Connect with us

crime

ಮಹಿಳೆಯೊಂದಿಗೆ ಮುದ್ದಾಡ್ತಿರೋ ವಿಡಿಯೋ ವೈರಲ್! ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅನ್ನೋ ಆರೋಪ ; ಪೊಲೀಸ್ ಇಲಾಖೆ ಮಾನ ಹರಾಜು ಹಾಕಿದ ಹಿರಿಯ ಅಧಿಕಾರಿ

Published

on

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯ ಅವರದ್ದು ಎನ್ನಲಾದ ಖಾಸಗಿ ವಿಡಿಯೋಗಳು ವೈರಲ್ ಆಗಿವೆ. ಡಿಜಿಪಿ ರಾಮಚಂದ್ರ ರಾವ್ ಅವರು ಮಹಿಳೆಯೊಂದಿಗೆ ಕಳೆದ ಖಾಸಗಿ ಕ್ಷಣದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ತಲ್ಲಣ ಸೃಷ್ಟಿಸುತ್ತಿದೆ. ಸರ್ಕಾರಿ ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ ಡಿಜಿಪಿ ರಾಮಚಂದ್ರರಾವ್ ಮಹಿಳೆಯೊಂದಿಗೆ ಮುದ್ದಾಡ್ತಿರೋ ವಿಡಿಯೋ ರಾಜ್ಯ ಮಾತ್ರವಲ್ಲದೇ ದೇಶಾದ್ಯಂತ ಸದ್ದು ಮಾಡುತ್ತಿದೆ. ಹಿರಿಯ ಅಧಿಕಾರಿಯ ಈ ನಡೆಗೆ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿ, ಹಾಲಿ ಡಿಜಿಪಿ ರಾಮಚಂದ್ರರಾವ್ ವಿರುದ್ಧ ಮಹಿಳೆಯರ ಜೊತೆ ಅಶ್ಲೀಲವಾಗಿ, ಅಸಭ್ಯವಾಗಿ ವರ್ತಿಸಿರೋ ರೀತಿಯಲ್ಲಿ ಇರುವ ವಿಡೀಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.


. ಹಿರಿಯ ಪೊಲೀಸ್ ಅಧಿಕಾರಿ, ಹಾಲಿ ಡಿಜಿಪಿ ರಾಮಚಂದ್ರರಾವ್ ವಿರುದ್ಧ ಮಹಿಳೆಯರ ಜೊತೆ ಅಶ್ಲೀಲವಾಗಿ, ಅಸಭ್ಯವಾಗಿ ವರ್ತಿಸಿರೋ ಆರೋಪ ಕೇಳಿ ಬಂದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಮತ್ತೊಂದೆಡೆ ಭೇಟಿಗೆ ಬಂದಿದ್ದ ಡಿಜಿಪಿ ರಾಮಚಂದ್ರರಾವ್‌ಗೆ ಭೇಟಿಗೆ ಅವಕಾಶ ನೀಡದೇ ಅವರನ್ನು ಗೃಹಸಚಿವ ಡಾ. ಜಿ. ಪರಮೇಶ್ವರ್ ವಾಪಸ್ ಕಳಿಸಿದ್ದಾರೆ ಎನ್ನಲಾಗಿದೆ. ಇದರ ನಡುವೆ ವೈರಲ್ ವಿಡಿಯೋ ಕುರಿತಂತೆ ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.


