Educational
ಇಂದೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಲಭ್ಯ!
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ರ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 23, 2026ರಂದು ಮಧ್ಯಾಹ್ನ 12:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ವಿಧಾನಗಳ ಮೂಲಕ ಪಡೆಯಬಹುದು:
ಅಧಿಕೃತ ವೆಬ್ಸೈಟ್: https://karresults.nic.in ಲಿಂಕ್ ಮೂಲಕ ನಿಮ್ಮ ನೋಂದಣಿ ಸಂಖ್ಯೆ ಬಳಸಿ ಫಲಿತಾಂಶ ನೋಡಬಹುದು.
ಮೊಬೈಲ್ ಆಪ್: ‘KarnatakaOne’ ಮೊಬೈಲ್ ಆಪ್ ಮೂಲಕವೂ ಫಲಿತಾಂಶ ಲಭ್ಯವಿರುತ್ತದೆ.
ನೇರ ಸಂದೇಶ: ವಿದ್ಯಾರ್ಥಿಗಳು ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಳಿಯು ವಾಟ್ಸಾಪ್ (WhatsApp) ಅಥವಾ ಎಸ್ಎಂಎಸ್ (SMS) ಮೂಲಕ ಫಲಿತಾಂಶದ ಮಾಹಿತಿಯನ್ನು ಕಳುಹಿಸಲಿದೆ
ಡಿಜಿಲಾಕರ್ನಲ್ಲಿ ಅಂಕಪಟ್ಟಿ ಲಭ್ಯ:
ಈ ವರ್ಷದ ವಿಶೇಷವೆಂದರೆ, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು (Marks Card) ಮೊದಲ ಬಾರಿಗೆ ಡಿಜಿಲಾಕರ್ (DigiLocker) ಮೂಲಕ ನೀಡಲಾಗುತ್ತಿದೆ. ಇಂದು ಮಧ್ಯಾಹ್ನ 12:00 ಗಂಟೆಯಿಂದಲೇ ವಿದ್ಯಾರ್ಥಿಗಳು https://www.digilocker.gov.in ವೆಬ್ಸೈಟ್ ಬಳಸಿ ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್ನಿಂದ ಅಂಕಪಟ್ಟಿ ಪಡೆಯುವ ವಿಧಾನ ತಿಳಿಯಲು ಈ ಲಿಂಕ್ ಬಳಸಿ: https://tinyurl.com/mw84wmh9.
ಶಾಲಾ ಮಟ್ಟದಲ್ಲಿ ಫಲಿತಾಂಶ:
ಸಂಬಂಧಪಟ್ಟ ಶಾಲೆಗಳಲ್ಲಿಯೂ ಸಹ ಇಂದು ಮಧ್ಯಾಹ್ನ 12:00 ಗಂಟೆಯ ನಂತರ ಫಲಿತಾಂಶದ ಪಟ್ಟಿ ಲಭ್ಯವಿರುತ್ತದೆ ಎಂದು ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.
ಶುಭ ಹಾರೈಕೆಗಳು: ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಬರಲಿ ಎಂದು ಆಶಿಸುತ್ತೇವೆ!

Bantawala
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆಗೆ ಭರ್ಜರಿ ಫಲಿತಾಂಶ; ಐವರು ವಿದ್ಯಾರ್ಥಿಗಳಿಂದ 600ಕ್ಕೂ ಅಧಿಕ ಅಂಕಗಳ ದಾಖಲೆ!
ವಿಟ್ಲ: 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಟ್ಲದ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆ (ಆರ್ಎಂಎಸ್ ಎ) ಅತ್ಯುತ್ತಮ ಸಾಧನೆ ಮಾಡಿದ್ದು, ಶೇ. 99.2 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 122 ವಿದ್ಯಾರ್ಥಿಗಳಲ್ಲಿ 121 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸರಕಾರಿ ಶಾಲೆಯ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ.
ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳು:
ಶಾಲೆಯ ಒಟ್ಟು ಐವರು ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ:
ಶ್ರೇಯಾ: 625ರಲ್ಲಿ 612 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಕಂಬಳಬೆಟ್ಟಿನ ಶ್ರೀಕೃಪಾ ಮತ್ತು ಮಹೇಶ್ ದಂಪತಿಯ ಪುತ್ರಿ.

