accident
ಅಜ್ಜ ಪುತ್ತಾಕನ ಕಣ್ಮುಂದೆಯೇ ವಿದ್ಯುತ್ ತಂತಿ ತಗುಲಿ ಮೊಮ್ಮಗ ದಾರುಣ ಸಾವು; ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಲಿಯಾಯಿತೇ ಎಳೆಯ ಜೀವ?
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/04/MESCOM-DEATH-1-1000x600.jpg&description=ಅಜ್ಜ ಪುತ್ತಾಕನ ಕಣ್ಮುಂದೆಯೇ ವಿದ್ಯುತ್ ತಂತಿ ತಗುಲಿ ಮೊಮ್ಮಗ ದಾರುಣ ಸಾವು; ಹೆದ್ದಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಲಿಯಾಯಿತೇ ಎಳೆಯ ಜೀವ?', 'pinterestShare', 'width=750,height=350'); return false;" title="Pin This Post">
ಬಂಟ್ವಾಳ: ತೆಂಗಿನಕಾಯಿ ಕೀಳಲೆಂದು ದೋಂಟಿ ಹಿಡಿದು ತೋಟಕ್ಕಿಳಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸುಟ್ಟು ಕರಕಲಾದ ಘೋರ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ನ ಬಾಡಿಗೆ ಮನೆಯಲ್ಲಿ ವಾಸವಿರುವ ಮಹಮ್ಮದ್ ಶರೀಫ್ ಅವರ ಪುತ್ರ, ಪುತ್ತೂರು ಮೌಂಟೇನ್ ವ್ಯೂ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹೀರ್ (15) ಮೃತಪಟ್ಟ ದುರ್ದೈವಿ. ಪರೀಕ್ಷೆ ಮುಗಿಸಿ ರಜೆಯಲ್ಲಿದ್ದ ಬಾಲಕ ಇಂದು ಬೆಳಿಗ್ಗೆ ತನ್ನ ಅಜ್ಜ ಪುತ್ತಾಕ (ಮಾಯಬ್ಬ) ಅವರ ಮನೆಗೆ ಬಂದಿದ್ದ ಸಂದರ್ಭ ಈ ದುರಂತ ನಡೆದಿದೆ.

ಘಟನೆಯ ವಿವರ:
ಅಜ್ಜ ಪುತ್ತಾಕ ಅವರು ತನ್ನ ಮನೆಯ ಮುಂಭಾಗದಲ್ಲಿರುವ ಬಂಟ್ವಾಳದ ಅಬ್ಬಾಸ್ ಎಂಬವರ ಜಮೀನಿನಲ್ಲಿ ತೆಂಗಿನಕಾಯಿ ಕೀಳಲು ಕೂಲಿಯಾಳನ್ನು ಕರೆತರುವಂತೆ ಮೊಮ್ಮಗ ಶಹೀರ್ಗೆ ತಿಳಿಸಿದ್ದರು. ಅಜ್ಜನ ಮಾತಿನಂತೆ ಕೂಲಿಯಾಳನ್ನು ಕರೆತಂದ ಶಹೀರ್, ಉತ್ಸಾಹದಿಂದ ತಾನೂ ಕಾಯಿ ಕೀಳಲು ನೆರವಾಗಲೆಂದು ನೆರೆಮನೆಯಿಂದ ವಿದ್ಯುತ್ ಪ್ರವಾಹಕ ದೋಂಟಿಯನ್ನು (Iron/Conducting Rod) ಹಿಡಿದುಕೊಂಡು ಜಮೀನಿಗೆ ಹೋಗಿದ್ದಾನೆ. ಕೂಲಿಯಾಳು ಮರ ಹತ್ತುತ್ತಿರುವಾಗಲೇ, ಶಹೀರ್ ಸಣ್ಣ ಮರವೊಂದರಿಂದ ಕಾಯಿ ಕೀಳಲು ದೋಂಟಿ ಎತ್ತಿದ್ದಾನೆ. ಈ ವೇಳೆ ಮರದ ತೀರಾ ಸಮೀಪದಲ್ಲೇ ಹಾದುಹೋಗಿದ್ದ ಹೈಟೆನ್ಷನ್ (HT) ವಿದ್ಯುತ್ ಲೈನ್ಗೆ ದೋಂಟಿ ಸ್ಪರ್ಶಿಸಿದೆ. ತಕ್ಷಣವೇ ತೀವ್ರಗತಿಯ ವಿದ್ಯುತ್ ಆಘಾತಕ್ಕೊಳಗಾದ ಬಾಲಕನ ದೇಹವು ದೋಂಟಿ ಹಿಡಿತದೊಂದಿಗೆ ಸ್ಥಳದಲ್ಲೇ ಸುಟ್ಟು ಕರಟಿಹೋಗಿದೆ.
ಸ್ಥಳೀಯ ಸಮಾಜ ಸೇವಕ ಇಕ್ಬಾಲ್ ಮತ್ತು ಇತರರು ಇತರರು ತಕ್ಷಣ ಧಾವಿಸಿ, ಮತ್ತಷ್ಟು ಕರಟುತ್ತಿದ್ದ ಮೃತದೇಹವನ್ನು ರಕ್ಷಿಸಿದ್ದಾರೆ. ಬಳಿಕ ಆಸ್ಪತ್ರೆಯ ಪ್ರಕ್ರಿಯೆಗಳನ್ನು ಮುಗಿಸಿ, ಗಡಿಯಾರಕ್ಕೆ ತಂದು ಸಾರ್ವಜನಿಕ ವೀಕ್ಷಣೆಯ ಬಳಿಕ ಮೃತದೇಹವನ್ನು ದಫನ ಸಂಸ್ಕಾರಕ್ಕಾಗಿ ಅವರ ತಂದೆಯ ಜಮಾತ್ ಇರುವ ಮೂಲ ನಿವಾಸವಾದ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆಗೆ ಕೊಂಡೊಯ್ಯಲಾಗಿದೆ.

