Connect with us

government

88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಬೆಂಗಳೂರು: ರಾಜ್ಯದಲ್ಲಿ ಅಪರಾಧಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅವುಗಳ ಪ್ರಮಾಣವನ್ನು ತಗ್ಗಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಕಳೆದ ಸಾಲಿನಲ್ಲಿ ಸುಮಾರು 88 ಕ್ರಿಮಿನಲ್ ಪ್ರಕರಣಗಳಲ್ಲಿ ಸ್ವತಃ ಪೊಲೀಸರೇ ಭಾಗಿಯಾಗಿರುವುದು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದ್ದು, ಇದು ಸರ್ಕಾರಕ್ಕೆ ಮಾತ್ರವಲ್ಲದೆ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಕೆಲವು ಪೊಲೀಸ್ ಠಾಣೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಇನ್ನು ಕೆಲವು ಠಾಣೆಗಳ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಯದೆ ಯಾವುದೇ ರೀತಿಯ ಕ್ರೈಂ ನಡೆಯಲು ಸಾಧ್ಯವಿಲ್ಲ. ಹೀಗಿದ್ದರೂ ಅಪರಾಧಗಳು ನಡೆಯುತ್ತಿವೆ ಎಂದರೆ ಪೊಲೀಸರು ಬಲಾಢ್ಯರ ಕೈಗೊಂಬೆಯOತೆ ಕೆಲಸ ಮಾಡುತ್ತಿದ್ದಾರೆ ಎಂದರ್ಥ ಎಂದು ಅವರು ಎಚ್ಚರಿಸಿದರು. ಇದೇ ವೇಳೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆಯು ದೇಶದಲ್ಲೇ 3ನೇ ಸ್ಥಾನ ಪಡೆದಿರುವುದನ್ನು ಅವರು ಸ್ಮರಿಸಿದರು.

ಪ್ರಸ್ತುತ ರಾಜ್ಯದಲ್ಲಿ ಕಳ್ಳತನ, ಸುಲಿಗೆ ಮತ್ತು ದರೋಡೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ನಮ್ಮ ಸರ್ಕಾರವು ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಪಣ ತೊಟ್ಟಿದ್ದು, ಪೊಲೀಸರು ಶ್ರದ್ಧೆಯಿಂದ ಕೆಲಸ ಮಾಡಿದರೆ ಈ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಸಾಧ್ಯವಿದೆ. ಡ್ರಗ್ಸ್ ಜಾಲದ ಮೂಲವನ್ನು ಪತ್ತೆಹಚ್ಚಲು ಪೆಡ್ಲರ್‌ಗಳು ಹಾಗೂ ವ್ಯಸನಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಬೇಕು. ಈ ಮೂಲಕ ಅಮೂಲ್ಯ ಮಾಹಿತಿ ಸಂಗ್ರಹಿಸಿ ದಂಧೆಯ ಬೇರನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಹಚ್ಚಿರುವುದು ರಾಜ್ಯದ ಪೊಲೀಸರಿಗೆ ಶೋಭೆ ತರುವ ವಿಷಯವಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ರಾಜ್ಯದ ಪೊಲೀಸರು ಇಂತಹ ಕೆಲಸಗಳನ್ನು ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಇನ್ಮುಂದೆ ಇಂತಹ ಲೋಪಗಳು ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ವಿದೇಶಿಯರನ್ನು ತಕ್ಷಣವೇ ಅವರ ದೇಶಕ್ಕೆ ವಾಪಸ್ ಕಳಿಸುವ ಪ್ರಕ್ರಿಯೆ ನಡೆಯಬೇಕು ಮತ್ತು ಪಿಐ ಹಾಗೂ ಪಿಎಸ್ಐಗಳ ಮೇಲೆ ಹಿರಿಯ ಅಧಿಕಾರಿಗಳು ನಿರಂತರ ನಿಗಾ ಇಡಬೇಕು ಎಂದು ಅವರು ನಿರ್ದೇಶಿಸಿದರು.


ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ , ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳOತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು.

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ ವೈ ಎಸ್ ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.

