F.I.R.
ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನಿಗೆ ನರಕಯಾತನೆ ನೀಡಿ ಕೊಂದ ಪಾಪಿ ತಾಯಿ ಮತ್ತು ಪ್ರೇಮಿ!
ಹೆತ್ತ ಕರುಳಿಗಿಂತ ಹೆಣ್ಣಿಗೆ ಕಾಮವೇ ಕಣ್ಣಾಯಿತು… ಆಶ್ರಯ ನೀಡಬೇಕಾದ ಕೈಗಳೇ ಯಮಸ್ವರೂಪಿಯಾದವು! ದೇವರ ಸ್ವಂತ ನಾಡು ಕೇರಳದಲ್ಲಿ ಮಾನವೀಯತೆಯೇ ಸಂಪೂರ್ಣವಾಗಿ ತಲೆತಗ್ಗಿಸುವಂತಹ, ಕಲ್ಲು ಹೃದಯದವರೂ ಕಣ್ಣೀರು ಸುರಿಸುವಂತಹ ಅತ್ಯಂತ ಕ್ರೂರ ಘಟನೆಯೊಂದು ತಿರುವನಂತಪುರಂ ನಿಂದ ಬೆಳಕಿಗೆ ಬಂದಿದೆ. ಮಾತು ಬಾರದ, ತನ್ನ ನೋವನ್ನು ಹೇಳಿಕೊಳ್ಳಲಾಗದ ಕೇವಲ ಒಂದೂವರೆ ವರ್ಷದ ಮುಗ್ಧ ಕಂದಮ್ಮ ಅರ್ಷಿದ್ನನ್ನು ಹೆತ್ತ ತಾಯಿ ಮತ್ತು ಆಕೆಯ ಪ್ರೇಮಿ ಸೇರಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಭೀಕರ ಕಥೆ ಇಡೀ ಸಮಾಜವನ್ನೇ ನಡುಗಿಸಿದೆ.

ಮಗುವನ್ನು ಹತ್ಯೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31) ಎಂಬ ಇಬ್ಬರು ನರರೂಪದ ರಾಕ್ಷಸರನ್ನು ನೆಡುಮಂಗಾಡ್ ಪೊಲೀಸರು ಕಬ್ಬಿಣದ ಸರಳುಗಳ ಹಿಂದೆ ತಳ್ಳಿದ್ದಾರೆ.

ಸುಳ್ಳು ಕಥೆ ಸೃಷ್ಟಿಸಿದ್ದ ಪಾಪಿಗಳು: ಪೋಸ್ಟ್ಮಾರ್ಟಮ್ನಲ್ಲಿ ಬಯಲಾಯ್ತು ಸತ್ಯ!
ಮೇ 29ರ ಶುಕ್ರವಾರದಂದು ಈ ದುರಂತ ಜಗತ್ತಿಗೆ ಗೊತ್ತಾಯಿತು. ಮಗು ಅರ್ಷಿದ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದಾಗ, ಆರೋಪಿಗಳು ನಾಟಕವಾಡಿ ಆಂಬ್ಯುಲೆನ್ಸ್ ಮೂಲಕ ಪಣವೂರಿನ ಖಾಸಗಿ ಆಸ್ಪತ್ರೆಗೆ, ಅಲ್ಲಿಂದ ಎಸ್ಎಟಿ (SAT) ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲೇ ಆ ಪುಟ್ಟ ಜೀವ ಬಾರದ ಲೋಕಕ್ಕೆ ಪಯಣಿಸಿತ್ತು.
ಆರೋಪಿ ಅಶ್ಕರ್ ಪೊಲೀಸರಿಗೆ ಹೇಳಿದ ಕಟ್ಟುಕಥೆ:
“ಮಗು ಹಾಲು, ನೀರು ಕುಡಿದು ಮಲಗಿತ್ತು. ಇದ್ದಕ್ಕಿದ್ದಂತೆ ಕೆಮ್ಮಲು ಮತ್ತು ವಾಂತಿ ಮಾಡಲು ಆರಂಭಿಸಿತು. ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿತು.”
ಆದರೆ, ಮಗುವಿನ ಮರಣೋತ್ತರ ಪರೀಕ್ಷಾ ವರದಿ ಬರುತ್ತಿದ್ದಂತೆ ವೈದ್ಯರೇ ಬೆಚ್ಚಿಬಿದ್ದರು. ಮಗುವಿನ ತಲೆ ಹಾಗೂ ದೇಹದಾದ್ಯಂತ ತೀವ್ರ ಆಂತರಿಕ ರಕ್ತಸ್ರಾವ ಉಂಟಾಗಿದ್ದೇ ಸಾವಿಗೆ ಕಾರಣ ಎಂದು ವರದಿ ಬಹಿರಂಗಪಡಿಸಿತು. ಪಾಪಿಗಳು ಹೆಣೆದಿದ್ದ ಸುಳ್ಳಿನ ಜಾಲ ಕ್ಷಣಾರ್ಧದಲ್ಲಿ ಧೂಳೀಪಟವಾಯಿತು.
