crime
ವಿದ್ಯಾರ್ಥಿಯೊಬ್ಬನ ತಂದೆಯಿಂದ ಸಹಪಾಠಿ ವಿದ್ಯಾರ್ಥಿ, ಶಿಕ್ಷಕ ಮತ್ತು ಪೋಷಕರಿಗೆ ಧಮ್ಕಿ, ಕಿರುಕುಳ..ಹಾರಾಡಿ ಸರ್ಕಾರಿ ಶಾಲಾ ವಿದ್ಯಾರ್ಥಿ ಪೋಷಕನ ವಿರುದ್ಧ ಕ್ರಮಕೈಗೊಳ್ಳಲು ಶಾಸಕ ಅಶೋಕ್ ರೈಗೆ ಮನವಿ.
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲಾ ವಿದ್ಯಾರ್ಥಿಯೊಬ್ಬನ ತಂದೆ ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆಯೊಡ್ಡಿ ಧಮ್ಕಿ ಹಾಕುತ್ತಿರುವ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ನ್ಯಾಯ ನೀಡುವಂತೆ ಮನವಿ ಮಾಡಿದ್ದಾರೆ.

“ನೀಲ್ ನಿಖಿಲ್ ಎಂಬ ವಿದ್ಯಾರ್ಥಿಯಾದ ನಾನು ಸ.ಮಾ.ಉ.ಹಿ.ಪ್ರ. ಶಾಲೆ ಹಾರಾಡಿ ಶಾಲೆಯ 7ನೇ ಬಿ ತರಗತಿಯಲ್ಲಿ ಕಲಿಯುತ್ತಿದ್ದೇನೆ. ನನ್ನ ತರಗತಿಯ ವಿದ್ಯಾರ್ಥಿಯಾದ ಯಶಸ್ ಎಂಬಾತ ಕಾರಣವಿಲ್ಲದೆ ನನ್ನ ಜೊತೆ ಜಗಳ ತೆಗೆಯುತ್ತಿದ್ದಾನೆ. ನಾನು ಅವನ ಜೊತೆ ಯಾವುದೇ ರೀತಿಯ ಜಗಳ ಮಾಡಿರುವುದಿಲ್ಲ. ಹೀಗಿದ್ದರೂ ಆತನ ತಂದೆಯಾದ ಅಣ್ಣು ಎಂಬವರು ತರಗತಿ ಬಿಡುವ ಸಮಯದಲ್ಲಿ ಶಾಲಾ ಸಮೀಪ ಕಾದು ಕುಳಿತು ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ “ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿರುತ್ತಾನೆ. ಇದರಿಂದ ನಾನು ಮಾನಸಿಕವಾಗಿ ಕುಗ್ಗಿದ್ದು ಶಾಲೆಯ ಕಡೆಗೆ ಹೋಗಲು ಮನಸ್ಸಿರುವುದಿಲ್ಲ. ನನ್ನ ಪೋಷಕರು ಇವನ ಚಿತ್ರಹಿಂಸೆ ತಾಳಲಾರದೆ ಮನೆಯನ್ನು ಕೂಡಾ ಬದಲಾಯಿಸಿರುತ್ತಾರೆ.

ಆಗಸ್ಟ್ 15/2025ರಂದು ಸ್ವಾತಂತ್ರೋತ್ಸವ ಕಾರ್ಯಕ್ರಮದಂದು ನನ್ನ ತಾಯಿಯ ಬಳಿ ನಾನು ಯಾರಿಗೂ ಹೆದರುವುದಿಲ್ಲ, ನಿಮ್ಮ ಮಗನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರಿಗೂ ಕೂಡಾ ಶಾಲೆಯಲ್ಲಿಯೇ ಬೆದರಿಕೆ ಹಾಕಿರುತ್ತಾನೆ. ನನ್ನ ತಂದೆ ತಾಯಿ ಕೂಲಿ ಮಾಡಿ ಮಗನ ವಿದ್ಯೆಗೋಸ್ಕರ ಸರಕಾರಿ ಶಾಲೆಯನ್ನೇ ಆಶ್ರಯಿಸಬೇಕಾಗಿರುವುದು ಅನಿವಾರ್ಯವಾಗಿದೆ. ಆದ್ದರಿಂದ ನನ್ನ ಪೋಷಕರು ಹಾಗೂ ನನಗೂ ಶಾಲೆಗೆ ಬರಲು ತುಂಬಾ ಭಯವಾಗುತ್ತಿದೆ. ಬೇರೆ ವಿದ್ಯಾರ್ಥಿಗಳೊಡನೆ ಸುಮ್ಮನೆ ಜಗಳ ತೆಗೆದು ನನ್ನನ್ನೇ ಟಾರ್ಗೆಟ್ ಮಾಡಿ ಅವರಲ್ಲಿಯೂ “ಅವನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಹೇಳಿರುತ್ತಾರೆ. ಹಾಗೆಯೇ ಶಾಲಾ ಇತರ ಮಕ್ಕಳಲ್ಲಿಯೂ ಟೀಚರ್ ಗಳ ಹೆಸರು, ವಿಳಾಸ, ಮೊಬೈಲ್ ನಂಬರುಗಳನ್ನು ಕೇಳುವುದು. ಎಲ್ಲರನ್ನು ದುರುಗುಟ್ಟಿಕೊಂಡು ನೋಡುವುದು, ಅಪ್ಪಣೆಯಿಲ್ಲದೆ ನೇರವಾಗಿ ತರಗತಿಗೆ ಬಂದು ಮಕ್ಕಳಲ್ಲಿ ಪ್ರಶ್ನಿಸುವುದು ಹೀಗೆಲ್ಲಾ ಮಾಡುವಾಗ ನನಗೆ ಹೆದರಿಕೆಯಾಗುತ್ತದೆ. ನಾನು ಒಳ್ಳೆಯ ರೀತಿಯಲ್ಲಿ ಕಲಿತು ನನ್ನ ಪೋಷಕರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದ್ದು ಇದೇ ರೀತಿ ಮುಂದುವರಿದರೆ ನನ್ನ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬೇಕಾಗಬಹುದು ಎಂಬ ಆತಂಕ ಎದುರಾಗಿದೆ. ಇದರಿಂದಾಗಿ ನನ್ನ ಭವಿಷ್ಯವೇ ಹಾಳಾಗಬಹುದು. ನನಗೆ ಮತ್ತು ನನ್ನ ಮನೆಯವರ ಜೀವಕ್ಕೆ ತೊಂದರೆ ಏನಾದರೂ ಆದರೆ ಅದಕ್ಕೆ ನೇರ ಹೊಣೆ ಅಣ್ಣು ಅವರೇ ಆಗಿರುತ್ತಾರೆ. ಆದ್ದರಿಂದ ಅವರನ್ನು ಸಮಗ್ರವಾಗಿ ವಿಚಾರಿಸಿ ನನಗೆ ನ್ಯಾಯವನ್ನು, ಸೂಕ್ತ ಭದ್ರತೆಯನ್ನು ಹಾಗೂ ನನ್ನ ಶಿಕ್ಷಣವನ್ನು ಮುಂದುವರಿಸಲು ನನಗೆ ಶಾಲೆಯಲ್ಲಿ ಕಲಿಕೆಗೆ ಉತ್ತಮ ವಾತಾವರಣವನ್ನು ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ಕೈ ಮುಗಿದು ಬೇಡಿಕೊಳ್ಳುತ್ತೇನೆ ಎಂದು ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

