Dakshina Kannada
ಕರ್ನಾಟಕದಿಂದ ಕೇರಳಕ್ಕೆ 400Kv ವಿದ್ಯುತ್ ಸರಬರಾಜು..ಬಡ ಕೃಷಿಕರ ತೀವ್ರ ವಿರೋಧದ ನಡುವೆಯೂ ಕೇಂದ್ರದ ಹಸಿರು ನಿಶಾನೆ.ರೈತರ ಹೋರಾಟಕ್ಕೆ ಎಳ್ಳುನೀರು ಎರೆದ ಕೇಂದ್ರ ಸರ್ಕಾರ..
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/03/78-1000x600.jpg&description=ಕರ್ನಾಟಕದಿಂದ ಕೇರಳಕ್ಕೆ 400Kv ವಿದ್ಯುತ್ ಸರಬರಾಜು..ಬಡ ಕೃಷಿಕರ ತೀವ್ರ ವಿರೋಧದ ನಡುವೆಯೂ ಕೇಂದ್ರದ ಹಸಿರು ನಿಶಾನೆ.ರೈತರ ಹೋರಾಟಕ್ಕೆ ಎಳ್ಳುನೀರು ಎರೆದ ಕೇಂದ್ರ ಸರ್ಕಾರ..', 'pinterestShare', 'width=750,height=350'); return false;" title="Pin This Post">
ಕೇರಳ ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಅಭಾವವನ್ನು ನೀಗಿಸುವುದಕ್ಕಾಗಿ ಕರ್ನಾಟಕದಿಂದ ಕೇರಳಕ್ಕೆ ವಿದ್ಯುತ್ ಆಮದು ಮಾಡಿಕೊಳ್ಳುವ ಬೃಹತ್ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದೆ.
ಉಡುಪಿ-ಕಾಸರಗೋಡು ನಡುವಣ 400kv ವಿದ್ಯುತ್ ಮಾರ್ಗಕ್ಕೆ ಬಡ ಕೃಷಿಕರ ಭಾರೀ ವಿರೋಧದ ನಡುವೆಯೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಹಸಿರು ನಿಶಾನೆ ತೋರಿಸುವ ಮೂಲಕ ಕರಾವಳಿಯ ಪರಿಸರ ಪ್ರೇಮಿಗಳು/ಬಡ ಕೃಷಿಕರ ಹೋರಾಟಕ್ಕೆ ಎಳ್ಳು ನೀರು ಬಿಟ್ಟಂತಾಗಿದೆ.

ಜನ ವಿರೋಧಿ ಯೋಜನೆಗಾಗಿ ಡೀಮ್ಡ್ ಅರಣ್ಯವನ್ನು ಅರಣ್ಯೇತರ ಜಮೀನು ಎಂದು ಕಾನೂನುಬಾಹಿರವಾಗಿ ವರ್ಗೀಕರಿಸಲಾಗಿದೆ. 282.8 ಹೆಕ್ಟೇರ್ ಡೀಮ್ಡ್ ಅರಣ್ಯದಲ್ಲಿ 1.77ಲಕ್ಷ ಮರಗಳಿವೆ. ಸದ್ರಿ ಜಮೀನು ದಟ್ಟವಾಗಿರುವ ನೈಸರ್ಗಿಕ ಸಸ್ಯ ವರ್ಗಗಳನ್ನು ಹಾಗೂ ಅರಣ್ಯದ ಗುಣಲಕ್ಷಣವನ್ನು ಹೊಂದಿದೆ. ಸದ್ರಿ ಯೋಜನೆಯು ಕಾರ್ಯಗತವಾದಲ್ಲಿ ಅಂತರ್ ರಾಜ್ಯ ವಿದ್ಯುತ್ ಪ್ರಸರಣ ವ್ಯವಸ್ಥೆಯ ಮೂಲಕ 1000/-ಮೆಗಾವಾಟ್ ಹೆಚ್ಚುವರಿ ವಿದ್ಯುತ್ ಸಾಗಿಸುವ ಸಾಮರ್ಥ್ಯವನ್ನು ಹೊಂದಲಿದೆ. ಈ ಯೋಜನೆಯಿಂದಾಗಿ ದಕ್ಷಿಣ ಭಾರತದಲ್ಲಿ ವಿದ್ಯುತ್ ಸರಬರಾಜು ಹಾಗೂ ಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಉಡುಪಿ-ಕಾಸರಗೋಡು ಟ್ರಾನ್ಸ್ ಮಿಷನ್ ಲಿಮಿಟೆಡ್ ತನ್ನ ವಾದವನ್ನು ಮಂಡಿಸಿತ್ತು. ಇದಕ್ಕಾಗಿ ಸದ್ರಿ ಪ್ರಸ್ತಾವಿತ ಯೋಜನೆಗೆ ತಡೆ ನೀಡಬೇಕೆಂದು ಅರ್ಜಿದಾರರು (NGT) ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಮೊರೆ ಹೋಗಿದ್ದರು.

