Connect with us

Dakshina Kannada

ಆತಂಕ ತಂದ ಆ ಎರಡು ಮೆಸೇಜುಗಳು ! ಪೊಲೀಸ್‌ ಕಮಿಷನರ್‌ ನೀಡಿದ ಸ್ಪಷ್ಟನೆ ಏನು ? ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ

Published

on

ʼಕುಂಟಿಕಾನ ಬಳಿ ಶಾಲಾ ಮಕ್ಕಳನ್ನು ಅಪಹರಿಸಲಾಗಿದೆʼ ಎಂಬ ಸಾರ್ವಜನಿಕರು ಆತಂಕಕ್ಕೀಡಾದ, ಪ್ರಸ್ತುತ ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಧ್ವನಿ ಸಂದೇಶದ ಬಗ್ಗೆ ವೈರಲ್‌ ಆಗುತ್ತಿರುವ ವಾಯ್ಸ್‌ ಮೆಸೇಜ್‌ ಸುಳ್ಳಾಗಿದೆ. ಈ ಬಗ್ಗೆ ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಓರ್ವ ಮಹಿಳೆ (ಅಂಗನವಾಡಿ ಮಗುವಿನ ತಾಯಿ ) ಈ ಸಂದೇಶವನ್ನು ತುಳು ಭಾಷೆಯಲ್ಲಿ ಪ್ರಸಾರ ಮಾಡಿದ್ದು, ಅಂಗನವಾಡಿಯ ಟೀಚರ್‌ರವರು ಕನ್ನಡದಲ್ಲಿ ಇದೇ ಸಂದೇಶವನ್ನು ಮಕ್ಕಳ ಜಾಗೃತಿಗಾಗಿ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕರು ಆತಂಕಕ್ಕಿಡಾಗಿದ್ದು, ಘಟನೆಯ ಬಗ್ಗೆ ಪೊಲೀಸ್‌ ಕಮಿಷನರ್‌ರವರಿಗೆ ಸಂದೇಶದ ಸತ್ಯಾಸತ್ಯತೆಗಳ ಬಗ್ಗೆ ಮಾಹಿತಿ ಕೇಳಿದ್ದಾರೆ.
ಈ ಆಡಿಯೋದ ಬಗ್ಗೆ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದ್ದು, ವೈರಲ್‌ ಆಗುತ್ತಿರುವ ವಾಯ್ಸ್‌ ಮೆಸೇಜ್‌ ಸುಳ್ಳಾಗಿದೆ. ಈ ಬಗ್ಗೆ ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ. ಮಕ್ಕಳು ಎಲ್ಲಿಯೂ ಕಾಣೆಯಾದ ದೂರು ಬಂದಿಲ್ಲ. ಮತ್ತು ಧ್ವನಿ ಹಂಚಿಕೊಳ್ಳಲಾಗುತ್ತಿದ್ದ ಮಹಿಳೆಯೊಂದಿಗೆ ಮಾತನಾಡಲಾಗಿದೆ.. ಕೆಲವು ವಿದ್ಯಾರ್ಥಿಗಳು ಹೇಳಿದ ಕೆಲವು ಸುದ್ದಿಗಳ ಆಧಾರದ ಮೇಲೆ ತಾನು ಹಂಚಿಕೊಂಡಿದ್ದೇನೆ ಎಂದು ಮಹಿಳೆ ಹೇಳಿರುವುದಾಗಿ ಮಂಗಳೂರು ಪೊಲೀಸ್‌ ಕಮೀಷನರ್ ತಿಳಿಸಿದ್ದಾರೆ.

