crime
ಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
ಪತಿ ಇಲ್ಲದ ಸಮಯಕ್ಕೆ ಬೆಡ್ ರೂಮ್ಗೆ ನುಗ್ಗಿ ಹಿಂದಿನಿಂದ ಗಟ್ಟಿಯಾಗಿ ತಬ್ಬಿಕೊಂಡ ಕಾಮುಕ , ಅತ್ಯಾಚಾರ ನಡೆಸಲು ಮಂಚದ ಮೇಲೆ ದೂಡಿದ, ವಿರೋಧಿಸಿದ್ದಕ್ಕೆ ಮುಖದ ಮೇಲೆ ಪರಚಿ ಮೂಗು ಕಚ್ಚಿದ, ಸಮಸ್ಯೆ ಗಂಭೀರವಾಗಬಹುದೆಂದು ಗಂಟಲಿನಲ್ಲಿ ಅದುಮಿ ಕೊಲೆ ಮಾಡಲು ಯತ್ನಿಸಿದ, ಕಣ್ಣಾರೆ ನೋಡಿ ಜೋರಾಗಿ ಕೂಗುತ್ತಿರುವ ಮಗುವಿನ ಬೊಬ್ಬೆಗೆ ಗಡಿಬಿಡಿಗೊಂಡ ಕಾಮುಕ ಮಾವ…. ರಕ್ತಸಿಕ್ತವಾದ ಪತ್ನಿ ತನ್ನ ಸಂಕಷ್ಟವನ್ನು ಆಗತಾನೆ ಬಂದ ಪತಿಯೊಂದಿಗೆ ಹೇಳಿಕೊಂಡಾಗ ತಂದೆಗೆ ಸಾಥ್ ನೀಡಿದ ಪತಿ, ತನ್ನ ಪತಿಯ ತಂದೆಯೇ ಮಾಡಿದ ಘೋರ ಕೃತ್ಯಕ್ಕೆ ನಲುಗಿ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆ- ಇದು ಜಿಲ್ಲೆಯ ಗಡಿ ಪ್ರದೇಶ ಸಂಪಾಜೆಯಲ್ಲಿ ಕಾಮುಕ ಮಾವನೊಬ್ಬ ನಡೆಸಿದ ಹೃದಯವಿದ್ರಾವಕ ಘಟನೆ. ಕಾಮುಕ ಮಾವ ಮತ್ತು ವ್ಯಬಿಚಾರಿ ಮಾವನ ಕೃತ್ಯಕ್ಕೆ ಸಾಥ್ ನೀಡಿದ ಪತಿಗೂ ಬಿದ್ದಿದೆ ಕೇಸ್…

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೊಳ್ಳೆಮಾರು ನಿವಾಸಿ ಸಾಹಿತ್ಯ ರೈ ಅವರೇ ಅತ್ಯಾಚಾರ ಯತ್ನಕ್ಕೆ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದವರಾಗಿದ್ದು, ಕಾಮುಕ ಮಾವ ( ಪತಿಯ ತಂದೆ ) ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ ನಿತ್ಯಾನಂದ ರೈ ಮತ್ತು ಪತಿ ಯಶಸ್ವಿ ಎನ್ ರೈ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ಫೆ.3ರಂದು ರಾತ್ರಿ ಘಟನೆ ನಡೆದಿದ್ದು, ತನ್ನ ಪತಿ ಆಸ್ಪತ್ರೆಗೆ ಸೇರಿಸಲು ನಿರಾಕರಿಸಿದ ಬೆನ್ನಲ್ಲೇ ರಾತ್ರಿ 11.30ಕ್ಕೆ ಕಾರಿನಲ್ಲಿ ಬಂದ ತಂದೆ ತಾಯಿ ರಕ್ತಸಿಕ್ತರಾಗಿ ಬಿದ್ದಿದ್ದ ಸಾಹಿತ್ಯರನ್ನು ತಕ್ಷಣ ಕರೆದುಕೊಂಡು ಹೋಗಿ ಸಂಪಾಜೆ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಂಟ್ವಾಳದ ಮಂಚಿಗೆ ಹೋಗುವ ದಾರಿ ಮದ್ಯೆ ಮನೆ ಸಮೀಪ ತಲುಪುತ್ತಲೇ ಉಸಿರಾಟಕ್ಕೆ ತೊಂದರೆಯಾಗಿದೆ. ತಕ್ಷಣ ನೇರವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಹಿತ್ಯ ಅವರನ್ನು ಯಶಸ್ವಿಯವರಿಗೆ ದಿನಾಂಕ 21.04.2021 ರಂದು ವಿವಾಹ ಮಾಡಿಕೊಡಲಾಗಿತ್ತು. ಅವರಿಗೆ ಮೂರುವರೆ ವರ್ಷದ ಒಂದು ಗಂಡು ಮಗು ಇದೆ. ಪತಿ ಮನೆ ಸಂಪಾಜೆ ಕಲ್ಲುಗುಂಡಿಯಲ್ಲಿ ಸಾಹಿತ್ಯ, ಅವರ ಪತಿ ಯಶಸ್ವಿ, ಮೂರುವರೆ ವರ್ಷದ ಮಗು ಹಾಗೂ ಪತಿಯ ತಂದೆ ನಿತ್ಯಾನಂದ ಸೇರಿ ನಾಲ್ಕು ಜನ ಮಾತ್ರ ವಾಸಿಸುತ್ತಿದ್ದಾರೆ. ಸಾಹಿತ್ಯ ಅವರ ವಿವಾಹವಾಗಿ ಸುಮಾರು ಮೂರು ವರ್ಷ ತನಕ ಉತ್ತಮ ರೀತಿಯ ಸಂಬಂಧದಲ್ಲಿ ಇದ್ದಿದ್ದು, ಆದರೆ ಅನಂತರ ಕ್ರಮೇಣವಾಗಿ ಮಾವ ನಿತ್ಯಾನಂದನ ಕಾಮುಕ ದೃಷ್ಠಿ ಸಾಹಿತ್ಯರವರ ಮೇಲೆ ಬಿದ್ದಿತ್ತು. ಹಲವು ಸಲ ಸಾಹಿತ್ಯರವರ ಮೈ ಮೇಲೆ ಮಾವ ಕೈ ಮಾಡಲು ಬಂದಿದ್ದು ಅದನ್ನು ವಿರೋಧಿಸಿದಕ್ಕಾಗಿ ಮಾವನು ನನ್ನ ಪತಿಯಲ್ಲಿ ನೀನು ಅವಳಿಗೆ ವಿಚ್ಛೇದನ ಕೊಡು ನಿನಗೆ ಬೇರೆ ಚಂದದ ಹುಡುಗಿಯನ್ನು ನೋಡಿ ವಿವಾಹ ಮಾಡಿಕೊಡುವುದಾಗಿ ಮಾತ್ರವಲ್ಲದೆ ಕೆಲವೊಮ್ಮೆ ಸಾಹಿತ್ಯರವರ ಗಂಡನಲ್ಲಿ ಅಂದರೆ ಅವರ ಮಗನಲ್ಲಿ ನೀನು ಅವಳನ್ನು ಕೊಲೆ ಮಾಡು ಹೆದರಬೇಡ, ಜೈಲಲ್ಲಿ ಬೇಕಿದ್ದರೆ ನಾನು ಕುಳಿತುಕೊಳ್ಳುತ್ತೇನೆ ಎಂದು ಸಹ ಮಾವ ಪ್ರಚೋದಿಸುತ್ತಲೇ ಇದ್ದಾರೆ ಎಂದು ಭಯಭೀತರಾಗಿ ಸಾಹಿತ್ಯ ತನ್ನ ತಂದೆ ತಾಯಿಯವರಲ್ಲಿ ಹೇಳಿಕೊಂಡಿದ್ದರು. ಆ ಸಮಯ ಸಾಹಿತ್ಯರವರನ್ನು ಸಮಾಧಾನ ಪಡಿಸುತ್ತಿದ್ದ ತಂದೆ ತಾಯಿಯು ನೀನು ಹೇಗಾದರೂ ಮಾಡಿ ಸಹಿಸಿಕೊಂಡು ಗಂಡನ ಮನೆಯಲ್ಲಿ ಜೀವನ ನಡೆಸು, ನೀನು ಗಂಡನನ್ನು ಬಿಟ್ಟು ಬಂದರೆ ಅದು ಕುಟುಂಬಕ್ಕೆ ಅವಮಾನ ಎಂದು ಸಾಹಿತ್ಯರವರಿಗೆ ಬುದ್ಧಿ ಮಾತು ಹೇಳುತ್ತಿದ್ದರು. ಅದೇ ರೀತಿ ಸಾಹಿತ್ಯ ಮಾವನ ಕಿರುಕುಳ ಮತ್ತು ಅಸಭ್ಯ ವರ್ತನೆಗಳ ಬಗ್ಗೆ ತನ್ನ ಪತಿಯಲ್ಲಿ ಹೇಳಿಕೊಂಡಾಗ ನೀನು ತಂದೆಯ ಮಾತನ್ನು ಪಾಲಿಸಬೇಕೆಂದು ಪತ್ನಿಗೆ ಜೋರು ಮಾಡಿ ಆಕೆಯ ಬಾಯಿ ಮುಚ್ಚಿಸುತ್ತಿದ್ದರು.