ಸಾನ್ವಿ ರೈ: ಬಾಕ್ರಬೈಲ್ ಸದಾಶಿವಶೆಟ್ಟಿ ಹಾಗೂ ಪ್ರತಿಮಾ ದಂಪತಿಯ ಪುತ್ರಿಯಾದ ಇವರು 611 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಮಹ್ನಾ ಖತೀಜಾ ಖಾದರ್: ಒಕ್ಕೆತ್ತೂರಿನ ಅಬ್ದುಲ್ ಖಾದರ್ ಮತ್ತು ರಶೀದಾ ದಂಪತಿಗಳ ಪುತ್ರಿಯಾದ ಇವರು 609 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ತ್ರಿಶಾ: ಕಬ್ಬಿಣಹಿತ್ಲು ನಿವಾಸಿಗಳಾದ ಸುರೇಶ್ ಮತ್ತು ಶೋಭಾ ದಂಪತಿಯ ಪುತ್ರಿಯಾದ ಇವರು 607 ಅಂಕಗಳನ್ನು ಪಡೆದಿದ್ದಾರೆ.

ಮನಸ್ವಿ ಕೆ. ಆರ್: ಕೂಜಪಾಡಿಯ ರಾಧಾಕೃಷ್ಣ ಮತ್ತು ಮೋಹಿನಿ ದಂಪತಿಯ ಪುತ್ರಿಯಾದ ಇವರು 605 ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.


ಶ್ರೇಣಿವಾರು ಫಲಿತಾಂಶ:
ಶಾಲೆಯ ಒಟ್ಟು ಫಲಿತಾಂಶದಲ್ಲಿ ಗುಣಮಟ್ಟದ ಸಾಧನೆ ಎದ್ದು ಕಾಣುತ್ತಿದ್ದು, ಶ್ರೇಣಿವಾರು ವಿವರ ಹೀಗಿದೆ:
ಉನ್ನತ ಶ್ರೇಣಿ (Distinction): 33 ವಿದ್ಯಾರ್ಥಿಗಳು
ಪ್ರಥಮ ಶ್ರೇಣಿ: 54 ವಿದ್ಯಾರ್ಥಿಗಳು
ದ್ವಿತೀಯ ಶ್ರೇಣಿ: 18 ವಿದ್ಯಾರ್ಥಿಗಳು
ತೃತೀಯ ಶ್ರೇಣಿ: 16 ವಿದ್ಯಾರ್ಥಿಗಳು
ಸರಕಾರಿ ಶಾಲೆಯ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಅಂಕ ಗಳಿಸಿರುವುದು ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರ ಹರ್ಷಕ್ಕೆ ಕಾರಣವಾಗಿದೆ. ಸಾಧಕ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಅಭಿನಂದಿಸಲಾಗಿದೆ.

Bantawala
ಸಾಲೆತ್ತೂರು ಸಿರಿ ವಿದ್ಯಾಲಯಕ್ಕೆ ‘ಕರ್ಣಾಟಕ ಬ್ಯಾಂಕ್’ನಿಂದ ಬಸ್ ಕೊಡುಗೆ
ಬಂಟ್ವಾಳ: ತಾಲೂಕಿನ ಸಾಲೆತ್ತೂರು ಗ್ರಾಮದ ಸಿರಿ ವಿದ್ಯಾಲಯಕ್ಕೆ ಮಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ದೇಶದ ಅಗ್ರಗಣ್ಯ ಹಣಕಾಸು ಸಂಸ್ಥೆ ಕರ್ಣಾಟಕ ಬ್ಯಾಂಕ್, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೂತನ ಶಾಲಾ ಬಸ್ಸನ್ನು ಕೊಡುಗೆಯಾಗಿ ನೀಡಿದೆ.

19ನೇ ವರ್ಷದ ಸಂಭ್ರಮ – ಹತ್ತನೇ ತರಗತಿ ಆರಂಭ: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡುವ ಮಹದೋದ್ದೇಶದೊಂದಿಗೆ 2007ರಲ್ಲಿ ಆರಂಭವಾದ ಸಿರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯು ಪ್ರಸ್ತುತ 18 ವರ್ಷಗಳನ್ನು ಪೂರೈಸಿ 19ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಕಳೆದ ಸಾಲಿನಲ್ಲಿ 9ನೇ ತರಗತಿ ಆರಂಭಿಸಲಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣ ಇಲಾಖೆಯ ಅನುಮತಿಯೊಂದಿಗೆ ಹತ್ತನೇ ತರಗತಿ ಆರಂಭಗೊಳ್ಳುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ನೀಡಿದ ಬಸ್ ಕೊಡುಗೆಯು ಶಾಲೆಯ ಪ್ರಗತಿಗೆ ಸಾಕ್ಷಿಯಾಗಿದೆ.