ಸಮ್ಮೇಳನದಲ್ಲಿ ಉಪಸ್ಥಿತರಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಸೈಬರ್ ಕ್ರೈಂ ತಡೆಗೆ ಈಗಾಗಲೇ ಇಲಾಖೆಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದರು. ರಾಜ್ಯದ ಪೊಲೀಸ್ ಇಲಾಖೆಯು ಕೈಗೊಂಡಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಲಭಿಸಿರುವುದು ಹೆಮ್ಮೆಯ ವಿಷಯ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

🛑33ನೇ ವರ್ಷದ ವಿಟ್ಲೋತ್ಸವ-2026
🛑ರಮಾನಾಥ್ ವಿಟ್ಲ ಸಾರಥ್ಯದಲ್ಲಿ ನಡೆಯುವ ಸಾಂಸ್ಕೃತಿಕ ಉತ್ಸವ
🛑ಇತಿಹಾಸದ ಛತ್ರಪತಿ ಶಿವಾಜಿ ನಾಟಕ
🛑ಪ್ರತಿಭಾವಂತರಿಗೆ ಗೌರವ ಪುರಸ್ಕಾರ

ದೀವಟಿಗೆ ನ್ಯೂಸ್ ವಾಟ್ಸಾಪ್ ಗ್ರೂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
https://chat.whatsapp.com/ElnwvKqnWdxE7rYJHa8YSh

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

government

ಉಪ್ಪಿನಂಗಡಿ ಗ್ರಾ.ಪಂ. ಮೇಲೆ ಲೋಕಾಯುಕ್ತ ದಾಳಿ; ಪಿಡಿಒ ವಿರುದ್ಧ ಲಂಚದ ಆರೋಪಗಳ ಸುರಿಮಳೆ

Published

on

ಉಪ್ಪಿನಂಗಡಿ, ಸೆ. 9: ವ್ಯಾಪಕ ಭ್ರಷ್ಟಾಚಾರ ಮತ್ತು ಅವ್ಯವಹಾರದ ದೂರುಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡವು ಕಚೇರಿಗೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿತು. ದಾಳಿಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ವರ್ತಕರು, ಬಾರ್ ಮಾಲಕರು ಮತ್ತು ಸಾರ್ವಜನಿಕರು ತಮ್ಮ ಅಳಲನ್ನು ಲೋಕಾಯುಕ್ತರ ಮುಂದೆ ತೋಡಿಕೊಂಡರು.

ಪೆಟ್ರೋಲ್ ಪಂಪ್ ಪರವಾನಿಗೆ ನವೀಕರಣಕ್ಕೆ ಅರ್ಜಿಯನ್ನೇ ಸ್ವೀಕರಿಸುತ್ತಿಲ್ಲ, ಕಟ್ಟಡ ತೆರಿಗೆ ಕಟ್ಟಲು ಹೋದರೂ ತೆಗೆದುಕೊಳ್ಳುತ್ತಿಲ್ಲ. ಪಿಡಿಒ ಹೇಳದೆ ಯಾವ ಕೆಲಸವೂ ಆಗುವುದಿಲ್ಲ, ಲಂಚ ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ ಎಂದು ಪಂಜಳದ ಉದ್ಯಮಿ ಚಂದ್ರಶೇಖರ ತಾಳಜೆ ಆರೋಪಿಸಿದರು.

1987ರಿಂದ ಬಾರ್ ನಡೆಸುತ್ತಿದ್ದೇನೆ, ಈ ಬಾರಿ ನನ್ನ ಬಾರ್ ಲೈಸೆನ್ಸ್ ನವೀಕರಣಕ್ಕೂ ಅರ್ಜಿ ತೆಗೆದುಕೊಳ್ಳುತ್ತಿಲ್ಲ ಎಂದು ಉಲ್ಲಾಸ್ ಬಾರ್ ಮಾಲಕ ಕರುಣಾಕರ ಸುವರ್ಣ, ನಿರಾಲ ಬಾರ್‌ನ ನವೀನ ರೈ, ಕಾರ್ತಿಕ್ ಬಾರ್‌ನ ಆದಿತ್ಯ ಭಟ್ ಅವರು ದೂರು ನೀಡಿದರು.

