Belthangady
ಧರ್ಮಸ್ಥಳದ ಅಸಹಜ ಸಾವುಗಳು – ಮುಂದೇನು ಆಗಲಿದೆ ? ಮತ್ತೆ ಬಂಗ್ಲೆ ಗುಡ್ಡೆಯಿಂದ ಶವ ಹೊರ ತೆಗೆಯುವ ಕಾರ್ಯಾಚರಣೆ ಆರಂಭ ?
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/02/2-1000x600.jpg&description=ಧರ್ಮಸ್ಥಳದ ಅಸಹಜ ಸಾವುಗಳು – ಮುಂದೇನು ಆಗಲಿದೆ ? ಮತ್ತೆ ಬಂಗ್ಲೆ ಗುಡ್ಡೆಯಿಂದ ಶವ ಹೊರ ತೆಗೆಯುವ ಕಾರ್ಯಾಚರಣೆ ಆರಂಭ ?', 'pinterestShare', 'width=750,height=350'); return false;" title="Pin This Post">
74 ಅಸಹಜ ಸಾವಿನ ಸಂಬಂಧ ವರದಿ ಕೊಡಿ ಎಂದು ಹೈಕೋರ್ಟ್ ಸರಕಾರಕ್ಕೆ ಆದೇಶ
ಮೃತದೇಹಗಳನ್ನು ರಹಸ್ಯವಾಗಿ ಹೂಳಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಫೆ.5 ನಿರ್ಣಾಯಕ ದಿನ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಸಂಬಂಧ ವರದಿ ಕೊಡಿ ಎಂದು ಹೈಕೋರ್ಟ್ ಸರಕಾರಕ್ಕೆ ಆದೇಶ ನೀಡಿದೆ. ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಕುರಿತು ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೀಡಾದ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಸರ್ಕಾರದ ಪರ ಅಡ್ವಕೆಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, ಅರ್ಜಿಯು 74 ಪ್ರಕರಣಗಳ ವಿಚಾರವಾಗಿದೆ. ಯಾವ ಪ್ರಕರಣ ಯಾವ ಹಂತದಲ್ಲಿದೆ. ಇದುವರೆಗೆ ಏನಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದು ವಾರದಲ್ಲಿ ನ್ಯಾಯಾಲಯಕ್ಕೆ ಸಂಪೂರ್ಣ ವಿವರ ನೀಡಲಾಗುತ್ತದೆ'' ಎಂದರು. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ಬಾಲನ್,ಎಲ್ಲ 74 ಪ್ರಕರಣಗಳು ಗಂಭೀರ ಸ್ವರೂಪದ ಪ್ರಕರಣಗಳಾಗಿದೆ. ತನಿಖೆ ನಡೆಯಬೇಕಿದೆ” ಎಂದರು. ಪ್ರತಿಕ್ರಿಯಿಸಿದ ಪೀಠ, ಅದಕ್ಕೂ ಮೊದಲು ಸರ್ಕಾರದಿಂದ ಮಾಹಿತಿ ಬರಲಿ ಎಂದಿತು. ನಂತರ ಅರ್ಜಿಯಲ್ಲಿ ಪ್ರಸ್ತಾಪಿಸಲಾದ ಪ್ರಕರಣಗಳ ಈಗಿನ ವಸ್ತುಸ್ಥಿತಿ, ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿದ ಪೀಠ, ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಿತು
ಮೃತದೇಹಗಳನ್ನು ರಹಸ್ಯವಾಗಿ ಹೂಳಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಫೆ.5 ನಿರ್ಣಾಯಕ ದಿನ
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂಳಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಫೆ.5 ನಿರ್ಣಾಯಕ ದಿನವಾಗಿದ್ದು, ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಕೋರ್ಟ್ (ಜೆಎಂಎಫ್ಸಿ) ಇಂದು ವಿಶೇಷ ತನಿಖಾ ತಂಡದ (SIT) ಸಲ್ಲಿಸಿದ್ದ ವರದಿಯ ಮೇಲೆ ಆದೇಶ ಹೊರಡಿಸಲಿದೆ. SIT ನವೆಂಬರ್ 20ರಂದು ಸುಮಾರು 3,923 ಪುಟಗಳ ಪ್ರಾಥಮಿಕ ತನಿಖಾ ವರದಿಯನ್ನು ಕೋರ್ಟ್ಗೆ ಸಲ್ಲಿಸಿದೆ. SIT ವರದಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಟಿ. ಜಯಂತ್, ವಿಠಲ ಗೌಡ, ಸುಜಾತ ಭಟ್ ಮತ್ತು ಮಾಸ್ಕ್ಮ್ಯಾನ್ ಚಿನ್ನಯ್ಯ ಸೇರಿ ಆರು ಮಂದಿ ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಈ ವರದಿ ಸುಳ್ಳು ಆರೋಪಗಳು ಮತ್ತು ಷಡ್ಯಂತ್ರದ ಮೇಲೆ ಆಧಾರಿತವಾಗಿದ್ದು, ಧರ್ಮಸ್ಥಳದ ಮಾನಹಾನಿಗೆ ಕಾರಣವಾದ ಸುಳ್ಳು ಸಾಕ್ಷ್ಯ ನೀಡಿದ್ದಾರೆ ಎಂಬ ಆರೋಪವಿದೆ.

