Connect with us

crime

ದೀವಟಿಗೆ ವಿಶೇಷ ತನಿಖಾ ವರದಿ: ಪುತ್ತೂರಿನಲ್ಲಿ ಮುದ್ದು ಕಂದಮ್ಮಗಳ ಹೆಸರಿನಲ್ಲಿ ಅನಧಿಕೃತ ದಂಧೆ! ನಿಯಮಗಳನ್ನೆಲ್ಲ ಗಾಳಿಗೆ ತೂರಿ ಮೂರನೇ ಮಹಡಿಯಲ್ಲಿ ನಡೆಯುತ್ತಿದೆಯೇ ಮಕ್ಕಳ ಬದುಕಿನ ಜೊತೆ ಚೆಲ್ಲಾಟ?

Published

on

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಿ, ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆಗಳೊಂದಿಗೆ ಸಿದ್ಧತೆ ನಡೆಸುತ್ತಿರುವ ಹೆಮ್ಮೆಯ ನಗರ ಪುತ್ತೂರು. ಸಂವಿಧಾನದ ಆಶಯದಂತೆ ಇಲ್ಲಿನ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು, ಭ್ರಷ್ಟಾಚಾರ-ಲಂಚಮುಕ್ತ ಆಡಳಿತವಿರಬೇಕು, ಶೈಕ್ಷಣಿಕ ಸಂಸ್ಥೆಗಳು ಮಕ್ಕಳ ಭವಿಷ್ಯವನ್ನು ರೂಪಿಸುವ ಪವಿತ್ರ ನಿಲಯಗಳಾಗಬೇಕೆಂದು ಇಲ್ಲಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಘಂಟಾಘೋಷವಾಗಿ ಸಾರುತ್ತಾ ಬಂದಿದ್ದಾರೆ. ಆದರೆ, ಇದೇ ಪುತ್ತೂರು ನಗರದ ಹೃದಯಭಾಗದಲ್ಲಿ ಸದ್ದಿಲ್ಲದೆ, ಯಾವುದೇ ಕಾನೂನಿನ ಭಯವಿಲ್ಲದೆ ಮುದ್ದು ಕಂದಮ್ಮಗಳ ಬದುಕಿನ ಜೊತೆ ಚೆಲ್ಲಾಟವಾಡುವ ಆಘಾತಕಾರಿ ದಂಧೆಯೊಂದು ರಾಜಾರೋಷವಾಗಿ ಕಾರ್ಯಾಚರಿಸುತ್ತಿರುವುದು ಈಗ ಬಯಲಾಗಿದೆ!

ಹೌದು, ಸಮಾಜದ ಬಗ್ಗೆ ಕಾಳಜಿಯುಳ್ಳ ಸಾರ್ವಜನಿಕ ಹಿತಾಸಕ್ತಿಯುಳ್ಳ ಸಮಾಜಸೇವಕ ವೈದ್ಯರೊಬ್ಬರ ತೀಕ್ಷ್ಣ ಕಣ್ಣಿಗೆ ಬಿದ್ದ ಈ ಸತ್ಯ, ಇಡೀ ಪುತ್ತೂರಿನ ಪೋಷಕರು ಮತ್ತು ಶಿಕ್ಷಣ ಇಲಾಖೆ ತಲೆ ತಗ್ಗಿಸುವಂತೆ ಮಾಡಿದೆ.

ಲಿಫ್ಟ್ ಇಲ್ಲ, ಫೈರ್ ಸೇಫ್ಟಿ ಇಲ್ಲ: 3ನೇ ಮಹಡಿಯಲ್ಲಿ ಕಂದಮ್ಮಗಳ ಸೆರೆವಾಸ!

ಪುತ್ತೂರು ನಗರದ ಬೊಳ್ವಾರು ಎಂಬಲ್ಲಿರುವ “ಗಣೇಶ್ ಪ್ರಸಾದ್” ಹೆಸರಿನ ಕಟ್ಟಡದ 3ನೇ ಮಹಡಿಯಲ್ಲಿ ಯಾವುದೇ ಬೋರ್ಡ್ ಹಾಕದೆ, ತಾನೊಂದು ಅನಧಿಕೃತ ಸಂಸ್ಥೆ ಎಂಬುದನ್ನು ಸಾಬೀತುಪಡಿಸುವಂತೆ ಈ “ಮಕ್ಕಳ ಮನೆ” ಕಾರ್ಯಾಚರಿಸುತ್ತಿದೆ.