ಬಸ್ ಕೀಲಿ ಹಸ್ತಾಂತರ: ಸಾಲೆತ್ತೂರಿನ ಸಿರಿ ವಿದ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ಣಾಟಕ ಬ್ಯಾಂಕ್ ಮಂಗಳೂರು ವಲಯದ ಮುಖ್ಯ ವ್ಯವಸ್ಥಾಪಕರು ಹಾಗೂ ಕ್ಲಸ್ಟರ್ ಮುಖ್ಯಸ್ಥರಾದ ಶ್ರೀ ಲಕ್ಷ್ಮಿನಾರಾಯಣ ಪಿ.ಎಸ್. ಅವರು ನೂತನ ಬಸ್ಸಿನ ಕೀಲಿಯನ್ನು ವಿದ್ಯಾಲಯದ ಮುಖ್ಯಸ್ಥರಾದ ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ ಅವರಿಗೆ ಹಸ್ತಾಂತರಿಸಿದರು.
ಈ ಶುಭ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಮಂಚಿ ಶಾಖೆಯ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಗೌಡ ಕೆ., ಪಿಎನ್ಬಿ ಮೆಟ್ಲೈಫ್ನ ಶ್ರೀ ಚರಣ್, ಸಿರಿ ವಿದ್ಯಾಲಯದ ಟ್ರಸ್ಟಿಗಳಾದ ಗಾಯತ್ರಿ ಶಿವರಾಮ್ ಶೆಟ್ಟಿ, ಕರುಣಾಕರ ಶೆಟ್ಟಿ ಹಾಗೂ ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 16 ಜನ ಶಿಕ್ಷಕ ವೃಂದವನ್ನು ಹೊಂದಿರುವ ಈ ವಿದ್ಯಾಲಯವು, ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಕರ್ಣಾಟಕ ಬ್ಯಾಂಕ್ನ ಈ ಸಾಮಾಜಿಕ ಕಾಳಜಿಯ ಕಾರ್ಯಕ್ಕೆ ಸ್ಥಳೀಯರು ಹಾಗೂ ಶಾಲಾ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.
award
600ಕ್ಕೆ 600 ಅಂಕ; ದುಃಖದ ನಡುವೆಯೂ ದಿಟ್ಟ ಸಾಧನೆ – ತಾಯಿಯನ್ನು ಕಳೆದುಕೊಂಡ ದಿಶಾ ರಾಜ್ಯಕ್ಕೆ ಪ್ರಥಮ
ಅಪಾರ ದುಃಖದ ನಡುವೆಯೂ ಅಸಾಧಾರಣ ಧೈರ್ಯ ಮತ್ತು ಸಂಕಲ್ಪದೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ.
ಪರೀಕ್ಷೆಗಳ ನಡುವೆ ದಿಶಾ ಅವರ ಜೀವನದಲ್ಲಿ ಅನಿರೀಕ್ಷಿತ ದುರ್ಘಟನೆ ಸಂಭವಿಸಿತು. ಒಂದು ದಿನ ಅವರು ಮತ್ತು ಅವರ ತಂಗಿ ಓದುತ್ತಿದ್ದಾಗ, ಅವರ ತಾಯಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು. ಮೊದಲಿಗೆ ಸಾಮಾನ್ಯ ಗಾಯ ಎಂದು ಭಾವಿಸಿದರೂ, ಮರುದಿನ ಬೆಳಿಗ್ಗೆ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದರು. ಅದೇ ದಿನ ದಿಶಾ ಅವರಿಗೆ ಗಣಿತ ಪರೀಕ್ಷೆ ಇದ್ದುದರಿಂದ, ತಾಯಿಯ ಸ್ಥಿತಿ ಕಂಡು ಅವರು ಪರೀಕ್ಷೆಗೆ ಹಾಜರಾಗಲು ಮನಸ್ಸಿಲ್ಲದೆ, “ನಾನು ಪರೀಕ್ಷೆ ಬರೆಯುವುದಿಲ್ಲ” ಎಂದು ತಂದೆಯ ಬಳಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕರು ದಿಶಾ ಅವರಿಗೆ ಧೈರ್ಯ ತುಂಬಿ, “ನೀನು 600ಕ್ಕೆ 600 ಅಂಕ ಪಡೆಯುವ ಸಾಮರ್ಥ್ಯ ಹೊಂದಿದ್ದೀಯ” ಎಂದು ಪ್ರೋತ್ಸಾಹಿಸಿದರು. ಅವರ ಮಾತುಗಳಿಂದ ಪ್ರೇರಿತಳಾದ ದಿಶಾ, ಕಠಿಣ ಮನಸ್ಥಿತಿಯಲ್ಲಿಯೇ ಪರೀಕ್ಷೆ ಬರೆಯಲು ನಿರ್ಧರಿಸಿದರು.
ಪರೀಕ್ಷಾ ಕೇಂದ್ರದಲ್ಲಿಯೂ ದಿಶಾ ಆತಂಕ ಮತ್ತು ಭಯದ ನಡುವೆ ಪರೀಕ್ಷೆ ಎದುರಿಸಿದರು. ಪರೀಕ್ಷೆ ಅರ್ಧದಲ್ಲೇ ಬಿಟ್ಟು ಮನೆಗೆ ಹೋಗಬೇಕೆಂಬ ಭಾವನೆ ಬಂದರೂ, ತಮ್ಮ ಗುರಿಯನ್ನು ನೆನಪಿಸಿಕೊಂಡು ಪರೀಕ್ಷೆಯನ್ನು ಪೂರ್ಣಗೊಳಿಸಿದರು. ಗಣಿತ ಪರೀಕ್ಷೆಯ ನಂತರ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಎಕನಾಮಿಕ್ಸ್ ಪರೀಕ್ಷೆಯ ದಿನವೇ ತಾಯಿ ವಿಧಿವಶರಾದರು.
ತಾಯಿಯ ಅಗಲಿಕೆಯ ನೋವಿನ ನಡುವೆಯೂ ದಿಶಾ ಧೃತಿಗೆಡದೆ ಉಳಿದ ಎಲ್ಲಾ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ಫಲವಾಗಿ, ಆರು ವಿಷಯಗಳಲ್ಲೂ ತಲಾ 100 ಅಂಕಗಳನ್ನು ಪಡೆದು 600/600 ಅಂಕಗಳ ಅಪೂರ್ವ ಸಾಧನೆ ಮಾಡಿದ್ದಾರೆ. ವಿಶೇಷವಾಗಿ ಇಂಗ್ಲಿಷ್ ವಿಷಯದಲ್ಲಿ ಪೂರ್ಣ ಅಂಕ ಗಳಿಸುವುದು ಕಷ್ಟ ಎಂಬ ಭಯವಿದ್ದರೂ, ಅದನ್ನೂ ಮೀರಿ ಸಾಧನೆ ಮಾಡಿದ್ದಾರೆ.

