Dakshina Kannada
ಪಿಲಿಕುಳಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು! ಸಂಕಷ್ಟದಲ್ಲಿ ಕರ್ನಾಟಕದ ಅತ್ಯಂತ ಸುಂದರ ಮೃಗಾಲಯ ಪಿಲಿಕುಳ
ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿಬಿಡಿ” ಪಿಲಿಕುಳದಲ್ಲಿ ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಶಾಕ್ ಆದ ನ್ಯಾಯಾದೀಶರು
ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಬಗ್ಗೆ ದೂರು. ಪ್ರವಾಸಿಗರ ಮೊದಲ ಆಯ್ಕೆ ಆಗಿದ್ದ ಈ ಜಾಗಕ್ಕೆ ಈಗ ಸಂಕಷ್ಟ, ಅವ್ಯವಸ್ಥೆಯಿಂದ ನರಳುತ್ತಿವೆ ಪ್ರಾಣಿಗಳು!
ಈಗ ಅವ್ಯವಸ್ಥೆಯಿಂದ ಸಂಕಷ್ಟ ಅನುಭವಿಸುತ್ತಿದೆ. ತುಕ್ಕುಪಂಜರ, ಅಶುಚಿ ನೀರು, ಲೈಸೆನ್ಸ್ ಇಲ್ಲದೆ ಕಾರ್ಯನಿರ್ವಹಣೆ, ಪ್ರಾಣಿಗಳ ದಯನೀಯ ಸ್ಥಿತಿ ಹೈಕೋರ್ಟ್ ನ್ಯಾಯಾಧೀಶರನ್ನು ಶಾಕ್ ಮಾಡಿದೆ.

ಮಂಗಳೂರು: ಅರಬ್ಬಿ ಸಮುದ್ರದ ತಡಿಯ ಮಂಗಳೂರಿನಲ್ಲಿರೋ (Mangaluru) ಈ ಪಿಲಿಕುಳ ದೇಶದ ಅತ್ಯಂತ ನೈಸರ್ಗಿಕವಾದ ಮೃಗಾಲಯಗಳಲ್ಲಿ ಒಂದು ಅಂತಲೇ ಹೆಸರುವಾಸಿ. ಮಂಗಳೂರು ಪಿಲಿಕುಳ ಪಾರ್ಕ್,270 ಎಕರೆಗಳಲ್ಲಿ ಹಬ್ಬಿದ್ದು, ‘ಪಿಲಿ’ ಅಂದ್ರೆ ಹುಲಿ, ‘ಕುಳ’ ಅಂದ್ರೆ ಕೆರೆ. ಒಂದು ಕಾಲದಲ್ಲಿ ಹುಲಿಗಳು (Tigers) ಬಂದು ನೀರು ಕುಡಿಯುತ್ತಿದ್ದ ಈ ಜಾಗವನ್ನ ಇಂದು ಅಂತರಾಷ್ಟ್ರೀಯ ಮಟ್ಟದ ಜೈವಿಕ ಉದ್ಯಾನವನವಾಗಿ ರೂಪಿಸಲಾಗಿದೆ. ಪಶ್ಚಿಮ ಘಟ್ಟಗಳ ಅಳಿವಿನಂಚಿನಲ್ಲಿರೋ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರೋ ಪಿಲಿಕುಳ, ಕರಾವಳಿಗೆ ಬರೋ ಪ್ರವಾಸಿಗರ ಮೊದಲ ಆಯ್ಕೆ. ಅಂತಹ ಸುಂದರ ತಾಣ ಇಂದು ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. ಪಿಲಿಕುಳದ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಅಂದ್ರೆ, ಇಲ್ಲಿನ ಅವ್ಯವಸ್ಥೆ, ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಹೈಕೋರ್ಟ್ ನ್ಯಾಯಧೀಶರೇ ಶಾಕ್ ಆಗಿದ್ದಾರೆ. ಮಂಗಳೂರಿನ ಪ್ರವಾಸಿಗರ ಹಾಟ್ ಫೇವರೆಟ್ ಪಿಲಿಕುಳ ಮೃಗಾಲಯಕ್ಕೀಗ ಇಂತಹದೊಂದು ಸಂಕಷ್ಟ ಎದುರಾಗಿದೆ. ಇದು ಇಲ್ಲಿರೋ ಮೂಕ ಪ್ರಾಣಿಗಳಿಂದಾದ ತಪ್ಪಲ್ಲ. ಬದಲಾಗಿ ಇಲ್ಲಿನ ಆಡಳಿತ ವ್ಯವಸ್ಥೆಯಿಂದ ಸ್ವಯಂ ಕೃತ ಅಪರಾಧ. ತುಕ್ಕು ಹಿಡಿದ ಪಂಜರ, ತುಕ್ಕು ಹಿಡಿದ ಪಂಜರ, ಕಲುಷಿತ ನೀರು ಅಶುಚಿ ವಾತಾವರಣ ಇದು ಪಿಲಿಕುಳ ಮೃಗಾಲಯದ ಸದ್ಯದ ಸ್ಥಿತಿ.

ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಕೇವಲ ದೂರು ನೀಡದೆ, ಮೃಗಾಲಯದ ಒಳಗಿನ ಭೀಕರ ಸ್ಥಿತಿಯನ್ನು ಎತ್ತಿ ತೋರಿಸುವ ಭದ್ರ ಸಾಕ್ಷ್ಯಗಳನ್ನು ಹೈಕೋರ್ಟ್ಗೆ ನೀಡಿದ್ದಾರೆ. ಸೊರಗಿದ ಪ್ರಾಣಿಗಳ ಫೋಟೋಗಳು: ಸರಿಯಾದ ಆಹಾರವಿಲ್ಲದೆ ಎಲುಬು ಕಾಣುವಂತಾಗಿರುವ ಚಿರತೆ ಮತ್ತು ಹುಲಿಗಳ ಫೋಟೋಗಳು. ಅಸುರಕ್ಷಿತ ಪಂಜರಗಳು, ತುಕ್ಕು ಹಿಡಿದು ಕಿತ್ತುಹೋಗಿರುವ ಕಬ್ಬಿಣದ ಸರಳುಗಳು, ಇದರಿಂದ ಪ್ರಾಣಿಗಳು ಹೊರಬರುವ ಅಥವಾ ಗಾಯ ಮಾಡಿಕೊಳ್ಳುವ ಅಪಾಯವಿದೆ ಎಂದು ತೋರಿಸಿದ್ದಾರೆ. ಪ್ರಾಣಿಗಳ ಕುಡಿಯುವ ನೀರಿನ ತೊಟ್ಟಿಗಳಲ್ಲಿ ಪಾಚಿ ಕಟ್ಟಿರುವುದು ಮತ್ತು ಪ್ರಾಣಿಗಳ ಮಲ-ಮೂತ್ರ ವಿಲೇವಾರಿ ಆಗದೆ ಪಂಜರದಲ್ಲೇ ಕೊಳೆಯುತ್ತಿರುವುದು. ಅನಾರೋಗ್ಯಕ್ಕೀಡಾದ ಪ್ರಾಣಿಗಳಿಗೆ ಸರಿಯಾದ ಸಮಯದಲ್ಲಿ ವೈದ್ಯಕೀಯ ನೆರವು ಸಿಗುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅವರು ಸಂಗ್ರಹಿಸಿ ದಾಖಲೆಯಾಗಿ ನೀಡಿದ್ದಾರೆ.

ಪಿಲಿಕುಳ ಮೃಗಾಲಯದ ಕರ್ಮ ಕಾಂಡಗಳು ಹೈಕೋರ್ಟ್ನಲ್ಲಿ ಹೊರಬಿದ್ದಿವೆ. ಪ್ರಾಣಿಗಳನ್ನು ಇರಿಸಿರುವ ಪಂಜರಗಳು ಸಂಪೂರ್ಣ ತುಕ್ಕು ಹಿಡಿದಿವೆ, ಅಲ್ಲಿ ಸರಿಯಾದ ಭದ್ರತೆಯೇ ಇಲ್ಲ. ಅಶುಚಿಯಾದ ಪರಿಸರದಲ್ಲಿ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಕೆಂಡಾಮಂಡಲವಾಗಿದೆ. ಇಲ್ಲಿ ಮತ್ತೊಂದು ದುರಂತ ಅಂದ್ರೆ ಜನಮನ್ನಣೆ ಪಡೆದ ಈ ಪಾರ್ಕ್ನ ಲೈಸೆನ್ಸ್ ಅವಧಿ 2025ರ ಡಿಸೆಂಬರ್ 1ಕ್ಕೇ ಮುಕ್ತಾಯವಾಗಿದೆ. ಅಂದ್ರೆ ಸದ್ಯ ಯಾವುದೇ ಪರವಾನಗಿ ಇಲ್ಲದೇ ಪಿಲಿಕುಳ ಮೃಗಾಲಯ ನಡೀತಿದೆ. ಇಷ್ಟೆಲ್ಲಾ ಅವ್ಯವಸ್ಥೆ ಬಗ್ಗೆ ಕೇಂದ್ರ ಪ್ರಾಣಿ ಸಂಗ್ರಹಾಲಯ ಪ್ರಾಧಿಕಾರ 2023 ಮತ್ತು 2025ರಲ್ಲಿ ಶೋಕಾಸ್ ನೋಟಿಸ್ ನೀಡಿದ್ರೂ ಅಧಿಕಾರಿಗಳು ಮಾತ್ರ ಕ್ಯಾರೆ ಅಂದಿಲ್ಲ. ಮಲೀನಗೊಂಡ ನೀರು ಕುಡಿದು, ಸರಿಯಾದ ಚಿಕಿತ್ಸೆ ಸಿಗದೆ ಮೂಕ ಪ್ರಾಣಿಗಳು ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿವೆ ಅನ್ನೋದು ಅರ್ಜಿದಾರರ ಗಂಭೀರ ಆರೋಪಕ್ಕೆ ಹೈಕೋರ್ಟ್ ಗರಂ ಆಗಿದೆ. ಇವುಗಳನ್ನು ನೋಡಿದ ನ್ಯಾಯಾಧೀಶರು ಆಘಾತ ಮತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿ” ಎಂದು ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಹೈಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮುಂದುವರಿಸಿದ್ದು, ಮೃಗಾಲಯದ ಆಡಳಿತವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ಅಥವಾ ವ್ಯವಸ್ಥಿತವಾಗಿ ಸುಧಾರಿಸುವಂತೆ ಸೂಚಿಸಿದೆ. ಕರ್ನಾಟಕ ಹೈಕೋರ್ಟ್ ಫೆಬ್ರವರಿ ಮೊದಲ ವಾರದಲ್ಲಿ ಪಿಲಿಕುಳ ಮೃಗಾಲಯದ ಬಗ್ಗೆ ಅತ್ಯಂತ ಕಠಿಣವಾದ ನಿಲುವನ್ನು ತಳೆದಿದೆ.

