crime
ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
ಪತಿ ಇಲ್ಲದ ಸಮಯಕ್ಕೆ ಬೆಡ್ ರೂಮ್ಗೆ ನುಗ್ಗಿ ಹಿಂದಿನಿಂದ ಗಟ್ಟಿಯಾಗಿ ತಬ್ಬಿಕೊಂಡ ಕಾಮುಕ , ಅತ್ಯಾಚಾರ ನಡೆಸಲು ಮಂಚದ ಮೇಲೆ ದೂಡಿದ, ವಿರೋಧಿಸಿದ್ದಕ್ಕೆ ಮುಖದ ಮೇಲೆ ಪರಚಿ ಮೂಗು ಕಚ್ಚಿದ, ಸಮಸ್ಯೆ ಗಂಭೀರವಾಗಬಹುದೆಂದು ಗಂಟಲಿನಲ್ಲಿ ಅದುಮಿ ಕೊಲೆ ಮಾಡಲು ಯತ್ನಿಸಿದ, ಕಣ್ಣಾರೆ ನೋಡಿ ಜೋರಾಗಿ ಕೂಗುತ್ತಿರುವ ಮಗುವಿನ ಬೊಬ್ಬೆಗೆ ಗಡಿಬಿಡಿಗೊಂಡ ಕಾಮುಕ ಮಾವ…. ರಕ್ತಸಿಕ್ತವಾದ ಪತ್ನಿ ತನ್ನ ಸಂಕಷ್ಟವನ್ನು ಆಗತಾನೆ ಬಂದ ಪತಿಯೊಂದಿಗೆ ಹೇಳಿಕೊಂಡಾಗ ತಂದೆಗೆ ಸಾಥ್ ನೀಡಿದ ಪತಿ, ತನ್ನ ಪತಿಯ ತಂದೆಯೇ ಮಾಡಿದ ಘೋರ ಕೃತ್ಯಕ್ಕೆ ನಲುಗಿ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆ- ಇದು ಜಿಲ್ಲೆಯ ಗಡಿ ಪ್ರದೇಶ ಸಂಪಾಜೆಯಲ್ಲಿ ಕಾಮುಕ ಮಾವನೊಬ್ಬ ನಡೆಸಿದ ಹೃದಯವಿದ್ರಾವಕ ಘಟನೆ. ಕಾಮುಕ ಮಾವ ಮತ್ತು ವ್ಯಬಿಚಾರಿ ಮಾವನ ಕೃತ್ಯಕ್ಕೆ ಸಾಥ್ ನೀಡಿದ ಪತಿಗೂ ಬಿದ್ದಿದೆ ಕೇಸ್…

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೊಳ್ಳೆಮಾರು ನಿವಾಸಿ ಸಾಹಿತ್ಯ ರೈ ಅವರೇ ಅತ್ಯಾಚಾರ ಯತ್ನಕ್ಕೆ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದವರಾಗಿದ್ದು, ಕಾಮುಕ ಮಾವ ( ಪತಿಯ ತಂದೆ ) ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ನಿತ್ಯಾನಂದ ರೈ ಮತ್ತು ಪತಿ ಯಶಸ್ವಿ ಎನ್ ರೈ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ಫೆ.3ರಂದು ರಾತ್ರಿ ಘಟನೆ ನಡೆದಿದ್ದು, ತನ್ನ ಪತಿ ಆಸ್ಪತ್ರೆಗೆ ಸೇರಿಸಲು ನಿರಾಕರಿಸಿದ ಬೆನ್ನಲ್ಲೇ ರಾತ್ರಿ 11.30ಕ್ಕೆ ಕಾರಿನಲ್ಲಿ ಬಂದ ತಂದೆ ತಾಯಿ ರಕ್ತಸಿಕ್ತರಾಗಿ ಬಿದ್ದಿದ್ದ ಸಾಹಿತ್ಯರನ್ನು ತಕ್ಷಣ ಕರೆದುಕೊಂಡು ಹೋಗಿ ಸಂಪಾಜೆ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಂಟ್ವಾಳದ ಮಂಚಿಗೆ ಹೋಗುವ ದಾರಿ ಮದ್ಯೆ ಮನೆ ಸಮೀಪ ತಲುಪುತ್ತಲೇ ಉಸಿರಾಟಕ್ಕೆ ತೊಂದರೆಯಾಗಿದೆ. ತಕ್ಷಣ ನೇರವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಹಿತ್ಯ ಅವರನ್ನು ಯಶಸ್ವಿಯವರಿಗೆ ದಿನಾಂಕ 21.04.2021 ರಂದು ವಿವಾಹ ಮಾಡಿಕೊಡಲಾಗಿತ್ತು. ಅವರಿಗೆ ಮೂರುವರೆ ವರ್ಷದ ಒಂದು ಗಂಡು ಮಗು ಇದೆ. ಪತಿ ಮನೆ ಸಂಪಾಜೆ ಕಲ್ಲುಗುಂಡಿಯಲ್ಲಿ ಸಾಹಿತ್ಯ, ಅವರ ಪತಿ ಯಶಸ್ವಿ, ಮೂರುವರೆ ವರ್ಷದ ಮಗು ಹಾಗೂ ಪತಿಯ ತಂದೆ ನಿತ್ಯಾನಂದ ಸೇರಿ ನಾಲ್ಕು ಜನ ಮಾತ್ರ ವಾಸಿಸುತ್ತಿದ್ದಾರೆ. ಸಾಹಿತ್ಯ ಅವರ ವಿವಾಹವಾಗಿ ಸುಮಾರು ಮೂರು ವರ್ಷ ತನಕ ಉತ್ತಮ ರೀತಿಯ ಸಂಬಂಧದಲ್ಲಿ ಇದ್ದಿದ್ದು, ಆದರೆ ಅನಂತರ ಕ್ರಮೇಣವಾಗಿ ಮಾವ ನಿತ್ಯಾನಂದನ ಕಾಮುಕ ದೃಷ್ಠಿ ಸಾಹಿತ್ಯರವರ ಮೇಲೆ ಬಿದ್ದಿತ್ತು. ಹಲವು ಸಲ ಸಾಹಿತ್ಯರವರ ಮೈ ಮೇಲೆ ಮಾವ ಕೈ ಮಾಡಲು ಬಂದಿದ್ದು ಅದನ್ನು ವಿರೋಧಿಸಿದಕ್ಕಾಗಿ ಮಾವನು ನನ್ನ ಪತಿಯಲ್ಲಿ ನೀನು ಅವಳಿಗೆ ವಿಚ್ಛೇದನ ಕೊಡು ನಿನಗೆ ಬೇರೆ ಚಂದದ ಹುಡುಗಿಯನ್ನು ನೋಡಿ ವಿವಾಹ ಮಾಡಿಕೊಡುವುದಾಗಿ ಮಾತ್ರವಲ್ಲದೆ ಕೆಲವೊಮ್ಮೆ ಸಾಹಿತ್ಯರವರ ಗಂಡನಲ್ಲಿ ಅಂದರೆ ಅವರ ಮಗನಲ್ಲಿ ನೀನು ಅವಳನ್ನು ಕೊಲೆ ಮಾಡು ಹೆದರಬೇಡ, ಜೈಲಲ್ಲಿ ಬೇಕಿದ್ದರೆ ನಾನು ಕುಳಿತುಕೊಳ್ಳುತ್ತೇನೆ ಎಂದು ಸಹ ಮಾವ ಪ್ರಚೋದಿಸುತ್ತಲೇ ಇದ್ದಾರೆ ಎಂದು ಭಯಭೀತರಾಗಿ ಸಾಹಿತ್ಯ ತನ್ನ ತಂದೆ ತಾಯಿಯವರಲ್ಲಿ ಹೇಳಿಕೊಂಡಿದ್ದರು. ಆ ಸಮಯ ಸಾಹಿತ್ಯರವರನ್ನು ಸಮಾಧಾನ ಪಡಿಸುತ್ತಿದ್ದ ತಂದೆ ತಾಯಿಯು ನೀನು ಹೇಗಾದರೂ ಮಾಡಿ ಸಹಿಸಿಕೊಂಡು ಗಂಡನ ಮನೆಯಲ್ಲಿ ಜೀವನ ನಡೆಸು, ನೀನು ಗಂಡನನ್ನು ಬಿಟ್ಟು ಬಂದರೆ ಅದು ಕುಟುಂಬಕ್ಕೆ ಅವಮಾನ ಎಂದು ಸಾಹಿತ್ಯರವರಿಗೆ ಬುದ್ಧಿ ಮಾತು ಹೇಳುತ್ತಿದ್ದರು. ಅದೇ ರೀತಿ ಸಾಹಿತ್ಯ ಮಾವನ ಕಿರುಕುಳ ಮತ್ತು ಅಸಭ್ಯ ವರ್ತನೆಗಳ ಬಗ್ಗೆ ತನ್ನ ಪತಿಯಲ್ಲಿ ಹೇಳಿಕೊಂಡಾಗ ನೀನು ತಂದೆಯ ಮಾತನ್ನು ಪಾಲಿಸಬೇಕೆಂದು ಪತ್ನಿಗೆ ಜೋರು ಮಾಡಿ ಆಕೆಯ ಬಾಯಿ ಮುಚ್ಚಿಸುತ್ತಿದ್ದರು.

