Connect with us

accident

ಉಪ್ಪಿನಂಗಡಿಯಲ್ಲಿ ಥಾರ್-ಜೀಪ್ ನಡುವೆ ಭೀಕರ ಡಿಕ್ಕಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವಿಟ್ಲದ ಚಾಲಕ

Published

on

ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ ಇಂದ್ರಪ್ರಸ್ಥ ವಿದ್ಯಾಲಯದ ಮುಂಭಾಗದಲ್ಲಿ ಇಂದು ಬೆಳಿಗ್ಗೆ ಮಹೀಂದ್ರಾ ಥಾರ್ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಘಟನೆಯ ವಿವರ:
ದಿನಾಂಕ 13.04.2026 ರಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಈ ಅಪಘಾತ ಸಂಭವಿಸಿದೆ. ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಸಮೀಪದ ಕಲ್ಲಕಟ್ಟ ನಿವಾಸಿ ಸೇಸಪ್ಪ ಗೌಡ ಎಂಬುವವರು ತನ್ನ ಜೀಪಿನಲ್ಲಿ ಬೆಳಿಗ್ಗೆ 6 ಗಂಟೆಗೆ ವಿಟ್ಲದಿಂದ ಉಪ್ಪಿನಂಗಡಿಗೆ ಪ್ರಯಾಣಿಕರನ್ನು ಕರೆತಂದಿದ್ದರು. ಪ್ರಯಾಣಿಕರನ್ನು ಇಳಿಸಿ ವಾಪಸ್ ವಿಟ್ಲದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಇಂದ್ರಪ್ರಸ್ಥ ಶಾಲೆಯ ಎದುರು ವೇಗವಾಗಿ ಬಂದ ಮಹೀಂದ್ರಾ ಥಾರ್ ವಾಹನ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದೆ.

ಪಲ್ಟಿಯಾದ ಜೀಪು – ತಪ್ಪಿದ ಭಾರಿ ಅನಾಹುತ:
ಡಿಕ್ಕಿಯ ರಭಸಕ್ಕೆ ಜೀಪು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತ ನಡೆದ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ ಹಾಗೂ ಜೀಪಿನಲ್ಲಿ ಹೆಚ್ಚಿನ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ತಪ್ಪಿದಂತಾಗಿದೆ.

“ಬೆಳಿಗ್ಗೆ ಬಾಡಿಗೆ ಮುಗಿಸಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗಿಲ್ಲ” ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ವಿಟ್ಲದ ನೆಕ್ಕರೆಕಾಡು ನಿವಾಸಿ ಜೆಸಿಬಿ ಆಪರೇಟರ್ ರಮೇಶ್ ನಾಯ್ಕ ಅವರ ಉತ್ತರಕ್ರಿಯೆ ಉಪ್ಪಿನಂಗಡಿಯಲ್ಲಿ ನಡೆಯಲಿದ್ದು ಅದಕ್ಕಾಗಿ ಕುಟುಂಬಸ್ಥರನ್ನು ಬಿಟ್ಟು ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ – ಕೂದಲೆಳೆ ಅಂತರದಲ್ಲಿ ಪಾರಾದ ಎಸ್ಪಿ ಸೈಮನ್ ಮತ್ತು ತಂಡ

Published

on

ಬೆಳ್ತಂಗಡಿ: ತೀವ್ರ ಕುತೂಹಲ ಕೆರಳಿಸಿರುವ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜೂನ್ 16ರಂದು ಮಧ್ಯಾಹ್ನ ಸಂಭವಿಸಿದೆ.

ಘಟನೆಯ ವಿವರ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಬಗ್ಗೆ ಚರ್ಚಿಸಲು ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಅಧಿಕಾರಿಗಳ ತಂಡ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ತಂಡದಲ್ಲಿ ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟ‌ರ್ ಕುಸುಮಾಧರ್ ಹಾಗೂ ಸಿಬ್ಬಂದಿ ಮಂಜುನಾಥ್ ಪಿ.ಸಿ. ಇದ್ದರು. ಇವರು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ತಪ್ಪಿದ ಭಾರಿ ಅನಾಹುತ: ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು (KA-01-G-6463) ಚಾರ್ಮಾಡಿ ಘಾಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಕಾರು ಸಂಪೂರ್ಣವಾಗಿ ಉಲ್ಟಾ ಆಗಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ.




Continue Reading

accident

ಪೆರುವಾಯಿ ಪೇರಡ್ಕ ಸೇತುವೆಯಿಂದ ತೋಡಿಗೆ ಬಿದ್ದ ಆಲ್ಟೋ ಕಾರು: ಐವರು ಪ್ರಯಾಣಿಕರು ಪವಾಡಸದೃಶ ಪಾರು!

