Connect with us

Religious

ಧರ್ಮ-ಜಾತಿ ಮೀರಿದ ಮಾನವ ಧರ್ಮ: 15 ಬಡ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿ ಮಾದರಿಯಾದ ‘Edu-Supporters Kanyana’

Published

on

ವಿಟ್ಲ: ಧರ್ಮ, ಜಾತಿ ಹಾಗೂ ಅಂತಸ್ತಿನ ಯಾವುದೇ ಭೇದ-ಭಾವವಿಲ್ಲದೆ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಕನ್ಯಾನದಲ್ಲಿ ಅತ್ಯುತ್ತಮ ಹಾಗೂ ಮಾದರಿ ಸಮಾಜಸೇವೆಯೊಂದು ನಡೆದಿದೆ. ಇಲ್ಲಿನ ‘Edu-Supporters Kanyana’ ಸಂಘಟನೆಯ ವತಿಯಿಂದ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 15 ಬಡ ವಿದ್ಯಾರ್ಥಿಗಳ ಒಟ್ಟು ₹90,000/- ಕಾಲೇಜು ಶುಲ್ಕವನ್ನು ಪಾವತಿಸಿ ಮಾನವೀಯತೆ ಮೆರೆಯಲಾಗಿದೆ.

ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಈ ನೆರವು ನೀಡಲಾಗಿದ್ದು, ಬಡತನದ ಕಾರಣಕ್ಕೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿಯ ಶಿಕ್ಷಣ ಮೊಟಕಾಗಬಾರದು ಎಂಬ ಉದಾತ್ತ ಉದ್ದೇಶವನ್ನು ಸಂಘಟನೆ ಹೊಂದಿದೆ. ಈ ಮಹತ್ಕಾರ್ಯಕ್ಕೆ ಶಿಕ್ಷಣ ಪ್ರೇಮಿ ಕೊಡುಗೈ ದಾನಿಗಳು ಹಾಗೂ ದುಲ್ ಫುಖಾರ್ ಗಲ್ಫ್ ಸಮಿತಿ ಸಂಪೂರ್ಣ ಸಹಕಾರ ನೀಡಿದೆ.

ಪ್ರಮುಖರ ಉಪಸ್ಥಿತಿ

ಶುಲ್ಕ ಪಾವತಿಸುವ ವಿಶೇಷ ಕಾರ್ಯಕ್ರಮದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಕನ್ಯಾನ, ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ, ಪ್ರಮುಖರುಗಳಾದ ಆಸಿಫ್ ಬನಾರಿ, ಜಮಾಲ್ ಕನ್ಯಾನ, ರಹೀಂ ನೆಕ್ಲಾಜೆ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಾರೈಸಿದರು.

ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಹಾಗೂ ಆರ್ಥಿಕ ನೆರವು ನೀಡಿದ ಎಲ್ಲಾ ದಾನಿಗಳಿಗೆ ಮತ್ತು ಸಹಕರಿಸಿದ ಪ್ರತಿಯೊಬ್ಬರಿಗೂ Edu-Supporters Kanyana ಸಂಘಟನೆಯು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದೆ.

ಸಾರ್ವಜನಿಕ ಪ್ರಶಂಸೆ

ಜಾತಿ-ಧರ್ಮಗಳ ಹೆಸರಿನಲ್ಲಿ ಸ್ವಾರ್ಥ ಹಿತಾಸಕ್ತಿ ಹೆಚ್ಚುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ, ಮಾನವ ಧರ್ಮ ಹಾಗೂ ಕೋಮು ಸೌಹಾರ್ದತೆಯನ್ನು ಎತ್ತಿಹಿಡಿದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಬೆಳಕಾದ Edu-Supporters Kanyana ಸಂಘಟನೆಯ ಈ ಸಮಾಜಮುಖಿ ಸೇವಾ ಕಾರ್ಯಕ್ಕೆ ಸಾರ್ವಜನಿಕರಿಂದ ಹಾಗೂ ಶಿಕ್ಷಣ ಪ್ರೇಮಿಗಳಿಂದ ವ್ಯಾಪಕ ಮೆಚ್ಚುಗೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ಪೆರುವಾಯಿಯಲ್ಲಿ ವಿಜೃಂಭಣೆಯ 37ನೇ ವರ್ಷದ ಶ್ರೀ ಗಣೇಶೋತ್ಸವ: ಸಾಧಕರಿಗೆ ಸನ್ಮಾನ ಮತ್ತು ಧಾರ್ಮಿಕ ಕಾರ್ಯಕ್ರಮ ಸಂಪನ್ನ

