celebration
ನಾಳೆ (ಜು.23) ವಿಟ್ಲದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ಘಟಕ ವತಿಯಿಂದ ಪತ್ರಿಕಾ ದಿನಾಚರಣೆ: ಹಿರಿಯ ಪತ್ರಕರ್ತ ಯಶವಂತ ವಿಟ್ಲರಿಗೆ ಗೌರವ ಸನ್ಮಾನ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಆರ್.) ಪುತ್ತೂರು ತಾಲೂಕು ಸಮಿತಿಯ ವತಿಯಿಂದ ‘ಪತ್ರಿಕಾ ದಿನಾಚರಣೆ’ ಹಾಗೂ ಹಿರಿಯ ಪತ್ರಕರ್ತ, ಸಾಹಿತಿ ಯಶು ವಿಟ್ಲ ಅವರಿಗೆ ‘ಗೌರವ ಸಮರ್ಪಣೆ’ ಕಾರ್ಯಕ್ರಮವು ಜುಲೈ 23 ರಂದು (ನಾಳೆ) ನಡೆಯಲಿದೆ.
ಇತ್ತೀಚೆಗೆ ಜುಲೈ 1ರಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ನ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ಡಾ. ಹರ್ಮನ್ ಮೊಗ್ಲಿಂಗ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ನಾಳೆ ಪುತ್ತೂರು ತಾಲೂಕು ಘಟಕದ ವತಿಯಿಂದ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರ ಗೌರವ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಅರ್ಥಪೂರ್ಣ ಕಾರ್ಯಕ್ರಮವು ಹಿರಿಯ ಪತ್ರಕರ್ತ ಯಶು ವಿಟ್ಲ ಅವರ ವಿಟ್ಲದ ಪಾಣೆಮಜಲು ಎಂಬಲ್ಲಿರುವ ಮನೆ ʼಶ್ರವಣʼ ದಲ್ಲಿ ನಡೆಯಲಿದೆ. ಈ ಅಪೂರ್ವವಾದ ಕಾರ್ಯಕ್ರಮಕ್ಕೆ ಪತ್ರಿಕಾರಂಗದ ಬಂಧುಗಳು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ರಾಮದಾಸ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊರಾಸ್ ಅವರು ಪ್ರಕಟಣೆಯಲ್ಲಿ ಪ್ರೀತಿಯ ಆಹ್ವಾನ ನೀಡಿದ್ದಾರೆ.
ಸನ್ಮಾನಿತರ ಪರಿಚಯ: ಹಿರಿಯ ಪತ್ರಕರ್ತ ಯಶವಂತ ವಿಟ್ಲ (ಯಶು ವಿಟ್ಲ)
ಪರಿಚಯ: ಮಾರ್ಚ್ 9, 1953 ರಲ್ಲಿ ಜನಿಸಿದ ಯಶವಂತ ವಿಟ್ಲ ( ಬಿ.ಕಾಂ. ಡಿ.ಇ.ಜೆ) ಅವರು 3 ದಶಕಗಳಿಗೂ ಹೆಚ್ಚು ಕಾಲದಿಂದ ಪತ್ರಿಕಾರಂಗದಲ್ಲಿ ತನ್ನ ಬರಹಗಳಿಂದ ಬಹಳಷ್ಟು ಪ್ರಸಿದ್ದಿ ಪಡೆದವರು. ಅದರಂತೆ ಅದರ ಜೊತೆಯಾಗಿ , ಸಾಹಿತ್ಯ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು.
ಪತ್ರಿಕೋದ್ಯಮ ಸೇವೆ: ಸುಮಾರು 33 ವರ್ಷಗಳ ಕಾಲ ‘ಉದಯವಾಣಿ’ ದಿನಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸಿರುವ ಇವರು, ಗ್ರಾಮೀಣ ಬದುಕಿನ ನೋವು-ನಲಿವುಗಳು, ಸಾರ್ವಜನಿಕ ಸಮಸ್ಯೆಗಳು ಹಾಗೂ ಅಭಿವೃದ್ಧಿ ಪರ ಸುದ್ದಿಗಳನ್ನು ನಿಷ್ಪಕ್ಷಪಾತವಾಗಿ ಸಮಾಜದ ಮುಂದಿಟ್ಟಿದ್ದಾರೆ.