ಪತಿ ಯಶಸ್ವಿ ಎನ್ ರೈ ಸಂಪಾಜೆಪೇಟೆಯಲ್ಲಿ ಆಟೋಮೊಬೈಲ್ ಶಾಪ್ ಅನ್ನು ಹೊಂದಿದ್ದು ಅವರು ಪ್ರತಿದಿನ ರಾತ್ರಿ ಮನೆಗೆ ಬರುವಾಗ ಸುಮಾರು 9:00 ಯಾಗುತ್ತಿತ್ತು. ಫೆ.3ರಂದು ರಾತ್ರಿ ಸಾಹಿತ್ಯರವರ ಗಂಡನು ಬರುವ ಕೆಲವು ಸಮಯಗಳ ಮುಂಚೆ ಸಾಹಿತ್ಯ ತನ್ನ ಕೋಣೆಯಲ್ಲಿ ಬಟ್ಟೆಗಳನ್ನು ಮಡಚುತ್ತಿರುವ ಸಮಯ ಮಾವ ನಿತ್ಯಾನಂದ ಸಾಹಿತ್ಯಳ ಕೋಣೆಗೆ ಅಕ್ರಮ ಪ್ರವೇಶ ಮಾಡಿ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ. ಮುಂದುವರಿದು ಮಂಚಕ್ಕೆ ದೂಡಿ ಆಕೆಯ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದು, ಆ ಸಮಯ ಸಾಹಿತ್ಯ ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಯತ್ನಿಸಿದಾಗ ಕಾಮುಕ ಮಾವ ಆಕೆಯ ಗಂಟಲಲ್ಲಿ ಅಮುಕಿ ಹಿಡಿದಿದ್ದು ಪರಿಣಾಮವಾಗಿ ಗಂಟಲಿಗೆ ಮತ್ತು ಶರೀರದ ಭಾಗಗಳಿಗೆ ಪರಚಿತ ಗಾಯಗಳಾಗಿರುವುದಾಗಿದೆ ಮತ್ತು ಅದೇ ರೀತಿ ಮತ್ತೆ ಮತ್ತೆ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಕಾಮುಕ ಆಕೆಯ ಮೂಗಿಗೆ ಕಚ್ಚಿ ತೀವ್ರ ಸ್ವರೂಪದ ಗಾಯ ಉಂಟು ಮಾಡಿದ್ದು ಮೂಗಿನ ಗಾಯದಿಂದ ತೀವ್ರ ರಕ್ತ ಸುರಿದು ರೂಮಿನಲ್ಲಿಯೇ ಬಿದ್ದಿದ್ದರು. ಆ ವೇಳೆಗೆ ಆಕೆಯ ಎಳೆಯ ಮಗು ಈ ಕೃತ್ಯವನ್ನು ನೋಡಿ ಜೋರಾಗಿ ಕೂಗಿದ್ದು ಆ ಸಮಯ ಮಾವ ಮಗುವನ್ನು ಸಮಾಧಾನ ಪಡಿಸುವ ಸಲುವಾಗಿ ಮೇಲೆದ್ದಾಗ ಆಕೆ ಅಲ್ಲಿಂದ ಹೇಗಾದರೂ ಮಾಡಿ ತಪ್ಪಿಸಿ ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆ ಸಮಯ ಈ ದಿನ ನೀನು ಹೇಗೆ ತಪ್ಪಿಸಿಕೊಳ್ಳುತ್ತಿ ನೋಡುತ್ತೇನೆ ಮತ್ತು ನೀನು ಈ ಬಗ್ಗೆ ಹೊರಗೆ ಈ ವಿಷಯವನ್ನು ತಿಳಿಸಿದರೆ ನಿನ್ನನ್ನು ಕೊಲೆ ನಡೆಸದೆ ಬಿಡುವುದಿಲ್ಲ ಎಂದು ಮಾವ ಜೀವ ಬೆದರಿಕೆ ಹಾಕಿದಾಗ ನಿರ್ವಾಹವಿಲ್ಲದೆ ಮಗು ಮತ್ತು ಸಾಹಿತ್ಯ ಜೋರಾಗಿ ಕೂಗಿ ಬೊಬ್ಬೆ ಹಾಕಿದಾಗ ಮಗುವಿನತ್ತ ಹೋದ ಮಾವನ ಕಣ್ತಪ್ಪಿಸಿ ಸಾಹಿತ್ಯ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ಸಮಯ ಗಂಡನು ಮನೆಗೆ ಬಂದಿದ್ದು, ಹೊರಗಡೆ ವಿಚಾರವನ್ನು ಪತಿಯಲ್ಲಿ ತಿಳಿಸಿದಾಗ ಅವರು ತಂದೆಯ ಪರವಾಗಿ ಮಾತನಾಡಿ ನೀನು ಮನೆಯಿಂದ ಹೊರಗೆ ಯಾಕೆ ಬಂದಿದ್ದು ಎಂದು ಹೇಳಿ ಯಾವುದನ್ನೂ ಕೇಳಿಸಿಕೊಳ್ಳದೆ ಸಾಹಿತ್ಯಾಳಿಗೆ ಹಿಗ್ಗಾ ಮುಗ್ಗಾ ಬೈದಿದ್ದಾನೆ. ನಿಮ್ಮ ತಂದೆಯಿಂದ ಹಲ್ಲೆಗೊಳಗಾಗಿ ತನ್ನ ಮೂಗಿನಿಂದ ರಕ್ತ ಸುರಿಯುತ್ತಿದ್ದು, ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಿ ಎಂದು ಪತಿಯಲ್ಲಿ ಅತ್ತು ಗೋಗರೆದಾಗ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗದೆ ನೀನು ಇಲ್ಲೇ ಸತ್ತುಹೋಗು ಎಂದು ಪತ್ನಿಗೆ ಹೇಳಿದ್ದಾನೆ. ಅನ್ಯ ಮಾರ್ಗವಿಲ್ಲದೆ ಮನೆಗೆ ಫೋನು ಮಾಡಿ ಪೊಷಕರಿಗೆ ಸಾಹಿತ್ಯ ವಿಷಯವನ್ನು ತಿಳಿಸಿದ್ದಾರೆ.
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತ್ಯ ಪ್ರಕರಣದ ಬಗ್ಗೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ZERO FIR NO 01/2026 ಕಲಂ:85, 74, 115(2), 117(2), 351(2) ಜೊತೆಗೆ 3(5)BNS ನಂತೆ ಪ್ರಕರಣ ದಾಖಲಿಸಿಕೊಂಡು, ಘಟಣಾ ಸ್ಥಳದ ಆಧಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ.
Bantawala
ಕಬಕ: ಅಕ್ರಮ ಕೇರಳ ಲಾಟರಿ ಮಾರಾಟ ಜಾಲಕ್ಕೆ ಪೊಲೀಸರ ಲಗ್ಗೆ – ಮಂಗಳೂರು ತಂಡದಿಂದ ಮಿಂಚಿನ ದಾಳಿ
ಪುತ್ತೂರು: ಕರ್ನಾಟಕದಲ್ಲಿ ಸಂಪೂರ್ಣವಾಗಿ ನಿಷೇಧಿತವಾಗಿರುವ ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರ ವಿಶೇಷ ತಂಡ ಭೇದಿಸಿದೆ. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಬಕ ಜಂಕ್ಷನ್ನಲ್ಲಿ ಕಾರ್ಯಾಚರಿಸುತ್ತಿದ್ದ ಪಾನ್ ಬೀಡಾ ಅಂಗಡಿಯ ಮೇಲೆ ದಾಳಿ ನಡೆಸಿದ ಪೊಲೀಸರು, ಮಾಲೀಕ ಸೇರಿದಂತೆ ಗ್ರಾಹಕರನ್ನು ವಶಕ್ಕೆ ಪಡೆದಿದ್ದಾರೆ.