Published

on

ಪೆರುವಾಯಿ: ಯುವ ಚೇತನ ಕ್ಲಬ್ (ರಿ) ಪೆರುವಾಯಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ಪೆರುವಾಯಿ ಇದರ ವತಿಯಿಂದ 37ನೇ ವರ್ಷದ “ಶ್ರೀ ಗಣೇಶೋತ್ಸವ”ವು ಸೆಪ್ಟೆಂಬರ್ 14 ಮತ್ತು 15 ರಂದು ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದಲ್ಲಿ ಅತ್ಯಂತ ವಿಜೃಂಭಣೆಯಿಂದ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿತು.

ಧಾರ್ಮಿಕ ಸಭೆ ಮತ್ತು ಗಣ್ಯಾತಿಗಣ್ಯರ ಉಪಸ್ಥಿತಿ

ಉತ್ಸವದ ಎರಡನೇ ದಿನವಾದ ಮಂಗಳವಾರದಂದು (ಸೆ. 15) ಧಾರ್ಮಿಕ ಸಭೆಯು ನಡೆಯಿತು. ಶ್ರೀ ಕ್ಷೇತ್ರ ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದಿವ್ಯ ಉಪಸ್ಥಿತಿಯನ್ನು ವಹಿಸಿ ಆಶೀರ್ವಚನ ನೀಡಿದರು.

ಸಭಾ ಅಧ್ಯಕ್ಷತೆಯನ್ನು ಸರಕಾರಿ ಪದವಿಪೂರ್ವ ಕಾಲೇಜು (K P S) ಕನ್ಯಾನದ ಪ್ರಾಂಶುಪಾಲರಾದ ಶ್ರೀ ರಾಜೇಂದ್ರ ರೈ ಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಶ್ರೀ ಧಾಮ ಮಾಣಿಲದ ಟ್ರಸ್ಟಿ ಶ್ರೀಮತಿ ರೇವತಿ ಪೆರ್ನೆ ಹಾಗೂ ವಿಟ್ಲದ ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಶ್ರೀ ರವಿಪ್ರಕಾಶ್ ಉಪಸ್ಥಿತರಿದ್ದರು.

ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಕಾರ್ಯಕ್ರಮದಲ್ಲಿ ಊರಿಗೆ ಕೀರ್ತಿ ತಂದ ವಿವಿಧ ಕ್ಷೇತ್ರದ ಸಾಧಕರನ್ನು ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸಲಾಯಿತು:

ವಿದ್ಯಾರ್ಥಿ ಪ್ರತಿಭೆಗಳಿಗೆ ಸನ್ಮಾನ: ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಸಾಧನೆಗೈದ ಊರಿನ 5 ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.

ಚಿನ್ನದ ಪದಕ ವಿಜೇತರಿಗೆ ಸನ್ಮಾನ: ಎಂ.ಎ. ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಹಾಗೂ ಚಿನ್ನದ ಪದಕ ಪಡೆದ ಕು. ದೀಕ್ಷಾ. T ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.

ಪವರ್ ಮೆನ್ ಗಳ ಸೇವಾ ಸನ್ಮಾನ: ಪೆರುವಾಯಿ ಗ್ರಾಮದಲ್ಲಿ ಕಳೆದ 11 ವರ್ಷಗಳಿಂದ ದಕ್ಷತೆಯಿಂದ ಸೇವೆ ಸಲ್ಲಿಸುತ್ತಿರುವ ಪವರ್ ಮೆನ್ ಗಳಾದ ಶ್ರೀ ಲಕ್ಷಣ್ H N ಮತ್ತು ಶ್ರೀ ಯಲಗುರೇಶ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು.

