Dakshina Kannada
ಆತಂಕ ತಂದ ಆ ಎರಡು ಮೆಸೇಜುಗಳು ! ಪೊಲೀಸ್ ಕಮಿಷನರ್ ನೀಡಿದ ಸ್ಪಷ್ಟನೆ ಏನು ? ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ
ʼಕುಂಟಿಕಾನ ಬಳಿ ಶಾಲಾ ಮಕ್ಕಳನ್ನು ಅಪಹರಿಸಲಾಗಿದೆʼ ಎಂಬ ಸಾರ್ವಜನಿಕರು ಆತಂಕಕ್ಕೀಡಾದ, ಪ್ರಸ್ತುತ ವಾಟ್ಸಾಪ್ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಧ್ವನಿ ಸಂದೇಶದ ಬಗ್ಗೆ ವೈರಲ್ ಆಗುತ್ತಿರುವ ವಾಯ್ಸ್ ಮೆಸೇಜ್ ಸುಳ್ಳಾಗಿದೆ. ಈ ಬಗ್ಗೆ ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಓರ್ವ ಮಹಿಳೆ (ಅಂಗನವಾಡಿ ಮಗುವಿನ ತಾಯಿ ) ಈ ಸಂದೇಶವನ್ನು ತುಳು ಭಾಷೆಯಲ್ಲಿ ಪ್ರಸಾರ ಮಾಡಿದ್ದು, ಅಂಗನವಾಡಿಯ ಟೀಚರ್ರವರು ಕನ್ನಡದಲ್ಲಿ ಇದೇ ಸಂದೇಶವನ್ನು ಮಕ್ಕಳ ಜಾಗೃತಿಗಾಗಿ ಹರಿಯಬಿಟ್ಟಿದ್ದಾರೆ. ಈ ಬಗ್ಗೆ ಪೋಷಕರು, ಶಿಕ್ಷಕರು ಮತ್ತು ಸಾರ್ವಜನಿಕರು ಆತಂಕಕ್ಕಿಡಾಗಿದ್ದು, ಘಟನೆಯ ಬಗ್ಗೆ ಪೊಲೀಸ್ ಕಮಿಷನರ್ರವರಿಗೆ ಸಂದೇಶದ ಸತ್ಯಾಸತ್ಯತೆಗಳ ಬಗ್ಗೆ ಮಾಹಿತಿ ಕೇಳಿದ್ದಾರೆ.
ಈ ಆಡಿಯೋದ ಬಗ್ಗೆ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ವೈರಲ್ ಆಗುತ್ತಿರುವ ವಾಯ್ಸ್ ಮೆಸೇಜ್ ಸುಳ್ಳಾಗಿದೆ. ಈ ಬಗ್ಗೆ ಯಾರೂ ಆತಂಕ ಮತ್ತು ಗಾಬರಿಗೊಳ್ಳಬೇಕಾಗಿಲ್ಲ. ಮಕ್ಕಳು ಎಲ್ಲಿಯೂ ಕಾಣೆಯಾದ ದೂರು ಬಂದಿಲ್ಲ. ಮತ್ತು ಧ್ವನಿ ಹಂಚಿಕೊಳ್ಳಲಾಗುತ್ತಿದ್ದ ಮಹಿಳೆಯೊಂದಿಗೆ ಮಾತನಾಡಲಾಗಿದೆ.. ಕೆಲವು ವಿದ್ಯಾರ್ಥಿಗಳು ಹೇಳಿದ ಕೆಲವು ಸುದ್ದಿಗಳ ಆಧಾರದ ಮೇಲೆ ತಾನು ಹಂಚಿಕೊಂಡಿದ್ದೇನೆ ಎಂದು ಮಹಿಳೆ ಹೇಳಿರುವುದಾಗಿ ಮಂಗಳೂರು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.
