karavali
ತನ್ನಿಂದ ತಾನೇ ತೂಗಿದ ಪಿಲಿಚಂಡಿ ದೈವದ ಉಯ್ಯಾಲೆ; ಬೈಕಂಪಾಡಿಯಲ್ಲಿ ನಡೆಯಿತು ಬೆಚ್ಚಿಬೀಳಿಸೋ ಘಟನೆ
ಹುಲಿ ದೈವ ಮಾಡಿತು ಪವಾಡ, ನೇಮೋತ್ಸವದ ವೇಳೆ ಬಹಿರಂಗವಾಯಿತು ಬೆಚ್ಚಿ ಬೀಳೋ ಸತ್ಯ! ಇದು ಪಿಲ್ಚಂಡಿ ಕಾರ್ಣಿಕ! ತುಳುನಾಡು ದೈವದೇವರ ನಾಡು.ಇಲ್ಲಿನ ನಾಗಾರಾಧನೆ, ದೈವಾರಾಧನೆಗಳೇ ವಿಶಿಷ್ಠವಾಗಿದ್ದು, ಇಲ್ಲಿನ ದೈವಗಳು ತಮ್ಮ ಕಾರಣಿಕವನ್ನು ಮೆರೆಯುತ್ತಿರುವುದು ಆಗಾಗ ಬೆಳಕಿಗೆ ಬರುತ್ತಿದ್ದು, ಇದೀಗ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ.
ಮಂಗಳೂರು: ನೆರೆದವರಿಗೆ ಅಚ್ಚರಿ, ವಿಸ್ಮಯ, ಭಯ (Fear) ಎಲ್ಲವೂ ಒಟ್ಟಿಗೆ ಆದ ಭಾವ! ಕಲಿಯುಗದಲ್ಲೂ ಕಾರ್ಣಿಕ ತೋರುತ್ತಿರುವ ದೈವಗಳ (Demi God) ಇರುವಿಕೆಗೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೆ? ಇದು ಫಿಸಿಕ್ಸ್ ಮೀರಿದ್ದು, ವಿಜ್ಞಾನ ದಾಟಿದ್ದು ಹಾಗೆಯೇ ಇದನ್ನು ನೋಡಲು ಬೇರೆಯದೇ ಕಣ್ಣು ಬೇಕು! ನೇಮೋತ್ಸವದ ವೇಳೆ ತನ್ನಿಂದ ತಾನೇ ದೈವದ ಉಯ್ಯಾಲೆ ತೂಗಿ, ಮಂಗಳೂರಿನಲ್ಲಿ (Mangaluru) ಮತ್ತೆ ದೈವ ಪವಾಡಕ್ಕೆ ಭಕ್ತ ವರ್ಗಕ್ಕೆ ಅಚ್ಚರಿ (Surprise) ಸೃಷ್ಟಿಯಾಗಿದೆ.

ಬೈಕಂಪಾಡಿಯಲ್ಲಿ ನಡೆಯಿತು ಬೆಚ್ಚಿಬೀಳಿಸೋ ಘಟನೆ
ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕುಡುಂಬೂರು ನಡುಗಿರಿ ದೈವಸ್ಥಾನದಲ್ಲಿ ಘಟನೆಯಾಗಿದ್ದು, ಪಿಲಿಚಂಡಿ ನೇಮೋತ್ಸವದಲ್ಲಿ ತನ್ನಿಂದ ತಾನೇ ತೂಗಿದ ದೈವದ ಉಯ್ಯಾಲೆ ತೂಗಿದೆ. ಉಯ್ಯಾಲೆ ರೀತಿಯ ದೈವದ ಮಂಚದಲ್ಲಿ ದೈವ ತನ್ನ ಪವಾಡ ತೋರಿಸಿದೆ.