ಉಡುಪಿ-ಕಾಸರಗೋಡು ಸಂಪರ್ಕದ ವಿದ್ಯುತ್ ಮಾರ್ಗವು ದಕ್ಷಿಣ ಭಾರತದಲ್ಲಿ ವಿದ್ಯುತ್ ಸರಬರಾಜು ಹಾಗೂ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಉಡುಪಿ–ಕಾಸರಗೋಡು ಟ್ರಾನ್ಸ್ಮಿಷನ್ ಲಿಮಿಟೆಡ್ ತನ್ನ ವಾದವನ್ನು ಮಂಡಿಸಿತ್ತು.
ಸದ್ರಿ ಯೋಜನೆಗೆ ಕೃಷಿಕರು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮರಗಳ ಮಾರಣಹೋಮ ಕಡಿಮೆ ಮಾಡಲು ಪರ್ಯಾಯ ಮಾರ್ಗ ಹುಡುಕುವಂತೆ ಕೇಂದ್ರ ಇಂಧನ ಸಚಿವಾಲಯ ನಿರ್ದೇಶನ ನೀಡಿತ್ತು.
ಇದಕ್ಕೆ ಎಚ್ಚೆತ್ತುಕೊಂಡ ಕಂಪನಿಯು ವಿದ್ಯುತ್ ಟವರ್(ಗೋಪುರಗಳು)ಗಳ ಎತ್ತರವನ್ನು ಹೆಚ್ಚಿಸುವ, ಡ್ರೋಣ್ ತಂತ್ರಜ್ಞಾನದ ಬಳಕೆ ಹಾಗೂ ಇನ್ನಿತರ ಉಪಕ್ರಮಗಳನ್ನು ಅಳವಡಿಸುವ ಮೂಲಕ 48,433 ಮರಗಳನ್ನು ನಾಶ ಮಾಡದೇ ಉಳಿಸಿಕೊಳ್ಳುತ್ತೇವೆಂದು ಕಂಪನಿಯು ಬರಹ ಮೂಲಕ ಪ್ರತಿಪಾದಿಸಿತ್ತು.

