Connect with us

Dakshina Kannada

ಪುತ್ತೂರು ಬಿಜೆಪಿಯ ಮಾಜಿ ನಗರಾಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಪಕ್ಷದಿಂದ ಉಚ್ಚಾಟನೆ

Published

on

by : V.T. prasad

ಪುತ್ತೂರು: ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷರಾದ ಪಿ.ಜಿ. ಜಗನ್ನಿವಾಸ ರಾವ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬoಧಿಸಿದoತೆ ನಾವು ಹಲವು ಬಾರಿ ಅವರ ಜೊತೆಗೆ ಮಾತುಕತೆ ನಡೆಸಿದ್ದೇವೆ ಈ ಬಗ್ಗೆ ನೋಟಿಸ್ ಕೊಟ್ಟು ಪಕ್ಷದಿಂದ ತೆಗೆದು ಹಾಕಲಾಗಿದೆ ಹಾಗಾಗಿ ಯುವತಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎನ್ನುವ ಆಗ್ರಹಕ್ಕೆ ಬಿಜೆಪಿ ಬೆಂಬಲ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ ಯುವತಿಯ ವಿಚಾರದಲ್ಲಿ ನಾವೆಲ್ಲ ಒಟ್ಟು ಸೇರಿ ಜಗನ್ನಿವಾಸ್ ರಾವ್ ಬಳಿ ಮಾತನಾಡಿದ್ದೇವೆ. ಅದರಲ್ಲಿ ಯುವತಿಗೆ ನ್ಯಾಯ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು

ಪುತ್ರನ ಮೇಲಿನ ಗಂಭೀರ ಆರೋಪ:

ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ವಿರುದ್ಧ ಯುವತಿಯೊಬ್ಬರಿಗೆ ಮದುವೆಯ ಭರವಸೆ ನೀಡಿ ವಂಚಿಸಿದ ಮತ್ತು ಲೈಂಗಿಕ ದರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಅವರ ಪುತ್ರನ ಬಂಧನವೂ ಆಗಿತ್ತು. ಆರೋಪಿಗೆ ಸಹಕಾರ ನೀಡಿದ ಆರೋಪ: ತಮ್ಮ ಪುತ್ರ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಘಟನೆಯು ಜಿಲ್ಲಾದ್ಯಂತ ದೊಡ್ಡ ಮಟ್ಟದ ಸುದ್ದಿಯಾಗಿದ್ದು, ಪ್ರತಿಪಕ್ಷಗಳು ಬಿಜೆಪಿಯ ವಿರುದ್ಧ ಪ್ರತಿಭಟನೆ ನಡೆಸಲು ಕಾರಣವಾಯಿತು. ಪಕ್ಷದ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿಯು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ.


ಜಗನ್ನಿವಾಸ ರಾವ್ ಅವರ ಪುತ್ರ ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಯುವತಿ ಗರ್ಭವತಿಯಾದಾಗ ಮದುವೆಯಾಗಲು ನಿರಾಕರಿಸಿದ ಕಾರಣ, ಯುವತಿಯ ಕುಟುಂಬ ಪೊಲೀಸರ ಮೊರೆ ಹೋಗಿತ್ತು. ಈ ಪ್ರಕರಣವು ಪುತ್ತೂರಿನಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿ, ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಉಚ್ಚಾಟನೆಯು ಕೇವಲ ಪಕ್ಷದ ಆಂತರಿಕ ಭಿನ್ನಮತದಿಂದ ಆಗಿದ್ದಲ್ಲ, ಬದಲಿಗೆ ಅವರ ಕುಟುಂಬದ ಮೇಲೆ ಬಂದ ಗಂಭೀರ ಕ್ರಿಮಿನಲ್ ಆರೋಪಗಳು ಮತ್ತು ಅದರಿಂದ ಪಕ್ಷಕ್ಕಾದ ಮುಜುಗರದ ನೇರ ಪರಿಣಾಮವಾಗಿದೆ.
ಪುತ್ತೂರು ಬಿಜೆಪಿಯ ಮಾಜಿ ನಗರಾಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಅವರ ಉಚ್ಚಾಟನೆ ಹಾಗೂ ಅವರ ಪುತ್ರನ ಮೇಲಿರುವ ಪ್ರಕರಣಕ್ಕೆ ಸಂಬoಧಿಸಿದ ಸಂಪರ್ಣ ವಿವರಗಳು ಮತ್ತು ಇತ್ತೀಚಿನ ಬೆಳವಣಿಗೆಗಳು