ಪುಟ್ಟ ದೇಹದ ಮೇಲೆ 50ಕ್ಕೂ ಹೆಚ್ಚು ಗಾಯಗಳು: ದಿನವೂ ನಡೆಯುತ್ತಿತ್ತು ನರಕಯಾತನೆ!
ಪೊಲೀಸ್ ತನಿಖೆ ಮುಂದುವರಿದಂತೆ ಆ ಒಂದೂವರೆ ವರ್ಷದ ಕಂದ ಪ್ರತಿದಿನ ಅನುಭವಿಸುತ್ತಿದ್ದ ನರಕಯಾತನೆಯ ಎಳೆಎಳೆಗಳು ಬಿಚ್ಚಿಕೊಳ್ಳತೊಡಗಿದವು. ತನಿಖಾಧಿಕಾರಿಗಳು ಅರ್ಷಿದ್ನ ಪುಟ್ಟ ಮತ್ತು ಕೋಮಲವಾದ ದೇಹದ ಮೇಲೆ ಬರೋಬ್ಬರಿ 50ಕ್ಕೂ ಹೆಚ್ಚು ಹಳೆಯ ಮತ್ತು ತಾಜಾ ಗಾಯಗಳನ್ನು ಪತ್ತೆಹಚ್ಚಿದ್ದಾರೆ.
ಸಿಗರೇಟ್ನಿಂದ ಸುಟ್ಟ ಗಾಯಗಳು: ಮಗುವಿನ ಇಡೀ ದೇಹದಾದ್ಯಂತ ಸಿಗರೇಟ್ ತುಂಡುಗಳಿಂದ ಸುಟ್ಟು ಹಾಕಿರುವ ದುಂಡಗಿನ ಗುರುತುಗಳಿದ್ದವು.
ಮುರಿದಿದ್ದ ಕೈಗಳು: ಈ ಹಿಂದೆ ಮಗುವಿನ ಎರಡೂ ತೋಳುಗಳು ಮುರಿದಿದ್ದವು. ಆ ಸಮಯದಲ್ಲಿ “ಮಗು ಆಟ ಆಡುತ್ತಾ ಕೆಳಗೆ ಬಿದ್ದಿದೆ” ಎಂದು ಈ ಪಾಪಿಗಳು ಜಾಣತನದಿಂದ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದರು.

ಅರ್ಷಿದ್ನ ತಂದೆ (ಅಖಿಲಾಳ ಮೊದಲ ಪತಿ) ಮೃತಪಟ್ಟ ನಂತರ ಮಗುವನ್ನು ಅಜ್ಜಿ ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಅಜ್ಜಿಯ ಮಡಿಲಲ್ಲಿ ಮಗು ಸುರಕ್ಷಿತವಾಗಿತ್ತು. ಆದರೆ, ಅಖಿಲಾ ತನಗೆ ಮಗುವನ್ನು ಸಾಕಲು ಸಾಧ್ಯವಿಲ್ಲ ಎಂದು ಹೇಳಿ, ನಂತರ ತನ್ನ ಪ್ರೇಮಿ ಅಶ್ಕರ್ ಜೊತೆ ಲಿವ್-ಇನ್ ರಿಲೇಶನ್ಶಿಪ್ನಲ್ಲಿ ವಾಸಿಸಲು ಮಗುವನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಳು. ಅಲ್ಲಿಂದಲೇ ಮಗುವಿನ ಪಾಲಿಗೆ ನರಕದ ಬಾಗಿಲು ತೆರೆದಿತ್ತು. ಹೆತ್ತ ಮಗನಿಗೆ ಅಶ್ಕರ್ ರಾಕ್ಷಸನಂತೆ ಹಿಂಸಿಸುತ್ತಿದ್ದರೂ, ಕಣ್ಣೆದುರೇ ಮಗುವಿನ ಕೈ ಮುರಿದರೂ ಅಖಿಲಾ ಮಗನನ್ನು ರಕ್ಷಿಸಲಿಲ್ಲ, ಪೊಲೀಸರಿಗೂ ಹೇಳಲಿಲ್ಲ. ಇದೇ ಕಾರಣಕ್ಕೆ ಆಕೆಯನ್ನೂ ಕೊಲೆ ಆರೋಪಿಯನ್ನಾಗಿ ಮಾಡಲಾಗಿದೆ.
