arrest
ಬಂಟ, ಬಿಲ್ಲವ ಸಮುದಾಯಕ್ಕೆ ಅವಹೇಳನ: ಆರೋಪಿ ಅನಿತಾ ಕಾಸರಗೋಡು ಜೈಲುಪಾಲು
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿಯ ಪ್ರತಿಷ್ಠಿತ ಬಂಟ ಮತ್ತು ಬಿಲ್ಲವ ಸಮುದಾಯಗಳ ಕುರಿತು ಅತ್ಯಂತ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಆರೋಪಿ ಅನಿತಾ ಕಾಸರಗೋಡು ಅವರನ್ನು ಬರ್ಕೆ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಅನಿತಾ ಕಾಸರಗೋಡು ಸದ್ಯ ಕಾನೂನು ಬಲೆಗೆ ಬಿದ್ದು ಜೈಲು ಪಾಲಾಗಿದ್ದಾಳೆ.

ಕಾನೂನು ಹೋರಾಟದಲ್ಲಿ ಜಯ
ಬಿಲ್ಲವ ಸಮುದಾಯವನ್ನು ಅತ್ಯಂತ ಕೆಟ್ಟ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸಲಾಯಿತು. ಸರಕಾರಿ ವಕೀಲರಾದ ಅಶ್ವಿತಾ ವಿ. ಅಮೀನ್, ವಕೀಲರಾದ ಪ್ರಸಾದ್ ಬಂಗೇರ ಮತ್ತು ಅರುಣ್ ಬಂಗೇರ ಅವರು ಸಮಾಜದ ಪರವಾಗಿ ಪ್ರಬಲವಾಗಿ ವಾದಿಸಿ, ಆರೋಪಿಗೆ ಜೈಲು ಶಿಕ್ಷೆ (ನ್ಯಾಯಾಂಗ ಬಂಧನ) ಆಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾನೂನು ಹೋರಾಟದ ಪ್ರತಿ ಹಂತದಲ್ಲೂ ಹಗಲಿರುಳು ಶ್ರಮಿಸಿ, ನ್ಯಾಯ ಒದಗಿಸುವಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷರಾದ ಶ್ರೀ ದೀಪಕ್ ಕೋಟ್ಯಾನ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇವರಿಗೆ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಮಲ್ ಕಾರ್ಕಳ ಹಾಗೂ ಸೋಮೇಶ್ವರ ಪುರಸಭಾ ಸದಸ್ಯರಾದ ದೀಪಕ್ ಪಿಲಾರ್ ಅವರು ಸಾಥ್ ನೀಡಿದ್ದಾರೆ.

ಬಂಟ ಸಮುದಾಯದಿಂದಲೂ ಆಕ್ರೋಶ: ಪುತ್ತೂರಿನಲ್ಲಿ ದೂರು ದಾಖಲು
ಬಿಲ್ಲವ ಸಮಾಜದ ಜೊತೆಗೆ ಬಂಟ ಸಮುದಾಯವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕುರಿತು ಪುತ್ತೂರಿನಲ್ಲೂ ಪ್ರಕರಣ ದಾಖಲಾಗಿದೆ. ಅಪ್ಪಟ ಕರಾವಳಿಯ ಸಂಸ್ಕೃತಿಯ ಭಾಗವಾಗಿರುವ ಬಂಟ ಸಮಾಜಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು. ಪ್ರತಿಷ್ಠಿತ ಸಮಾಜದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಗುರವಾಗಿ ಮಾತನಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದರು.

ಮುಂಬಯಿ ಬಿಲ್ಲವ ಸಮಾಜದಿಂದಲೂ ಪೊಲೀಸ್ ದೂರು
ಆರೋಪಿ ಅನಿತಾ ಕಾಸರಗೋಡು ಇಡೀ ಬಿಲ್ಲವ ಸಮಾಜ ತಲೆತಗ್ಗಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆಕ್ಷೇಪಾರ್ಹ ಹೇಳಿಕೆಗಳನ್ನು ಮುಂಬಯಿ ಬಿಲ್ಲವ ಸಮಾಜದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಮುಂಬಯಿ ಬಿಲ್ಲವ ಸಮಾಜದ ಪ್ರಮುಖರು ಹಾಗೂ ಮುಖಂಡರ ನಿಯೋಗವು ಮುಂಬಯಿನ ವಾಕೋಲಾ ಪೊಲೀಸ್ ಠಾಣೆಗೆ (Vakola Police Station) ಖುದ್ದಾಗಿ ಭೇಟಿ ನೀಡಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕೃತವಾಗಿ ದೂರು ಪತ್ರವನ್ನು ಸಲ್ಲಿಸಿದ್ದರು. ಈ ಮೂಲಕ ದೇಶದ ಯಾವುದೇ ಮೂಲೆಯಲ್ಲಿದ್ದರೂ ಸಮಾಜಕ್ಕೆ ಅವಮಾನ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂಬ ಗಟ್ಟಿಯಾದ ಸಂದೇಶವನ್ನು ಮುಂಬಯಿ ಬಿಲ್ಲವರು ರವಾನಿಸಿದ್ದರು
ಬೆಂಗಳೂರಿನಲ್ಲಿ ಅಕ್ಕನ ಮನೆಯಲ್ಲಿ ಬಂಧನ: ಈ ನಡುವೆ, ‘ಬಿರುವೆರ್ ಕುಡ್ಲ’ ಸಂಘಟನೆಯ ಪ್ರಮುಖರಾದ ರಾಕೇಶ್ ಪೂಜಾರಿ ಅವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದರು. ದೂರಿನ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಬರ್ಕೆ ಪೊಲೀಸರು, ಆರೋಪಿಯು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನಲ್ಲಿರುವ ಆಕೆಯ ಸಹೋದರಿಯ (ಅಕ್ಕನ) ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜೂನ್ 25ರವರೆಗೆ ನ್ಯಾಯಾಂಗ ಬಂಧನ: ಬಂಧಿತ ಆರೋಪಿ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಜೂನ್ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಸಮುದಾಯಗಳ ನಡುವೆ ಶಾಂತಿ ಕದಡುವ ಹಾಗೂ ಸಮಾಜದ ಗಣ್ಯ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಅವಮಾನಿಸುವ ಇಂತಹ ಕೃತ್ಯಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ಈಗಲೂ ಆಕ್ರೋಶ ಮುಂದುವರಿದಿದೆ.



arrest
6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ
ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬಜಾಲ್ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.
ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.
ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
arrest
ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ
ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.
ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
