VITTLA
ದೀವಟಿಗೆ ವರದಿಗೆ ಬಿಗ್ ಎಫೆಕ್ಟ್: ಕುಸಿಯುವ ಹಂತದಲ್ಲಿದ್ದ ಮೈರ ಅಂಗನವಾಡಿ ನೂತನ ಕಟ್ಟಡಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಶಿಲಾನ್ಯಾಸ!
ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರದ ದುಸ್ಥಿತಿಯ ಕುರಿತು ‘ದೀವಟಿಗೆ ಡಿಜಿಟಲ್ ಮೀಡಿಯಾ’ ಪ್ರಕಟಿಸಿದ್ದ ವಿಶೇಷ ತನಿಖಾ ವರದಿಗೆ ಕೊನೆಗೂ ಭರ್ಜರಿ ಯಶಸ್ಸು ಸಿಕ್ಕಿದೆ. ಅಪಾಯದ ಅಂಚಿನಲ್ಲಿದ್ದ ಅಂಗನವಾಡಿಗೆ ಈಗ ಹೊಸ ಕಾಯಕಲ್ಪ ದೊರೆಯುತ್ತಿದ್ದು, ಶ್ರೀ ರಾಮ ಫೈನಾನ್ಸ್ (ಶ್ರೀರಾಮ ಸೇವಾ ಸಂಕಲ್ಪ ಫೌಂಡೇಷನ್) ಇದರ ಸಿ.ಎಸ್.ಆರ್ (CSR) ಯೋಜನೆ ಹಾಗೂ ಪಂಚಾಯತ್ನ ಜಂಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ನೂತನ ಅಂಗನವಾಡಿ ಕಟ್ಟಡಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಧಿಕೃತವಾಗಿ ಶಿಲಾನ್ಯಾಸ ನೆರವೇರಿಸಿದ್ದಾರೆ.

ಪುಟಾಣಿಗಳ ಜೀವದ ಜೊತೆ ಚೆಲ್ಲಾಟವಾಡಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ‘ದೀವಟಿಗೆ’
ಕೇವಲ ಎರಡು ತಿಂಗಳ ಹಿಂದೆ (ಮೇ 2026 ರಲ್ಲಿ) ದೀವಟಿಗೆ ಡಿಜಿಟಲ್ ಮೀಡಿಯಾವು ಮೈರ ಅಂಗನವಾಡಿ ಕೇಂದ್ರದ ಜ್ವಲಂತ ಸಮಸ್ಯೆಯ ಕುರಿತು ಧ್ವನಿ ಎತ್ತಿತ್ತು. “ಮೈರ ಅಂಗನವಾಡಿ – ಪುಟಾಣಿಗಳ ಜೀವದ ಜೊತೆ ಅಧಿಕಾರಿಗಳ ಚೆಲ್ಲಾಟ” ಎಂಬ ಶೀರ್ಷಿಕೆಯಡಿಯಲ್ಲಿ ಸವಿಸ್ತಾರವಾದ ತನಿಖಾ ವರದಿಯನ್ನು ಪ್ರಕಟಿಸಲಾಗಿತ್ತು.

“ಪುಟಾಣಿಗಳ ಬದುಕಿನ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ. ಮಳೆಗಾಲ ಬಂದರೆ ಏನಾಗುತ್ತೋ ಗೊತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಮಾಡಬೇಕು” ಎಂದು ವರದಿಯ ಮೂಲಕ ಆಡಳಿತ ವ್ಯವಸ್ಥೆಗೆ ತೀವ್ರ ಎಚ್ಚರಿಕೆಯನ್ನು ನೀಡಲಾಗಿತ್ತು.
ಮಳೆಗಾಲದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗಬಾರದು ಎಂಬ ದೀವಟಿಗೆ ಮಾಧ್ಯಮದ ಈ ಜನಪರ ಕಾಳಜಿಯ ವರದಿ ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು.