ಕಬಕ ಜಂಕ್ಷನ್ನಲ್ಲಿರುವ ಪಾನ್ ಬೀಡಾ ಅಂಗಡಿಯೊಂದರಲ್ಲಿ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ, ಗುಪ್ತವಾಗಿ ಕೇರಳ ಲಾಟರಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ ಗಡಿ ಭಾಗಗಳಲ್ಲಿ ಈ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಮಂಗಳೂರಿನಿಂದ ಆಗಮಿಸಿದ ವಿಶೇಷ ತಂಡವು ಕಾರ್ಯಾಚರಣೆ ರೂಪಿಸಿತ್ತು.

ಕಾರ್ಯಾಚರಣೆ ನಡೆದ ರೀತಿ:
ನಿಗಾ ಇರಿಸಿದ ತಂಡ: ಮಂಗಳೂರಿನಿಂದ ಬಂದ ವಿಶೇಷ ತಂಡದ ಪೊಲೀಸರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಾಮಾನ್ಯ ನಾಗರಿಕರಂತೆ ಪಾನ್ ಬೀಡಾ ಅಂಗಡಿಯ ಮಾಲೀಕನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಇದೇ ಸಂದರ್ಭದಲ್ಲಿ ಇಬ್ಬರು ಯುವಕರು ಲಾಟರಿ ಖರೀದಿಸಲು ಬಂದಾಗ, ಪೊಲೀಸರು ಹಠಾತ್ ದಾಳಿ ನಡೆಸಿ ಲಾಟರಿ ಟಿಕೆಟ್ಗಳ ಸಮೇತ ಮಾಲೀಕ ಮತ್ತು ಗ್ರಾಹಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ಕಬಕ ವಿದ್ಯಾಪುರ ನಿವಾಸಿ ಜಗದೀಶ ಯಾನೆ ಜಗ್ಗ ಎಂದು ಗುರುತಿಸಲಾಗಿದೆ. ಈತ ತನ್ನ ಅಂಗಡಿಯಲ್ಲಿ ಅಕ್ರಮ ವ್ಯವಹಾರ ನಡೆಸುತ್ತಿದ್ದ ಬಗ್ಗೆ ಸ್ಥಳೀಯರು ಹಿರಿಯ ಅಧಿಕಾರಿಗಳಿಗೆ ನೀಡಿದ ದೂರು ಕಾರ್ಯಾಚರಣೆಗೆ ಪ್ರಮುಖ ಕಾರಣವಾಗಿದೆ.

ಕಾನೂನು ಕ್ರಮ ಮತ್ತು ತನಿಖೆ:
ದಾಳಿಯ ವೇಳೆ ಅಂಗಡಿಯಲ್ಲಿದ್ದ ಅಕ್ರಮ ಕೇರಳ ಲಾಟರಿ ಟಿಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿ ತಿಳಿದು ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.
ಕರ್ನಾಟಕದಲ್ಲಿ ಲಾಟರಿ ಮಾರಾಟ ಮಾಡುವುದು ಕಾನೂನುಬಾಹಿರ. ಗಡಿ ಭಾಗದ ಮೂಲಕ ಅಕ್ರಮವಾಗಿ ಲಾಟರಿ ತಂದು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಜಾಲದ ಹಿಂದೆ ಬೇರೆ ಯಾರಾದರೂ ಪ್ರಭಾವಿಗಳು ಅಥವಾ ದೊಡ್ಡ ವಿತರಕರು ಇದ್ದಾರೆಯೇ ಎಂಬ ಬಗ್ಗೆ ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯು ಗಡಿ ಭಾಗದ ಅಕ್ರಮ ದಂಧೆಕೋರರಿಗೆ ಎಚ್ಚರಿಕೆಯ ಸಂದೇಶ ನೀಡಿದೆ.