ಹೈಕೋರ್ಟ್ ಸರ್ಕಾರಕ್ಕೆ ಈ ಮೂರು ಪ್ರಶ್ನೆಗಳನ್ನು ಕೇಳಿದ್ದು, ಪರವಾನಗಿ ಇಲ್ಲದೆ ಇಷ್ಟು ದಿನ ಮೃಗಾಲಯವನ್ನು ಹೇಗೆ ನಡೆಸಲು ಬಿಟ್ಟಿದ್ದೀರಿ? ಪ್ರಾಣಿಗಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರೀಕ್ಷೆಯ ವರದಿ ಎಲ್ಲಿದೆ? ಪ್ರಾಣಿಗಳ ಅಸಹಜ ಸಾವುಗಳ ಬಗ್ಗೆ ಪೋಸ್ಟ್ ಮಾರ್ಟಂ (Post-mortem) ವರದಿಯನ್ನು ತಕ್ಷಣ ಸಲ್ಲಿಸಿ. ಎಂದು ಉತ್ತರ ನೀಡಲು ತಿಳಿಸಿದೆ. ಮೃಗಾಲಯದ ನಿರ್ದೇಶಕರು ಮತ್ತು ಅಧಿಕಾರಿಗಳು ಇತ್ತೀಚೆಗೆ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಅಧಿಕ ಮಳೆಯಿಂದಾಗಿ ತಡೆಗೋಡೆ ಕುಸಿದು ಸಮಸ್ಯೆ ಉಂಟಾಗಿದೆ ಎಂದು ಸಮಜಾಯಿಷಿ ನೀಡಿದ್ದರು. ಆದರೆ, ನ್ಯಾಯಾಲಯವು ಇದನ್ನು “ಆಡಳಿತಾತ್ಮಕ ವೈಫಲ್ಯ” ಎಂದು ಕರೆದಿದೆ. ಸರಿಯಾದ ಹಣಕಾಸಿನ ಹಂಚಿಕೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಮಾಜಿ ನಿರ್ದೇಶಕರು (ಜಯಪ್ರಕಾಶ್ ಭಂಡಾರಿ) ಈ ಹಿಂದೆ ರಾಜೀನಾಮೆ ನೀಡುವಾಗ ತಿಳಿಸಿದ್ದರು.