ಗ್ರಾ.ಪಂ. ಕಟ್ಟಡಗಳ ಹರಾಜು ಅವಧಿ ಮುಗಿದರೂ ಮರು ಹರಾಜು ನಡೆಸದೆ, ಹಳೆಯದವರಿಂದಲೇ ಹೆಚ್ಚುವರಿ ಹಣ ಪಡೆದು ಮುಂದುವರಿಸಲಾಗುತ್ತಿದೆ. ರಾತ್ರಿ ವೇಳೆ ಪಿಡಿಒ ಮತ್ತು ಕೆಲ ಸಿಬ್ಬಂದಿಗಳು ಮಧ್ಯವರ್ತಿಗಳೊಂದಿಗೆ ಕಚೇರಿಯಲ್ಲಿ ರಹಸ್ಯ ಸಭೆ ನಡೆಸುತ್ತಾರೆ, ಸಿಸಿ ಕ್ಯಾಮರಾ ಪರಿಶೀಲಿಸಿ ಎಂದು ಸಾಮಾಜಿಕ ಕಾರ್ಯಕರ್ತ ರಹಿಮಾನ್ ಪೊರುಂಕಾಜೆ ಒತ್ತಾಯಿಸಿದರು.

ಈ ವೇಳೆ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಡಿವೈಎಸ್ಪಿ ಗಾನ ಕುಮಾರಿ, ಪಿಡಿಒ ಅರ್ಜಿ ತೆಗೆದುಕೊಳ್ಳಬೇಡಿ ಎಂದರೂ ಅದು ನಿಮ್ಮ ಕರ್ತವ್ಯವಲ್ಲ. ಬಂದ ಎಲ್ಲಾ ಅರ್ಜಿಗಳಿಗೆ ಹಿಂಬರಹ ನೀಡಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿ ಎಂದು ಸೂಚಿಸಿದರು. ದಾಳಿ ವೇಳೆ ಪ್ರಭಾರ ಪಿಡಿಒ ವಿಲ್ಯಡ್ ಲಾರೆನ್ಸ್ ರೊಡ್ರಿಗಸ್ ಕಚೇರಿಯಲ್ಲಿ ಗೈರಾಗಿದ್ದರು.

ಸಾರ್ವಜನಿಕರ ಎಲ್ಲಾ ದೂರುಗಳನ್ನು ಪರಿಶೀಲಿಸಿ ಸೂಕ್ತ ತನಿಖೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದು, ದೂರು ನೀಡಲು ಬಾಕಿ ಇರುವವರು ಇಂದು ಸಂಜೆ 4 ಗಂಟೆಗೆ ಗ್ರಾ.ಪಂ. ಸಭಾಂಗಣಕ್ಕೆ ಬರುವಂತೆ ಕರೆ ನೀಡಿದ್ದಾರೆ.

Continue Reading

DEATH

ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತಿಮ ಸಂಸ್ಕಾರ

Published

on

ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ತಿಪಟೂರು ಕ್ಷೇತ್ರದ ಹಿರಿಯ ರಾಜಕಾರಣಿ ಬಿ.ಸಿ. ನಾಗೇಶ್ (67) ಅವರು ತೀವ್ರ ಅನಾರೋಗ್ಯದಿಂದ ಮಂಗಳವಾರ (ಆಗಸ್ಟ್ 18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ವರ್ಷದಿಂದ ತೀವ್ರತರದ ಬ್ರೈನ್ ಟ್ಯೂಮರ್ (ಮಿದುಳಿನ ಗಂಟು) ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಈಗಾಗಲೇ ಎರಡು ಬಾರಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬೆಂಗಳೂರಿನಲ್ಲಿರುವ ಮಗಳ ಮನೆಯಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದ ಅವರು, ಕೊನೆಯುಸಿರೆಳೆದಿದ್ದಾರೆ. ಮೃತರು ಓರ್ವ ಮಗ ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ.

ಆಗಸ್ಟ್ 19ರಂದು (ಬುಧವಾರ) ಅವರ ಸ್ವಂತ ಊರಾದ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಸಾರ್ವಜನಿಕ ದರ್ಶನ ಹಾಗೂ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಬಿವಿಪಿಯಿಂದ ರಾಜಕೀಯ ಜೀವನ ಆರಂಭ:

1959ರ ಜುಲೈ 1ರಂದು ಜನಿಸಿದ ಬಿ.ಸಿ. ನಾಗೇಶ್ ಅವರು, ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪೂರ್ಣಕಾಲಿಕ ಪ್ರಚಾರಕರಾಗಿ ಹಲವು ವರ್ಷಗಳ ಕಾಲ ಸಂಘಟನಾ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು.

