Educational
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಸಾಧ್ಯತೆ: ವಿದ್ಯಾರ್ಥಿಗಳ ಎದಬಡಿತ ಹೆಚ್ಚಿಸಿದ ಕೌತುಕ!
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಮೂಲಗಳ ಪ್ರಕಾರ, ನಾಳೆ ಅಂದರೆ ಏಪ್ರಿಲ್ 9, 2026 ರಂದು ಫಲಿತಾಂಶ ಘೋಷಣೆಯಾಗುವ ಸಾಧ್ಯತೆಯಿದೆ.

ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಗಮವಾಗಿ ನಡೆದಿದ್ದವು. ಕಳೆದ ವರ್ಷ ಏಪ್ರಿಲ್ 8 ರಂದು ಫಲಿತಾಂಶ ನೀಡಲಾಗಿದ್ದು, ಈ ಬಾರಿಯೂ ಅದೇ ವೇಳಾಪಟ್ಟಿಯಂತೆ ನಾಳೆಯೇ ರಿಸಲ್ಟ್ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ಇನ್ನೂ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
ಫಲಿತಾಂಶದ ದಿನದಂದು ವೆಬ್ಸೈಟ್ಗಳ ಮೇಲೆ ಒತ್ತಡವಿರುವುದರಿಂದ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇಲಾಖೆಯು ವಿವಿಧ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ಕೆಳಗಿನ ಹಂತಗಳನ್ನು ಅನುಸರಿಸಿ ನೀವು ಸುಲಭವಾಗಿ ಫಲಿತಾಂಶ ನೋಡಬಹುದು:
ಅಧಿಕೃತ ವೆಬ್ಸೈಟ್ಗಳು:
ಫಲಿತಾಂಶ ನೋಡುವ ವಿಧಾನ:
- ಮೇಲೆ ನೀಡಲಾದ ಯಾವುದಾದರೂ ಒಂದು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಮುಖಪುಟದಲ್ಲಿ ‘II PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ಸರಿಯಾಗಿ ನಮೂದಿಸಿ.
- ‘Submit’ ಬಟನ್ ಒತ್ತಿದ ಕೂಡಲೇ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.
- ಭವಿಷ್ಯದ ದಾಖಲೆಗಾಗಿ ಫಲಿತಾಂಶದ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ಔಟ್ ತೆಗೆದುಕೊಳ್ಳಿ.

