Bantawala
ಬಾಕ್ಸೆಟ್ ಸಾಗಾಟದ ಲಾರಿಗಳಿಗೆ ಪರವಾನಿಗೆ ಇದೆಯಲ್ಲ ಓಕೆ ! ಮತ್ತೆ ಜನರಿಗೆ ಆಕ್ರೋಶ ಯಾಕೆ ?
ಕರಾವಳಿ ಪ್ರದೇಶದಿಂದ ಹೊರ ರಾಜ್ಯಗಳಿಗೆ ಕಳೆದ ಹಲವು ಸಮಯಗಳಿಂದ ಬಾಕ್ಸೆಟ್ ಸಾಗಾಟದ ಲಾರಿಗಳ ಘರ್ಜನೆ ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಲವು ಗಂಭೀರ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಅತಿಯಾದ ಭಾರ ಹೊತ್ತ ಬಾಕ್ಸೈಟ್ ಲಾರಿಗಳಿಂದಾಗಿ ಕರಾವಳಿಯ ಪ್ರಮುಖ ಹೆದ್ದಾರಿಗಳು ಮತ್ತು ಒಳರಸ್ತೆಗಳು ಗುಂಡಿಬಿದ್ದು ಹಾಳಾಗಿ ಹೋಗಿದೆ. ಲಾರಿಗಳ ಅತಿ ವೇಗ ಮತ್ತು ಅಜಾಗರೂಕ ಚಾಲನೆಯಿಂದಾಗಿ ಸಣ್ಣ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವಭಯದಲ್ಲಿ ಸಂಚರಿಸುವಂತಾಗಿದೆ. ಸಾಗಾಟದ ವೇಳೆ ಲಾರಿಗಳಿಂದ ಹಾರುವ ಬಾಕ್ಸೈಟ್ ಪುಡಿ ರಸ್ತೆಯ ಪಕ್ಕದ ಮನೆಗಳು, ಅಂಗಡಿಗಳು ಮತ್ತು ಕೃಷಿ ಭೂಮಿಯ ಮೇಲೆ ಕುಳಿತು ಆರೋಗ್ಯ ಸಮಸ್ಯೆಗಳನ್ನು (ಶ್ವಾಸಕೋಶದ ತೊಂದರೆ) ಉಂಟುಮಾಡುವ ಭಯವಿದೆ. ರಾತ್ರಿ ಎನ್ನದೆ ಸಂಚರಿಸುವ ಈ ಬೃಹತ್ ಲಾರಿಗಳ ಶಬ್ದದಿಂದಾಗಿ ಸ್ಥಳೀಯ ನಿವಾಸಿಗಳ ನೆಮ್ಮದಿಗೆ ಭಂಗ ಬಂದಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಅದಿರನ್ನು ಸಾಗಿಸುವುದು ಇಲ್ಲಿ ಸಾಮಾನ್ಯವಾಗಿದ್ದು, ಹಲವು ಬಾರಿ ಈ ಸಾಗಾಟವು ಅಕ್ರಮ ಗಣಿಗಾರಿಕೆಯ ಭಾಗವಾಗಿರುತ್ತದೆಯೇ ಅಥವಾ ಸರಿಯಾದ ಪರವಾನಗಿ ಹೊಂದಿದೆಯೇ ಎಂಬ ಸಂಶಯ ಸ್ಥಳೀಯರಲ್ಲಿ ಬಂದಾಗ ಬಾಕ್ಸೆಟ್ ಸಾಗಾಟದ ಲಾರಿಗಳ ಘರ್ಜನೆಗೆ ಸ್ಥಳೀಯರು ಎಚ್ಚರಿಕೆ ನೀಡಿದ್ದೂ ಆಯಿತು. ಆವರದೇ ಆದ ಸಾಮ್ರಾಜ್ಯದಂತೆ ಅಪಘಾತಗಳನ್ನೂ ನಡೆಸಿದಾಗಲೂ ಬಾಕ್ಸೆಟ್ ಸಾಗಾಟದ ಲಾರಿಗಳದೇ ಮೇಲುಗೈ ಆಯಿತು. ನಂತರ ನಡೆದಿರುವುದು ಪ್ರತಿಭಟನೆ …