1984ರಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ (BJP) ಸೇರ್ಪಡೆಯಾದ ಅವರು, ಪಕ್ಷದ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ವಹಿಸಿಕೊಂಡು ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಎರಡು ಬಾರಿ ಶಾಸಕ, ಪ್ರಾಥಮಿಕ ಶಿಕ್ಷಣ ಸಚಿವರಾಗಿ ಸೇವೆ:

ಶಾಸಕರಾಗಿ: 2008ರಲ್ಲಿ ಮೊದಲ ಬಾರಿಗೆ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ನಾಗೇಶ್, 2018ರಲ್ಲಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. (2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು).

ಸಚಿವರಾಗಿ: 2021ರಿಂದ 2023ರವರೆಗಿನ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ‘ಸಕಾಲ’ ಖಾತೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಸಚಿವರಾಗಿದ್ದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ, ಶಾಲಾ ಕಾಂಪೌಂಡ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡು ಸುದ್ದಿಯಲ್ಲಿದ್ದರು.

ಗಣ್ಯರ ಕಂಬನಿ:

ಬಿ.ಸಿ. ನಾಗೇಶ್ ಅವರ ಅಗಲಿಕೆಗೆ ರಾಜ್ಯದ ಪ್ರಮುಖ ರಾಜಕೀಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಆರೆಸ್ಸೆಸ್ ಮತ್ತು ಬಿಜೆಪಿ ಮುಖಂಡರು ತೀವ್ರ ಕಂಬನಿ ಮಿಡಿದಿದ್ದಾರೆ. ‘ನಿಷ್ಠಾವಂತ ಸಂಘಟಕ ಹಾಗೂ ಸರಳ ರಾಜಕಾರಣಿಯನ್ನು ರಾಜ್ಯ ಕಳೆದುಕೊಂಡಂತಾಗಿದೆ’ ಎಂದು ಸಂತಾಪ ಸೂಚಿಸಿದ್ದಾರೆ.

Continue Reading

government

ಆಹಾರ ಭದ್ರತೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ: ಹೋಟೆಲ್, ಮೆಡಿಕಲ್ ಸ್ಟೋರ್‌ಗಳಲ್ಲಿ ಇನ್ಮುಂದೆ QR ಕೋಡ್ ಮೂಲಕ ನೇರ ದೂರು ಸೌಲಭ್ಯ

Published

on

ಆಹಾರ ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ, ಸಾರ್ವಜನಿಕರು ಸೇವೆ ಪಡೆಯುವ ಸ್ಥಳಗಳಲ್ಲಿ ನೇರವಾಗಿ ದೂರು ಸಲ್ಲಿಸಲು QR ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಹೋಟೆಲ್‌ಗಳು, ಮೆಡಿಕಲ್ ಸ್ಟೋರ್‌ಗಳು, ಪಿಜಿ ಹಾಗೂ ಕ್ಯಾಂಟೀನ್‌ಗಳಲ್ಲಿ ಕಳಪೆ ಆಹಾರ ಅಥವಾ ಸೇವಾ ಲೋಪ ಕಂಡುಬಂದಲ್ಲಿ, ಗ್ರಾಹಕರು QR ಕೋಡ್ ಸ್ಕ್ಯಾನ್ ಮಾಡಿ ತಕ್ಷಣವೇ ಅಧಿಕೃತ ದೂರು ನೀಡಬಹುದು. ಕರ್ನಾಟಕದಲ್ಲಿ ಈ ರೀತಿಯ ತಂತ್ರಜ್ಞಾನ ಆಧಾರಿತ ದೂರು ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಆಹಾರ ಇಲಾಖೆಯು ಇತ್ತೀಚೆಗೆ ನಡೆಸಿದ ಸರಣಿ ತಪಾಸಣೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಲಾಗಿದೆ. ಈ ನಿರ್ಧಾರದ ಜೊತೆಗೆ, ಹೋಟೆಲ್‌ಗಳಲ್ಲಿ ಸಿಸಿಟಿವಿ ಅಳವಡಿಕೆಯನ್ನು ಕಡ್ಡಾಯಗೊಳಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿದ್ದು, ಈ ಕುರಿತು ಮರುಪರಿಶೀಲಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸರ್ಕಾರವನ್ನು ಆಗ್ರಹಿಸಿದೆ.

