Problems
ಕುಸಿಯುವ ಹಂತದಲ್ಲಿದೆ ಮೈರ ಅಂಗನವಾಡಿ – ಪುಟಾಣಿಗಳ ಜೀವದ ಜೊತೆ ಅಧಿಕಾರಿಗಳ ಚೆಲ್ಲಾಟ!
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/05/9999999-1000x600.jpg&description=ಕುಸಿಯುವ ಹಂತದಲ್ಲಿದೆ ಮೈರ ಅಂಗನವಾಡಿ – ಪುಟಾಣಿಗಳ ಜೀವದ ಜೊತೆ ಅಧಿಕಾರಿಗಳ ಚೆಲ್ಲಾಟ!', 'pinterestShare', 'width=750,height=350'); return false;" title="Pin This Post">
ಬಂಟ್ವಾಳ: ಪುಟ್ಟ ಮಕ್ಕಳ ಭವಿಷ್ಯ ರೂಪಿಸಬೇಕಾದ ಅಂಗನವಾಡಿ ಕೇಂದ್ರವೊಂದು ಇಂದು ಅಪಾಯದ ಮನೆಯಂತಾಗಿದೆ. ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರವು ಕಳೆದ ಹತ್ತು ತಿಂಗಳಿಂದ ಕುಸಿಯುವ ಹಂತದಲ್ಲಿದ್ದರೂ, ಸಂಬಂಧಪಟ್ಟ ಶಿಶು ಅಭಿವೃದ್ಧಿ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಮಾತ್ರ ಕುಂಭಕರ್ಣ ನಿದ್ದೆಗೆ ಜಾರಿದ್ದಾರೆ.
ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರದ ಮೇಲ್ಚಾವಣಿ ಕುಸಿಯುವ ಹಂತದಲ್ಲಿದ್ದರೂ ಶಿಶು ಅಭಿವೃದ್ಧಿ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಹತ್ತು ತಿಂಗಳಿಂದ ಸೂರ್ಯದರ್ಶನ ನೀಡುವ ಮೇಲ್ಚಾವಣಿ!
ಕಳೆದ 10 ತಿಂಗಳಿನಿಂದ ಈ ಅಂಗನವಾಡಿಯ ಮೇಲ್ಚಾವಣಿಯ ಹೆಂಚುಗಳು ಉದುರಿ ಬೀಳುತ್ತಿವೆ. ಚಾವಣಿ ಸಂಪೂರ್ಣ ಹಾನಿಗೊಳಗಾಗಿದ್ದು, ಕೇಂದ್ರದ ಒಳಗೆ ನೇರವಾಗಿ ಬಿಸಿಲು ಬೀಳುತ್ತಿದೆ. ಮಳೆಗಾಲ ಹತ್ತಿರ ಬರುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ತಲೆ ಮೇಲೆ ಹೆಂಚು ಬೀಳುವ ಭೀತಿಯಲ್ಲೇ ಮಕ್ಕಳು ಪಾಠ ಕೇಳುವಂತಾಗಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಸ್ಥಳೀಯರು ಹಲವು ಬಾರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೂ ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ 10 ತಿಂಗಳು ಕಳೆದರೂ ದುರಸ್ತಿ ಕಾರ್ಯ ಆರಂಭವಾಗಿಲ್ಲ.

ತಾತ್ಕಾಲಿಕ ವ್ಯವಸ್ಥೆಯಿಂದಲೂ ಪ್ರಯೋಜನವಿಲ್ಲ:
ಕೇಂದ್ರದ ಅವ್ಯವಸ್ಥೆಯಿಂದಾಗಿ ಒಂದೆರಡು ತಿಂಗಳ ಕಾಲ ಸ್ಥಳೀಯ ಯುವಕ ಸಂಘದ ಕಾರ್ಯಾಲಯದಲ್ಲಿ ತಾತ್ಕಾಲಿಕವಾಗಿ ಅಂಗನವಾಡಿ ನಡೆಸಲಾಗಿತ್ತು. ಈಗ ಮತ್ತೆ ಕುಸಿಯುವ ಹಂತದಲ್ಲಿರುವ ಅದೇ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪೋಷಕರು-ಗ್ರಾಮಸ್ಥರ ಆಕ್ರೋಶ:
ಮೈರ ಅಂಗನವಾಡಿ ಕೇಂದ್ರದ ದುಸ್ಥಿತಿಯ ಬಗ್ಗೆ ಸ್ಪಂದಿಸದ ಕೇಪು ಗ್ರಾಮ ಪಂಚಾಯತ್ ಮತ್ತು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನ ವಿರುದ್ಧ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಪುಟಾಣಿಗಳ ಬದುಕಿನ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ. ಮಳೆಗಾಲ ಬಂದರೆ ಏನಾಗುತ್ತೋ ಗೊತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಮಾಡಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.
ಇನ್ನಾದರೂ ಜವಾಬ್ದಾರಿಯುತ ಅಧಿಕಾರಿಗಳು ಎಚ್ಚೆತ್ತುಕೊಂಡು, ಯಾವುದೇ ಅನಾಹುತ ಸಂಭವಿಸುವ ಮುನ್ನ ಮೈರ ಅಂಗನವಾಡಿಯ ಹಣೆಬರಹವನ್ನು ಬದಲಿಸುತ್ತಾರೋ ಎಂದು ಕಾದು ನೋಡಬೇಕಿದೆ.



