Connect with us

Bantawala

ಬೆಳಕು ಚಾರಿಟೇಬಲ್ ಟ್ರಸ್ಟ್‌ನ ನೂತನ ಆಂಬುಲೆನ್ಸ್ ಸಾಲೆತ್ತೂರು ಮೈದಾನದಲ್ಲಿ ಲೋಕಾರ್ಪಣೆ..

Published

on

ವಿಟ್ಲ : ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು–ಸಾಲೆತ್ತೂರು ಇದರ ವತಿಯಿಂದ ನೂತನ ಆಂಬುಲೆನ್ಸ್ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 28-12-2025 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಕು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಅಬ್ದುಲ್ ಖಾದರ್ ಸಾಲೆತ್ತೂರು ವಹಿಸಿದ್ದರು. ನೂತನ ಆಂಬುಲೆನ್ಸ್ ವಾಹನವನ್ನು ಅಸ್ಸಯ್ಯದ್ ಶಿಹಾಬುದ್ದೀನ್ ತಂಙಲ್ ಮದಕ, ಫಾ. ರೇ. ಮಾರಿಯಾ ರೆಬೆಲ್ಲೊ (ನಿತ್ಯಾಧರ್ ಚರ್ಚ್, ಸಾಲೆತ್ತೂರು), ಹಿರಿಯರಾದ ಹಾಜಿ ಬಾಪುಕುಂಞ ಸಾಲೆತ್ತೂರು, ಡಾ. ಗಣೇಶ್ ಪ್ರಸಾದ್ (MBBS, MD – ದಿವ್ಯ ಕ್ಲಿನಿಕ್, ಸಾಲೆತ್ತೂರು) ಹಾಗೂ ಡಾ. ಸುರೇಶ್ (ಸಮುದಾಯ ಆರೋಗ್ಯ ಅಧಿಕಾರಿ, ಕೊಳ್ನಾಡು) ಅವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಹಾಜಿ ಎ.ಬಿ. ಅಬ್ದುಲ್ಲಾ ಹಾಗೂ ಮಹಮ್ಮದ್ ಮಂಚಿ (ಸದಸ್ಯರು, ಕೊಳ್ನಾಡು ಗ್ರಾಮ ಪಂಚಾಯತ್), ಸಾಮಾಜಿಕ ಕಾರ್ಯಕರ್ತ ವಿಶ್ವನಾಥ ಶೆಟ್ಟಿ (ಪೆರ್ಲದಬೈಲು) ಹಾಗೂ ಜನಾರ್ಧನ ಪೂಜಾರಿ (ಸಾಲೆತ್ತೂರು) ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಲ್ ಮದಕ ಅವರು, ಬೆಳಕು ಚಾರಿಟೇಬಲ್ ಟ್ರಸ್ಟ್ ಜಾತಿ–ಧರ್ಮ ಭೇದಭಾವವಿಲ್ಲದೆ ಸಮಾಜಸೇವೆಯಲ್ಲಿ ತೊಡಗಿರುವ ಎಲ್ಲರ ಸಹಕಾರವನ್ನು ಸ್ಮರಿಸಿ ದುವಾ ಹಾಗೂ ಆಶೀರ್ವಚನ ನೀಡಿದರು.
ನಿತ್ಯಾಧರ್ ಚರ್ಚ್‌ನ ಧರ್ಮಗುರು ಫಾ. ಮಾರಿಯಾ ರೆಬೆಲ್ಲೊ ಅವರು, ಮಾನವಸೇವೆಯೇ ಮಹತ್ತರ ಧರ್ಮವೆಂದು ತಿಳಿಸಿ ಟ್ರಸ್ಟ್‌ನ ಸೇವಾಕಾರ್ಯವನ್ನು ಶ್ಲಾಘಿಸಿದರು.

ಡಾ. ಗಣೇಶ್ ಪ್ರಸಾದ್ ಅವರು ಟ್ರಸ್ಟ್‌ಗೆ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ನೀಡುವುದಾಗಿ ಭರವಸೆ ನೀಡಿದರು. ಡಾ. ಸುರೇಶ್ ಅವರು ಮಾತನಾಡಿ, ತುರ್ತು ಚಿಕಿತ್ಸೆಗಾಗಿ ಮೆಡಿಕಲ್ ಕಾಲೇಜುಗಳಿಗೆ ರೋಗಿಗಳನ್ನು ಕರೆದೊಯ್ಯುವ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ಗಮನಿಸಿ, ಈ ಆಂಬುಲೆನ್ಸ್ ಸೇವೆ ಸಾರ್ವಜನಿಕರಿಗೆ ಮಹತ್ತರ ನೆರವಾಗಲಿದೆ ಎಂದರು.

ಗ್ರಾಮ ಪಂಚಾಯತ್ ಸದಸ್ಯ ಹಾಜಿ ಎ.ಬಿ. ಅಬ್ದುಲ್ಲಾ ಅವರು, ಟ್ರಸ್ಟ್ ಸದಸ್ಯರ ಕನಸು ನನಸಾದ ದಿನವಿದು ಎಂದು ಶುಭ ಹಾರೈಸಿದರು. ಪಂಚಾಯತ್ ಸದಸ್ಯ ಮಹಮ್ಮದ್ ಮಂಚಿ ಅವರು ರೋಗನಿವಾರಣೆಯ ಜೊತೆಗೆ ಆರೋಗ್ಯ ಜಾಗೃತಿಯ ಅಗತ್ಯವನ್ನು ಒತ್ತಿ ಹೇಳಿದರು.

ಸಾಮಾಜಿಕ ಕಾರ್ಯಕರ್ತ ಹಾಗೂ ನಾಟಕ ಕಲಾವಿದ ವಿಶ್ವನಾಥ ಪೆರ್ಲದಬೈಲು ಅವರು ಮಾತನಾಡಿ, ಬೆಳಕು ಚಾರಿಟೇಬಲ್ ಟ್ರಸ್ಟ್ ನಂಬಿದವನಿಗೂ ನಂಬದವನಿಗೂ ಆಪತ್ಭಾಂದವನಾಗುವ ಸೇವಾ ಮನೋಭಾವ” ಹೊಂದಿದೆ ಎಂದು ಹೇಳಿದರು.
ನೌಫಾಲ್ ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Continue Reading
Advertisement

Bantawala

ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..

Published

on

ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.


ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.


ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

Bantawala

ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ

Published

on

ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.


ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಬಡ ಕಾರ್ಮಿಕೆ ಗಾರ್ಬಲ್‌ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

Continue Reading

accident

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..

Published

on

ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.


ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.

Continue Reading

Trending

Copyright © 2025 Deevatige