ರಸ್ತೆಯಲ್ಲಿ ಓಡಾಡುವ ನಾಗರಿಕರ ಮತ್ತು ವಾಹನ ಸವಾರರ ಪಾಲಿಗೆ ಅಕ್ರಮ ಹಾಗೂ ಸಾರಿಗೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವ ಬಾಕ್ಸೈಟ್ ಸಾಗಾಟದ ಯಮದೂತ ಲಾರಿಗಳು ಸಂಕಷ್ಟ ತಂದೊಡ್ಡಿದೆಯೆಂದು ಈ ಬಗ್ಗೆ ಎಚ್ಚೆತ್ತುಕೊಂಡು ಬಾಕ್ಸೈಟ್ ಲಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಲವು ಬಾರಿ ಮನವಿ ನೀಡಿದ್ದರೂ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸದ ಕಾರಣ ಕನ್ಯಾನ ನೆಲ್ಲಿಕಟ್ಟೆ ಜಂಕ್ಷನಲ್ಲಿ ಪ್ರತಿಭಟನೆಯೂ ನಡೆಯಿತು. ಎಲ್ಲದಕ್ಕೂ ಉತ್ತರ ಒಂದೇ ಆಗಿತ್ತು. ಅದು ಪರವಾನಿಗೆ ಇದ್ದು ಆಗುತ್ತಿರುವ ಸಾಗಾಟ..ಎಷ್ಟೋ ವರ್ಷಗಳ ಪರವಾನಿಗೆಯಡಿಯಲ್ಲಿ ಮಂತ್ರಿಗಳ ಕೃಪಾ ಕಟಾಕ್ಷದಲ್ಲಿಯೇ ನಡೆಯುತ್ತಿರುವ ಬಾಕ್ಸೆಟ್ ಸಾಗಾಟ. ಹೌದು ! ಈಗ ಹೋರಾಟಗಾರರು, ಮಾದ್ಯಮದವರು, ನಾಗರೀಕರು ಇದರ ಎದುರು ಹೋರಾಟ ಮಾಡುವುದು ಕಷ್ಟ ಸಾಧ್ಯ ಎಂದು ಮೌನವಾಗಿದ್ದಾರೆ.
ಈಗಲೂ ಬಾಕ್ಸೆಟ್ ಸಾಗಾಟದ ಲಾರಿಗಳ ಘರ್ಜನೆ ಕೇಳಿಸುತ್ತಲೇ ಇದೆ. 6ಅಲ್ಲ 8ಅಲ್ಲ 14 ಅಲ್ಲ 18ರಿಂದಲೂ ಹೆಚ್ಚು ಚಕ್ರದ ಲಾರಿಗಳು…ಅದು ಸಾಗುವ ವೇಳೆಗೆ ರಾಜ ಮರ್ಯಾದೆಯನ್ನು ನೀಡಲೇ ಬೇಕು ಇಲ್ಲವಾದರೆ ಅನುಭವಿಸಬೇಕು ಎಂತಾಗಿದೆ ಸ್ಥಿತಿ.

ಸಾಗಾಟವನ್ನು ನಿಲ್ಲಿಸಿ ಪ್ರಶ್ನಿಸಿ ಆಯ್ತು, ಸಾರಿಗೆ ಇಲಾಖೆಗೆ ತಿಳಿಸಿ ಆಯ್ತು, ಜನ ಸೇರಿ ಪ್ರತಿಭಟನೆ ಮಾಡಿ ಆಯ್ತು, ಈಗ ಜನ ಕೇಳುವುದು ಮಾದ್ಯಮವೇಕೆ ಮೌನವಾಗಿದೆ ? ಎಂದು. ಅದು ಸಹಜವೇ ಕೇಳಲೇ ಬೇಕು, ಜನರ ಸಮಸ್ಯೆಗಳಿಗೆ ಕಟ್ಟ ಕಡೆಗೆ ಪರಿಹಾರ ಸಿಗುವುದು ಮಾದ್ಯಮಗಳಿಂದ ಎಂಬುವುದು ಜನರಿಗೂ ಗೊತ್ತು.