ದಿಶಾ ಅವರ ಸಾಧನೆಯಲ್ಲಿ ಅವರ ತಂದೆಯ ಬೆಂಬಲ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಾಪಕರ ಮಾರ್ಗದರ್ಶನ ಪ್ರಮುಖ ಪಾತ್ರವಹಿಸಿದೆ. ಕಠಿಣ ಸಮಯದಲ್ಲಿ ಶಿಕ್ಷಕರು ನೀಡಿದ ಕೌನ್ಸೆಲಿಂಗ್ ಮತ್ತು ಪ್ರೋತ್ಸಾಹವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದ್ದಾರೆ.
ಭವಿಷ್ಯದಲ್ಲಿ ಚಾರ್ಟರ್ಡ್ ಅಕೌಂಟೆಂಟ್ (CA) ಆಗುವ ಕನಸಿನೊಂದಿಗೆ ದಿಶಾ ಮುಂದುವರೆಯುತ್ತಿದ್ದಾರೆ. ಮೇ ತಿಂಗಳಲ್ಲಿ ನಡೆಯಲಿರುವ ಸಿಎ ಫೌಂಡೇಶನ್ ಪರೀಕ್ಷೆಗೆ ಅವರು ಸಿದ್ಧತೆ ನಡೆಸುತ್ತಿದ್ದಾರೆ.
ದುಃಖದ ನಡುವೆ ಧೈರ್ಯ ಕಳೆದುಕೊಳ್ಳದೇ ಗುರಿ ಸಾಧಿಸಿದ ದಿಶಾ ಅವರ ಕಥೆ, ಯಾವುದೇ ಸವಾಲು ಬಂದರೂ ದೃಢಸಂಕಲ್ಪ ಇದ್ದರೆ ಯಶಸ್ಸು ಸಾಧಿಸಬಹುದು ಎಂಬುದಕ್ಕೆ ಜೀವಂತ ಉದಾಹರಣೆಯಾಗಿದೆ.
ಅಭಿನಂದನೆಗಳು ದಿಶಾ – ನಿಮ್ಮ ಭವಿಷ್ಯ ಉಜ್ವಲವಾಗಿರಲಿ!

-
crime4 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
