Educational
ನ್ಯೂಜಿಲ್ಯಾಂಡ್ ದೇಶದ ಶೈಕ್ಷಣಿಕ ಚಟುವಟಿಕೆಗಳು; ಪ್ರಗತಿ ಸ್ಟಡಿ ಸೆಂಟರ್ನಲ್ಲಿ ವಿನೂತನ ಕಾರ್ಯಾಗಾರ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2025/12/1-2-1000x600.jpg&description=ನ್ಯೂಜಿಲ್ಯಾಂಡ್ ದೇಶದ ಶೈಕ್ಷಣಿಕ ಚಟುವಟಿಕೆಗಳು; ಪ್ರಗತಿ ಸ್ಟಡಿ ಸೆಂಟರ್ನಲ್ಲಿ ವಿನೂತನ ಕಾರ್ಯಾಗಾರ', 'pinterestShare', 'width=750,height=350'); return false;" title="Pin This Post">
ಪುತ್ತೂರು : ಇಲ್ಲಿನ ಹೃದಯ ಭಾಗದಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಿದ್ಯಾ ದೇಗುಲ ಪ್ರಗತಿ ಸ್ಟಡಿ ಸೆಂಟರ್ ವಿದ್ಯಾರ್ಥಿಗಳಲ್ಲಿ ದೇಶಪ್ರೇಮದೊಂದಿಗೆ ಸಾಮಾಜಿಕ ಜ್ಞಾನದ ಜೊತೆಗೆ, ಭವಿಷ್ಯದ ಚಿಂತನೆಗಳನ್ನು ಬೆಳೆಸಿ ಭವ್ಯ ಭಾರತದ ಸತ್ಪçಜೆಯನ್ನಾಗಿ ರೂಪಿಸುವಲ್ಲಿ ಆಗಾಗ ಪೂರಕವಾದ ಪಠ್ಯೇತರ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದೆ.

ಅದರಂತೆ ಈ ವಿನೂತನ ಮಾಹಿತಿ ಕಾರ್ಯಾಗಾರವೊಂದರಲ್ಲಿ ಇತ್ತೀಚೆಗೆ ಮಂಗಳೂರಿನಲ್ಲಿ ವಿವಾಹಿತರಾದ ನ್ಯೂಜಿಲ್ಯಾಂಡ್ ನ ಹುಡುಗಿ ಲಿಲ್ಲಿಚೂಅರ್ಜುನ್ ಹಾಗೂ ಅರ್ಜುನ್ ರಮೇಶ್ ಕುಮಾರ್ ದಂಪತಿಗಳು ತಮ್ಮ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಅವರಿಂದ ವಿದ್ಯಾರ್ಥಿಗಳು ನ್ಯೂಜಿಲ್ಯಾಂಡ್ ನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು ಮತ್ತು ಪ್ರಗತಿ ಸ್ಟಡಿ ಸೆಂಟರ್ ಸಂಸ್ಥೆ ನಡೆದುಬಂದ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ದಂಪತಿಗಳು ಮುಕ್ತ ಕಂಠದಿoದ ಶ್ಲಾಘಿಸಿದರು.

ನ್ಯೂಜಿಲ್ಯಾಂಡ್ ನಲ್ಲಿ ಹತ್ತನೇ ತರಗತಿಯ ನಂತರ ಶಿಕ್ಷಣವನ್ನು ವಿಶ್ವವಿದ್ಯಾಲಯದಲ್ಲಿ ನೀಡಲಾಗುತ್ತದೆ ಪ್ರತಿ ವಿದ್ಯಾರ್ಥಿಯ ಖರ್ಚು ವೆಚ್ಚಗಳಿಗಾಗಿ 10000 ಡಾಲರ್ ನಿಂದ 20,000 ಡಾಲರ್ ವರೆಗೆ ಸರಕಾರವೇ ಒದಗಿಸಿಕೊಡುತ್ತದೆ.

ಉನ್ನತ ವ್ಯಾಸಂಗ ಮಾಡುವ ಸಮಯದಲ್ಲಿ ವಿದ್ಯಾರ್ಥಿಯೇ ವಿಷಯವನ್ನು ಅರಿತು ಅದರ ಕುರಿತು ವಿಮರ್ಶಿಸಿ ಮಂಡನೆ ಮಾಡಬೇಕು. ತನ್ನ ವಿಷಯವನ್ನು ತಾನೇ ಆಯ್ಕೆ ಮಾಡಿಕೊಂಡು 5,000 ಪದಗಳ ಪ್ರಬಂಧ ರಚಿಸಿ ಪ್ರಸ್ತುತಪಡಿಸಬೇಕು.