ಮೊದಲ ಪತ್ನಿಯನ್ನೂ ಜೀವಚ್ಛವ ಮಾಡಿದ್ದ ಕ್ರೂರಿ ಅಶ್ಕರ್!
ಬಂಧಿತ ಆರೋಪಿ ಅಶ್ಕರ್ ಕೇವಲ ಮಗುವಿನ ಪಾಲಿಗೆ ಮಾತ್ರವಲ್ಲ, ಆತನ ಸಹವಾಸಕ್ಕೆ ಬಂದವರೆಲ್ಲರಿಗೂ ಯಮನಾಗಿದ್ದ. ಆತನ ಮೊದಲ ಪತ್ನಿ ಅಮೀನಾಳ ಕುಟುಂಬಸ್ಥರು ಮಾಧ್ಯಮಗಳ ಮುಂದೆ ಬಂದು ಆಘಾತಕಾರಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಅಶ್ಕರ್ ಇನ್ನು ಕೂಡ ಅಮೀನಾಗೆ ಅಧಿಕೃತ ವಿಚ್ಛೇದನ ನೀಡಿಲ್ಲ. ಆಕೆಯ ತಲೆಯನ್ನು ಗೋಡೆಗೆ ಬಡಿಯುವುದು, ಸೀಲಿಂಗ್ ಫ್ಯಾನ್ ಉರುಳಿಗೆ ಸಿಲುಕಿಸಲು ಯತ್ನಿಸುವಂತಹ ಘೋರ ದೈಹಿಕ ಹಿಂಸೆ ನೀಡಿದ್ದ. ಆ ಭೀಕರ ಹಲ್ಲೆಯ ಕಾರಣದಿಂದಾಗಿ ಅಮೀನಾ ಕಳೆದ ಒಂದು ವರ್ಷದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಹಾಸಿಗೆ ಹಿಡಿದಿದ್ದು, ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಹೊತ್ತಿ ಉರಿದ ಗ್ರಾಮಸ್ಥರ ಆಕ್ರೋಶ: ಆರೋಪಿಗೆ ಧರ್ಮದೇಟು ನೀಡಲು ಯತ್ನ!
ರವಿವಾರ ತನಿಖೆಯ ಭಾಗವಾಗಿ ಮಹಜರು (ಸ್ಥಳ ಪರಿಶೀಲನೆ) ನಡೆಸಲು ನೆಡುಮಂಗಾಡ್ ಪೊಲೀಸರು ಆರೋಪಿ ಅಶ್ಕರ್ನನ್ನು ಕರಿಕುಳಿಯಲ್ಲಿರುವ ಆತನ ಮನೆಗೆ ಕರೆದೊಯ್ದಾಗ ಇಡೀ ಗ್ರಾಮವೇ ಆಕ್ರೋಶದ ಜ್ವಾಲೆಯಾಗಿ ಬೀದಿಗೆ ಬಂದಿತ್ತು. ನೂರಾರು ಸ್ಥಳೀಯ ನಿವಾಸಿಗಳು, ಮಹಿಳೆಯರು ಜಮಾಯಿಸಿ ಆ ಪಾಪಿಯ ಮುಖಕ್ಕೆ ಉಗುಳಿ, ಆತನ ಮೇಲೆ ದಾಳಿ ಮಾಡಲು ಯತ್ನಿಸಿದರು. “ಆ ನರರಾಕ್ಷಸನನ್ನು ನಮಗೆ ಒಪ್ಪಿಸಿ, ಇಲ್ಲೇ ಜೀವಂತವಾಗಿ ಮುಗಿಸುತ್ತೇವೆ” ಎಂದು ಜನ ಕಿರುಚಾಡಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಹರಸಾಹಸ ಪಟ್ಟು ಕೋಪಗೊಂಡ ಜನರನ್ನು ನಿಯಂತ್ರಿಸಿ, ಆರೋಪಿಯನ್ನು ಸುರಕ್ಷಿತವಾಗಿ ಜೈಲಿನತ್ತ ಸಾಗಿಸಿದರು.
