Connect with us

Belthangady

ಶ್ರೀಧರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾದ ಆರೋಪಗಳನ್ನು ತನಿಖೆ ನಡೆಸುವಂತೆ ಒತ್ತಾಯ- ದಲಿತ ಮುಖಂಡ ಶೇಖರ್‌ಲಾಯಿಲ ವಿಡಿಯೋ ವೈರಲ್

Published

on

ಬೆಳ್ತಂಗಡಿ: ಶಿಬಾಜೆಯ  ಎಸ್ಟೇಟ್ ನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ , ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ ಅಸಹಜ ಸಾವಿನ ಬಗ್ಗೆಯೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬ ಆಗ್ರಹ ಪರಿಶಿಷ್ಟ ಜಾತಿ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಕೇಳಿ ಬಂತು.

ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ರವರ ಅಧ್ಯಕ್ಷತೆಯಲ್ಲಿ ಫೆ 22 ರಂದು ನಡೆದ ಮಾಸಿಕ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆಯಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕರಾದ ಶೇಖರ್‌ ಲಾಯಿಲ ಶಿಬಾಜೆ ಶ್ರೀಧರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ ಐ ಟಿ ತನಿಖೆಯಲ್ಲಿ ಗಂಭೀರವಾದ ಆರೋಪಗಳನ್ನು ತನಿಖೆ ನಡೆಸುವಂತೆ ಒತ್ತಾಯಿಸಿದರು.


ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ರವರ ಅಧ್ಯಕ್ಷತೆಯಲ್ಲಿ ಫೆ 22 ರಂದು ಮಾಸಿಕ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ನಡೆಯಿತು.ಈ ವೇಳೆ ಹಿರಿಯ ದಲಿತ ಮುಖಂಡ ಸಂಜೀವ ಆರ್ ಮಾತನಾಡಿ 2022 ರಲ್ಲಿ ನಡೆದ ಶಿಬಾಜೆಯ ಶ್ರೀಧರ್ ಮುಗೇರ ಕೊಲೆ ಪ್ರಕರಣದಲ್ಲಿ ಕೆಲವು ಬಲಾಢ್ಯರಿದ್ದು , ತನಿಖೆ ಹಾದಿ ತಪ್ಪಲು ಕಾರಣವಾಗಿತ್ತು. ಆ ಬಳಿಕ ದಲಿತ ಸಂಘಟನೆಗಳು ವ್ಯಾಪಕ ಪ್ರತಿಭಟನೆ ನಡೆಸಿದ ಬಳಿಕ ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಿದರೂ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಇದೀಗ ರಾಜ್ಯ ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆ ನಡೆಸಲು ಆದೇಶಿಸಿರುವುದು ಸ್ವಾಗತಾರ್ಹ‌ ವಿಚಾರ.ಈ ಬಗ್ಗೆ ಸರಿಯಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದ ಅವರು ವರ್ಷಗಳ ಹಿಂದೆ ಕಳಿಯ ಗ್ರಾಮದಲ್ಲಿ ಶ್ರೀಧರ್ ಮುಗೇರ ಎಂಬವರ ಮೃತದೇಹ ಸಂಶಯಾಸ್ಪದವಾಗಿ ಕೆರೆಯಲ್ಲಿ ಪತ್ತೆಯಾಗಿತ್ತು , ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದ್ದರೂ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಇದಕ್ಕೆ ಧ್ವನಿಗೂಡಿಸಿದ ದಲಿತ ಮುಖಂಡ ಶೇಖರ್ ಲಾಯಿಲ, ಶಿಬಾಜೆ ಪ್ರಕರಣದ ಆರೋಪಿಗಳಿಗೆ ಪೋಲಿಸರು ರಕ್ಷಣೆ ನೀಡಿದ್ದಾರೆ ಎಂದು ಆರೋಪಿಸಿದ ಅವರು ಶಾಸಕರ ಪೋನ್ ಕರೆಗಳ ಬಗ್ಗೆ ಎಸ್ಐಟಿ ಪರಿಶೀಲಿಸಬೇಕು ಎಂದರು. ಈ ವೇಳೆ ಮಾತನಾಡಿದ ಬೆಳ್ತಂಗಡಿ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರ್ ಮಠ್ ಇದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದ್ದು , ವೈದ್ಯಕೀಯ ತಾಂತ್ರಿಕ ಪರೀಕ್ಷೆಯ ವರದಿಯ ಆಧಾರದಲ್ಲಿ ತನಿಖೆ ನಡೆಯುತ್ತಿದ್ದು , ತಿಂಗಳಲ್ಲಿ ತನಿಖೆಯಲ್ಲಿ ಪ್ರಗತಿ ಸಾಧಿಸಲಿದ್ದೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.


