Connect with us

crime

ಕನ್ನಡ ರಿಯಾಲಿಟಿ ಶೋಗಳಿಗೆ ಹಣದ ಹೊಳೆಯನ್ನೇ ಹರಿಸಿದ ಸಿಜೆ ರಾಯ್; ಹನುಮಂತುಗೆ 35 ಲಕ್ಷದ ಪ್ಲ್ಯಾಟ್‌ ಕೊಟ್ಟ ಉದ್ಯಮಿ ; ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ -ಡಿಕೆಶಿ

Published

on

ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಸಿ.ಜೆ.ರಾಯ್ ಕೇವಲ ಉದ್ಯಮ ಮಾತ್ರವಲ್ಲದೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದರು. ಉದ್ಯಮಿಯಾಗಿದ್ದ ಸಿ.ಜೆ ರಾಯ್​​, ಸಾಕಷ್ಟು ಹಣ ಮಾತ್ರವಲ್ಲದೇ ಖ್ಯಾತಿಯನ್ನು ಗಳಿಸಿದ್ದರು. ಬಡ ಮಕ್ಕಳ ಶಿಕ್ಷಣಕ್ಕೆ (Education) ಸಹಾಯ ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್​ ಸಿ.ಜೆ ರಾಯ್​​ ಅವರು ಸಾವಿಗೆ ಶರಣಾಗಿದ್ದಾರೆ.


ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ (C.J. Roy) ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಸಿ.ಜೆ.ರಾಯ್ ಕೇವಲ ಉದ್ಯಮ ಮಾತ್ರವಲ್ಲದೆ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದರು.

ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ಸಿಜೆ ರಾಯ್, ಕಳೆದ ಸೀಸನ್ ನ ಬಿಗ್ ಬಾಸ್ ನಲ್ಲಿ ಕಾನ್ಫಿಡೆಂಟ್ ಗ್ರೂಪ್‌ನಿಂದ 50 ಲಕ್ಷ ರೂಪಾಯಿ ನೀಡಿದ್ದರು. ಕೇವಲ ಬಿಗ್ ಬಾಸ್ ಮಾತ್ರವಲ್ಲದೆ ಬೇರೆ ಬೇರೆ ರಿಯಾಲಿಟಿ ಶೋ ಗಳಿಗೂ ಕೂಡ ಸಿಜೆ ರಾಯ್ ಬಹಳಷ್ಟು ದೊಡ್ಡ ಮೊತ್ತದ ಬಹುಮಾನವನ್ನು ನೀಡಿದ್ದರು. ಬಿಗ್ ಬಾಸ್ 11ರ ಸಿಸನ್​ ವಿನ್ನರ್​​​ ಹನುಮಂತು ಗೆ 35ಲಕ್ಷ ರೂ ಮೌಲ್ಯದ ಪ್ಲಾಟ್​ನ್ನು ರಾಯ್​ ನೀಡಿದ್ದರು, ಇದಷ್ಟೇ ಅಲ್ಲದೇ 1 ಕೋಟಿ ಹಣವನ್ನ ಮಕ್ಕಳ ವಿದ್ಯಾಬ್ಯಾಸಕ್ಕೆ ಕೊಟ್ಟಿದ್ದರು. ಪರೀಕ್ಷೆಯಲ್ಲಿ 80 ಪರ್ಸೆಂಟ್ ಮಾರ್ಕ್ ಪಡೆದಿದ್ದ 201 ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಈ ಹಣವನ್ನು ಮೀಸಲಿಟ್ಟಿದ್ದರು. ಇತ್ತೀಚಿಗೆ ತಮಿಳಿನ ಐಡೆಂಟಿಟಿ ಸಿನಿಮಾಕ್ಕೆ ಬಂಡವಾಳ ಹೂಡಿದ್ದರು. ಸುದೀಪ್ ,ಯಶ್ ಸೇರಿದಂತೆ ಹಲವಾರು ಸ್ಟಾರ್ ನಟರ ಜೊತೆ ಸಿಜೆ ರಾಯ್ ಒಡೆನಾಟ ಹೊಂದಿದ್ದರು.