ನೂತನ ಸುಸಜ್ಜಿತ ಕಟ್ಟಡಕ್ಕೆ ಮುಹೂರ್ತ: ಸಂಸದರಿಂದ ಭೂಮಿ ಪೂಜೆ
ದೀವಟಿಗೆ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಟ್ಟಡದ ಮರುನಿರ್ಮಾಣಕ್ಕೆ ಮುಂದಾಗಿದ್ದಾರೆ. ಶ್ರೀ ರಾಮ ಫೈನಾನ್ಸ್ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆ (CSR) ನಿಡಿಯಡಿ ಹಾಗೂ ಸ್ಥಳೀಯ ಪಂಚಾಯತ್ನ ಸಹಭಾಗಿತ್ವದಲ್ಲಿ ಹೊಸದೊಂದು ಸುಸಜ್ಜಿತ ಅಂಗನವಾಡಿ ಕಟ್ಟಡವನ್ನು ನಿರ್ಮಿಸಿಕೊಡಲು ಒಪ್ಪಿಗೆ ಸೂಚಿಸಿದೆ



Bantawala
ದಕ್ಷಿಣಗಾಣಗಾಪುರ ಒಡಿಯೂರಿನಲ್ಲಿ ಶ್ರೀಗಳವರ ಜನ್ಮದಿನೋತ್ಸವ ಹಾಗೂ ‘ಗ್ರಾಮೋತ್ಸವ-2026’: ವೈಭವದ ಗುರುವಂದನೆ – ಸೇವಾ ಸಂಭ್ರಮ
ಆಗಸ್ಟ್ 8ರಂದು ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸೇವಾಸಂಭ್ರಮ | ಬೆಳ್ಳಿರಥೋತ್ಸವ, ಪಾದಪೂಜೆ, ತುಲಾಭಾರ ಸೇವೆ
ವಿಟ್ಲ: ದಕ್ಷಿಣಗಾಣಗಾಪುರ ಎಂದೇ ಅಪಾರ ಭಕ್ತಾದಿಗಳಿಂದ ಶ್ರದ್ಧಾ-ಭಕ್ತಿಗಳಿಂದ ಪೂಜಿಸಲ್ಪಡುವ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಮತ್ತು ‘ಗ್ರಾಮೋತ್ಸವ-2026’ ಕಾರ್ಯಕ್ರಮವು ಅತ್ಯಂತ ಸಡಗರ ಸಂಭ್ರಮದೊಂದಿಗೆ ‘ಗುರುವಂದನೆ-ಸೇವಾಸಂಭ್ರಮ’ವಾಗಿ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮವು ಆಗಸ್ಟ್ 08ರ ಶನಿವಾರದಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಅನುಗ್ರಹ ಸಂದೇಶ ಮತ್ತು ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿ ಇವರ ದಿವ್ಯ ಉಪಸ್ಥಿತಿಯಲ್ಲಿ ಈ ಧಾರ್ಮಿಕ ಮತ್ತು ಸಾಮಾಜಿಕ ಮಹೋತ್ಸವವು ನೆರವೇರಲಿದೆ.
ಕಾರ್ಯಕ್ರಮದ ಧಾರ್ಮಿಕ ವಿಧಿವಿಧಾನಗಳು ಬೆಳಿಗ್ಗೆ 8.00 ಗಂಟೆಯಿಂದಲೇ ಆರಂಭಗೊಳ್ಳಲಿದ್ದು, ಶ್ರೀ ಗಣಪತಿ ಹವನ ಹಾಗೂ ಮಹಾಪೂಜೆ ನಡೆಯಲಿದೆ. ತದನಂತರ ಬೆಳಿಗ್ಗೆ 9.00 ಗಂಟೆಯಿಂದ ಶ್ರೀ ರವಿರಾಜ್ ಒಡಿಯೂರು ಮತ್ತು ಬಳಗದವರಿಂದ ಭಕ್ತಿಪೂರ್ವಕ ನಾಮಸಂಕೀರ್ತನೆ ಜರುಗಲಿದೆ. ಬೆಳಿಗ್ಗೆ 9.30 ರಿಂದ ಪರಮಪೂಜ್ಯ ಶ್ರೀಗಳವರಿಗೆ ಭಕ್ತಾದಿಗಳಿಂದ ಪಾದಪೂಜೆ, ತುಲಾಭಾರ ಸೇವೆ ಮತ್ತು ಗುರುವಂದನೆ ನೆರವೇರಲಿದೆ. ಅಪರಾಹ್ನ 4.00 ರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರಾತ್ರಿ 7.00 ಗಂಟೆಗೆ ಶ್ರೀ ಸನ್ನಿಧಿಯಲ್ಲಿ ರಂಗಪೂಜೆ, ವಿಶೇಷ ಬೆಳ್ಳಿರಥೋತ್ಸವ ಸೇವೆ, ಮಹಾಪೂಜೆ ನಡೆಯಲಿದೆ.