ವಿಟ್ಲದ ಮಾದ್ಯಮ ವರದಿಗಾರ ರಾಮ್ದಾಸ್ ವಿಟ್ಲ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಈ ಬಗ್ಗೆ ಕೇಳಿಯೇ ಬಿಟ್ಟಿದ್ದಾರೆ. ರಾತ್ರಿ ಹೊತ್ತು ಸಾಗಾಟವಾಗುತ್ತಿರುವ ಬಾಕ್ಸೈಟ್ ಲಾರಿಗಳ ವಿಡಿಯೋವನ್ನು ಕಳುಹಿಸಿ ಪ್ರಶ್ನಿಸಿದ್ದಾರೆ. ಇದಕ್ಕೆ ಸಮರ್ಪಕವಾದ ಉತ್ತರವನ್ನು ಮಾಹಿತಿ ರೂಪದಲ್ಲಿ ಎಸ್. ಪಿ. ಯವರು ನೀಡಿದ್ದಾರೆ. ಅದು ಈ ರೀತಿ ಇದೆ.

ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಪಾದೇಕಲ್ಲು ಎಂಬಲ್ಲಿ ದಾಖಲಾತಿ ಮತ್ತು ಪರವಾನಿಗೆಯಲ್ಲಿ ( MDP No.252617431T003662), (Lease No.DSKN5413) ಬಾಕ್ಸೆಟ್ ಮಣ್ಣು ಲಾರಿಗಳ ಮುಖಾಂತರ ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದು. ಸದ್ರಿ ಬಾಕ್ಸೆಟ್ ಸಾಗಾಟ ಮಾಡುತ್ತಿದ್ದ ಬಗ್ಗೆ ಶಾಲಾ ಮಕ್ಕಳಿಗೆ ಶಾಲೆಗೆ ಹೋಗಿ ಬರುವಾಗ ತೊಂದರೆಯಾಗುತ್ತಿರುವ ಬಗ್ಗೆ ದಿನಾಂಕ 30-12-2026 ರಂದು ಸ್ಥಳೀಯರು ಪ್ರತಿಭಟನೆ ಮಾಡಿದ್ದು. ಅದರಂತೆ ಶಾಲಾ ಮಕ್ಕಳು ಬೆಳಗ್ಗೆ ಶಾಲೆಗೆ ಹೋಗುವ ಸಮಯ ಮತ್ತು ಶಾಲೆ ಬಿಡುವ ಸಮಯ ಲಾರಿಗಳನ್ನು ಸಂಚಾರ ಮಾಡದಂತೆ ಬಾಕ್ಸೇಟ್ ಸರಕು ಸಾಗಾಣಿಕೆ ಮಾಡುವವರಿಗೆ ತಿಳುವಳಿಕೆ ನೀಡಲಾಗಿದೆ ಎಂಬುವುದಾಗಿದೆ.