‘ಪ್ರಸ್ತಾವಿತ ಅರಣ್ಯ ಪ್ರದೇಶದಲ್ಲಿ 8,145 ಮರಗಳನ್ನು ಗುರುತಿಸಲಾಗಿತ್ತು. ಅರಣ್ಯ ಬಳಕೆಗೆ 2022ರಲ್ಲಿ ಮೊದಲ ಹಂತದ ಅನುಮೋದನೆ ನೀಡಲಾಗಿತ್ತು. ಗುರುತಿಸಿರುವ ಮರಗಳ ಪೈಕಿ ಶೇ 40ರಷ್ಟನ್ನು ಮಾತ್ರ ಕತ್ತರಿಸಬೇಕು ಎಂದು ಅರಣ್ಯ ಇಲಾಖೆ ಷರತ್ತು ವಿಧಿಸಿತ್ತು. ಪರಿಹಾರಾತ್ಮಕ ಅರಣ್ಯೀಕರಣ ಹಾಗೂ ಅರಣ್ಯದ ಒಟ್ಟು ಮೌಲ್ಯಕ್ಕೆ (ಎನ್ಪಿವಿ) ನಿಗದಿಪಡಿಸಿರುವ ಮೊತ್ತವನ್ನು ಕಂಪನಿ ಈ ಹಿಂದೆಯೇ ಪಾವತಿಸಿದೆ. ಈ ಯೋಜನೆಗೆ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ ಷರತ್ತುಬದ್ಧ ಅನುಮೋದನೆ ನೀಡಿದೆ’ ಎಂದು ಕೇಂದ್ರ ಅರಣ್ಯ ಸಚಿವಾಲಯವು ಎನ್ಜಿಟಿಗೆ ಪ್ರಮಾಣಪತ್ರ ಸಲ್ಲಿಸಿತ್ತು.
arrest
ಮಂಗಳೂರು: ಮಾದಕ ವಸ್ತು ಮಾರಾಟ ದಂಧೆಕೋರರ ಜಾಲಕ್ಕೆ ಪೊಲೀಸ್ ಲಗಾಮು; ಮೂವರ ಬಂಧನ!
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೀವ್ರ ನಿಗಾ ಇರಿಸಿದ್ದು, ಪ್ರತ್ಯೇಕ ದಾಳಿಗಳ ಮೂಲಕ ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ.
ಪ್ರಕರಣ 1: ಗೂಡ್ ಶೆಡ್ಡೆ ಬಳಿ ಎಂಡಿಎಂಎ ಮಾರಾಟ ಯತ್ನ – ಇಬ್ಬರ ಬಂಧನ
ದಿನಾಂಕ 08-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ ಶೆಡ್ಡೆ ಪರಿಸರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜಂಟಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳು: 1. ಜನನ್ ಜಗನ್ನಾಥ್ (29 ವರ್ಷ), ತಂದೆ: ಜಗನ್ನಾಥ್, ವಾಸ: ಸಿಲ್ವರ್ ಗೇಟ್, ಕುಲಶೇಖರ, ಮಂಗಳೂರು. 2. ಪರೀಕ್ಷಿತ್ (33 ವರ್ಷ), ತಂದೆ: ಲೇ. ಜಯರಾಮ ಶೆಟ್ಟಿ, ವಾಸ: ಬೋಳಾರ, ಮಂಗಳೂರು.
ಸ್ವಾಧೀನಪಡಿಸಿಕೊಂಡ ಸೊತ್ತುಗಳು: ದಾಳಿಯ ವೇಳೆ ಪೊಲೀಸರು ಒಟ್ಟು 11.68 ಗ್ರಾಂ ಎಂಡಿಎಂಎ ಮಾದಕ ವಸ್ತು, ₹1,110 ನಗದು ಹಣ, 3 ಮೊಬೈಲ್ ಫೋನ್ಗಳು ಹಾಗೂ ಮಾದಕ ವಸ್ತು ತೂಕ ಮಾಡಲು ಬಳಸುತ್ತಿದ್ದ 1 ತೂಕ ಮಾಪನವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ (ಪ್ರಕರಣ ಸಂಖ್ಯೆ 122/2026) ಮೊಕದ್ದಮೆ ದಾಖಲಾಗಿದೆ.
ಪ್ರಕರಣ 2: ಡ್ರಗ್ಸ್ ಜಾಲದ ಮತ್ತೊಬ್ಬ ಆರೋಪಿ ಸುಶಾನ್ ಪೂಜಾರಿ ವಶಕ್ಕೆ
ದಿನಾಂಕ 06-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಎನ್.ಡಿ.ಪಿ.ಎಸ್ ಪ್ರಕರಣಕ್ಕೆ (ಕ್ರೈಂ ಸಂಖ್ಯೆ 116/2026) ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ: ಸುಶಾನ್ ಪೂಜಾರಿ (27 ವರ್ಷ), ತಂದೆ: ಲೋಹಿತಾಶ್ವ, ವಾಸ: ನಳಂದ ಶಾಲೆ ಹತ್ತಿರ, ಕಾರ್ ಸ್ಟ್ರೀಟ್, ಮಂಗಳೂರು.
