Connect with us

Politics

ಆರೋಗ್ಯಕ್ಕೆ ಯು.ಟಿ.ಖಾದರ್, ಬೆಂಗಳೂರು ಅಭಿವೃದ್ಧಿಗೆ ರಾಮಲಿಂಗಾರೆಡ್ಡಿ,ಪ್ರಿಯಾಂಕ ಖರ್ಗೆಗೆ ಗೃಹ ಖಾತೆ ಅನಿವಾರ್ಯ ? ಮುಂದುವರಿದ ಖಾತೆ ಹಂಚಿಕೆ ಕಸರತ್ತು

Published

on

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಆಡಳಿತ ಅಧಿಕೃತವಾಗಿ ಆರಂಭಗೊಂಡಿದ್ದು, ನಿನ್ನೆ ಸಿಎಂ, ಡಿಸಿಎಂ ಸೇರಿದಂತೆ ಒಟ್ಟು 14 ನೂತನ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಈಗ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಮಹತ್ವದ ಹೊಣೆಗಾರಿಕೆ ಮುಖ್ಯಮಂತ್ರಿಯವರ ಮೇಲಿದ್ದು, ಗುರುವಾರ ಅಥವಾ ಶುಕ್ರವಾರದ ಒಳಗಾಗಿ ಅಧಿಕೃತ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

ಸಂಪುಟ ರಚನೆಯ ನಿರಂತರ ಕಸರತ್ತಿನ ಬಳಿಕ ಪಕ್ಷದ ಹೈಕಮಾಂಡ್, ಖಾತೆಗಳ ಹಂಚಿಕೆ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯದ ಹಿರಿಯ ನಾಯಕರಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಇದನ್ನು ಆಧರಿಸಿ ಈಗಾಗಲೇ ತಾತ್ಕಾಲಿಕ ಪಟ್ಟಿಯೊಂದನ್ನು ಸಿದ್ಧಪಡಿಸಲಾಗಿದ್ದು, ಸಣ್ಣಪುಟ್ಟ ಮಾರ್ಪಾಡುಗಳೊಂದಿಗೆ ಅಂತಿಮ ರೂಪ ನೀಡುವ ಪ್ರಕ್ರಿಯೆ ಚುರುಕಿನಿಂದ ಸಾಗಿದೆ.

ಪ್ರಬಲ ಖಾತೆಗಳಿಗೆ ಹೆಚ್ಚಿದ ಲಾಬಿ!

ತಾತ್ಕಾಲಿಕ ಪಟ್ಟಿ ಸಿದ್ಧವಾಗುತ್ತಿದ್ದಂತೆಯೇ, ಪ್ರಬಲ ಹಾಗೂ ಆಯಕಟ್ಟಿನ ಖಾತೆಗಳನ್ನು ಗಿಟ್ಟಿಸಿಕೊಳ್ಳಲು ಸಚಿವರು ಭರ್ಜರಿ ಲಾಬಿ ಆರಂಭಿಸಿದ್ದಾರೆ. ತಮ್ಮಿಷ್ಟದ ಖಾತೆಗಳಿಗಾಗಿ ಹೈಕಮಾಂಡ್ ಮತ್ತು ರಾಜ್ಯದ ಪ್ರಭಾವಿ ನಾಯಕರ ಮೇಲೆ ಒತ್ತಡ ತರುವ ಯತ್ನಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. ಆದರೆ, ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಕೆಲವು ಸಚಿವರಿಗೆ ನಿರ್ದಿಷ್ಟ ಖಾತೆಗಳನ್ನೇ ನೀಡಬೇಕಾದ ಅನಿವಾರ್ಯತೆ ಸರ್ಕಾರದ ಮುಂದಿದೆ.

ಅನುಭವ ಮತ್ತು ಆಸಕ್ತಿಯನ್ನು ಆಧರಿಸಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲು ವರಿಷ್ಠರು ಸಲಹೆ ನೀಡಿದ್ದಾರೆ. ಅದರಂತೆ, ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರ ಅಭಿವೃದ್ಧಿ ಖಾತೆಯನ್ನು ನೀಡಲು ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಇನ್ನು ಈ ಹಿಂದೆ ಸ್ಪೀಕರ್ ಆಗಿದ್ದ ಯು.ಟಿ.ಖಾದರ್ ಅವರಿಗೆ ಆರೋಗ್ಯ ಖಾತೆಯ ಜವಾಬ್ದಾರಿಯನ್ನು ವಹಿಸಲು ತೀರ್ಮಾನಿಸಲಾಗಿದ್ದು, ಪ್ರಿಯಾಂಕ ಖರ್ಗೆಗೆ ಗೃಹ ಖಾತೆ, ಮತ್ತೊಬ್ಬ ಹಿರಿಯ ನಾಯಕ ಕೆ. ಎಚ್.ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಅಥವಾ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯನ್ನು ನೀಡಬೇಕಾದ ಅನಿವಾರ್ಯತೆಯಲ್ಲಿ ಮುಖ್ಯಮಂತ್ರಿಗಳು ಇದ್ದಾರೆ ಎಂದು ಹೇಳಲಾಗಿದೆ. ಪಕ್ಷದ ವರಿಷ್ಠರು ಕೂಡ ಇದೇ ನಿಟ್ಟಿನಲ್ಲಿ ಸಲಹೆ ನೀಡಿದ್ದು, ಹಿರಿಯರ ಅನುಭವವನ್ನು ಮುಂಬರುವ ಸವಾಲುಗಳನ್ನು ಎದುರಿಸಲು ಬಳಸಿಕೊಳ್ಳಲು ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ.