ಕುಂಟಿಕಾನದ ಬಳಿ ಗುರುವಾರ ಸಂಜೆ ಹುಡುಗನೊಬ್ಬ ನಡೆದುಕೊಂಡು ಹೋಗುತ್ತಿರುವಾಗ ಆಟೋವೊಂದರಲ್ಲಿ ಮಗು ಅಳುವ ಸದ್ದು ಕೇಳಿಸಿತು. ಇದನ್ನು ಮಕ್ಕಳ ಕಳ್ಳರು ಬಂದಿದ್ದಾರೆ. ಮಕ್ಕಳನ್ನು ಕಿಡ್ನಾಪ್ ಮಾಡ್ತಾರೆ ಎಂದು ತನ್ನ ಗೆಳೆಯರೊಂದಿಗೆ ಹೇಳಿಕೊಂಡಿದ್ದ. ಸ್ನೇಹಿತ ಆತನ ಪರಿಚಯದ ಮಹಿಳೆಯೊಬ್ಬರಿಗೆ ಈ ಆತಂಕದ ವಿಷಯವನ್ನು ಹೇಳಿದ್ದಾನೆ. ಅವರು ಮಕ್ಕಳ ಜಾಗೃತಿಗಾಗಿ ವಾಟ್ಸಪ್ ನಲ್ಲಿ ಸಂದೇಶ ಕಳಿಸಿರುವುದಾಗಿದೆ ಮತ್ತು ವಾಟ್ಸಪ್ ನಲ್ಲಿ ಮೆಸೇಜ್ ಹಾಕುವಾಗ ಆಟೋ ಮರೆತು ಒಮ್ನಿಯಾಗಿದ್ದು, ಇದನ್ನು ಕೇಳಿಸಿಕೊಂಡ ಅಂಗನವಾಡಿ ಶಿಕ್ಷಕಿ ಮಕ್ಕಳನ್ನು ಜಾಗೃತರಾಗಿರುವಂತೆ ನೋಡಿಕೊಳ್ಳಲು ಎಲ್ಲರೂ ಎಚ್ಚರದಿಂದ ಇರುವಂತೆ ಇನ್ನೊಂದು ವಾಯ್ಸ್ ಮೆಸೇಜನ್ನು ಕನ್ನಡದಲ್ಲಿ ಹಾಕಿರುವುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈರಲ್ ಆದ ಎರಡು ಸಂದೇಶದಲ್ಲಿ ಏನಿತ್ತು ?
ಓರ್ವ ಮಹಿಳೆ (ಅಂಗನವಾಡಿ ಮಗುವಿನ ತಾಯಿ ) ಸಂದೇಶವೊಂದರಲ್ಲಿ ನೀಡಿರುವ ಹೇಳಿಕೆಗಳು ಭಯಾನಕವಾಗಿದ್ದು, ಅದು ಈ ರೀತಿಯಾಗಿ ಇತ್ತು.
ಏನು ಗೊತ್ತುಂಟಾ ಇವತ್ತು ಇಲ್ಲಿ ನಮ್ಮ ಎಜೆಯ ಒಳಗಿನ ರೋಡಿನಲ್ಲಿ ಒಂದು ಮಗುವನ್ನು ಕಿಡ್ನಾಪ್ ಮಾಡಿದರಂತೆ. ಹಾಗೆ ಸಂಜೆ ವೇಳೆಗೆ ಮಕ್ಕಳನ್ನು ಸ್ವಲ್ಪ ಜಾಗೃತೆ ಮಾಡಿಕೊಳ್ಳಿ, ಎಲ್ಲರಿಗೂ ಮೆಸೇಜ್ ಕೊಡಬೇಕಂತೆ, ಹಾಗೆ ಹೇಗೆ ಬಂದರಂತೆ, ನಾಲ್ಕು ಜನ ಬಂದರಂತೆ ರಪಕ್ಕನೆ ಕಣ್ಣೆದುರೆದುರೆ ನಮ್ಮ ಪರಿಚಯದ ಇಬ್ಬರು ಹುಡುಗರು ಇದ್ದಾರೆ ದೈವಿಕ್ ಮತ್ತು ವಿಶ್ವ ಅಂತ. ಅವರ ಎದುರೇ ಎತ್ತಿಕೊಂಡು ಹೋದರಂತೆ, ಇವರು ಬೊಬ್ಬೆ ಹೊಡೆದ್ರಂತೆ ಹೊಡೆದ್ರಂತೆ. ಮತ್ತೆ ಒಮ್ನಿಯವರು ಪಾಸ್ಟ್ ಹೋದರಂತೆ.. ಅದು ಏನಾಗಿದೆ ಅಂತ ಗೊತ್ತಿಲ್ಲ.. ಒಂದು ಮಗುವನ್ನು ಒಂದು ಐದು ವರ್ಷದ ಮಗುವನ್ನು ಕಿಡ್ನಾಪ್ ಮಾಡಿಕೊಂಡು ಹೋದರಂತೆ ಅದೇ ಎಜೆ ರೋಡಿನಲ್ಲಿ ಆಯ್ತಾ ..
ಅಂಗನವಾಡಿಗೆ ಮಗುವನ್ನು ಕರೆದುಕೊಂಡು ಬರುತ್ತಿದ ತಾಯಿಯ ಆತಂಕವನ್ನು ಅವರ ಒತ್ತಾಯದ ಮೇರೆಗೆ ಅಂಗನವಾಡಿಯ ಶಿಕ್ಷಕಿಯವರು ಕನ್ನಡದಲ್ಲಿ ಹೇಳಿರುವುದು ಈ ರೀತಿಯಾಗಿ ಇತ್ತು.
