Connect with us

Dakshina Kannada

ಪಿಲಿಕುಳಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು! ಸಂಕಷ್ಟದಲ್ಲಿ ಕರ್ನಾಟಕದ ಅತ್ಯಂತ ಸುಂದರ ಮೃಗಾಲಯ ಪಿಲಿಕುಳ

Published

on

ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿಬಿಡಿ” ಪಿಲಿಕುಳದಲ್ಲಿ ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಶಾಕ್‌ ಆದ ನ್ಯಾಯಾದೀಶರು
ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಬಗ್ಗೆ ದೂರು. ಪ್ರವಾಸಿಗರ ಮೊದಲ ಆಯ್ಕೆ ಆಗಿದ್ದ ಈ ಜಾಗಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು!
ಈಗ ಅವ್ಯವಸ್ಥೆಯಿಂದ ಸಂಕಷ್ಟ ಅನುಭವಿಸುತ್ತಿದೆ. ತುಕ್ಕುಪಂಜರ, ಅಶುಚಿ ನೀರು, ಲೈಸೆನ್ಸ್ ಇಲ್ಲದೆ ಕಾರ್ಯನಿರ್ವಹಣೆ, ಪ್ರಾಣಿಗಳ ದಯನೀಯ ಸ್ಥಿತಿ ಹೈಕೋರ್ಟ್ ನ್ಯಾಯಾಧೀಶರನ್ನು ಶಾಕ್ ಮಾಡಿದೆ.

ಮಂಗಳೂರು: ಅರಬ್ಬಿ ಸಮುದ್ರದ ತಡಿಯ ಮಂಗಳೂರಿನಲ್ಲಿರೋ (Mangaluru) ಈ ಪಿಲಿಕುಳ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಅಂತಲೇ ಹೆಸರುವಾಸಿ. ಮಂಗಳೂರು ಪಿಲಿಕುಳ ಪಾರ್ಕ್,270 ಎಕರೆಗಳಲ್ಲಿ ಹಬ್ಬಿದ್ದು, ‘ಪಿಲಿ’ ಅಂದ್ರೆ ಹುಲಿ, ‘ಕುಳ’ ಅಂದ್ರೆ ಕೆರೆ. ಒಂದು ಕಾಲದಲ್ಲಿ ಹುಲಿಗಳು (Tigers) ಬಂದು ನೀರು ಕುಡಿಯುತ್ತಿದ್ದ ಈ ಜಾಗವನ್ನ ಇಂದು ಅಂತರಾಷ್ಟ್ರೀಯ ಮಟ್ಟದ ಜೈವಿಕ ಉದ್ಯಾನವನವಾಗಿ ರೂಪಿಸಲಾಗಿದೆ. ಪಶ್ಚಿಮ ಘಟ್ಟಗಳ ಅಳಿವಿನಂಚಿನಲ್ಲಿರೋ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರೋ ಪಿಲಿಕುಳ, ಕರಾವಳಿಗೆ ಬರೋ ಪ್ರವಾಸಿಗರ ಮೊದಲ ಆಯ್ಕೆ. ಅಂತಹ ಸುಂದರ ತಾಣ ಇಂದು ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. ಪಿಲಿಕುಳದ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಅಂದ್ರೆ, ಇಲ್ಲಿನ ಅವ್ಯವಸ್ಥೆ, ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಹೈಕೋರ್ಟ್ ನ್ಯಾಯಧೀಶರೇ ಶಾಕ್ ಆಗಿದ್ದಾರೆ. ಮಂಗಳೂರಿನ ಪ್ರವಾಸಿಗರ ಹಾಟ್ ಫೇವರೆಟ್ ಪಿಲಿಕುಳ ಮೃಗಾಲಯಕ್ಕೀಗ ಇಂತಹದೊಂದು ಸಂಕಷ್ಟ ಎದುರಾಗಿದೆ. ಇದು ಇಲ್ಲಿರೋ ಮೂಕ ಪ್ರಾಣಿಗಳಿಂದಾದ ತಪ್ಪಲ್ಲ. ಬದಲಾಗಿ ಇಲ್ಲಿನ ಆಡಳಿತ ವ್ಯವಸ್ಥೆಯಿಂದ ಸ್ವಯಂ ಕೃತ ಅಪರಾಧ. ತುಕ್ಕು ಹಿಡಿದ ಪಂಜರ, ತುಕ್ಕು ಹಿಡಿದ ಪಂಜರ, ಕಲುಷಿತ ನೀರು ಅಶುಚಿ ವಾತಾವರಣ ಇದು ಪಿಲಿಕುಳ ಮೃಗಾಲಯದ ಸದ್ಯದ ಸ್ಥಿತಿ.

ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಕೇವಲ ದೂರು ನೀಡದೆ, ಮೃಗಾಲಯದ ಒಳಗಿನ ಭೀಕರ ಸ್ಥಿತಿಯನ್ನು ಎತ್ತಿ ತೋರಿಸುವ ಭದ್ರ ಸಾಕ್ಷ್ಯಗಳನ್ನು ಹೈಕೋರ್ಟ್‌ಗೆ ನೀಡಿದ್ದಾರೆ. ಸೊರಗಿದ ಪ್ರಾಣಿಗಳ ಫೋಟೋಗಳು: ಸರಿಯಾದ ಆಹಾರವಿಲ್ಲದೆ ಎಲುಬು ಕಾಣುವಂತಾಗಿರುವ ಚಿರತೆ ಮತ್ತು ಹುಲಿಗಳ ಫೋಟೋಗಳು. ಅಸುರಕ್ಷಿತ ಪಂಜರಗಳು, ತುಕ್ಕು ಹಿಡಿದು ಕಿತ್ತುಹೋಗಿರುವ ಕಬ್ಬಿಣದ ಸರಳುಗಳು, ಇದರಿಂದ ಪ್ರಾಣಿಗಳು ಹೊರಬರುವ ಅಥವಾ ಗಾಯ ಮಾಡಿಕೊಳ್ಳುವ ಅಪಾಯವಿದೆ ಎಂದು ತೋರಿಸಿದ್ದಾರೆ. ಪ್ರಾಣಿಗಳ ಕುಡಿಯುವ ನೀರಿನ ತೊಟ್ಟಿಗಳಲ್ಲಿ ಪಾಚಿ ಕಟ್ಟಿರುವುದು ಮತ್ತು ಪ್ರಾಣಿಗಳ ಮಲ-ಮೂತ್ರ ವಿಲೇವಾರಿ ಆಗದೆ ಪಂಜರದಲ್ಲೇ ಕೊಳೆಯುತ್ತಿರುವುದು. ಅನಾರೋಗ್ಯಕ್ಕೀಡಾದ ಪ್ರಾಣಿಗಳಿಗೆ ಸರಿಯಾದ ಸಮಯದಲ್ಲಿ ವೈದ್ಯಕೀಯ ನೆರವು ಸಿಗುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅವರು ಸಂಗ್ರಹಿಸಿ ದಾಖಲೆಯಾಗಿ ನೀಡಿದ್ದಾರೆ.

