INCIDENT
ಸಾರ್ವಜನಿಕ ರಸ್ತೆ ಒತ್ತುವರಿ ಆರೋಪ – ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ ವಿವಾದ
ಬಂಟ್ವಾಳ: ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಬಳಬೆಟ್ಟು ಎಂಬಲ್ಲಿ ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿ ಗೋಡೆ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರ ಈಗ ನ್ಯಾಯಾಲಯದ ಮೆಟ್ಟಿಲೇರಿದೆ.

ಘಟನೆಯ ಹಿನ್ನೆಲೆ:
ಕಂಬಳಬೆಟ್ಟು ಪ್ರದೇಶದ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅನಧಿಕೃತವಾಗಿ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ರಸ್ತೆಯು ಸಾರ್ವಜನಿಕ ಬಳಕೆಯಲ್ಲಿದ್ದು, ಇಲ್ಲಿ ನಿರ್ಮಾಣ ಕಾರ್ಯ ಮಾಡುವುದರಿಂದ ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತದೆ ಎಂಬುದು ಸ್ಥಳೀಯರ ದೂರು. ಈ ಸಂಬಂಧ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಈಗಾಗಲೇ ಲಿಖಿತ ದೂರನ್ನು ನೀಡಲಾಗಿದೆ.

ನ್ಯಾಯಾಲಯದಲ್ಲಿ ಕೇವಿಯಟ್ ಸಲ್ಲಿಕೆ:
ಈ ವಿವಾದಕ್ಕೆ ಸಂಬಂಧಿಸಿದಂತೆ ಮುಬೀನಾ ಬಾನು ಎಂಬುವವರು ಬಂಟ್ವಾಳದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಕೇವಿಯಟ್ (Caveat Petition) ಅರ್ಜಿಯನ್ನು ಸಲ್ಲಿಸಿದ್ದಾರೆ.
ಅರ್ಜಿದಾರರ ವಾದ: ತಾವು ವಿಟ್ಲ ಮುಡ್ನೂರು ಗ್ರಾಮದ ಸರ್ವೆ ನಂಬರ್ 15/3B ರಲ್ಲಿರುವ 0.10 ಎಕರೆ ಜಾಗ ಮತ್ತು ಅಲ್ಲಿರುವ ಮನೆಯ ಸ್ವಾಧೀನ ಹೊಂದಿದ್ದು, ಎದುರಾಳಿಗಳು ತಮ್ಮ ವಿರುದ್ಧ ಏಕಪಕ್ಷೀಯವಾಗಿ ತಡೆಯಾಜ್ಞೆ (Stay Order) ತರುವ ಸಾಧ್ಯತೆ ಇರುವುದರಿಂದ, ತಮ್ಮ ವಾದವನ್ನು ಆಲಿಸದೆ ಯಾವುದೇ ಆದೇಶ ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಪೊಲೀಸರ ಭೇಟಿ:
ರಸ್ತೆ ವಿವಾದ ಮತ್ತು ಗೋಡೆ ನಿರ್ಮಾಣದ ವಿಚಾರವಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣವು ಕಾನೂನಾತ್ಮಕ ಹೋರಾಟದ ಹಂತದಲ್ಲಿದ್ದು, ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.