ಉಚ್ಚಾಟನೆಗೆ ಪ್ರಮುಖ ಕಾರಣ
ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದಂತೆ, ಜಗನ್ನಿವಾಸ ರಾವ್ ಅವರು ತಮ್ಮ ಪುತ್ರನ ವಂಚನೆ ಪ್ರಕರಣದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಆರಂಭದಲ್ಲಿ, ಈ ಪ್ರಕರಣ ಬೆಳಕಿಗೆ ಬಂದಾಗ ಜಗನ್ನಿವಾಸ ರಾವ್ ಅವರು “ಡಿಎನ್ಎ ಪರೀಕ್ಷೆಯಲ್ಲಿ ಸಾಬೀತಾದರೆ ಮಗನೊಂದಿಗೆ ಆ ಯುವತಿಯ ಮದುವೆ ಮಾಡಿಸುತ್ತೇನೆ” ಎಂದು ಪಕ್ಷದ ಮುಖಂಡರಿಗೆ ಮತ್ತು ಶಾಸಕರಿಗೆ ಭರವಸೆ ನೀಡಿದ್ದರು. ಆದರೆ, ನಂತರದ ದಿನಗಳಲ್ಲಿ ಅವರು ಈ ಭರವಸೆಯಿಂದ ಹಿಂದೆ ಸರಿದಿದ್ದು ಮತ್ತು ಸಂತ್ರಸ್ತೆಗೆ ನ್ಯಾಯ ಒದಗಿಸಲು ಸಹಕರಿಸದ ಕಾರಣ ಪಕ್ಷಕ್ಕೆ ಮುಜುಗರವುಂಟಾಯಿತು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.

ಪ್ರಕರಣದ ಹಿನ್ನೆಲೆ ಮತ್ತು ಇತ್ತೀಚಿನ ಅಪ್ಡೇಟ್
ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ತನ್ನ ಸಹಪಾಠಿಯಾಗಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿತ್ತು. ಯುವತಿ ಗರ್ಭವತಿಯಾದಾಗ ಆತ ಮದುವೆಗೆ ನಿರಾಕರಿಸಿ ತಲೆಮರೆಸಿಕೊಂಡಿದ್ದ. ಸಂತ್ರಸ್ತ ಯುವತಿಯು ಜೂನ್ 2024ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. 2024ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಬಂದ ಡಿಎನ್ಎ ಪರೀಕ್ಷಾ ವರದಿಯು, ಕೃಷ್ಣ ಜೆ. ರಾವ್ ಅವರೇ ಆ ಮಗುವಿನ ತಂದೆ ಎಂಬುದನ್ನು ಸಾಬೀತುಪಡಿಸಿದೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿತು. ಕೃಷ್ಣ ಜೆ. ರಾವ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು. ಆತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸೆಪ್ಟೆಂಬರ್ ತಿಂಗಳಿನಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ನೀಡಿತು.

ರಾಜಕೀಯ ಮತ್ತು ಸಾಮಾಜಿಕ ಪರಿಣಾಮ
ಈ ಪ್ರಕರಣ ಪುತ್ತೂರಿನಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಬಿಜೆಪಿ ಮುಖಂಡನ ಪುತ್ರನ ಬಂಧನಕ್ಕೆ ಒತ್ತಾಯಿಸಿ ಬೀದಿಗಿಳಿದಿದ್ದವು. ಸಂತ್ರಸ್ತ ಯುವತಿಯ ಪರವಾಗಿ ಮಹಿಳಾ ಆಯೋಗ ಮತ್ತು ವಿಶ್ವಕರ್ಮ ಸಮಾಜದ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುoಡಿ ನ್ಯಾಯ ಒದಗಿಸಲು ಧ್ವನಿ ಎತ್ತಿದ್ದರು ಮತ್ತು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಹಿಂದೂ ಸಂಘಟನೆಗಳೂ ಸಹ ಸಂತ್ರಸ್ತ ಯುವತಿಗೆ ಅನ್ಯಾಯವಾಗಬಾರದು ಎಂದು ಒತ್ತಾಯಿಸಿ ಜಗನ್ನಿವಾಸ ರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು.
ಒಟ್ಟಾರೆಯಾಗಿ ಈ ಪ್ರಕರಣವು ವೈಯಕ್ತಿಕ ವಂಚನೆಯಿoದ ಆರಂಭವಾಗಿ, ರಾಜಕೀಯ ಮುಜುಗರಕ್ಕೆ ಕಾರಣವಾಗಿ, ಅಂತಿಮವಾಗಿ ಡಿಎನ್ಎ ವರದಿಯ ಮೂಲಕ ಸತ್ಯ ಸಾಬೀತಾದ ನಂತರ ಜಗನ್ನಿವಾಸ ರಾವ್ ಅವರ ರಾಜಕೀಯ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ.

ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್‌ಗೆ ಕೆಲವು ಷರತ್ತುಗಳ ಅನ್ವಯ ಹೈಕೋರ್ಟಿನಿಂದ ಜಾಮೀನು ಮಂಜೂರಾಗಿದೆ. ಇದೀಗ ಮಗುವಿನ ಡಿಎನ್ಎ ವರದಿಯು ಆರೋಪಿಯ ವಿರುದ್ಧವಾಗಿ ಬಂದಿರುವುದರಿoದ, ಇದು ನ್ಯಾಯಾಲಯದಲ್ಲಿ ಪ್ರಬಲ ಸಾಕ್ಷ್ಯವಾಗಿ ಪರಿಣಮಿಸಲಿದೆ. ಸಂತ್ರಸ್ತ ಯುವತಿಗೆ ಪರಿಹಾರ ಕೊಡಿಸಲು ಮತ್ತು ಮಗುವಿನ ಹಕ್ಕುಗಳನ್ನು ರಕ್ಷಿಸಲು ಈ ವರದಿ ಪ್ರಮುಖ ಪಾತ್ರ ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (charge sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯದಂತೆ ಸ್ಥಳೀಯ ಸಂಘಟನೆಗಳು ಮತ್ತು ಮಹಿಳಾ ಸಂಘಟನೆಗಳು ನಿರಂತರವಾಗಿ ನಿಗಾ ಇಟ್ಟಿವೆ. ಸಂತ್ರಸ್ತ ಯುವತಿಯು ತನಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 29, 2025ರಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟಿಸಿರುವುದಾಗಿ ಘೋಷಿಸಿದರು. “ಡಿಎನ್ಎ ವರದಿ ಸಾಬೀತಾದ ಮೇಲೆ ಸಂತ್ರಸ್ತೆಯೊoದಿಗೆ ಮಗನ ಮದುವೆ ಮಾಡಿಸುತ್ತೇನೆ” ಎಂದು ನೀಡಿದ್ದ ಮಾತನ್ನು ಅವರು ತಪ್ಪಿದ್ದೇ ಈ ಉಚ್ಚಾಟನೆಗೆ ಮುಖ್ಯ ಕಾರಣ ಎನ್ನಲಾಗಿದೆ.

Continue Reading
Advertisement

Bantawala

ಐಟಿಐ ವಿದ್ಯಾರ್ಥಿಗಳ ಬಡಿದಾಟ; ಇಬ್ಬರಿಗೆ ಚೂರಿ ಇರಿತ; ವಿಟ್ಲ ಪೊಲೀಸರ ವಶದಲ್ಲಿ ಆರೋಪಿ ವಿದ್ಯಾರ್ಥಿ..

Published

on

ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ.


ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಹಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ (18) ಎಂಬಿಬ್ಬರ ಮೇಲೆ ಅದೇ ತರಗತಿಯ ವಿಟ್ಲ ನಿವಾಸಿ ಹೇಮಂತ್ (18) ಎಂಬಾತ ಚೂರಿಯಿಂದ ಇರಿದು ಘಾಸಿಗೊಳಿಸಿದ್ದಾನೆ.


ಫುಲ್ ಶೇವ್ ಮಾಡಿಕೊಂಡು ತರಗತಿ ಬರುತ್ತಿದ್ದ ಮಹಮ್ಮದ್ ರಿಹಾನ್ ನನ್ನು ಕೆಲದಿನಗಳಿಂದ ಹೇಮಂತ್ ತಮಾಷೆ ಮಾಡುತ್ತಾ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದನೆನ್ನಲಾಗಿದೆ.