ಕೋರ್ಟ್ ಇಂದು ವರದಿಯನ್ನು ಸ್ವೀಕರಿಸಿ ಕೇಸ್ ದಾಖಲಿಸುವುದೇ ಅಥವಾ ಹೆಚ್ಚುವರಿ ತನಿಖೆಗೆ ನಿರ್ದೇಶನ ನೀಡುವುದೇ ಎಂಬುದು ನಿರ್ಧಾರವಾಗಲಿದೆ. ಈ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಧರ್ಮಸ್ಥಳದ ಪರ ಮತ್ತು ವಿರೋಧಿ ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಧರ್ಮಸ್ಥಳ ಆಡಳಿತ ಈಗ ಸಂತೋಷ ವ್ಯಕ್ತಪಡಿಸಿದ್ದು, ಸತ್ಯ ಬಯಲಾಗಿದೆ ಎಂದಿದೆ. ಆರೋಪಿಗಳ ಪರ ವಕೀಲರು ಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಈ ಘಟನೆ ಮಕ್ಕಳು ಮತ್ತು ಮಹಿಳೆಯರ ಸುರಕ್ಷತೆ, ಸುಳ್ಳು ಆರೋಪಗಳ ಪರಿಣಾಮ ಮತ್ತು ಧಾರ್ಮಿಕ ಕ್ಷೇತ್ರಗಳ ಮಾನಹಾನಿ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಕೋರ್ಟ್ ಆದೇಶದ ಬಳಿಕ ಪ್ರಕರಣ ಮತ್ತೊಂದು ದಿಕ್ಕಿಗೆ ತಿರುಗಬಹುದು ಎಂಬ ನಿರೀಕ್ಷೆ ಇದೆ.

ಮತ್ತೆ ಬಂಗ್ಲೆ ಗುಡ್ಡೆಯಿಂದ ಶವ ಹೊರತೆಗೆಯುವ ಕಾರ್ಯಾಚರಣೆ ಆರಂಭ ?
ಈ ಮದ್ಯೆ ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಧರ್ಮಸ್ಥಳದ ಅಸಹಜ ಸಾವುಗಳು ಮತ್ತು ಸಮೂಹ ದಫನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡವು ನೇತ್ರಾವತಿ ಸ್ನಾನಘಟ್ಟದ ಸಮೀಪವಿರುವ ಬಂಗ್ಲೆ ಗುಡ್ಡೆ ಪ್ರದೇಶದಲ್ಲಿ ಮತ್ತೊಂದು ಸುತ್ತಿನ ಶವ ಹೊರತೆಗೆಯುವ ಕಾರ್ಯಾಚರಣೆ ನಡೆಸಲು ಗಂಭೀರ ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ. ಈ ಹಿಂದೆ ನಡೆದ ಶೋಧ ಕಾರ್ಯಗಳ ವೇಳೆ ಇಲ್ಲಿ ಕೆಲವು ಅಸ್ಥಿಪಂಜರಗಳು ಮತ್ತು ತಲೆಬುರುಡೆಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ, ಈ ಅರಣ್ಯ ಪ್ರದೇಶದ ಆಳದಲ್ಲಿ ಮತ್ತಷ್ಟು ಸಾಕ್ಷ್ಯಗಳು ಅಡಗಿರಬಹುದು ಎಂಬ ಸಂಶಯದ ಮೇಲೆ ಎಸ್ಐಟಿ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸೌಜನ್ಯಾ ಪ್ರಕರಣದ ಸಾಕ್ಷಿ ವಿಠಲ ಗೌಡ ಅವರು ನೀಡಿದ್ದ ಮಾಹಿತಿಯಂತೆ ಬಂಗ್ಲೆ ಗುಡ್ಡೆ ಕಾಡಿನಲ್ಲಿ ತನಿಖೆ ನಡೆಸಿದಾಗ ಒಂಬತ್ತು ವಿವಿಧ ಸ್ಥಳಗಳಲ್ಲಿ ಮಾನವ ಶೇಷಗಳು ಪತ್ತೆಯಾಗಿದ್ದವು. ಆಗ ಸುಮಾರು ಆರು ತಲೆಬುರುಡೆಗಳು ಮತ್ತು