ಪಿಲಿಕುಳ ಮೃಗಾಲಯದ ಕರ್ಮ ಕಾಂಡಗಳು ಹೈಕೋರ್ಟ್‍ನಲ್ಲಿ ಹೊರಬಿದ್ದಿವೆ. ಪ್ರಾಣಿಗಳನ್ನು ಇರಿಸಿರುವ ಪಂಜರಗಳು ಸಂಪೂರ್ಣ ತುಕ್ಕು ಹಿಡಿದಿವೆ, ಅಲ್ಲಿ ಸರಿಯಾದ ಭದ್ರತೆಯೇ ಇಲ್ಲ. ಅಶುಚಿಯಾದ ಪರಿಸರದಲ್ಲಿ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಕೆಂಡಾಮಂಡಲವಾಗಿದೆ. ಇಲ್ಲಿ ಮತ್ತೊಂದು ದುರಂತ ಅಂದ್ರೆ ಜನಮನ್ನಣೆ ಪಡೆದ ಈ ಪಾರ್ಕ್‍ನ ಲೈಸೆನ್ಸ್ ಅವಧಿ 2025ರ ಡಿಸೆಂಬರ್ 1ಕ್ಕೇ ಮುಕ್ತಾಯವಾಗಿದೆ. ಅಂದ್ರೆ ಸದ್ಯ ಯಾವುದೇ ಪರವಾನಗಿ ಇಲ್ಲದೇ ಪಿಲಿಕುಳ ಮೃಗಾಲಯ ನಡೀತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಬಗ್ಗೆ ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರ 2023 ಮತ್ತು 2025ರಲ್ಲಿ ಶೋಕಾಸ್ ನೋಟಿಸ್ ನೀಡಿದ್ರೂ ಅಧಿಕಾರಿಗಳು ಮಾತ್ರ ಕ್ಯಾರೆ ಅಂದಿಲ್ಲ. ಮಲೀನಗೊಂಡ ನೀರು ಕುಡಿದು, ಸರಿಯಾದ ಚಿಕಿತ್ಸೆ ಸಿಗದೆ ಮೂಕ ಪ್ರಾಣಿಗಳು ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿವೆ ಅನ್ನೋದು ಅರ್ಜಿದಾರರ ಗಂಭೀರ ಆರೋಪಕ್ಕೆ ಹೈಕೋರ್ಟ್‍ ಗರಂ ಆಗಿದೆ. ಇವುಗಳನ್ನು ನೋಡಿದ ನ್ಯಾಯಾಧೀಶರು ಆಘಾತ ಮತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿ” ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿದ್ದು, ಮೃಗಾಲಯದ ಆಡಳಿತವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ಅಥವಾ ವ್ಯವಸ್ಥಿತವಾಗಿ ಸುಧಾರಿಸುವಂತೆ ಸೂಚಿಸಿದೆ. ಕರ್ನಾಟಕ ಹೈಕೋರ್ಟ್ ಫೆಬ್ರವರಿ ಮೊದಲ ವಾರದಲ್ಲಿ ಪಿಲಿಕುಳ ಮೃಗಾಲಯದ ಬಗ್ಗೆ ಅತ್ಯಂತ ಕಠಿಣವಾದ ನಿಲುವನ್ನು ತಳೆದಿದೆ.

ಹೈಕೋರ್ಟ್ ಸರ್ಕಾರಕ್ಕೆ ಈ ಮೂರು ಪ್ರಶ್ನೆಗಳನ್ನು ಕೇಳಿದ್ದು, ಪರವಾನಗಿ ಇಲ್ಲದೆ ಇಷ್ಟು ದಿನ ಮೃಗಾಲಯವನ್ನು ಹೇಗೆ ನಡೆಸಲು ಬಿಟ್ಟಿದ್ದೀರಿ? ಪ್ರಾಣಿಗಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರೀಕ್ಷೆಯ ವರದಿ ಎಲ್ಲಿದೆ? ಪ್ರಾಣಿಗಳ ಅಸಹಜ ಸಾವುಗಳ ಬಗ್ಗೆ ಪೋಸ್ಟ್ ಮಾರ್ಟಂ (Post-mortem) ವರದಿಯನ್ನು ತಕ್ಷಣ ಸಲ್ಲಿಸಿ. ಎಂದು ಉತ್ತರ ನೀಡಲು ತಿಳಿಸಿದೆ. ಮೃಗಾಲಯದ ನಿರ್ದೇಶಕರು ಮತ್ತು ಅಧಿಕಾರಿಗಳು ಇತ್ತೀಚೆಗೆ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಅಧಿಕ ಮಳೆಯಿಂದಾಗಿ ತಡೆಗೋಡೆ ಕುಸಿದು ಸಮಸ್ಯೆ ಉಂಟಾಗಿದೆ ಎಂದು ಸಮಜಾಯಿಷಿ ನೀಡಿದ್ದರು. ಆದರೆ, ನ್ಯಾಯಾಲಯವು ಇದನ್ನು “ಆಡಳಿತಾತ್ಮಕ ವೈಫಲ್ಯ” ಎಂದು ಕರೆದಿದೆ. ಸರಿಯಾದ ಹಣಕಾಸಿನ ಹಂಚಿಕೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಮಾಜಿ ನಿರ್ದೇಶಕರು (ಜಯಪ್ರಕಾಶ್ ಭಂಡಾರಿ) ಈ ಹಿಂದೆ ರಾಜೀನಾಮೆ ನೀಡುವಾಗ ತಿಳಿಸಿದ್ದರು.