ಇಲಾಖೆಗಳ ನಿರ್ಲಕ್ಷ್ಯಕ್ಕೆ ಆಕ್ರೋಶ:
ಈ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಮೆಸ್ಕಾಂ ಇಲಾಖೆಯ ಬೇಜವಾಬ್ದಾರಿಯೇ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೆದ್ದಾರಿ ಕಾಮಗಾರಿಯ ವೇಳೆ ತೆಗೆದ ಮಣ್ಣನ್ನು ಈ ಭಾಗದಲ್ಲಿ ಸುರಿಯಲಾಗಿತ್ತು. ಇದರಿಂದಾಗಿ ನೆಲದ ಮಟ್ಟ ಏರಿಕೆಯಾಗಿ, ಬಹಳ ಎತ್ತರದಲ್ಲಿದ್ದ ಅಪಾಯಕಾರಿ ಹೈಟೆನ್ಷನ್ ತಂತಿಗಳು (H T Line ) ಈಗ ತೀರಾ ಹತ್ತಿರಕ್ಕೆ ಬಂದಿವೆ. ಈ ಬಗ್ಗೆ ಅಪಾಯವನ್ನು ಅರಿತ ಸ್ಥಳೀಯರು ಅಪಾಯಕಾರಿ ಹೈಟೆನ್ಷನ್ ತಂತಿಗಳು ಹಾದುಹೋಗುವ ಕಂಬವನ್ನು ನಿಯಮಾನುಸಾರವಾಗಿ ಏರಿಸಬೇಕು ಅಂದರೆ ಎತ್ತರದ ಕಂಬವನ್ನು ಹಾಕಬೇಕು ಎಂದು ಅದೆಷ್ಟೋ ಬಾರಿ ಕೇಳಿ ಕೊಂಡಿದ್ದಾರೆ. ಹೆದ್ದಾರಿ ಏರಿಸಿರುವುದರಿಂದ ತಂತಿಗಳು ಕೆಳಗೆ ಬಂದಿವೆ, ಹೆದ್ದಾರಿ ಪ್ರಾಧಿಕಾರದವರು ಆ ಕೆಲಸವನ್ನು ಮಾಡಬೇಕು ಎಂದು ಕರೆಂಟ್ ಇಲಾಖೆಯವರು ಶಾಕ್ ನೀಡಿದರೆ ವಿದ್ಯುತ್ ಇಲಾಖೆಯ ಕಾರ್ಯ ನಿರ್ವಹಣೆ ನಮಗೆ ಬರುವುದಿಲ್ಲ ಎಂಬುವುದು ಹೆದ್ದಾರಿ ದೊಡ್ಡವರ ವಾದ . ಅಂತೂ ಇಂತೂ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಲಾಖೆಗಳ ಈ ‘ಕಣ್ಣುಮುಚ್ಚಾಲೆ’ ಆಟಕ್ಕೆ ಇಂದು ಅಮಾಯಕ ವಿದ್ಯಾರ್ಥಿ ಬಲಿಯಾಗಿದ್ದಾನೆ.
ಪುತ್ತಾಕ ಕುಟುಂಬಕ್ಕೆ ಆಘಾತದ ಮೇಲೆ ಆಘಾತ:
ಗಡಿಯಾರ ಪುತ್ತಾಕ ಅವರು ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳ ಸಂದರ್ಭದಲ್ಲಿ ಜೀವದ ಹಂಗು ತೊರೆದು ರಕ್ಷಣಾ ಕಾರ್ಯ ನಡೆಸುವ ಹೆಸರಾಂತ ಸಮಾಜ ಸೇವಕ. ಆದರೆ ವಿಧಿಯ ಆಟ ಮಾತ್ರ ಕ್ರೂರವಾಗಿದೆ. 13 ವರ್ಷಗಳ ಹಿಂದೆ ಪೇರಮೊಗರು ಎಂಬಲ್ಲಿ ನಡೆದ ಲಾರಿ ಅಪಘಾತದಲ್ಲಿ ಪುತ್ತಾಕ ಅವರು ತಮ್ಮ ಇಬ್ಬರು ಪುತ್ರರಾದ ಆಶಿಕ್ ಮತ್ತು ಶಫೀಕ್ ಅವರನ್ನು ಕಳೆದುಕೊಂಡಿದ್ದರು. ಅಂದು ಅಪಘಾತದ ಜಾಗದಿಂದ ಮಕ್ಕಳ ಶವವನ್ನು ಹೊರತೆಗೆದಿದ್ದ ಅಜ್ಜ, ಇಂದು ತನ್ನ ಕಣ್ಮುಂದೆಯೇ ತನ್ನ ಪ್ರೀತಿಯ ಮೊಮ್ಮಗ ವಿದ್ಯುತ್ ಆಘಾತಕ್ಕೆ ಬಲಿಯಾದುದನ್ನು ಕಂಡು ಕಂಗಾಲಾಗಿದ್ದಾರೆ. ಪತ್ನಿ ಕೂಡ ಕಳೆದ ಹಲವು ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಈ ಕುಟುಂಬಕ್ಕೆ ದುಃಖದ ಮೇಲೆ ದುಃಖ ಮಳೆಗರೆದಂತಾಗಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