ಈ ಬಗ್ಗೆ ಎರಡು, ಮೂರು ದಿನಗಳಿಂದ ಮೊಹಮ್ಮದ್ ರಿಹಾನ್ ಹೇಮಂತ್ ನಲ್ಲಿ ತನ್ನನ್ನು ಗೇಲಿ ಮಾಡದಂತೆ ವಿನಂತಿಸುತ್ತಿದ್ದ. ಆದರೂ ಆತ ಮುಂದುವರಿಸಿದ್ದು ಇಂದು ಬೆಳಗ್ಗೆ ಮತ್ತೆ ಗೇಲಿ ಮಾಡಿದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದೆ.

ಇದೇ ಮತ್ತಷ್ಟು ಮುಂದುವರಿದು ತರಗತಿಯೊಳಗೆ ಪರಸ್ಪರ ನೂಕಾಟ, ತಳ್ಳಾಟ ನಡೆದು ಆಕ್ರೋಶಗೊಂಡ ಹೇಮಂತ್ ತನ್ನಲ್ಲಿದ್ದ ಚೂರಿಯಿಂದ ಮಹಮ್ಮದ್ ರಿಹಾನ್ ಹೊಟ್ಟೆಯ ಹಿಂಭಾಗಕ್ಕೆ ಇರಿದಿದ್ದಾನೆ. ತಡೆಯಲು ಹೋದ ಅದೇ ತರಗತಿಯ ವಿದ್ಯಾರ್ಥಿ ದೈಗೋಳಿ ನಿವಾಸಿ ಯಜ್ಞೇಶ್ ಎಂಬಾತನ ತೊಡೆಗೂ ಚೂರಿ ಇರಿದಿದ್ದಾನೆ.

ಗಾಯಾಳುಗಳಿಬ್ಬರನ್ನೂ ವಿಟ್ಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಮ್ಮದ್ ರಿಹಾನ್ ಗೆ ಹನ್ನೊಂದು ಹೊಲಿಗೆ ಹಾಕಲಾಗಿದ್ದು, ಮತ್ತೋರ್ವ ಗಾಯಾಳು ಯಜ್ಞೇಶ್ ಗೆ ನಾಲ್ಕು ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

crime

ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು

Published

on

ಆನ್‌ ಲೈನ್‌ ಪ್ಲಾಟ್‌ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಇಬ್ಬರನ್ನು ಮದುವೇಯಾಗಿ ವಂಚಿಸಿ ಪರಾರಿಯಾಗಿದ್ದರೆ, 5 ಜನ ಮಹಿಳೆಯರನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತನಿಖೆಯಲ್ಲಿ ಬೇಳಕಿಗೆ ಬಂದಿದೆ. ಈತನ ವಂಚನಾ ಮದುವೆ ವ್ಯವಹಾರಕ್ಕೆ ಮುಲ್ಕಿ ನಿವಾಸಿ ಭಾಸ್ಕರ್‌ ಎಂಬಾತನೂ ಸಹಕರಿಸುತ್ತಿದ್ದು, ಸದ್ರಿ ಆರೋಪಿತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
ಆರೋಪಿತ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಊರ್ವಾ ಪೊಲೀಸ್ ಠಾಣಾಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2),(ಎನ್) 342, ಜೊತೆಗೆ 34 ಐಪಿಸಿ ಕಲಂ:3,4,5 ಇಮ್ಮೋರಲ್ ಟ್ರಾಫಿಕಿಂಗ್ ಆ್ಯಕ್ಟ್, ಕಲಂ:4,8,12 ಪೋಕ್ಸೋ ಕಾಯ್ದೆ ರಂತೆ ಪ್ರಕರಣಗಳು ದಾಖಲಾಗಿರುತ್ತದೆ.
ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,000/- ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆ ಯಾಗಿರುತ್ತಾನೆ. ನಂತರದ ದಿನಗಳಲ್ಲಿ ಪಿರ್ಯಾದುದಾರರು ಅನುಮಾನಗೊಂಡ ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ ಹಾಗೂ ಈ ಮೊದಲು ಒಂದು ಮದುವೆ ಆಗಿರುವ ವಿಚಾರ ತಿಳಿದ ಮೇರೆಗೆ ಪಿ ನೊಂದ ಮಹಿಳೆಯು ಕಾವೂರು ಪೊಲೀಸು ಠಾಣಾ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿ ಕೊಂಡಿರುತ್ತಾರೆ.
ಸದ್ರಿ ಪ್ರಕರಣದಲ್ಲಿನ ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್ ಜಿ ಕರ್ಕೇರಾ (32) ಎಂಬಾತನನ್ನು ದಿನಾಂಕ:05/02/2026 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಆಪಾದಿತನು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021 ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ, ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾನೆ. ನಂತರ ಸದ್ರಿ ಪ್ರಕರಣದಲ್ಲಿ ಆರೋಪಿತ ಸುಶಾಂತ್ ಪೂಜಾರಿ ಯವನೊಂದಿಗೆ ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತನು ಪಿರ್ಯಾದಿದಾರರಿಗೆ ಮತ್ತು ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿತ ಸುಶಾಂತ್ ನನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಆರೋಪಿತ ಸುಶಾಂತ್ ಪೂಜಾರಿಯ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡು ಮದುವೆ ನಡೆಸಿದವರಾಗಿರುತ್ತಾನೆ.