Belthangady
ಬೆಳ್ತಂಗಡಿ: 50 ಲಕ್ಷದ ರಸ್ತೆ 9 ವರ್ಷಕ್ಕೆ ಗುಂಡಿಮಯ – ಕೈಕಂಬ–ಫಾರೆಸ್ಟ್ ಬಂಗಲೆ ರಸ್ತೆ ದುಸ್ಥಿತಿ
ಬೆಳ್ತಂಗಡಿ: 2017ರಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಂಡ ನಾವೂರು ಗ್ರಾಮದ ಕೈಕಂಬ ಜಂಕ್ಷನ್ನಿಂದ ಫಾರೆಸ್ಟ್ ಬಂಗಲೆಗೆ ಸಂಪರ್ಕಿಸುವ 1.40 ಕಿ.ಮೀ ರಸ್ತೆ ಇದೀಗ ಗುಂಡಿಯಿಂದ ಗುಂಡಿಯಾಗಿ ಸಂಪೂರ್ಣ ಹದಗೆಟ್ಟಿದೆ. “ಇಲ್ಲಿ ರಸ್ತೆಯಲ್ಲಿ ಗುಂಡಿ ಇದೆಯೋ, ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಅರ್ಥವಾಗದ ಸ್ಥಿತಿ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಬೆಳ್ತಂಗಡಿ ಮೂಲಕ 2017ರಲ್ಲಿ ನಿರ್ಮಾಣವಾದ ಈ 1 ಕಿ.ಮೀ ರಸ್ತೆ ಇದೀಗ ಇಂಚಿಂಚಿಗೂ ಗುಂಡಿಯಾಗಿದೆ. ಬೇಸಿಗೆಯಲ್ಲಿ ಗುಂಡಿ ಮುಚ್ಚಲು ಮಣ್ಣು ಹಾಕಲಾಗಿತ್ತು. ಆದರೆ ಮಳೆ ಆರಂಭವಾಗುತ್ತಿದ್ದಂತೆ ರಸ್ತೆ ಪೂರ್ತಿ ಕೆಸರುಮಯವಾಗಿ ಕಂಬಳ ಗದ್ದೆಯನ್ನು ನಾಚಿಸುವಂತಾಗಿದೆ.
ಜನರ ಸಂಕಷ್ಟ:
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿ ಸೇರಿದಂತೆ ಫಾರೆಸ್ಟ್ ಬಂಗಲೆ, ಕಣಾಲು, ಕಾರಿಂಜ, ಕುಂಡಡ್ಕ, ಸುಳ್ಳೊಡಿ ಮುಂತಾದ ಪ್ರದೇಶಗಳನ್ನು ಸಂಪರ್ಕಿಸುವ ಏಕೈಕ ಪ್ರಮುಖ ರಸ್ತೆ ಇದಾಗಿದೆ. ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ, ನೂರಾರು ಜನರು ಕೆಲಸಕ್ಕೆ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ. ಅಂಗನವಾಡಿ, ಕಿ.ಪ್ರಾ ಶಾಲೆ, ಹಾಲು ಉತ್ಪಾದಕರ ಸಂಘವೂ ಇದೆ.

ಗುಂಡಿ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ, ಆಟೋ, ಖಾಸಗಿ ವಾಹನಗಳು ಅಡ್ಡಾದಿಡ್ಡಿ ಚಲಿಸುತ್ತಿದ್ದು, ಅಪಘಾತಗಳೂ ಸಂಭವಿಸಿವೆ. ಆದರೂ ರಸ್ತೆ ದುರಸ್ತಿ ಆಗದಿರುವುದು ದುರಂತ ಎಂದು ಸ್ಥಳೀಯರು ಬೇಸರಿಸಿದ್ದಾರೆ.
ಒತ್ತಾಯ:
“ಕೈಕಂಬದಿಂದ ಮೂರು ಮಾರ್ಗದವರೆಗಿನ ರಸ್ತೆ ಜನ, ವಾಹನ ಸಂಚರಿಸಲು ಅಯೋಗ್ಯವಾಗಿದೆ. ದಿತ್ಯೋಪಯೋಗಿ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆಯೂ ಅಗತ್ಯ” ಎಂದು ಆಟೋ ರಿಕ್ಷಾ ಚಾಲಕ-ಮಾಲೀಕರಾದ ದಿನೇಶ್ ಗೌಡ ಆಗ್ರಹಿಸಿದ್ದಾರೆ.



