government
88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ – ಮುಖ್ಯಮಂತ್ರಿ ಸಿದ್ದರಾಮಯ್ಯ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/01/siddaramayya.jpg&description=88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ – ಮುಖ್ಯಮಂತ್ರಿ ಸಿದ್ದರಾಮಯ್ಯ', 'pinterestShare', 'width=750,height=350'); return false;" title="Pin This Post">
ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅವುಗಳ ಪ್ರಮಾಣವನ್ನು ತಗ್ಗಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಕಳೆದ ಸಾಲಿನಲ್ಲಿ ಸುಮಾರು 88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದ್ದು, ಇದು ಸರ್ಕಾರಕ್ಕೆ ಮಾತ್ರವಲ್ಲದೆ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಕೆಲವು ಪೊಲೀಸ್ ಠಾಣೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಇನ್ನು ಕೆಲವು ಠಾಣೆಗಳ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಯದೆ ಯಾವುದೇ ರೀತಿಯ ಕ್ರೈಂ ನಡೆಯಲು ಸಾಧ್ಯವಿಲ್ಲ. ಹೀಗಿದ್ದರೂ ಅಪರಾಧಗಳು ನಡೆಯುತ್ತಿವೆ ಎಂದರೆ ಪೊಲೀಸರು ಬಲಾಢ್ಯರ ಕೈಗೊಂಬೆಯOತೆ ಕೆಲಸ ಮಾಡುತ್ತಿದ್ದಾರೆ ಎಂದರ್ಥ ಎಂದು ಅವರು ಎಚ್ಚರಿಸಿದರು. ಇದೇ ವೇಳೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆಯು ದೇಶದಲ್ಲೇ 3ನೇ ಸ್ಥಾನ ಪಡೆದಿರುವುದನ್ನು ಅವರು ಸ್ಮರಿಸಿದರು.

ಪ್ರಸ್ತುತ ರಾಜ್ಯದಲ್ಲಿ ಕಳ್ಳತನ, ಸುಲಿಗೆ ಮತ್ತು ದರೋಡೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಮ್ಮ ಸರ್ಕಾರವು ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಪಣ ತೊಟ್ಟಿದ್ದು, ಪೊಲೀಸರು ಶ್ರದ್ಧೆಯಿಂದ ಕೆಲಸ ಮಾಡಿದರೆ ಈ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಸಾಧ್ಯವಿದೆ. ಡ್ರಗ್ಸ್ ಜಾಲದ ಮೂಲವನ್ನು ಪತ್ತೆಹಚ್ಚಲು ಪೆಡ್ಲರ್ಗಳು ಹಾಗೂ ವ್ಯಸನಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಬೇಕು. ಈ ಮೂಲಕ ಅಮೂಲ್ಯ ಮಾಹಿತಿ ಸಂಗ್ರಹಿಸಿ ದಂಧೆಯ ಬೇರನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಹಚ್ಚಿರುವುದು ರಾಜ್ಯದ ಪೊಲೀಸರಿಗೆ ಶೋಭೆ ತರುವ ವಿಷಯವಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ರಾಜ್ಯದ ಪೊಲೀಸರು ಇಂತಹ ಕೆಲಸಗಳನ್ನು ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಇನ್ಮುಂದೆ ಇಂತಹ ಲೋಪಗಳು ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ವಿದೇಶಿಯರನ್ನು ತಕ್ಷಣವೇ ಅವರ ದೇಶಕ್ಕೆ ವಾಪಸ್ ಕಳಿಸುವ ಪ್ರಕ್ರಿಯೆ ನಡೆಯಬೇಕು ಮತ್ತು ಪಿಐ ಹಾಗೂ ಪಿಎಸ್ಐಗಳ ಮೇಲೆ ಹಿರಿಯ ಅಧಿಕಾರಿಗಳು ನಿರಂತರ ನಿಗಾ ಇಡಬೇಕು ಎಂದು ಅವರು ನಿರ್ದೇಶಿಸಿದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ , ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳOತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು.

