Connect with us

arrest

ವಿಟ್ಲ: ಹೆಲ್ಮೇಟ್ ರಹಿತ ಸವಾರನ ತಡೆದ ಪೊಲೀಸರು; ಸಾರ್ವಜನಿಕರ ಮಧ್ಯೆ ಮಾತಿನ ಚಕಮಕಿ, ಆಕ್ಟಿವಾ ಸವಾರನನ್ನು ವಶಕ್ಕೆ ಪಡೆದ ಪೊಲೀಸರು.

Published

on

ವಿಟ್ಲ: ಇಲ್ಲಿನ ಪೇಟೆಯ ಸಂತೆ ದಿನವಾದ ಇಂದು (ಮಂಗಳವಾರ) ಸಂಜೆ ಸಂಚಾರ ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಪೊಲೀಸರು ತಡೆದು ನಿಲ್ಲಿಸಿದ ಸಂದರ್ಭದಲ್ಲಿ ಸವಾರ ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಸ್ಥಳದಲ್ಲಿ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಘಟನೆ ನಡೆದಿದೆ.

ಘಟನೆಯ ವಿವರ:

ವಿಟ್ಲ ಪೇಟೆಯಲ್ಲಿ ಸಂತೆ ದಿನವಾದ ಇಂದು ಸುಗಮ ಸಂಚಾರದ ವ್ಯವಸ್ಥೆಗಾಗಿ ವಿಟ್ಲ ಪೊಲೀಸರು ಕರ್ತವ್ಯದಲ್ಲಿದ್ದರು. ಸಂಜೆ ಸುಮಾರು 6 ಗಂಟೆಯ ವೇಳೆಗೆ ವಿಟ್ಲದ ಅಡ್ಡದ ಬೀದಿ ಒಳರಸ್ತೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರನ್ನು ತಡೆಯುವುದಕ್ಕಾಗಿ ವಿಟ್ಲ ಠಾಣಾಧಿಕಾರಿ ಬಿ.ಎಸ್. ನಾಯ್ಕ್ ಮತ್ತು ಎಎಸ್‌ಐ ಸೋಮನಾಥ್ ಅವರು ಕಾಯುತ್ತಿದ್ದರು.

ಈ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಆಕ್ಟಿವಾ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬ ಹೆಲ್ಮೇಟ್ ಧರಿಸದೆ ಮುಖ್ಯರಸ್ತೆಯಿಂದ ಅಡ್ಡದ ಬೀದಿ ಒಳರಸ್ತೆ ಮೂಲಕ ಸಾಗುತ್ತಿದ್ದನು. ತಕ್ಷಣ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಆತನನ್ನು ತಡೆದು ನಿಲ್ಲಿಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ:

ವಾಹನ ತಡೆದ ತಕ್ಷಣ ಸಂಚಾರ ನಿಯಮ ಉಲ್ಲಂಘಿಸಿದ ಆಕ್ಟಿವಾ ಸವಾರ ಹಾಗೂ ಪೊಲೀಸ್ ಅಧಿಕಾರಿಗಳ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಪರಿಸ್ಥಿತಿ ಕೈಮೀರುವ ಲಕ್ಷಣ ಕಾಣಿಸಿತು.

ಹೆಚ್ಚುವರಿ ಪೊಲೀಸ್ ಆಗಮನ – ಪರಿಸ್ಥಿತಿ ನಿಯಂತ್ರಣ:

ಸ್ಥಳದಲ್ಲಿದ್ದ ಅಧಿಕಾರಿಗಳು ಪರಿಸ್ಥಿತಿಯ ನಿಯಂತ್ರಣಕ್ಕಾಗಿ ತಕ್ಷಣವೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಂಡರು. ತಕ್ಷಣ ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ತಂಡ ಆಗಮಿಸಿ, ಗುಂಪು ಸೇರಿದ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಸದ್ಯ ಪೊಲೀಸರು ಆಕ್ಟಿವಾ ಸವಾರನನ್ನು ಹಾಗೂ ಆತನ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ರಾಜಕೀಯ ಲಿಂಕ್ – ಕುತೂಹಲ ಮೂಡಿಸಿದ ಪ್ರಕರಣ:

ಪೊಲೀಸರ ವಶದಲ್ಲಿರುವ ಆಕ್ಟಿವಾ ಸವಾರನನ್ನು ಉಕ್ಕುಡ ದರ್ಬೆ ಕಾಂತಡ್ಕದ ನಿವಾಸಿ ದಿವಂಗತ ಮೋಯಿದು ಕುಟ್ಟಿಯವರ ಮಗ ಆರೀಸ್‌ ಕಾಂತಡ್ಕ ಎಂದು ಗುರುತಿಸಲಾಗಿದೆ. ಈತನ ಸಹೋದರ ಜಿಲ್ಲಾ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರ ನಿಕಟವರ್ತಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಈ ಕಾರಣದಿಂದಾಗಿ ಪ್ರಕರಣವು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ವಿಟ್ಲ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

Trending

Copyright © 2025 Deevatige

error: Content is protected !!