ಅಲ್ಲಿನ ವಾಸ್ತವ ಸ್ಥಿತಿ ನೋಡಿದರೆ ಎಂಥವರಿಗೂ ಮೈ ಜುಂ ಎನ್ನುತ್ತದೆ:

ಅಪಾಯಕಾರಿ 3ನೇ ಮಹಡಿ: ಕನಿಷ್ಠ ನಡೆದಾಡಲು ಬಾರದ, ಓಡಾಡುವ ವಯಸ್ಸಿನ ಪುಟ್ಟ ಮಕ್ಕಳಿಗೆ ಯಾವುದೇ ಲಿಫ್ಟ್ ಸೌಲಭ್ಯವಿಲ್ಲದ ಮೂರನೇ ಮಹಡಿಯಲ್ಲಿ ಈ ಕೇಂದ್ರವನ್ನು ನಡೆಸಲಾಗುತ್ತಿದೆ.

ರೂಪರೇಷೆಯಿಲ್ಲದ ಹಾಲ್, ಪಕ್ಕದಲ್ಲೇ ಅಡುಗೆ ಕೋಣೆ: ಒಂದು ಉದ್ದನೆಯ ಹಾಲ್, ಅದಕ್ಕೆ ಯಾವುದೇ ಪಾರ್ಟಿಷನ್ ಇಲ್ಲ. ಅದೇ ಹಾಲ್‌ನಲ್ಲಿ ಬೇಬಿ ಸಿಟ್ಟಿಂಗ್, ನರ್ಸರಿ, ಎಲ್‌ಕೆಜಿ, ಯುಕೆಜಿ ಕ್ಲಾಸುಗಳು! ಅಷ್ಟೇ ಏಕೆ, ಅದರ ಒಟ್ಟಿಗೇ ಅಡುಗೆ ಕೋಣೆಯೂ ಇದೆ. ಗ್ಯಾಸ್ ಸಿಲಿಂಡರ್ ಪಕ್ಕದಲ್ಲೇ ಪುಟ್ಟ ಕಂದಮ್ಮಗಳು ಆಟವಾಡಬೇಕಾದ ದುಸ್ಥಿತಿ ಇಲ್ಲಿದೆ.

ಗಾಳಿಗೆ ತೂರಿದ ಸುರಕ್ಷತೆ: ತುರ್ತು ಸಂದರ್ಭದಲ್ಲಿ ಕೆಳಗೆ ಬರಲು ಯಾವುದೇ ಪರ್ಯಾಯ ದಾರಿಯಿಲ್ಲ, ಅಗ್ನಿಶಾಮಕ ಸುರಕ್ಷತೆ (Fire Safety) ಇಲ್ಲವೇ ಇಲ್ಲ. ಇನ್ನು ಮಕ್ಕಳಿಗೆ ಬಳಸುವ ವಾಶ್ ರೂಮ್ ಇರುವುದು ಕೊಠಡಿಯಿಂದ ಹೊರಗಡೆ!

ತಿಂಗಳಿಗೆ 4 ಸಾವಿರಕ್ಕೂ ಅಧಿಕ ಲೂಟಿ!

