Puttur
ಡಾ. ಪ್ರಸಾದ್ ಭಂಡಾರಿಯವರ ರಾಜಕೀಯ ಮೀರಿದ ದೈವಭಕ್ತಿ: ಪುತ್ತೂರು ಮಹಾಲಿಂಗೇಶ್ವರ ಜಾತ್ರೆಯ ಯಶಸ್ಸಿಗೆ ಶಾಸಕರು ಮತ್ತು ಕಾಂಗ್ರೆಸ್ ಆಡಳಿತ ಮಂಡಳಿಯನ್ನು ಶ್ಲಾಘಿಸಿದ ಬಿಜೆಪಿ ಮುಖಂಡ
ಪುತ್ತೂರು: ರಾಜಕೀಯ ವೈಮನಸ್ಸುಗಳನ್ನು ಬದಿಗಿಟ್ಟು ಕೇವಲ ಭಕ್ತಿಯ ನೆಲೆಯಲ್ಲಿ ಶ್ಲಾಘನೆ ವ್ಯಕ್ತಪಡಿಸುವ ಅಪರೂಪದ ಘಟನೆಗೆ ಪುತ್ತೂರು ಸಾಕ್ಷಿಯಾಗಿದೆ. ಪುತ್ತೂರಿನ ಐತಿಹಾಸಿಕ ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ದೇವರ ಈ ಬಾರಿಯ ಜಾತ್ರೋತ್ಸವವು ಅತ್ಯಂತ ವೈಭವದಿಂದ ಮತ್ತು ಶಿಸ್ತುಬದ್ಧವಾಗಿ ನಡೆದ ಹಿನ್ನೆಲೆಯಲ್ಲಿ, ಬಿಜೆಪಿಯ ಹಿರಿಯ ನಾಯಕ ಹಾಗೂ ಖ್ಯಾತ ವೈದ್ಯ ಡಾ. ಎಂ. ಕೆ. ಪ್ರಸಾದ್ ಭಂಡಾರಿ ಅವರು ಶಾಸಕ ಅಶೋಕ್ ಕುಮಾರ್ ರೈ ಮತ್ತು ದೇವಳದ ಆಡಳಿತ ಸಮಿತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಏನಿದೆ ವೈರಲ್ ಪತ್ರದಲ್ಲಿ?
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಪತ್ರ ಬರೆದಿರುವ ಡಾ. ಪ್ರಸಾದ್ ಭಂಡಾರಿ ಅವರು, ಈ ಬಾರಿಯ ಜಾತ್ರೆಯ ಯಶಸ್ಸಿನ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

ವೈಭವದ ಆಚರಣೆ: “ಈ ಬಾರಿಯ ಮಹಾಲಿಂಗೇಶ್ವರನ ಜಾತ್ರೆ ಅತ್ಯಂತ ‘Super’ ಆಗಿ, ಬಹಳ ವಿಜೃಂಭಣೆಯಿಂದ ಜರುಗಿದೆ. ಇಷ್ಟು ‘Grand’ ಆಗಿ ಈ ಹಿಂದೆ ಎಂದೂ ನಡೆದಿರಲಿಲ್ಲ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಉತ್ತಮ ವ್ಯವಸ್ಥೆ: ಭಕ್ತಾದಿಗಳಿಗೆ ಊಟ, ಉಪಹಾರ ಮತ್ತು ಕಾಫಿ-ತಿಂಡಿಯ ವ್ಯವಸ್ಥೆಯು ಅಚ್ಚುಕಟ್ಟಾಗಿ ಸಾಗಿತ್ತು ಎಂಬುದನ್ನು ಅವರು ವಿಶೇಷವಾಗಿ ಸ್ಮರಿಸಿದ್ದಾರೆ.