ಪಿಲಿಚಾಮುಂಡಿ ದೈವದ ನೇಮೋತ್ಸವಕ್ಕೆ ಗಗ್ಗರ ಇಡುವಾಗ ನಡೆದ ಘಟನೆಯ ವಿಡಿಯೋ ವೈರಲ್ ಆಗಿದೆ. ಉಗ್ರಾವೇಶದಲ್ಲಿದ್ದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೊಡ್ಡ ಸದ್ದು ಕೇಳಿ ಬಂದಿದ್ದು, ಸಿಡಿತದ ಮಾದರಿಯ ಸದ್ದು ಏನು ಎಂದು ನೋಡಲು ಹೋದವರಿಗೆ ಅಚ್ಚರಿಯಾಗಿತ್ತು. ನೇಮೋತ್ಸವ ನಡೆಯುತ್ತಿದ್ದ ಜಾಗದ ಮುಂಭಾಗವೇ ಹೊಳ್ಳರ ಚಾವಡಿ ಇದ್ದು, ಹೊಳ್ಳರ ಚಾವಡಿಯ ತೂಗುಯ್ಯಾಲೆಯಲ್ಲಿ ಪವಾಡವಾಗಿದೆ. ತನ್ನಿಂದ ತಾನೇ ತೂಗಾಡುತ್ತಿದ್ದ ದೈವಗಳ ತೂಗುಯ್ಯಾಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಾನೇ ತೂಗಾಡಿದೆ ಎಂದು ಹೇಳಿತು ಹುಲಿ ದೈವ!
ʼತೂಗುಯ್ಯಾಲೆ ಕಾರ್ಣಿಕʼದ ಹಿಂದಿನ ರಹಸ್ಯವನ್ನು ಪಿಲಿಚಂಡಿ ದೈವ ಬಿಚ್ಚಿಟ್ಟಿದೆ. ಉಯ್ಯಾಲೆಯನ್ನು ನಾನೇ ತೂಗಿದ್ದು ಎಂದು ಪಿಲಿಚಂಡಿ ದೈವ ಹೇಳಿದೆ. ನಾನೇ ಉಯ್ಯಾಲೆಯಲ್ಲಿ ಕುಳಿತು ತೂಗಾಡಿದೆ ಎಂದ ದೈವ ಕೈ ಭಾಷೆಯಲ್ಲಿ ಅಭಯ ನೀಡಿದೆ. ಇದು ನಮಗೆ ದೈವ ಅನುಗ್ರಹ ನೀಡಿದ ಕ್ಷಣ ಎಂದ ಆಡಳಿತ ವರ್ಗ ಹೇಳಿದೆ.
ನಾಲ್ಕು ವರ್ಷದ ಹಿಂದೆಯೂ ಇದೇ ಮಾದರಿಯ ಘಟನೆ ನಡೆದಿದ್ದು, ಜಾರಂದಾಯ ಗಗ್ಗರ ಇಡುವಾಗ ಇದೇ ರೀತಿಯ ಸದ್ದು ಕೇಳಿಬಂದಿತ್ತು. ತಿರುಗಿ ನೋಡಿದ ವೇಳೆ ಹೊಳ್ಳರ ಚಾವಡಿಯಲ್ಲಿ ವಿಸ್ಮಯ ಕಂಡುಬಂದಿದ್ದು, ತನ್ನಿಂದ ತಾನೇ ತೂಗುಯ್ಯಾಲೆ ತೂಗಾಡುತ್ತಿತ್ತು. ಕೈಗಾರಿಕೆಗಳ ಅಟ್ಟಹಾಸದ ನಡುವೆ ದೈವ ಸಾನಿಧ್ಯ ಮತ್ತೆ ತಲೆ ಎತ್ತಿದ್ದೇ ರೋಚಕವಾಗಿದ್ದು, ಊರಿಗೆ ಊರೇ ಒಕ್ಕಲೆದ್ದರೂ ದೈವ ಸಾನಿಧ್ಯ ಉಳಿದಿತ್ತು. ಸುಮಾರು 30 ವರ್ಷಗಳ ಹಿಂದೆ ಕೃಷಿ ಭೂಮಿಯಾಗಿದ್ದ ನಡುಗಿರಿಯ ದೈವ ಭೂಮಿಯಾಗಿತ್ತು. ದೈವ ಸಾನಿಧ್ಯ ಸೇರಿದಂತೆ ಇಡೀ ಭೂಮಿಯನ್ನು ಕೈಗಾರಿಕೆಗಳಿಗಾಗಿ ಸರಕಾರ ವಶಪಡಿಸಿಕೊಂಡಿತ್ತು. ಬೇರೆ ಕಡೆ ಊರು ಹಾಗೂ ಅಲ್ಲಿದ್ದ ಜನರು ಸ್ಥಳಾಂತರವಾಗಿದ್ದರು.