accident
ಮಾಣಿ ಸಮೀಪ ನಿಯಂತ್ರಣ ತಪ್ಪಿ ಚರಂಡಿಗೆ ಜಿಗಿದ ಇನ್ನೋವಾ ಕಾರು;ತಪ್ಪಿದ ಭೀಕರ ಪ್ರಾಣಾಪಾಯ
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು (KA 19 Z 3466) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್ಪಾತ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಆಳವಾದ ಚರಂಡಿಯನ್ನು ಜಿಗಿದು, ಪಕ್ಕದಲ್ಲಿದ್ದ ಬಾಳೆ ಗಿಡಗಳ ಗುಂಟೆಗೆ ಬಡಿದು ನಿಂತಿದೆ.
ಅದೃಷ್ಟವಶಾತ್ ಬಚಾವ್
ಅಪಘಾತದ ಸಮಯದಲ್ಲಿ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ, ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ಯ ಕ್ರೇನ್ ಮುಖಾಂತರ ಕಾರನ್ನು ಮೇಲಕ್ಕೆತ್ತಿ ರಸ್ತೆಗೆ ತರುವ ಕಾರ್ಯಾಚರಣೆ ನಡೆಯುತ್ತಿದೆ.
ಒಂದೇ ದಿನ ಎರಡು ಅಪಘಾತ: ಸವಾರರಲ್ಲಿ ಆತಂಕ
ಇದೇ ರಾಷ್ಟ್ರೀಯ ಹೆದ್ದಾರಿಯ ಕೇವಲ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆಯಷ್ಟೇ ಮತ್ತೊಂದು ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಸ್ಥಳೀಯ ಹಾಗೂ ಹೆದ್ದಾರಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಮಾಣಿ ಪರಿಸರದಲ್ಲಿ ಹೆದ್ದಾರಿ ಸಂಚಾರದ ವೇಳೆ ಚಾಲಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.



accident
ಗಡಿಯಾರದಲ್ಲಿ ಭೀಕರ ಅಪಘಾತ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು; ನಾಲ್ವರಿಗೆ ಗಂಭೀರ ಗಾಯ, ಚಾಲಕ ದುರ್ಮರಣ
ಬಂಟ್ವಾಳ/ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ಮಧ್ಯದ ಗಡಿಯಾರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತವೊಂದು ಸಂಭವಿಸಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ಹಾಸನ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಹೆದ್ದಾರಿಯಲ್ಲಿ ಕೇಳಿಬಂದ ಭೀಕರ ಸದ್ದು: ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು (ನಂಬರ್: KA 12 N 6668) ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸದ್ದು ಕೇಳಿ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.

ಹಾಸನ ಮೂಲದ ಪ್ರಯಾಣಿಕರು: ಕಾರಿನಲ್ಲಿ ಹಾಸನ ಮೂಲದ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕಾರು ಚಾಲಕನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ. ಗಾಯಾಳುಗಳ ಸಂಪೂರ್ಣ ವಿವರ ಹಾಗೂ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.



accident
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿದ ಕಾರು; ಮೂವರಿಗೆ ಗಾಯ
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯ ಆಳವಾದ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
