accident
ಮಕರ ಸಂಕ್ರಮಣ ಪೂಜೆಗೆ ದೇವಸ್ಥಾನಕ್ಕೆ ಹೋಗಿದ್ದ ಕುಟುಂಬ..ಮರಳಿ ಬರುವಷ್ಟರಲ್ಲಿ ಮನೆ ಬೆಂಕಿಗಾಹುತಿ.
ಪೆರ್ಲ ಬೆದ್ರಂಪಳ್ಳ ಸಮೀಪದ ನಡುಬೈಲು ಎಂಬಲ್ಲಿನ ರಮೇಶ್ಚಂದ್ರ ರೈ ಅವರ ಹಂಚಿನ ಮನೆ ಶಾರ್ಟ್ ಸರ್ಕ್ಯೂಟ್ ಕಾರಣ ಉರಿದು ಸಂಪೂರ್ಣ ಬೂದಿಯಾದ ಘಟನೆ ಜ.14ರ ಸಂಜೆ 4 ಗಂಟೆಗೆ ನಡೆದಿರುವುದಾಗಿ ವರದಿಯಾಗಿದೆ

ಪೆರ್ಲ ಪೇಟೆಯಲ್ಲಿ ವಾಹನ ಚಾಲಕರಾಗಿ ದುಡಿಯುತ್ತಿರುವ ಬಡ ಕುಟುಂಬದ ರಮೇಶ್ಚಂದ್ರ ರೈಯವರು ವಿಟ್ಲ ಹೊರವಲಯದ ಪೆರುವಾಯಿ ಗ್ರಾಮದ ಕುಟುಂಬದ (ತರವಾಡು)ದೇವಸ್ಥಾನಕ್ಕೆ ಮಕರ ಸಂಕ್ರಮಣ ಪೂಜೆಗಾಗಿ ಹೋಗಿದ್ದರು. ಪತ್ನಿ ಕೆಲಸಕ್ಕೆ ಹೋಗಿದ್ದರು. ಮಕ್ಕಳು ಶಾಲೆಗೆ ತೆರಳಿದ ಕಾರಣ ಮನೆಯಲ್ಲಿ ಯಾರೂ ಇಲ್ಲವಾದುದರಿಂದ ಘಟನೆ ಅರಿವಿಗೆ ಬರಲಿಲ್ಲ. ಮರಳಿ ಹೋಗುವಷ್ಟರಲ್ಲಿ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಫ್ರಿಜ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ದುರಂತ ಸಂಭವಿಸಿದೆ ಎಂಬುದು ತಿಳಿದುಬಂದಿದೆ.
ಕಾಸರಗೋಡಿನಿಂದ ಅಗ್ನಿಶಾಮಕ ದಳದವರು ಆಗಮಿಸಿ ಊರವರೊಂದಿಗೆ ಸೇರಿ ಬೆಂಕಿ ನಂದಿಸಿದರೂ ಮನೆಯೊಳಗೆ ಇದ್ದ ಬೆಲೆಬಾಳುವ ವಸ್ತು ಸಹಿತ ಬಟ್ಟೆ ಬರೆಗಳು ಬೆಂಕಿಗಾಹುತಿಯಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಗಳು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮತ್ತಷ್ಟು ಅನಾಹುತ ಸಂಭವಿಸುವುದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
accident
ವಿಟ್ಲದಲ್ಲಿ ಮಹಿಳೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಮಹಿಳೆಗೆ ಗಂಭೀರ ಗಾಯ: ರಿವರ್ಸ್ ತೆಗೆಯುವಾಗ ನಡೆದ ಘಟನೆ
ವಿಟ್ಲ: ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಬಸ್ಸೊಂದು ಹಿಮ್ಮುಖವಾಗಿ ಚಲಿಸುವಾಗ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಬಸ್ಸಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಘಟನೆಯ ವಿವರ:
ವಿಟ್ಲ-ಮುಡಿಪು-ಸ್ಟೇಟ್ಬ್ಯಾಂಕ್ ಮಾರ್ಗದಲ್ಲಿ ಸಂಚರಿಸುವ ಮಹೇಶ್ ಮೋಟಾರ್ಸ್ ಸಂಸ್ಥೆಗೆ ಸೇರಿದ ಬಸ್ (KA 19 AF 4649) ನಿಲ್ದಾಣದಲ್ಲಿ ನಿಲುಗಡೆಗಾಗಿ ಹಿಮ್ಮುಖವಾಗಿ (Reverse) ಬರುತ್ತಿತ್ತು. ಈ ಸಮಯದಲ್ಲಿ ಬಸ್ ನಿಲ್ದಾಣದತ್ತ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ಹೊಡೆದಿದೆ. ಮಹಿಳೆ ಬಸ್ಸಿನ ಅಡಿಗೆ ಬೀಳುತ್ತಿರುವುದನ್ನು ನೋಡನೋಡುತ್ತಲೇ ಸ್ಥಳೀಯ ಜ್ಯೂಸ್ ಅಂಗಡಿಯ ರಘುಶೆಟ್ಟಿಯವರು ಮತ್ತು ರಿಕ್ಷಾ ಚಾಲಕರು ಬೊಬ್ಬೆ ಹೊಡೆದಿದ್ದಾರೆ. ತಕ್ಷಣ ಎಚ್ಚೆತ್ತ ಚಾಲಕ ಬಸ್ಸನ್ನು ನಿಲ್ಲಿಸಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ಗಾಯಾಳು ಮಹಿಳೆಯ ಗುರುತು:
ಗಾಯಗೊಂಡ ಮಹಿಳೆಯನ್ನು ಕೇಪು ಗ್ರಾಮದ ಕುದ್ದುಪದವು ಚೆಲ್ಯಡ್ಕ ನಿವಾಸಿ ಈಶ್ವರ ನಾಯ್ಕ ಎಂಬವರ ಪತ್ನಿ ಸುಶೀಲ (50 ವರ್ಷ) ಎಂದು ಗುರುತಿಸಲಾಗಿದೆ. ಅನಾರೋಗ್ಯದ ಕಾರಣಕ್ಕಾಗಿ ವಿಟ್ಲದ ಸುರಕ್ಷಾ ಆಸ್ಪತ್ರೆಗೆ ತೆರಳಲು ಅವರು ಬಸ್ ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿ ತನ್ನ ನಾದಿನಿ ಜಯಾ ಅವರ ಬಳಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅವರ ನಾದಿನಿ ಜಯಾ ಅವರು ಅಡ್ಕಸ್ಥಳದಿಂದ ಬಂದು ಅತ್ತಿಗೆಗಾಗಿ ಬಸ್ಸು ತಂಗುದಾಣದಲ್ಲಿ ಕಾಯುತ್ತಿದ್ದರು.