crime
ದೈವಕ್ಕೆ ಅವಮಾನ: ಎಮ್ಮೆಮಾಡು ಜಮಾಅತ್ನಿಂದ ತಪ್ಪಿತಸ್ಥರಿಗೆ ಎಚ್ಚರಿಕೆ ಹಾಗೂ ಕ್ಷಮಾಪಣೆ
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭವೊಂದರಲ್ಲಿ ಸ್ಥಳೀಯ ದೈವವೊಂದಕ್ಕೆ ಅವಮಾನ ಮಾಡಿದ ಘಟನೆ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಎಮ್ಮೆಮಾಡುವಿನ ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಅತ್, ಘಟನೆಯಲ್ಲಿ ಭಾಗಿಯಾದವರಿಗೆ ಕಠಿಣ ಎಚ್ಚರಿಕೆ ನೀಡಿದೆ.

ಘಟನೆಯ ಹಿನ್ನೆಲೆ ಮತ್ತು ಜಮಾಅತ್ ಕ್ರಮ
ಮದುವೆ ಸಮಾರಂಭ ಮುಗಿದ ನಂತರ ಕೆಲವು ಯುವಕರು ದೈವದ ಆಚರಣೆಯನ್ನು ಅಪಹಾಸ್ಯ ಮಾಡುವ ರೀತಿಯಲ್ಲಿ ವರ್ತಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಎಮ್ಮೆಮಾಡು ಜಮಾಅತ್ ಕಚೇರಿಯಲ್ಲಿ ತುರ್ತು ಸಭೆ ನಡೆಸಲಾಯಿತು. ಈ ಕುರಿತು ಪ್ರಧಾನ ಕಾರ್ಯದರ್ಶಿ ಸೈಯದ್ ಝಕರಿಯ ಸಅದಿ ಅಲ್ ಐದರೂಸಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ:
ಸಭೆಯ ಬಳಿಕ ಜಮಾಅತ್ ಪ್ರಧಾನ ಕಾರ್ಯದರ್ಶಿ ಸೈಯದ್ ಝಕರಿಯ ಸಅದಿ ಅಲ್ ಐದರೂಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ “ಮದುವೆ ಸಮಾರಂಭ ಮುಗಿದ ಬಳಿಕ ಸ್ನೇಹಿತರೆಲ್ಲರೂ ಒಗ್ಗೂಡಿದಾಗ ಕೇವಲ ತಮಾಷೆಗಾಗಿ ಈ ರೀತಿ ವರ್ತಿಸಿದ್ದೇವೆ ಎಂದು ಯುವಕರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಯಾವುದೇ ಜಾತಿ, ಧರ್ಮ ಅಥವಾ ಧಾರ್ಮಿಕ ಆಚರಣೆಗಳನ್ನು ನಿಂದಿಸುವ ಉದ್ದೇಶ ತಮಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮ ನಡವಳಿಕೆಯಿಂದ ತಪ್ಪಾಗಿರುವುದನ್ನು ಅರಿತ ಯುವಕರು ಜಮಾಅತ್ ಮುಂದೆ ಸಭೆಯಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಇದರಿಂದ ಯಾರ ಮನಸ್ಸಾದರೂ ನೊಂದಿದ್ದರೆ ಅವರೆಲ್ಲರಲ್ಲೂ ಯುವಕರು ಕ್ಷಮೆಯನ್ನ ಕೋರಿದ್ದಾರೆ. ಎಂದು ತಿಳಿಸಿದ್ದು, ಯುವಕರು ಈಗಾಗಲೇ ತಮ್ಮ ತಪ್ಪಿನ ಅರಿವಾಗಿ ಕ್ಷಮೆ ಕೇಳಿರುವುದರಿಂದ, ಸಾರ್ವಜನಿಕರು ಕೂಡ ಅವರಿಗೆ ಕ್ಷಮೆಯನ್ನು ನೀಡಿ ಎಲ್ಲರೂ ಸೌಹಾರ್ದತೆಯಿಂದ ಬಾಳಬೇಕೆಂದು ಸೈಯದ್ ಝಕರಿಯ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಜಮಾಅತ್ ನೀಡಿದ ಕಠಿಣ ಎಚ್ಚರಿಕೆ
ಈ ಪ್ರಕರಣವನ್ನು ಇಲ್ಲಿಗೆ ಅಂತ್ಯಗೊಳಿಸದ ಜಮಾಅತ್ ಮಂಡಳಿಯು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
“ಯಾವುದೇ ಧರ್ಮ ಅಥವಾ ದೈವದ ಬಗ್ಗೆ ಅವಹೇಳನ ಮಾಡುವುದು ಜಮಾಅತ್ನ ಆಶಯಕ್ಕೆ ವಿರುದ್ಧವಾಗಿದೆ. ಇನ್ನು ಮುಂದೆ ಎಮ್ಮೆಮಾಡು ಜಮಾಅತ್ ವ್ಯಾಪ್ತಿಯಲ್ಲಿ ಇಂತಹ ಕೃತ್ಯಗಳು ನಡೆದರೆ, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಜಮಾಅತ್ ನಿಯಮಾವಳಿಗಳ ಪ್ರಕಾರ ಕಠಿಣ ನಿಯಮಗಳನ್ನು ಎದುರಿಸಬೇಕಾಗುತ್ತದೆ.”
