crime
ಅನ್ಯ ಸಮುದಾಯದವನಿಂದ ತಂಗಿ ಗರ್ಭಿಣಿ ? ;ವಿಜಯನಗರದ ತ್ರಿವಳಿ ಕೊಲೆಯ ಕಾರಣ ಬಯಲು; ಕುಟುಂಬವನ್ನೇ ಸರ್ವನಾಶ ಮಾಡಿದ ಅಣ್ಣ
ವಿಜಯನಗರ: ವಿಜಯನಗರದಲ್ಲಿ ನಡೆದಿದ್ದ ಭಯಾನಕ ತ್ರಿವಳಿ ಕೊಲೆ ಪ್ರಕರಣದ ಅಸಲಿ ಹಾಗೂ ರೋಚಕ ಕಾರಣ ಇದೀಗ ಬಯಲಾಗಿದೆ. ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಾನ್ಯ ಸಮುದಾಯದವನೊಂದಿನ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ ಮಾಡಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಅಕ್ಷಯ್, ಇದು ಕೇವಲ ದ್ವೇಷದ ಕೊಲೆಯಲ್ಲ, ಕುಟುಂಬದ ಗೌರವ ಉಳಿಸಿಕೊಳ್ಳಲು ಮಾಡಿದ ಕೃತ್ಯ ಎಂದು ಹೇಳಿಕೊಂಡಿದ್ದಾನೆ.

ತಂಗಿಯ ಪ್ರಿಯತಮ ಅನ್ಯ ಸಮುದಾಯಕ್ಕೆ ಸೇರಿದವ
ತಂಗಿ ಅಮೃತ (18) ಮೂರು ತಿಂಗಳ ಗರ್ಭಿಣಿ ಎಂಬ ವಿಚಾರ ತಿಳಿದ ನಂತರ ಆತ ತೀವ್ರ ಕೋಪಗೊಂಡಿದ್ದ. ತಂಗಿಯ ಪ್ರಿಯತಮ ಅನ್ಯ ಸಮುದಾಯಕ್ಕೆ ಸೇರಿದವನಾಗಿರುವುದೂ ಅಕ್ಷಯ್ ಕೋಪಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಅಕ್ಷಯ್ ತಂಗಿಯ ಮೊಬೈಲ್ ಪರಿಶೀಲಿಸಿದ ವೇಳೆ ಪಿಯುಸಿ ಓದುತ್ತಿದ್ದ ಯುವಕನೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿರುವುದು ಗೊತ್ತಾಗಿದೆ. ಬಳಿಕ ಆ ಯುವಕನಿಗೆ ಕರೆ ಮಾಡಿದ ಅಕ್ಷಯ್, ಇಬ್ಬರ ನಡುವೆ ಪ್ರೇಮ ಸಂಬಂಧ ಇರುವುದನ್ನು ತಿಳಿದುಕೊಂಡಿದ್ದ. ಇದರಿಂದ ಕೋಪಗೊಂಡ ಅಕ್ಷಯ್ ತಂಗಿಗೆ ಹಲ್ಲೆ ಮಾಡಿ ಬೆದರಿಸಿದ್ದಾನೆ. ಬಳಿಕ ಅಮೃತ ‘ನಾನು ಪ್ರೀತಿ ಮಾಡುವುದಿಲ್ಲ’ ಎಂದು ಕ್ಷಮೆ ಕೇಳಿದ್ದರೂ, ಜನವರಿ 26ರಂದು ಅವಳು ಗರ್ಭಿಣಿಯಾಗಿದ್ದಾಳೆ ಎಂಬ ವಿಚಾರ ಹೊರಬಿದ್ದಿದೆ. ಈ ವಿಷಯವನ್ನು ತಾಯಿ ಅಕ್ಷಯ್ಗೆ ತಿಳಿಸಿದ್ದರಿಂದ ಆತ ಇನ್ನಷ್ಟು ಕೋಪಗೊಂಡಿದ್ದಾನೆ. ಗರ್ಭಪಾತ ಮಾಡಿಸೋಣ ಎಂದು ಅಕ್ಷಯ್ ಹೇಳಿದ್ದರೂ, ತಂದೆ-ತಾಯಿ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ತನ್ನ ಮಾತಿಗೆ ಬೆಲೆ ಇಲ್ಲವೆಂದು ಭಾವಿಸಿದ ಅಕ್ಷಯ್, ತಂಗಿಯನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದಾನೆ.

ಒಂದೊಂದಾಗಿ ನಡೆಯಿತು ಭೀಕರ ಹತ್ಯೆ
ಪೊಲೀಸ್ ತನಿಖೆ ವೇಳೆ ದೊರೆತಿರುವ ಮಾಹಿತಿ ಪ್ರಕಾರ, ಜನವರಿ 26ರಂದು ಮೊದಲು ಅಕ್ಷಯ್ ತನ್ನ ತಾಯಿಯನ್ನು ಕೊಂದಿದ್ದಾನೆ. ಕೊಲೆ ಬಳಿಕ ಸ್ನಾನ ಮಾಡಿ ರಕ್ತಸಿಕ್ತ ಬಟ್ಟೆಗಳನ್ನು ನಾಶಪಡಿಸಿದ್ದಾನೆ. ಸಂಜೆ ತಂಗಿ ಮನೆಗೆ ಬಂದಾಗ ಆಕೆಯನ್ನೂ ಹತ್ಯೆ ಮಾಡಿ, ತಾಯಿಯ ಮೃತದೇಹದ ಪಕ್ಕದಲ್ಲೇ ಮಲಗಿಸಿದ್ದಾನೆ. ಮತ್ತೆ ಸ್ನಾನ ಮಾಡಿ ಅದೇ ಬಟ್ಟೆ ಧರಿಸಿದ್ದಾನೆ. ರಾತ್ರಿ 10.30ರ ಸುಮಾರಿಗೆ ಕುಡಿದು ಮನೆಗೆ ಬಂದ ತಂದೆ ಸೋಫಾದ ಮೇಲೆ ಕೂತಿದ್ದಾಗ, ಅಕ್ಷಯ್ ಅವರ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ದಾನೆ. ತಂದೆಯ ಮೃತದೇಹವನ್ನೂ ತಾಯಿ ಹಾಗೂ ತಂಗಿಯ ಪಕ್ಕ ಇಟ್ಟಿದ್ದಾನೆ. ನಂತರ ಆ ಕೊಠಡಿಗೆ ಬೀಗ ಹಾಕಿ, ಮತ್ತೆ ಸ್ನಾನ ಮಾಡಿ ಬೇರೆ ಬಟ್ಟೆ ಧರಿಸಿದ್ದಾನೆ.
ಮೂರು ಕೊಲೆಗಳ ಬಳಿಕ ತಾಯಿ ಹಾಗೂ ತಂಗಿಯ ಮೊಬೈಲ್ಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಬಂದ ಅಕ್ಷಯ್ (ಆತನ ಮೊಬೈಲ್ ಮನೆಯಲ್ಲೇ ಬಿಟ್ಟುಬಂದಿದ್ದ), ಜಯದೇವ ಆಸ್ಪತ್ರೆ ಬಳಿ ಫೋಟೋ ತೆಗೆದು ತನ್ನ ಮೊಬೈಲ್ಗೆ ಕಳುಹಿಸಿದ್ದಾನೆ. ನಂತರ ಆ ಮೊಬೈಲ್ಗಳನ್ನು ಆಸ್ಪತ್ರೆ ಸಮೀಪದ ಡಸ್ಟ್ಬಿನ್ನಲ್ಲಿ ಎಸೆದಿದ್ದಾನೆ. ಈ ಸಂದರ್ಭದಲ್ಲಿ ಅಕ್ಷಯ್ ತನ್ನ ಮಾವ ವಸಂತನನ್ನು ಭೇಟಿ ಮಾಡಿ ಎಲ್ಲ ವಿಚಾರ ತಿಳಿಸಿದ್ದಾನೆ. ಶವಗಳನ್ನು ಹೂತು ‘ಮಿಸ್ಸಿಂಗ್’ ನಾಟಕ ಆಡೋಣ ಎಂಬ ಐಡಿಯಾ ಮಾವನೇ ಕೊಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರಂತೆ ಜನವರಿ 27ರ ರಾತ್ರಿ ಕೊಟ್ಟೂರಿಗೆ ವಾಪಸ್ ಆಗಿದ್ದ ಅಕ್ಷಯ್, ಟೈಲ್ಸ್ ಕಟರ್ ಹಾಗೂ ಡ್ರಿಲ್ಲಿಂಗ್ ಯಂತ್ರ ತರಿಸಿ, 5×5 ಅಳತೆಯ ಗುಂಡಿ ತೋಡಿ ಮೂವರ ಶವಗಳನ್ನು ಹೂತಿದ್ದಾನೆ.