ನೋಡಿ ಇದು ವಾಯ್ಸ್ ನಮ್ಮ ಕೆಪಿಟಿ ಅಂಗನವಾಡಿಗೆ ಒಂದು ಮಗು ಬರುತ್ತದೆ.. ಅವರ ತಾಯಿಯ ವಾಯ್ಸ್…. ಯಾಕೆಂದರೆ, ನಾನು ಯಾಕೆ ಹಾಕಿದ್ದೇನೆಂದರೆ ಇವತ್ತು ಅಂತೆ ಇವತ್ತು ಬಾರೆಬೈಲು ನಮ್ಮ ಕೆಳಗೆ ಎಜೆಗೆ ಹೋಗುವ ದಾರಿಯತ್ತಿರ ೆಜೆ ಹಾಸ್ಪಿಟಲ್ ಗೆ ಹೋಗುವ ದಾರಿಯುಂಟು ನೋಡಿ… ಅಲ್ಲಿಯಂತೆ ಯಾರೋ ಇವತ್ತು ನಾಲ್ಕು ಮಂದಿ ಓಮಿನಿಯಲ್ಲಿ ಬಂದರಂತೆ… ಅಲ್ಲಿ ಆಡ್ತಾ ಇದ್ರಂತೆ ಮಕ್ಕಳು… ಆ ಮಕ್ಕಳಲ್ಲಿ ಇಬ್ಬರು ಮಕ್ಕಳನ್ನು ಒಮ್ನಿಗೆ ಹಾಕಿಕೊಂಡು ಹೋಗಿದ್ದಾರಂತೆ… ಹಾಗಾಗಿ ಆ ಮಕ್ಕಳು ಯಾರು ಅಂತ ಗೊತ್ತಿಲ್ಲ ದಯಮಾಡಿ ಮಕ್ಕಳ ಮೇಲೆ ಸ್ವಲ್ಪ ಗಮನ ನೋಡಿ ಯಾರು ಸಹ ಮಕ್ಕಳನ್ನು ಆಡಲಿಕ್ಕೆ ಹೊರಗಡೆ ಬಿಡಬೇಡಿ… ಮೊನ್ನೆಯಿಂದ ಮಕ್ಕಳ ಕಳವು ಜಾಸ್ತಿಯಾಗುತ್ತಾ ಉಂಟು… ಎಲ್ಲಾ ಇದರಲ್ಲಿ ಬರ್ತಾ ಉಂಟು.. ಹಾಗಾಗಿ ಅವರ ಗುರುತದವರು.. ಗುರುತದ ಮಕ್ಕಳು ಹೋಗುವಾಗ ಅವರ ಎದುರಿನಲ್ಲಿಯೇ ಮಕ್ಕಳನ್ನು ಒಮ್ನಿಗೆ ಹಾಕಿಕೊಂಡು ರಪರಪನೇ ಎತ್ತಿಕೊಂಡು ಹೋಗಿದ್ದಾರಂತೆ…. ಹಾಗಾಗಿ ಏನು ಅಂತ ಹೇಳಿಕ್ಕೆ ಗೊತ್ತಾಗ್ತಾ ಇಲ್ಲ.. ಹಾಗಾಗಿ ನಾನು ಅದರ ಮೆಸೇಜನ್ನು ಅವರು ಹಾಕ್ಲಿಕ್ಕೆ ಹೇಳಿದ್ರು, ಅದಕ್ಕೆ ನಾನು ನಿಮ್ಮ ಗ್ರೂಫಲ್ಲಿ ಹಾಕಿದ್ದು..
ಇಂತಹ ಮೆಸೇಜ್ ಗಳು ಸಾರ್ವಜನಿಕರಲ್ಲಿ ಅನಗತ್ಯ ಭಯ ಹುಟ್ಟಿಸಲು ಕಾರಣವಾಗುತ್ತದೆ. ಇಂತಹ ಅಂತೆ ಕಂತೆ ಯಾವುದೇ ಸಂದೇಶಗಳನ್ನು ಹೇಳಿಕೊಳ್ಳುವ ಮೊದಲು ಅಥವಾ ಇತರರಿಗೆ ಕಳುಹಿಸುವ ಮೊದಲು ಪೊಲೀಸರು ಅಥವಾ ಅಧಿಕೃತ ಸುದ್ದಿ ಸಂಸ್ಥೆಗಳಿಂದ ಖಚಿತಪಡಿಸಿಕೊಳ್ಳುವುದು ಒಳ್ಳೆಯದು.
accident
ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು
ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.
ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
CONGRESS
ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ
ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
award
ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ
ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.
ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.
ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