ಪಿಲಿಚಂಡಿಗೆ ಬಾಗಿತ್ತು ಸರ್ಕಾರ!
ಇದೇ ಉಯ್ಯಾಲೆಯಲ್ಲಿ ಐದು ದೈವ ಶಕ್ತಿಗಳಿಗೆ ಹೂವು ಇಟ್ಟು ಹಿರಿಯರು ಆರಾಧನೆ ಮಾಡುತ್ತಿದ್ದರು. 33 ವರ್ಷಗಳ ಹಿಂದೆ ಕಾನೂನು ವ್ಯಾಜ್ಯದಿಂದ ಜಾತ್ರೋತ್ಸವ ನಿಂತಿತ್ತು. ಒಂದಲ್ಲ ಒಂದು ದಿನ ಭೂಮಿಯಿಂದ ಎದ್ದು ಬರುತ್ತೇನೆ ಎಂದು ಜಾರಾಂದಾಯ ದೈವ ಅಭಯ ನೀಡಿತ್ತು. ಪವಾಡಸದೃಶವಾಗಿ ಕೆಇಡಿಬಿಯಿಂದ ದೈವಾರಾಧನೆಗಾಗಿ ಮರಳಿ ಭೂಮಿ ಸಿಕ್ಕಿತು. 2019ರಲ್ಲಿ ಮತ್ತೆ ಜೀರ್ಣೋದ್ಧಾರಕ್ಕೆ ಭಕ್ತರು ಮುಂದಾಗಿದ್ದು, 2022ರಲ್ಲಿ ಮತ್ತೆ ದೈವ ಸಾನಿಧ್ಯದ ಜೀರ್ಣೋದ್ಧಾರ ನಡೆದು ನೇಮೋತ್ಸವ ಆರಂಭವಾಗಿತ್ತು.
Miracle: ಕಾಂತಾರದ ಹುಲಿ ದೈವ ಮಾಡಿತು ಪವಾಡ, ನೇಮೋತ್ಸವದ ವೇಳೆ ಬಹಿರಂಗವಾಯಿತು ಬೆಚ್ಚಿ ಬೀಳೋ ಸತ್ಯ! ಇದು ಪಿಲ್ಚಂಡಿ ಕಾರ್ಣಿಕ
Bantawala
ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಒಡಿಯೂರು ಶ್ರೀಗಳಿಂದ ಐತಿಹಾಸಿಕ ನಿರ್ಧಾರಕ್ಕೆ ಹರ್ಷ ಹಾಗೂ ಅಭಿನಂದನೆ
ಮಂಗಳೂರು: ಕರಾವಳಿಯ ದಶಕಗಳ ಬೇಡಿಕೆಯಂತೆ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಿರುವ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಣಯಕ್ಕೆ ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹರ್ಷ ವ್ಯಕ್ತಪಡಿಸಿದ್ದು, ಸಮಸ್ತ ತುಳುವರಿಗೆ ಮತ್ತು ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಚಿವ ಸಂಪುಟದ ಮಹತ್ವದ ತೀರ್ಮಾನ
ಮಂಗಳೂರಿನ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವಂತೆ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಲು ಸಂಪುಟ ಅನುಮೋದನೆ ನೀಡಿದೆ.
ಕನ್ನಡವು ಎಂದಿನಂತೆ ರಾಜ್ಯದ ಮೊದಲ ಅಧಿಕೃತ ಆಡಳಿತ ಭಾಷೆಯಾಗಿ ಮುಂದುವರಿಯಲಿದೆ.
2000 ವರ್ಷಕ್ಕೂ ಅಧಿಕ ಇತಿಹಾಸವಿರುವ ಹಾಗೂ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ಸಿಕ್ಕಿರುವ ಈ ಮಾನ್ಯತೆ, ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳುವನ್ನು ಸೇರಿಸುವ ಮುಂದಿನ ಹೋರಾಟಕ್ಕೂ ಮಹತ್ವದ ಬಲ ತುಂಬಲಿದೆ.
