Connect with us

crime

ಕನ್ನಡ ರಿಯಾಲಿಟಿ ಶೋಗಳಿಗೆ ಹಣದ ಹೊಳೆಯನ್ನೇ ಹರಿಸಿದ ಸಿಜೆ ರಾಯ್; ಹನುಮಂತುಗೆ 35 ಲಕ್ಷದ ಪ್ಲ್ಯಾಟ್‌ ಕೊಟ್ಟ ಉದ್ಯಮಿ ; ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ -ಡಿಕೆಶಿ

Published

on

ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಸಿ.ಜೆ.ರಾಯ್ ಕೇವಲ ಉದ್ಯಮ ಮಾತ್ರವಲ್ಲದೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದರು. ಉದ್ಯಮಿಯಾಗಿದ್ದ ಸಿ.ಜೆ ರಾಯ್​​, ಸಾಕಷ್ಟು ಹಣ ಮಾತ್ರವಲ್ಲದೇ ಖ್ಯಾತಿಯನ್ನು ಗಳಿಸಿದ್ದರು. ಬಡ ಮಕ್ಕಳ ಶಿಕ್ಷಣಕ್ಕೆ (Education) ಸಹಾಯ ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್​ ಸಿ.ಜೆ ರಾಯ್​​ ಅವರು ಸಾವಿಗೆ ಶರಣಾಗಿದ್ದಾರೆ.


ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ (C.J. Roy) ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಸಿ.ಜೆ.ರಾಯ್ ಕೇವಲ ಉದ್ಯಮ ಮಾತ್ರವಲ್ಲದೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದರು.

ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ಸಿಜೆ ರಾಯ್, ಕಳೆದ ಸೀಸನ್ ನ ಬಿಗ್ ಬಾಸ್ ನಲ್ಲಿ ಕಾನ್ಫಿಡೆಂಟ್ ಗ್ರೂಪ್‌ನಿಂದ 50 ಲಕ್ಷ ರೂಪಾಯಿ ನೀಡಿದ್ದರು. ಕೇವಲ ಬಿಗ್ ಬಾಸ್ ಮಾತ್ರವಲ್ಲದೆ ಬೇರೆ ಬೇರೆ ರಿಯಾಲಿಟಿ ಶೋ ಗಳಿಗೂ ಕೂಡ ಸಿಜೆ ರಾಯ್ ಬಹಳಷ್ಟು ದೊಡ್ಡ ಮೊತ್ತದ ಬಹುಮಾನವನ್ನು ನೀಡಿದ್ದರು. ಬಿಗ್ ಬಾಸ್ 11ರ ಸಿಸನ್​ ವಿನ್ನರ್​​​ ಹನುಮಂತು ಗೆ 35ಲಕ್ಷ ರೂ ಮೌಲ್ಯದ ಪ್ಲಾಟ್​ನ್ನು ರಾಯ್​ ನೀಡಿದ್ದರು, ಇದಷ್ಟೇ ಅಲ್ಲದೇ 1 ಕೋಟಿ ಹಣವನ್ನ ಮಕ್ಕಳ ವಿದ್ಯಾಬ್ಯಾಸಕ್ಕೆ ಕೊಟ್ಟಿದ್ದರು. ಪರೀಕ್ಷೆಯಲ್ಲಿ 80 ಪರ್ಸೆಂಟ್ ಮಾರ್ಕ್ ಪಡೆದಿದ್ದ 201 ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಈ ಹಣವನ್ನು ಮೀಸಲಿಟ್ಟಿದ್ದರು. ಇತ್ತೀಚಿಗೆ ತಮಿಳಿನ ಐಡೆಂಟಿಟಿ ಸಿನಿಮಾಕ್ಕೆ ಬಂಡವಾಳ ಹೂಡಿದ್ದರು. ಸುದೀಪ್ ,ಯಶ್ ಸೇರಿದಂತೆ ಹಲವಾರು ಸ್ಟಾರ್ ನಟರ ಜೊತೆ ಸಿಜೆ ರಾಯ್ ಒಡೆನಾಟ ಹೊಂದಿದ್ದರು.