Published

on

ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕೆಳಗಿನ ತೋಡಿಗೆ ಬಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಪೆರುವಾಯಿ ಗ್ರಾಮದ ಪೇರಡ್ಕ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಘಟನೆಯ ವಿವರ: ಪೆರುವಾಯಿ ಕಡೆಯಿಂದ ಬೆರಿಪದವು ಕಡೆಗೆ ಐವರು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಆಲ್ಟೋ ಕಾರು ಪೇರಡ್ಕ ಸೇತುವೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ನೇರ ತೋಡಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಆಲ್ಟೋ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ರಕ್ಷಿಸಿದ ಮಳೆ ಅಭಾವ! ಸಾಮಾನ್ಯವಾಗಿ ಮುಂಗಾರು ಮಳೆಗಾಲದಲ್ಲಿ ಈ ತೋಡಿನಲ್ಲಿ ನೀರು ತುಂಬಿ ಭೋರ್ಗರೆದು ಹರಿಯುತ್ತಿರುತ್ತದೆ. ಆದರೆ ಈ ಬಾರಿ ಸಕಾಲದಲ್ಲಿ ಸರಿಯಾದ ಮಳೆ ಬಾರದ ಕಾರಣ ಹೊಳೆಯಲ್ಲಿ ನೀರಿನ ಪ್ರಮಾಣ ತೀರಾ ಕಡಿಮೆಯಿತ್ತು. ಇದೇ ಕಾರಣಕ್ಕೆ ಕಾರು ತಲೆಕೆಳಗಾಗಿ ಬಿದ್ದರೂ ನೀರಿನಲ್ಲಿ ಮುಳುಗದೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಲು ಸಾಧ್ಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಡೆಗೋಡೆ ಇಲ್ಲದ ಸೇತುವೆ: ನಿರಂತರ ಅಪಘಾತಗಳ ತಾಣ!

ಈ ಸೇತುವೆಗೆ ಯಾವುದೇ ಸುರಕ್ಷಿತ ತಡೆಗೋಡೆ (ಬ್ಯಾರಿಕೇಡ್) ಇಲ್ಲದಿರುವುದೇ ಸರಣಿ ಅಪಘಾತಗಳಿಗೆ ಮುಖ್ಯ ಕಾರಣವಾಗಿದೆ. ಕೇವಲ ಕೆಲವು ದಿನಗಳ ಹಿಂದಷ್ಟೇ (ಮೇ 31 ರಂದು) ಇದೇ ಸೇತುವೆಯಿಂದ ಕೋಳಿ ಸಾಗಾಟ ಮಾಡುತ್ತಿದ್ದ ಪಿಕ್‌ಅಪ್‌ ವಾಹನವೊಂದು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದು ಭೀಕರ ಅಪಘಾತ ನಡೆದಿತ್ತು. ಆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ.

ಸಾರ್ವಜನಿಕರ ಆಕ್ರೋಶ: “ಕಳೆದ ಹಲವಾರು ವರ್ಷಗಳಿಂದ ಈ ಅಪಾಯಕಾರಿ ಸೇತುವೆಗೆ ಬಲವಾದ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಹಾಗೂ ಸ್ಥಳೀಯರು ನಿರಂತರವಾಗಿ ಒತ್ತಾಯಿಸುತ್ತಾ ಬರುತ್ತಿದ್ದಾರೆ. ಆದರೆ ಲೋಕೋಪಯೋಗಿ ಇಲಾಖೆಯಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಯಾವುದೇ ಕ್ರಮ ಜರಗಿಸುತ್ತಿಲ್ಲ. ಅಧಿಕಾರಿಗಳ ಈ ಉದಾಸೀನತೆಯೇ ಸರಣಿ ಅಪಘಾತಗಳಿಗೆ ಪ್ರೇರಣೆ ನೀಡುವಂತಿದೆ” ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು, ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ದೊಡ್ಡ ಮಟ್ಟದ ಜೀವಹಾನಿಯನ್ನು ತಪ್ಪಿಸಲು ತಕ್ಷಣವೇ ಪೇರಡ್ಕ ಸೇತುವೆಗೆ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಗಂಭೀರವಾಗಿ ಆಗ್ರಹಿಸಿದ್ದಾರೆ

Continue Reading

accident

ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ

Published

on

ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.

ಅದೃಷ್ಟವಶಾತ್ ಬಚಾವ್

ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.

ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ

ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




Continue Reading

Trending

Copyright © 2025 Deevatige

error: Content is protected !!