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ ವೈ ಎಸ್ ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.
ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.
ಸಮ್ಮೇಳನದಲ್ಲಿ ಉಪಸ್ಥಿತರಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಸೈಬರ್ ಕ್ರೈಂ ತಡೆಗೆ ಈಗಾಗಲೇ ಇಲಾಖೆಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದರು. ರಾಜ್ಯದ ಪೊಲೀಸ್ ಇಲಾಖೆಯು ಕೈಗೊಂಡಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಲಭಿಸಿರುವುದು ಹೆಮ್ಮೆಯ ವಿಷಯ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
🛑33ನೇ ವರ್ಷದ ವಿಟ್ಲೋತ್ಸವ-2026
🛑ರಮಾನಾಥ್ ವಿಟ್ಲ ಸಾರಥ್ಯದಲ್ಲಿ ನಡೆಯುವ ಸಾಂಸ್ಕೃತಿಕ ಉತ್ಸವ
🛑ಇತಿಹಾಸದ ಛತ್ರಪತಿ ಶಿವಾಜಿ ನಾಟಕ
🛑ಪ್ರತಿಭಾವಂತರಿಗೆ ಗೌರವ ಪುರಸ್ಕಾರ
ದೀವಟಿಗೆ ನ್ಯೂಸ್ ವಾಟ್ಸಾಪ್ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/ElnwvKqnWdxE7rYJHa8YSh
Educational
NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್ 6 ರಂದು ದೆಹಲಿಯಲ್ಲಿ ಅಭಿಜಿತ್ ದೀಪ್ಕೆ ಶಾಂತಿಯುತ ಪ್ರತಿಭಟನೆ
ನವದೆಹಲಿ: NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ನವದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ‘ಕಾಕ್ರೋಚ್ ಜನತಾ ಪಕ್ಷ’ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್ 6 ರಂದು ಭಾರತಕ್ಕೆ ಮರಳುತ್ತಿರುವುದಾಗಿ ಸೋಮವಾರ ಘೋಷಿಸಿದ್ದಾರೆ.
ಹಿನ್ನೆಲೆ: ‘ಜಿರಳೆ’ ಪದದ ವಿಡಂಬನಾತ್ಮಕ ಚಳವಳಿ
ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ವಿಚಾರಣೆಗಳ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯಿ ಅವರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಉಲ್ಲೇಖಿಸಿ “ಜಿರಳೆಗಳು” ಎಂಬ ಪದವನ್ನು ಬಳಸಿದ್ದರು. ತಾವು ಬಳಸಿದ ಪದವು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿರಲಿಲ್ಲ ಮತ್ತು ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಸಿಜೆಐ ಸ್ಪಷ್ಟಪಡಿಸಿದರಾದರೂ, ಇದು ಆನ್ಲೈನ್ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.
ಬೋಸ್ಟನ್ನಲ್ಲಿರುವ ತಂತ್ರಜ್ಞ ಅಭಿಜಿತ್ ದೀಪ್ಕೆ ಅವರು ಇದೇ ಸಂದರ್ಭವನ್ನು ಬಳಸಿಕೊಂಡು, ‘ಜಿರಳೆ’ ಪದವನ್ನು ಯುವ ಕ್ರಿಯಾಶೀಲತೆಯ ಸಂಕೇತವಾಗಿ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ತರುವ ಅಭಿಯಾನವಾಗಿ ಪರಿವರ್ತಿಸಿದರು. ಸಿಜೆಪಿ (Cockroach Janata Party) ಎಂಬ ವಿಡಂಬನಾತ್ಮಕ ರಾಜಕೀಯ ಚಳವಳಿಯನ್ನು ಪ್ರಾರಂಭಿಸಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದರು.