ಅಪ್ರಾಪ್ತ ವಯಸ್ಸಿನ ಮಕ್ಕಳು, ದ್ವಿಚಕ್ರ ಸೇರಿದಂತೆ ವಾಹನಗಳನ್ನು ಅಡ್ಡಾದಿಡ್ಡಿಯಾಗಿ , ಅತಿವೇಗವಾಗಿ ಚಲಾಯಿಸುತ್ತಿದ್ದರೂ ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ.ನಂಬರ್ ಪ್ಲೇಟ್ ಧರಿಸದೇ ಕೆಲವರು ಬೈಕ್ ಚಲಾಯಿಸುತ್ತಿರುವುದು ಕಂಡುಬರುತಿದ್ದು ಇದು ಅಪಾಯಕಾರಿ ಬೆಳವಣಿಗೆ ಎಂದು ಆತಂಕ ವ್ಯಕ್ತಪಡಿಸಿದ ಶೇಖರ್ ಲಾಯಿಲ ಒಂದೆರಡು ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಿದರೆ ಕಡಿವಾಣ ಬೀಳಬಹುದು ಎಂದ ಅವರು ಲಾಯಿಲ ಗ್ರಾಮದ ದರ್ಪಿಂಜೆ ಸೇತುವೆ ಸುತ್ತಮುತ್ತ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು , ಇದೀಗ ಇಲ್ಲಿ ಲಾಯಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆರವರು ಮುತುವರ್ಜಿಯಿಂದ ಸಿಸಿ ಕ್ಯಾಮರಾ ಅಳವಡಿಸಿದ್ದು , ಅದರ ಸಹಾಯದಿಂದ ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿರುವವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂತೆ ಕೆಲವು ಕಡೆಗಳಲ್ಲಿ ಮಾನಸಿಕ ಅಸ್ವಸ್ಥರು ಓಡಾಟ ನಡೆಸುತ್ತಿರುವುದಲ್ಲದೇ ಕೆಲವೊಮ್ಮೆ ತೀರಾ ಕೆಟ್ಟ ರೀತಿಯಲ್ಲಿ ವರ್ತಿಸುತಿದ್ದಾರೆ.ಇದರಿಂದ ಮಹಿಳೆಯರು, ವಿದ್ಯಾರ್ಥಿಗಳು ತೀರಾ ಮುಜುಗರಕ್ಕೀಡಾಗುತಿದ್ದಾರೆ ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕು ಎಂದರು. ಇನ್ನೋರ್ವ ಮುಖಂಡ ಶೀನ ಪಿಲ್ಯ ಮಾತನಾಡಿ ಪಿಲ್ಯ ಮಾರಿಗುಡಿ ಬಳಿ ವ್ಯಾಪಕ ಅಪಘಾತಗಳು ಸಂಭವಿಸುತ್ತಿದ್ದು , ಇಲ್ಲಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಒತ್ತಾಯಿಸಿದರು. ನಾರಾವಿಯ ಕೃಷ್ಣಪ್ಪ ರವರು ಮಾತನಾಡಿ ಇತ್ತೀಚಿಗೆ ನಾರಾವಿಯಲ್ಲಿ ದಲಿತ ವ್ಯಕ್ತಿಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಕ್ಕಳ ಎದುರಿನಲ್ಲಿಯೇ ಹಲ್ಲೆ ನಡೆಸಿದ ಘಟನೆ ಬಗ್ಗೆ ಪ್ರಸ್ತಾಪಿಸಿ , ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನಿನಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಚೆನ್ನಕೇಶವ , ವೆಂಕಪ್ಪ ನಾಯ್ಕ ಉಪ್ಪಿನಂಗಡಿ , ರಾಮಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಸಭೆಯಲ್ಲಿ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ವ್ಯಾಪ್ತಿಯ ಠಾಣೆಗಳ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಗಳು ಉಪಸ್ಥಿತರಿದ್ದರು. ಡಿವೈಎಸ್ಪಿ ಕಛೇರಿಯ ಮನೋಹರ್ ಹಿಂದಿನ ಸಭೆಯ ನಡಾವಳಿಗಳನ್ನು ಸಭೆಯ ಮುಂದಿಟ್ಟರು.
ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗರಾಜ್ ಧನ್ಯವಾದವಿತ್ತರು.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