ಒಂದು ಜೀವ ಉಳಿಸುವ ವೈದ್ಯಕೀಯ ಕ್ಲಿನಿಕ್ ಆರಂಭಿಸಬೇಕಾದರೆ ಎರಡನೇ ಮಹಡಿಯಲ್ಲಿದೆ ಎಂಬ ಕಾರಣಕ್ಕೆ ಅನುಮತಿ ನಿರಾಕರಿಸುವ ನಿಯಮಗಳು ಇಲ್ಲಿ ಎಲ್ಲಿ ಹೋದವು? ಪುಟ್ಟ ಕಂದಮ್ಮಗಳ ಕ್ಲಾಸಿಗೆ 3ನೇ ಮಹಡಿಯಲ್ಲಿ ಪರ್ಮಿಷನ್ ಕೊಟ್ಟವರು ಯಾರು? ಎಲ್‌ಕೆಜಿ ಮಗುವಿಗೆ ತಿಂಗಳಿಗೆ ಬರೋಬ್ಬರಿ 4,000 ರೂಪಾಯಿಗಿಂತಲೂ ಅಧಿಕ ಫೀಸ್ ವಸೂಲಿ ಮಾಡಲಾಗುತ್ತಿದೆ ಎಂದರೆ, ಇನ್ನು ಬೇಬಿ ಸಿಟ್ಟಿಂಗ್ ಹೆಸರಿನಲ್ಲಿ ಹೆತ್ತವರಿಂದ ಎಷ್ಟು ಹಣ ಲೂಟಿ ಮಾಡಲಾಗುತ್ತಿರಬಹುದು? ಇದು ಶಿಕ್ಷಣ ಸಂಸ್ಥೆಯೋ ಅಥವಾ ಕಂದಮ್ಮಗಳನ್ನು ಇಟ್ಟುಕೊಂಡು ಮಾಡುತ್ತಿರುವ ಕಾಸಿನ ದಂಧೆಯೋ?

ಇಲಾಖೆಗಳಿಗೂ ಗೊತ್ತಿಲ್ಲ, ಅಧಿಕಾರಿಗಳಿಗೂ ಸುದ್ದಿಯಿಲ್ಲ!

ಈ ಗಂಭೀರ ದಂಧೆಯ ಬೆನ್ನುಬಿದ್ದ ಆ ಸಮಾಜಸೇವಕ ವೈದ್ಯರು ಮೊದಲು ಶಿಕ್ಷಣ ಇಲಾಖೆಯನ್ನು ಸಂಪರ್ಕಿಸಿದಾಗ ಅಧಿಕಾರಿಗಳು ನೀಡಿದ ಉತ್ತರ ನಿಜಕ್ಕೂ ಬೆಚ್ಚಿಬೀಳಿಸುವಂತಿತ್ತು. “ನಾವು ಇದಕ್ಕೆ ಅನುಮತಿ ನೀಡಿಲ್ಲ, ಅದು ನಮ್ಮ ಅಂಡರ್‌ಗೆ ಬರುವುದಿಲ್ಲ” ಎಂದ ಇಲಾಖೆ, “ಅದು ಎಲ್ಲಿದೆ?” ಎಂದು ಉಲ್ಟಾ ಪ್ರಶ್ನೆ ಮಾಡಿದೆ! ತದನಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (CDPO) ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಲ್ಲಿನ ಅಧಿಕಾರಿಗಳಿಗೂ ಈ ಸಂಸ್ಥೆಯ ಬಗ್ಗೆಯಾಗಲಿ, ಅನುಮತಿ ನೀಡಿರುವ ಬಗ್ಗೆಯಾಗಲಿ ಯಾವುದೇ ಮಾಹಿತಿಯೇ ಇಲ್ಲ!

ಯಾರ ಅನುಮತಿಯೂ ಇಲ್ಲದೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಕಂದಮ್ಮಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವುದನ್ನು ಕಂಡು ಆಕ್ರೋಶಗೊಂಡ ವೈದ್ಯರು, “ನಾನೇ ಈ ಬಗ್ಗೆ ಅಧಿಕೃತ ದೂರು ನೀಡುತ್ತೇನೆ, ತಕ್ಷಣ ಅಲ್ಲಿಗೆ ಹೋಗಿ ತನಿಖೆ ನಡೆಸಿ ಬೀಗ ಜಡಿಯಬೇಕು. ಇನ್ನು ಮುಂದೆ ಪುತ್ತೂರಿನಲ್ಲಿ ಇಂತಹ ಒಂದೇ ಒಂದು ಅನಧಿಕೃತ ಸಂಸ್ಥೆಯೂ ಇರಬಾರದು” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಮಾಧ್ಯಮಗಳ ಮುಂದೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ನಿಯಮದ ಪುಸ್ತಕದಲ್ಲೇನಿದೆ? ಈ ಸಂಸ್ಥೆಯಲ್ಲಿ ಏನಿದೆ?