ಧರ್ಮೇಂದ್ರ ಪ್ರಧಾನ್ ವಿರುದ್ಧ ತೀವ್ರಗೊಂಡ ಅಭಿಯಾನ
ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ದೀಪ್ಕೆ, ನೀಟ್ ಪತ್ರಿಕೆ ಸೋರಿಕೆ ಮತ್ತು ತದನಂತರದ ಅಡಚಣೆಗಳು ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಭಾರಿ ಪರಿಣಾಮ ಬೀರಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
“ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧದ ಅಭಿಯಾನವನ್ನು ತೀವ್ರಗೊಳಿಸಲು ನಾನು ಭಾರತಕ್ಕೆ ಮರಳಲು ನಿರ್ಧರಿಸಿದ್ದೇನೆ. ಭಾರತದ ಸಂವಿಧಾನದ ಮಾರ್ಗವನ್ನು ಅನುಸರಿಸಿ ನಾವೆಲ್ಲರೂ ಒಟ್ಟಾಗಿ ಸೇರಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕೇಳಲು ಶಾಂತಿಯುತವಾಗಿ ಧ್ವನಿ ಎತ್ತುವ ಸಮಯ ಬಂದಿದೆ.” – ಅಭಿಜಿತ್ ದೀಪ್ಕೆ
ಪ್ರತಿಭಟನೆಯ ನಿಖರವಾದ ಕಾರಣಗಳು, ವಿದ್ಯಾರ್ಥಿಗಳ ಹಿತರಕ್ಷಣೆ ಮತ್ತು ಶಿಕ್ಷಣ ಇಲಾಖೆಯ ಇತ್ತೀಚಿನ ವಿದ್ಯಮಾನಗಳ ಸುತ್ತ ಇರಲಿದ್ದು, ದೇಶದ ವಿವಿಧ ಭಾಗಗಳಿಂದ ಬೆಂಬಲಿಗರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.



government
ಸುಬ್ರಹ್ಮಣ್ಯದಲ್ಲಿ ‘ಅನಧಿಕೃತ ಪೂಜೆ’ಗಳ ಹಾವಳಿ: ಭಕ್ತರೇ, ಧಾರ್ಮಿಕ ಮಾಫಿಯಾ ಬಗ್ಗೆ ಎಚ್ಚರ!
ಸುಬ್ರಹ್ಮಣ್ಯ: ರಾಜ್ಯದ ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ನಂಬಿಕೆಯನ್ನು ಬಂಡವಾಳವಾಗಿಸಿಕೊಂಡು ಕೋಟಿಗಟ್ಟಲೆ ಲೂಟಿ ಮಾಡುವ ಧಾರ್ಮಿಕ ಮಾಫಿಯಾವೊಂದು ಸದ್ದಿಲ್ಲದೆ ತಲೆಎತ್ತಿದೆ. ದೇವರ ಹೆಸರಿನಲ್ಲಿ ನಡೆಯುತ್ತಿರುವ ಈ ಅನಧಿಕೃತ ಪೂಜೆಗಳ ಜಾಲವು ಭಕ್ತರ ಕಿಸೆಗೆ ಕತ್ತರಿ ಹಾಕುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ.
ಕ್ಷೇತ್ರಕ್ಕೆ ಬರುವ ಭಕ್ತರು ಇಲ್ಲಿ ಮುಖ್ಯವಾಗಿ ಎರಡು ರೀತಿಯ ಪೂಜಾ ಪದ್ಧತಿಗಳನ್ನು ಗಮನಿಸಬೇಕಾಗಿದೆ.
೧. ಅಧಿಕೃತ ಪೂಜೆ (ಕ್ಷೇತ್ರದ ಸನ್ನಿಧಿಯಲ್ಲಿ ನಡೆಯುವ ಸೇವೆಗಳು)
ದೇವಸ್ಥಾನದ ಕಚೇರಿಯಿಂದ ರಶೀದಿ (ಚೀಟಿ) ಪಡೆದು, ದೇವಸ್ಥಾನದ ಆವರಣದೊಳಗೇ ಅಧಿಕೃತ ವೈದಿಕರ ಮುಖಾಂತರ ಶಾಸ್ತ್ರೋಕ್ತವಾಗಿ ನಡೆಯುವ ಪೂಜೆಗಳಿವು.