ಒಡಲಲ್ಲಿ ಹೊತ್ತು ಹೆತ್ತ ಮಗುವನ್ನೇ ಕಾಮದ ಅಮಲಿನಲ್ಲಿ ಕ್ರೂರಿಯ ಕೈಗಿಟ್ಟು ಸಾಯಿಸಿದ ಆ ತಾಯಿಗೂ, ಚಿಕ್ಕ ಕಂದಮ್ಮನಿಗೆ ಸಿಗರೇಟ್ನಿಂದ ಸುಟ್ಟು ಕೊಂದ ಆ ನರರಾಕ್ಷಸನಿಗೂ ಕಾನೂನು ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕಿದೆ. ಇಂತಹ ಘಟನೆಗಳು ಮರುಕಳಿಸದಂತೆ ಇಡೀ ಸಮಾಜವೇ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಮುಗ್ಧ ಅರ್ಷಿದ್ನ ಆತ್ಮಕ್ಕೆ ಶಾಂತಿ ಸಿಗಲಿ
Bantawala
ದಕ್ಷಿಣ ಕನ್ನಡ: ರಾಯಿ ಸಮೀಪ ನದಿಯಲ್ಲಿ ಕೊಚ್ಚಿಹೋಗಿದ್ದ ವ್ಯಕ್ತಿಯ ಮೃತದೇಹ ಸಂಗಬೆಟ್ಟುವಿನಲ್ಲಿ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಶನಿವಾರ ತಡರಾತ್ರಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದ 48 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ರಾಯಿ ನಿವಾಸಿ ಜೀವನ್ ಪಿಂಟೊ (48) ಎಂದು ಗುರುತಿಸಲಾಗಿದೆ.
ಘಟನೆಯ ವಿವರ: ಶನಿವಾರ ತಡರಾತ್ರಿ ಜೀವನ್ ಪಿಂಟೊ ಅವರು ತೋಡಿನ ಆಚೆಗಿರುವ ತಮ್ಮ ಮಾವನ ಮನೆಗೆ ತೆರಳಲು ಕಾಲುಸಂಕದ ಮೇಲೆ ನದಿ ದಾಟುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಘಟನಾ ಸ್ಥಳದಲ್ಲಿ ಅವರ ಚಪ್ಪಲಿ ಹಾಗೂ ಟಾರ್ಚ್ಲೈಟ್ ಪತ್ತೆಯಾಗಿದ್ದರೂ, ಅವರು ನೀರಿಗೆ ಬಿದ್ದಿದ್ದಾರೋ ಅಥವಾ ಬೇರೆಡೆ ತೆರಳಿದ್ದಾರೋ ಎಂಬುದು ಅಧಿಕೃತವಾಗಿ ದೃಢಪಟ್ಟಿರಲಿಲ್ಲ.

ಸತತ ಶೋಧ ಕಾರ್ಯಾಚರಣೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ನದಿಯಲ್ಲಿ ಹರಿಯುತ್ತಿರುವ ಪ್ರಬಲ ನೀರಿನ ಸೆಳೆತದ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗುತಜ್ಞರು ಮತ್ತು ಗ್ರಾಮಸ್ಥರು ಕಳೆದ ಎರಡು ದಿನಗಳಿಂದ ಜಂಟಿಯಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಸತತ ಕಾರ್ಯಾಚರಣೆಯ ಫಲವಾಗಿ ಸೋಮವಾರ ಬೆಳಿಗ್ಗೆ ಸಂಗಬೆಟ್ಟು ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಮೃತದೇಹವನ್ನು ನದಿಯಿಂದ ಹೊರತೆಗೆದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕಾನೂನು ಹಾಗೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
Bantawala
ಬಸ್ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್ ದಾಖಲು!
ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ:
ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.
ಮಹಿಳೆಯ ಧೈರ್ಯ, ವೈರಲ್ ವೀಡಿಯೋ:
ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.
ಬಂಟ್ವಾಳ ಠಾಣೆಯಲ್ಲಿ ದೂರು:
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
DEATH
ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ – ವಾರೀಸುದಾರರ ಪತ್ತೆಗೆ ಪೋಲಿಸ್ ಮನವಿ
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ.
ಆಗಸ್ಟ್ 02, 2026ರಂದು ಮಧ್ಯಾಹ್ನ ಸುಮಾರು 03:00 ಗಂಟೆಯ ವೇಳೆಗೆ ನದಿ ದಡದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಮೃತದೇಹವನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಮನವಿ:
ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರಲ್ಲಿ ಈ ಕೆಳಗಿನಂತೆ ಕೋರಲಾಗಿದೆ:
ಇತರ ಪೊಲೀಸ್ ಠಾಣೆಗಳಿಗೆ: ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಗಂಡಸು ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.
ಸಾರ್ವಜನಿಕರಿಗೆ/ವಾರೀಸುದಾರರಿಗೆ: ಯಾರಾದರೂ ವ್ಯಕ್ತಿ ನಾಪತ್ತೆಯಾಗಿದ್ದು, ಮೃತರ ವಾರೀಸುದಾರರು ಅಥವಾ ಗುರುತು ತಿಳಿದವರು ಇದ್ದಲ್ಲಿ ತಕ್ಷಣವೇ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಉಪ್ಪಿನಂಗಡಿ ಪೊಲೀಸ್ ಠಾಣೆ: 9480805362
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