ಡಿಜಿಲಾಕರ್ನಲ್ಲಿಯೂ ಲಭ್ಯ:
ಸರ್ಕಾರದ ಡಿಜಿಟಲ್ ವೇದಿಕೆಯಾದ ಡಿಜಿಲಾಕರ್ (digilocker.gov.in) ಮೂಲಕವೂ ಅಂಕಪಟ್ಟಿಯನ್ನು ಪಡೆಯಬಹುದು. ಈ ಬಗ್ಗೆ ಏಪ್ರಿಲ್ 3 ರಂದೇ ಮಾಹಿತಿ ನೀಡಿರುವ ಮಂಡಳಿಯು, ಫಲಿತಾಂಶ ಪ್ರಕಟವಾದ ತಕ್ಷಣ ಡಿಜಿಲಾಕರ್ನಲ್ಲಿ ಅಪ್ಡೇಟ್ ಮಾಡಲಾಗುವುದು ಎಂದು ತಿಳಿಸಿದೆ. ಇದು ಸುರಕ್ಷಿತವಾಗಿದ್ದು, ಯಾವುದೇ ಹೆಚ್ಚಿನ ದಾಖಲೆಗಳಿಲ್ಲದೆ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಲು ಅವಕಾಶ ನೀಡುತ್ತದೆ.
ಅಂಕಪಟ್ಟಿಯಲ್ಲಿ ಏನೇನಿರುತ್ತದೆ? ನಿಮ್ಮ ಆನ್ಲೈನ್ ಅಂಕಪಟ್ಟಿಯು ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ಪರೀಕ್ಷೆಯ ಫಲಿತಾಂಶದ ಸ್ಥಿತಿಯನ್ನು (Pass/Fail) ಒಳಗೊಂಡಿರುತ್ತದೆ.
award
600ಕ್ಕೆ 600 ಅಂಕ; ದುಃಖದ ನಡುವೆಯೂ ದಿಟ್ಟ ಸಾಧನೆ – ತಾಯಿಯನ್ನು ಕಳೆದುಕೊಂಡ ದಿಶಾ ರಾಜ್ಯಕ್ಕೆ ಪ್ರಥಮ
ಅಪಾರ ದುಃಖದ ನಡುವೆಯೂ ಅಸಾಧಾರಣ ಧೈರ್ಯ ಮತ್ತು ಸಂಕಲ್ಪದೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.
ಪರೀಕ್ಷೆಗಳ ನಡುವೆ ದಿಶಾ ಅವರ ಜೀವನದಲ್ಲಿ ಅನಿರೀಕ್ಷಿತ ದುರ್ಘಟನೆ ಸಂಭವಿಸಿತು. ಒಂದು ದಿನ ಅವರು ಮತ್ತು ಅವರ ತಂಗಿ ಓದುತ್ತಿದ್ದಾಗ, ಅವರ ತಾಯಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು. ಮೊದಲಿಗೆ ಸಾಮಾನ್ಯ ಗಾಯ ಎಂದು ಭಾವಿಸಿದರೂ, ಮರುದಿನ ಬೆಳಿಗ್ಗೆ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದರು. ಅದೇ ದಿನ ದಿಶಾ ಅವರಿಗೆ ಗಣಿತ ಪರೀಕ್ಷೆ ಇದ್ದುದರಿಂದ, ತಾಯಿಯ ಸ್ಥಿತಿ ಕಂಡು ಅವರು ಪರೀಕ್ಷೆಗೆ ಹಾಜರಾಗಲು ಮನಸ್ಸಿಲ್ಲದೆ, “ನಾನು ಪರೀಕ್ಷೆ ಬರೆಯುವುದಿಲ್ಲ” ಎಂದು ತಂದೆಯ ಬಳಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕರು ದಿಶಾ ಅವರಿಗೆ ಧೈರ್ಯ ತುಂಬಿ, “ನೀನು 600ಕ್ಕೆ 600 ಅಂಕ ಪಡೆಯುವ ಸಾಮರ್ಥ್ಯ ಹೊಂದಿದ್ದೀಯ” ಎಂದು ಪ್ರೋತ್ಸಾಹಿಸಿದರು. ಅವರ ಮಾತುಗಳಿಂದ ಪ್ರೇರಿತಳಾದ ದಿಶಾ, ಕಠಿಣ ಮನಸ್ಥಿತಿಯಲ್ಲಿಯೇ ಪರೀಕ್ಷೆ ಬರೆಯಲು ನಿರ್ಧರಿಸಿದರು.
ಪರೀಕ್ಷಾ ಕೇಂದ್ರದಲ್ಲಿಯೂ ದಿಶಾ ಆತಂಕ ಮತ್ತು ಭಯದ ನಡುವೆ ಪರೀಕ್ಷೆ ಎದುರಿಸಿದರು. ಪರೀಕ್ಷೆ ಅರ್ಧದಲ್ಲೇ ಬಿಟ್ಟು ಮನೆಗೆ ಹೋಗಬೇಕೆಂಬ ಭಾವನೆ ಬಂದರೂ, ತಮ್ಮ ಗುರಿಯನ್ನು ನೆನಪಿಸಿಕೊಂಡು ಪರೀಕ್ಷೆಯನ್ನು ಪೂರ್ಣಗೊಳಿಸಿದರು. ಗಣಿತ ಪರೀಕ್ಷೆಯ ನಂತರ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಎಕನಾಮಿಕ್ಸ್ ಪರೀಕ್ಷೆಯ ದಿನವೇ ತಾಯಿ ವಿಧಿವಶರಾದರು.
ತಾಯಿಯ ಅಗಲಿಕೆಯ ನೋವಿನ ನಡುವೆಯೂ ದಿಶಾ ಧೃತಿಗೆಡದೆ ಉಳಿದ ಎಲ್ಲಾ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಫಲವಾಗಿ, ಆರು ವಿಷಯಗಳಲ್ಲೂ ತಲಾ 100 ಅಂಕಗಳನ್ನು ಪಡೆದು 600/600 ಅಂಕಗಳ ಅಪೂರ್ವ ಸಾಧನೆ ಮಾಡಿದ್ದಾರೆ. ವಿಶೇಷವಾಗಿ ಇಂಗ್ಲಿಷ್ ವಿಷಯದಲ್ಲಿ ಪೂರ್ಣ ಅಂಕ ಗಳಿಸುವುದು ಕಷ್ಟ ಎಂಬ ಭಯವಿದ್ದರೂ, ಅದನ್ನೂ ಮೀರಿ ಸಾಧನೆ ಮಾಡಿದ್ದಾರೆ.