ಕುಂಟಿಕಾನದ ಬಳಿ ಗುರುವಾರ ಸಂಜೆ ಹುಡುಗನೊಬ್ಬ ನಡೆದುಕೊಂಡು ಹೋಗುತ್ತಿರುವಾಗ ಆಟೋವೊಂದರಲ್ಲಿ ಮಗು ಅಳುವ ಸದ್ದು ಕೇಳಿಸಿತು. ಇದನ್ನು ಮಕ್ಕಳ ಕಳ್ಳರು ಬಂದಿದ್ದಾರೆ. ಮಕ್ಕಳನ್ನು ಕಿಡ್ನಾಪ್‌ ಮಾಡ್ತಾರೆ ಎಂದು ತನ್ನ ಗೆಳೆಯರೊಂದಿಗೆ ಹೇಳಿಕೊಂಡಿದ್ದ. ಸ್ನೇಹಿತ ಆತನ ಪರಿಚಯದ ಮಹಿಳೆಯೊಬ್ಬರಿಗೆ ಈ ಆತಂಕದ ವಿಷಯವನ್ನು ಹೇಳಿದ್ದಾನೆ. ಅವರು ಮಕ್ಕಳ ಜಾಗೃತಿಗಾಗಿ ವಾಟ್ಸಪ್‌ ನಲ್ಲಿ ಸಂದೇಶ ಕಳಿಸಿರುವುದಾಗಿದೆ ಮತ್ತು ವಾಟ್ಸಪ್‌ ನಲ್ಲಿ ಮೆಸೇಜ್‌ ಹಾಕುವಾಗ ಆಟೋ ಮರೆತು ಒಮ್ನಿಯಾಗಿದ್ದು, ಇದನ್ನು ಕೇಳಿಸಿಕೊಂಡ ಅಂಗನವಾಡಿ ಶಿಕ್ಷಕಿ ಮಕ್ಕಳನ್ನು ಜಾಗೃತರಾಗಿರುವಂತೆ ನೋಡಿಕೊಳ್ಳಲು ಎಲ್ಲರೂ ಎಚ್ಚರದಿಂದ ಇರುವಂತೆ ಇನ್ನೊಂದು ವಾಯ್ಸ್‌ ಮೆಸೇಜನ್ನು ಕನ್ನಡದಲ್ಲಿ ಹಾಕಿರುವುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್‌ ಆದ ಎರಡು ಸಂದೇಶದಲ್ಲಿ ಏನಿತ್ತು ?
ಓರ್ವ ಮಹಿಳೆ (ಅಂಗನವಾಡಿ ಮಗುವಿನ ತಾಯಿ ) ಸಂದೇಶವೊಂದರಲ್ಲಿ ನೀಡಿರುವ ಹೇಳಿಕೆಗಳು ಭಯಾನಕವಾಗಿದ್ದು, ಅದು ಈ ರೀತಿಯಾಗಿ ಇತ್ತು.

ಏನು ಗೊತ್ತುಂಟಾ ಇವತ್ತು ಇಲ್ಲಿ ನಮ್ಮ ಎಜೆಯ ಒಳಗಿನ ರೋಡಿನಲ್ಲಿ ಒಂದು ಮಗುವನ್ನು ಕಿಡ್ನಾಪ್ ಮಾಡಿದರಂತೆ. ಹಾಗೆ ಸಂಜೆ ವೇಳೆಗೆ ಮಕ್ಕಳನ್ನು ಸ್ವಲ್ಪ ಜಾಗೃತೆ ಮಾಡಿಕೊಳ್ಳಿ, ಎಲ್ಲರಿಗೂ ಮೆಸೇಜ್ ಕೊಡಬೇಕಂತೆ, ಹಾಗೆ ಹೇಗೆ ಬಂದರಂತೆ, ನಾಲ್ಕು ಜನ ಬಂದರಂತೆ ರಪಕ್ಕನೆ ಕಣ್ಣೆದುರೆದುರೆ ನಮ್ಮ ಪರಿಚಯದ ಇಬ್ಬರು ಹುಡುಗರು ಇದ್ದಾರೆ ದೈವಿಕ್‌ ಮತ್ತು ವಿಶ್ವ ಅಂತ. ಅವರ ಎದುರೇ ಎತ್ತಿಕೊಂಡು ಹೋದರಂತೆ, ಇವರು ಬೊಬ್ಬೆ ಹೊಡೆದ್ರಂತೆ ಹೊಡೆದ್ರಂತೆ. ಮತ್ತೆ ಒಮ್ನಿಯವರು ಪಾಸ್ಟ್‌ ಹೋದರಂತೆ.. ಅದು ಏನಾಗಿದೆ ಅಂತ ಗೊತ್ತಿಲ್ಲ.. ಒಂದು ಮಗುವನ್ನು ಒಂದು ಐದು ವರ್ಷದ ಮಗುವನ್ನು ಕಿಡ್ನಾಪ್ ಮಾಡಿಕೊಂಡು ಹೋದರಂತೆ ಅದೇ ಎಜೆ ರೋಡಿನಲ್ಲಿ ಆಯ್ತಾ ..

