Connect with us

crime

ವಿಚಾರಣೆ ನೆಪದಲ್ಲಿ ಯುವಕನಿಗೆ ಅರಣ್ಯಾಧಿಕಾರಿಗಳಿಂದ ಮಾರಣಾಂತಿಕ ಹಲ್ಲೆ..ಪುತ್ತೂರಿನ ಆಸ್ಪತ್ರೆಗೆ ಯುವಕ ದಾಖಲು.. ಸಾರ್ವಜನಿಕರ ಆಕ್ರೋಶ..

Published

on

ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದ ಯುವಕನ ಮೇಲೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳ ರಾಕ್ಷಸೀ ಕೃತ್ಯದಿಂದ ಜರ್ಜರಿತನಾದ ಜೀವನ್ (27) ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಬ್ರಹ್ಮಣ್ಯ ವಲಯ ಅರಣ್ಯ ಕಚೇರಿಯಲ್ಲಿ ಪ್ರುರಣವೊಂದರ ವಿಚಾರಣೆಗಾಗಿ ಐತೂರು ಗ್ರಾಮದ ನಿವಾಸಿ ಜೀವನ್ ಅವರನ್ನು ಕರೆಸಲಾಗಿತ್ತು. ವಿಚಾರಣೆಯ ಸಂದರ್ಭ ಅರಣ್ಯ ಅಧಿಕಾರಿಗಳ ತಂಡ ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿ ರಾಕ್ಷಸೀ ಕೃತ್ಯ ಎಸಗಿದ್ದಾರೆ ಎಂದು ಗಾಯಾಳು ಪೋಷಕರು ಆರೋಪಿಸುತ್ತಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ ಬಳಿಕ, ಜೀವನ್ ಅವರ ಆರೋಗ್ಯದ ಸ್ಥಿತಿ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಆಂಬುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.

ಕೆಲದಿನಗಳ ಹಿಂದೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಕಡವೆಯ ಹತ್ಯೆಗೈದು ಮಾಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಾಗಿತ್ತು. ಕಡಬ ತಾಲೂಕು ಸುಂಕದಕಟ್ಟೆ ಮುಜೂರು ನಿವಾಸಿ ಜೀವನ್ ಸದ್ರಿ ಪ್ರಕರಣದಲ್ಲಿ ಆರೋಪಿ ಎಂದು ದಾಖಲಾಗಿದ್ದ ಹಿನ್ನೆಲೆಯಲ್ಲಿ ಪುತ್ತೂರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ನಿರೀಕ್ಷಣಾ ಜಾಮೀನು ಪಡೆದುಕೊಂಡ ಆಕ್ರೋಶದಲ್ಲಿ ಅರಣ್ಯ ಅಧಿಕಾರಿಗಳು ಜೀವನ್ ಅವರ ತಾಯಿಗೆ ಬೆದರಿಕೆಯೊಡ್ಡಿ ಧಮ್ಕಿ ಹಾಕಿದ್ದರೆನ್ನಲಾಗಿದೆ. ನಿರೀಕ್ಷಣಾ ಜಾಮೀನು ಷರತ್ತುಗಳನ್ವಯ ಆರೋಪಿ ಸ್ಥಾನದಲ್ಲಿರುವ ಜೀವನ್ ಅವರು ತನಿಖೆಗೆ ಸಹಕರಿಸಲು ಕಛೇರಿಗೆ ಹೋಗಿದ್ದ ಸಂದರ್ಭ ಅರಣ್ಯಾಧಿಕಾರಿಗಳು ಮನಬಂದಂತೆ ಥಳಿಸಿ ರಾಕ್ಷಸೀ ಕೃತ್ಯ ಎಸಗಿದ್ದಾರೆ ಎಂದು ಗಾಯಾಳು ಹೇಳಿಕೆ ನೀಡಿದ್ದಾರೆ.