ಡಿಜಿಪಿ ರಾಮಚಂದ್ರರಾವ್ ಮೊದಲ ಪ್ರತಿಕ್ರಿಯೆ

ವೈರಲ್ ವಿಡಿಯೋ ಬಗ್ಗೆ ರಾಮಚಂದ್ರರಾವ್ ಮಾಧ್ಯಮಗಳಿಗೆ ಮೊದಲ ರಿಯಾಕ್ಷನ್ ನೀಡಿದ್ದಾರೆ. ಗೃಹಸಚಿವರ ನಿವಾಸದ ಬಳಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಇದು ೮ ವರ್ಷಗಳ ಹಳೆ ವಿಡಿಯೋ ಎಂದಿದ್ದಾರೆ. ಮತ್ತೊಂದೆಡೆ ಇದು ಎಐ ವಿಡಿಯೋ, ಇದರಲ್ಲಿ ಇರೋದು ನಾನಲ್ಲ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ. ಮುಂದುವರಿದು ಅದು ಎಐ ವಿಡಿಯೋ, ನನಗೇನೂ ಗೊತ್ತಿಲ್ಲ ಎಂದಿದ್ದಾರೆ.ಇನ್ನು3 ಬೇರೆ ಬೇರೆ ವಿಡಿಯೋಗಳಿದ್ದು, ಎಲ್ಲರೂ ಒಬ್ಬರೇ ಮಹಿಳೆಯರಾ? ಅಥವಾ ಬೇರೆ ಬೇರೆ ಮಹಿಳೆಯರಾ ಎನ್ನುವುದು ಗೊತ್ತಾಗಿಲ್ಲ. ಇನ್ನು ಈ ಆರೋಪವನ್ನು ಖುದ್ದು ಡಿಜಿಪಿ ರಾಮಚಂದ್ರರಾವ್ ಅಲ್ಲಗಳೆದಿದ್ದಾರೆ. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಆ ಮಹಿಳೆಯರು ಯಾರು ಅಂತಾನೂ ಗೊತ್ತಿಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ.


ಡಿಜಿಪಿ ರಾಮಚಂದ್ರ ರಾವ್ ಅವರ ಖಾಸಗಿ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯೊಂದಿಗೆ ಸರಸ ನಡೆಸುವ ದೃಶ್ಯಗಳು ಇದರಲ್ಲಿವೆ. ಇದು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೂ ಮುನ್ನ ನಡೆದಿರುವುದು ಎಂಬುದು ಬಹಿರಂಗವಾಗಿದ್ದು, ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿಯೂ ಇವರ ಹೆಸರು ತಳಕು ಹಾಕಿಕೊಂಡಿತ್ತು. ಅಧಿಕಾರ ದುರ್ಬಳಕೆ ಆರೋಪದಡಿ ಅಧಿಕಾರಿಯನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.
ಹಿರಿಯ ಪೊಲೀಸ್ ಅಧಿಕಾರಿಯ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದೆ. ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾನೂನು ಹೋರಾಟಕ್ಕೆ ಮುಂದಾದ ಡಿಜಿಪಿ
ಇನ್ನುಕಾನೂನು ಹೋರಾಟದ ಬಗ್ಗೆಯೂ ಡಿಜಿಪಿ ರಾಮಚಂದ್ರರಾವ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸದ್ಯ ರಹಸ್ಯ ಸ್ಥಳದಲ್ಲಿದ್ದು ಕಾನೂನಾತ್ಮಕ ಹೋರಾಟದ ಬಗ್ಗೆ ತಮ್ಮ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚೆ ಮಾಡುತ್ತಾ ಇದ್ದಾರಂತೆ. ದೂರು ಕೊಡೋದಾ? ಅಥವಾ ಬೇರೆ ಯಾವ ರೀತಿ ಹೋರಾಟ ಮಾಡಬೇಕು ಅನ್ನೋ ಬಗ್ಗೆ ಚರ್ಚಿಸಿದ್ದಾರಂತೆ. ಒಂದು ವೇಳೆ ದೂರು ಕೊಡೋದೇ ಆದ್ರೆ ಎಲ್ಲಿ ಕೊಡೋದು? ಸೈಬರ್ ಠಾಣೆಯಲ್ಲಿ ದೂರು ಕೊಡೋದಾ ಎನ್ನುವ ಬಗ್ಗೆ ವಿಚಾರಿಸಿದ್ದಾರೆ. ಚರ್ಚೆ ಬಳಿಕ ಕಾನೂನು ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳೋ ಸಾಧ್ಯತೆ ಇದೆ ಎನ್ನಲಾಗಿದೆ.