ಮಾರುತಿ 800 ಕಾರನ್ನು ಮರು ಖರೀದಿಸಿದ್ದ ರಾಯ್​!
ಕಾನ್ಫಿಡೆಂಟ್​​​ ಗ್ರೂಪ್​​ನ ಸಂಸ್ಥಾಪಕ, ಚೇರ್​ಮನ್​​ ಆಗಿದ್ದ ಸಿ.ಜೆ ರಾಯ್​ ಅವರು ದುಬಾರಿ ಕಾರುಗಳನ್ನು ಹೊಂದಿದ್ದಾರೆ. ಇವರ ಬಳಿ 12 ರೋಲ್ಸ್​ ರಾಯ್​​, ಬುಗಾಟಿ, ಬೆಂಟ್ಲಿ ಸೇರಿದಂತೆ ಹತ್ತು ಹಲವಾರು ದುಬಾರಿ ಕಾರುಗಳು ಗ್ಯಾರೇಜ್​ನಲ್ಲಿರಿಸಿದ್ದಾರೆ. ಇಷ್ಟೇಲ್ಲಾ ಕಾರುಗಳು ಇದ್ದರೂ ಕೂಡ ಸಿ.ಜೆ ರಾಯ್​ ಅವರು ತಮ್ಮ ಮೊದಲ ಕಾರನ್ನು ಹುಡುಕಿ ಮರು ಖರೀದಿಸಿದ್ದರು. ಕಾರನ್ನು ಹುಡುಕಲು ಸಹಾಯ ಮಾಡಿದ್ದ ವ್ಯಕ್ತಿಗಳಿಗೆ 10 ಲಕ್ಷ ಬಹುಮಾನ ಕೊಟ್ಟಿದ್ದರು.
ರಾಯ್ ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಅಂದ್ರೆ ಸುಮಾರು 25 ವರ್ಷ ವಯಸ್ಸಿನಲ್ಲಿರುವಾಗ ಮಾರುತಿ ಕಾರನ್ನು ಖರೀದಿಸಿದ್ದರು. ಆದ್ರೆ ಮಾರಾಟ ಮಾಡಲು ಮನಸ್ಸು ಇಲ್ಲದ್ದಿದ್ದರು ಮಾರಾಟ ಮಾಡಿದ್ದರು. ಆದ್ರೆ ಇತ್ತೀಚಿಗೆ ಆ ಕಾರನ್ನು ಮತ್ತೆ ಪಡೆಯಲು ರಾಯ್​ ಅವರು ನಿರ್ಧರಿಸಿದ್ದರು. ತಮ್ಮ ಮೊದಲ ಕಾರನ್ನು ವಾಪಸ್​​ ಪಡೆಯಲು ನಿರ್ಧರಿಸಿದ್ದ ರಾಯ್​ ಅವರು, ಮಾರುತಿ 800 ಕಾರಿನ ಸಂಖ್ಯೆ ಮತ್ತು ಹಳೆ ದಾಖಲೆ ಮೂಲಕ ಮತ್ತೆ ಕಾರನ್ನು ಪತ್ತೆ ಮಾಡಿದ್ದರು. ಬಳಿಕ 10 ಲಕ್ಷ ರೂ ಕೊಟ್ಟು ಖರೀದಿ ಮಾಡಿದ್ದರು. ಈ ಬಗ್ಗೆ ತಮ್ಮ ಇನ್​ಸ್ಟಾ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.

ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ -ಡಿಕೆಶಿ
ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ರಾಜ್ಯ ಸರಕಾರ ಗಂಭೀರವಾಗಿ ನಡೆದುಕೊಂಡಿದ್ದು ಈ ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ


ಸಿ.ಜೆ. ರಾಯ್ ಅವರು ಸಮಾಜದಲ್ಲಿ ಒಳ್ಳೆಯ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿ. ಅವರ ಬಗ್ಗೆ ಉತ್ತಮ ಅಭಿಪ್ರಾಯವಿತ್ತು. ಇಂತಹ ಘಟನೆ ನಡೆಯಬಾರದಿತ್ತು ಎಂದು ಡಿಸಿಎಂ ವಿಷಾದ ವ್ಯಕ್ತಪಡಿಸಿದರು. “ಒಬ್ಬ ಉದ್ಯಮಿ ಈ ಮಟ್ಟಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾದರೆ, ಅದರ ಹಿಂದೆ ಏನಿದೆ ಎಂಬುದನ್ನು ಗಂಭೀರವಾಗಿ ಪರಿಶೀಲಿಸಲೇಬೇಕು” ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ಅಧಿಕಾರಿಗಳ ತಂಡ ಕೇರಳದಿಂದ ಬಂದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಕೇಂದ್ರ ಸರ್ಕಾರದ ಗಮನಕ್ಕೂ ವಿಚಾರ ಹೋಗಿದ್ದು, ದೆಹಲಿಯಿಂದ ವರದಿ ಕೇಳಲಾಗಿದೆ ಎಂಬ ಮಾಹಿತಿಯೂ ಇದೆ.
ಐಟಿ ಇಲಾಖೆ ವಿಚಾರ ರಾಜಕೀಯವಾಗಿ ಸೂಕ್ಷ್ಮ ವಿಷಯವಾಗಿರುವುದರಿಂದ ಈ ಬಗ್ಗೆ ಮಾತನಾಡುವುದು ಕೆಲವೊಮ್ಮೆ ರಾಜಕೀಯ ಬಣ್ಣ ಪಡೆಯುತ್ತದೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. “ಐಟಿ ಬಗ್ಗೆ ಮಾತನಾಡಿದರೆ ರಾಜಕೀಯ ಆಗುತ್ತದೆ. ಆದರೆ ಇಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕು. ಯಾರ ಮೇಲಾದರೂ ಅನಗತ್ಯ ಕಿರುಕುಳ ನಡೆದಿದ್ದರೆ ಅದು ಖಂಡನೀಯ. ಈ ರೀತಿಯ ನಡೆ ಸರಿಯಲ್ಲ” ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ, ಸಂಪೂರ್ಣ ಪಾರದರ್ಶಕವಾಗಿ ತನಿಖೆ ನಡೆಸಲಿದೆ ಎಂಬ ಭರವಸೆಯನ್ನು ಡಿಸಿಎಂ ನೀಡಿದರು. “ಯಾರೇ ಆಗಿರಲಿ, ತಪ್ಪಿದ್ದರೆ ಅದು ಹೊರಬರಬೇಕು. ತಪ್ಪಿಲ್ಲದಿದ್ದರೆ ಅವರ ಮಾನ ಹಾನಿಯಾಗಬಾರದು. ಸತ್ಯವೇ ಅಂತಿಮ” ಎಂದು ಹೇಳಿದರು

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ‍್ಯಾಗಿಂಗ್ ಶಂಕೆ, ತನಿಖೆ ಆರಂಭ

Published

on

ಮಂಗಳೂರು ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ – ಕಪ್ಪು ಶೂ ಧರಿಸಿದ್ದಕ್ಕೆ ಜೂನಿಯರ್‌ಗಳ ಮೇಲೆ ಸೀನಿಯರ್‌ಗಳಿಂದ ಭೀಕರ ಹಲ್ಲೆ!