ಉನ್ನತ ವ್ಯಾಸಂಗ ಸಮಯದಲ್ಲಿ ತನ್ನ ದುಡಿಮೆಯ ಪೂರ್ತಿ ಖರ್ಚು ವೆಚ್ಚವನ್ನು ಆತನೇ ಧರಿಸಬೇಕು. ಎಂದು ಅರ್ಜುನ್ ರಮೇಶ್ ಕುಮಾರ್ ಇವರು ಮಂಗಳೂರಿನಿoದ ನ್ಯೂಜಿಲ್ಯಾಂಡ್ ನವರೆಗಿನ ತನ್ನ ಶೈಕ್ಷಣಿಕ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊoಡರು. ಪ್ರಸ್ತುತ ಅರ್ಜುನ್ ರಮೇಶ್ ರವರು Software Engineer Warehouse Company Auckland, Newzealand ಹಾಗೂ ಲಿಲ್ಲಿಚೂ ಅರ್ಜುನ್ ರವರು Post Graduation in Psychology Auckland univercity, Newzealandನಲ್ಲಿ ಉದ್ಯೋಗದಲ್ಲಿದ್ದಾರೆ.

ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಗೋಕುಲನಾಥ್ ಪಿ.ವಿ. ಇವರು ಗಣ್ಯರನ್ನು ಪರಿಚಯಿಸಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೀತಾ ರಮೇಶ್ ಕುಮಾರ್, ಅಕ್ಷಯ್ ರಮೇಶ್ ಕುಮಾರ್, ಡಾ. ಮೇಘ ಗೋಕುಲ್ ಅಶ್ವಿನ್ ರಮೇಶ್ ಕುಮಾರ್, ಶ್ರೀಮತಿ ನಮೃತಾ ಅಶ್ವಿನ್ ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾ ಗೋಕುಲ್ನಾಥ್ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಸ್ವಾಗತಿಸಿದರು. ಉಪನ್ಯಾಸಕ ನಾಸಿರ್ ವಂದಿಸಿದರು.
Educational
NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್ 6 ರಂದು ದೆಹಲಿಯಲ್ಲಿ ಅಭಿಜಿತ್ ದೀಪ್ಕೆ ಶಾಂತಿಯುತ ಪ್ರತಿಭಟನೆ
ನವದೆಹಲಿ: NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ನವದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ‘ಕಾಕ್ರೋಚ್ ಜನತಾ ಪಕ್ಷ’ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್ 6 ರಂದು ಭಾರತಕ್ಕೆ ಮರಳುತ್ತಿರುವುದಾಗಿ ಸೋಮವಾರ ಘೋಷಿಸಿದ್ದಾರೆ.
ಹಿನ್ನೆಲೆ: ‘ಜಿರಳೆ’ ಪದದ ವಿಡಂಬನಾತ್ಮಕ ಚಳವಳಿ
ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ವಿಚಾರಣೆಗಳ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯಿ ಅವರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಉಲ್ಲೇಖಿಸಿ “ಜಿರಳೆಗಳು” ಎಂಬ ಪದವನ್ನು ಬಳಸಿದ್ದರು. ತಾವು ಬಳಸಿದ ಪದವು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿರಲಿಲ್ಲ ಮತ್ತು ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಸಿಜೆಐ ಸ್ಪಷ್ಟಪಡಿಸಿದರಾದರೂ, ಇದು ಆನ್ಲೈನ್ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.
ಬೋಸ್ಟನ್ನಲ್ಲಿರುವ ತಂತ್ರಜ್ಞ ಅಭಿಜಿತ್ ದೀಪ್ಕೆ ಅವರು ಇದೇ ಸಂದರ್ಭವನ್ನು ಬಳಸಿಕೊಂಡು, ‘ಜಿರಳೆ’ ಪದವನ್ನು ಯುವ ಕ್ರಿಯಾಶೀಲತೆಯ ಸಂಕೇತವಾಗಿ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ತರುವ ಅಭಿಯಾನವಾಗಿ ಪರಿವರ್ತಿಸಿದರು. ಸಿಜೆಪಿ (Cockroach Janata Party) ಎಂಬ ವಿಡಂಬನಾತ್ಮಕ ರಾಜಕೀಯ ಚಳವಳಿಯನ್ನು ಪ್ರಾರಂಭಿಸಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದರು.
ಧರ್ಮೇಂದ್ರ ಪ್ರಧಾನ್ ವಿರುದ್ಧ ತೀವ್ರಗೊಂಡ ಅಭಿಯಾನ
ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ದೀಪ್ಕೆ, ನೀಟ್ ಪತ್ರಿಕೆ ಸೋರಿಕೆ ಮತ್ತು ತದನಂತರದ ಅಡಚಣೆಗಳು ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಭಾರಿ ಪರಿಣಾಮ ಬೀರಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
“ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧದ ಅಭಿಯಾನವನ್ನು ತೀವ್ರಗೊಳಿಸಲು ನಾನು ಭಾರತಕ್ಕೆ ಮರಳಲು ನಿರ್ಧರಿಸಿದ್ದೇನೆ. ಭಾರತದ ಸಂವಿಧಾನದ ಮಾರ್ಗವನ್ನು ಅನುಸರಿಸಿ ನಾವೆಲ್ಲರೂ ಒಟ್ಟಾಗಿ ಸೇರಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳಲು ಶಾಂತಿಯುತವಾಗಿ ಧ್ವನಿ ಎತ್ತುವ ಸಮಯ ಬಂದಿದೆ.” – ಅಭಿಜಿತ್ ದೀಪ್ಕೆ
ಪ್ರತಿಭಟನೆಯ ನಿಖರವಾದ ಕಾರಣಗಳು, ವಿದ್ಯಾರ್ಥಿಗಳ ಹಿತರಕ್ಷಣೆ ಮತ್ತು ಶಿಕ್ಷಣ ಇಲಾಖೆಯ ಇತ್ತೀಚಿನ ವಿದ್ಯಮಾನಗಳ ಸುತ್ತ ಇರಲಿದ್ದು, ದೇಶದ ವಿವಿಧ ಭಾಗಗಳಿಂದ ಬೆಂಬಲಿಗರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.