ಬಾಕ್ಸೈಟ್ ಸಾಗಾಟದ ಸಮಸ್ಯೆಗಳ ವಿರುದ್ಧ ಡಿಜಿಟಲ್ ಮಾದ್ಯಮದಲ್ಲಿ ಪ್ರಸಾರವಾದ ವಿಡಿಯೋ ಸ್ಟೇಟಸ್
ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿರುವಂತೆಯೇ ಈಗ ರಾತ್ರಿ ವೇಳೆಯಲ್ಲಿಯೇ ಸಾಗಾಟ ನಡೆಯುತ್ತಿದೆ. ಆದರೆ ಒಳ ರಸ್ತೆಯಲ್ಲಿ ಮಿತಿಮೀರಿ ಸಾಗಾಟ ನಡೆಯುತ್ತಿರುವುದು, ವೇಗದಿಂದ ದೂಳು ಹಾರಿ ರಸ್ತೆ ದೂಳುಮಯವಾಗಿರುವುದು, ರಸ್ತೆಯುದ್ದಕ್ಕೂ ಮಣ್ಣು ಚೆಲ್ಲುತ್ತಿರುವುದು, ವೇಗ ನಿಯಂತ್ರಣ ಇಲ್ಲದಿರುವುದು ಈಗಲೂ ಕಂಡುಬರುತ್ತಿದೆ. ಆದುದರಿಂದ ಜನರ ಪ್ರಬಲ ಒತ್ತಾಯದಂತೆ ಸ್ಥಳೀಯ ಆಡಳಿತ ಮತ್ತು ಸಾರಿಗೆ ಇಲಾಖೆ (RTO) ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಲಾರಿಗಳಿಗೆ ವೇಗ ನಿಯಂತ್ರಕ ಅಳವಡಿಸಬೇಕು ಮತ್ತು ಸಾಗಾಟದ ವೇಳೆ ಅದಿರು ಚೆಲ್ಲದಂತೆ ಟಾರ್ಪಾಲಿನ್ ಬಳಕೆಯನ್ನು ಕಡ್ಡಾಯಗೊಳಿಸಬೇಕು ಎಂಬುದಾಗಿದೆ. ಸಂಬಂದ ಪಟ್ಟವರು ಕ್ರಮ ಕೈಗೊಳ್ಳುವಿರಾಗಿ ಜನ ನಂಬಿದ್ದಾರೆ.

Bantawala
ವಿಟ್ಲದಲ್ಲಿ ಬಡಕಾರ್ಮಿಕೆ ರಾಜೇಶ್ವರಿಯವರ ಮನೆ ಬೆಂಕಿಗಾಹುತಿ
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮನೆಯೊಡತಿ ರಾಜೇಶ್ವರಿ ಅವರು ಎಂದಿನಂತೆ ಬೆಳಗ್ಗೆ ಬೀಗ ಹಾಕಿ ಅಡಿಕೆ ಗಾರ್ಬನ್ ಕೆಲಸಕ್ಕೆ ಹೋಗಿದ್ದರೆ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡು ಮನೆಯನ್ನು ಭಸ್ಮ ಮಾಡಿದೆ.

ಮನೆಯಿಂದ ವಿಪರೀತ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣ ಜಮಾಯಿಸಿ ಬೆಂಕಿಯನ್ನು ನಂದಿಸುವಷ್ಟರಲ್ಲಿಯೇ ಮನೆಯೊಳಗಿದ್ದ ಮಕ್ಕಳ ಬಟ್ಟೆಬರೆ ಶಾಲಾ ಪುಸ್ತಕಗಳು, ಮನೆಯ ದಾಖಲೆಪತ್ರಗಳು ಸೇರಿದಂತೆ ಮನೆಯೊಳಗಿದ್ದ ವಸ್ತುಗಳು ಕರಟಿಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಡ ಕಾರ್ಮಿಕೆ ಗಾರ್ಬಲ್ ಕೆಲಸಕ್ಕೆ ಹೋಗಿ ದುಡಿದು ಜೀವನ ಸಾಗಿಸುತ್ತಿದ್ದು, ಮನೆ ಬೆಂಕಿಗಾಹುತಿಯಾದ ಘಟನೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಅವರ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.
accident
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ದುರ್ಮರಣ..