ದಿಶಾ ಅವರ ಸಾಧನೆಯಲ್ಲಿ ಅವರ ತಂದೆಯ ಬೆಂಬಲ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಾಪಕರ ಮಾರ್ಗದರ್ಶನ ಪ್ರಮುಖ ಪಾತ್ರವಹಿಸಿದೆ. ಕಠಿಣ ಸಮಯದಲ್ಲಿ ಶಿಕ್ಷಕರು ನೀಡಿದ ಕೌನ್ಸೆಲಿಂಗ್ ಮತ್ತು ಪ್ರೋತ್ಸಾಹವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದ್ದಾರೆ.
ಭವಿಷ್ಯದಲ್ಲಿ ಚಾರ್ಟರ್ಡ್ ಅಕೌಂಟೆಂಟ್ (CA) ಆಗುವ ಕನಸಿನೊಂದಿಗೆ ದಿಶಾ ಮುಂದುವರೆಯುತ್ತಿದ್ದಾರೆ. ಮೇ ತಿಂಗಳಲ್ಲಿ ನಡೆಯಲಿರುವ ಸಿಎ ಫೌಂಡೇಶನ್ ಪರೀಕ್ಷೆಗೆ ಅವರು ಸಿದ್ಧತೆ ನಡೆಸುತ್ತಿದ್ದಾರೆ.
ದುಃಖದ ನಡುವೆ ಧೈರ್ಯ ಕಳೆದುಕೊಳ್ಳದೇ ಗುರಿ ಸಾಧಿಸಿದ ದಿಶಾ ಅವರ ಕಥೆ, ಯಾವುದೇ ಸವಾಲು ಬಂದರೂ ದೃಢಸಂಕಲ್ಪ ಇದ್ದರೆ ಯಶಸ್ಸು ಸಾಧಿಸಬಹುದು ಎಂಬುದಕ್ಕೆ ಜೀವಂತ ಉದಾಹರಣೆಯಾಗಿದೆ.
ಅಭಿನಂದನೆಗಳು ದಿಶಾ – ನಿಮ್ಮ ಭವಿಷ್ಯ ಉಜ್ವಲವಾಗಿರಲಿ!

award
ಮಂಗಳೂರು ವಿಶ್ವವಿದ್ಯಾಲಯ: ಸುಶ್ಮಿತ ಸಿ.ಎಚ್. ಅವರಿಗೆ ಅನ್ವಯಿಕ ಸಸ್ಯಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪ್ರದಾನ
ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಶ್ಮಿತ ಸಿ.ಎಚ್. ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.

ಅವರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್ ಜಿ. ಅವರ ಮಾರ್ಗದರ್ಶನದಲ್ಲಿ “Antidiabetic activities of Syzygium hemisphericum (Wight) Alston and Syzygium kanarense (Talbot) Raizada” (ಸಿಜಿಜಿಯಂ ಹೆಮಿಸ್ಫೆರಿಕಂ ಮತ್ತು ಸಿಜಿಜಿಯಂ ಕೆನರೆನ್ಸ್ ಸಸ್ಯಗಳ ಮಧುಮೇಹ ವಿರೋಧಿ ಚಟುವಟಿಕೆಗಳು) ಎಂಬ ವಿಷಯದ ಬಗ್ಗೆ ಸಂಶೋಧನೆ ನಡೆಸಿದ್ದರು.

2025ರ ಅಕ್ಟೋಬರ್ನಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಇವರಿಗೆ, 2026ರ ಮಾರ್ಚ್ 28ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ 44ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ಅಧಿಕೃತವಾಗಿ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಲಾಯಿತು.
ಡಾ. ಸುಶ್ಮಿತ ಅವರು ಪ್ರಸಿದ್ಧ ಯಕ್ಷಗಾನ ಭಾಗವತರಾದ ಶ್ರೀ ಕಣಿಯೂರು ಸೂರ್ಯನಾರಾಯಣ ಭಟ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲದ ಉದ್ಯೋಗಿ ಶ್ರೀಮತಿ ಆಶಾಪಾರ್ವತಿ ದಂಪತಿಯ ಪುತ್ರಿ. ಇವರು ಯುವ ಉದ್ಯಮಿ ಶ್ರೀ ಕೃಷ್ಣ ವಿಕಾಸ್ ಅವರ ಪತ್ನಿಯಾಗಿದ್ದಾರೆ.