ಸರ್ಕಾರದ ನಿಯಮಾವಳಿಗಳ ಪ್ರಕಾರ ಒಂದು ಪ್ರಿ-ಸ್ಕೂಲ್ ಅಥವಾ ಬೇಬಿ ಸಿಟ್ಟಿಂಗ್ ನಡೆಸಲು ಈ ಕೆಳಗಿನ ದಾಖಲೆಗಳು ಕಡ್ಡಾಯ:

ಸರ್ಕಾರದ ಕಡ್ಡಾಯ ನಿಯಮಗಳುಬೊಳ್ವಾರಿನ ಈ ಅನಧಿಕೃತ ಸಂಸ್ಥೆಯ ಸ್ಥಿತಿ
ಶಿಕ್ಷಣ ಇಲಾಖೆಯ (BEO) ಪೂರ್ವಾನುಮತಿ ಮತ್ತು ನೋಂದಣಿಇಲ್ಲವೇ ಇಲ್ಲ!
ಪುರಸಭೆ/ಸ್ಥಳೀಯ ಆಡಳಿತದ ವ್ಯಾಪಾರ ಪರವಾನಗಿ (Trade License)ಗಾಳಿಗೆ ತೂರಲಾಗಿದೆ!
ಲೋಕೋಪಯೋಗಿ ಇಲಾಖೆಯ (PWD) ಕಟ್ಟಡ ಸುರಕ್ಷತಾ ಪ್ರಮಾಣಪತ್ರಯಾರೂ ಕೇಳುವವರಿಲ್ಲ!
ಅಗ್ನಿಶಾಮಕ ಇಲಾಖೆಯ ನಿಯಮಬದ್ಧ NOC (Fire Safety)ಶೂನ್ಯ!
ಆರೋಗ್ಯ ಇಲಾಖೆಯ ನೈರ್ಮಲ್ಯ ಪ್ರಮಾಣಪತ್ರಪತ್ತೆಯೇ ಇಲ್ಲ!
ಕಟ್ಟಡದ ಅಧಿಕೃತ ಬಾಡಿಗೆ ಅಥವಾ ಲೀಸ್ ಕರಾರು ಪತ್ರಸಂಶಯಾಸ್ಪದ!

ಈ ಯಾವುದೇ ನಿಯಮಗಳನ್ನು ಪಾಲಿಸದೆ ಮಕ್ಕಳನ್ನು ಕೂಡಿಟ್ಟಿರುವುದು ದಂಧೆಯಲ್ಲದೆ ಇನ್ನೇನು?

ಪೋಷಕರೇ ಎಚ್ಚರ.. ಎಚ್ಚರ..!

ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ಸಿಗಲಿ ಎಂದು ಕಷ್ಟಪಟ್ಟು ದುಡಿದ ಹಣವನ್ನು ತಂದು ಸುರಿಯುವ ಪೋಷಕರಿಗೆ ಈ ಸಂಸ್ಥೆಯ ಅಸಲಿ ಮುಖ ತಿಳಿಯಬೇಕಿದೆ. ಈ ವರದಿ ಪ್ರಕಟವಾಗುವವರೆಗೂ ಆ ಸಂಸ್ಥೆ ಎಲ್ಲಿದೆ ಎಂದು ನಾವು ಗುಪ್ತವಾಗಿಟ್ಟಿದ್ದೆವು. ಈಗಲಾದರೂ ಹೆತ್ತವರು ಎಚ್ಚೆತ್ತುಕೊಳ್ಳಲಿ, ತಮ್ಮ ಮಕ್ಕಳನ್ನು ಕಳುಹಿಸುತ್ತಿರುವ ಜಾಗ ಎಷ್ಟು ಸುರಕ್ಷಿತ ಎಂಬುದನ್ನು ಅರಿತುಕೊಳ್ಳಲಿ ಎಂಬುವುದೇ ನಮ್ಮ ಆಶಯ.