ದೃಶ್ಯಂ ಸಿನಿಮಾ ನೋಡಿ ಅದರಂತೆ ಎಸ್ಕೇಪ್ ಆಗಲು ಪ್ಲಾನ್
ಮೂವರನ್ನು ಕೊಂದ ಅಕ್ಷಯ್ ರಾತ್ರಿಯಿಡೀ ತಪ್ಪಿಸಿಕೊಳ್ಳಲು ಪ್ಲಾನ್ ಮಾಡ್ತಾ ಟಿವಿ ನೋಡ್ತಿದ್ದ ಎನ್ನಲಾಗ್ತಿದೆ. ದೃಶ್ಯಂ ಸಿನಿಮಾ ನೋಡಿ ಅದರಂತೆ ಎಸ್ಕೇಪ್ ಆಗಲು ಪ್ಲಾನ್ ಮಾಡಿದ್ದನಂತೆ. ಪೊಲೀಸ್ರ ತನಿಖೆ ವೇಳೆ ಒಂದೊಂದೇ ವಿಚಾರಗಳು ಬಯಲಾಗಿದೆ. ಪೊಲೀಸರನ್ನೇ ಡೈವರ್ಟ್ ಮಾಡೋಕೆ ಮುಂದಾದ ಅಕ್ಷಯ್ ಅಪ್ಪ-ಅಮ್ಮ ಹಾಗೂ ತಂಗಿ ಮಿಸ್ಸಿಂಗ್ ಆಗಿದ್ದಾರೆ ಎಂದು ಕಂಪ್ಲೇಂಟ್ ಕೊಟ್ಟಿದ್ದಾನೆ. ಆದರೆ ಬೆಂಗಳೂರು ಪೊಲೀಸರಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ನಾಟಕ ಬಯಲಾಗಿದ್ದು, ಕೊನೆಗೆ ಅಕ್ಷಯ್ ಮತ್ತು ವಸಂತನನ್ನು ಬಂಧಿಸಲಾಗಿದೆ
ತಂಗಿ ಪ್ರಿಯಕರನನ್ನು ಕೊಂದನಾ?
ಯುವತಿಯ ಪ್ರಿಯಕರನನ್ನೂ ಕೊಲೆ ಮಾಡಿದ್ದಾನಾ..? ಎಂದು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಪೊಲೀಸರ ಜೊತೆ ಸೇರಿ ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಂಗಿಯ ಪ್ರಿಯಕರನನ್ನೂ ಕೊಲೆ ಮಾಡಿರಬಹುದು ಅನ್ನೋ ಅನುಮಾನ ವ್ಯಕ್ತವಾಗಿದೆ. ತನಿಖೆ ವೇಳೆ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗ್ತಿದೆ.
Belthangady
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ: ಬೆಳ್ತಂಗಡಿಯಲ್ಲಿ ಸಿಐಡಿ ತನಿಖೆ ಆರಂಭ
ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಅತ್ಯಾಚಾರ ಹಾಗೂ ಸುಲಿಗೆ ಆರೋಪದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಚುರುಕುಗೊಳಿಸಿದೆ. ಇಂದು ಸಿಐಡಿ ಅಧಿಕಾರಿಗಳ ತಂಡ ಬೆಳ್ತಂಗಡಿಗೆ ಆಗಮಿಸಿ ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸುವ ಮೂಲಕ ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಪ್ರಕರಣದ ಹಿನ್ನೆಲೆ:
ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ಪ್ರಾಂಶುಪಾಲರೊಬ್ಬರು ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 2020 ರಿಂದ 2023ರ ಅವಧಿಯಲ್ಲಿ ಜಮೀನು ವಿವಾದವೊಂದರ ವಿಚಾರಣೆಯ ನೆಪದಲ್ಲಿ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಕೇಸ್ ಮರುಚಾಲನೆ ಮಾಡುವ ಬೆದರಿಕೆ ಹಾಕಿ ಸುಮಾರು 16 ಲಕ್ಷ ರೂ. ನಗದು, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮನೆ ನಿರ್ಮಾಣಕ್ಕಾಗಿ ತೇಗದ ಮರದ ದಿಮ್ಮಿಗಳನ್ನು ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಸೂಚನೆಯಂತೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈಗಾಗಲೇ ಸಂದೇಶ್ ಪಿ.ಜಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 25ರಂದು ವೇಣೂರು ಪೊಲೀಸ್ ಠಾಣೆಯಿಂದ ಬೆಂಗಳೂರು ಸಿಐಡಿ ಕಚೇರಿಗೆ ಪ್ರಕರಣದ ದಾಖಲೆಗಳನ್ನು ಹಸ್ತಾಂತರಿಸಿದ್ದು, ಸಿಐಡಿ ಡಿವೈಎಸ್ಪಿ ನೇತೃತ್ವದ ತಂಡವು ಮಾರ್ಚ್ 31ರಂದು ಸಂಜೆ ನಾರಾವಿ ಐಬಿಗೆ ಆಗಮಿಸಿದೆ. ಇಂದು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಸಿಐಡಿ ತಂಡವು ಸಂತ್ರಸ್ತೆಯ ಹೇಳಿಕೆ ಪಡೆಯುವುದು, ಸ್ಥಳಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹಣೆಯ ಮೇಲೆ ತನಿಖೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸಂತ್ರಸ್ತರು ಇದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಸಲಿದೆ.
