Bantawala
ಅಜ್ಜಿಬೆಟ್ಟು ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬಿ.ಸಿ.ರೋಡ್ ಸಮೀಪದ ಅಜ್ಜಿಬೆಟ್ಟು ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು

ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ 2025-26 ಎಂಬ ಘೋಷಣೆಯಡಿ ನಡೆದ ಕಲಿಕಾ ಹಬ್ಬವನ್ನು ಉದ್ಘಾಟಿಸಿದ ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿ, ಸರಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ವೃದ್ಧಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಇದರ ಪ್ರಯೋಜನವನ್ನು ಪಡೆಯಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ. ಮಾತನಾಡಿ, ಕಲಿಕಾ ಹಬ್ಬದಲ್ಲಿ ಭಾಗವಹಿಸುವ ಅವಕಾಶ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಇತರ ಮಕ್ಕಳಿಗೂ ತಾವು ಕಲಿತದ್ದನ್ನು ಹಂಚಿ ಶೈಕ್ಷಣಿವಾಗಿ ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು. ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ವಿನೋದಾ ಅಧ್ಯಕ್ಷತೆ ವಹಿಸಿದ್ದರು.

ಸಮೂಹ ಸಂಪನ್ಮೂಲ ವ್ಯಕ್ತಿ (ಬಿ.ಆರ್.ಸಿ) ಪ್ರೇಮಲತಾ ಕಲಿಕಾ ಹಬ್ಬದ ಆಶಯ, ಉದ್ದೇಶಗಳನ್ನು ತಿಳಿಸಿದರು. ಎಸ್.ಡಿ.ಎಂ.ಸಿ. ಸದಸ್ಯರಾದ ಜಯಂತಿ, ನಿಶ್ಮಿತಾ, ಕವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ವಿಮಲಾ, ಅತಿಥಿ ಹಾಗೂ ಗೌರವ ಶಿಕ್ಷಕರಾದ ನಿಶ್ಮಿತಾ, ಪೂರ್ಣಿಮಾ, ಲಾವಣ್ಯ, ದಿವ್ಯಾ, ಶಿವಮೂರ್ತಿ ವಿವಿಧ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಸಹಕರಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ. ಸ್ವಾಗತಿಸಿ, ಸಹ ಶಿಕ್ಷಕಿ ಐರಿನ್ ಆರ್.ಎಸ್. ವಂದಿಸಿದರು. ಸಹ ಶಿಕ್ಷಕಿ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು
Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
Bantawala
ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನಾ ಸಭೆ
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನೆಯ ಸಭೆ ನಡೆಯಿತು.
ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

