Connect with us

Uncategorized

ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳು ಪೊಲೀಸರ ವಶಕ್ಕೆ

Published

on

ಬೆಳ್ತಂಗಡಿ/ಬಂಟ್ವಾಳ: ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಂಡು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಪ್ರಕರಣ 1: ವೇಣೂರು ಪೊಲೀಸರ ಕಾರ್ಯಾಚರಣೆ
ಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಾಗಿದ್ದ CC No. 356/2019 ಪ್ರಕರಣಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲೆಯ ಕಾಪು ನಿವಾಸಿ ಮಣಿಕಂಠ (35) ಎಂಬಾತ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನ ಪತ್ತೆಗಾಗಿ ನಿರಂತರ ಪ್ರಯತ್ನ ನಡೆಸುತ್ತಿದ್ದ ವೇಣೂರು ಪೊಲೀಸ್ ಠಾಣೆಯ ತಂಡವು, ಖಚಿತ ಮಾಹಿತಿಯ ಮೇರೆಗೆ ಉಡುಪಿಯಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು ದಸ್ತಗಿರಿ ಮಾಡಿದೆ. ಬಳಿಕ ಆರೋಪಿಯನ್ನು ಮಾನ್ಯ ಬಂಟ್ವಾಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಪ್ರಕರಣ 2: ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ
ಬಂಟ್ವಾಳ ವೀರಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಎಂಬಾತ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳಲ್ಲಿ (ಅ.ಕ್ರ :117/2019 ಮತ್ತು ಅ.ಕ್ರ :111/2020) ಆರೋಪಿಯಾಗಿದ್ದನು. ಮಾನ್ಯ ಬಂಟ್ವಾಳ ACJ & JMFC ನ್ಯಾಯಾಲಯಕ್ಕೆ ಹಾಜರಾಗದೆ ಈತನು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು.

ವಿಶೇಷವೆಂದರೆ, ಈತನ ವಿರುದ್ಧ ಈ ಹಿಂದೆ 10ಕ್ಕೂ ಅಧಿಕ ಬಾರಿ ವಾರಂಟ್ ಜಾರಿಯಾಗಿದ್ದರೂ ಈತ ಸಿಕ್ಕಿಬಿದ್ದಿರಲಿಲ್ಲ. ಬಂಟ್ವಾಳ ನಗರ ಪೊಲೀಸ್ ಠಾಣೆಯ ASI ಸುಜು ಮತ್ತು CHC 665 ರವರನ್ನೊಳಗೊಂಡ ತಂಡವು ಅಂತಿಮವಾಗಿ ಈತನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ – ಕೂದಲೆಳೆ ಅಂತರದಲ್ಲಿ ಪಾರಾದ ಎಸ್ಪಿ ಸೈಮನ್ ಮತ್ತು ತಂಡ

Published

on

ಬೆಳ್ತಂಗಡಿ: ತೀವ್ರ ಕುತೂಹಲ ಕೆರಳಿಸಿರುವ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ.

ಘಟನೆಯ ವಿವರ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಬಗ್ಗೆ ಚರ್ಚಿಸಲು ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಅಧಿಕಾರಿಗಳ ತಂಡ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ತಂಡದಲ್ಲಿ ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟ‌ರ್ ಕುಸುಮಾಧರ್ ಹಾಗೂ ಸಿಬ್ಬಂದಿ ಮಂಜುನಾಥ್ ಪಿ.ಸಿ. ಇದ್ದರು. ಇವರು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ತಪ್ಪಿದ ಭಾರಿ ಅನಾಹುತ: ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು (KA-01-G-6463) ಚಾರ್ಮಾಡಿ ಘಾಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಕಾರು ಸಂಪೂರ್ಣವಾಗಿ ಉಲ್ಟಾ ಆಗಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ.




Continue Reading

INTERNATIONAL

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಣ ಲೂಟಿ ಆರೋಪ: ತನಿಖೆಗೆ ಎಸ್‌ಐಟಿ (SIT) ರಚನೆ, ಕೋಟ್ಯಂತರ ರೂಪಾಯಿ ವಶ!