accident
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು; ಚಾಲಕ, ನಿರ್ವಾಹಕನ ವಿರುದ್ಧ ಕೇಸ್ ದಾಖಲು
ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸಹೋದರಿಯರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಮಾರ್ಚ್ 31ರಂದು ಬೆಳಗ್ಗೆ ಕಳಿಯ ಗ್ರಾಮದ ನಿವಾಸಿಗಳಾದ ಚರಿಷ್ಮಾ (17) ಮತ್ತು ಚದ್ಮಕಾ (15) ಎಂಬ ಸಹೋದರಿಯರು ಎಂದಿನಂತೆ ಕಾಲೇಜಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಕಳಿಯದಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿತ್ತು. ಗೇರುಕಟ್ಟೆ ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಬಾಗಿಲು ದಿಢೀರನೆ ತೆರೆದುಕೊಂಡಿದ್ದು, ಬಾಗಿಲ ಬಳಿಯಿದ್ದ ಇಬ್ಬರೂ ವಿದ್ಯಾರ್ಥಿನಿಯರು ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ರಸ್ತೆಗೆ ಬಿದ್ದ ಪರಿಣಾಮ ಇಬ್ಬರೂ ಸಹೋದರಿಯರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಜಾಗರೂಕತೆಯ ಆರೋಪ: ಬಸ್ ಚಾಲಕ ದಯಾನಂದ ಅವರು ವಾಹನವನ್ನು ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದರು ಮತ್ತು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯ ಲೋಪವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಸೆಕ್ಷನ್ 281: ಅಜಾಗರೂಕ ಚಾಲನೆ. ಸೆಕ್ಷನ್ 125: ಜೀವಕ್ಕೆ ಅಪಾಯ ತರುವಂತಹ ನಿರ್ಲಕ್ಷ್ಯದ ಕೃತ್ಯ.ಸೆಕ್ಷನ್ 125(a): ನಿರ್ಲಕ್ಷ್ಯದಿಂದ ಗಾಯ ಉಂಟುಮಾಡುವುದು.ಸೆಕ್ಷನ್ಗಳ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ:
ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತೆಯ ಕೊರತೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
crime
ಪೊಲೀಸ್ ಭೇಟೆ: ದೇವಸ್ಥಾನದ ಕಳ್ಳ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಮತ್ತು ಉರ್ವಾ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೇವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ್ದ ಅಂತರರಾಜ್ಯ ಕಳ್ಳ ಹಾಗೂ ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಂಜಾರು ದೇವಸ್ಥಾನದ ಹುಂಡಿ ಕಳವು: ತಮಿಳುನಾಡು ಮೂಲದ ಆರೋಪಿ ಅರೆಸ್ಟ್
ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ಮೂರು ಕಾಣಿಕೆ ಹುಂಡಿಗಳಿಂದ ಸುಮಾರು ರೂ. 25,000/- ಹಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಬಜಪೆ ಪೊಲೀಸರು ಮಾರ್ಚ್ 31ರಂದು ಅಂತರರಾಜ್ಯ ಕಳ್ಳ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂಬಾತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿಯಾದ ಈತ, ರೈಲಿನಲ್ಲಿ ಬಂದು ಕಳ್ಳತನ ನಡೆಸಿ ತಮಿಳುನಾಡಿಗೆ ಪರಾರಿಯಾಗುತ್ತಿದ್ದ. ಈತ ಉಡುಪಿಯ ಬ್ರಹ್ಮಾವರ ಠಾಣೆಯ ಕಳವು ಪ್ರಕರಣ ಹಾಗೂ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಬಜಪೆ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.
9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮುಂಬೈನಲ್ಲಿ ಸೆರೆ
ಮತ್ತೊಂದು ಪ್ರಕರಣದಲ್ಲಿ, ದರೋಡೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (LPC) ವಾರಂಟ್ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಶೋಕ ನಗರದ ನಿವಾಸಿ ಸುಹಾನ್ @ ಸೋನು (33) ಬಂಧಿತ ಆರೋಪಿ.
ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಮಾರ್ಚ್ 29ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಬೀಡುಬಿಟ್ಟಿದ್ದ ಆರೋಪಿಯನ್ನು ಉರ್ವಾ ಎಎಸ್ಐ ಲಕ್ಷ್ಮಣ್ ಮತ್ತು ತಂಡ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಈತನ ಮೇಲೆ ಉರ್ವಾ ಮತ್ತು ಮಂಗಳೂರು ಉತ್ತರ ಠಾಣೆಗಳಲ್ಲಿ ದರೋಡೆ ಸಂಚು ಹಾಗೂ ಹಲ್ಲೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರಕರಣಗಳು ದಾಖಲಾಗಿವೆ.
ಬಂಧಿತ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