ಬೆಳಿಗ್ಗೆ 11.30ಕ್ಕೆ ಸರಿಯಾಗಿ ನಡೆಯಲಿರುವ ಭವ್ಯ ಸಭಾ ಕಾರ್ಯಕ್ರಮದಲ್ಲಿ ನಾಡಿನ ಪ್ರಮುಖ ರಾಜಕೀಯ, ಸಾಮಾಜಿಕ ಹಾಗೂ ಉದ್ಯಮ ರಂಗದ ಧುರೀಣರು ಭಾಗವಹಿಸಲಿದ್ದಾರೆ.
ಮಂಗಳೂರು ಸಂಸದ ಕ್ಯಾ| ಬ್ರಿಜೇಶ್ ಚೌಟ, ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಶಬರಿ ಇಂಡಸ್ಟ್ರಿಯಲ್ ಕ್ಯಾಟರಿಂಗ್ ಆಡಳಿತ ನಿರ್ದೇಶಕ ಕೆ.ಕೆ. ಶೆಟ್ಟಿ, ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿರುವ ಮುಂಬೈ ಉದ್ಯಮಿ ರಘು ಎಲ್. ಶೆಟ್ಟಿ ದೇವಸ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು., ಶಶಿ ಕ್ಯಾಟರಿಂಗ್ ಸರ್ವೀಸಸ್ ಇದರ ಆಡಳಿತ ನಿರ್ದೇಶಕರಾದ ಶಶಿಧರ ಬಿ. ಶೆಟ್ಟಿ ಬರೋಡ, ಹಿರಿಯ ವಕೀಲರಾದ ಶ್ಯಾಮ ಭಟ್ , ಪ್ರಗತಿಪರ ಕೃಷಿಕರಾದ ಶ್ಯಾಮ್ ಪ್ರಸಾದ್ ಕೊಣಲೆ, ಬಾಂಬೆ ಬಂಟ್ಸ್ ಎಸೋಸಿಯೇಷನ್ಸ್ ಮುಂಬೈ ಇದರ ಮಾಜಿ ಅಧ್ಯಕ್ಷರಾದ ಶ್ಯಾಮ ಎನ್. ಶೆಟ್ಟಿ , ಎಟಿಎಸ್ ದೋಹ ಕತಾರ್ ಆಡಳಿತ ನಿರ್ದೇಶಕರಾದ ರವಿಶೆಟ್ಟಿ ಮೂಡಂಬೈಲು ಹಾಗೂ ನವಿಮುಂಬೈ ಉದ್ಯಮಿ ಭಾಸ್ಕರ ಆರ್. ಶೆಟ್ಟಿ ಸೇರಿದಂತೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಾದ ಗುಜರಾತ್ನ ಖ್ಯಾತ ಪರಿಸರವಾದಿ, ‘ಗ್ರೀನ್ ಹೀರೊ ಆಫ್ ಇಂಡಿಯಾ’ ಡಾ. ಆರ್.ಕೆ. ನಾಯರ್ ಅವರಿಗೆ ವಿಶೇಷ ಗೌರವಾಭಿನಂದನೆ ನೆರವೇರಲಿದೆ.
ಗ್ರಾಮೋತ್ಸವದ ವಿಶೇಷತೆಗಳು
ಕ್ಷೇತ್ರದ ಸಾಮಾಜಿಕ ಕಾಳಜಿಯ ಸಂಕೇತವಾಗಿರುವ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಬೃಹತ್ ಗ್ರಾಮ ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರಗಳು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ. ಇದರೊಂದಿಗೆ ವನಮಹೋತ್ಸವ ಆಚರಣೆ, ಭಕ್ತಾದಿಗಳಿಗೆ ಉಚಿತ ಸಸಿ ವಿತರಣೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಅರ್ಹ ಬಡ ರೋಗಿಗಳಿಗೆ ವೈದ್ಯಕೀಯ ಶುಶ್ರೂಷೆಗೆ ಧನಸಹಾಯ ನೀಡುವ ಉದಾತ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಮಾಜವನ್ನು ಸುಸ್ಥಿತಿಯಲ್ಲಿಡಲು ವಿವಿಧ ಸಂಘ-ಸಂಸ್ಥೆಗಳಿಂದ ಗುರುವಂದನೆ, ವ್ಯಸನಮುಕ್ತ ಸಮಾಜ ಜಾಗೃತಿ ಅಭಿಯಾನಗಳು, ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯುತ್ತಿದೆ.