ಮುಂದಿನ ಕ್ರಮ ಏನಾಗಬಹುದು?
ನ್ಯಾಯಾಲಯದ ಸೂಚನೆಯಂತೆ ಸರ್ಕಾರವು ಮೃಗಾಲಯದ ನಿರ್ವಹಣೆಯನ್ನು ಸಂಪೂರ್ಣವಾಗಿ ಅರಣ್ಯ ಇಲಾಖೆ ಅಥವಾ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ (KZA) ಹಸ್ತಾಂತರಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಪ್ರಾಣಿಗಳನ್ನು ಬೇರೆ ಸುರಕ್ಷಿತ ಮೃಗಾಲಯಗಳಿಗೆ ವರ್ಗಾಯಿಸುವ ಆದೇಶ ಹೊರಬರುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು (PIL) ಅತ್ಯಂತ ತುರ್ತು ವಿಷಯವೆಂದು ಪರಿಗಣಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ ತಿಂಗಳ ಮೂರನೇ ವಾರದಲ್ಲಿ ನಡೆಸಲು ನ್ಯಾಯಾಲಯ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಾಣಿಗಳ ಪರಿಸ್ಥಿತಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ (CZA) ಸೂಚಿಸಿದೆ ಒಂದು ವೇಳೆ ಮೃಗಾಲಯದ ಪರವಾನಗಿಯನ್ನು ನವೀಕರಿಸಲು ಕೇಂದ್ರ ಮೃಗಾಲಯ ಪ್ರಾಧಿಕಾರ ನಿರಾಕರಿಸಿದರೆ, ಅಲ್ಲಿರುವ ಪ್ರಾಣಿಗಳನ್ನು ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು) ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ ಅಥವಾ ಬನ್ನೇರುಘಟ್ಟ ಜೈವಿಕ ಉದ್ಯಾನವನ (ಬೆಂಗಳೂರು) ಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ

ಪಿಲಿಕುಳ ಒಂದು ಕಾಲದಲ್ಲಿ ಜಿಲ್ಲಾಡಳಿತದ ಅಡಿಯಲ್ಲಿದ್ದ ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರ (PNDA) ಮೂಲಕ ನಿರ್ವಹಿಸಲ್ಪಡುತ್ತಿತ್ತು. ಆದರೆ ಈಗ ಉಂಟಾಗಿರುವ ಅವ್ಯವಸ್ಥೆಯಿಂದಾಗಿ, ಇದನ್ನು ಸಂಪೂರ್ಣವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ (KZA) ಸುಪರ್ದಿಗೆ ಪಡೆಯುವಂತೆ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಕೆ.ಜೆಡ್.ಎ ಅಡಿಯಲ್ಲಿ ಬಂದರೆ ಪ್ರಾಣಿಗಳಿಗೆ ನಿರಂತರ ಅನುದಾನ ಮತ್ತು ಪರಿಣಿತ ವೈದ್ಯರ ಸೇವೆ ಸಿಗಲಿದೆ.