ಆಡಳಿತಕ್ಕೆ ಮೆಚ್ಚುಗೆ: “ಯಾವಾಗಲೂ ನೀವೇ ಆಡಳಿತ ಮಾಡಿದರೆ ಒಳ್ಳೆಯದು. ದೇವರು ನಿಮಗೆ ಸಂಪೂರ್ಣ ಆಶೀರ್ವಾದ ನೀಡಲಿ,” ಎಂದು ಹೇಳುವ ಮೂಲಕ ಕಾಂಗ್ರೆಸ್ ಬೆಂಬಲಿತ ಆಡಳಿತ ಮಂಡಳಿಯ ಕಾರ್ಯವೈಖರಿಗೆ ಫುಲ್ ಮಾರ್ಕ್ಸ್ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ
ಸಾಮಾನ್ಯವಾಗಿ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿರುತ್ತವೆ. ಆದರೆ, ಪುತ್ತೂರಿನಂತಹ ಸೂಕ್ಷ್ಮ ಪ್ರದೇಶದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೇಮಕಗೊಂಡ ಸಮಿತಿಯ ಕೆಲಸವನ್ನು ಶ್ಲಾಘಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಶಾಸಕ ಅಶೋಕ್ ರೈಯವರಿಗೂ ಪತ್ರ ಬರೆದು ಡಾ. ಎಂ. ಕೆ. ಪ್ರಸಾದ್ ಶ್ಲಾಘನೆ

ಇತ್ತೀಚೆಗೆ ಅದ್ಧೂರಿಯಾಗಿ ಸಂಪನ್ನಗೊಂಡ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಯಶಸ್ಸಿನ ಕುರಿತು ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಪತ್ರ ಬರೆದಿರುವ ಡಾ. ಪ್ರಸಾದ್ ಭಂಡಾರಿ ಅವರು ಅಭಿವೃದ್ಧಿಯ ಹರಿಕಾರ ಸ್ಥಳೀಯ ಕಾಂಗ್ರೇಸ್ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರಿಗೆ ಪತ್ರ ಬರೆದು ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ.

ದಾಖಲೆ ಬರೆದ ಈ ವರ್ಷದ ಜಾತ್ರೆ: ತಮ್ಮ ಪತ್ರದಲ್ಲಿ ಈ ವರ್ಷದ ಜಾತ್ರಾ ಸಂಭ್ರಮವನ್ನು ಮುಕ್ತಕಂಠದಿಂದ ಕೊಂಡಾಡಿರುವ ಡಾ. ಪ್ರಸಾದ್ ಅವರು, “ಈ ಬಾರಿಯ ಜಾತ್ರೆಯು ಅತ್ಯದ್ಭುತವಾಗಿ ಮತ್ತು ಭವ್ಯವಾಗಿ ಮೂಡಿಬಂದಿದೆ. ಇದು ಹಿಂದಿನ ಎಲ್ಲಾ ವರ್ಷಗಳ ವೈಭವವನ್ನು ಮೀರಿಸುವಂತೆ ಆಯೋಜಿಸಲ್ಪಟ್ಟಿದೆ” ಎಂದು ಬಣ್ಣಿಸಿದ್ದಾರೆ.
ಪುಣ್ಯಕ್ಷೇತ್ರವಾಗಿ ಬೆಳಗಲಿ ಪುತ್ತೂರು: ಶಾಸಕರ ಅಭಿವೃದ್ಧಿ ದೃಷ್ಟಿಕೋನವನ್ನು ಶ್ಲಾಘಿಸಿರುವ ಅವರು, “ಅಶೋಕ್ ರೈ ಅವರ ನಾಯಕತ್ವದಲ್ಲಿ ದೇವಸ್ಥಾನವು ಹೊಸ ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವಿಲ್ಲ. ಮುಂದಿನ ದಿನಗಳಲ್ಲಿ ಪುತ್ತೂರು ಒಂದು ಪ್ರಮುಖ ಪುಣ್ಯಕ್ಷೇತ್ರವಾಗಿ (Pilgrimage Centre) ಹೊರಹೊಮ್ಮಲಿದೆ ಎಂಬ ದೃಢ ವಿಶ್ವಾಸ ನನಗಿದೆ” ಎಂದು ತಿಳಿಸಿದ್ದಾರೆ.
ಶಾಸಕರು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ಕೇಳಿ ಬರುತ್ತಿದ್ದು, ಡಾಕ್ಟರ್ರ ಈ ಪತ್ರವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ.
ದೈವ ಕಾರ್ಯದಲ್ಲಿ ರಾಜಕೀಯ ಇರಬಾರದು ಎಂಬುದಕ್ಕೆ ಈ ಪತ್ರವೇ ಸಾಕ್ಷಿ. ಡಾ. ಪ್ರಸಾದ್ ಭಂಡಾರಿಯವರ ದೊಡ್ಡಗುಣ ಮತ್ತು ಈಶ್ವರ ಭಟ್ ಅವರ ಸಮರ್ಥ ನಾಯಕತ್ವಕ್ಕೆ ಇದು ಹಿಡಿದ ಕೈಗನ್ನಡಿ,” ಎಂದು ಭಕ್ತರು ಅಭಿಪ್ರಾಯಪಡುತ್ತಿದ್ದಾರೆ.
ಪ್ರಸ್ತುತ ಈ ಪತ್ರವು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, “ಪುತ್ತೂರಿನ ಸೌಹಾರ್ದತೆ ಮತ್ತು ದೈವಭಕ್ತಿಗೆ ಇದೊಂದು ಮಾದರಿ” ಎಂಬ ಕಾಮೆಂಟ್ಗಳು ಹರಿದು ಬರುತ್ತಿವೆ.

crime
ಪುತ್ತೂರು: ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ; ಅಜಿತ್ ರೈ ಹೊಸಮನೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ನಿಯಮ ಉಲ್ಲಂಘಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
- ಷರತ್ತುಬದ್ಧ ಅನುಮತಿ: ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಷರತ್ತುಬದ್ಧ ಅನುಮತಿ ನೀಡಲಾಗಿತ್ತು.
- ಸಮಯ ಮೀರಿದ ಬಳಿಕವೂ ಬಳಕೆ: ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಜಂಕ್ಷನ್ನಲ್ಲಿ ‘ಪಂಚಮುಖಿ ಫ್ರೆಂಡ್ಸ್’ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ವಿಚ್ ಆಫ್ ಮಾಡುವಂತೆ ಸೂಚಿಸಿದ್ದರು.
- ಆರೋಪವೇನು?: ಪೊಲೀಸರು ಸೂಚನೆ ನೀಡಿದರೂ, ಸ್ಥಳಕ್ಕೆ ಆಗಮಿಸಿದ ಅಜಿತ್ ರೈ ಹೊಸಮನೆ ಹಾಗೂ ಇತರರು ಧ್ವನಿವರ್ಧಕ ಬಂದ್ ಮಾಡದಂತೆ ತಡೆದು, ಪುನಃ ಧ್ವನಿವರ್ಧಕ ಬಳಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆರೋಪ:
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಠಾಣೆಯಿಂದ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ಪೊಲೀಸರು ತಿಳಿವಳಿಕೆ ನೀಡಿದರೂ, ಅದನ್ನು ಲೆಕ್ಕಿಸದೆ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಪೊಲೀಸ್ ಉಪನಿರೀಕ್ಷಕರು ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಅಧಿಕಾರಿಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಮೇರೆಗೆ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ
BANK
ಕ್ಯಾಂಪ್ಕೊದಿಂದ ದಾಖಲೆಯ ಸಾಧನೆ: 2025-26ನೇ ಸಾಲಿನಲ್ಲಿ ₹3,735 ಕೋಟಿ ವಹಿವಾಟು ಹಾಗೂ ₹49.62 ಕೋಟಿ ಲಾಭ
ಮಂಗಳೂರು: ಅಡಿಕೆ ಮಾರುಕಟ್ಟೆಯ ಏರಿಳಿತ ಹಾಗೂ ಕೊಕ್ಕೊ ವಲಯದ ಸವಾಲುಗಳ ನಡುವೆಯೂ ಕರಾವಳಿಯ ಸಹಕಾರಿ ದಿಗ್ಗಜ ‘ಕ್ಯಾಂಪ್ಕೊ’ (CAMPCO) ಸಂಸ್ಥೆಯು 2025-26ನೇ ಆರ್ಥಿಕ ವರ್ಷದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಸಂಸ್ಥೆಯು ಒಟ್ಟು ₹3,735 ಕೋಟಿ ವಹಿವಾಟು ನಡೆಸಿದ್ದು, ₹49.62 ಕೋಟಿ ತೆರಿಗೆಪೂರ್ವ ಲಾಭ ಗಳಿಸಿದೆ. ಅಲ್ಲದೆ, ಸದಸ್ಯರಿಗೆ ಶೇ. 14ರಷ್ಟು ಡಿವಿಡೆಂಡ್ (ಲಾಭಾಂಶ) ನೀಡಲು ನಿರ್ದೇಶಕ ಮಂಡಳಿ ಶಿಫಾರಸು ಮಾಡಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ವಾರ್ಷಿಕ ಸಾಧನೆಯ ವಿವರಗಳನ್ನು ಹಂಚಿಕೊಂಡ ಅವರು, ಪ್ರಮುಖ ಮುಖ್ಯಾಂಶಗಳನ್ನು ವಿವರಿಸಿದರು:
ಅಡಿಕೆ ವಹಿವಾಟು: 2025-26ನೇ ಸಾಲಿನಲ್ಲಿ ಒಟ್ಟು ₹2,924.32 ಕೋಟಿ ಮೌಲ್ಯದ 58,742.76 ಮೆಟ್ರಿಕ್ ಟನ್ ಅಡಿಕೆಯನ್ನು ಖರೀದಿಸಲಾಗಿದ್ದು, ₹2,985.19 ಕೋಟಿ ಮೌಲ್ಯದ 59,088.64 ಮೆಟ್ರಿಕ್ ಟನ್ ಅಡಿಕೆಯನ್ನು ಮಾರಾಟ ಮಾಡಲಾಗಿದೆ.