ಎಲುಬಿನ ತುಣುಕುಗಳನ್ನು ಎಸ್ಐಟಿ ವಶಪಡಿಸಿಕೊಂಡಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ದೂರುದಾರರ ಹೇಳಿಕೆಗಳು ಪರಸ್ಪರ ವ್ಯತಿರಿಕ್ತವಾಗಿದ್ದರಿಂದ ಮತ್ತು ಕೆಲವು ಸಾಕ್ಷ್ಯಗಳು ಉದ್ದೇಶಪೂರ್ವಕವಾಗಿ ಪ್ಲಾಂಟ್’ ಮಾಡಲಾದವು ಎಂಬ ಆರೋಪ ಕೇಳಿಬಂದಿದ್ದರಿಂದ ತನಿಖೆ ಜಟಿಲಗೊಂಡಿತ್ತು. ಇದೀಗ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇತೃತ್ವದ ತಂಡವು ವೈಜ್ಞಾನಿಕವಾಗಿ ಈ ಪ್ರದೇಶವನ್ನು ಮರು ಪರಿಶೀಲಿಸಲು ಮುಂದಾಗಿದೆ.

ಬಂಗ್ಲೆ ಗುಡ್ಡೆಯಲ್ಲಿ ಪತ್ತೆಯಾದ ಎಲುಬುಗಳ ಡಿಎನ್ಎ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಗಳು ಇನ್ನು ಪೂರ್ಣ ಪ್ರಮಾಣದಲ್ಲಿ ಲಭ್ಯವಾಗಬೇಕಿದೆ. ಈ ಪ್ರದೇಶದಲ್ಲಿ ಈ ಹಿಂದೆ ಮಾಟ-ಮಂತ್ರ ಅಥವಾ ಅನಾಮಧೇಯ ಶವಗಳ ದಫನ ನಡೆದಿರುವ ಸಾಧ್ಯತೆಗಳ ಬಗ್ಗೆಯೂ ಎಸ್ಐಟಿ ಗಮನಹರಿಸಿದೆ. ನಾವು ಯಾವುದೇ ಪೂರ್ವಾಗ್ರಹವಿಲ್ಲದೆ ತನಿಖೆ ನಡೆಸುತ್ತಿದ್ದೇವೆ. ಬಂಗ್ಲೆ ಗುಡ್ಡೆಯಲ್ಲಿ ಲಭ್ಯವಿರುವ ಪ್ರತಿಯೊಂದು ಸುಳಿವನ್ನೂ ಪರಿಶೀಲಿಸುವುದು ನಮ್ಮ ಗುರಿ’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ
ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಈ ಹೊಸ ಕಾರ್ಯಾಚರಣೆಯು ಈ ದಶಕಗಳ ಹಳೆಯ ರಹಸ್ಯದ ಮೇಲೆ ಬೆಳಕು ಚೆಲ್ಲುವ ನಿರೀಕ್ಷೆಯಿದೆ
arrest
ಬೆಳ್ತಂಗಡಿ: ಗುರುವಾಯನಕೆರೆ ಬಳಿ ಪತ್ತೆಯಾದ ಮೃತದೇಹದ ಗುರುತು ಪತ್ತೆ – ಯತೀಶ್ ಗೌಡ ಕೊಲೆ ಶಂಕೆ, ಮೂವರು ವಶಕ್ಕೆ
ಬೆಳ್ತಂಗಡಿ, ದಕ್ಷಿಣ ಕನ್ನಡ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಎಂಬಲ್ಲಿ ಜೂನ್ 1ರಂದು ಬೆಳಿಗ್ಗೆ ಪತ್ತೆಯಾಗಿದ್ದ ಅಪರಿಚಿತ ಮೃತದೇಹದ ಗುರುತು ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ, ದಿ. ಕೂಸಪ್ಪ ಗೌಡ ಮತ್ತು ಪದ್ಮಾವತಿ ದಂಪತಿಯ ದ್ವಿತೀಯ ಪುತ್ರ ಯತೀಶ್ ಗೌಡ (33) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯತೀಶ್, ಕಳೆದ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ನಾಪತ್ತೆಯಾಗಿದ್ದರು.