ಪಿಲಿಕುಳ ಮೃಗಾಲಯ ಒಂದು ಕಾಲದಲ್ಲಿ ಇದು ಕರ್ನಾಟಕದ ಅತ್ಯಂತ ಸುಂದರ ಮೃಗಾಲಯಗಳಲ್ಲಿ ಒಂದಾಗಿತ್ತು ಇದನ್ನು 1990ರ ದಶಕದ ಉತ್ತರಾರ್ಧದಲ್ಲಿ ಮಂಗಳೂರಿನ ವಾಮಂಜೂರಿನಲ್ಲಿ ಸ್ಥಾಪಿಸಲಾಯಿತು. ‘ಪಿಲಿಕುಳ’ ಎಂದರೆ ತುಳು ಭಾಷೆಯಲ್ಲಿ “ಹುಲಿಗಳ ಕೆರೆ” ಎಂದರ್ಥ. ಇಲ್ಲಿ ಅಪರೂಪದ ರಾಜನಾಗ (King Cobra) ಸಂತಾನೋತ್ಪತ್ತಿ ಕೇಂದ್ರವಿದ್ದು, ಇದು ಏಷ್ಯಾದಲ್ಲೇ ಪ್ರಸಿದ್ಧವಾಗಿದೆ. ಸುಮಾರು 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿರುವ ಈ ಉದ್ಯಾನವನವು ಕರಾವಳಿಯ ಜೀವವೈವಿಧ್ಯದ ಕೇಂದ್ರವಾಗಿತ್ತು.
ಪಿಲಿಕುಳ ರೀಜನಲ್ ಸೈನ್ಸ್ ಸೆಂಟರ್ ಮೃಗಾಲಯಕ್ಕೆ ಹೋಲಿಸಿದರೆ ವಿಜ್ಞಾನ ಕೇಂದ್ರದ ಸ್ಥಿತಿ ಉತ್ತಮವಾಗಿದೆ. ಈಗ ಹೈಕೋರ್ಟ್‌ನ ಫೆಬ್ರವರಿ 3ನೇ ವಾರದ ವಿಚಾರಣೆಯ ಮೇಲೆ ಎಲ್ಲರ ಕಣ್ಣಿದೆ. ಅಲ್ಲಿ ಹೊರಬರುವ ತೀರ್ಪು ಪಿಲಿಕುಳದ ಪ್ರಾಣಿಗಳ ಭವಿಷ್ಯವನ್ನು ನಿರ್ಧರಿಸಲಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ದಾಬಸ್‌ಪೇಟೆ ಬಳಿ ಭೀಕರ ಅಪಘಾತ: ಲಾರಿ ಡಿಕ್ಕಿಗೆ ಕಾರು ಸಂಪೂರ್ಣ ನಜ್ಜುಗುಜ್ಜು, ಸಿದ್ದೀಕ್ ಸೂರ್ಯ ಸೇರಿ ಮೂವರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರು!

Published

on

ದಾಬಸ್‌ಪೇಟೆ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ-48ರ ದಾಬಸ್‌ಪೇಟೆ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ, ನಿಯಂತ್ರಣ ತಪ್ಪಿದ ಕಾರು ಪಾದಾಚಾರಿಯೊಬ್ಬರಿಗೆ ಗುದ್ದಿದೆ. ಈ ಘಟನೆಯಲ್ಲಿ ಒಟ್ಟು ಮೂವರು ಗಾಯಗೊಂಡು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂವರು ಅದೃಷ್ಟವಶಾತ್ ಪಾರು: ಅಪಘಾತಕ್ಕೊಳಗಾದ ಕಾರಿನಲ್ಲಿ ರಾಜೀವ್ ಗಾಂಧಿ ಯಾತ್ರಾ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಸಿದ್ದೀಕ್ ಸೂರ್ಯ ಸೇರಿದಂತೆ ಕೇವಲ ಇಬ್ಬರು ಪ್ರಯಾಣಿಸುತ್ತಿದ್ದರು. ಲಾರಿ ಡಿಕ್ಕಿ ಹೊಡೆದ ತಕ್ಷಣ ಕಾರಿನ ಏರ್‌ಬ್ಯಾಗ್‌ಗಳು ಸಮಯಕ್ಕೆ ಸರಿಯಾಗಿ ತೆರೆದುಕೊಂಡಿದ್ದರಿಂದ ಹಾಗೂ ಕಾರಿನಲ್ಲಿದ್ದ ಇಬ್ಬರು ಸೀಟ್ ಬೆಲ್ಟ್ ಧರಿಸಿದ್ದರಿಂದ ಭೀಕರ ಅಪಘಾತದಲ್ಲೂ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಹಾಗೂ ಪಾದಾಚಾರಿ ಗಿರೀಶ್ ಸೇರಿದಂತೆ ಒಟ್ಟು ಮೂವರು ಈ ಭೀಕರ ಘಟನೆಯಲ್ಲಿ ಪ್ರಾಣಾಪಾಯದಿಂದ ಮುಕ್ತರಾಗಿದ್ದಾರೆ.

