Connect with us

crime

ಲಂಚ ಪಡೆದು ನಿಯಮಬಾಹಿರವಾಗಿ PCC ನೀಡುತ್ತಿದ್ದ ಬಜಪೆ ಪೊಲೀಸರ ಜಾಲ ಪತ್ತೆ: ಇಬ್ಬರು ಸಿಬ್ಬಂದಿ ಸಸ್ಪೆಂಡ್, ಮಧ್ಯವರ್ತಿಗಳು ಲಾಕ್!

Published

on

ಮಂಗಳೂರು: ಅಸ್ಸಾಂ ಹಾಗೂ ಬಿಹಾರ್ ಮೂಲದ ಕಾರ್ಮಿಕರ ಪೂರ್ವಾಪರ ಪರಿಶೀಲಿಸದೆ, ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ 30ಕ್ಕೂ ಹೆಚ್ಚು ಮಂದಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿರುವ ಗಂಭೀರ ಆರೋಪದಡಿಯಲ್ಲಿ ಬಜಪೆ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬಜಪೆ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಆಶಾ ಮತ್ತು ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಅಮಾನತಾದ ಸಿಬ್ಬಂದಿಯಾಗಿದ್ದಾರೆ.

ಪ್ರಕರಣದ ಹಿನ್ನೆಲೆ:

ಇವರಿಬ್ಬರು ಕೈಜೋಡಿಸಿ ಒಟ್ಟು 31 ಮಂದಿಗೆ ನಿಯಮಬಾಹಿರವಾಗಿ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿದ್ದಾರೆ ಎನ್ನಲಾಗಿದೆ. ಉನ್ನತ ಮಟ್ಟದ ತನಿಖಾ ಸಂಸ್ಥೆಯೊಂದರಿಂದ ಈ ರೀತಿಯ ದುರ್ಬಳಕೆಯಾಗಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ಎಚ್ಚೆತ್ತ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿ ಇಬ್ಬರನ್ನೂ ಸಸ್ಪೆಂಡ್ ಮಾಡಿದ್ದಾರೆ.

ಕ್ರಿಮಿನಲ್ ಹಿನ್ನೆಲೆ ಹಾಗೂ ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಸ್ಸಾಂ ಮೂಲದ ಕೆಲವು ಕಾರ್ಮಿಕ ಯುವಕರಿಗೆ ಈ ರೀತಿ ನಿಯಮಬಾಹಿರವಾಗಿ ಪಿಸಿಸಿ ನೀಡಿರುವುದು ಇಲಾಖೆಯ ದೊಡ್ಡ ಲೋಪಕ್ಕೆ ಕಾರಣವಾಗಿದೆ. ಈ ಕುರಿತು ಪೊಲೀಸ್ ಕಮಿಷನರ್ ಅವರು ತನಿಖೆಯ ಜವಾಬ್ದಾರಿಯನ್ನು ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ವಹಿಸಿದ್ದಾರೆ.

ಮಧ್ಯವರ್ತಿಗಳ ಮೂಲಕ ಪಾಸ್‌ಪೋರ್ಟ್ ದುರ್ಬಳಕೆ ಸಂಚು?

MRPL ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡಲು ಬಂದಿದ್ದ ಇವರು ತಾತ್ಕಾಲಿಕ ವಿಳಾಸ ಹೊಂದಿದ್ದರು. ಆದರೆ, ಪಾಸ್‌ಪೋರ್ಟ್ ಮಾಡಿಸುವ ಉದ್ದೇಶದಿಂದ ಮಧ್ಯವರ್ತಿಗಳನ್ನು ಬಳಸಿಕೊಂಡು ಬಜಪೆ ಪೊಲೀಸ್ ಠಾಣೆಯಿಂದ ಸುಲಭವಾಗಿ PCC ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ರೀತಿ ಸರ್ಟಿಫಿಕೇಟ್ ಪಡೆದ 31 ಮಂದಿಯಲ್ಲಿ ಕೆಲವರು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಕೇಂದ್ರ ತನಿಖಾ ಸಂಸ್ಥೆಯು ಮಂಗಳೂರು ಪೊಲೀಸರನ್ನು ಪ್ರಶ್ನಿಸಿದಾಗ ಈ ಇಡೀ ಜಾಲ ಬೆಳಕಿಗೆ ಬಂದಿದೆ.

ಪಾಸ್‌ವರ್ಡ್ ದುರ್ಬಳಕೆ – ಇಬ್ಬರು ಮಧ್ಯವರ್ತಿಗಳ ಬಂಧನ:

ಇಲಾಖೆಯ ತನಿಖೆಯ ವೇಳೆ ಬಜಪೆ ಠಾಣಾಧಿಕಾರಿಗಳ ಅಧಿಕೃತ ಲಾಗಿನ್ ಪಾಸ್‌ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು ಈ ಸಿಬ್ಬಂದಿಗಳು ಕ್ಲಿಯರೆನ್ಸ್ ನೀಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ಇದಕ್ಕಾಗಿ ಇಬ್ಬರು ಪೊಲೀಸರು ಮಧ್ಯವರ್ತಿಗಳಾದ ಭರತ್ ಎಕ್ಕಾರು ಹಾಗೂ ಮಮತಾ ಎಂಬವರಿಂದ ಹಣ ಪಡೆದಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಗಳಾದ ಭರತ್ ಮತ್ತು ಮಮತಾ ಅವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿ BNS ಕಲಂ 336(2), (3), 340(2), 316(5), 318(4) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!