ಮಂಗಳೂರು, ಆಗಸ್ಟ್ 05: ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೇವಲ ಕಪ್ಪು ಬಣ್ಣದ ಶೂ ಧರಿಸಿದ್ದರೆಂಬ ಸಣ್ಣ ಕಾರಣಕ್ಕೆ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ ಗುಂಪು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಿರಿಯ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ವಿವರ:

ನಗರದ ಗುಜ್ಜರಕೇರೆ ಪ್ರದೇಶದಲ್ಲಿರುವ ಚಹಾ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಪ್ರಥಮ ವರ್ಷದ ಆದರ್ಶ್ ಮತ್ತು ಜಾಸಿನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಿರಿಯ ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಹಾಕಿಕೊಂಡು ಬಂದಿದ್ದನ್ನೇ ನೆಪವಾಗಿಸಿಕೊಂಡ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ವಿದ್ಯಾರ್ಥಿಗಳ ಗುಂಪು, ಅವರೊಂದಿಗೆ ಗಲಾಟೆ ಮತ್ತು ವಾಗ್ವಾದ ನಡೆಸಿದೆ. ಮಾತಿಗೆ ಮಾತು ಬೆಳೆದು ಸೀನಿಯರ್‌ಗಳು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಚುರುಕು:

ವಿಷಯ ತಿಳಿಯುತ್ತಿದ್ದಂತೆ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ಆರು ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಕೇವಲ ವೈಯಕ್ತಿಕ ವೈಷಮ್ಯದಿಂದ ನಡೆದ ಗಲಾಟೆಯೋ ಅಥವಾ ರ‍್ಯಾಗಿಂಗ್‌ಗೆ ಸಂಬಂಧಿಸಿದ ಘಟನೆಯೋ ಎಂಬ ಕುರಿತು ಎಲ್ಲಾ ಆಯಾಮಗಳಲ್ಲೂ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ.

ಪೋಷಕರಲ್ಲಿ ಆತಂಕ – ಸಾರ್ವಜನಿಕರ ಆಕ್ರೋಶ:

ನಗರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತೆ ರ‍್ಯಾಗಿಂಗ್ ಭೂತ ತಲೆಎತ್ತುತ್ತಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲ್ಲೆ ನಡೆಸಿದ ಆರೋಪಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಪೋಷಕರು ತೀವ್ರವಾಗಿ ಆಗ್ರಹಿಸಿದ್ದಾರೆ

Continue Reading

arrest

ಪುತ್ತೂರು: ಅಕ್ರಮ ಮರ ಸಾಗಾಟ ಯತ್ನ ವಿಫಲ; 10 ಲಕ್ಷ ರೂ. ಮೌಲ್ಯದ ಸೊತ್ತು ವಶ, ಆರೋಪಿ ಬಂಧನ

Published

on

ಪುತ್ತೂರು: ಸಕಲೇಶಪುರದಿಂದ ಮಂಗಳೂರಿಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಸೋಮವಾರ (ಆಗಸ್ಟ್ 3) ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.

ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ (KA-13-AA-6340) ವಾಹನವನ್ನು ತಡೆದು ಪರಿಶೀಲಿಸಿದಾಗ, ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕ, ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಲೋಕೇಶ್ ಅವರ ಪುತ್ರ ರೋಹಿತ್ ಎಸ್. ಎಲ್. (20) ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಶಪಡಿಸಿಕೊಂಡ ವಾಹನ ಹಾಗೂ ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿದ್ದ ತಂಡ:

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ:ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್,ಗಸ್ತು ಅರಣ್ಯ ಪಾಲಕರಾದ ವಿನಯಚಂದ್ರ ಮತ್ತು ದೀಕ್ಷಾ ಕೆ.ಚಾಲಕ ಕಿಶೋರ್ ಕುಮಾರ್ ಕೆ. ಭಾಗವಹಿಸಿದ್ದರು.

ಮುಂದಿನ ತನಿಖೆ:

ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಸಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯಕ್ ಅವರ ನಿರ್ದೇಶನದಂತೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Trending

Copyright © 2025 Deevatige

error: Content is protected !!