AWARNESS
ವೈರಲ್ ಹುಚ್ಚಿಗೆ ಬಲಿಯಾಗುತ್ತಿದ್ದಾರೆಯೇ ಹೆಣ್ಣುಮಕ್ಕಳು? ಸಾಮಾಜಿಕ ಜಾಲತಾಣಗಳಲ್ಲಿ ಕರಪತ್ರ ವೈರಲ್!
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/06/6236-1000x600.jpg&description=ವೈರಲ್ ಹುಚ್ಚಿಗೆ ಬಲಿಯಾಗುತ್ತಿದ್ದಾರೆಯೇ ಹೆಣ್ಣುಮಕ್ಕಳು? ಸಾಮಾಜಿಕ ಜಾಲತಾಣಗಳಲ್ಲಿ ಕರಪತ್ರ ವೈರಲ್!', 'pinterestShare', 'width=750,height=350'); return false;" title="Pin This Post">
ಮಂಗಳೂರು: ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ವೈರಲ್” ಆಗುವ ಮತ್ತು ಲೈಕ್ಸ್-ಫಾಲೋವರ್ಸ್ ಗಳಿಸುವ ಹುಚ್ಚು ಕೆಲವು ಯುವಕರಲ್ಲಿ ಮಿತಿಮೀರಿದೆ. ಮಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಂಕ್ (Prank) ಮತ್ತು ಶಾರ್ಟ್ ವಿಡಿಯೋಗಳ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುವ ಕರಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
ಏನಾಗುತ್ತಿದೆ ಮಂಗಳೂರಿನಲ್ಲಿ?
ವೈರಲ್ ಆಗಿರುವ ಕರಪತ್ರದ ಮಾಹಿತಿಯ ಪ್ರಕಾರ, ಮಂಗಳೂರಿನ ರೈಲ್ವೆ ಸ್ಟೇಷನ್, ಶಾಪಿಂಗ್ ಮಾಲ್ಗಳು, ಕಾಲೇಜು ರಸ್ತೆ ಹಾಗೂ ಮಾರುಕಟ್ಟೆ ಪ್ರದೇಶಗಳನ್ನು ಈ ತಂಡಗಳು ತಮ್ಮ ಪ್ರಮುಖ ಅಡ್ಡಾಗಳನ್ನಾಗಿ ಮಾಡಿಕೊಂಡಿವೆ. ಕೈಯಲ್ಲಿ ಹಣದ ಕಂತೆ ಅಥವಾ ಗಿಫ್ಟ್ ಬ್ಯಾಗ್ ಹಿಡಿದುಕೊಂಡು ಓಡಾಡುವ ಈ ಯುವಕರು, ಒಂಟಿಯಾಗಿರುವ ಯುವತಿಯರನ್ನು ಅಡ್ಡಗಟ್ಟಿ “ಒಂದು ಕ್ವಶ್ಚನ್ ಕೇಳ್ತೀವಿ”, “ಇನ್ಸ್ಟಾಗ್ರಾಮ್ ಫಾಲೋ ಮಾಡಿದರೆ ಜುಜುಬಿ ಗಿಫ್ಟ್ ಕೊಡ್ತೀವಿ” ಎಂದು ಮಾತು ಆರಂಭಿಸುತ್ತಾರೆ. ತದನಂತರ ಅವರ ಮೊಬೈಲ್ ನಂಬರ್ ಕೇಳುವುದು ಮತ್ತು ಬಲವಂತವಾಗಿ ಸ್ನೇಹ ಬೆಳೆಸಲು ಯತ್ನಿಸುವ ದೂರುಗಳು ಕೇಳಿಬರುತ್ತಿವೆ.

ವೈರಲ್ ಹುಚ್ಚು ಮತ್ತು ಬ್ಲ್ಯಾಕ್ಮೇಲ್ ತಂತ್ರ!