Educational
ಹಿಜಾಬ್ ಮತ್ತು ಸಮವಸ್ತ್ರ ನೀತಿ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು: 2022ರಲ್ಲಿ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಹಿಜಾಬ್ ಮತ್ತು ಸಮವಸ್ತ್ರ ನೀತಿಯನ್ನು ಕರ್ನಾಟಕ ಸರ್ಕಾರವು ಬುಧವಾರ (ಮೇ 13) ಅಧಿಕೃತವಾಗಿ ಹಿಂಪಡೆದಿದೆ. ಸರ್ಕಾರದ ಈ ಹೊಸ ಆದೇಶದ ಮುಖ್ಯಾಂಶಗಳು ಇಲ್ಲಿವೆ:
ಹೊಸ ಆದೇಶದ ಪ್ರಮುಖ ಅಂಶಗಳು:
ಧಾರ್ಮಿಕ ಸಂಕೇತಗಳಿಗೆ ಅನುಮತಿ: ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ಹಿಜಾಬ್, ಜನಿವಾರ ಸೇರಿದಂತೆ ತಮ್ಮ ಧಾರ್ಮಿಕ ಮತ್ತು ಸೀಮಿತ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಲು ಮುಕ್ತ ಅವಕಾಶ ನೀಡಲಾಗಿದೆ.
ಹಳೆಯ ಆದೇಶ ರದ್ದು: ಫೆಬ್ರವರಿ 5, 2022 ರಂದು ಅಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ವಿವಾದಿತ ಸಮವಸ್ತ್ರ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ.
ನಿರ್ಬಂಧವಿಲ್ಲದ ಪ್ರವೇಶ: ಯಾವುದೇ ವಿದ್ಯಾರ್ಥಿ ಸಾಂಪ್ರದಾಯಿಕ ಸಂಕೇತ ಧರಿಸಿದ್ದಾರೆ ಎಂಬ ಕಾರಣಕ್ಕೆ ಶಾಲಾ ಪ್ರವೇಶ ಅಥವಾ ಪರೀಕ್ಷಾ ಕೊಠಡಿ ಪ್ರವೇಶವನ್ನು ನಿರಾಕರಿಸುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಸೌಹಾರ್ದತೆಗೆ ಒತ್ತು: “ಇವ ನಮ್ಮವ” ಎಂಬ ಬಸವಣ್ಣನವರ ತತ್ವದಡಿ ಶಿಕ್ಷಣ ಸಂಸ್ಥೆಗಳು ಎಲ್ಲರನ್ನೂ ಒಳಗೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ.
ಯಾವುದಕ್ಕೆ ಅವಕಾಶವಿದೆ?
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪ್ರಕಾರ, ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಆದರೆ ಅದರೊಂದಿಗೆ: ಹಿಜಾಬ್ (ತಲೆವಸ್ತ್ರ) ಜನಿವಾರ ಶಿವಧಾರ, ರುದ್ರಾಕ್ಷಿ ಪೇಟ ಧರಿಸಲು ಅಭ್ಯಂತರವಿಲ್ಲ
ಕೇಸರಿ ಶಾಲು ಧಾರ್ಮಿಕ ಅಥವಾ ಸಾಂಪ್ರದಾಯಿಕ ಆಚರಣೆಯ ಭಾಗವಲ್ಲ ಎಂದು ಪರಿಗಣಿಸಿರುವ ಸರ್ಕಾರ, ಅದಕ್ಕೆ ಅನುಮತಿ ನಿರಾಕರಿಸಿದೆ. ಶಾಲೆಯ ಶಿಸ್ತು ಅಥವಾ ಬೋಧನಾ ಪ್ರಕ್ರಿಯೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.