ಹಿನ್ನೆಲೆ: ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಇದೀಗ ಪ್ರಕರಣದಲ್ಲಿ ಭಾಗಿಯಾಗಿದ್ದ ಸುಶಾನ್ ಪೂಜಾರಿಯನ್ನು ದಿನಾಂಕ 09-06-2026 ರಂದು ಪೊಲೀಸರು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಮುಂದಿನ ಪೊಲೀಸ್ ಕ್ರಮ:
ಬಂಧಿತ ಎಲ್ಲಾ ಆರೋಪಿಗಳನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಮಾದಕ ವಸ್ತು ಜಾಲದ ಮೂಲ ಹಾಗೂ ಇದರ ಹಿಂದೆ ಇರುವ ಇತರ ಕಿಂಗ್ಪಿನ್ಗಳ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.



crime
ಕೋಟಿಗಟ್ಟಲೆ ಹನಿಟ್ರ್ಯಾಪ್ ಆರೋಪ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಉಚ್ಚಾಟನೆ
ಮಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಕೋಟಿಗಟ್ಟಲೆ ಹಣ ಸುಲಿಗೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಅವರು ಈ ಕುರಿತು ಅಧಿಕೃತ ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ.

ಉಚ್ಚಾಟನೆಗೆ ಕಾರಣಗಳೇನು?
ಸಮಾಜ ವಿರೋಧಿ ಚಟುವಟಿಕೆ: ನಿಝಾಮ್ ವಿರುದ್ಧ ಕೇಳಿಬಂದಿರುವ ಸಮಾಜ ವಿರೋಧಿ ಚಟುವಟಿಕೆಯ ಆರೋಪಗಳು ಪಕ್ಷದ ಗಮನಕ್ಕೆ ಬಂದಿವೆ.
ಪಕ್ಷದ ಗೌರವಕ್ಕೆ ಧಕ್ಕೆ: ಈ ಆರೋಪಗಳು ಪಕ್ಷದ ಶಿಸ್ತು ಮತ್ತು ಗೌರವಕ್ಕೆ ತೀವ್ರ ಧಕ್ಕೆ ಉಂಟುಮಾಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಿಸ್ತು ಕ್ರಮ: ಪಕ್ಷದ ಹಿತಾಸಕ್ತಿ ಹಾಗೂ ಶಿಸ್ತನ್ನು ಕಾಪಾಡುವ ದೃಷ್ಟಿಯಿಂದ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಯುವ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ಕಡಕ್ ಸಂದೇಶ: > “ಪಕ್ಷದ ಸಿದ್ಧಾಂತ, ಮೌಲ್ಯಗಳು ಮತ್ತು ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ:
ಮಂಗಳೂರಿನ ಉದ್ಯಮಿಯೊಬ್ಬರಿಗೆ ಯುವತಿಯನ್ನು ಪರಿಚಯಿಸಿ, ಬಳಿಕ ಖಾಸಗಿ ದೃಶ್ಯಗಳನ್ನು ಮುಂದಿಟ್ಟುಕೊಂಡು ಬರೋಬ್ಬರಿ 2.77 ಕೋಟಿ ರೂ. ಹಣವನ್ನು ಸುಲಿಗೆ ಮಾಡಲಾದ ಗಂಭೀರ ಪ್ರಕರಣ ದಾಖಲಾಗಿದೆ. ಈ ಹನಿಟ್ರ್ಯಾಪ್ ಜಾಲದಲ್ಲಿ ನಿಝಾಮ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲಿ ತೀವ್ರ ಮುಖಭಂಗ ಉಂಟಾಗಿತ್ತು. ಮುಜುಗರದಿಂದ ಪಾರಾಗಲು ಜಿಲ್ಲಾ ಯುವ ಕಾಂಗ್ರೆಸ್ ಘಟಕವು ಆರೋಪಿ ವಿರುದ್ಧ ಈ ಕಠಿಣ ಕ್ರಮ ಜರುಗಿಸಿದೆ.