ಪ್ರಯೋಜನ: ಈ ಪೂಜೆಗಳಿಗೆ ಭಕ್ತರು ನೀಡುವ ಹಣ ನೇರವಾಗಿ ದೇವಸ್ಥಾನದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತದೆ.
ವಿಶ್ವಾಸಾರ್ಹತೆ: ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಮುಂತಾದ ಮಹತ್ವಾಕಾಂಕ್ಷೆಯ ಪೂಜೆಗಳು ಸುಬ್ರಹ್ಮಣ್ಯ ಸ್ವಾಮಿಗೆ ನೇರವಾಗಿ ತಲುಪಬೇಕಾದರೆ ಅಧಿಕೃತ ಪೂಜೆಗಳನ್ನೇ ಆಶ್ರಯಿಸಬೇಕು.
೨. ಅನಧಿಕೃತ ಪೂಜೆ (ಖಾಸಗಿ ಲೂಟಿ ಕೇಂದ್ರಗಳು)
ದೇವಸ್ಥಾನದ ಆಡಳಿತ ಮಂಡಳಿಗೂ ಇವರಿಗೂ ಯಾವುದೇ ಸಂಬಂಧವಿರುವುದಿಲ್ಲ. ನಿವೃತ್ತ ವೈದಿಕರು, ದೇವಸ್ಥಾನದಿಂದ ಹೊರಹಾಕಲ್ಪಟ್ಟವರು, ಸಾಲದ ಸುಳಿಗೆ ಸಿಲುಕಿ ಹಣದ ಅಗತ್ಯವಿರುವವರು ಹಾಗೂ ಶೀಘ್ರವಾಗಿ ಶ್ರೀಮಂತರಾಗಲು ಬಯಸುವ ಕೆಲವು ಖಾಸಗಿ ವ್ಯಕ್ತಿಗಳು ಈ ಅನಧಿಕೃತ ಪೂಜೆಗಳ ಸೂತ್ರಧಾರರಾಗಿದ್ದಾರೆ.
ಗ್ಯಾರೇಜ್, ಪಾರ್ಕಿಂಗ್ ಲಾಡ್ಜ್ ಗಳಲ್ಲಿಯೂ ಹೋಮ-ಹವನ!
ಇತ್ತೀಚಿನ ದಿನಗಳಲ್ಲಿ ಸುಬ್ರಹ್ಮಣ್ಯದಲ್ಲಿ ಇಂತಹ ಅಣಬೆ ಪೂಜಾ ಕೇಂದ್ರಗಳು ಮಿತಿಮೀರಿವೆ. ನಂಬಲಾಗದ ಸಂಗತಿಯೆಂದರೆ:
ಗ್ಯಾರೇಜ್ಗಳಲ್ಲಿ ಪೂಜೆ: ಸುಸ್ಥಿತಿಯಲ್ಲಿದ್ದ ವಾಹನ ಗ್ಯಾರೇಜ್ಗಳನ್ನು ಮುಚ್ಚಿ, ಅಲ್ಲಿ ಭಕ್ತರನ್ನು ವಂಚಿಸುವ ಪೂಜಾ ಕೇಂದ್ರಗಳನ್ನು ತೆರೆಯಲಾಗಿದೆ.
ಕಾರ್ ಪಾರ್ಕಿಂಗ್ನಲ್ಲಿ ಹೋಮ: ಕಾಶಿಕಟ್ಟೆ ಬಳಿಯ ಲಾಡ್ಜ್ ಒಂದರ ಕಾರ್ ಪಾರ್ಕಿಂಗ್ ಜಾಗದಲ್ಲೂ ಅಂಡಿಗುಂಡಿ ಪೂಜೆಗಳನ್ನು ನಡೆಸಿ ಭಕ್ತರನ್ನು ಯಾಮಾರಿಸಲಾಗುತ್ತಿದೆ.