ರಕ್ಷಣಾ ಕಾರ್ಯಾಚರಣೆ ಮತ್ತು ಚಿಕಿತ್ಸೆ:
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ತಕ್ಷಣ ಧಾವಿಸಿ ಬಸ್ಸಿನ ಅಡಿಯಲ್ಲಿ ಸಿಲುಕಿದ್ದ ಸುಶೀಲ ಅವರನ್ನು ರಕ್ಷಿಸಿದ್ದಾರೆ. ಗಾಯಾಳುವಿನ ಹಣೆಯ ಭಾಗಕ್ಕೆ ಮತ್ತು ಕೈಗೆ ತೀವ್ರತರದ ಗಾಯಗಳಾಗಿದ್ದು, ತಕ್ಷಣ ಅವರನ್ನು ವಿಟ್ಲ ಸರ್ಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತು. ತಲೆಗೆ ಪೆಟ್ಟು ಬಿದ್ದಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದಾರೆ.

ಸಾರ್ವಜನಿಕರ ಆಕ್ರೋಶ:
ಬಸ್ ನಿಲ್ದಾಣದಂತಹ ಜನನಿಬಿಡ ಪ್ರದೇಶದಲ್ಲಿ ಬಸ್ಸನ್ನು ಹಿಮ್ಮುಖವಾಗಿ ಚಲಿಸುವಾಗ ಚಾಲಕ ಮತ್ತು ನಿರ್ವಾಹಕರು ಸರಿಯಾದ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಅಪಘಾತಕ್ಕೆ ನೇರ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕರ ಬೇಜವಾಬ್ದಾರಿತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

accident
ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಅಪಘಾತಕ್ಕೀಡಾದ ಮಹಿಳೆ. ಇವರು ತನ್ನ ಮಗಳು ದೀಪ್ತಿ ಅವರೊಂದಿಗೆ ಸಜಿಪಮುನ್ನೂರಿನ ಗುಳಿಗಜ್ಜನ ಕಟ್ಟೆಗೆ ಕಾಣಿಕೆ ಹಾಕಲು ಬಂದಿದ್ದರು. ಕಾಣಿಕೆ ಮುಗಿಸಿ ವಾಪಸ್ಸಾಗುವಾಗ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮಹಿಳೆಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಡಿಕ್ಕಿಯ ರಭಸಕ್ಕೆ ಭಾರತಿ ಅವರು ಗಾಳಿಯಲ್ಲಿ ಹಾರಿ ರಸ್ತೆಯ ಬದಿಗೆ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
crime1 week agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala4 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