ಅಡಿಕೆ ಬೆಳೆಗಾರರ ಹಿತರಕ್ಷಣೆ: ಆಮದು ಅಡಿಕೆಯಿಂದ ದೇಶೀಯ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ತಪ್ಪು ವರ್ಗೀಕರಣ ಹಾಗೂ ಆಮದು ಅಡಿಕೆಯನ್ನು ದೇಶೀಯ ಉತ್ಪನ್ನದೊಂದಿಗೆ ಮಿಶ್ರಣ ಮಾಡುವ ಅಕ್ರಮ ಚಟುವಟಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗಿದೆ. ಜೊತೆಗೆ, ಉತ್ತರ ಪ್ರದೇಶದ ಮಂಡಿ ತೆರಿಗೆ ವಿಚಾರವನ್ನೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮುಂದೆ ಮಂಡಿಸಲಾಗಿದೆ.

ಕೊಕ್ಕೊ ಮತ್ತು ಚಾಕೊಲೇಟ್ ವಲಯ: ಕೊಕ್ಕೊ ಹಾಗೂ ಚಾಕೊಲೇಟ್ ವಿಭಾಗದಲ್ಲೂ ಸಂಸ್ಥೆ ಗಣನೀಯ ಸಾಧನೆ ಮಾಡಿದ್ದು, ರೈತರಿಗೆ ಪ್ರೋತ್ಸಾಹಿಸಲು ರಿಯಾಯಿತಿ ದರದಲ್ಲಿ 1,16,275 ಕೊಕ್ಕೊ ಸಸಿಗಳನ್ನು ವಿತರಿಸಲಾಗಿದೆ.
ರೈತ ಕಲ್ಯಾಣ ಯೋಜನೆಗಳು: ಸದಸ್ಯರ ವಿವಿಧ ಕಲ್ಯಾಣ ಯೋಜನೆಗಳಡಿ ಒಟ್ಟು 120 ಫಲಾನುಭವಿಗಳಿಗೆ ₹86.42 ಲಕ್ಷ ಆರ್ಥಿಕ ನೆರವು ನೀಡಲಾಗಿದೆ.
ಡಿಜಿಟಲ್ ಸೇವೆಗಳು ಮತ್ತು ವಿಸ್ತರಣೆ: ತಂತ್ರಜ್ಞಾನ ಆಧಾರಿತ ಸೇವೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ‘ಕ್ಯಾಂಪ್ಕೊ ಕಿಸಾನ್ ಮಿತ್ರ’ ಆ್ಯಪ್ ಹಾಗೂ ‘ಕ್ಯಾಂಪ್ಕೊ ಕಾರ್ಟ್’ ಸೇವೆಗಳಿಗೆ ಚಾಲನೆ ನೀಡಲಾಗಿದೆ. ಇದರೊಂದಿಗೆ ರೈತರ ಅನುಕೂಲಕ್ಕಾಗಿ ರಿಪ್ಪನ್ಪೇಟೆ, ಚೇಳೂರು ಹಾಗೂ ಸರಪಾಡಿಯಲ್ಲಿ ಹೊಸ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆ: ಭಾರತೀಯ ಅಡಿಕೆಗೆ ಜಾಗತಿಕ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಹಂತವಾಗಿ 130 ಮೆಟ್ರಿಕ್ ಟನ್ ಅಡಿಕೆಯನ್ನು ಮಾಲ್ಡೀವ್ಸ್ಗೆ ರಫ್ತು ಮಾಡಲಾಗಿದೆ.