Dakshina Kannada
ಮಾನವೀಯತೆಯ ಸಾಕಾರ: ಕುಂಬ್ರದ ಖ್ಯಾತ ವೈದ್ಯ ಡಾ. ವಿಘ್ನೇಶ್ವರ ಭಟ್ ಚಿಕಿತ್ಸೆಗೆ ಹರಿದುಬಂದ ನೆರವು; ಇನ್ನೂ ಬೇಕಿದೆ ಸಹೃದಯಿಗಳ ಸಹಕಾರ
ಪುತ್ತೂರು: ಪುತ್ತೂರು ತಾಲೂಕಿನ ಕುಂಬ್ರದ ‘ಅಮೃತ ಕ್ಲಿನಿಕ್’ನಲ್ಲಿ ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ನಿರಂತರವಾಗಿ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಾ, ಅಪಾರ ಜನಮನ್ನಣೆ ಗಳಿಸಿರುವ ಪಾರಂಪರಿಕ ಶೈಲಿಯ ಜನಪ್ರಿಯ ಕುಟುಂಬ ವೈದ್ಯ ಡಾ. ವಿಘ್ನೇಶ್ವರ ಭಟ್ ಅವರು ಸದ್ಯ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕರ ನೆರವಿನ ಹಸ್ತ ಚಾಚಿದ್ದಾರೆ.
ಕಳೆದ 2-3 ತಿಂಗಳುಗಳಿಂದ ದೈಹಿಕ ಅನಾರೋಗ್ಯ ಎದುರಿಸುತ್ತಿದ್ದ ಅವರಿಗೆ ವೈದ್ಯಕೀಯ ಪರೀಕ್ಷೆಗಳ ನಂತರ ತೀವ್ರತರದ ರಕ್ತದ ಕ್ಯಾನ್ಸರ್ (T-Cell Lymphoma) ಇರುವುದು ಪತ್ತೆಯಾಗಿದೆ. ಸದ್ಯ ಮಂಗಳೂರಿನ ಎಂ.ಐ.ಓ (Mangalore Institute of Oncology) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರಿಗೆ ಈಗಾಗಲೇ ಸುಮಾರು 20 ಲಕ್ಷ ರೂ. ವೆಚ್ಚವಾಗಿದೆ. ಮುಂದಿನ ಹಂತದ ಅಸ್ಥಿಮಜ್ಜೆ ಕಸಿ (Bone Marrow Transplant) ಹಾಗೂ ಇತರ ತುರ್ತು ಚಿಕಿತ್ಸೆಗಳಿಗಾಗಿ ಇನ್ನೂ ಅಂದಾಜು 20 ಲಕ್ಷ ರೂಪಾಯಿಗಳ ಅವಶ್ಯಕತೆಯಿದೆ. ವೈದ್ಯಕೀಯ ವೃತ್ತಿಯನ್ನೇ ನಂಬಿಕೊಂಡಿದ್ದ ಅವರಿಗೆ ಈ ಬೃಹತ್ ಮೊತ್ತವನ್ನು ಹೊಂದಿಸುವುದು ಕಷ್ಟಸಾಧ್ಯವಾಗಿರುವುದರಿಂದ ಸಹೃದಯಿ ಜನರಲ್ಲಿ ಧನಸಹಾಯಕ್ಕಾಗಿ ವಿನಂತಿಸಿಕೊಂಡಿದ್ದರು.