ಖಾಸಗಿ ಮಂದಿರಗಳ ದುರ್ಬಳಕೆ: ಸುಜ್ಞಾನ ಮಂದಿರ, ಶಾರದಾ ಮಂದಿರ, ಶಿವ ಸದನ, ಹಾಗೂ ಕೆಲವು ಖಾಸಗಿ ಮನೆಗಳಲ್ಲೂ ಶಾಸ್ತ್ರೋಕ್ತವಲ್ಲದ, ಕೇವಲ “ಹೊಗೆ ಎಬ್ಬಿಸುವ” ನಾಮಕಾವಸ್ತೆ ಪೂಜೆಗಳನ್ನು ನಡೆಸಿ ಭಕ್ತರ ಕಿಸೆ ಖಾಲಿ ಮಾಡಲಾಗುತ್ತಿದೆ.
ಅಡುಗೆ ಭಟ್ಟರ ಮನೆಯಲ್ಲಿಯೂ ಸೇವೆ : ದೇವಸ್ಥಾನದ ಅಡುಗೆ ಭಟ್ಟರೊಬ್ಬರ ಮನೆಯಲ್ಲಿಯೂ ಹೋಮದ ಹೊಗೆ ಹೊರಬರುತ್ತಿದೆ.
ಸರ್ವರ್ ಈಶನ ವಿಶೇಷ ನಾಗಾರಾಧನೆ : ಇವರೂ ಖಾಸಗೀಯಾಗಿ ಅನಧಿಕೃತ ಸಂಸ್ಕಾರ ಮಾಡುತ್ತಿದ್ದಾರೆ
ಬಳ್ಪದ ಭಟ್ರವರಿಂದಲೂ ಅನಧಿಕೃತ ಪೂಜೆ : ಆದಿ ಸುಬ್ರಹ್ಮಣ್ಯ ದೇಗುಲದ ದಾರಿಯಲ್ಲಿ ಇವರ ಅನಧಿಕೃತ ಪೂಜೆ ನಡೆಯುತ್ತಿದೆ.
ವಿಶೇಷವೆಂದರೆ ಕೇರಳದ ಭಟ್ರವರಿಂದಲೂ ಪೂಜೆ ಆರಂಭ : ಸ್ಥಳೀಯರು ನಮ್ಮ ಜಿಲ್ಲೆಯವರು ಬಿಟ್ಟು ಈಗ ಕೇರಳದ ಭಟ್ರು ಕೂಡಾ ಪೂಜೆ ಮಾಡಲು ಶುರು ಮಾಡಿದ್ದು, ಇನ್ನೂ ಯಾವ ರಾಜ್ಯದವರು ಬರುತ್ತಾರೋ ಗೊತ್ತಿಲ್ಲ.
ಆನ್ಲೈನ್ನಲ್ಲೂ ಸುಬ್ರಹ್ಮಣ್ಯನ ಹೆಸರಿನಲ್ಲಿ ‘ಟ್ರೇಡಿಂಗ್’!
ಈ ದಲ್ಲಾಳಿಗಳು ಈಗ ಡಿಜಿಟಲ್ ರೂಪದಲ್ಲೂ ಭಕ್ತರಿಗೆ ಜಾಲ ಬೀಸುತ್ತಿದ್ದಾರೆ. “ದೇವಸ್ಥಾನಕ್ಕಿಂತ ಕಡಿಮೆ ವೆಚ್ಚ”, “ರಶ್ ಇರುವುದಿಲ್ಲ”, “ಉಚಿತ ಊಟ-ವಸತಿ” ಎಂಬ ಆಕರ್ಷಕ ಜಾಹೀರಾತುಗಳನ್ನು ನೀಡಿ ಆನ್ಲೈನ್ ಮೂಲಕ ಭಕ್ತರನ್ನು ಬುಕ್ ಮಾಡಲಾಗುತ್ತಿದೆ. ಕುಮಾರಧಾರ ನದಿಯ ದಾಟಿದ ತಕ್ಷಣ, “ಇಲ್ಲಿ ಎಲ್ಲಿ ಪೂಜೆ ಮಾಡಿದರೂ ದೇವರಿಗೆ ತಲುಪುತ್ತದೆ” ಎಂದು ಅಮಾಯಕ ಜನರನ್ನು ಮಂಗ ಮಾಡಲಾಗುತ್ತಿದೆ.