ಕಚೇರಿಯಲ್ಲಿ ಕುಳಿತು ಪೊಲೀಸ್ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ.

ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬAಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು.

ಯಾರು ಈ ರಾಮಚಂದ್ರ ರಾವ್?
ಕೆ. ರಾಮಚಂದ್ರ ರಾವ್ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ಲಿಮಿಟೆಡ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಸೇವೆ ಸಲ್ಲಿಸಿದ್ದರು. ೨೦೨೩ರಲ್ಲಿ ಇವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಡಿಜಿಪಿ ಮತ್ತು ಅಧ್ಯಕ್ಷ ಮತ್ತು ಎಂಡಿ ಆಗಿ ಬಡ್ತಿ ನೀಡಲಾಗಿತ್ತು. ಬಳಿಕ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ನೇಮಕಗೊಂಡಿದ್ದರು. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇವರ ಮಲಮಗಳು ರನ್ಯಾ ರಾವ್ ಭಾಗಿ ಪ್ರಕರಣ ಸಂಬoಧ ಪೊಲೀಸರ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಮಾರ್ಚ್ 2025ರಲ್ಲಿ ಇವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.

ಇಲಾಖೆಗೆ ದೊಡ್ಡ ಅಪಮಾನ’
ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್ ವಿಚಾರ ಸಂಬoಧ ಅಧಿಕಾರಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಟಿವಿ೯ ಮೂಲಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಹಿಂದೆಯೂ ರಾಮಚಂದ್ರ ರಾವ್ ಇದೇ ರೀತಿ ನಡೆದುಕೊಂಡಿದ್ದರು, ಆದರೂ ಇಲಾಖೆಯಲ್ಲಿ ಮುಂದುವರಿದಿದ್ದಾರೆ. ಕಚೇರಿಯಲ್ಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರೋದು, ಗೃಹ ಇಲಾಖೆಗೆ ದೊಡ್ಡ ಅಪಮಾನ ಎಂದಿದ್ದಾರೆ.


ತಪ್ಪು ಮಾಡಿದ್ರೆ ಶಿಸ್ತಿನ ಕ್ರಮ ಜರುಗಿಸುತ್ತೇವೆ
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಡಿಜಿಪಿ ರಾಮಚಂದ್ರ ರಾವ್ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಡಿಜಿಪಿ ರಾಮಚಂದ್ರರಾವ್ ಅವರದ್ದು ಎನ್ನಲಾದ ವಿಡಿಯೋ ಸಾಕಷ್ಟು ಸಂಚಲನ ಮೂಡಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ, ವಿಡಿಯೋ ವೈರಲ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಡಿಜಿಪಿ ರಾಮಚಂದ್ರರಾವ್ ವಿರುದ್ಧ ಗರಂ ಆದ್ರೂ. ಬೆಳಗಾವಿಯಲ್ಲಿ ಮಾತನಾಡಿರುವ ಸಿಎಂ, ತಪ್ಪು ಮಾಡಿದ್ರೆ ಶಿಸ್ತಿನ ಕ್ರಮ ಜರುಗಿಸುತ್ತೇವೆ, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ‍್ಯಾಗಿಂಗ್ ಶಂಕೆ, ತನಿಖೆ ಆರಂಭ

Published

on

ಮಂಗಳೂರು ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ – ಕಪ್ಪು ಶೂ ಧರಿಸಿದ್ದಕ್ಕೆ ಜೂನಿಯರ್‌ಗಳ ಮೇಲೆ ಸೀನಿಯರ್‌ಗಳಿಂದ ಭೀಕರ ಹಲ್ಲೆ!