ಅಂಗನವಾಡಿಗೆ ಮಗುವನ್ನು ಕರೆದುಕೊಂಡು ಬರುತ್ತಿದ ತಾಯಿಯ ಆತಂಕವನ್ನು ಅವರ ಒತ್ತಾಯದ ಮೇರೆಗೆ ಅಂಗನವಾಡಿಯ ಶಿಕ್ಷಕಿಯವರು ಕನ್ನಡದಲ್ಲಿ ಹೇಳಿರುವುದು ಈ ರೀತಿಯಾಗಿ ಇತ್ತು.


ನೋಡಿ ಇದು ವಾಯ್ಸ್ ನಮ್ಮ ಕೆಪಿಟಿ ಅಂಗನವಾಡಿಗೆ ಒಂದು ಮಗು ಬರುತ್ತದೆ.. ಅವರ ತಾಯಿಯ ವಾಯ್ಸ್…. ಯಾಕೆಂದರೆ, ನಾನು ಯಾಕೆ ಹಾಕಿದ್ದೇನೆಂದರೆ ಇವತ್ತು ಅಂತೆ ಇವತ್ತು ಬಾರೆಬೈಲು ನಮ್ಮ ಕೆಳಗೆ ಎಜೆಗೆ ಹೋಗುವ ದಾರಿಯತ್ತಿರ ೆಜೆ ಹಾಸ್ಪಿಟಲ್‌ ಗೆ ಹೋಗುವ ದಾರಿಯುಂಟು ನೋಡಿ… ಅಲ್ಲಿಯಂತೆ ಯಾರೋ ಇವತ್ತು ನಾಲ್ಕು ಮಂದಿ ಓಮಿನಿಯಲ್ಲಿ ಬಂದರಂತೆ… ಅಲ್ಲಿ ಆಡ್ತಾ ಇದ್ರಂತೆ ಮಕ್ಕಳು… ಆ ಮಕ್ಕಳಲ್ಲಿ ಇಬ್ಬರು ಮಕ್ಕಳನ್ನು ಒಮ್ನಿಗೆ ಹಾಕಿಕೊಂಡು ಹೋಗಿದ್ದಾರಂತೆ… ಹಾಗಾಗಿ ಆ ಮಕ್ಕಳು ಯಾರು ಅಂತ ಗೊತ್ತಿಲ್ಲ ದಯಮಾಡಿ ಮಕ್ಕಳ ಮೇಲೆ ಸ್ವಲ್ಪ ಗಮನ ನೋಡಿ ಯಾರು ಸಹ ಮಕ್ಕಳನ್ನು ಆಡಲಿಕ್ಕೆ ಹೊರಗಡೆ ಬಿಡಬೇಡಿ… ಮೊನ್ನೆಯಿಂದ ಮಕ್ಕಳ ಕಳವು ಜಾಸ್ತಿಯಾಗುತ್ತಾ ಉಂಟು… ಎಲ್ಲಾ ಇದರಲ್ಲಿ ಬರ್ತಾ ಉಂಟು.. ಹಾಗಾಗಿ ಅವರ ಗುರುತದವರು.. ಗುರುತದ ಮಕ್ಕಳು ಹೋಗುವಾಗ ಅವರ ಎದುರಿನಲ್ಲಿಯೇ ಮಕ್ಕಳನ್ನು ಒಮ್ನಿಗೆ ಹಾಕಿಕೊಂಡು ರಪರಪನೇ ಎತ್ತಿಕೊಂಡು ಹೋಗಿದ್ದಾರಂತೆ…. ಹಾಗಾಗಿ ಏನು ಅಂತ ಹೇಳಿಕ್ಕೆ ಗೊತ್ತಾಗ್ತಾ ಇಲ್ಲ.. ಹಾಗಾಗಿ ನಾನು ಅದರ ಮೆಸೇಜನ್ನು ಅವರು ಹಾಕ್ಲಿಕ್ಕೆ ಹೇಳಿದ್ರು, ಅದಕ್ಕೆ ನಾನು ನಿಮ್ಮ ಗ್ರೂಫಲ್ಲಿ ಹಾಕಿದ್ದು..