ಘಟನೆಯ ಹಿನ್ನೆಲೆ ಮತ್ತು ದೂರು:
ಜೂನ್ 1ರಂದು ಬೆಳಿಗ್ಗೆ ಗುರುವಾಯನಕೆರೆಯ ಶ್ರೀದೇವಿ ಹಾರ್ಡ್ವೇರ್ ಬಳಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ವಾಟ್ಸಾಪ್ ಮೂಲಕ ಮೃತರ ಸಹೋದರ ನಿತಿನ್ (34) ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ನಿತಿನ್, ಮೃತದೇಹವನ್ನು ತನ್ನ ಸಹೋದರ ಯತೀಶ್ ಗೌಡ ಎಂದು ಗುರುತಿಸಿದ್ದಾರೆ.
ಸಿಸಿಟಿವಿ ತನಿಖೆ ಮತ್ತು ಕೊಲೆ ಶಂಕೆ:
ಮೃತದೇಹದ ಮೇಲೆ ಹಲ್ಲೆಯ ಗುರುತುಗಳಿದ್ದ ಹಿನ್ನೆಲೆಯಲ್ಲಿ, ದೂರುದಾರರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಜೂನ್ 1ರ ಬೆಳಿಗ್ಗಿನ ಸಮಯ ಮೂವರು ವ್ಯಕ್ತಿಗಳು ಯತೀಶ್ ಅವರ ಮೇಲೆ ಹಲ್ಲೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ತೀವ್ರ ಹಲ್ಲೆಯಿಂದಾಗಿಯೇ ಯತೀಶ್ ಮೃತಪಟ್ಟಿರುವುದಾಗಿ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ, ಮೂವರ ವಶಕ್ಕೆ:
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಿತಿನ್ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ : 65/2026, ಕಲಂ: 115(2), 103 ಜೊತೆಗೆ 3(5) ಬಿ.ಎನ್.ಎಸ್ (BNS) ರಂತೆ ಕೊಲೆ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ:
ಯಶೋಧರ (35) – ನಿವಾಸಿ: ಮಿತ್ತಬಾಗಿಲು, ಬೆಳ್ತಂಗಡಿ
ಮೋಹನ್ (30) – ನಿವಾಸಿ: ಚಾರ್ವಾಕ, ಕಡಬ
ಇಬ್ರಾಹಿಂ (54) – ನಿವಾಸಿ: ಪದಂಗಡಿ, ಬೆಳ್ತಂಗಡಿ
ವಶಕ್ಕೆ ಪಡೆದಿರುವ ಮೂವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಕೊಲೆಗೆ ನಿಖರವಾದ ಕಾರಣ ಮತ್ತು ಹಲ್ಲೆಯ ಹಿಂದಿನ ಸತ್ಯಾಸತ್ಯತೆಗಳನ್ನು ಪತ್ತೆಹಚ್ಚಲು ಬೆಳ್ತಂಗಡಿ ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
accident
ಬೆಳ್ತಂಗಡಿ – ಪುತ್ತೂರು ಭಾಗದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು : ಇಬ್ಬರು ಬಲಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಪುತ್ತೂರು ಭಾಗಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ತಲಾ ಓರ್ವರು ಮೃತಪಟ್ಟ ದುರ್ಘಟನೆಗಳು ವರದಿಯಾಗಿವೆ.
ಮುಂಡಾಜೆ: ಬೈಕ್-ಕಾರು ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕ ಅಗರಿ ಕ್ರಾಸ್ ಬಳಿ ಭಾನುವಾರ ನಡೆದ ಬೈಕ್ ಹಾಗೂ ಕಾರಿನ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ, ಸೋಮವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾರ್ಯತಡ್ಕ ನಿವಾಸಿ ಗಣೇಶ್ (36) ಮೃತಪಟ್ಟ ದುರ್ದೈವಿ.