ಒಡಿಯೂರು ಶ್ರೀಗಳ ಸಂದೇಶದ ಸಾರ
ತುಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಒಡಿಯೂರು ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ತಮ್ಮ ಸಂದೇಶದಲ್ಲಿ, “ಹೃದಯದ ಭಾವನೆಗಳ ಇನ್ನೊಂದು ರೂಪವೇ ಭಾಷೆ. ತುಳುನಾಡಿನವರಿಗೆ ಕನ್ನಡ ರಾಜ್ಯ ಭಾಷೆಯಾದರೆ, ತುಳು ಮಾತೃಭಾಷೆಯಾಗಿದೆ. ಈ ಎರಡು ಭಾಷೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದ್ದಾರೆ.
ಜೊತೆಗೆ, ತುಳು ಅತ್ಯಂತ ಸಂಪನ್ನ ಹಾಗೂ ಸಮೃದ್ಧ ಭಾಷೆಯಾಗಿದ್ದು, ತುಳುವರದು ಸೌಹಾರ್ದಯುತ ಮನೋಭಾವ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ತುಳು ಸಂಸ್ಕೃತಿಗೆ ಒಡಿಯೂರು ಸಂಸ್ಥಾನದ ಕೊಡುಗೆ
ಒಡಿಯೂರು ಶ್ರೀಗಳ ದಿವ್ಯ ಮಾರ್ಗದರ್ಶನದಲ್ಲಿ ತುಳುವಿನ ಪೋಷಣೆಗಾಗಿ ನಿರಂತರ ಕಾರ್ಯಕ್ರಮಗಳು ನಡೆಯುತ್ತಿವೆ:
ಪ್ರತಿವರ್ಷ ಒಡಿಯೂರಿನಲ್ಲಿ ‘ತುಳುನಾಡ್ದ ಜಾತ್ರೆ’, ‘ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ’ ಹಾಗೂ ‘ತುಳುವೆರೆ ತುಳಿಪು’ ಕಾರ್ಯಕ್ರಮಗಳ ಆಯೋಜನೆ.
ಭಾಷೆಯ ಬೆಳವಣಿಗೆಗಾಗಿ ‘ಒಡಿಯೂರುದ ತುಳುಕೂಟ’ ಹಾಗೂ ‘ವಿದ್ಯಾರ್ಥಿ ತುಳುಕೂಟ’ ಸಂಘಟನೆಗಳ ಸ್ಥಾಪನೆ.
ಸರ್ಕಾರದ ಈ ದಿಟ್ಟ ನಿರ್ಣಯವು ತುಳು ಭಾಷೆಯ ಅಭಿಮಾನಿಗಳು, ಸಾಹಿತಿಗಳು ಹಾಗೂ ಕರಾವಳಿಯ ನೂರಾರು ತುಳು ಸಂಘಟನೆಗಳಿಗೆ ಸಂದ ಅಪೂರ್ವ ಗೆಲುವು ಎಂದು ಬಣ್ಣಿಸಿರುವ ಸ್ವಾಮೀಜಿಯವರು, ಮುಂದೆಯೂ ಸಂಸ್ಥಾನದ ವತಿಯಿಂದ ತುಳು ಭಾಷೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳು ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.
ಇಂದು ತುಳುನಾಡಿನ ಕೇಂದ್ರ ಸ್ಥಳವಾದ ಮಂಗಳೂರಿನಲ್ಲಿ ಜರಗಿದ ಕರ್ನಾಟಕ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತುಳುಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಮಾನ್ಯತೆಯನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಘೋಷಿಸಿರುವುದು ಸಂತಸದ ವಿಚಾರ.
ಎರಡೂವರೆ ಸಾವಿರ ವರ್ಷದ ಇತಿಹಾಸದ ತುಳುಭಾಷೆಗೆ ಮಾನ್ಯತೆ ದೊರೆತಿರುವುದು ತುಳುವರ ಹಲವು ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ವಿಜಯ. ಇದರಿಂದಾಗಿ ತುಳುಭಾಷೆ ಸಂವಿಧಾನದ 8ನೇ ಪರಿಚ್ಛೆದಕ್ಕೆ ಸೇರ್ಪಡೆಗೆ ರಹದಾರಿಯಾಗಿದೆ. ಅದಲ್ಲದೆ ಕರಾವಳಿಯ ಅಭಿವೃದ್ಧಿಗೆ ಸ್ಪಂದಿಸಿದ
ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ಎಲ್ಲಾ ಸಚಿವರುಗಳಿಗೆ, ಶಾಸಕರುಗಳಿಗೆ ಅಭಿನಂದನೆಗಳು.
ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
award
ತುಳು ಭಾಷೆಗೆ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ: ಸಮಸ್ತ ತುಳುವರಿಂದ ಹರ್ಷ; ನುಡಿದಂತೆ ನಡೆದ ಸರಕಾರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹರ್ಷ
ಮಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸರ್ಕಾರವು ನುಡಿದಂತೆ ನಡೆದುಕೊಂಡಿದ್ದು, ಜಗತ್ತಿನಾದ್ಯಂತ ನೆಲೆಸಿರುವ ತುಳು ಭಾಷಿಗರಲ್ಲಿ ಇದು ಹೊಸ ಆತ್ಮವಿಶ್ವಾಸವನ್ನು ಮೂಡಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸುಮಾರು 3 ಸಾವಿರ ವರ್ಷಗಳ ಇತಿಹಾಸವಿರುವ ತುಳು ಭಾಷೆಗೆ ಸಿಕ್ಕಿರುವ ಈ ಮಾನ್ಯತೆ ಭಾಷೆಯ ಸಮಗ್ರ ಬೆಳವಣಿಗೆಗೆ ಮೈಲಿಗಲ್ಲಾಗಿದೆ ಎಂದಿದ್ದಾರೆ.
ಪ್ರಮುಖ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳಿಗೆ ಅಭಿನಂದನೆ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು: ಶಿವರಾಜ್ ಎಸ್. ತಂಗಡಗಿ
- ಜಿಲ್ಲಾ ಉಸ್ತುವಾರಿ ಸಚಿವರು: ಯು.ಟಿ. ಖಾದರ್
- ಶಾಸಕರು: ಅಶೋಕ್ ರೈ ಹಾಗೂ ಕರಾವಳಿಯ ಎಲ್ಲಾ ಜನಪ್ರತಿನಿಧಿಗಳು
- ಇತರರು: ಸರ್ಕಾರಕ್ಕೆ ನಿರಂತರ ಒತ್ತಡ ತಂದ ದೇಶ-ವಿದೇಶದ ಎಲ್ಲಾ ತುಳು ಸಂಘ-ಸಂಸ್ಥೆಗಳು
ಐತಿಹಾಸಿಕ ನಿರ್ಧಾರದ ಹಿನ್ನೆಲೆ
ಈ ಹಿಂದೆ ಡಾ. ಎಂ. ಮೋಹನ್ ಆಳ್ವ ಅವರು ಸಲ್ಲಿಸಿದ ವರದಿ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ್ದ ‘ಆಂಧ್ರಪ್ರದೇಶ ಅಧ್ಯಯನ ವರದಿ’ಯ ಆಧಾರದ ಮೇಲೆ ಈ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಗೆ ಅಧಿಕೃತ ಮಾನ್ಯತೆ ನೀಡಿದ ಕಾನೂನು ಪ್ರಕ್ರಿಯೆಗಳ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ತಮಗೆ ಅವಕಾಶ ಸಿಕ್ಕಿFತು ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ನೆನಪಿಸಿಕೊಂಡಿದ್ದಾರೆ. ಈ ವರದಿಯು ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸಿಕೊಡುವಲ್ಲಿ ಪ್ರಮುಖ ದಾಖಲೆಯಾಗಿ ಸಹಕಾರಿಯಾಗಿದೆ ಎಂದರು.
ಮುಂದಿನ ಗುರಿ: ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ
ಕರ್ನಾಟಕ ಸರ್ಕಾರದ ಈ ಚಾರಿತ್ರಿಕ ನಿರ್ಧಾರವು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬ ತುಳುವರ ದೀರ್ಘಕಾಲದ ಮಹತ್ವದ ಬೇಡಿಕೆ ಈಡೇರುವ ನಿಟ್ಟಿನಲ್ಲಿ ದೊಡ್ಡ ಶಕ್ತಿಯಾಗಲಿದೆ ಎಂದು ಅಕಾಡೆಮಿ ಅಧ್ಯಕ್ಷರು ಆಶಾವಾಹಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