accident
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ
ವಾಷಿಂಗ್ಟನ್: ಪತ್ರಕರ್ತರಿಗಾಗಿ ಆಯೋಜಿಸಿದ್ದ ಜನಪ್ರತಿನಿಧಿಗಳ ಔತಣಕೂಟದಲ್ಲಿ ದುಷ್ಕರ್ಮಿಯೊಬ್ಬ ಎಂಟು ಸುತ್ತು ಗುಂಡಿನ ದಾಳಿ ನಡೆಸಿದ್ದು, ಡೊನಾಲ್ಡ್ ಟ್ರಂಪ್ ಟೇಬಲ್ ಅಡಿಗೆ ತೂರಿ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎಂದು ಶ್ವೇತಭವನದ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವಿವರ: ಕ್ಯಾಲಿಫೋರ್ನಿಯಾ ಮೂಲದ 30 ವರ್ಷದ ಯುವಕ ಔತಣಕೂಟಕ್ಕೆ ನುಗ್ಗಿ ಟ್ರಂಪ್ ಗುರಿಯಾಗಿಸಿ 8 ಸುತ್ತು ಗುಂಡು ಹಾರಿಸಿದ್ದಾನೆ. ತಕ್ಷಣ ಎಚ್ಚೆತ್ತ ಟ್ರಂಪ್ ಟೇಬಲ್ ಅಡಿ ತೂರಿ ಅಪಾಯದಿಂದ ಪಾರಾಗಿದ್ದಾರೆ. ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬಂದೂಕುಧಾರಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವ ಭದ್ರತಾ ಸಿಬ್ಬಂದಿಗೆ ಗಾಯವಾಗಿದೆ.
ಬಂಧಿತನ ಬಗ್ಗೆ: ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಂಧಿತ ಯುವಕ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.
ಟ್ರಂಪ್ ಪ್ರತಿಕ್ರಿಯೆ: ಬಂಧನದ ಬಳಿಕ ಪ್ರತಿಕ್ರಿಯಿಸಿದ ಟ್ರಂಪ್, “ಇದು ನನ್ನ ಮೇಲಿನ ಮೊದಲ ದಾಳಿಯಲ್ಲ. ಟ್ರಂಪ್ ಗುರಿಯಾಗಿಸಿ ನಡೆದ ಎರಡನೇ ದಾಳಿ ಇದು. ಆದರೆ ನಾನು ಪ್ರಾಣಕ್ಕೆ ಅಂಜುವವನಲ್ಲ” ಎಂದು ಖಾರವಾಗಿ ಹೇಳಿದ್ದಾರೆ.
2024ರ ಜುಲೈ 13ರಂದು ಬಟ್ಲರ್ ರ್ಯಾಲಿಯಲ್ಲಿ ಟ್ರಂಪ್ ಮೇಲೆ ನಡೆದಿದ್ದ ಹತ್ಯೆ ಯತ್ನದ ಬಳಿಕ ಇದು ಎರಡನೇ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ

crime
ಸುಳ್ಯದ ಮೆಸ್ಕಾಂ ಅಧಿಕಾರಿ ಟೈಂಯ… ! ಕಂಠಪೂರ್ತಿ ಕುಡಿದು ಮೆಟ್ಟಿಲಲ್ಲಿ ಹೊರಳಾಡಿದ ಮೆಸ್ಕಾಂ ಹಿರಿಯ ಅಧಿಕಾರಿ – ಸಾರ್ವಜನಿಕರ ಆಕ್ರೋಶ
ಸುಳ್ಯ: ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಶ್ರೀರಾಮ ಪೇಟೆಯ ಕಟ್ಟಡದ ಮೆಟ್ಟಿಲಲ್ಲಿ ಹೊರಳಾಡಿದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಡೆದದ್ದೇನು? : ಮಟಮಟ ಮಧ್ಯಾಹ್ನದಲ್ಲೇ ಮೆಸ್ಕಾಂ ಅಧಿಕಾರಿ ಮದ್ಯದ ನಶೆಯಲ್ಲಿ ಮೇಲೇಳಲಾರದೆ ಮೆಟ್ಟಿಲಲ್ಲಿ ಹೊರಳಾಡುತ್ತಿದ್ದರು. ವಿಷಯ ತಿಳಿದು ಸ್ಥಳದಲ್ಲಿ ಜನ ಜಮಾಯಿಸಿದ್ದರು.
ಮಾಹಿತಿ ತಿಳಿದ ಮೆಸ್ಕಾಂ ಸಿಬ್ಬಂದಿ ಇಲಾಖೆಗೆ ಮುಜುಗರವಾಗುವುದನ್ನು ಅರಿತು ತಕ್ಷಣ ಸ್ಥಳಕ್ಕೆ ಧಾವಿಸಿ, ಇಲಾಖಾ ವಾಹನದಲ್ಲಿ ಕುಡುಕ ಅಧಿಕಾರಿಯನ್ನು ತುಂಬಿಸಿಕೊಂಡು ಕರೆದೊಯ್ದಿದ್ದಾರೆ.