ಇದು ಕೇವಲ ಪುತ್ತೂರು ಪುರಸಭಾ ವ್ಯಾಪ್ತಿಗಷ್ಟೇ ಸೀಮಿತವಾಗಿಲ್ಲ. ಶೈಕ್ಷಣಿಕ ಮಾಫಿಯಾ ಎಂಬುದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ತನ್ನ ಕರಾಳಬಾಹುವನ್ನು ವಿಸ್ತರಿಸಿದ್ಧು ತಕ್ಷಣವೇ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ನಡೆಯುತ್ತಿರುವ ಮೂವತ್ತಕ್ಕೂ ಹೆಚ್ಚು ನಿಯಮಬಾಹಿರ ಸಂಸ್ಥೆಗಳ ವಿರುದ್ಧ ಕಾನೂನುಕ್ರಮ ಜರುಗಿಸಬೇಕಾಗಿದೆ.

ಕೊನೆಯ ಮಾತು: ಇಲಾಖೆಗಳು ಇರುವುದು ಯಾಕೆ?

ಇಷ್ಟೆಲ್ಲಾ ಕಾನೂನು ಬಾಹಿರ ಚಟುವಟಿಕೆಗಳು ನಗರದ ಮಧ್ಯದಲ್ಲೇ ನಡೆಯುತ್ತಿದ್ದರೂ ಕಣ್ಣು ಮುಚ್ಚಿ ಕುಳಿತಿರುವ ಇಲಾಖೆಗಳು ಇರುವುದು ಯಾಕೆ? ಎಂಬುದು ಈಗ ಪುತ್ತೂರಿನ ಸಾರ್ವಜನಿಕರ ಮುಂದಿರುವ ಮಿಲಿಯನ್ ಡಾಲರ್ ಪ್ರಶ್ನೆ. ಈ ಕೂಡಲೇ ಸಂಬಂಧಪಟ್ಟ ಪುರಸಭೆ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಈ ಅನಧಿಕೃತ ಸಂಸ್ಥೆಯ ಮೇಲೆ ಕಾನೂನು ಕ್ರಮ ಜರುಗಿಸಬೇಕಾಗಿದೆ. ಇಲ್ಲದಿದ್ದರೆ ಮಕ್ಕಳ ಜೀವಕ್ಕೆ ಏನಾದರೂ ಅಪಾಯವಾದರೆ ಅದಕ್ಕೆ ಇಲಾಖೆಯೇ ನೇರ ಹೊಣೆಯಾಗಬೇಕಾಗುತ್ತದೆ!

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Bantawala

ಬಸ್‌ನಲ್ಲಿ ಅಸಭ್ಯ ವರ್ತನೆ: ವಿಕೃತಕಾಮಿ ವೃದ್ಧ ಅರ್ಚಕನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೇಸ್‌ ದಾಖಲು!

Published

on

ಬಂಟ್ವಾಳ: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಎದುರು ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವೃದ್ಧನೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

ಜುಲೈ 30ರಂದು ಮಂಗಳೂರಿನ ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 2.10ರ ಸುಮಾರಿಗೆ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ ಏರಿದ್ದ ಸುಮಾರು 60–70 ವರ್ಷ ಪ್ರಾಯದ ವ್ಯಕ್ತಿಯೊಬ್ಬ, ಚಾಲಕನ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತುಕೊಂಡಿದ್ದ. ಪ್ರಯಾಣದ ವೇಳೆ ಎದುರಿನ ಸೀಟಿನಲ್ಲಿದ್ದ ಮಹಿಳೆಯರಿಗೆ ಕಾಣುವಂತೆ ಅಸಭ್ಯವಾಗಿ ಗುಪ್ತಾಂಗ ಪ್ರದರ್ಶಿಸಿ ವಿಕೃತಿ ಮೆರೆದಿದ್ದಾನೆ.