— ಸೈಯದ್ ಝಕರಿಯ ಸಅದಿ ಅಲ್ ಐದರೂಸಿ,
ಪ್ರಧಾನ ಕಾರ್ಯದರ್ಶಿ.
ಕೋಮು ಸೌಹಾರ್ದತೆಗೆ ಆದ್ಯತೆ
ಜಿಲ್ಲೆಯಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಜಮಾಅತ್ ತೆಗೆದುಕೊಂಡ ಈ ತ್ವರಿತ ನಿರ್ಧಾರವು ಮಹತ್ವದ್ದಾಗಿದೆ. ಈ ಮಹತ್ವದ ಸಭೆಯಲ್ಲಿ ಜಮಾಅತ್ ಅಧ್ಯಕ್ಷರಾದ ಹುಸೈನ್ ಸಖಾಫಿ, ಸಹ ಕಾರ್ಯದರ್ಶಿ ಹನೀಫಾ ಸೇರಿದಂತೆ ಜಮಾಅತ್ನ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು., ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವಂತೆ ಸಮುದಾಯದ ಯುವಕರಿಗೆ ಕರೆ ನೀಡಿದರು.
crime
ಪುತ್ತೂರಿನ ಕುಖ್ಯಾತ ಗಾಂಜಾ ಪೆಡ್ಲರ್ ‘ಗಾಂಜಾ ಫಾರೂಕ್’ ಬಂಧನ: ಗೂಂಡಾ ಕಾಯ್ದೆಯಡಿ ಪರಪ್ಪನ ಅಗ್ರಹಾರ ಜೈಲಿಗೆ
ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದ ಕುಖ್ಯಾತ ಮಾದಕವಸ್ತು ಮಾರಾಟಗಾರ ಉಮ್ಮರ್ ಫಾರೂಕ್ ಅಲಿಯಾಸ್ ‘ಗಾಂಜಾ ಫಾರೂಕ್’ (38) ನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ (Goonda Act) ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿ ಮೊಯಿದುಕುಂಞ ಎಂಬವರ ಪುತ್ರನಾದ ಈತ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗಾಂಜಾ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಯುವ ಪೀಳಿಗೆಗೆ ಮಾದಕವಸ್ತುಗಳನ್ನು ಪೂರೈಸಿ ಅವರ ಜೀವನವನ್ನು ಹಾಳುಗೆಡವುತ್ತಿದ್ದ ಈತನ ವಿರುದ್ಧ ಪುತ್ತೂರು ನಗರ ಠಾಣಾ ಪೊಲೀಸರು ವರದಿ ಸಲ್ಲಿಸಿದ್ದರು.
ಈ ವರದಿಯನ್ನು ಆಧರಿಸಿ, ಸಮಾಜದ ಹಿತದೃಷ್ಟಿಯಿಂದ ಆರೋಪಿಯ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿ ಬಂಧನಕ್ಕೆ ಆದೇಶಿಸಲಾಯಿತು. ಸದ್ಯ ಈತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ದೀರ್ಘಕಾಲದ ಬಳಿಕ ಈ ಅಪಾಯಕಾರಿ ಪೆಡ್ಲರ್ನನ್ನು ಪೊಲೀಸರು ಜೈಲಿಗಟ್ಟಿದ್ದು, ಪುತ್ತೂರಿನ ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
-
crime5 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala2 days agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