ವಿಶೇಷ ಸಾಧನೆ – ನಿವೃತ್ತ ಯೋಧರಿಗೆ ಗೌರವ: ಕಾರ್ಯಕ್ರಮದ ವಿಶೇಷ ಮೇರುವಾಗಿ, ಗಣೇಶೋತ್ಸವ ಸಮಿತಿಯ ಸದಸ್ಯರೂ ಆಗಿರುವ, ಬರೋಬ್ಬರಿ 23 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಯೋಧರಾಗಿ ಭಾರತಾಂಬೆಯ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಶ್ರೀ ಚಂದ್ರಶೇಖರ್ ಪೂಜಾರಿ ಕಲ್ಲಡ್ಕ ಪೆರುವಾಯಿ ಅವರನ್ನು ಸತ್ಕರಿಸಿ ಗೌರವಿಸಲಾಯಿತು.

ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿದ ಈ ಗಣೇಶೋತ್ಸವವು ಊರಿನ ಭಕ್ತಾದಿಗಳ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.

Continue Reading

Entertainment

ಶುಭ ಕಾರ್ಯದಲ್ಲಿ ಭಯಾನಕ/ವಿಪರೀತ ವೇಷಭೂಷಣ – ಸಂಪ್ರದಾಯದ ಹೆಸರಿನಲ್ಲಿ ಅತಿಯಾಯಿತೇ ನವವರನ ಎಂಟ್ರಿ?

Published

on

ಇದು ನೇಮೋತ್ಸವವೂ ಅಲ್ಲ.. ಯಕ್ಷಗಾನವೂ ಅಲ್ಲ… ಮದುವೆ ಹಾಗೂ ಶುಭ ಸಮಾರಂಭಗಳಲ್ಲಿ ಸಾಂಪ್ರದಾಯಿಕ ಹಾಗೂ ಶಿಸ್ತುಬದ್ಧ ಆಚರಣೆಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಮತ್ತು ವೈರಲ್ ಆಗಲು ಸಂಪ್ರದಾಯದ ಗಡಿಯನ್ನು ಮೀರಿ ವಿಚಿತ್ರ ಹಾಗೂ ಭಯಾನಕ ರೀತಿಯಲ್ಲಿ ಪ್ರವೇಶ (Groom Entry) ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ.

ಇತ್ತೀಚೆಗೆ ಕೇರಳದ ಮತ್ತಿಪರಂಬಿಲ್ ಮೂಲದವರ ಮದುವೆ ಸಮಾರಂಭವೊಂದರಲ್ಲಿ ನವವರ ಹಾಗೂ ಆತನ ಗೆಳೆಯರ ಬಳಗ ರಾಕ್ಷಸಿ, ಅಸ್ಥಿಪಂಜರ ಹಾಗೂ ಬೆಂಕಿಯ ದೀವಟಿಗೆ ಹಿಡಿದು ಭಯಾನಕ ವೇಷಧರಿಸಿ ಆಗಮಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋ ವೈರಲ್‌ ಆಗಿದೆ.

ಕೆಲವು ತಿಂಗಳ ಹಿಂದೆ ಕೊಡಗಿನಲ್ಲಿಯೂ ಮದುವೆ ಮೆರವಣಿಗೆಯೊಂದರಲ್ಲಿ ಸ್ಥಳೀಯ ಕೊರಗಜ್ಜ ದೈವದ ವೇಷ ಧರಿಸಿ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದು, ಅದರ ವಿರುದ್ಧ ಕಾನೂನು ಕ್ರಮ ಹಾಗೂ ಪ್ರಕರಣ ದಾಖಲಾಗಿದ್ದು ಸಾರ್ವಜನಿಕರ ನೆನಪಿನಲ್ಲಿದೆ. ಅಂತಹ ಘಟನೆಗಳಿಂದ ಪಾಠ ಕಲಿಯದೆ, ಈಗ ಮತ್ತೊಮ್ಮೆ ಇಂತಹ ಅತಿರೇಕದ ಸಂಪ್ರದಾಯ/ಪ್ರವೇಶಗಳು ಸಮಾಜದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಣೆಗೆ ಕಾರಣವಾಗುತ್ತಿವೆ.