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು ತಡರಾತ್ರಿ 2-30ರ ಸುಮಾರಿಗೆ ಚೆನ್ನರಾಯಪಟ್ಟಣ ಹೊರವಲಯದಲ್ಲಿ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ನಿಶಿತ್ ನಾಯ್ಕ್ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ಪುಣಚ ಗ್ರಾಮದ ಬುಡಲೆ ನಿವಾಸಿ, ಮಾಜಿ ಸೈನಿಕರಾಗಿರುವ ಕುಂಞಣ್ಣ ನಾಯ್ಕ್ ಪುತ್ರ ನಿಧನದ ಸುದ್ದಿ ಗ್ರಾಮಸ್ಥರ ಅತೀವ ದು:ಖಕ್ಕೆ ಕಾರಣವಾಗಿದೆ. ಮೃತರು ತಂದೆ ಕುಂಞಣ್ಣ ನಾಯ್ಕ, ತಾಯಿ ರಾಧಾ ಹಾಗೂ ಓರ್ವ ಸಹೋದರಿ ನಿಶಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇದೀಗ ಹಾಸನದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ರಾತ್ರಿ ಹತ್ತು ಗಂಟೆಯ ಸುಮಾರಿಗೆ ಪ್ರಾರ್ಥಿವ ಶರೀರ ಪುಣಚ ಗ್ರಾಮ ತಲುಪಲಿದೆ ಎಂದು ಮೂಲಗಳು ತಿಳಿಸಿವೆ.
Bantawala
ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ; ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನಾ ಸಭೆ
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನೆಯ ಸಭೆ ನಡೆಯಿತು.
ಹಿಂದಿನ ಟ್ರಸ್ಟಿಗಳ ಮರಣ, ರಾಜೀನಾಮೆ, ಹಾಗೂ ವಜಾಗೊಂಡ ಸದಸ್ಯರ ಸ್ಥಾನಕ್ಕೆ ನೂತನ ಟ್ರಸ್ಟಿಗಳನ್ನು ಆಯ್ಕೆ ಮಾಡಲಾಯಿತು. ಕುದ್ರಿಯ ಗುತ್ತು ಟ್ರಸ್ಟಿನ ನೂತನ ಗೌರವಾಧ್ಯಕ್ಷರಾಗಿ ವಿಠಲ ಮೋನಪ್ಪ ಶೆಟ್ಟಿ ನಾಂದೇಡ್, ಅಧ್ಯಕ್ಷರಾಗಿ ಚಂದ್ರಹಾಸ ಎಂ ಶೆಟ್ಟಿ ಅಳಕೆಮಜಲು, ಉಪಾಧ್ಯಕ್ಷರಾಗಿ ರೋಹಿಣಿ ರೈ ನೇರಳಕಟ್ಟೆ, ಹಾಗೂ ಚಂದ್ರಹಾಸ ರೈ ಮುಲ್ಕಾಜೆ ಮಾ ಡ, ಕಾರ್ಯದರ್ಶಿಯಾಗಿ ಗಣೇಶ್ ರೈ, ಕೋಶಾಧಿಕಾರಿಯಾಗಿ ಧನಂಜಯ ಶೆಟ್ಟಿ ಮುತ್ತೂರು, ಇವರನ್ನು ಟ್ರಸ್ಟಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರನ್ನು ಕುಟುಂಬಿಕರ ಮತ್ತು ಟ್ರಸ್ಟಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.
-
crime7 days agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 month agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada2 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala1 month agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
crime3 weeks agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
-
Bantawala2 months agoಕೇಪು ಅಕ್ರಮ ಕೋಳಿ ಅಂಕಕ್ಕೆ ಧಾಳಿ; 16ಜನ, 22ಹುಂಜಗಳ ಸಹಿತ ಬಾಳು ಕತ್ತಿ ವಶಕ್ಕೆ ಪಡೆದ ವಿಟ್ಲ ಪೊಲೀಸರು.. ಪುತ್ತೂರು ಶಾಸಕರ ಸಹಿತ ಜಾಗ ನೀಡಿದ ಮಾಲಿಕನ ಮೇಲೂ ಬಿತ್ತು ಕೇಸು.
-
DEATH2 weeks agoವಿಟ್ಲದ ಜನಪ್ರಿಯ ಚಾಲಕ ಕುಮಾರಣ್ಣ ಹೃದಯಾಘಾತಕ್ಕೆ ಬಲಿ
-
Bantawala4 weeks agoನಿನ್ನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ.. ; ಇಂದು ಸಂಜೆ ನೇತ್ರಾವತಿ ನದಿಯಲ್ಲಿ ಪತ್ತೆ.. ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ..