ಕಾನೂನು ಕ್ರಮಕ್ಕೆ ಶಾಸಕರ ಸೂಚನೆ:
ಘಟನೆಯ ಬಗ್ಗೆ ಶಾಸಕರು ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ಸುನಿಲ್ ರವರಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಬೆದರಿಕೆ ಹಾಕಿದವರು ಸರಕಾರಿ ಕಚೇರಿಯಲ್ಲಿ ನೌಕರನಾಗಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಆರೋಪಿ ವಿರುದ್ಧ ಏನು ಕಾನೂನು ಕ್ರಮಕೈಗೊಳ್ಳಲು ಸಾಧ್ಯವೋ ಅದನ್ನು ತಕ್ಷಣ ಕೈಗೊಳ್ಳಿ ಎಂದು ಶಾಸಕರು ಸೂಚನೆ ನೀಡಿದ್ದಾರೆ.
ಮಕ್ಕಳು ಶಾಲೆಗೆ ಬರಲು ಭಯ ಪಡುತ್ತಾರೆ:
ಎಸ್ ಡಿ ಎಂ ಸಿ ಅಧ್ಯಕ್ಷೆ.
ಘಟನೆಯ ಬಗ್ಗೆ ಅಧ್ಯಕ್ಷೆ ಸುಲೋಚಿನಿಯವರು ಮಾತನಾಡುತ್ತಾ, ಈ ವ್ಯಕ್ತಿ ಪದೇ ಪದೇ ಶಾಲೆಗೆ ಬಂದು ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಪುತ್ತೂರು ಲೋಕೋಪಯೋಗಿ ಇಲಾಖೆಯಲ್ಲಿ ನೌಕರನಾಗಿರುವ ಇವರು ನಮಗೆ ಹಿಂಸೆಯನ್ನು ನೀಡುತ್ತಿದ್ದಾರೆ. ದಾರಿಯಲ್ಲಿ ಓಡಾಡುವಾಗಲೂ ಅಡ್ಡ ನಿಂತು ಜೀವ ಬೆದರಿಕೆ ಹಾಕುತ್ತಿದ್ದಾರೆ. ಇವನ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ. ಆದರೆ ಇದುವರೆಗೂ ಯಾವುದೇ ಕಾನೂನು ಕ್ರಮ ಜರಗಿಸಿಲ್ಲ ಎಂದು ಶಾಸಕರಲ್ಲಿ ಬಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಪೊಲೀಸರು ಕ್ರಮಕೈಗೊಳ್ಳಬೇಕು: ಮುಖ್ಯ ಶಿಕ್ಷಕ ಕೆ ಕೆ ಮಾಸ್ಟರ್
ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿ ಆತನಿಂದ ಶಾಲೆಗೆ ಆಗುತ್ತಿರುವ ತೊಂದರೆಯನ್ನು ಪರಿಹರಿಸಬೇಕಿದೆ. ವಿನಾ ಕಾರಣ ಮಕ್ಕಳಲ್ಲಿ ಭಯ ಹುಟ್ಟಿಸುವ ಕೆಲಸ ಆತ ಮಾಡುತ್ತಿದ್ದು ನ್ಯಾಯಕ್ಕಾಗಿ ಶಾಸಕ ಅಶೋಕ್ ರೈ ಬಳಿ ಬಂದಿದ್ದೇವೆ ಎಂದು ತಿಳಿಸಿದ್ದಾರೆ.
Belthangady
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ
ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 25ರಂದು ವೇಣೂರು ಪೊಲೀಸ್ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್ಪಿ ನೇತೃತ್ವದ ತಂಡವು ಮಾರ್ಚ್ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
crime
ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.
9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.
ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