ಕಾನೂನಾತ್ಮಕ ತೊಡಕು: ಇವೆಲ್ಲವೂ ಖಾಸಗಿ ಜಾಗಗಳಲ್ಲಿ, ವೈಯಕ್ತಿಕ ನಂಬಿಕೆಯ ಹೆಸರಿನಲ್ಲಿ ನಡೆಯುತ್ತಿರುವುದರಿಂದ “ಧಾರ್ಮಿಕ ಸ್ವಾತಂತ್ರ್ಯ”ದ ಅಡಿಯಲ್ಲಿ ಪೊಲೀಸರಾಗಲಿ ಅಥವಾ ದೇವಸ್ಥಾನದ ಮಂಡಳಿಯಾಗಲಿ ತಕ್ಷಣ ಕ್ರಮ ಕೈಗೊಳ್ಳಲು ಕಾನೂನಾತ್ಮಕ ಅಡೆತಡೆಗಳಿವೆ.
ಒಟ್ಟಾಗಿ ಹೇಳುವುದಾದರೆ ಇದಕ್ಕೆ ಕಡಿವಾಣ ಬೀಳದೆ ಇದ್ದರೆ ಮುಂದೊಂದು ದಿನ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಭಕ್ತರ ಸಂಖ್ಯೆಯೆ ಇಲ್ಲದಿರಬಹುದು. ಮಾನ್ಯ ಧಾರ್ಮಿಕ ಖಾತೆಯ ಮಂತ್ರಿಗಳು ಇತ್ತ ಗಮನಹರಿಸಲೇ ಬೇಕು.

ಭಕ್ತರಿಗೆ ನಮ್ಮ ಮನವಿ ಮತ್ತು ಜಾಗೃತಿ:
ಭಕ್ತರೇ, ನಿಮ್ಮ ಕಷ್ಟ ನಿವಾರಣೆಗೆ ಹಾಗೂ ದೇವರಿಗೆ ಸಲ್ಲಿಸುವ ಸೇವೆ ಸಾರ್ಥಕವಾಗಬೇಕಾದರೆ ಎಚ್ಚರಿಕೆಯಿಂದ ಇರಿ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವಾಗ ಕೇವಲ ದೇವಸ್ಥಾನದ ಅಧಿಕೃತ ಕೌಂಟರ್ಗಳು ಅಥವಾ ಅಧಿಕೃತ ವೆಬ್ಸೈಟ್ ಮೂಲಕವೇ ಪೂಜೆಗಳನ್ನು ಕಾಯ್ದಿರಿಸಿ.
ಮಧ್ಯವರ್ತಿಗಳ, ದಲ್ಲಾಳಿಗಳ ಹಾಗೂ ಕಡಿಮೆ ವೆಚ್ಚದ ಆಮಿಷ ಒಡ್ಡುವ ಆನ್ಲೈನ್ ವಂಚಕರ ಮಾತುಗಳಿಗೆ ಮರುಳಾಗಬೇಡಿ.
ಗ್ಯಾರೇಜ್, ಪಾರ್ಕಿಂಗ್ ಸ್ಲಾಟ್ಗಳಲ್ಲಿ ನಡೆಯುವ ಪೂಜೆಗಳಿಂದ ದೇವರಿಗೂ ಪ್ರೀತಿಯಾಗುವುದಿಲ್ಲ, ನಿಮಗೂ ಫಲ ಸಿಗುವುದಿಲ್ಲ; ಕೇವಲ ವಂಚಕರ ಕಿಸೆ ತುಂಬುತ್ತದೆ ಅಷ್ಟೇ.