ಹಳಬರಿಗೆ ಹಳೇ ಖಾತೆ; ಹೊಸಬರಿಗೆ ಹೊಸ ಜವಾಬ್ದಾರಿ?

ಸಂಭವನೀಯ ಪಟ್ಟಿಯ ಪ್ರಕಾರ, ಹಿರಿಯ ಸಚಿವರಾದ ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ಹಾಗೂ ಕೆ.ಜೆ.ಜಾರ್ಜ್ ಅವರಿಗೆ ಈ ಹಿಂದೆ ನಿರ್ವಹಿಸಿದ್ದ ಖಾತೆಗಳನ್ನೇ ಮುಂದುವರಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಆದರೆ, ಕೆಲವು ಪ್ರಮುಖ ಖಾತೆಗಳಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಬೈರತಿ ಸುರೇಶ್‌ಗೆ ಸಾರಿಗೆ ಹಾಗೂ ಡಾ. ಯತೀಂದ್ರ ಅವರಿಗೆ ನಗರ ಅಭಿವೃದ್ಧಿ ಖಾತೆ ನೀಡಲು ವರಿಷ್ಠರು ಒಲವು ತೋರಿದ್ದಾರೆ ಎನ್ನಲಾಗಿದೆ.

ಬೆಂಗಳೂರಿಗೆ ರಾಮಲಿಂಗಾರೆಡ್ಡಿ ಅವರೇ ಏಕೆ ಬೇಕು?

ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಮುಂದಿರುವ ಮೊದಲ ಮತ್ತು ಅತಿ ದೊಡ್ಡ ಸವಾಲು ‘ಜಿಬಿಎ ಚುನಾವಣೆ’. ಆರು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಆಗಸ್ಟ್ 31ರ ಒಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಮಧ್ಯೆ ಕಾಂಗ್ರೆಸ್ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ, 5 ಪಾಲಿಕೆಗಳ ಪೈಕಿ 4ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಬಹುದು ಎಂಬ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಇಂತಹ ಕಠಿಣ ಪರಿಸ್ಥಿತಿಯಲ್ಲಿ ಬೆಂಗಳೂರನ್ನು ಕಾಂಗ್ರೆಸ್ ತೆಕ್ಕೆಗೆ ತರಬೇಕಾದರೆ, ಇಲ್ಲಿನ ಸ್ಥಳೀಯ ರಾಜಕಾರಣ ಮತ್ತು ಪಾಲಿಕೆ ಸದಸ್ಯರೊಂದಿಗೆ ಸುದೀರ್ಘ ಒಡನಾಟ ಹೊಂದಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರೇ ಸೂಕ್ತ ಎಂಬುದು ಹಿರಿಯರ ವಾದ. ಬೆಂಗಳೂರಿನ ರಸ್ತೆ ಗುಂಡಿ, ಕಸದ ಸಮಸ್ಯೆಗಳನ್ನು ಸಮರ್ಥವಾಗಿ ಬಗೆಹರಿಸಿ ಪಕ್ಷವನ್ನು ಗೆಲ್ಲಿಸಲು ಇವರ ಅನುಭವ ಸಹಕಾರಿಯಾಗಲಿದೆ. ಹೀಗಾಗಿ, ಕೃಷ್ಣ ಬೈರೇಗೌಡ ಅವರಿಗೆ ಗ್ರಾಮೀಣ ಅಭಿವೃದ್ಧಿಯಂತಹ ಖಾತೆ ನೀಡಿ, ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಜವಾಬ್ದಾರಿ ವಹಿಸುವುದು ಸೂಕ್ತ ಎಂದು ಹೈಕಮಾಂಡ್ ನಾಯಕರು ಸಿಎಂಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಒಟ್ಟಾರೆಯಾಗಿ, ಅನುಭವ ಮತ್ತು ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸಿದ್ಧವಾಗುತ್ತಿರುವ ಈ ಖಾತೆ ಹಂಚಿಕೆ ಪಟ್ಟಿ ಅಂತಿಮವಾಗಿ ಯಾರಿಗೆ ಒಲಿಯಲಿದೆ ಎಂಬುದು ಗುರುವಾರದೊಳಗೆ ಸ್ಪಷ್ಟವಾಗಲಿದೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

CONGRESS

ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ

Published

on

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.

ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ

ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.

ಯುವ ಕಂಟೆಂಟ್‌ ಕ್ರಿಯೇಟರ್ಸ್‌ ಜೊತೆ ಉಪಾಹಾರ ಹಾಗೂ ಸಂವಾದ

ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್‌ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ

ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.

ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ

ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್‌ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.

Continue Reading

Trending

Copyright © 2025 Deevatige

error: Content is protected !!