ಘಟನೆಯ ವಿವರ:
ಭಾನುವಾರ ಉಜಿರೆ ಕಡೆಯಿಂದ ಕಕ್ಕಿಂಜೆ ಕಡೆಗೆ ಗಣೇಶ್ ಅವರು ತಮ್ಮ ಬೈಕ್ನಲ್ಲಿ ತೆರಳುತ್ತಿದ್ದಾಗ, ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರಿನ ಬಲಭಾಗದ ಸೈಡ್ ಮಿರರ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ.
ಮೃತ ಗಣೇಶ್ ಅವರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸಂತಾಪ:
ಮೃತ ಗಣೇಶ್ ಅವರು ಕಾರ್ಯತಡ್ಕದಲ್ಲಿ ‘ಗಣೇಶ್ ಸ್ಟುಡಿಯೋ’ ನಡೆಸುತ್ತಿದ್ದು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (SKPA) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಬೆಳ್ತಂಗಡಿ ವಲಯದ ಸಕ್ರಿಯ ಸದಸ್ಯರಾಗಿದ್ದರು. ಯುವ ಛಾಯಾಗ್ರಾಹಕನ ಅಕಾಲಿಕ ನಿಧನಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ

ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಮೇ 25ರಂದು ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳದ ಕಡೆಯಿಂದ ಸುಬ್ರಹ್ಮಣ್ಯದತ್ತ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಈ ಅಪಘಾತ ನಡೆದಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಅವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್ (ಕೆಎ 43 ಎ 6435) ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಶೇಟ್ ಮಲ್ಲಿಕಾ ಮದ್ರಾಸ್ ಅವರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ.
ಮೃತರು ಮತ್ತು ಗಾಯಾಳುಗಳ ವಿವರ: ಅಪಘಾತದ ತೀವ್ರತೆಗೆ ಟೆಂಪೋ ಟ್ರಾವೆಲರ್ನಲ್ಲಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಕೆರೆಸಂದ್ರಮನೆ ನಿವಾಸಿ ಅಂಜನಮ್ಮ (47) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ 5 ವರ್ಷದ ಬಾಲಕಿ ನಯಾನಿಕಾ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದಂತೆ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ನರಸಿಂಹಯ್ಯ, ವಿ. ಮಂಜುನಾಥ್, ವಿ. ಗಂಗಾಧರ್, ಪವಿತ್ರಾ, ಸಿರಿಪ್ರಿಯಾ ಹಾಗೂ ರತ್ನಮ್ಮ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಟೆಂಪೋದಲ್ಲಿದ್ದ ಲೋಕೇಶ್ ದೇವನಹಳ್ಳಿ, ಪವನ್ ಸೋಮನಹಳ್ಳಿ ಕನಕಪುರ, ಕವಿತಾ ಸಿ.ಎಂ., ಜೀವನ್, ಆಶಾ, ಪ್ರೀತಮ್ ಹಾಗೂ ಶಿವ ಅವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.



Belthangady
ಕಾರಿನೊಳಗೆ ಸಿಲುಕಿಕೊಂಡ ಮಗು; ಸಮಯಪ್ರಜ್ಞೆ ಮೆರೆದು ಗ್ಲಾಸ್ ಒಡೆದು ರಕ್ಷಿಸಿದ ಸಾರ್ವಜನಿಕರು
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಜಂಕ್ಷನ್ ಬಳಿ ಚಾಲಕನ ಅಜಾಗರೂಕತೆಯಿಂದಾಗಿ ಕಾರಿನ ಡೋರ್ ಆಟೋಮೆಟಿಕ್ ಲಾಕ್ ಆಗಿ, ಮಗುವೊಂದು ಕಾರಿನೊಳಗೆ ಸಿಲುಕಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮೇ 25ರಂದು ಸೋಮವಾರ ನಡೆದಿದೆ.