ಮಹಿಳೆಯ ಧೈರ್ಯ, ವೈರಲ್ ವೀಡಿಯೋ:

ವೃದ್ಧನ ನೀಚ ಕೃತ್ಯವನ್ನು ಕಂಡು ಆಕ್ರೋಶಗೊಂಡ ಬಸ್‌ನಲ್ಲಿದ್ದ ಮಹಿಳೆಯೊಬ್ಬರು ಧೈರ್ಯದಿಂದ ತಮ್ಮ ಮೊಬೈಲ್‌ನಲ್ಲಿ ಆತನ ವಿಕೃತಿಯನ್ನು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನು ಗಮನಿಸಿದ ವೃದ್ಧ, ಮೆಲ್ಕಾರ್ ಜಂಕ್ಷನ್ ತಲುಪುತ್ತಿದ್ದಂತೆ ಗಾಬರಿಯಿಂದ ಬಸ್‌ನಿಂದ ಇಳಿದು ಪರಾರಿಯಾಗಿದ್ದ. ಬಳಿಕ ಈ ವಿಷಯ ಬಸ್ ಚಾಲಕನ ಗಮನಕ್ಕೂ ಬಂದಿತ್ತು. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆರೋಪಿಯ ಗುರುತು ಪತ್ತೆ ಹಚ್ಚಿದ್ದು, ಆತ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಸಾದಿಕುಕ್ಕು ಅಂಗನವಾಡಿ ಬಳಿಯ ನಿವಾಸಿ ಹಾಗೂ ವೃತ್ತಿಯಲ್ಲಿ ಅರ್ಚಕ ಎಂದು ತಿಳಿದುಬಂದಿದೆ.

ಬಂಟ್ವಾಳ ಠಾಣೆಯಲ್ಲಿ ದೂರು:

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 75(2)ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

arrest

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖ್ಯಾತ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ಕಳೆದ 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, 30ಕ್ಕೂ ಹೆಚ್ಚು ವಾರಂಟ್ ಹಾಗೂ 13ಕ್ಕೂ ಅಧಿಕ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ಪಡೆ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಳ್ಳಾಲ ತಾಲೂಕಿನ ಮಾರ್ಗತಲೆ ಮೂಲದ, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಡಪ್ಪು ನಿವಾಸಿ ಉಮ್ಮರ್ ನವಾಫ್ (33) ಬಂಧಿತ ಆರೋಪಿ.

30ಕ್ಕೂ ಹೆಚ್ಚು ವಾರಂಟ್, ಪ್ರೋಕ್ಲಮೇಷನ್ ಜಾರಿ

ಬಂಧಿತ ಉಮ್ಮರ್ ನವಾಫ್ ವಿರುದ್ಧ ಕೊಲೆ ಯತ್ನ, ಅಪಹರಣ, ದರೋಡೆ, ಹಫ್ತಾ ವಸೂಲಿ, ಸಾರ್ವಜನಿಕ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಗಳಿಗೆ ಸಂಬಂಧಿಸಿದಂತೆ ಉಳ್ಳಾಲ, ಪಣಂಬೂರು ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಘನ ನ್ಯಾಯಾಲಯವು 30ಕ್ಕೂ ಹೆಚ್ಚು ವಾರಂಟ್‌ಗಳನ್ನು ಹೊರಡಿಸಿತ್ತು. ಅಲ್ಲದೆ, ಉಳ್ಳಾಲ ಠಾಣೆಯ ಮೂರು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದ ಆದೇಶದಂತೆ ‘ಪ್ರೋಕ್ಲಮೇಷನ್’ ಜಾರಿಗೊಳಿಸಲಾಗಿತ್ತು ಹಾಗೂ ಒಂದು ಪ್ರಕರಣದಲ್ಲಿ ಎಲ್.ಪಿ.ಸಿ (LPC) ಮಾಡಲಾಗಿತ್ತು.