ಘಟನೆಯ ವಿವರ: ದಿನಾಂಕ 17/06/2026ರ ಬುಧವಾರ ಮಧ್ಯಾಹ್ನ ಸುಮಾರು 12:00 ಗಂಟೆಯ ವೇಳೆಗೆ ದಾಬಸ್‌ಪೇಟೆಯ ಕೆ.ಐ.ಎ.ಡಿ.ಬಿ (KIADB) ಕೈಗಾರಿಕಾ ಪ್ರದೇಶದ 4ನೇ ಹಂತದ ಮಣಿಪಾಲ್ ಕಂಪನಿ ರಸ್ತೆಯ ತಿರುವಿನ ಬಳಿ ಈ ಘಟನೆ ನಡೆದಿದೆ. ಹೊನ್ನೇನಹಳ್ಳಿ ಕಡೆಯಿಂದ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಲಾರಿ (ನೊಂದಣಿ ಸಂಖ್ಯೆ: KA 01 AT 8889) ಚಾಲಕ, ಮುಂಭಾಗದಿಂದ ಬರುತ್ತಿದ್ದ ಮಾರುತಿ ಸುಜುಕಿ ಡಿಸೈರ್ ಕಾರಿಗೆ (ನೊಂದಣಿ ಸಂಖ್ಯೆ: KA 19 MJ 4018) ಜೋರಾಗಿ ಡಿಕ್ಕಿ ಹೊಡೆದಿದ್ದಾನೆ.

ಲಾರಿ ಡಿಕ್ಕಿ ಹೊಡೆದ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ, ಅದೇ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ, ಸ್ಥಳೀಯ ಕೈಗಾರಿಕಾ ಪ್ರದೇಶದ ಕೂಲಿ ಕಾರ್ಮಿಕರಾದ ಗಿರೀಶ್ (54 ವರ್ಷ) ಅವರಿಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಗಿರೀಶ್ ಅವರು ರಸ್ತೆಗೆ ಬಿದ್ದು ತಲೆ ಹಾಗೂ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅಲ್ಲದೆ ಅಪಘಾತದ ತೀವ್ರತೆಗೆ ಕಾರು ರಸ್ತೆ ಪಕ್ಕದ ಡಿವೈಡರ್ ಮೇಲೇರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದ ಭೀಕರ ಶಬ್ದ ಕೇಳಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ದಾಬಸ್‌ಪೇಟೆಯ ‘ಮೆಡಿಟ್ರೀಟ್ ಆಸ್ಪತ್ರೆ’ಗೆ ದಾಖಲಿಸಿದ್ದಾರೆ. ಸದ್ಯ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಲಾರಿ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಪೊಲೀಸ್ ದೂರು ದಾಖಲು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾದಾಚಾರಿ ಗಿರೀಶ್ ಅವರು ನೀಡಿದ ಹೇಳಿಕೆಯ ಮೇರೆಗೆ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಅಪರಾಧ ಸಂಖ್ಯೆ: 114/2026, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಹಾಗೂ 125(a) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ದಾಬಸ್‌ಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಖಂಗೊಂಡಿದ್ದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡಿರುವ ಲಾರಿ ಚಾಲಕನ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.ಸಿದ್ದಾರೆ.