ತಪಾಸಣೆ ವಿಸ್ತರಣೆ:

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲದೆ, ಖಾಸಗಿ ಹಾಸ್ಟೆಲ್‌ಗಳು, ಪಿಜಿಗಳು, ಬಸ್ ನಿಲ್ದಾಣಗಳು, ಮದುವೆ ಮನೆಗಳು, ರೈಲ್ವೆ ಕ್ಯಾಂಟೀನ್‌ಗಳು ಹಾಗೂ ವಿಮಾನಗಳಲ್ಲಿ ನೀಡಲಾಗುವ ಆಹಾರದ ಮೇಲೆಯೂ ನಿರಂತರ ನಿಗಾ ವಹಿಸಲಾಗುತ್ತದೆ. ಪಿಜಿಗಳಲ್ಲಿ ಕಳಪೆ ಆಹಾರ ನೀಡುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಬೃಹತ್ ಕಾರ್ಯಾಚರಣೆ ಹಾಗೂ ಆಹಾರ ಜಪ್ತಿ:

ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದ 30 ತಂಡಗಳು ಬೆಂಗಳೂರಿನಲ್ಲಿ ನಡೆಸಿದ ದಿಢೀರ್ ತಪಾಸಣೆಯಲ್ಲಿ ಬೃಹತ್ ಪ್ರಮಾಣದ ಕಳಪೆ ಮತ್ತು ಅವಧಿ ಮೀರಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ವಸ್ತುಗಳುಪ್ರಮಾಣ / ವಿವರಪ್ರಮುಖ ಲೋಪಗಳು
ಮಟನ್ / ಚಿಕನ್378 ಕೆಜಿ + 51 ಕೆಜಿತಪ್ಪು ಲೇಬಲ್, ಎಕ್ಸ್‌ಪೈರಿ ದಿನಾಂಕ ಇಲ್ಲದಿರುವುದು & ಅವಧಿ ಮೀರಿದ್ದು
ಮೀನು203 ಕೆಜಿಅತಿಯಾದ ಅವಧಿ ಮೀರಿದ ಮತ್ತು ಕಳಪೆ ಸ್ಥಿತಿ
ಸಸ್ಯಾಹಾರಿ ಆಹಾರ200 ಕೆಜಿಮಾಂಸಾಹಾರದ ಜೊತೆಗೆ ಅಸಮರ್ಪಕ ಸಂಗ್ರಹಣೆ
ತರಕಾರಿ76 ಕೆಜಿಕೊಳೆತ ಮತ್ತು ಫಂಗಸ್‌ಯುಕ್ತ ತರಕಾರಿಗಳು
ಹಾಲು / ಮೊಸರು45 ಲೀಟರ್ಅವಧಿ ಮೀರಿದ ಉತ್ಪನ್ನಗಳು
ಬಳಸಿದ ಅಡುಗೆ ಎಣ್ಣೆ49 ಲೀಟರ್ಪುನರಾವರ್ತಿತ ಮತ್ತು ನಿಯಮಬಾಹಿರ ಬಳಕೆ
ಇತರ ಉತ್ಪನ್ನಗಳುಬೇಕರಿ (12 ಕೆಜಿ), ಧಾನ್ಯಗಳು (67 ಕೆಜಿ)ಲೇಬಲ್ ಲೋಪ ಮತ್ತು ಎಕ್ಸ್‌ಪೈರಿ ದಿನಾಂಕ ಮುಕ್ತಾಯ

ಮಾದರಿಗಳ ಪ್ರಯೋಗಾಲಯ ಪರೀಕ್ಷೆ:

ಹಾಲು ಮತ್ತು ಉತ್ಪನ್ನಗಳು: 25 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ ಒಂದು ಮಾದರಿ ‘ಕಳಪೆ’ (Substandard) ಎಂದು ವರದಿಯಾಗಿದೆ.

ಶಾಲಾ-ಕಾಲೇಜು ಕ್ಯಾಂಟೀನ್: 124 ಶಾಲೆ-ಕಾಲೇಜುಗಳ ಆಹಾರ ಘಟಕಗಳನ್ನು ಪರಿಶೀಲಿಸಿ 53 ಮಾದರಿಗಳನ್ನು ಸಂಗ್ರಹಿಸಲಾಗಿದೆ.

ಮೆಯೋನೈಸ್: 36 ಎಗ್ ಮೆಯೋನೈಸ್ (Egg Mayonnaise) ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಒಳಪಡಿಸಲಾಗಿದೆ.

ಆಹಾರ ನೈರ್ಮಲ್ಯ ಕಾಪಾಡದ ಮತ್ತು ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಉದ್ಯಮಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆಯನ್ನು ಮುಂದುವರಿಸಲಿದೆ.

Continue Reading

Trending

Copyright © 2025 Deevatige

error: Content is protected !!