ಆರೋಪಿ ಉಮ್ಮರ್ ನವಾಫ್ ಮೇಲಿರುವ ಪ್ರಕರಣಗಳ ವಿವರಗಳು:

  1. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 222/17):
    • ಕಲಂಗಳು: 143, 147, 148 (ಕಾನೂನುಬಾಹಿರ ಗುಂಪುಗಾರಿಕೆ, ಗಲಭೆ), 341 (ಅಕ್ರಮ ತಡೆ), 504, 506 (ಶಾಂತಿ ಭಂಗ, ಜೀವ ಬೆದರಿಕೆ), 324 (ಹಾಕಾಹಾಕಿ/ಹೊಡೆದಾಟ) ಮತ್ತು 307 (ಕೊಲೆ ಯತ್ನ).
  2. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 23/17):
    • ಕಲಂಗಳು: 427 IPC (ಆಸ್ತಿಗೆ ಹಾನಿ) ಮತ್ತು KPDLP ಕಾಯ್ದೆಯ 2(a), 2(b) (ಸಾರ್ವಜನಿಕ ಆಸ್ತಿ ನಷ್ಟ ತಡೆ ಕಾಯ್ದೆ).
  3. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 247/14):
    • ಕಲಂಗಳು: 448 (ಅಕ್ರಮ ಪ್ರವೇಶ) ಮತ್ತು 395 (ದರೋಡೆ).
  4. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 289/17):
    • ಕಲಂಗಳು: 504, 506, 364(a) (ಅಪಹರಣ ಮತ್ತು ಕಪ್ಪಕ್ಕೆ ಬೇಡಿಕೆ), 387 (ಹಫ್ತಾ ವಸೂಲಿಗೆ ಬೆದರಿಕೆ), 395 (ದರೋಡೆ), 149 IPC.
  5. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 276/15) – (ನ್ಯಾಯಾಲಯದಿಂದ LPC ಮಾಡಲಾದ ಪ್ರಕರಣ):
    • ಕಲಂಗಳು: 143, 144, 148, 448, 451, 452 (ಅಕ್ರಮ ಮನೆ ಪ್ರವೇಶ), 326, 307 (ಕೊಲೆ ಯತ್ನ), 397 (ಮಾರಕ ಆಯುಧದೊಂದಿಗೆ ದರೋಡೆ/ಕಳವು), 506, 149 IPC.
  6. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 206/2012) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 323, 427, 504, 506, 149 IPC.
  7. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 27/2017) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 387 IPC (ಭಯ ಹುಟ್ಟಿಸಿ ಹಣ/ಆಸ್ತಿ ವಸೂಲಿ ಮಾಡುವುದು).
  8. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 103/2021):
    • ಕಲಂಗಳು: 364 IPC (ಕೊಲೆ ಮಾಡುವ ಉದ್ದೇಶದಿಂದ ಅಪಹರಣ).
  9. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 71/23):
    • ಕಲಂಗಳು: 504, 506, 307 (ಕೊಲೆ ಯತ್ನ), 324, 427 IPC.
  10. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 183/17) – (ಪ್ರೋಕ್ಲಮೇಷನ್ ಜಾರಿಯಾದ ಪ್ರಕರಣ):
    • ಕಲಂಗಳು: 143, 147, 148, 448, 504, 324, 323, 506, 427 R/w 149 IPC.
  11. ಉಳ್ಳಾಲ ಪೊಲೀಸ್ ಠಾಣೆ (ಮೊ.ನಂ 159/23):
    • ಕಲಂಗಳು: 341, 394 (ಕಳವು ಮಾಡುವಾಗ ಗಾಯಗೊಳಿಸುವುದು), 307 (ಕೊಲೆ ಯತ್ನ) R/w 34 IPC.
  12. ಪಣಂಬೂರು ಪೊಲೀಸ್ ಠಾಣೆ (PNB ಮೊ.ನಂ 158/2012):
    • ಕಲಂಗಳು: 379 IPC (ಕಳವು).
  13. ಬರ್ಕೆ ಪೊಲೀಸ್ ಠಾಣೆ (ಮೊ.ನಂ 04/15):
    • ಕಲಂಗಳು: 353 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ), 427 R/w 34 IPC.

ಪೊಲೀಸರ ಸಕಾಲಿಕ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ (ACP) ಮಾರ್ಗದರ್ಶನದಲ್ಲಿ, ದಕ್ಷಿಣ ಉಪವಿಭಾಗ ಕಚೇರಿಯ ವಿಶೇಷ ಕರ್ತವ್ಯ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿನಾಂಕ 02-08-2026 ರಂದು ಸುಳಿವು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

Continue Reading

Trending

Copyright © 2025 Deevatige

error: Content is protected !!