ಸಾಹಿತ್ಯ ಕ್ಷೇತ್ರ: ಸಾಹಿತ್ಯ ಕ್ಷೇತ್ರದಲ್ಲೂ ಗಮನಾರ್ಹ ಕೃಷಿ ಮಾಡಿರುವ ಇವರು ಹಲವು ಕೃತಿಗಳ ರಚನೆಯಲ್ಲಿ ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ್ದಾರೆ.
📚 ಸ್ಮರಣ ಸಂಚಿಕೆ ಸಂಪಾದಕತ್ವ:
- ‘ಅಕ್ಷರ ಸಂಪದ’ – 2005
- ವಿಟ್ಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಬೆಳ್ಳಿ ಹಬ್ಬದ ಸಂಪುಟ.
- ‘ಕನಕ ಸಂಪದ’ – 2005
- ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸುವರ್ಣ ಮಹೋತ್ಸವ ಸಂಪುಟ.
- ‘ತ್ರಿದಳ’ – 2004
- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವಿಟ್ಲ ‘ದಶಮಾನೋತ್ಸವ ಸಂಚಿಕೆ’.
📖 ಸಹ ಸಂಪಾದಕತ್ವ:
- ‘ಚಾಮರ’ – 1986
- ರವಿವರ್ಮ ಕೃಷ್ಣರಾಜ ಅರಸರ ಸನ್ಮಾನ ಗ್ರಂಥ.
- ‘ಕಣಜ’ – 2001
- ವಿಠಲ ವಿದ್ಯಾಸಂಘದ ಸುವರ್ಣ ಮಹೋತ್ಸವ ಗ್ರಂಥ.
- ‘ಒಡಿಯೂರ ತುಡರ್’ – 2001
- ಒಡಿಯೂರು ತುಳು ಸಾಹಿತ್ಯ ಸಮ್ಮೇಳನ ನೆನಪಿನ ಸಂಚಿಕೆ.
- ‘ಸಂಪನ್ನ’ – 2004
- ಬೆಳ್ಳಪ್ಪಾಡಿ ರಮಾನಾಥ ರೈ – ಜೀವನ ಸಾಧನೆ – ಅವಲೋಕನ ಸಂಪುಟ.
- ‘ವಜ್ರಜ್ಯೋತಿ’ – 2011
- ವಿಠಲ ವಿದ್ಯಾ ಸಂಘದ ವಜ್ರಮಹೋತ್ಸವ ಸಂಪುಟ.
- ‘ರುದ್ರಾಕ್ಷಿ’ – 2013
- ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಗ್ರಂಥ.
- ‘ಪಂಚಾಕ್ಷರಿ’ – 2013
- ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪುಟ.
- ‘ದತ್ತಪ್ರಕಾಶ್’ ಆರಂಭ – 1999
- ಆಧ್ಯಾತ್ಮಿಕ ದ್ವೈಮಾಸಿಕ ಶ್ರೀ ಗುರುದೇವ ಪ್ರಕಾಶನ, ಶ್ರೀ ಗುರುದೇವದತ್ತ ಸಂಸ್ಥಾನಮ್, ಒಡಿಯೂರು.
ಪ್ರಕಟಿತ ಪುಸ್ತಕ:
ಬಿಂಬ-ಪ್ರತಿಬಿಂಬ – ಅಂಕಣ ಬರಹಗಳ ಸಂಗ್ರಹ.
ಸಾಧನೆಗಳು:
ಸಮಾಚಾರ ಡೈರಿ: ‘ಉದಯವಾಣಿ’ ದಿನಪತ್ರಿಕೆಯಲ್ಲಿ ‘ಸಮಾಚಾರ ಡೈರಿ’ ವರದಿಗಾರನ ಡೈರಿ ಎಂಬ 350ಕ್ಕೂ ಹೆಚ್ಚಿನ ಅಂಕಣ ಬರಹಗಳನ್ನು ಬರೆದಿದ್ದಾರೆ.
