ್ಲ. ತುರ್ತು ಸಂದರ್ಭಗಳಲ್ಲಿ ಮಾನವೀಯತೆ ಮುಖ್ಯವಾದರೂ, ಅದನ್ನು ಕಾನೂನುಬಾಹಿರ ಚಟುವಟಿಕೆಗಳಿಗೆ ಪರವಾನಗಿಯಂತೆ ಬಳಸಬಾರದು.
ಸ್ಥಳೀಯ ಆಟೋ ಚಾಲಕರ ಸಂಕಷ್ಟ: ಮಂಗಳೂರಿನ ಸ್ಥಳೀಯ ಆಟೋ ಚಾಲಕರು ಸಾವಿರಾರು ರೂಪಾಯಿ ವೆಚ್ಚ ಮಾಡಿ ಪರವಾನಗಿ (Permit) ಪಡೆದು, ಸರ್ಕಾರದ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತಾ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೊರ ರಾಜ್ಯದ ಅಕ್ರಮ ರಿಕ್ಷಾಗಳಿಗೆ ಅವಕಾಶ ನೀಡುವುದು ಸ್ಥಳೀಯ ಚಾಲಕರ ಜೀವನೋಪಾಯಕ್ಕೆ ಹೊಡೆತ ನೀಡಿದಂತಾಗುತ್ತದೆ.
ಪೊಲೀಸರ ವಿವೇಚನಾ ಅಧಿಕಾರ: ವಾಹನ ತಡೆಯುವ ಮೊದಲು ಅದರಲ್ಲಿ ರೋಗಿಗಳಿದ್ದಾರೆ ಎಂದು ಪೊಲೀಸರಿಗೆ ತಿಳಿದಿರುವುದಿಲ್ಲ. ನಿಯಮ ಉಲ್ಲಂಘನೆಯ ಶಂಕೆಯ ಮೇಲೆ ತಪಾಸಣೆ ನಡೆಸಿದ ಎಎಸ್ಐ, ನಂತರ ಮಾನವೀಯ ಆಧಾರದ ಮೇಲೆ ದಂಡ ವಿಧಿಸದೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಇದು ಅವರ ಕರ್ತವ್ಯ ನಿಷ್ಠೆ ಮತ್ತು ವಿವೇಚನೆಯನ್ನು ತೋರಿಸುತ್ತದೆ.
ಸಾರ್ವಜನಿಕರ ಗಮನಕ್ಕೆ:
ನಗರದ ಸಂಚಾರ ವ್ಯವಸ್ಥೆ ಸುಗಮವಾಗಿರಲು ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ರಿಯಾಯಿತಿಗಳನ್ನು ಗೌರವದಿಂದ ಕೋರಬೇಕೇ ಹೊರತು, ಅದನ್ನು ಹಕ್ಕಿನಂತೆ ಪ್ರತಿಪಾದಿಸುವುದು ಸರಿಯಲ್ಲ. ಅಕ್ರಮ ಆಟೋಗಳ ಪರವಾಗಿ ಧ್ವನಿ ಎತ್ತುವ ಮೊದಲು, ನಿಯಮ ಪಾಲಿಸುವ ಸ್ಥಳೀಯ ಚಾಲಕರ ಹಿತದೃಷ್ಟಿಯನ್ನು ಗಮನಿಸಬೇಕಿದೆ. ಎಂದು ಕಮೀಷನರ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ನಿನ್ನೆ ಕೇರಳ ನೋಂದಣಿಯ (KL-14) ಖಾಸಗಿ ಎಲೆಕ್ಟ್ರಿಕ್ ಆಟೋವೊಂದರಲ್ಲಿ ರೋಗಿಯೊಬ್ಬರನ್ನು ಡಯಾಲಿಸಿಸ್ ಚಿಕಿತ್ಸೆಗಾಗಿ ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ, “ಕೇರಳದ ವಾಹನ ಕರ್ನಾಟಕಕ್ಕೆ ಬರಲು ಅನುಮತಿಯಿಲ್ಲ” ಎಂದು ಐದು ಸಾವಿರ ರೂಪಾಯಿ ದಂಡ ಪಾವತಿಸುವಂತೆ ಆದೇಶ ಮಾಡಿದ ಬಗ್ಗೆ ಸಾರ್ವಜನಿಕವಾಗಿ ಪೊಲೀಸರಿಗೆ ಮಾನವೀಯತೆಯೇ ಇಲ್ಲ ಎಂಬಂತೆ ಪ್ರಕರಣದ ವಿಡಿಯೋ ವೈರಲ್ ಆಗಿತ್ತು.

Bantawala
ಕುಡ್ತಮುಗೇರು ಆಸ್ಪತ್ರೆ ಕಟ್ಟಡಕ್ಕೆ MRPL ನಿಂದ ₹30 ಲಕ್ಷ ಅನುದಾನ: ಸುಭಾಶ್ಚಂದ್ರ ಶೆಟ್ಟಿ ಹಾಗೂ ಎಂಎಲ್ಸಿ ಮಂಜುನಾಥ ಭಂಡಾರಿ ಶ್ರಮಕ್ಕೆ ಸಂದ ಜಯ
ಬಂಟ್ವಾಳ: ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರುವಿನಲ್ಲಿ ನೂತನ ಸರ್ಕಾರಿ ಆಸ್ಪತ್ರೆ (ಆರೋಗ್ಯ ವಿಸ್ತರಣಾ ಕೇಂದ್ರ) ಕಟ್ಟಡ ನಿರ್ಮಾಣಕ್ಕೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (CSR) ₹30 ಲಕ್ಷ ಅನುದಾನ ಮಂಜೂರು ಮಾಡಿದೆ.