Bantawala
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆಗೆ ಭರ್ಜರಿ ಫಲಿತಾಂಶ; ಐವರು ವಿದ್ಯಾರ್ಥಿಗಳಿಂದ 600ಕ್ಕೂ ಅಧಿಕ ಅಂಕಗಳ ದಾಖಲೆ!
ವಿಟ್ಲ: 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಟ್ಲದ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆ (ಆರ್ಎಂಎಸ್ ಎ) ಅತ್ಯುತ್ತಮ ಸಾಧನೆ ಮಾಡಿದ್ದು, ಶೇ. 99.2 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 122 ವಿದ್ಯಾರ್ಥಿಗಳಲ್ಲಿ 121 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸರಕಾರಿ ಶಾಲೆಯ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ.
ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳು:
ಶಾಲೆಯ ಒಟ್ಟು ಐವರು ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ:
ಶ್ರೇಯಾ: 625ರಲ್ಲಿ 612 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಕಂಬಳಬೆಟ್ಟಿನ ಶ್ರೀಕೃಪಾ ಮತ್ತು ಮಹೇಶ್ ದಂಪತಿಯ ಪುತ್ರಿ.

ಸಾನ್ವಿ ರೈ: ಬಾಕ್ರಬೈಲ್ ಸದಾಶಿವಶೆಟ್ಟಿ ಹಾಗೂ ಪ್ರತಿಮಾ ದಂಪತಿಯ ಪುತ್ರಿಯಾದ ಇವರು 611 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಮಹ್ನಾ ಖತೀಜಾ ಖಾದರ್: ಒಕ್ಕೆತ್ತೂರಿನ ಅಬ್ದುಲ್ ಖಾದರ್ ಮತ್ತು ರಶೀದಾ ದಂಪತಿಗಳ ಪುತ್ರಿಯಾದ ಇವರು 609 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ತ್ರಿಶಾ: ಕಬ್ಬಿಣಹಿತ್ಲು ನಿವಾಸಿಗಳಾದ ಸುರೇಶ್ ಮತ್ತು ಶೋಭಾ ದಂಪತಿಯ ಪುತ್ರಿಯಾದ ಇವರು 607 ಅಂಕಗಳನ್ನು ಪಡೆದಿದ್ದಾರೆ.

ಮನಸ್ವಿ ಕೆ. ಆರ್: ಕೂಜಪಾಡಿಯ ರಾಧಾಕೃಷ್ಣ ಮತ್ತು ಮೋಹಿನಿ ದಂಪತಿಯ ಪುತ್ರಿಯಾದ ಇವರು 605 ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.


ಶ್ರೇಣಿವಾರು ಫಲಿತಾಂಶ:
ಶಾಲೆಯ ಒಟ್ಟು ಫಲಿತಾಂಶದಲ್ಲಿ ಗುಣಮಟ್ಟದ ಸಾಧನೆ ಎದ್ದು ಕಾಣುತ್ತಿದ್ದು, ಶ್ರೇಣಿವಾರು ವಿವರ ಹೀಗಿದೆ:
ಉನ್ನತ ಶ್ರೇಣಿ (Distinction): 33 ವಿದ್ಯಾರ್ಥಿಗಳು
ಪ್ರಥಮ ಶ್ರೇಣಿ: 54 ವಿದ್ಯಾರ್ಥಿಗಳು
ದ್ವಿತೀಯ ಶ್ರೇಣಿ: 18 ವಿದ್ಯಾರ್ಥಿಗಳು
ತೃತೀಯ ಶ್ರೇಣಿ: 16 ವಿದ್ಯಾರ್ಥಿಗಳು
ಸರಕಾರಿ ಶಾಲೆಯ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಅಂಕ ಗಳಿಸಿರುವುದು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರ ಹರ್ಷಕ್ಕೆ ಕಾರಣವಾಗಿದೆ. ಸಾಧಕ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಅಭಿನಂದಿಸಲಾಗಿದೆ.

-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