ಕೋಮು ಸೌಹಾರ್ದತೆ ಮೆರೆದ ಶೇಕಮಲೆ ಮಸೀದಿ ಸಮಿತಿ: ಡಾ. ವಿಘ್ನೇಶ್ವರ ಭಟ್ ಅವರ ಕಷ್ಟಕ್ಕೆ ಸ್ಪಂದಿಸಿ ಇತ್ತೀಚೆಗೆ ಶೇಕಮಲೆ ಮಸೀದಿ ಕಮಿಟಿಯವರು “ಮಾನವೀಯತೆಯ ಬಕ್ರೀದ್” ಎಂಬ ಆಶಯದೊಂದಿಗೆ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವ ಮೂಲಕ ಕೋಮು ಸೌಹಾರ್ದತೆ ಮತ್ತು ಜಾತಿಗೆ ತೀತವಾದ ಮಾನವೀಯ ಗುಣವನ್ನು ಸಾರಿದ್ದಾರೆ. ಇವರ ಈ ಕಾರ್ಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

ವಿದೇಶಿ ಉದ್ಯಮಿ ಎಡಕ್ಕಾನ ಮಹಾಬಲೇಶ್ವರ ಶ್ಯಾಂ ಭಟ್ ನೆರವು: ಇದೀಗ ಡಾಕ್ಟರ್ ಅವರ ಚಿಕಿತ್ಸೆಗೆ ಮತ್ತೊಂದು ಆಸರೆಯಾಗಿ ಹೊರದೇಶದ ಖ್ಯಾತ ಉದ್ಯಮಿ ಎಡಕ್ಕಾನ ಮಹಾಬಲೇಶ್ವರ ಶ್ಯಾಂ ಭಟ್ ಅವರು 50,000 ರೂ. ಆರ್ಥಿಕ ಸಹಾಯ ಹಸ್ತ ಚಾಚುವ ಮೂಲಕ ತಮ್ಮ ಉದಾರಿ ಗುಣವನ್ನು ಮೆರೆದಿದ್ದಾರೆ. ಇವರೊಂದಿಗೆ ಹಲವಾರು ಸಹೃದಯಿ ಸಾರ್ವಜನಿಕರು ಕೂಡ ಈಗಾಗಲೇ ತಮ್ಮ ಕೈಲಾದ ಧನಸಹಾಯವನ್ನು ಒದಗಿಸಿದ್ದಾರೆ.
ಇನ್ನೂ ಬೇಕಿದೆ ಸಹೃದಯಿಗಳ ಸಹಕಾರ: ಬಡವರ, ಸಾರ್ವಜನಿಕರ ಕಣ್ಣೊರೆಸುತ್ತಿದ್ದ ವೈದ್ಯರೊಬ್ಬರು ಇಂದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಇವರ ಮುಂದಿನ ಚಿಕಿತ್ಸೆ ಸುಗಮವಾಗಿ ಸಾಗಲು ಇನ್ನು ಕೂಡ ಭಾರಿ ಮೊತ್ತದ ನೆರವಿನ ಅಗತ್ಯವಿದೆ. ಹೀಗಾಗಿ ದೇಶ-ವಿದೇಶಗಳಲ್ಲಿರುವ ದಾನಿಗಳು, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಉದಾರವಾಗಿ ಧನಸಹಾಯ ಮಾಡುವ ಮೂಲಕ ಡಾ. ವಿಘ್ನೇಶ್ವರ ಭಟ್ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಗೆ ಮರಳುವಂತೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಧನಸಹಾಯ ಮಾಡಬಯಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಜಮೆ ಮಾಡಬಹುದು:
- ಬ್ಯಾಂಕ್ ಹೆಸರು: ಕರ್ಣಾಟಕ ಬ್ಯಾಂಕ್ (Karnatāka Bank)
- ಶಾಖೆ: ದರ್ಬೆ, ಪುತ್ತೂರು
- ಖಾತೆ ಸಂಖ್ಯೆ (A/c No): 1023202500000601
- ಐಎಫ್ಎಸ್ಸಿ ಕೋಡ್ (IFSC): KARB0001023
- ಗೂಗಲ್ ಪೇ ಸಂಖ್ಯೆ (G-Pay): 961163784



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