“ಬೋಧಿಸುವ ಸ್ಥಳದಲ್ಲಿ ಬೋಳಿಸುವವರಿದ್ದಾರೆ, ನಿಮ್ಮ ಭಕ್ತಿ ನಿಮ್ಮ ಎಚ್ಚರಿಕೆಯಲ್ಲಿರಲಿ.”
government
ಸುಳ್ಯ ಕೇಂದ್ರಿತ ‘ಆನೆ ಕಾರ್ಯಪಡೆ’ಗೆ ಚಾಲನೆ: ಕಾಡಾನೆ ಹಾವಳಿಗೆ ಅಂಕುಶ; ದಕ್ಷಿಣ ಕನ್ನಡ ಜಿಲ್ಲೆಯ ಮಲೆನಾಡು ಭಾಗದ ರೈತರಿಗೆ ಸಿಹಿ ಸುದ್ದಿ!
ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ದಾಳಿ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಭರ್ಜರಿ ಕ್ರಮ ಕೈಗೊಂಡಿದೆ. ಜಿಲ್ಲೆಯ ಕೃಷಿಕರ (Farmers) ಬಹು ಕಾಲದ ಸಮಸ್ಯೆ ಮತ್ತು ತಲೆನೋವಾಗಿದ್ದ ಕಾಡಾನೆ ಹಾವಳಿ ತಡೆಗಟ್ಟಲು ಸುಳ್ಯ ಕೇಂದ್ರಸ್ಥಾನವಾಗಿಸಿ (Center) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗಕ್ಕೆ 28 ಅಧಿಕಾರಿ/ಸಿಬ್ಬಂದಿಗಳನ್ನು ಒಳಗೊಂಡ ಆನೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಈ ಕ್ರಮಕ್ಕೆ ಅರಣ್ಯ ಭಾಗದ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ದಾಳಿ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಭರ್ಜರಿ ಕ್ರಮ ಕೈಗೊಂಡಿದೆ. ಸುಳ್ಯದಲ್ಲಿ ಕೇಂದ್ರ ಕಚೇರಿಯನ್ನು ಹೊಂದಲಿರುವ ನೂತನ ಆನೆ ಕಾರ್ಯಪಡೆಗೆ ಒಟ್ಟು 28 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ವಿಶೇಷ ತಂಡವು ಅತ್ಯಾಧುನಿಕ ಉಪಕರಣಗಳು ಮತ್ತು ವಾಹನಗಳೊಂದಿಗೆ ಸಜ್ಜಿತವಾಗಲಿದ್ದು, ಆನೆಗಳ ಚಲನವಲನದ ಮೇಲೆ ನಿರಂತರ ನಿಗಾ ಇರಿಸಲಿದೆ. ತಂಡದಲ್ಲಿ 4 ಉಪ ವಲಯ ಅರಣ್ಯಾಧಿಕಾರಿಗಳು (DRFO) 8 ಅರಣ್ಯ ರಕ್ಷಕರು (Forest Guards) 16 ಮಂದಿ ಹೊರಗುತ್ತಿಗೆ ಸಿಬ್ಬಂದಿ (DRM) (ಆನೆ ಓಡಿಸುವ ನೈಪುಣ್ಯತೆ ಹೊಂದಿರುವವರು) ಇರುತ್ತಾರೆ.