ಈ ಪವಿತ್ರ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಭಾಗವಹಿಸಿ, ಶ್ರೀಗುರುಗಳ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕಾಗಿ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿ ಹಾಗೂ ಒಡಿಯೂರು ಶ್ರೀ ಸಂಸ್ಥಾನಮ್ ಪ್ರಕಟಣೆಯಲ್ಲಿ ತಿಳಿಸಿದೆ
DEATH
ವಿಟ್ಲ: ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವೃದ್ಧ ಗಿರಿಯಪ್ಪ ಸಪಲ್ಯ ಬದುಕುಳಿಯಲಿಲ್ಲ !
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಚಿಕಿತ್ಸೆಗೆ ಸ್ಪಂದಿಸದೆ ಇಂದು (ಆಗಸ್ಟ್ 1) ಮಧ್ಯಾಹ್ನ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಘಟನೆಯ ವಿವರ:
ನಾಪತ್ತೆ: ಗಿರಿಯಪ್ಪ ಸಪಲ್ಯ ಅವರು ಜುಲೈ 28 ರಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಸುತ್ತಮುತ್ತ ತೀವ್ರ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಪತ್ತೆಯಾದ ಸನ್ನಿವೇಶ: ಜುಲೈ 31 ರಂದು ಬೆಳಿಗ್ಗೆ ಕುಕ್ಕಿಲದ ಪುರಂದರ ಭಟ್ ಎಂಬವರ ಅಡಿಕೆ ತೋಟದ ನೀರು ಹರಿಯುವ ಚರಂಡಿಯಲ್ಲಿ ವೃದ್ಧ ಅಸ್ವಸ್ಥರಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ರಕ್ಷಣೆ: ಸತತ 3 ದಿನಗಳ ಕಾಲ ಸುರಿಯುವ ಮಳೆ ಮತ್ತು ಶೀತದ ವಾತಾವರಣದಲ್ಲಿದ್ದರೂ ಅವರು ಜೀವಂತವಾಗಿದ್ದರು. ಸ್ಥಳೀಯರು ತಕ್ಷಣ ‘ಫ್ರೆಂಡ್ಸ್ ವಿಟ್ಲ’ ತಂಡದ ಮುರಳೀಧರ (ಮುರಳಿ ವಿಟ್ಲ) ಅವರಿಗೆ ಮಾಹಿತಿ ನೀಡಿದ್ದು, ಅಂಬ್ಯುಲೆನ್ಸ್ ಮೂಲಕ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಂತಾಜನಕ ಸ್ಥಿತಿ ಮತ್ತು ಸಾವು:
ಆರಂಭದಲ್ಲಿ ವಿಟ್ಲ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಗೆ ಸ್ಪಂದಿಸಿದಂತೆ ಕಂಡರೂ, ಸಂಜೆಯ ವೇಳೆಗೆ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಯಿತು. ತಕ್ಷಣವೇ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 1 ರ ಮಧ್ಯಾಹ್ನ ಅವರು ಮೃತರಾಗಿದ್ದಾರೆ.