ತಮ್ಮ ಈ ಶೈಕ್ಷಣಿಕ ಸಾಧನೆಗೆ ಬೆನ್ನೆಲುಬಾಗಿ ನಿಂತ ತಂದೆ-ತಾಯಿ, ಸಹೋದರಿ ಹಾಗೂ ಪತಿಯವರ ನಿರಂತರ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಡಾ. ಸುಶ್ಮಿತ ಅವರು ಈ ಸಂದರ್ಭದಲ್ಲಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದಲ್ಲೇ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Educational
ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ: ಕಠಿಣ ಪ್ರಶ್ನೆಗಳಿಂದ ಕಂಗಾಲಾದ ವಿದ್ಯಾರ್ಥಿಗಳು; ಕೃಪಾಂಕ ನೀಡಲು ಹೆಚ್ಚಿದ ಒತ್ತಾಯ!
ರಾಜ್ಯಾದ್ಯಂತ ಶನಿವಾರ ನಡೆದ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪಠ್ಯಕ್ರಮದ ಹೊರತಾದ ಮತ್ತು ಅತ್ಯಂತ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೃಪಾಂಕ (Grace Marks) ನೀಡಬೇಕೆಂದು ಗಣಿತ ಶಿಕ್ಷಕರ ಸಂಘ ಹಾಗೂ ಪೋಷಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪತ್ರಿಕೆಯಲ್ಲಿ ಒಟ್ಟು 16 ಅಂಕಗಳ ಪ್ರಶ್ನೆಗಳು ಪಠ್ಯಕ್ರಮದಲ್ಲಿ (Syllabus) ಇರಲಿಲ್ಲ ಮತ್ತು 21 ಅಂಕಗಳ ಪ್ರಶ್ನೆಗಳು ಅತ್ಯಂತ ಕಠಿಣವಾಗಿದ್ದವು ಎಂದು ಶಿಕ್ಷಕರು ಆರೋಪಿಸಿದ್ದಾರೆ. ನಿಯಮದ ಪ್ರಕಾರ ಪ್ರಶ್ನೆಪತ್ರಿಕೆಯಲ್ಲಿ ಶೇ. 20ರಷ್ಟು ಕಠಿಣ, ಶೇ. 20ರಷ್ಟು ಸುಲಭ ಹಾಗೂ ಶೇ. 40ರಷ್ಟು ಮಧ್ಯಮ ಮಟ್ಟದ ಪ್ರಶ್ನೆಗಳಿರಬೇಕು. ಆದರೆ, ಈ ಬಾರಿ 35ಕ್ಕೂ ಹೆಚ್ಚು ಅಂಕಗಳಿಗೆ ಕಠಿಣ ಪ್ರಶ್ನೆಗಳನ್ನು ಕೇಳುವ ಮೂಲಕ ಮಂಡಳಿಯು ನಿಯಮ ಉಲ್ಲಂಘಿಸಿದೆ ಎನ್ನಲಾಗಿದೆ. ಅನ್ವಯಿಕ ಪ್ರಶ್ನೆಗಳು ಹೆಚ್ಚಾಗಿದ್ದರಿಂದ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಪಾಸಾಗಲು ಪರದಾಡುವಂತಾಗಿದೆ. ಇನ್ನು 100ಕ್ಕೆ 100 ಅಂಕಗಳ ಗುರಿ ಹೊಂದಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ಕೂಡ ನಿರಾಸೆಗೊಂಡಿದ್ದಾರೆ. ಬಹುವದೋಕ್ತಿ (1 ಅಂಕ), ನಿರ್ದೇಶಾಂಕ ರೇಖಾಗಣಿತ (2 ಅಂಕ), ವೃತ್ತಗಳು (2 ಅಂಕ), ತ್ರಿಭುಜಗಳು (3 ಅಂಕ), ವರ್ಗ ಸಮೀಕರಣಗಳು (1 ಅಂಕ), ಮೇಲ್ಮೈ ವಿಸ್ತೀರ್ಣಗಳು ಮತ್ತು ಘನಫಲಗಳು (5 ಅಂಕ) ಸೇರಿದಂತೆ ಪಠ್ಯದಲ್ಲಿಲ್ಲದ ಒಟ್ಟು 16 ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕೈಚೆಲ್ಲಿದ್ದಾರೆ.
ನಾಳೆ ನಿರ್ಣಾಯಕ ಸಭೆ:
ಈ ಸಮಸ್ಯೆಯ ಕುರಿತು ಈಗಾಗಲೇ ಶಿಕ್ಷಕರ ಸಂಘದ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳ ಶಿಕ್ಷಕರ ಸಂಘಗಳು ಶಿಕ್ಷಣ ಸಚಿವರಿಗೆ ಮನವಿ ನೀಡಿವೆ.

ಈ ಹಿನ್ನೆಲೆಯಲ್ಲಿ, ಮಾರ್ಚ್ 31ರ ಮಂಗಳವಾರದಂದು ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಪರೀಕ್ಷಾ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ಅಥವಾ ಮೌಲ್ಯಮಾಪನದ ವೇಳೆ ರಿಯಾಯಿತಿ ನೀಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
-
crime2 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala1 week agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