ತಂಡದ ಕಾರ್ಯಚಟುವಟಿಕೆಗಳು:
ಆನೆಗಳು ನಾಡಿಗೆ ಬಂದ ತಕ್ಷಣ ಸ್ಥಳಕ್ಕೆ ಧಾವಿಸಿ ಅವುಗಳನ್ನು ಮರಳಿ ಕಾಡಿಗೆ ಅಟ್ಟುವ ಕಾರ್ಯವನ್ನು ತ್ವರಿತವಾಗಿ ಮಾಡುವುದು, ಕಾಡಂಚಿನ ಗ್ರಾಮಗಳಲ್ಲಿ 24×7 ಗಸ್ತು ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವುದು.ಸ್ಥಳೀಯ ರೈತರು ಮತ್ತು ಅರಣ್ಯ ಇಲಾಖೆಯ ನಡುವೆ ಕೊಂಡಿಯಾಗಿ ಕೆಲಸ ಮಾಡುವುದು. ಆನೆಗಳಿಗೆ ಅಳವಡಿಸಲಾದ ರೇಡಿಯೋ ಕಾಲರ್ ಸಿಗ್ನಲ್ಗಳನ್ನು ಗಮನಿಸಿ ಮುನ್ನೆಚ್ಚರಿಕೆ ನೀಡುವುದು. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುಗುವುದು ಮತ್ತು ಜನವಸತಿ ಪ್ರದೇಶ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್ ಗಳಲ್ಲಿ ಆನೆಗಳ ಚಲನವಲನಗಳನ್ನು ಗುರುತಿಸುವುದು ಹಾಗೂ ಹಿಮ್ಮೆಟ್ಟಿಸುವುದು, ಸಾರ್ವಜನಿಕರಿಗೆ ಆನೆಗಳ ಚಲನವಲನ ಕುರಿತು ಮಾಹಿತಿ ನೀಡುವುದು ಇತ್ಯಾದಿ ಕೆಲಸಗಳನ್ನು ಕಾರ್ಯಪಡೆ ಮಾಡಲಿದೆ.

ಮಂಗಳೂರು ವಿಭಾಗದ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ವಲಯಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು, ಈ ಹಿಂದೆ ಅವುಗಳನ್ನು ಹಿಮ್ಮೆಟ್ಟಿಸಲು ಮಡಿಕೇರಿ ವಿಭಾಗದಿಂದ ಆನೆ ಕಾರ್ಯಪಡೆಯನ್ನು ಕರೆಸಬೇಕಾಗಿತ್ತು. ಇದರಿಂದ ತುಂಬಾ ವಿಳಂಬ ಆಗುತ್ತಿರುವ ಮಂಗಳೂರು ವಿಭಾಗಕ್ಕೆ ಹೊಸದಾಗಿ ಆನೆ ಕಾರ್ಯಪಡೆಯನ್ನು ರಚಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಗಣಿಸಿ ಅರಣ್ಯ ಮತ್ತು ಪರಿಸರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆನೆ ಕಾರ್ಯಪಡೆ ರಚಿಸಿ ಆದೇಶಿಸಿದ್ದಾರೆ. ಕೇಂದ್ರಸ್ಥಾನದಲ್ಲಿ ಕಂಟ್ರೋಲ್ ರೂಂ (ನಿಯಂತ್ರಣ ಕಾರ್ಯಕೊಠಡಿ) ಕಾರ್ಯನಿರ್ವಹಿಸಲಿದೆ. ಇಲಾಖೆಯ ಈ ಕ್ರಮಕ್ಕೆ ಜಿಲ್ಲೆಯ ಅರಣ್ಯ ಭಾಗದಲ್ಲಿರುವ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಪಡೆಯಿಂದಲಾದರೂ ತಮ್ಮ ಸಮಸ್ಯೆಗೆ ಮುಕ್ತಿ ದೊರಕಲಿದೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಸುಳ್ಯ ಮತ್ತು ಕಡಬ ಭಾಗದಲ್ಲಿ ಆನೆ ದಾಳಿಯಿಂದಾಗಿ ಪ್ರಾಣಹಾನಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಕಾರ್ಯಪಡೆ ಬೇಕೆಂಬ ಸಾರ್ವಜನಿಕರ ಒತ್ತಾಯಕ್ಕೆ ಸರ್ಕಾರ ಈಗ ಸ್ಪಂದಿಸಿದೆ.

-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