ಬೆಳ್ತಂಗಡಿ: 50 ಲಕ್ಷದ ರಸ್ತೆ 9 ವರ್ಷಕ್ಕೆ ಗುಂಡಿಮಯ – ಕೈಕಂಬ–ಫಾರೆಸ್ಟ್ ಬಂಗಲೆ ರಸ್ತೆ ದುಸ್ಥಿತಿ

Published

on

ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್‌ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ, ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಅರ್ಥವಾಗದ ಸ್ಥಿತಿ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಬೆಳ್ತಂಗಡಿ ಮೂಲಕ 2017ರಲ್ಲಿ ನಿರ್ಮಾಣವಾದ ಈ 1 ಕಿ.ಮೀ ರಸ್ತೆ ಇದೀಗ ಇಂಚಿಂಚಿಗೂ ಗುಂಡಿಯಾಗಿದೆ. ಬೇಸಿಗೆಯಲ್ಲಿ ಗುಂಡಿ ಮುಚ್ಚಲು ಮಣ್ಣು ಹಾಕಲಾಗಿತ್ತು. ಆದರೆ ಮಳೆ ಆರಂಭವಾಗುತ್ತಿದ್ದಂತೆ ರಸ್ತೆ ಪೂರ್ತಿ ಕೆಸರುಮಯವಾಗಿ ಕಂಬಳ ಗದ್ದೆಯನ್ನು ನಾಚಿಸುವಂತಾಗಿದೆ.

ಜನರ ಸಂಕಷ್ಟ:
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ ಸೇರಿದಂತೆ ಫಾರೆಸ್ಟ್ ಬಂಗಲೆ, ಕಣಾಲು, ಕಾರಿಂಜ, ಕುಂಡಡ್ಕ, ಸುಳ್ಳೊಡಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖ ರಸ್ತೆ ಇದಾಗಿದೆ. ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ, ನೂರಾರು ಜನರು ಕೆಲಸಕ್ಕೆ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಅಂಗನವಾಡಿ, ಕಿ.ಪ್ರಾ ಶಾಲೆ, ಹಾಲು ಉತ್ಪಾದಕರ ಸಂಘವೂ ಇದೆ.

ಗುಂಡಿ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ, ಆಟೋ, ಖಾಸಗಿ ವಾಹನಗಳು ಅಡ್ಡಾದಿಡ್ಡಿ ಚಲಿಸುತ್ತಿದ್ದು, ಅಪಘಾತಗಳೂ ಸಂಭವಿಸಿವೆ. ಆದರೂ ರಸ್ತೆ ದುರಸ್ತಿ ಆಗದಿರುವುದು ದುರಂತ ಎಂದು ಸ್ಥಳೀಯರು ಬೇಸರಿಸಿದ್ದಾರೆ.

ಒತ್ತಾಯ:
“ಕೈಕಂಬದಿಂದ ಮೂರು ಮಾರ್ಗದವರೆಗಿನ ರಸ್ತೆ ಜನ, ವಾಹನ ಸಂಚರಿಸಲು ಅಯೋಗ್ಯವಾಗಿದೆ. ದಿತ್ಯೋಪಯೋಗಿ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಯೂ ಅಗತ್ಯ” ಎಂದು ಆಟೋ ರಿಕ್ಷಾ ಚಾಲಕ-ಮಾಲೀಕರಾದ ದಿನೇಶ್ ಗೌಡ ಆಗ್ರಹಿಸಿದ್ದಾರೆ.