ಮೂಲಿಕೆ-ಮಾಲಿಕೆ: ಔಷಧೀಯ ಸಸ್ಯಗಳ ಪರಿಚಯದ ‘ಮೂಲಿಕೆ-ಮಾಲಿಕೆ’ ಚಿತ್ರ ಮಾಹಿತಿ – ಸುಮಾರು 250 ಲೇಖನಗಳನ್ನು ಪ್ರಕಟಿಸಿದ್ದಾರೆ.
ಸಂಘಟನೆ & ಸಮಾಜ ಸೇವೆ: ಪತ್ರಕರ್ತರ ಹಕ್ಕುಗಳ ರಕ್ಷಣೆಗಾಗಿ ಮತ್ತು ಸಂಘಟನಾ ಚಟುವಟಿಕೆಗಳಲ್ಲಿ ನಿರಂತರವಾಗಿ ಶ್ರಮಿಸಿರುವ ಇವರ ಅತ್ಯಮೂಲ್ಯ ಸೇವೆಯನ್ನು ಗುರುತಿಸಿ ಹಲವು ಸಂಘ-ಸಂಸ್ಥೆಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಈಗಾಗಲೇ ವಿವಿಧ ಪ್ರಶಸ್ತಿ-ಸನ್ಮಾನ ನೀಡಿ ಗೌರವಿಸಿವೆ.
ಸೇವೆಗಳು ಮತ್ತು ಹುದ್ದೆಗಳ ವಿವರ:
ವರದಿಗಾರ: 33 ವರ್ಷಗಳ ಕಾಲ ‘ಉದಯವಾಣಿ’ ದಿನಪತ್ರಿಕೆಯ ವರದಿಗಾರ.
ಕಾರ್ಯದರ್ಶಿ: ವಿಠಲ ವಿದ್ಯಾಸಂಸ್ಥೆ, ವಿಟ್ಲ – ಇದರ ಕಾರ್ಯದರ್ಶಿಯಾಗಿ ಕಳೆದ 15 ವರ್ಷಗಳಿಂದ ಸೇವೆ.
ನಿರ್ದೇಶಕ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ನಿರ್ದೇಶಕ (14 ವರ್ಷಗಳಿಂದ).
ಉಪಾಧ್ಯಕ್ಷ: ವಿಟ್ಲ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ.
ಆಡಳಿತ ಸಮಿತಿ ಸದಸ್ಯ: ವಿಠಲ ಸುಪ್ರಜೀತ್ ಐ.ಟಿ.ಐ. ಆಡಳಿತ ಸಮಿತಿಯ ಸದಸ್ಯ.
ಜಿರ್ಣೋದ್ಧಾರ ಸಮಿತಿ ಕಾರ್ಯದರ್ಶಿ: ವಿಟ್ಲ ಸೀಮೆ ದೇಗುಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ.
ಸ್ಥಾಪಕ ಅಧ್ಯಕ್ಷ: ವಿಟ್ಲ ಯುವಕ ಮಂಡಲದ ಸ್ಥಾಪಕ ಅಧ್ಯಕ್ಷ.
ಇವರ ಸರಳ ವ್ಯಕ್ತಿತ್ವ, ವೃತ್ತಿನಿಷ್ಠೆ ಹಾಗೂ ಮಾನವೀಯ ಮೌಲ್ಯಗಳನ್ನು ಗೌರವಿಸಿ ನಾಳೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ವತಿಯಿಂದ ‘ಗೌರವ ಸನ್ಮಾನ ಪತ್ರ’ ನೀಡಿ ಶ್ರದ್ಧಾಪೂರ್ವಕವಾಗಿ ಗೌರವಿಸಲಾಗುತ್ತಿದೆ.
-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