ಪತಿ ಯಶಸ್ವಿ ಎನ್ ರೈ ಸಂಪಾಜೆಪೇಟೆಯಲ್ಲಿ ಆಟೋಮೊಬೈಲ್ ಶಾಪ್ ಅನ್ನು ಹೊಂದಿದ್ದು ಅವರು ಪ್ರತಿದಿನ ರಾತ್ರಿ ಮನೆಗೆ ಬರುವಾಗ ಸುಮಾರು 9:00 ಯಾಗುತ್ತಿತ್ತು. ಫೆ.3ರಂದು ರಾತ್ರಿ ಸಾಹಿತ್ಯರವರ ಗಂಡನು ಬರುವ ಕೆಲವು ಸಮಯಗಳ ಮುಂಚೆ ಸಾಹಿತ್ಯ ತನ್ನ ಕೋಣೆಯಲ್ಲಿ ಬಟ್ಟೆಗಳನ್ನು ಮಡಚುತ್ತಿರುವ ಸಮಯ ಮಾವ ನಿತ್ಯಾನಂದ ಸಾಹಿತ್ಯಳ ಕೋಣೆಗೆ ಅಕ್ರಮ ಪ್ರವೇಶ ಮಾಡಿ ಆಕೆಯನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾನೆ. ಮುಂದುವರಿದು ಮಂಚಕ್ಕೆ ದೂಡಿ ಆಕೆಯ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದು, ಆ ಸಮಯ ಸಾಹಿತ್ಯ ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಯತ್ನಿಸಿದಾಗ ಕಾಮುಕ ಮಾವ ಆಕೆಯ ಗಂಟಲಲ್ಲಿ ಅಮುಕಿ ಹಿಡಿದಿದ್ದು ಪರಿಣಾಮವಾಗಿ ಗಂಟಲಿಗೆ ಮತ್ತು ಶರೀರದ ಭಾಗಗಳಿಗೆ ಪರಚಿತ ಗಾಯಗಳಾಗಿರುವುದಾಗಿದೆ ಮತ್ತು ಅದೇ ರೀತಿ ಮತ್ತೆ ಮತ್ತೆ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಕಾಮುಕ ಆಕೆಯ ಮೂಗಿಗೆ ಕಚ್ಚಿ ತೀವ್ರ ಸ್ವರೂಪದ ಗಾಯ ಉಂಟು ಮಾಡಿದ್ದು ಮೂಗಿನ ಗಾಯದಿಂದ ತೀವ್ರ ರಕ್ತ ಸುರಿದು ರೂಮಿನಲ್ಲಿಯೇ ಬಿದ್ದಿದ್ದರು. ಆ ವೇಳೆಗೆ ಆಕೆಯ ಎಳೆಯ ಮಗು ಈ ಕೃತ್ಯವನ್ನು ನೋಡಿ ಜೋರಾಗಿ ಕೂಗಿದ್ದು ಆ ಸಮಯ ಮಾವ ಮಗುವನ್ನು ಸಮಾಧಾನ ಪಡಿಸುವ ಸಲುವಾಗಿ ಮೇಲೆದ್ದಾಗ ಆಕೆ ಅಲ್ಲಿಂದ ಹೇಗಾದರೂ ಮಾಡಿ ತಪ್ಪಿಸಿ ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆ ಸಮಯ ಈ ದಿನ ನೀನು ಹೇಗೆ ತಪ್ಪಿಸಿಕೊಳ್ಳುತ್ತಿ ನೋಡುತ್ತೇನೆ ಮತ್ತು ನೀನು ಈ ಬಗ್ಗೆ ಹೊರಗೆ ಈ ವಿಷಯವನ್ನು ತಿಳಿಸಿದರೆ ನಿನ್ನನ್ನು ಕೊಲೆ ನಡೆಸದೆ ಬಿಡುವುದಿಲ್ಲ ಎಂದು ಮಾವ ಜೀವ ಬೆದರಿಕೆ ಹಾಕಿದಾಗ ನಿರ್ವಾಹವಿಲ್ಲದೆ ಮಗು ಮತ್ತು ಸಾಹಿತ್ಯ ಜೋರಾಗಿ ಕೂಗಿ ಬೊಬ್ಬೆ ಹಾಕಿದಾಗ ಮಗುವಿನತ್ತ ಹೋದ ಮಾವನ ಕಣ್ತಪ್ಪಿಸಿ ಸಾಹಿತ್ಯ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ಸಮಯ ಗಂಡನು ಮನೆಗೆ ಬಂದಿದ್ದು, ಹೊರಗಡೆ ವಿಚಾರವನ್ನು ಪತಿಯಲ್ಲಿ ತಿಳಿಸಿದಾಗ ಅವರು ತಂದೆಯ ಪರವಾಗಿ ಮಾತನಾಡಿ ನೀನು ಮನೆಯಿಂದ ಹೊರಗೆ ಯಾಕೆ ಬಂದಿದ್ದು ಎಂದು ಹೇಳಿ ಯಾವುದನ್ನೂ ಕೇಳಿಸಿಕೊಳ್ಳದೆ ಸಾಹಿತ್ಯಾಳಿಗೆ ಹಿಗ್ಗಾ ಮುಗ್ಗಾ ಬೈದಿದ್ದಾನೆ. ನಿಮ್ಮ ತಂದೆಯಿಂದ ಹಲ್ಲೆಗೊಳಗಾಗಿ ತನ್ನ ಮೂಗಿನಿಂದ ರಕ್ತ ಸುರಿಯುತ್ತಿದ್ದು, ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಿ ಎಂದು ಪತಿಯಲ್ಲಿ ಅತ್ತು ಗೋಗರೆದಾಗ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗದೆ ನೀನು ಇಲ್ಲೇ ಸತ್ತುಹೋಗು ಎಂದು ಪತ್ನಿಗೆ ಹೇಳಿದ್ದಾನೆ. ಅನ್ಯ ಮಾರ್ಗವಿಲ್ಲದೆ ಮನೆಗೆ ಫೋನು ಮಾಡಿ ಪೊಷಕರಿಗೆ ಸಾಹಿತ್ಯ ವಿಷಯವನ್ನು ತಿಳಿಸಿದ್ದಾರೆ.
ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತ್ಯ ಪ್ರಕರಣದ ಬಗ್ಗೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ZERO FIR NO 01/2026 ಕಲಂ:85, 74, 115(2), 117(2), 351(2) ಜೊತೆಗೆ 3(5)BNS ನಂತೆ ಪ್ರಕರಣ ದಾಖಲಿಸಿಕೊಂಡು, ಘಟಣಾ ಸ್ಥಳದ ಆಧಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿ ತನಿಖೆ ನಡೆಸಲಾಗುತ್ತಿದೆ.
crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಂಕ್ಷನ್ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
crime
ಪುತ್ತೂರು ಮಹಿಳಾ ಠಾಣೆಯಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ
ಪುತ್ತೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ತಮ್ಮ ಹೋರಾಟಕ್ಕೆ ಜಯ ಸಿಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಮೂಲಗಳ ಪ್ರಕಾರ, ಬೆಳಿಗ್ಗೆ 11.30ರ ಸುಮಾರಿಗೆ ಅವರು ತಮ್ಮ ಹಳೆಯ ಕೇಸ್ ಒಂದರ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಮಹಿಳಾ ಠಾಣಾ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ಬೇರೆ ಕಾರ್ಯ ನಿಮಿತ್ತ ಠಾಣೆಯಲ್ಲಿ ಇರಲಿಲ್ಲ. ಹೀಗಾಗಿ, ಲಿಖಿತವಾಗಿ ಹಾಜರಾದ ಬಗ್ಗೆ ಅವರಿಗೆ ನೋಟಿಸ್ ನೀಡಲಾಯಿತು. ಮುಂದಿನ ಸೂಚಿತ ದಿನಾಂಕದಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಮತ್ತೆ ಠಾಣೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ದಿನೇಶ್ ಜೈನ್ ಸೇರಿದಂತೆ ಹಲವರು ಅಭಿಮಾನಿಗಳು ಅವರ ಜೊತೆಗಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿಗೆ ಭೇಟಿ ನೀಡಿದಾಗ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದೇ ಹೋಗುತ್ತಿದ್ದು, ಅದರಂತೆ ಇಂದು ಠಾಣೆಗೆ ತೆರಳಿ ಹಿಂತಿರುಗುವಾಗ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಅವರ ಆಪ್ತ ವಲಯ ತಿಳಿಸಿದೆ.
crime
ಸಕಲೇಶಪುರ ಲಾಡ್ಜ್ನಲ್ಲಿ ಕರಾಳ ರಾತ್ರಿ: ಬಾತ್ರೂಮ್ನಲ್ಲಿ 23 ವರ್ಷದ ಯುವತಿ ನಿಗೂಢ ಸಾವು, ಜೊತೆಗಿದ್ದ ಯುವಕರು ಎಸ್ಕೇಪ್!
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್ ಒಂದರಲ್ಲಿ 23 ವರ್ಷದ ವರ್ಷ ಎಂಬ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಘಟನೆಯು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿವರಣೆ:
ಪ್ರವಾಸಕ್ಕೆ ತೆರಳಿದ್ದ ಮೂವರು: ಬೆಂಗಳೂರು ಮೂಲದ (ನಾಗಸಂದ್ರ/ಚಿಕ್ಕಬಾಣಾವರ) 23 ವರ್ಷದ ವರ್ಷ ಎಂಬ ಯುವತಿ, ತನ್ನ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಎಂಬುವವರೊಂದಿಗೆ ಶುಕ್ರವಾರ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.
ಪ್ರವಾಸಿ ತಾಣಗಳ ವೀಕ್ಷಣೆ: ಶನಿವಾರ, ಭಾನುವಾರ ಹಾಗೂ ಸೋಮವಾರದಂದು ಈ ಮೂವರು ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಜಲಪಾತ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುತ್ತಾಡಿದ್ದರು.

ಲಾಡ್ಜ್ನಲ್ಲಿ ತಂಗಿದ್ದ ದಳ: ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವು ಲಾಡ್ಜ್ನಲ್ಲಿ ಮೂವರು ಒಂದೇ ರೂಮ್ನಲ್ಲಿ ತಂಗಿದ್ದರು.
ಅನುಮಾನಾಸ್ಪದ ಸಾವು: ಮಂಗಳವಾರ ಲಾಡ್ಜ್ನ ಬಾತ್ರೂಮ್ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಅಸುನೀಗಿದ್ದಾರೆ. ಯುವತಿ ಮೃತಪಟ್ಟ ಬಳಿಕ ಜೊತೆಗಿದ್ದ ಯುವಕರು ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದಾರೆ (ಕೆಲವು ಮೂಲಗಳ ಪ್ರಕಾರ ಆಸ್ಪತ್ರೆಗೆ ಕರೆತಂದು ಬಳಿಕ ತೆರಳಿದ್ದಾರೆ).
ಆಸ್ಪತ್ರೆ ಹಾಗೂ ಪೊಲೀಸ್ ತನಿಖೆ: ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾತ್ರೂಮ್ನಲ್ಲಿ ಯುವತಿ ಮೃತಪಟ್ಟಿರುವುದು ಮತ್ತು ಜೊತೆಗಿದ್ದವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾವಿಗೆ ನಿಖರವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಿದೆ.
-
accident1 month agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala3 months agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