ಮಾರುತಿ 800 ಕಾರನ್ನು ಮರು ಖರೀದಿಸಿದ್ದ ರಾಯ್​!
ಕಾನ್ಫಿಡೆಂಟ್​​​ ಗ್ರೂಪ್​​ನ ಸಂಸ್ಥಾಪಕ, ಚೇರ್​ಮನ್​​ ಆಗಿದ್ದ ಸಿ.ಜೆ ರಾಯ್​ ಅವರು ದುಬಾರಿ ಕಾರುಗಳನ್ನು ಹೊಂದಿದ್ದಾರೆ. ಇವರ ಬಳಿ 12 ರೋಲ್ಸ್​ ರಾಯ್​​, ಬುಗಾಟಿ, ಬೆಂಟ್ಲಿ ಸೇರಿದಂತೆ ಹತ್ತು ಹಲವಾರು ದುಬಾರಿ ಕಾರುಗಳು ಗ್ಯಾರೇಜ್​ನಲ್ಲಿರಿಸಿದ್ದಾರೆ. ಇಷ್ಟೇಲ್ಲಾ ಕಾರುಗಳು ಇದ್ದರೂ ಕೂಡ ಸಿ.ಜೆ ರಾಯ್​ ಅವರು ತಮ್ಮ ಮೊದಲ ಕಾರನ್ನು ಹುಡುಕಿ ಮರು ಖರೀದಿಸಿದ್ದರು. ಕಾರನ್ನು ಹುಡುಕಲು ಸಹಾಯ ಮಾಡಿದ್ದ ವ್ಯಕ್ತಿಗಳಿಗೆ 10 ಲಕ್ಷ ಬಹುಮಾನ ಕೊಟ್ಟಿದ್ದರು.
ರಾಯ್ ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಅಂದ್ರೆ ಸುಮಾರು 25 ವರ್ಷ ವಯಸ್ಸಿನಲ್ಲಿರುವಾಗ ಮಾರುತಿ ಕಾರನ್ನು ಖರೀದಿಸಿದ್ದರು. ಆದ್ರೆ ಮಾರಾಟ ಮಾಡಲು ಮನಸ್ಸು ಇಲ್ಲದ್ದಿದ್ದರು ಮಾರಾಟ ಮಾಡಿದ್ದರು. ಆದ್ರೆ ಇತ್ತೀಚಿಗೆ ಆ ಕಾರನ್ನು ಮತ್ತೆ ಪಡೆಯಲು ರಾಯ್​ ಅವರು ನಿರ್ಧರಿಸಿದ್ದರು. ತಮ್ಮ ಮೊದಲ ಕಾರನ್ನು ವಾಪಸ್​​ ಪಡೆಯಲು ನಿರ್ಧರಿಸಿದ್ದ ರಾಯ್​ ಅವರು, ಮಾರುತಿ 800 ಕಾರಿನ ಸಂಖ್ಯೆ ಮತ್ತು ಹಳೆ ದಾಖಲೆ ಮೂಲಕ ಮತ್ತೆ ಕಾರನ್ನು ಪತ್ತೆ ಮಾಡಿದ್ದರು. ಬಳಿಕ 10 ಲಕ್ಷ ರೂ ಕೊಟ್ಟು ಖರೀದಿ ಮಾಡಿದ್ದರು. ಈ ಬಗ್ಗೆ ತಮ್ಮ ಇನ್​ಸ್ಟಾ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.

ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ -ಡಿಕೆಶಿ
ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದ ಕುರಿತು ರಾಜ್ಯ ಸರಕಾರ ಗಂಭೀರವಾಗಿ ನಡೆದುಕೊಂಡಿದ್ದು ಈ ಸಾವಿನ ಹಿಂದಿರುವ ಸತ್ಯಾಂಶವನ್ನು ಜನತೆಗೆ ತಿಳಿಸಲು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ


ಸಿ.ಜೆ. ರಾಯ್ ಅವರು ಸಮಾಜದಲ್ಲಿ ಒಳ್ಳೆಯ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿ. ಅವರ ಬಗ್ಗೆ ಉತ್ತಮ ಅಭಿಪ್ರಾಯವಿತ್ತು. ಇಂತಹ ಘಟನೆ ನಡೆಯಬಾರದಿತ್ತು ಎಂದು ಡಿಸಿಎಂ ವಿಷಾದ ವ್ಯಕ್ತಪಡಿಸಿದರು. “ಒಬ್ಬ ಉದ್ಯಮಿ ಈ ಮಟ್ಟಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾದರೆ, ಅದರ ಹಿಂದೆ ಏನಿದೆ ಎಂಬುದನ್ನು ಗಂಭೀರವಾಗಿ ಪರಿಶೀಲಿಸಲೇಬೇಕು” ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆ ಅಧಿಕಾರಿಗಳ ತಂಡ ಕೇರಳದಿಂದ ಬಂದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಕೇಂದ್ರ ಸರ್ಕಾರದ ಗಮನಕ್ಕೂ ವಿಚಾರ ಹೋಗಿದ್ದು, ದೆಹಲಿಯಿಂದ ವರದಿ ಕೇಳಲಾಗಿದೆ ಎಂಬ ಮಾಹಿತಿಯೂ ಇದೆ.
ಐಟಿ ಇಲಾಖೆ ವಿಚಾರ ರಾಜಕೀಯವಾಗಿ ಸೂಕ್ಷ್ಮ ವಿಷಯವಾಗಿರುವುದರಿಂದ ಈ ಬಗ್ಗೆ ಮಾತನಾಡುವುದು ಕೆಲವೊಮ್ಮೆ ರಾಜಕೀಯ ಬಣ್ಣ ಪಡೆಯುತ್ತದೆ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. “ಐಟಿ ಬಗ್ಗೆ ಮಾತನಾಡಿದರೆ ರಾಜಕೀಯ ಆಗುತ್ತದೆ. ಆದರೆ ಇಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕು. ಯಾರ ಮೇಲಾದರೂ ಅನಗತ್ಯ ಕಿರುಕುಳ ನಡೆದಿದ್ದರೆ ಅದು ಖಂಡನೀಯ. ಈ ರೀತಿಯ ನಡೆ ಸರಿಯಲ್ಲ” ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ, ಸಂಪೂರ್ಣ ಪಾರದರ್ಶಕವಾಗಿ ತನಿಖೆ ನಡೆಸಲಿದೆ ಎಂಬ ಭರವಸೆಯನ್ನು ಡಿಸಿಎಂ ನೀಡಿದರು. “ಯಾರೇ ಆಗಿರಲಿ, ತಪ್ಪಿದ್ದರೆ ಅದು ಹೊರಬರಬೇಕು. ತಪ್ಪಿಲ್ಲದಿದ್ದರೆ ಅವರ ಮಾನ ಹಾನಿಯಾಗಬಾರದು. ಸತ್ಯವೇ ಅಂತಿಮ” ಎಂದು ಹೇಳಿದರು

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

crime

ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

Published

on

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

  • ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
  • ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
  • ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:

ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

Continue Reading

crime

ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ

Published

on

ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು

ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.

Continue Reading

crime

ಸಕಲೇಶಪುರ ಲಾಡ್ಜ್‌ನಲ್ಲಿ ಕರಾಳ ರಾತ್ರಿ: ಬಾತ್‌ರೂಮ್‌ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರಣೆ:

ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್‌ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್‌ನಲ್ಲಿ ಮೂವರು ಒಂದೇ ರೂಮ್‌ನಲ್ಲಿ ತಂಗಿದ್ದರು.

ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್‌ನ ಬಾತ್‌ರೂಮ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).

ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾತ್‌ರೂಮ್‌ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.

Continue Reading

Trending

Copyright © 2025 Deevatige

error: Content is protected !!