ಸ್ಥಳೀಯರಲ್ಲಿ ಮುಂದುವರಿದ ಅನುಮಾನಗಳು:
ಆರ್ಥಿಕವಾಗಿ ಸದೃಢವಾಗಿದ್ದ ಗಿರಿಯಪ್ಪ ಸಪಲ್ಯ ಅವರು ಈ ಭಾರಿ ಮಳೆಯ ನಡುವೆ ಬೇರೆಯವರ ಅಡಿಕೆ ತೋಟಕ್ಕೆ ಯಾಕೆ ಹೋದರು? ದಾರಿ ತಪ್ಪಿ ಬಿದ್ದರಾ ಅಥವಾ ಇದರ ಹಿಂದೆ ಬೇರೇನಾದರೂ ಕಾರಣವಿದೆಯೇ ಎಂಬ ಪ್ರಶ್ನೆಗಳು ಸ್ಥಳೀಯವಾಗಿ ಹಾಗೆಯೇ ಉಳಿದುಕೊಂಡಿವೆ

DEATH
ಅನಾಥ ವೃದ್ಧೆಯ ಅಂತ್ಯಕ್ರಿಯೆ ನಡೆಸಿ ಮಾನವೀಯತೆ ಮೆರೆದ ಫ್ರೆಂಡ್ಸ್ ವಿಟ್ಲ ತಂಡ
ವಿಟ್ಲ: ಮೂಲತಃ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರ ನೆಕ್ಕರೆಕಾಡು ನಿವಾಸಿಯಾಗಿದ್ದು, ಪ್ರಸ್ತುತ ಮಾಮೇಶ್ವರ ಜನತಾ ಕಾಲೋನಿಯಲ್ಲಿ ವಾಸಿಸುತ್ತಿದ್ದ ಅನಾಥ ವೃದ್ಧೆ ಭವಾನಿ ನಾಯ್ಕ (67) ಅವರು ಶನಿವಾರ ಮುಂಜಾನೆ ಮಲಗಿದ್ದ ಸ್ಥಿತಿಯಲ್ಲೇ ಇಹಲೋಕ ತ್ಯಜಿಸಿದ್ದಾರೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ‘ಫ್ರೆಂಡ್ಸ್ ವಿಟ್ಲ’ ತಂಡದ ಪ್ರಮುಖ ಮುರಳೀಧರ ಅವರ ನೇತೃತ್ವದ ಕಾರ್ಯಕರ್ತರು ತಕ್ಷಣ ಸ್ಥಳಕ್ಕೆ ತೆರಳಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.

ಹಿಂದೂ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ
ಬಳಿಕ ಆಸ್ಪತ್ರೆಯ ಪ್ರಕ್ರಿಯೆಗಳನ್ನು ಪೂರೈಸಿ, ಮುರಳೀಧರ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಕಾರ್ಯಕರ್ತರು ವಿಟ್ಲದ ಹಿಂದೂ ರುದ್ರಭೂಮಿಯಲ್ಲಿ ಭವಾನಿಯವರ ಮೃತದೇಹದ ಧಾರ್ಮಿಕ ಅಂತ್ಯಕ್ರಿಯೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮೃತರ ಪುತ್ರ ಬಾಲಕೃಷ್ಣ ಹಾಗೂ ಕನ್ಯಾನದ ಭಾರತ ಸೇವಾಶ್ರಮದಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿರುವ ಅವರ ಇಬ್ಬರು ಮೊಮ್ಮಕ್ಕಳು ಹಾಜರಿದ್ದರು.
ಸಾರ್ವಜನಿಕರ ಮೆಚ್ಚುಗೆ
ಕಳೆದ ಹಲವು ವರ್ಷಗಳಿಂದ ವಿಟ್ಲ ಪೇಟೆಯಲ್ಲಿ ಸುತ್ತಾಡುತ್ತಿದ್ದ, ನೊಂದ ವೃದ್ಧೆ ಭವಾನಿಯವರ ಅಂತಿಮ ಪಯಣಕ್ಕೆ ಹೆಗಲು ನೀಡಿ, ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಿದ ‘ಫ್ರೆಂಡ್ಸ್ ವಿಟ್ಲ’ ತಂಡದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಆಪತ್ಬಾಂಧವ ಫ್ರೆಂಡ್ಸ್ ವಿಟ್ಲ: ಕಳೆದ ಹಲವು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಲು ಸಾಲು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಮುರಳೀಧರ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡವು, ತುರ್ತು ಸಂದರ್ಭಗಳಲ್ಲಿ ಕಷ್ಟದಲ್ಲಿರುವ ನೊಂದವರ ಪಾಲಿಗೆ ನಿಜವಾದ ‘ಆಪತ್ಬಾಂಧವ’ನಾಗಿ ಧಾವಿಸಿ ಬರುತ್ತಿದೆ.

-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