ಸಾರ್ವಜನಿಕರ ಒತ್ತಾಯ: ಕರ್ತವ್ಯದ ವೇಳೆಯಲ್ಲೇ ಮದ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಹೊರಳಾಡಿ ಇಲಾಖೆಯ ಮಾನ ಹರಾಜು ಹಾಕಿದ ಅಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸೇವೆಯಿಂದ ಅಮಾನತು ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೆಸ್ಕಾಂ ಮೇಲಾಧಿಕಾರಿಗಳು ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

INCIDENT
ಪುಚ್ಚೆಮೊಗರು: ದೈವದ ಭಂಡಾರ ಮೆರವಣಿಗೆ ವೇಳೆ ಕಾಲುಸಂಕ ಕುಸಿತ – 8 ಮಂದಿಗೆ ಗಂಭೀರ ಗಾಯ
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಪುಚ್ಚೆಮೊಗರು: ಮೂಡಬಿದಿರೆ ತಾಕೋಡೆ ಬರ್ಕೆ ಧರ್ಮನೇಮೋತ್ಸವದ ಅಂಗವಾಗಿ ನಡೆಯುತ್ತಿದ್ದ ದೈವದ ಭಂಡಾರ ಮೆರವಣಿಗೆ ವೇಳೆ ಭಾರೀ ಅವಘಡ ಸಂಭವಿಸಿದೆ. ಪುಚ್ಚೆಮೊಗರು ಗ್ರಾಮದ ಬಾವದಬೈಲಿನಲ್ಲಿ ಕಾಲುಸಂಕ ಏಕಾಏಕಿ ಮುರಿದು ಬಿದ್ದು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ವಿವರ:
ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತುಕೊಂಡು ಕೊಂಬು, ಬ್ಯಾಂಡ್ ವಾದ್ಯಗಳ ಜೊತೆ ಭಕ್ತರು ಮೆರವಣಿಗೆಯಲ್ಲಿ ಸಾಗುತ್ತಿದ್ದರು. ಬಾವದಬೈಲು ಎಂಬಲ್ಲಿ ಸಣ್ಣ ಕಾಲುಸಂಕ ದಾಟುವಾಗ ಸಂಕ ಮುರಿದುಬಿದ್ದಿದೆ. ಪರಿಣಾಮ ಭಂಡಾರ ಹೊತ್ತ ಪಲ್ಲಕ್ಕಿ ಸಮೇತ ಭಕ್ತರು ಕೆಳಗೆ ಬಿದ್ದಿದ್ದಾರೆ.

ಸಂಕದ ಭಾರೀ ಗಾತ್ರದ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆಯೇ ಬಿದ್ದ ಪರಿಣಾಮ ಗಾಯದ ತೀವ್ರತೆ ಹೆಚ್ಚಾಗಿದೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ ಮಾರೂರು ಮತ್ತು ಲೋಕೇಶ್ ಭಂಡಾರಿ ಸೇರಿದ್ದಾರೆ.

ಮೊಗಮೂರ್ತಿಗಳಿಗೆ ಹಾನಿ: ದುರ್ಘಟನೆಯಲ್ಲಿ ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿಗಳು ಹಾಗೂ ಪವಿತ್ರ ಧಾರ್ಮಿಕ ಪರಿಕರಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.
ಘಟನೆಯ ಆತಂಕಕಾರಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಕ್ತ ವಲಯದಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

-
crime4 weeks agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime3 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala4 weeks agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala4 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada4 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala4 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala2 months agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