ಮುಂದಿನ ಕ್ರಮ ಏನಾಗಬಹುದು?
ನ್ಯಾಯಾಲಯದ ಸೂಚನೆಯಂತೆ ಸರ್ಕಾರವು ಮೃಗಾಲಯದ ನಿರ್ವಹಣೆಯನ್ನು ಸಂಪೂರ್ಣವಾಗಿ ಅರಣ್ಯ ಇಲಾಖೆ ಅಥವಾ ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ (KZA) ಹಸ್ತಾಂತರಿಸುವ ಸಾಧ್ಯತೆಯಿದೆ. ಇಲ್ಲದಿದ್ದರೆ ಪ್ರಾಣಿಗಳನ್ನು ಬೇರೆ ಸುರಕ್ಷಿತ ಮೃಗಾಲಯಗಳಿಗೆ ವರ್ಗಾಯಿಸುವ ಆದೇಶ ಹೊರಬರುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು (PIL) ಅತ್ಯಂತ ತುರ್ತು ವಿಷಯವೆಂದು ಪರಿಗಣಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ ತಿಂಗಳ ಮೂರನೇ ವಾರದಲ್ಲಿ ನಡೆಸಲು ನ್ಯಾಯಾಲಯ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಾಣಿಗಳ ಪರಿಸ್ಥಿತಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ (CZA) ಸೂಚಿಸಿದೆ ಒಂದು ವೇಳೆ ಮೃಗಾಲಯದ ಪರವಾನಗಿಯನ್ನು ನವೀಕರಿಸಲು ಕೇಂದ್ರ ಮೃಗಾಲಯ ಪ್ರಾಧಿಕಾರ ನಿರಾಕರಿಸಿದರೆ, ಅಲ್ಲಿರುವ ಪ್ರಾಣಿಗಳನ್ನು ಶ್ರೀ ಚಾಮರಾಜೇಂದ್ರ ಮೃಗಾಲಯ (ಮೈಸೂರು) ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ ಅಥವಾ ಬನ್ನೇರುಘಟ್ಟ ಜೈವಿಕ ಉದ್ಯಾನವನ (ಬೆಂಗಳೂರು) ಕ್ಕೆ ವರ್ಗಾಯಿಸುವ ಸಾಧ್ಯತೆಯಿದೆ

ಪಿಲಿಕುಳ ಒಂದು ಕಾಲದಲ್ಲಿ ಜಿಲ್ಲಾಡಳಿತದ ಅಡಿಯಲ್ಲಿದ್ದ ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರ (PNDA) ಮೂಲಕ ನಿರ್ವಹಿಸಲ್ಪಡುತ್ತಿತ್ತು. ಆದರೆ ಈಗ ಉಂಟಾಗಿರುವ ಅವ್ಯವಸ್ಥೆಯಿಂದಾಗಿ, ಇದನ್ನು ಸಂಪೂರ್ಣವಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ (KZA) ಸುಪರ್ದಿಗೆ ಪಡೆಯುವಂತೆ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಕೆ.ಜೆಡ್.ಎ ಅಡಿಯಲ್ಲಿ ಬಂದರೆ ಪ್ರಾಣಿಗಳಿಗೆ ನಿರಂತರ ಅನುದಾನ ಮತ್ತು ಪರಿಣಿತ ವೈದ್ಯರ ಸೇವೆ ಸಿಗಲಿದೆ.

ಪಿಲಿಕುಳ ಮೃಗಾಲಯ ಒಂದು ಕಾಲದಲ್ಲಿ ಇದು ಕರ್ನಾಟಕದ ಅತ್ಯಂತ ಸುಂದರ ಮೃಗಾಲಯಗಳಲ್ಲಿ ಒಂದಾಗಿತ್ತು ಇದನ್ನು 1990ರ ದಶಕದ ಉತ್ತರಾರ್ಧದಲ್ಲಿ ಮಂಗಳೂರಿನ ವಾಮಂಜೂರಿನಲ್ಲಿ ಸ್ಥಾಪಿಸಲಾಯಿತು. ‘ಪಿಲಿಕುಳ’ ಎಂದರೆ ತುಳು ಭಾಷೆಯಲ್ಲಿ “ಹುಲಿಗಳ ಕೆರೆ” ಎಂದರ್ಥ. ಇಲ್ಲಿ ಅಪರೂಪದ ರಾಜನಾಗ (King Cobra) ಸಂತಾನೋತ್ಪತ್ತಿ ಕೇಂದ್ರವಿದ್ದು, ಇದು ಏಷ್ಯಾದಲ್ಲೇ ಪ್ರಸಿದ್ಧವಾಗಿದೆ. ಸುಮಾರು 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿರುವ ಈ ಉದ್ಯಾನವನವು ಕರಾವಳಿಯ ಜೀವವೈವಿಧ್ಯದ ಕೇಂದ್ರವಾಗಿತ್ತು.
ಪಿಲಿಕುಳ ರೀಜನಲ್ ಸೈನ್ಸ್ ಸೆಂಟರ್ ಮೃಗಾಲಯಕ್ಕೆ ಹೋಲಿಸಿದರೆ ವಿಜ್ಞಾನ ಕೇಂದ್ರದ ಸ್ಥಿತಿ ಉತ್ತಮವಾಗಿದೆ. ಈಗ ಹೈಕೋರ್ಟ್ನ ಫೆಬ್ರವರಿ 3ನೇ ವಾರದ ವಿಚಾರಣೆಯ ಮೇಲೆ ಎಲ್ಲರ ಕಣ್ಣಿದೆ. ಅಲ್ಲಿ ಹೊರಬರುವ ತೀರ್ಪು ಪಿಲಿಕುಳದ ಪ್ರಾಣಿಗಳ ಭವಿಷ್ಯವನ್ನು ನಿರ್ಧರಿಸಲಿದೆ.
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
award
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.
ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.
ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