Continue Reading

Dakshina Kannada

ಮಂಗಳೂರು: ಗ್ಯಾಸ್ ಬೆಲೆ ಏರಿಕೆ, ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ‘ವಿಮೆನ್ ಇಂಡಿಯಾ ಮೂವ್‌ಮೆಂಟ್’ ಪ್ರತಿಭಟನೆ

Published

on

ಮಂಗಳೂರು: ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಮಹಿಳೆಯರು, ಕೂಲಿ ಕಾರ್ಮಿಕರು ಮತ್ತು ಸಾಮಾನ್ಯ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ, ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ವತಿಯಿಂದ ಮಂಗಳೂರು ತಾಲೂಕು ಕಚೇರಿ ಮುಂಭಾಗ ತೀವ್ರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆಯ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬೆಲೆ ಏರಿಕೆಯನ್ನು ಖಂಡಿಸುವ ವಿವಿಧ ಬೇಡಿಕೆಗಳ ಪ್ಲೇಕಾರ್ಡ್‌ಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಬಡವರ ಮೇಲೆ ಆರ್ಥಿಕ ಹೊರೆ: ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ WIM ಮಂಗಳೂರು ನಗರ ಅಧ್ಯಕ್ಷೆ ಆಯಿಷಾ ಯಾಸ್ಮಿನ್ ಅವರು, “ನಿರಂತರವಾಗಿ ಏರಿಕೆಯಾಗುತ್ತಿರುವ ಗ್ಯಾಸ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಬದುಕು ನಡೆಸುವುದು ದುಸ್ತರವಾಗಿದೆ. ಕೇಂದ್ರ ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ, ಜನಸಾಮಾನ್ಯರ ಮೇಲಿನ ಈ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

ತಪ್ಪು ಆರ್ಥಿಕ ನೀತಿಗಳ ಪರಿಣಾಮ: ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷೆ ಆಯಿಷಾ ಬಜ್ಪೆ ಮಾತನಾಡಿ, “ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದಾಗಿ ಮಹಿಳೆಯರು ಮತ್ತು ದುಡಿಯುವ ವರ್ಗದ ಜನರು ದೈನಂದಿನ ಜೀವನ ನಿರ್ವಹಣೆಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರವು ಕಾರ್ಪೊರೇಟ್ ಪರ ನೀತಿಗಳನ್ನು ಬಿಟ್ಟು ಜನಪರ ನೀತಿಗಳನ್ನು ಜಾರಿಗೆ ತರಬೇಕು,” ಎಂದು ಒತ್ತಾಯಿಸಿದರು.

ಮಹಿಳೆಯರ ಬದುಕಿನ ಮೇಲೆ ಗಂಭೀರ ಪರಿಣಾಮ: WIM ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, “ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ಸಾರ್ವಜನಿಕರ ಪ್ರಮುಖ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರವು ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಳೆದಿದೆ. ಇದರಿಂದಾಗಿ ಮಹಿಳೆಯರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಸರ್ಕಾರವು ತಕ್ಷಣವೇ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ನೀಡಬೇಕು,” ಎಂದು ಎಚ್ಚರಿಸಿದರು.

ಈ ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್‌ಮೆಂಟ್‌ನ ಪ್ರಮುಖ ಮುಖಂಡರು, ನೂರಾರು ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು




Continue Reading

arrest

ಗುರುಪುರ ನದಿಯಿಂದ ಅಕ್ರಮ ಮರಳು ಕಳ್ಳತನ: ಬಜಪೆ ಪೊಲೀಸರ ಭರ್ಜರಿ ದಾಳಿ, 127 ಲಾರಿ ಲೋಡ್ ಮರಳು ವಶ, ಓರ್ವನ ಬಂಧನ!