ತನಿಖೆಯ ನೆಪದಲ್ಲಿ ದೈಹಿಕವಾಗಿ ಹಲ್ಲೆ ನಡೆಸಬಾರದು ಎಂದು ಉಚ್ಛ ನ್ಯಾಯಾಲಯವು ಅಧಿಕಾರಿಗಳಿಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳ ವರ್ತನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕಾನೂನುಬಾಹಿರವಾಗಿ ದೈಹಿಕ ಹಲ್ಲೆ ನಡೆಸಿರುವುದು ಅರಣ್ಯ ಇಲಾಖೆಯ ಅಧಿಕಾರಿಗಳ ಗೂಂಡಾ ವರ್ತನೆಗೆ ಸಾಕ್ಷಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಘಟನೆಯ ಕುರಿತು ಗಾಯಾಳು ಪೋಷಕರು ರಾಜ್ಯ ಅರಣ್ಯ ಸಚಿವರಿಗೆ ಈಗಾಗಲೇ ದೂರು ನೀಡಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಗೂಂಡಾ ವರ್ತನೆ ತೋರಿದ ಅಧಿಕಾರಿಗಳ ಅಮಾನತು ಮಾಡಿ ಕಠಿಣ ಶಿಸ್ತು ಕ್ರಮ ಜರುಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಮಧ್ಯೆ ಗಾಯಾಳು ಯುವಕನ ಪೋಷಕರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ‍್ಯಾಗಿಂಗ್ ಶಂಕೆ, ತನಿಖೆ ಆರಂಭ

Published

on

ಮಂಗಳೂರು ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಶಂಕೆ – ಕಪ್ಪು ಶೂ ಧರಿಸಿದ್ದಕ್ಕೆ ಜೂನಿಯರ್‌ಗಳ ಮೇಲೆ ಸೀನಿಯರ್‌ಗಳಿಂದ ಭೀಕರ ಹಲ್ಲೆ!

ಮಂಗಳೂರು, ಆಗಸ್ಟ್ 05: ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೇವಲ ಕಪ್ಪು ಬಣ್ಣದ ಶೂ ಧರಿಸಿದ್ದರೆಂಬ ಸಣ್ಣ ಕಾರಣಕ್ಕೆ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ ಗುಂಪು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಕಿರಿಯ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ವಿವರ:

ನಗರದ ಗುಜ್ಜರಕೇರೆ ಪ್ರದೇಶದಲ್ಲಿರುವ ಚಹಾ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಪ್ರಥಮ ವರ್ಷದ ಆದರ್ಶ್ ಮತ್ತು ಜಾಸಿನ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರಾಗಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಿರಿಯ ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಹಾಕಿಕೊಂಡು ಬಂದಿದ್ದನ್ನೇ ನೆಪವಾಗಿಸಿಕೊಂಡ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ವಿದ್ಯಾರ್ಥಿಗಳ ಗುಂಪು, ಅವರೊಂದಿಗೆ ಗಲಾಟೆ ಮತ್ತು ವಾಗ್ವಾದ ನಡೆಸಿದೆ. ಮಾತಿಗೆ ಮಾತು ಬೆಳೆದು ಸೀನಿಯರ್‌ಗಳು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಚುರುಕು:

ವಿಷಯ ತಿಳಿಯುತ್ತಿದ್ದಂತೆ ಪಾಂಡೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ಆರು ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಕೇವಲ ವೈಯಕ್ತಿಕ ವೈಷಮ್ಯದಿಂದ ನಡೆದ ಗಲಾಟೆಯೋ ಅಥವಾ ರ‍್ಯಾಗಿಂಗ್‌ಗೆ ಸಂಬಂಧಿಸಿದ ಘಟನೆಯೋ ಎಂಬ ಕುರಿತು ಎಲ್ಲಾ ಆಯಾಮಗಳಲ್ಲೂ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ.