Continue Reading

crime

ಬಜ್ಪೆ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ..ಮೆಹಂದಿಗೆ ಹೋಗಿದ್ದಾಗ ಮನೆಗೆ ನುಗ್ಗಿ 23ಲಕ್ಷದ ಚಿನ್ನಾಭರಣ, 1,25,000ನಗದು ಹಣ ಎಗರಿಸಿದ ಖದೀಮರಿಬ್ಬರು ಅಂದರ್.

Published

on

.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ಎಂಬವರು ತನ್ನ ಸಂಬಂಧಿಕರ ಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ ಹೋಗಿದ್ದ ಸಂದರ್ಭ ರಾತ್ರಿ ಮನೆಗೆ ನುಗ್ಗಿ 23 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 1,25,000/- ರೂಪಾಯಿ ನಗದು ಹಣ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖದೀಮರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 176/2025 ಕಲಂ ಕಲಂ 331(3), 331(4), 305 BNS 2023 ರಂತೆ ಪ್ರಕರಣ ದಾಖಲಾಗಿತ್ತು.

ಬಜ್ಪೆ ಪೊಲೀಸರು ಆರೋಪಿತರ ಪತ್ತೆಗಾಗಿ ಬಲೆ ಬೀಸಿದಾಗ ಮೂಲತಃ ಕಳವಾರು ಚರ್ಚ್ ಬಳಿ ನಿವಾಸಿ, ಪ್ರಸ್ತುತ ಬಜ್ಪೆ ಗ್ರಾಮದ ಜರಿನಗರ ಬಾಡಿಗೆ ಮನೆಯಲ್ಲಿರುವ ಯೂಸುಫ್ ಪುತ್ರ ಅಬ್ದುಲ್ ನಾಸಿರ್@ಸಾಸಿರ್@ನಾಚಿ(31)ಎಂಬಾತ ಕಳ್ಳತನ ಮಾಡಿ ಬಳಿಕ ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು.
ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು LOC ಹೊರಡಿಸಿದ್ದರು. ಅಬ್ದುಲ್ ನಾಸೀರ್ @ ನಾಚಿ ಎಂಬಾತನನ್ನು LOC ಯಲ್ಲಿ ಪತ್ತೆ ಮಾಡಿ ವಿಚಾರಣೆ ನಡೆಸಿದಾಗ ಪ್ರಕರಣದ ಪಿರ್ಯಾದಿದಾರರಾದ ಮೊಹಮ್ಮದ್ ಷರೀಫ್ ಎಂಬವರ ಸಂಬಂಧಿ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಮತ್ತು ತಾನು ಸೇರಿ ಈ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದನು.
ಆರೋಪಿತರಿಂದ ಸುಮಾರು 27 ಲಕ್ಷ ರೂಪಾಯಿ ಮೌಲ್ಯದ 222 ಗ್ರಾಂ ತೂಕದ ಚಿನ್ನವನ್ನು, 20,000/- ರೂಪಾಯಿ ನಗದು ಹಣ, ಸುಮಾರು 50,000/- ರೂಪಾಯಿ ಮೌಲ್ಯದ ಸ್ಕೂಟರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಆರೋಪಿತರನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Continue Reading

Trending

Copyright © 2025 Deevatige