ಇಂತಹ ಮೆಸೇಜ್‌ ಗಳು ಸಾರ್ವಜನಿಕರಲ್ಲಿ ಅನಗತ್ಯ ಭಯ ಹುಟ್ಟಿಸಲು ಕಾರಣವಾಗುತ್ತದೆ. ಇಂತಹ ಅಂತೆ ಕಂತೆ ಯಾವುದೇ ಸಂದೇಶಗಳನ್ನು ಹೇಳಿಕೊಳ್ಳುವ ಮೊದಲು ಅಥವಾ ಇತರರಿಗೆ ಕಳುಹಿಸುವ ಮೊದಲು ಪೊಲೀಸರು ಅಥವಾ ಅಧಿಕೃತ ಸುದ್ದಿ ಸಂಸ್ಥೆಗಳಿಂದ ಖಚಿತಪಡಿಸಿಕೊಳ್ಳುವುದು ಒಳ್ಳೆಯದು.

Continue Reading
Advertisement

award

ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕೆ. ಮತ್ತು ಎಸಿಪಿ ನಜ್ಮಾ ಫಾರೂಕಿ ಸೇರಿದಂತೆ ಜಿಲ್ಲೆಯ ಹಲವು ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕದ ಗೌರವ

Published

on

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ (SP) ಡಾ. ಅರುಣ್ ಕೆ. ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ. ಅವರೊಂದಿಗೆ ಮಂಗಳೂರು ನಗರದ ಸಂಚಾರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ನಜ್ಮಾ ಫಾರೂಕಿ ಅವರಿಗೂ ಚಿನ್ನದ ಪದಕ ಪ್ರಕಟಗೊಂಡಿದೆ.


ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕದ ಗರಿ ಪ್ರಕಟಗೊಂಡಿದ್ದು, ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ಘೋಷಿಸಿದೆ.
ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸ್ಪೆಷಲ್ ಎಆರ್‌ಎಸ್‌ಐ, 7ನೇ ಪಡೆ ಕೆಎಸ್‌ಆರ್‌ಪಿಯ ಕೆ.ಎಂ. ಶಿವಶೇಖರ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಡಿಎಆರ್ ವಿಭಾಗದ ಎಎಸ್‌ಐ ತಿಲಕ್ ರಾಜ್ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರಲ್ಲದೆ, ಬಂಟ್ವಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಇರ್ಷಾದ್ ಪಿ. , ಮಂಗಳೂರು ನಗರದ ಊರ್ವ ಪೊಲೀಸ್ ಠಾಣೆಯ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಲಲಿತಾಲಕ್ಷ್ಮಿ , ಬೆಳ್ತಂಗಡಿ ಗ್ರಾಮಾಂತರ ಠಾಣೆಯ ವಿಜಯ ಕುಮಾರ್ ರೈ , ಕಂಕನಾಡಿ ನಗರ ಠಾಣೆಯ ಜಯಾನಂದ ಎನ್., ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ಗಳಾದ ಮಣಿ ಎಂ.ಎನ್. ಹಾಗೂ ಸತೀಶ್ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಪದಕ ಪ್ರದಾನ ಸಮಾರಂಭವು ಏಪ್ರಿಲ್ 02, 2026 ರಂದು ಬೆಂಗಳೂರಿನಲ್ಲಿ ಜರುಗಲಿದೆ. ಈ ಹಿನ್ನೆಲೆಯಲ್ಲಿ ಪದಕ ವಿಜೇತ ಅಧಿಕಾರಿಗಳು ಮಾರ್ಚ್ 29 ರಿಂದಲೇ ಬೆಂಗಳೂರಿನ ಕೆಎಸ್‌ಆರ್‌ಪಿ 3ನೇ ಪಡೆಯಲ್ಲಿ ನಡೆಯುವ ಪೂರ್ವಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ತಿಳಿಸಿದೆ.