ಇಂತಹ ಆಚರಣೆಗಳು ಸಮಾಜದ ಶಾಂತಿ, ಸಾಂಪ್ರದಾಯಿಕ ಮೌಲ್ಯಗಳು ಹಾಗೂ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುತ್ತವೆ ಎಂದು ಸ್ಥಳೀಯರು ಹಾಗೂ ಹಿರಿಯರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

Continue Reading

community

ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂವೇ ಅಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದನೆ

Published

on

ನ್ಯೂಯಾರ್ಕ್: “ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸುವ ಯಾವುದೇ ವ್ಯಕ್ತಿ ಎಂದಿಗೂ ಹಿಂದೂವಾಗಿ ಉಳಿಯಲು ಸಾಧ್ಯವಿಲ್ಲ” ಎಂದು ಆರೆಸ್ಸೆಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.

ಅಮೆರಿಕದ ನ್ಯೂಯಾರ್ಕ್‌ನಲ್ಲಿ ‘ಅಮೆರಿಕನ್ ಹಿಂದೂಸ್ ಫಾರ್ ಎಂಗೇಜ್‌ಮೆಂಟ್ ಅಂಡ್ ಡೈಲಾಗ್’ (AHEAD) ಸಂಘಟನೆಯು ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ‘ಯುನಿವರ್ಸಲ್ ಯೂನಿಟಿ ಸೆಲೆಬ್ರೇಷನ್’ (ಜಾಗತಿಕ ಏಕತಾ ಸಮಾವೇಶ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ ಮುಸ್ಲಿಂ ಸಮುದಾಯದ ಪ್ರತಿನಿಧಿಗಳು ಸೇರಿದಂತೆ ವಿವಿಧ ಧರ್ಮಗಳ ಪ್ರಮುಖ ನಾಯಕರು ಭಾಗವಹಿಸಿದ್ದರು.

ಹಿಂದುತ್ವ ಮತ್ತು ಬಹುತ್ವದ ಕುರಿತು ಭಾಗವತ್ ಹೇಳಿದ್ದೇನು?

ಸಂವಾದದಲ್ಲಿ ಹಿಂದುತ್ವದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಭಾಗವತ್, ಹಿಂದುತ್ವದ ನೈಜ ಅರ್ಥವನ್ನು ವಿವರಿಸಿದರು:

ಸಮಾನತೆ ಮತ್ತು ಗೌರವ: “ನೀವು ನಿಮ್ಮನ್ನು ‘ಹಿಂದೂ’ ಎಂದು ಕರೆದುಕೊಳ್ಳಬೇಕಾದರೆ, ವಿಶ್ವದ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಗುರಿಯತ್ತ ಸಾಗುತ್ತವೆ ಎಂಬುದನ್ನು ಮತ್ತು ಪ್ರತಿಯೊಬ್ಬ ಮನುಷ್ಯನಿಗೂ ತನ್ನದೇ ಆದ ಘನತೆ ಇದೆ ಎಂಬುದನ್ನು ಧೃಢವಾಗಿ ನಂಬಬೇಕು. ಮನುಷ್ಯರ ನಡುವೆ ಯಾವುದೇ ರೀತಿಯ ಭೇದಭಾವವಿಲ್ಲ.”

