ELECTION
ಶೃಂಗೇರಿ: 3 ವರ್ಷದ ಕಾನೂನು ಹೋರಾಟದ ಬಳಿಕ ಡಿ.ಎನ್. ಜೀವರಾಜ್ಗೆ ಶಾಸಕ ಸ್ಥಾನ – ಕಾಂಗ್ರೆಸ್ಗೆ ತೀವ್ರ ಮುಖಭಂಗ
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 3 ವರ್ಷಗಳ ಕಾನೂನು ಹೋರಾಟದ ಬಳಿಕ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅಂತಿಮವಾಗಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಗೌತಮ್ ಕುಮಾರ್ ಶೆಟ್ಟಿ ಸೋಮವಾರ, ಮೇ 4 ರಂದು ಜೀವರಾಜ್ ಅವರಿಗೆ ಅಧಿಕೃತ ಶಾಸಕ ಸ್ಥಾನದ ಪ್ರಮಾಣಪತ್ರ ಹಸ್ತಾಂತರಿಸಿದರು.

ಮರು ಎಣಿಕೆಯಲ್ಲಿ 52 ಮತಗಳಿಂದ ಗೆಲುವು:
ಶನಿವಾರ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಡಿ.ಎನ್. ಜೀವರಾಜ್ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರಿಗಿಂತ 52 ಮತಗಳ ಅಂತರದಿಂದ ಬಹುಮತ ಪಡೆದಿದ್ದರು. ಆದರೆ ಆ ದಿನ ಅಧಿಕೃತ ಘೋಷಣೆ ಮಾಡಿರಲಿಲ್ಲ. ಹೈಕೋರ್ಟ್ಗೆ ಮರು ಎಣಿಕೆ ವರದಿ ಸಲ್ಲಿಸುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದರು.
ಭಾನುವಾರ ತಡರಾತ್ರಿ ಚುನಾವಣಾಧಿಕಾರಿಗಳು ಜೀವರಾಜ್ ಅವರಿಗೆ ಅಧಿಕೃತ ಘೋಷಣಾ ಪತ್ರವನ್ನು ಇಮೇಲ್ ಮೂಲಕ ಕಳುಹಿಸಿದ್ದರು. ಸೋಮವಾರ ಬೆಳಿಗ್ಗೆ ಪ್ರಮಾಣಪತ್ರ ನೀಡುವುದರೊಂದಿಗೆ ಶೃಂಗೇರಿ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಕಾಂಗ್ರೆಸ್ಗೆ ಹಿನ್ನಡೆ – 5ರಿಂದ 4ಕ್ಕೆ ಕುಸಿತ:
2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿತ್ತು.
- ಚಿಕ್ಕಮಗಳೂರು: ಎಚ್.ಡಿ. ತಮ್ಮಯ್ಯ
- ಮೂಡಿಗೆರೆ: ನಯನ ಮೋಟಮ್ಮ
- ಶೃಂಗೇರಿ: ಟಿ.ಡಿ. ರಾಜೇಗೌಡ
- ಕಡೂರು: ಕೆ.ಎಸ್. ಆನಂದ್
- ತರೀಕೆರೆ: ಜಿ.ಎಚ್. ಶ್ರೀನಿವಾಸ್
ಐದೂ ಕ್ಷೇತ್ರಗಳಲ್ಲಿ ಸೋಲು ಅನುಭವಿಸಿದ್ದ ಬಿಜೆಪಿಗೆ ಶೃಂಗೇರಿ ಗೆಲುವು ಮರಳಿ ಸಿಕ್ಕಿದೆ. ಡಿ.ಎನ್. ಜೀವರಾಜ್ ಅವರ ಮೂರು ವರ್ಷಗಳ ಕಾನೂನು ಹೋರಾಟದ ಫಲವಾಗಿ ಶೃಂಗೇರಿ ಕ್ಷೇತ್ರವನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಸ್ಥಾನ ಸಂಖ್ಯೆ 5 ರಿಂದ 4ಕ್ಕೆ ಇಳಿದಿದೆ.

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