Continue Reading

accident

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

arrest

ಬೆಳ್ತಂಗಡಿ: ಸರಣಿ ಕಳ್ಳತನದ ಅಂತರಾಜ್ಯ ಗ್ಯಾಂಗ್ ಪತ್ತೆ; ಇಬ್ಬರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ

Published

on

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು ರೂ. 23,67,000/- ಮೌಲ್ಯದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ವಿವರ:

ಹಮೀದ್ (42): ಕಾಸರಗೋಡು ನಿವಾಸಿ (ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕರಾಯಿ ನಿವಾಸಿ). ಈತನನ್ನು ಮೇ 15, 2026 ರಂದು ಬಂಧಿಸಲಾಗಿತ್ತು.

ಜಾಬೀರ್ @ ಜಾಬೀ (38): ಕಾಸರಗೋಡು ನಿವಾಸಿ (ಮೂಲತಃ ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ). ಹಮೀದ್ ನೀಡಿದ ಮಾಹಿತಿ ಮೇರೆಗೆ ಈತನನ್ನು ಜೂನ್ 07, 2026 ರಂದು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.

    ಪ್ರಕರಣದ ಹಿನ್ನೆಲೆ ಮತ್ತು ತನಿಖೆ:

    ಕಳೆದ ಏಪ್ರಿಲ್ 5, 2026 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಮತ್ತು ನಗದು ಕಳ್ಳತನವಾಗಿತ್ತು. ಈ ಕುರಿತು ದಾಖಲಾಗಿದ್ದ ಅ.ಕ್ರ: 38/2026 ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸ್ ತಂಡ ಮೊದಲು ಹಮೀದ್‌ನನ್ನು ತಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಜಾಲ ಪತ್ತೆಯಾಗಿದೆ.

    ವಶಪಡಿಸಿಕೊಂಡ ಸೊತ್ತುಗಳು: ಆರೋಪಿಗಳಿಂದ ಈ ಕೆಳಗಿನ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ:

    ಪುಂಜಾಲಕಟ್ಟೆ ಠಾಣಾ ಪ್ರಕರಣಕ್ಕೆ ಸಂಬಂಧಿಸಿ: 68.690 ಗ್ರಾಂ ಚಿನ್ನಾಭರಣ ಮತ್ತು ರೂ. 2,00,000/- ನಗದು.

    ಉಪ್ಪಿನಂಗಡಿ ಠಾಣಾ ಪ್ರಕರಣಕ್ಕೆ (ಅ.ಕ್ರ: 28/2025) ಸಂಬಂಧಿಸಿ: 21.810 ಗ್ರಾಂ ಚಿನ್ನಾಭರಣ.

    ಇತರ: ಕೃತ್ಯಕ್ಕೆ ಬಳಸಿದ ಕಾರು. (ವಶಪಡಿಸಿಕೊಂಡ ಒಟ್ಟು ಸೊತ್ತಿನ ಮೌಲ್ಯ ರೂ. 23,67,000/-)

    5 ಕಳ್ಳತನ ಪ್ರಕರಣಗಳ ಸುಳಿವು:

    ಪೊಲೀಸ್ ತನಿಖೆಯ ವೇಳೆ ಈ ಆರೋಪಿಗಳು ಕರಾವಳಿಯ ವಿವಿಧೆಡೆ ಸರಣಿ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಕುಂಬಳೆ, ಉಪ್ಪಿನಂಗಡಿ, ಬಂಟ್ವಾಳ ನಗರ ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 5 ಕಳ್ಳತನ ಪ್ರಕರಣಗಳಲ್ಲಿ ಈ ಇಬ್ಬರು ಭಾಗಿಯಾಗಿರುವುದು ದೃಢಪಟ್ಟಿದೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಕಾರ್ಯಾಚರಣೆ ನಡೆಸಿದ ತಂಡ:

    ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಅವರ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಉಪವಿಭಾಗಾಧೀಕ್ಷಕಿ (DySP) ಶ್ರೀಮತಿ ರೋಹಿಸಿ ಸಿ.ಕೆ. ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.

    ತಂಡದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್ ಹೆಚ್.ಇ, ಪುಂಜಾಲಕಟ್ಟೆ ಪಿ.ಎಸ್.ಐ ರಾಜೇಶ್ ಕೆ.ವಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಅವರು ತಾಂತ್ರಿಕ ನೆರವು ನೀಡಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.




    Continue Reading

    Trending

    Copyright © 2025 Deevatige

    error: Content is protected !!