ಕೆಲವು ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್ ಚಾನೆಲ್ಗಳು ಕೇವಲ ವ್ಯೂಸ್ ಮತ್ತು ಫಾಲೋವರ್ಸ್ಗಾಗಿ ಹೆಣ್ಣುಮಕ್ಕಳ ಅನುಮತಿ ಇಲ್ಲದೆ ಅವರ ವಿಡಿಯೋಗಳನ್ನು ಚಿತ್ರೀಕರಿಸುತ್ತಿವೆ. ಅವರ ಮುಜುಗರದ ಕ್ಷಣಗಳನ್ನು ಲಕ್ಷಾಂತರ ವೀಕ್ಷಕರಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಕಾಸರಗೋಡು ಮತ್ತು ಉಪ್ಪಳ ಭಾಗದ ಕೆಲವು ಯುವಕರು ಮಂಗಳೂರಿಗೆ ಬಂದು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದು ಕೇವಲ ತಮಾಷೆಯಲ್ಲ, ಇದೊಂದು ದೊಡ್ಡ ಅಪಾಯಕಾರಿ ಟ್ರ್ಯಾಪ್ ಆಗಿದೆ. ಇನ್ಸ್ಟಾಗ್ರಾಮ್ ಸ್ನೇಹದ ಹೆಸರಿನಲ್ಲಿ ಅಪ್ರಾಪ್ತರನ್ನು ಅಪಹರಿಸಿ ಕಿರುಕುಳ ನೀಡಿದ ಘಟನೆಗಳು ಈ ಹಿಂದೆ ನಡೆದಿವೆ. ಒಮ್ಮೆ ಮೊಬೈಲ್ ನಂಬರ್ ಅಥವಾ ಫೋಟೋಗಳು ಇವರ ಕೈ ಸೇರಿದರೆ, ಮುಂದೆ ಅದನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುವ ಸಾಧ್ಯತೆಗಳು ಹೆಚ್ಚಿರುತ್ತವೆ.
ನಮ್ಮ ಜವಾಬ್ದಾರಿ ಏನು? (ಜಾಗೃತಿ ಮಾರ್ಗಸೂಚಿ)
ಯುವತಿಯರೇ ಎಚ್ಚರ:
ಸಾರ್ವಜನಿಕ ಸ್ಥಳಗಳಲ್ಲಿ ಅಪರಿಚಿತರು ಗಿಫ್ಟ್ ಆಮಿಷ ಒಡ್ಡಿದರೆ ತಕ್ಷಣವೇ “ಬೇಡ” ಎಂದು ನಿರಾಕರಿಸಿ.
ಯಾವುದೇ ಕಾರಣಕ್ಕೂ ಅಪರಿಚಿತರಿಗೆ ಮೊಬೈಲ್ ಸಂಖ್ಯೆಯನ್ನು ನೀಡಬೇಡಿ.
ಒಂಟಿಯಾಗಿದ್ದಾಗ ಇಂತಹ ಪ್ರಾಂಕ್ ಮಾಡುವವರಿಂದ ದೂರವಿರಿ. ನಿಮ್ಮ ಅನುಮತಿ ಇಲ್ಲದೆ ವಿಡಿಯೋ ಮಾಡಿದರೆ ಧೈರ್ಯದಿಂದ ಜೋರಾಗಿ ಪ್ರಶ್ನಿಸಿ.
ಪೋಷಕರ ಗಮನಕ್ಕೆ:
ನಿಮ್ಮ ಹೆಣ್ಣುಮಕ್ಕಳಿಗೆ ಇಂತಹ ಸಾಮಾಜಿಕ ಜಾಲತಾಣಗಳ ಅಪಾಯಗಳ ಬಗ್ಗೆ ತಿಳಿಹೇಳಿ.
ಅಪರಿಚಿತರ ಫ್ರೆಂಡ್ ರಿಕ್ವೆಸ್ಟ್, ಆನ್ಲೈನ್ ಸ್ನೇಹ ಹಾಗೂ ಗಿಫ್ಟ್ಗಳ ಆಮಿಷದಿಂದ ದೂರವಿರಲು ಸೂಚಿಸಿ.
ಮಕ್ಕಳ ಫೋನ್ ಹಾಗೂ ಅವರ ದಿನನಿತ್ಯದ ಚಟುವಟಿಕೆಗಳ ಮೇಲೆ ನಿಗಾ ಇರಿಸಿ.
ಸಾರ್ವಜನಿಕರೇ ಧ್ವನಿ ಎತ್ತಿ:
ಮಾಲ್, ಕಾಲೇಜು ಅಥವಾ ಬಸ್ ಸ್ಟ್ಯಾಂಡ್ಗಳಲ್ಲಿ ಇಂತಹ ಪುಂಡಾಟಿಕೆ ಅಥವಾ ಹೆಣ್ಣುಮಕ್ಕಳಿಗೆ ಮುಜುಗರ ಉಂಟುಮಾಡುವ ದೃಶ್ಯಗಳು ಕಂಡುಬಂದರೆ ಸುಮ್ಮನೆ ಇರಬೇಡಿ.