ಏಕತೆ ಮತ್ತು ವೈವಿಧ್ಯತೆ: “ಅಮೆರಿಕದ ಸಂದರ್ಭದಲ್ಲಿ ‘ಬಹುತ್ವ’ (Pluralism) ಎಂಬ ಪದವನ್ನು ಬಳಸಿದರೆ, ಭಾರತದ ಸಂದರ್ಭದಲ್ಲಿ ‘ವೈವಿಧ್ಯತೆಯಲ್ಲಿ ಏಕತೆ’ ಎನ್ನಲಾಗುತ್ತದೆ. ಆದರೆ, ಈ ಏಕತೆ ಮತ್ತು ವೈವಿಧ್ಯತೆಗಳೆರಡೂ ಭಾರತ ಹಾಗೂ ಅಮೆರಿಕ—ಎರಡೂ ದೇಶಗಳ ಡಿಎನ್‌ಎಯಲ್ಲೇ ಇವೆ.”

ಜಾಗತಿಕ ಕರ್ತವ್ಯ: ಸ್ವಾಮಿ ವಿವೇಕಾನಂದರ ವಿಚಾರಗಳನ್ನು ಉಲ್ಲೇಖಿಸಿದ ಅವರು, “ರಾಷ್ಟ್ರಗಳು ಕೇವಲ ಭೌಗೋಳಿಕ ಗಡಿಗಳಲ್ಲ. ಪ್ರತಿಯೊಂದು ದೇಶಕ್ಕೂ ಜಗತ್ತಿನಲ್ಲಿ ನಿರ್ದಿಷ್ಟ ಕರ್ತವ್ಯವಿದೆ. ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ತಾನು ಅರಿತು, ಅದನ್ನು ಇಡೀ ಜಗತ್ತಿಗೆ ತೋರಿಸಿಕೊಡುವ ಮಹತ್ವದ ಪಾತ್ರವನ್ನು ವಹಿಸಬೇಕಿದೆ.”

1996ರ ಚರ್ಖಿ ದಾದ್ರಿ ವಿಮಾನ ದುರಂತದ ಉದಾಹರಣೆ

ನೆರವು ನೀಡುವಾಗ ಧರ್ಮ ಮುಖ್ಯವಲ್ಲ ಎಂಬುದಕ್ಕೆ 1996ರ ಜುಲೈ 12ರಂದು ಹರಿಯಾಣದ ಚರ್ಖಿ ದಾದ್ರಿ ಬಳಿ ನಡೆದ ಭೀಕರ ವಿಮಾನ ದುರಂತದ ನೆನಪನ್ನು ಅವರು ಹಂಚಿಕೊಂಡರು. (ಸೌದಿ ಅರೇಬಿಯನ್ ಹಾಗೂ ಕಝಾಕಿಸ್ತಾನ್ ವಿಮಾನಗಳು ಆಗಸದಲ್ಲೇ ಡಿಕ್ಕಿಯಾಗಿ 349 ಮಂದಿ ಮೃತಪಟ್ಟಿದ್ದರು.)

“ಅಂದು ಎರಡು ಅರಬ್ ದೇಶಗಳ ವಿಮಾನಗಳು ಡಿಕ್ಕಿಯಾಗಿದ್ದವು ಮತ್ತು ಪ್ರಯಾಣಿಕರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದರು. ಘಟನಾ ಸ್ಥಳಕ್ಕೆ ನಮ್ಮ ಆರೆಸ್ಸೆಸ್ ಸ್ವಯಂಸೇವಕರು ಮೊದಲು ತಲುಪಿ, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಿದರು. ಮೃತದೇಹಗಳನ್ನು ಹೊರತೆಗೆದು, ಗುರುತು ಹಿಡಿದು, ಸಂಬಂಧಿಕರು ಬಂದಾಗ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಲು ಶ್ರಮಿಸಿದರು. ಆ ಸಂದರ್ಭದಲ್ಲಿ ನಾವು ಸಂತ್ರಸ್ತರು ‘ಮುಸ್ಲಿಮರು’ ಎಂದು ಎಂದಿಗೂ ಭಾವಿಸಿರಲಿಲ್ಲ.”