Published

on

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ದಾನಪೆಟ್ಟಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರ ಈ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಈಗಾಗಲೇ ತನಿಖೆ ಆರಂಭಿಸಿರುವ ತಂಡ, ಓರ್ವ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 2.98 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ.

1. ಮೂವರು ಸದಸ್ಯರ ಹೈಪವರ್ ಎಸ್‌ಐಟಿ ರಚನೆ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮನವಿಯ ಮೇರೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂವರು ಉನ್ನತ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಿದ್ದು, ಎಸ್‌ಐಟಿ ತಂಡದಲ್ಲಿ ಲಕ್ನೋ ವಿಭಾಗೀಯ ಆಯುಕ್ತ ವಿಜಯ್ ವಿಶ್ವಾಸ್ ಪಂತ್, ಪೊಲೀಸ್ ಮಹಾನಿರ್ದೇಶಕ ಕಿರಣ್ ಎಸ್‌ ಹಾಗೂ ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಸದಸ್ಯರಾಗಿದ್ದಾರೆ. ದೇಣಿಗೆ ಮತ್ತು ಹಣಕಾಸು ನಿರ್ವಹಣೆಗೆ ಸಂಬಂಧಿಸಿದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡಕ್ಕೆ ಸೂಚಿಸಲಾಗಿದೆ.

ಈ ತಂಡಕ್ಕೆ 7 ದಿನಗಳಲ್ಲಿ ಪ್ರಾಥಮಿಕ ವರದಿ ಮತ್ತು 15 ದಿನಗಳಲ್ಲಿ ಅಂತಿಮ ವರದಿ ಸಲ್ಲಿಸಲು ಸೂಚಿಸಲಾಗಿದೆ. ಅಲ್ಲದೆ, ಭವಿಷ್ಯದಲ್ಲಿ ಇಂತಹ ಅಕ್ರಮಗಳು ನಡೆಯದಂತೆ ತಡೆಯಲು ಅಗತ್ಯ ಸಲಹೆಗಳನ್ನು ನೀಡುವಂತೆ ಸರ್ಕಾರ ಆದೇಶಿಸಿದೆ.

2. ಓರ್ವನ ಬಂಧನ: 2.98 ಕೋಟಿ ರೂ. ರಿಕವರಿ!

ದಾನದ ಹಣ ಎಣಿಕೆ ಕಾರ್ಯದಲ್ಲಿ ತೊಡಗಿದ್ದ ರುದೌಲಿಯ ಶುಜಾಗಂಜ್ ನಿವಾಸಿ ಲವ್ ಕುಶ್ ಮಿಶ್ರಾ (27) ಎಂಬಾತನನ್ನು ವಿಶೇಷ ಕಾರ್ಯಾಚರಣೆ ಗುಂಪು (SOG) ವಶಕ್ಕೆ ಪಡೆದಿದೆ.

ಹಣ ಪತ್ತೆ: ಆರೋಪಿಯ ಮನೆಯಿಂದ ಸುಮಾರು 10 ಲಕ್ಷ ರೂ. ನಗದು ಪತ್ತೆಯಾಗಿದ್ದು, ಹಣವನ್ನು ಬಚ್ಚಿಡಲು ಗೋಬರ್ (ಸಗಣಿ) ಬಳಸಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಐಷಾರಾಮಿ ಜೀವನ: ಕೇವಲ 18-20 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ ಲವ್ ಕುಶ್, ಇತ್ತೀಚೆಗೆ 1.5 ಕೋಟಿ ರೂಪಾಯಿ ಮೌಲ್ಯದ ಜಮೀನು ಖರೀದಿಸಿರುವುದು ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿತ್ತು.