Published

on

ಮಂಗಳೂರು: ಗುರುಪುರ (ಫಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ಕಳ್ಳತನ ನಡೆಸಿ, ಬೃಹತ್ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಅಡ್ಡೆಯೊಂದರ ಮೇಲೆ ಮಂಗಳೂರು ನಗರ ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಅಂದಾಜು 6.35 ಲಕ್ಷ ರೂಪಾಯಿ ಮೌಲ್ಯದ 127 ಲಾರಿ ಲೋಡ್ ಅಕ್ರಮ ಮರಳನ್ನು ಜಪ್ತಿ ಮಾಡಲಾಗಿದ್ದು, ಓರ್ವ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ.

ರಹಸ್ಯ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗರು ಗ್ರಾಮದ ಮಳಲಿ ಸಂಕೇಶ ಎಂಬಲ್ಲಿ ಅನ್ವಿತ್ ಮತ್ತು ರಾಜೇಂದ್ರ ಮೆಂಡಾ ಎಂಬವರು ನದಿಯಿಂದ ಮರಳನ್ನು ಕಳ್ಳತನ ಮಾಡಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಬಾತ್ಮಿದಾರರಿಂದ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಜಂಟಿ ಕಾರ್ಯಾಚರಣೆ ರೂಪಿಸಲಾಯಿತು.

ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ H N ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಶ್ರೀ ಪವನ್ ಮತ್ತು ಸಿಬ್ಬಂದಿ ವರ್ಗದವರು ಜಂಟಿಯಾಗಿ ಮಳಲಿ ಸಂಕೇಶದ ದಾಸ್ತಾನು ಪ್ರದೇಶದ ಮೇಲೆ ದಾಳಿ ನಡೆಸಿದರು.

5 ಕಡೆಗಳಲ್ಲಿ ಬೃಹತ್ ದಾಸ್ತಾನು ಪತ್ತೆ

ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ ಆರೋಪಿಗಳಾದ ಅನ್ವಿತ್ ಮತ್ತು ರಾಜೇಂದ್ರ ಮೆಂಡಾ ಒಟ್ಟು 5 ಪ್ರತ್ಯೇಕ ಸ್ಥಳಗಳಲ್ಲಿ ಮರಳನ್ನು ಅಕ್ರಮವಾಗಿ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಐದೂ ಸ್ಥಳಗಳಿಂದ ಒಟ್ಟು ಸುಮಾರು 127 ಲಾರಿ ಲೋಡ್ ಅಕ್ರಮ ಮರಳನ್ನು ಪತ್ತೆಹಚ್ಚಲಾಗಿದ್ದು, ಇದರ ಅಂದಾಜು ಮೌಲ್ಯ 6,35,000/- ರೂಪಾಯಿ ಎಂದು ಸದ್ಯಕ್ಕೆ ಲೆಕ್ಕಾಚಾರ ಹಾಕಲಾಗಿದೆ. ವಶಪಡಿಸಿಕೊಂಡ ಎಲ್ಲಾ ಮರಳನ್ನು ಸರ್ಕಾರದ ವಶಕ್ಕೆ ಒಪ್ಪಿಸಲಾಗಿದೆ.

ಪ್ರಕರಣ ದಾಖಲು, ಆರೋಪಿಯ ಬಂಧನ

ಈ ಕಾನೂನುಬಾಹಿರ ಕೃತ್ಯಕ್ಕೆ ಸಂಬಂಧಿಸಿದಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 103/2026, ಕಲಂ 303(2) ಜೊತೆಗೆ 3(5) BNS (ಭಾರತೀಯ ನ್ಯಾಯ ಸಂಹಿತೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮೊಗರು ಗ್ರಾಮದ ಅನ್ವಿತ್ ಎಂಬಾತನನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದು, ತೀವ್ರ ವಿಚಾರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ರಾಜೇಂದ್ರ ಮೆಂಡಾ ಸೇರಿದಂತೆ ಇನ್ನುಳಿದ ಆರೋಪಿಗಳ ಪತ್ತೆಗಾಗಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಜಾಲ ಬೀಸಲಾಗಿದೆ.




Continue Reading

Trending

Copyright © 2025 Deevatige

error: Content is protected !!