ಪೋಷಕರಲ್ಲಿ ಆತಂಕ – ಸಾರ್ವಜನಿಕರ ಆಕ್ರೋಶ:

ನಗರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತೆ ರ‍್ಯಾಗಿಂಗ್ ಭೂತ ತಲೆಎತ್ತುತ್ತಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲ್ಲೆ ನಡೆಸಿದ ಆರೋಪಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮತ್ತು ಪೋಷಕರು ತೀವ್ರವಾಗಿ ಆಗ್ರಹಿಸಿದ್ದಾರೆ

Continue Reading

arrest

ಪುತ್ತೂರು: ಅಕ್ರಮ ಮರ ಸಾಗಾಟ ಯತ್ನ ವಿಫಲ; 10 ಲಕ್ಷ ರೂ. ಮೌಲ್ಯದ ಸೊತ್ತು ವಶ, ಆರೋಪಿ ಬಂಧನ

Published

on

ಪುತ್ತೂರು: ಸಕಲೇಶಪುರದಿಂದ ಮಂಗಳೂರಿಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಸೋಮವಾರ (ಆಗಸ್ಟ್ 3) ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ.

ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ (KA-13-AA-6340) ವಾಹನವನ್ನು ತಡೆದು ಪರಿಶೀಲಿಸಿದಾಗ, ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕ, ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಲೋಕೇಶ್ ಅವರ ಪುತ್ರ ರೋಹಿತ್ ಎಸ್. ಎಲ್. (20) ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ವಶಪಡಿಸಿಕೊಂಡ ವಾಹನ ಹಾಗೂ ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿದ್ದ ತಂಡ:

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ:ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್,ಗಸ್ತು ಅರಣ್ಯ ಪಾಲಕರಾದ ವಿನಯಚಂದ್ರ ಮತ್ತು ದೀಕ್ಷಾ ಕೆ.ಚಾಲಕ ಕಿಶೋರ್ ಕುಮಾರ್ ಕೆ. ಭಾಗವಹಿಸಿದ್ದರು.

ಮುಂದಿನ ತನಿಖೆ:

ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಸಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯಕ್ ಅವರ ನಿರ್ದೇಶನದಂತೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಎಚ್.ಪಿ. ರಾಘವೇಂದ್ರ ಅವರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

arrest

ಬೆಳ್ತಂಗಡಿ: ಅಕ್ರಮ ಕೋಳಿಅಂಕ ಜೂಜಾಟದ ಅಡ್ಡೆಗೆ ಪೋಲಿಸ್ ದಾಳಿ – ಇಬ್ಬರ ಬಂಧನ, ಸೊತ್ತುಗಳು ಜಪ್ತಿ

Published

on

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ.

ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ ನಿವಾಸಿ) ಮತ್ತು ಹರೀಶ್ ಎಸ್. (30) (ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೆಳ್ಳೂರು ನಿವಾಸಿ) ಬಂಧಿತ ಆರೋಪಿಗಳು.

ದಾಳಿಯ ವಿವರ:

ಆಗಸ್ಟ್ 3ರಂದು ಸಂಜೆ ಸುಮಾರು 5:15ರ ವೇಳೆಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದ ಪೊಲೀಸ್ ತಂಡ ನಿರ್ಮಡ ಪ್ರದೇಶಕ್ಕೆ ದಾಳಿ ನಡೆಸಿತು. ಈ ವೇಳೆ ಆರೋಪಿಗಳು ಕೋಳಿಗಳ ಕಾಲಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ, ಪರಸ್ಪರ ಕಾದಾಟಕ್ಕೆ ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ತಕ್ಷಣವೇ ಸ್ಥಳದಲ್ಲಿದ್ದ ಕೆಲವರು ಕಾಲ್ಕಿತ್ತಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳು:

ದಾಳಿಯ ವೇಳೆ ಪೊಲೀಸರು ಜೂಜಾಟಕ್ಕೆ ಬಳಸಿದ್ದ ₹350 ನಗದು, 2 ಬಾಳುಗಳು (ಸಣ್ಣ ಕತ್ತಿ), ವಿವಿಧ ತಳಿಯ 4 ಕೋಳಿಗಳು ಹಾಗೂ 3 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ₹74,370 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲು:

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ – 1960ರ ಕಲಂ 11(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ\

Continue Reading

Trending

Copyright © 2025 Deevatige

error: Content is protected !!