ಘಟನೆಯ ವಿವರ: ಮದ್ದಡ್ಕದ ಕುವೆಟ್ಟು ನಿವಾಸಿಯೊಬ್ಬರು ತಮ್ಮ ಮಗುವಿನೊಂದಿಗೆ ಕಾರಿನಲ್ಲಿ ಬಂದಿದ್ದು, ರಸ್ತೆ ಬದಿಯ ಅಂಗಡಿಯೊಂದರ ಬಳಿ ಕಾರನ್ನು ನಿಲ್ಲಿಸಿದ್ದರು. ಚಾಲಕನು ಕಾರಿನ ಕೀ ಮತ್ತು ಮಗುವನ್ನು ಒಳಗಡೆಯೇ ಬಿಟ್ಟು, ಇಂಜಿನ್ ಆಫ್ ಮಾಡಿ ಹೊರಗೆ ಇಳಿದು ಅಂಗಡಿಗೆ ತೆರಳಿದ್ದಾರೆ. ಆದರೆ, ಅವರು ಇಳಿದ ತಕ್ಷಣ ಕಾರಿನ ಸೆಂಟ್ರಲ್ ಲಾಕಿಂಗ್ ಸಿಸ್ಟಮ್ನಿಂದಾಗಿ ಡೋರ್ಗಳು ಆಟೋಮೆಟಿಕ್ ಆಗಿ ಲಾಕ್ ಆಗಿವೆ.
ಕಾರಿನ ಕೀ ಒಳಗಡೆಯೇ ಇದ್ದಿದ್ದರಿಂದ ಹೊರಗಿನಿಂದ ಬಾಗಿಲು ತೆರೆಯಲು ಸಾಧ್ಯವಾಗದೆ ಚಾಲಕ ಗಾಬರಿಗೊಂಡಿದ್ದಾರೆ. ಇದೇ ವೇಳೆ ಕಾರಿನ ಒಳಗಿದ್ದ ಮಗು ಗಾಬರಿಗೊಂಡು ಜೋರಾಗಿ ಅಳಲು ಪ್ರಾರಂಭಿಸಿದೆ. ಬಿಸಿಲಿನ ಬೇಗೆಯೂ ಹೆಚ್ಚಿದ್ದರಿಂದ ಕಾರಿನೊಳಗೆ ಉಸಿರಾಟದ ತೊಂದರೆಯಾಗುವ ಭೀತಿ ಎದುರಾಗಿತ್ತು.
ಸಾರ್ವಜನಿಕರ ಸಮಯಪ್ರಜ್ಞೆ: ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಅಂಗಡಿ ಮುಂಗಟ್ಟುಗಳ ಮಾಲೀಕರು ಕಾರಿನ ಬಳಿ ಧಾವಿಸಿ ಬಂದಿದ್ದಾರೆ. ಕಂಪನಿಕೀ ಇಲ್ಲದೆ ಬಾಗಿಲು ತೆರೆಯಲು ಕಂಬಿ, ಸ್ಕ್ರೂಡ್ರೈವರ್ ಬಳಸಿ ವಿವಿಧ ರೀತಿಯಲ್ಲಿ ಹರಸಾಹಸ ಪಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ. ಮಗುವಿನ ಅಳು ಹೆಚ್ಚಾಗುತ್ತಿರುವುದನ್ನು ಮತ್ತು ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಾರ್ವಜನಿಕರು ಸಮಯಪ್ರಜ್ಞೆ ಮೆರೆದಿದ್ದಾರೆ.
ಮಗುವಿಗೆ ಯಾವುದೇ ಗಾಯವಾಗದಂತೆ ಎಚ್ಚರಿಕೆ ವಹಿಸಿ, ಕಾರಿನ ಹಿಂಬದಿಯ ಕಿಟಕಿಯ ಗ್ಲಾಸ್ (ಗಾಜು) ಅನ್ನು ಬಲವಾಗಿ ಒಡೆದಿದ್ದಾರೆ. ತದನಂತರ ಒಳಗಡೆಯಿದ್ದ ಬಾಗಿಲಿನ ಲಾಕ್ ಅನ್ನು ತೆಗೆದು ಮಗುವನ್ನು ಯಶಸ್ವಿಯಾಗಿ ಹೊರಗೆ ತಂದು ರಕ್ಷಿಸಿದ್ದಾರೆ. ಸಾರ್ವಜನಿಕರ ಈ ತ್ವರಿತ ನಿರ್ಧಾರ ಮತ್ತು ಸಮಯಪ್ರಜ್ಞೆಗೆ ಸ್ಥಳೀಯರು ಹಾಗೂ ಮಗುವಿನ ಪೋಷಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