ಹಿನ್ನೆಲೆ ಮತ್ತು ಬೇಡಿಕೆ:
ಕುಡ್ತಮುಗೇರು ಸುತ್ತಮುತ್ತಲಿನ ಸುಮಾರು 14,000 ಜನಸಂಖ್ಯೆಗೆ ಈ ಭಾಗದಲ್ಲಿ ಸೂಕ್ತ ಆಸ್ಪತ್ರೆಯ ವ್ಯವಸ್ಥೆ ಇರಲಿಲ್ಲ. 2018ರಲ್ಲಿಯೇ ಸರ್ಕಾರದಿಂದ ಆರೋಗ್ಯ ಕೇಂದ್ರ ಮಂಜೂರಾಗಿದ್ದರೂ, ಸ್ವಂತ ಕಟ್ಟಡವಿಲ್ಲದೆ ಸ್ಥಳೀಯ ಶಾಲೆಯ ಕೊಠಡಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಶಾಲಾ ಕೊಠಡಿಯ ಕೊರತೆಯಿಂದಾಗಿ ಆಸ್ಪತ್ರೆಗೆ ಪ್ರತ್ಯೇಕ ಕಟ್ಟಡದ ಅವಶ್ಯಕತೆ ತುರ್ತಾಗಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ಕೆ. ಸುಭಾಶ್ಚಂದ್ರ ಶೆಟ್ಟಿ ಅವರು, ಎಂಆರ್ಪಿಎಲ್ ಸಂಸ್ಥೆಯಿಂದ ಅನುದಾನ ಕೊಡಿಸುವಂತೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರಿಗೆ 2025ರ ಸೆಪ್ಟೆಂಬರ್ನಲ್ಲಿ ಮನವಿ ಸಲ್ಲಿಸಿದ್ದರು.
ಎಂಎಲ್ಸಿ ಮಂಜುನಾಥ ಭಂಡಾರಿ ಅವರ ಶಿಫಾರಸು:
ಸುಭಾಶ್ಚಂದ್ರ ಶೆಟ್ಟಿ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಎಂಎಲ್ಸಿ ಮಂಜುನಾಥ ಭಂಡಾರಿ ಅವರು, ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು, ಬಂಟ್ವಾಳದ ಅತೀ ದೊಡ್ಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಈ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಈ ಯೋಜನೆಗೆ ಸಿ.ಎಸ್.ಆರ್ ನಿಧಿ ಒದಗಿಸುವಂತೆ ಬಲವಾಗಿ ಶಿಫಾರಸು ಮಾಡಿದ್ದರು.

ಎಂಆರ್ಪಿಎಲ್ ಅಧಿಕೃತ ಘೋಷಣೆ:
ಈ ನಿರಂತರ ಬೆನ್ನಟ್ಟುವಿಕೆಯ ಫಲವಾಗಿ, ಎಂಆರ್ಪಿಎಲ್ ಸಂಸ್ಥೆಯು 2026ರ ಮಾರ್ಚ್ 26ರಂದು ಅಧಿಕೃತವಾಗಿ ‘ಆಶಯ ಪತ್ರ’ (Letter of Intent) ಹೊರಡಿಸಿದೆ. ಬಂಟ್ವಾಳ ತಾಲೂಕು ಆರೋಗ್ಯ ಅಧಿಕಾರಿಯವರಿಗೆ ಬರೆದ ಪತ್ರದಲ್ಲಿ, ಕುಡ್ತಮುಗೇರು ಸರ್ಕಾರಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಜಿಎಸ್ಟಿ ಸೇರಿದಂತೆ ಒಟ್ಟು ₹30.00 ಲಕ್ಷ ಹಣವನ್ನು ಒದಗಿಸುವುದಾಗಿ ಸಂಸ್ಥೆ ತಿಳಿಸಿದೆ. ಈ ಯೋಜನೆಯ ಸಾಕಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ಕೆ. ಸುಭಾಶ್ಚಂದ್ರ ಶೆಟ್ಟಿ ಅವರು ವಿಶೇಷ ಆಸಕ್ತಿ ವಹಿಸಿ ಪ್ರಸ್ತಾವನೆ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ ವಿಧಾನ ಪರಿಷತ್ ಸದಸ್ಯರಾದ (ಎಂಎಲ್ಸಿ) ಮಂಜುನಾಥ ಭಂಡಾರಿ ಅವರು ಯೋಜನೆಯ ತುರ್ತು ಅಗತ್ಯವನ್ನು ಮನಗಂಡು ಸಂಸ್ಥೆಗೆ ಶಿಫಾರಸು ಮಾಡುವ ಮೂಲಕ ಅನುದಾನ ಬಿಡುಗಡೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
-
crime4 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