ಮುಂದಿನ ವರ್ಷದ ಗುರಿಗಳು (2026-27): ಹೊಸ ಆರ್ಥಿಕ ವರ್ಷದಲ್ಲಿ ಸಂಸ್ಥೆಯ ಖರೀದಿ ಜಾಲವನ್ನು ಮತ್ತಷ್ಟು ವಿಸ್ತರಿಸುವುದು, ಒಂದು ಲಕ್ಷ ಕೊಕ್ಕೊ ಸಸಿಗಳನ್ನು ವಿತರಿಸುವುದು, ಚಾಕೊಲೇಟ್ ಉತ್ಪಾದನೆಯನ್ನು ಹೆಚ್ಚಿಸುವುದು, ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ವಿಸ್ತರಿಸುವುದು ಹಾಗೂ ರೈತಪರ ವೈಜ್ಞಾನಿಕ ಸಂಶೋಧನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸತೀಶ್ಚಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪದ್ಮರಾಜ್ ಪಟ್ಟಾಜೆ, ನಿರ್ದೇಶಕ ಪುರುಷೋತ್ತಮ ಭಟ್, ಡೆಪ್ಯುಟಿ ಜನರಲ್ ಮ್ಯಾನೇಜರ್ (ಮಾರ್ಕೆಟಿಂಗ್) ಗೋವಿಂದ ಭಟ್ ಹಾಗೂ ಜನರಲ್ ಮ್ಯಾನೇಜರ್ ರೇಷ್ಮಾ ಮಲ್ಯ ಉಪಸ್ಥಿತರಿದ್ದರು.
FOREST
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪ್ರತ್ಯಕ್ಷಗೊಂಡ ಕಾಡುಕೋಣಗಳು: ಸಾರ್ವಜನಿಕರಲ್ಲಿ ಆತಂಕ, ಅರಣ್ಯ ಇಲಾಖೆಗೆ ಆಗ್ರಹ
ಪುತ್ತೂರು, ಸೆ.11: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎರಡು ಕಾಡುಕೋಣಗಳು ಪ್ರತ್ಯಕ್ಷಗೊಂಡಿದ್ದು, ಸ್ಥಳೀಯರಲ್ಲಿ ಹಾಗೂ ವಾಹನ ಸವಾರರಲ್ಲಿ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣವಾಗಿತ್ತು.
ಬೈಪಾಸ್ ರಸ್ತೆಯ ದುಗ್ಗಮ್ಮ-ದೇರಣ್ಣ ಹಾಲ್ ಸಮೀಪ ಎರಡು ಕಾಡುಕೋಣಗಳು ರಸ್ತೆಗೆ ಅಡ್ಡವಾಗಿ ನಿಂತು ರಾಜಾರೋಷವಾಗಿ ಸಂಚರಿಸಿರುವ ದೃಶ್ಯ ಕಂಡುಬಂದಿದೆ. ಈ ಅನಿರೀಕ್ಷಿತ ದೃಶ್ಯವನ್ನು ಗಮನಿಸಿದ ಕೌಡಿಚ್ಚಾರು ಮೂಲದ ಮುಂಬೈ ಉದ್ಯಮಿಯೊಬ್ಬರು ತಕ್ಷಣವೇ ಮಾಧ್ಯಮಗಳಿಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ.
ಮಾಣಿ-ಮೈಸೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಹಾಗೂ ಸದಾ ವಾಹನಗಳು ಮತ್ತು ಸಾರ್ವಜನಿಕರ ಓಡಾಟವಿರುವ ಜನನಿಬಿಡ ಪ್ರದೇಶದಲ್ಲೇ ಕಾಡುಕೋಣಗಳು ಪ್ರತ್ಯಕ್ಷಗೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರಾಣಿಗಳು ಯಾವುದೇ ಕ್ಷಣದಲ್ಲಿ ಅಪಾಯ ತಂದೊಡ್ಡಬಹುದು ಎಂಬ ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು, ಅರಣ್ಯ ಇಲಾಖೆಯು ಕೂಡಲೇ ಕಾರ್ಯಪ್ರವೃತ್ತರಾಗಿ ಈ ಕಾಡುಕೋಣಗಳನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬಲವಾಗಿ ಒತ್ತಾಯಿಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