Continue Reading

accident

ತೊಕ್ಕೊಟ್ಟು ಫ್ಲೈಓವರ್ ಮೇಲೆ ರೌಡಿಶೀಟರ್ ಆರಿಫ್ ಭೀಕರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

Published

on

ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ತಲಪಾಡಿಯ ಮುಳ್ಳುಗುಡ್ಡೆ ಹೌಸ್ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಧಕ್ಕೆಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದ ಆರಿಫ್, ಪ್ರತಿದಿನದಂತೆ ಇಂದು ಮುಂಜಾನೆ ತನ್ನ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂದು ದುಷ್ಕರ್ಮಿಗಳು ಆರಿಫ್ ಗಾಗಿ ಫೈಓವರ್‌ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್‌ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್‌ನಲ್ಲಿ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅತಿ ವೇಗವಾಗಿ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಆರಿಫ್ ರಸ್ತೆಗೆ ಬೀಳುತ್ತಿದ್ದಂತೆ, ಕಾರಿನಿಂದ ಇಳಿದು ಬಂದ ತಂಡವು ತಲವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ತಲೆ ಮತ್ತು ದೇಹದ ಭಾಗಕ್ಕೆ ಮನಬಂದಂತೆ ಕಡಿದು ಸಿನಿಮೀಯ ರೀತಿಯಲ್ಲಿ ಕೊಲೆಗೈದು ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ತೊಡಗಿಸಿ ಕೊಂಡಿದ್ದ ಆರಿಫ್ ನನ್ನು ವೈಯಕ್ತಿಕ ದ್ವೇಷ ದಿಂದ ಹತ್ಯೆ ಗೈದಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ.


2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಒಮ್ಮೆ ಕೊಲೆ ಯತ್ನ ನಡೆದಿತ್ತು, ಆ ಪ್ರಕರಣದಲ್ಲಿ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು. ಹಳೆಯ ವೈಯಕ್ತಿಕ ದ್ವೇಷವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.’ ಹತ್ಯೆಗೆ ಸ್ಪಷ್ಟ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸದ್ಯಕ್ಕೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading

cyber crime

AI ತಂತ್ರಜ್ಞಾನ ಬಳಸಿ ಕೋಮುದ್ವೇಷ ಹರಡುವ ವಿಡಿಯೋ ಹಂಚಿಕೆ: ಮಂಗಳೂರಿನ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

Published

on

ಮಂಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಟ್ವಾಳ ಮೂಲದ ವ್ಯಕ್ತಿಯೊಬ್ಬನನ್ನು ಕಂಕನಾಡಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕುಡೆಲ್ ಹೌಸ್ ನಿವಾಸಿ ಮಹಮ್ಮದ್ ರಫೀಕ್ (38) ಎಂದು ಗುರುತಿಸಲಾಗಿದೆ. ಈತ ಫೇಸ್‌ಬುಕ್‌ನಲ್ಲಿ “ನಝೀರ ಮಂಗಳೂರು” ಎಂಬ ಹೆಸರಿನ ಖಾತೆಯ ಮೂಲಕ ವಿವಾದಾತ್ಮಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

2025ರ ಅಕ್ಟೋಬರ್‌ನಲ್ಲಿ ಆರೋಪಿಯು ತನ್ನ ಫೇಸ್‌ಬುಕ್ ಖಾತೆಯಲ್ಲಿ AI ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದನ್ನು ಹಂಚಿಕೊಂಡಿದ್ದನು. ಇದು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೋಮು ಸಂಘರ್ಷಕ್ಕೆ ಪ್ರಚೋದಿಸುವ ಉದ್ದೇಶ ಹೊಂದಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 353(1), ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು, ಖಚಿತ ಮಾಹಿತಿಯ ಮೇರೆಗೆ ಮಾರ್ಚ್ 22, 2026 ರಂದು ಬೆಂಗಳೂರಿನಲ್ಲಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆತನನ್ನು ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

Trending

Copyright © 2025 Deevatige