ತಕ್ಷಣವೇ ಅಲ್ಲಿನ ಸೆಕ್ಯೂರಿಟಿ ಅಥವಾ ಪೊಲೀಸ್ ಇಲಾಖೆಗೆ ದೂರು ನೀಡಿ.
ಮುಖ್ಯ ಮಾಹಿತಿ: ಮಂಗಳೂರಿನ ಸಂಸ್ಕೃತಿ ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ನೆರವಿಗಾಗಿ ಮಂಗಳೂರು ಸಿಟಿ ಪೊಲೀಸ್ ಕಂಟ್ರೋಲ್ ರೂಮ್: 0824-2220500 ಅಥವಾ ತುರ್ತು ಸಹಾಯವಾಣಿ 112 ಅನ್ನು ಸಂಪರ್ಕಿಸಬಹುದಾಗಿದೆ.
ಯಾವುದೇ ಅನಾಹುತ ನಡೆದ ಮೇಲೆ ಅನುಭವಿಸುವ ಬದಲು, “ಈಗಲೇ ಎಚ್ಚೆತ್ತುಕೊಳ್ಳೋಣ, ಸುರಕ್ಷಿತರಾಗಿರೋಣ.”
ವಿನೋದದ ಹೆಸರಿನಲ್ಲಿ ಇತರರ ಸ್ವತಂತ್ರ ಮತ್ತು ಗೌರವಕ್ಕೆ ಧಕ್ಕೆ ತರುವ ಹಕ್ಕು ಯಾರಿಗೂ ಇಲ್ಲ. ಇಂತಹ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೊಲೀಸರ ಗಮನಕ್ಕೆ ತರಬೇಕು.



AWARNESS
ಕುಮಾರಧಾರಾ ನದಿ ತೀರದಲ್ಲಿ 8 ಕಾಡಾನೆಗಳ ದಂಡು – ಕೃಷಿಕರಲ್ಲಿ ಆತಂಕ, ಕಾರ್ಯಾಚರಣೆ ತೀವ್ರ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಮತ್ತು ನೆಕ್ಕಿಲಾಡಿ ಭಾಗದಲ್ಲಿ ಇಂದು ಮುಂಜಾನೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ. ಕೋಡಿಂಬಾಳ ಗ್ರಾಮದ ಕೋರಿಯರ್ ಎಂಬಲ್ಲಿ ಹಾಗೂ 102 ನೆಕ್ಕಿಲಾಡಿ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಸುಮಾರು 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯ ಕೃಷಿಕರಿಗೆ ಭಾರಿ ನಷ್ಟ ಉಂಟುಮಾಡಿದೆ.
ನಿಶೀತ್ ಮಾಹಿಪ್ಪಾಜೆ ಮತ್ತು ಹರೀಶ್ ಕೋರಿಯರ್ ಸೇರಿದಂತೆ ಹಲವು ಕೃಷಿಕರ ತೋಟಗಳಿಗೆ ನುಗ್ಗಿದ ಆನೆಗಳು, ಅಡಿಕೆ, ತೆಂಗು ಮತ್ತು ಬಾಳೆ ಗಿಡಗಳನ್ನು ಸಂಪೂರ್ಣವಾಗಿ ನಾಶಪಡಿಸಿವೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸಂಚಾರಿಗಳು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಆನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಾನೆಗಳು ಇತ್ತೀಚಿನ ದಿನಗಳಲ್ಲಿ ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕಾಡಾನೆಗಳ ಹತ್ತಿರ ಹೋಗಬಾರದು, ಫೋಟೋ ಅಥವಾ ವಿಡಿಯೋ ತೆಗೆದುಕೊಳ್ಳಲು ಯತ್ನಿಸಬಾರದು ಹಾಗೂ ರಾತ್ರಿ ಸಮಯದಲ್ಲಿ ಅನಾವಶ್ಯಕ ಸಂಚಾರವನ್ನು ತಪ್ಪಿಸಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಯಾವುದೇ ಅನಾಹುತ ಸಂಭವಿಸಿದರೆ ತಕ್ಷಣ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಸದ್ಯ ಸ್ಥಳದಲ್ಲಿ ಅರಣ್ಯ ಸಿಬ್ಬಂದಿ ನಿಯೋಜನೆಗೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಂಜ ವಲಯ ಅರಣ್ಯಾಧಿಕಾರಿ ಉಮೇಶ್ ಅವರು ಮಾಹಿತಿ ನೀಡಿದ್ದಾರೆ.

-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