ಮಾನವ ಚಿಂತನೆ ಮತ್ತು ರಾಜಕೀಯ ವ್ಯವಸ್ಥೆ

ಉತ್ತಮ ಚಿಂತನೆಯೇ ದೇವತ್ವ: ಪ್ರಾಣಿಗಳು ಕೇವಲ ಆಹಾರ ಮತ್ತು ದೈಹಿಕ ಅಗತ್ಯಗಳಿಗಾಗಿ ಜೀವಿಸುತ್ತವೆ. ಆದರೆ ಮನುಷ್ಯನಿಗೆ ನಾಳೆಯ ಅಗತ್ಯವನ್ನು ಊಹಿಸಿ ಯೋಚಿಸುವ ಸಾಮರ್ಥ್ಯವಿದೆ. “ಉತ್ತಮ ಮತ್ತು ಸರಿಯಾದ ಚಿಂತನೆ ಮನುಷ್ಯನನ್ನು ದೇವರ ಸಮೀಪಕ್ಕೆ ಕರೆದೊಯ್ಯುತ್ತದೆ; ತಪ್ಪು ಚಿಂತನೆ ಆತನನ್ನು ಪ್ರಾಣಿಗಳ ಮಟ್ಟಕ್ಕೆ ಇಳಿಸುತ್ತದೆ” ಎಂದರು.

ರಾಜಕೀಯ ಸ್ವಾರ್ಥದ ಆಟ: ಪ್ರಸ್ತುತ ರಾಜಕೀಯವು ಸ್ವಾರ್ಥದ ಆಟವಾಗಿದೆ ಎಂದ ಅವರು, ಆರೆಸ್ಸೆಸ್ ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಮಾಜಕ್ಕಾಗಿ ಕೆಲಸ ಮಾಡುತ್ತದೆ. ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ಅಭಿಪ್ರಾಯ ಬಲವಾಗಿದ್ದಾಗ ರಾಜಕಾರಣಿಗಳು ಅದರ ವಿರುದ್ಧ ಹೋಗಲು ಸಾಧ್ಯವಿಲ್ಲ, ಆದ್ದರಿಂದ ಸ್ಥಳೀಯ ಮಟ್ಟದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ಮೇಯರ್ ಝೊಹ್ರಾನ್ ಮಮ್ದಾನಿ ವಿರೋಧ

ಮೋಹನ್ ಭಾಗವತ್ ಅವರ ಈ ಕಾರ್ಯಕ್ರಮಕ್ಕೂ ಮುನ್ನ ನಡೆದ ಮತ್ತೊಂದು ಸಭೆಯಲ್ಲಿ ಮಾತನಾಡಿದ್ದ ಮೇಯರ್ ಝೊಹ್ರಾನ್ ಮಮ್ದಾನಿ, RSS ವಿರುದ್ಧ ಕಳವಳ ವ್ಯಕ್ತಪಡಿಸಿದ್ದರು.

ಭಾರತದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು RSS ನಡುವೆ ಸೈದ್ಧಾಂತಿಕ ನಂಟಿದೆ ಎಂದು ಹೇಳಿದ್ದ ಮಮ್ದಾನಿ, RSS ಅನ್ನು ‘ಕೋಮು ಸಂಘಟನೆ’ ಎಂದು ಕರೆದಿದ್ದರು. ಅಲ್ಲದೆ, ತಮ್ಮ ಕುಟುಂಬದಿಂದ ತಾವು ಕಲಿತ ಭಾರತವು ಬಹುತ್ವ ಮತ್ತು ಜಾತ್ಯತೀತತೆಯ ಸಂಕೇತವಾಗಿದೆ, ಆದರೆ ಇಂತಹ ಚಳವಳಿಗಳು ಬೆಳೆಯುತ್ತಿರುವುದು ಆತಂಕಕಾರಿ ಎಂದು ಅಭಿಪ್ರಾಯಪಟ್ಟಿದ್ದರು.

Continue Reading

Trending

Copyright © 2025 Deevatige

error: Content is protected !!