ಒಟ್ಟು ಮೊತ್ತ: ಮೂಲಗಳ ಪ್ರಕಾರ, ಈ ಪ್ರಕರಣದಲ್ಲಿ ಈವರೆಗೆ ಒಟ್ಟು 2.98 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.

3. ರಾಜಕೀಯ ಸಂಚಲನ ಮತ್ತು ಆರೋಪ-ಪ್ರತ್ಯಾರೋಪ

ದೇಣಿಗೆ ಹಣ ನಾಪತ್ತೆಯಾಗಿರುವ ವರದಿಗಳು ಹೊರಬರುತ್ತಿದ್ದಂತೆ ಅಯೋಧ್ಯೆಯಲ್ಲಿ ರಾಜಕೀಯ ಕಿಚ್ಚು ಹತ್ತಿಕೊಂಡಿದೆ:

ಅಖಿಲೇಶ್ ಯಾದವ್: ಸಮಾಜವಾದಿ ಪಕ್ಷದ ಅಧ್ಯಕ್ಷರು ಈ ಬಗ್ಗೆ ನ್ಯಾಯಾಲಯಗಳು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್: ಬಿಜೆಪಿಯ ಮಾಜಿ ಸಂಸದರೇ ದೇಣಿಗೆ ದುರುಪಯೋಗದ ಬಗ್ಗೆ ಮಾಹಿತಿ ಇರುವುದಾಗಿ ಹೇಳಿಕೆ ನೀಡಿರುವುದು ಗಮನಾರ್ಹ.

ಕಾಂಗ್ರೆಸ್ ಆಗ್ರಹ: ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಟ್ರಸ್ಟ್ ಸ್ಪಷ್ಟನೆ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಆಂತರಿಕ ಲೆಕ್ಕಪರಿಶೋಧನೆ ನಡೆಯುತ್ತಿದ್ದು, ಸದ್ಯಕ್ಕೆ ಭ್ರಷ್ಟಾಚಾರಕ್ಕೆ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.

4. ಭಕ್ತರ ನಂಬಿಕೆಗೆ ದ್ರೋಹ: ವಿನಯ್ ಕಟಿಯಾರ್ ಕಿಡಿ

ಬಿಜೆಪಿ ಹಿರಿಯ ನಾಯಕ ವಿನಯ್ ಕಟಿಯಾರ್ ಅವರು ಪ್ರತಿಕ್ರಿಯಿಸಿ, “ರಾಮ ಮಂದಿರಕ್ಕೆ ಸಂಬಂಧಿಸಿದ ಹಣದ ಅಕ್ರಮವು ಲಕ್ಷಾಂತರ ಭಕ್ತರ ನಂಬಿಕೆಗೆ ಎಸಗುವ ದ್ರೋಹವಾಗಿದೆ. ತಪ್ಪಿತಸ್ಥರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು,” ಎಂದು ಒತ್ತಾಯಿಸಿದ್ದಾರೆ.

5. ಮುಂದಿನ ಹಂತವೇನು?

ಪ್ರಸ್ತುತ ಮಂದಿರದ ಸಿಸಿಟಿವಿ ಫುಟೇಜ್‌ಗಳನ್ನು ಜಾಲಾಡಲಾಗುತ್ತಿದ್ದು, ಹಣ ಎಣಿಕೆ ಕಾರ್ಯದಲ್ಲಿದ್ದ ಇತರೆ ಸಿಬ್ಬಂದಿಗಳ ಮೇಲೆ ಕಣ್ಣಿಡಲಾಗಿದೆ. ಲವ್ ಕುಶ್ ನೀಡುವ ಮಾಹಿತಿಯ ಆಧಾರದ ಮೇಲೆ ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆಯಿದೆ




Continue Reading

government

ಕುಳ ಕಂದಾಯ ಕಚೇರಿ ವಿವಾದ: ದಲ್ಲಾಳಿ ಆರೋಪಕ್ಕೆ ಹರಿನಾಮ ಸಂಕೀರ್ತನಕಾರ ಧರಣ್‌ ಮಾಣಿ ಸ್ಪಷ್ಟನೆ

Published

on

ಮಾಣಿ: ಕುಳ ಗ್ರಾಮದ ಕಂದಾಯ ಕಚೇರಿಯಲ್ಲಿ ತಾವು ಯಾವುದೇ ದಲ್ಲಾಳಿ ಕೆಲಸ ಮಾಡಿಲ್ಲ, ಕೇವಲ ಗೆಳೆತನ ಹಾಗೂ ಗ್ರಾಮದ ಕೆಲಸದ ನಿಮಿತ್ತ ಅಲ್ಲಿಗೆ ಹೋಗುತ್ತಿದ್ದೆ ಎಂದು ಹರಿನಾಮ ಸಂಕೀರ್ತನಕಾರ ಮತ್ತು ರಾಜ್ಯ ಮಟ್ಟದ ಕಲಾವಿದ ಎಲ್. ಕೆ. ಧರಣ್‌ ಮಾಣಿ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಕುಳ ಕಂದಾಯ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯಲ್ಲಿ ತಮ್ಮ ಹೆಸರನ್ನು ಬಳಸಿ ದಲ್ಲಾಳಿ ಎಂದು ಬಿಂಬಿಸಿರುವುದು ಸತ್ಯಕ್ಕೆ ದೂರವಾದ ವಿಚಾರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಯ ಹಿನ್ನೆಲೆ ಮತ್ತು ಸ್ಪಷ್ಟನೆ: “ನಾನು ಕಳೆದ 30 ವರ್ಷಗಳಿಂದ ರಾಜ್ಯ ಮಟ್ಟದ ಕಲಾವಿದನಾಗಿ ಗುರುತಿಸಿಕೊಂಡು ಗೌರವಯುತ ಜೀವನ ನಡೆಸುತ್ತಿದ್ದೇನೆ. ಕಳೆದ 6 ವರ್ಷಗಳಿಂದ ಕುಳ ಗ್ರಾಮದ ಬೆಳೆ ಸಮೀಕ್ಷೆಯನ್ನು ಸಿದ್ಧಪಡಿಸಿ ಗ್ರಾಮ ಕರಣಿಕರಿಗೆ ನೀಡುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೆ. ಈ ಕಾರಣದಿಂದಾಗಿ ಅಲ್ಲಿನ ಗ್ರಾಮ ಕರಣಿಕರು ಹಾಗೂ ಗ್ರಾಮ ಸೇವಕರ ಪರಿಚಯ ಮತ್ತು ಆತ್ಮೀಯತೆ ಇರುವುದು ನಿಜ. ಆದರೆ, ನಾನು ಅಲ್ಲಿ ಯಾವುದೇ ರೀತಿಯ ದಲ್ಲಾಳಿ ಅಥವಾ ಬ್ರೋಕರ್ ಕೆಲಸ ಮಾಡಿಲ್ಲ” ಎಂದು ಧರಣ್ ಮಾಣಿ ತಿಳಿಸಿದ್ದಾರೆ.

“ಸರಕಾರಿ ಉದ್ಯೋಗಿ ರಾಘವ ಅವರಿಂದ ತೊಂದರೆಗೊಳಗಾದ ಸಾರ್ವಜನಿಕರ ಪರವಾಗಿ ಸಚಿನ್ ಎಂಬುವವರು ಫೋಟೋ ತೆಗೆದು ಮೇಲಾಧಿಕಾರಿಗಳಿಗೆ ಹಾಗೂ ಮಾಧ್ಯಮಗಳಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ನಾನು ಕಚೇರಿಯಲ್ಲಿದ್ದದ್ದು ನಿಜ. ರಾಘವ ಅವರ ಪರಿಚಯದ ಹಿನ್ನೆಲೆಯಲ್ಲಿ ನಾನು ಅಲ್ಲಿಗೆ ಹೋಗುತ್ತಿದ್ದೆ. ಆದರೆ ದೂರುದಾರ ಸಚಿನ್ ಮತ್ತು ರಾಘವ ಅವರು ಸಮೀಪದ ಬಂಧುಗಳಾಗಿದ್ದು, ಅವರೊಳಗೆ ವೈಯಕ್ತಿಕ ವೈಷಮ್ಯಕ್ಕೆ ಅವರು ನೀಡಿದ ದೂರಿನಲ್ಲಿ ನನ್ನ ಹೆಸರನ್ನೂ ಸೇರಿಸಿ, ನಾನು ದಲ್ಲಾಳಿ ಕೆಲಸ ಮಾಡುತ್ತಿದ್ದೇನೆ ಎಂದು ಸುಳ್ಳು ಆರೋಪ ಮಾಡಿರುವುದು ತಮಗೆ ತೀವ್ರ ಬೇಸರ ತಂದಿದೆ” ಎಂದು ಅವರು ಹೇಳಿದ್ದಾರೆ.

ದೂರಿಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ

ಕುಳ ಗ್ರಾಮ ಆಡಳಿತಾಧಿಕಾರಿ ಕಛೇರಿಯೊಳಗೆ ಖಾಸಗಿ ವ್ಯಕ್ತಿ ಹಾಗೂ ಗ್ರಾಮ ಸಹಾಯಕ ಜೊತೆಯಾಗಿ ಗ್ರಾಮಸ್ಥರಿಗೆ ಹಿಂಸೆ, ಕಿರುಕುಳ ಹಾಗೂ ಹಣಕ್ಕಾಗಿ ಸತಾಯಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಸಚಿನ್ ಎಂಬವರು ದೂರು ನೀಡಿದ್ದರು. ಬಂಟ್ವಾಳ ತಹಶೀಲ್ದಾರ್, ಸಹಾಯಕ ಕಮಿಷನರ್, ದ. ಕ.ಜಿಲ್ಲಾಧಿಕಾರಿ, ಕಂದಾಯ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಿಗೆ ನೀಡಿದ ದೂರಿಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಲಾಗಿದ್ದು, ಇದರ ಬೆನ್ನಲ್ಲೇ ಧರಣ್ ಮಾಣಿ ನನಗೂ ಈ ದೂರಿಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕರ ಅನುಮಾನ & ಧರಣ್ ಮಾಣಿ ನಿರ್ಧಾರ: ಗ್ರಾಮಸೇವಕನ ಜೊತೆ ಗೆಳೆತನ ಮಾಡಿದ್ದಕ್ಕೆ ಸಾರ್ವಜನಿಕರು ಧರಣ್ ಮಾಣಿ ಅವರ ಮೇಲೂ ಅನುಮಾನ ವ್ಯಕ್ತಪಡಿಸುವಂತಾಗಿತ್ತು. ಈ ಕುರಿತು ಮಾತನಾಡಿದ ಅವರು, “ರಾಘವ ಅವರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಇವೆ ಎಂದು ನನಗೆ ಮನವರಿಕೆಯಾದ ತಕ್ಷಣವೇ, ನಾನು ಇನ್ನು ಮುಂದೆ ಆ ಕಚೇರಿಗೆ ಹೋಗುವುದಿಲ್ಲ ಮತ್ತು ಅಂತಹ ವ್ಯಕ್ತಿಗಳ ಸಂಪರ್ಕದಿಂದ ದೂರವಿರಲು ತೀರ್ಮಾನಿಸಿದ್ದೇನೆ. ಸಾರ್ವಜನಿಕರಲ್ಲಿ ನನ್ನ ಬಗ್ಗೆ ತಪ್ಪು ಅಭಿಪ್ರಾಯ ಮೂಡುತ್ತಿರುವುದು ವಿಷಾದನೀಯ. ನಾನು ನನ್ನ ಗೌರವಯುತ ಕಲಾ ಸೇವೆಯಲ್ಲಿಯೇ ಮುಂದುವರಿಯಲಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.




Continue Reading

Trending

Copyright © 2025 Deevatige

error: Content is protected !!