ಮಂಗಳೂರು, ಆಗಸ್ಟ್ 05: ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೇವಲ ಕಪ್ಪು ಬಣ್ಣದ ಶೂ ಧರಿಸಿದ್ದರೆಂಬ ಸಣ್ಣ ಕಾರಣಕ್ಕೆ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ ಗುಂಪು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಿರಿಯ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ವಿವರ:

ನಗರದ ಗುಜ್ಜರಕೇರೆ ಪ್ರದೇಶದಲ್ಲಿರುವ ಚಹಾ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಪ್ರಥಮ ವರ್ಷದ ಆದರ್ಶ್ ಮತ್ತು ಜಾಸಿನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಿರಿಯ ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಹಾಕಿಕೊಂಡು ಬಂದಿದ್ದನ್ನೇ ನೆಪವಾಗಿಸಿಕೊಂಡ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ವಿದ್ಯಾರ್ಥಿಗಳ ಗುಂಪು, ಅವರೊಂದಿಗೆ ಗಲಾಟೆ ಮತ್ತು ವಾಗ್ವಾದ ನಡೆಸಿದೆ. ಮಾತಿಗೆ ಮಾತು ಬೆಳೆದು ಸೀನಿಯರ್‌ಗಳು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಚುರುಕು:

ವಿಷಯ ತಿಳಿಯುತ್ತಿದ್ದಂತೆ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ಆರು ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಕೇವಲ ವೈಯಕ್ತಿಕ ವೈಷಮ್ಯದಿಂದ ನಡೆದ ಗಲಾಟೆಯೋ ಅಥವಾ ರ‍್ಯಾಗಿಂಗ್‌ಗೆ ಸಂಬಂಧಿಸಿದ ಘಟನೆಯೋ ಎಂಬ ಕುರಿತು ಎಲ್ಲಾ ಆಯಾಮಗಳಲ್ಲೂ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ.

ಪೋಷಕರಲ್ಲಿ ಆತಂಕ – ಸಾರ್ವಜನಿಕರ ಆಕ್ರೋಶ:

ನಗರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತೆ ರ‍್ಯಾಗಿಂಗ್ ಭೂತ ತಲೆಎತ್ತುತ್ತಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲ್ಲೆ ನಡೆಸಿದ ಆರೋಪಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಪೋಷಕರು ತೀವ್ರವಾಗಿ ಆಗ್ರಹಿಸಿದ್ದಾರೆ

Continue Reading

arrest

ಪುತ್ತೂರು: ಅಕ್ರಮ ಮರ ಸಾಗಾಟ ಯತ್ನ ವಿಫಲ; 10 ಲಕ್ಷ ರೂ. ಮೌಲ್ಯದ ಸೊತ್ತು ವಶ, ಆರೋಪಿ ಬಂಧನ

Published

on

ಪುತ್ತೂರು: ಸಕಲೇಶಪುರದಿಂದ ಮಂಗಳೂರಿಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಸೋಮವಾರ (ಆಗಸ್ಟ್ 3) ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.

ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ (KA-13-AA-6340) ವಾಹನವನ್ನು ತಡೆದು ಪರಿಶೀಲಿಸಿದಾಗ, ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕ, ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಲೋಕೇಶ್ ಅವರ ಪುತ್ರ ರೋಹಿತ್ ಎಸ್. ಎಲ್. (20) ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಶಪಡಿಸಿಕೊಂಡ ವಾಹನ ಹಾಗೂ ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿದ್ದ ತಂಡ:

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ:ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್,ಗಸ್ತು ಅರಣ್ಯ ಪಾಲಕರಾದ ವಿನಯಚಂದ್ರ ಮತ್ತು ದೀಕ್ಷಾ ಕೆ.ಚಾಲಕ ಕಿಶೋರ್ ಕುಮಾರ್ ಕೆ. ಭಾಗವಹಿಸಿದ್ದರು.

ಮುಂದಿನ ತನಿಖೆ:

ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಸಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯಕ್ ಅವರ ನಿರ್ದೇಶನದಂತೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Trending

Copyright © 2025 Deevatige

error: Content is protected !!