accident
ಮಂಗಳೂರು: ಕುಂಟಿಕಾನ್-ಕೊಟ್ಟಾರ ಸರ್ವಿಸ್ ರಸ್ತೆಯ ಚರಂಡಿ ಸ್ಲ್ಯಾಬ್ ಕುಸಿತ; ವಾಹನ ಸವಾರರ ಜೀವಕ್ಕೆ ಸಂಚಕಾರ!
ಮಂಗಳೂರು: ನಗರದ ಕುಂಟಿಕಾನ್ ಜಂಕ್ಷನ್ನಿಂದ ಕೊಟ್ಟಾರ ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಮಧ್ಯೆ ಸಾರ್ವಜನಿಕರ ಜೀವಕ್ಕೆ ಆಪತ್ತು ತಂದೊಡ್ಡುವ ಘಟನೆಯೊಂದು ನಡೆದಿದೆ. ಇಲ್ಲಿನ ನೀರು ಹರಿದು ಹೋಗುವ ಚರಂಡಿ ಮೇಲೆ ಹಾಕಲಾಗಿದ್ದ ಸಿಮೆಂಟ್ ಸ್ಲ್ಯಾಬ್ಗಳು ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ.

ಮಧ್ಯಾಹ್ನದ ವೇಳೆಗೆ ಸಂಪೂರ್ಣ ಕುಸಿತ:
ಕುಂಟಿಕಾನ್ ಡಿ-ಮಾರ್ಟ್ ಹಾಗೂ ಬಿ.ಎಂ.ಎಸ್ ಹೋಟೆಲ್ ಮುಂಭಾಗದ ಸರ್ವಿಸ್ ರಸ್ತೆಯ ಅಂಡರ್ಪಾಸ್ ತಿರುವಿನಲ್ಲೇ ಈ ಅಪಾಯಕಾರಿ ಕಂದಕ ಸೃಷ್ಟಿಯಾಗಿದೆ. ಇಂದು (ಮೇ 29) ಮುಂಜಾನೆ ಸ್ವಲ್ಪ ಪ್ರಮಾಣದಲ್ಲಿ ಕುಸಿದಿದ್ದ ಈ ಸ್ಲ್ಯಾಬ್, ಮಧ್ಯಾಹ್ನದ ವೇಳೆಗೆ ವಾಹನಗಳ ಸಂಚಾರದ ಒತ್ತಡಕ್ಕೆ ಸಿಲುಕಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಪರಿಣಾಮ ರಸ್ತೆಯ ಮಧ್ಯದಲ್ಲೇ ದೊಡ್ಡದೊಂದು ಕಂದಕ ನಿರ್ಮಾಣವಾಗಿದೆ.

ಸ್ಥಳೀಯರಿಂದ ಹಳೆ ಟೈರ್ ಇಟ್ಟು ಎಚ್ಚರಿಕೆ:
ಯಾವುದೇ ಕ್ಷಣದಲ್ಲೂ ದ್ವಿಚಕ್ರ ವಾಹನಗಳು ಅಥವಾ ಇತರ ವಾಹನಗಳು ಈ ಕಂದಕಕ್ಕೆ ಬಿದ್ದು ಭೀಕರ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಸದ್ಯಕ್ಕೆ ಸವಾರರ ಗಮನಕ್ಕೆ ಬರಲೆಂದು ಸ್ಥಳೀಯರೇ ಕಂದಕದ ಮೇಲೆ ಹಳೇ ಟೈರ್ ಒಂದನ್ನು ಇಟ್ಟು ತಾತ್ಕಾಲಿಕ ಎಚ್ಚರಿಕೆ ಫಲಕದಂತೆ ರೂಪಿಸಿದ್ದಾರೆ. ಆದರೂ ರಾತ್ರಿ ವೇಳೆಯಲ್ಲಿ ಅಥವಾ ಅತಿ ವೇಗವಾಗಿ ಬರುವ ವಾಹನಗಳಿಗೆ ಇದು ಕಾಣಿಸದೆ ದೊಡ್ಡ ಅನಾಹುತ ಸಂಭವಿಸುವ ಭೀತಿ ದಟ್ಟವಾಗಿದೆ.

ಸಂಬಂಧಪಟ್ಟ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ:
ಕುಂಟಿಕಾನ್ ಮತ್ತು ಕೊಟ್ಟಾರ ಭಾಗವು ಅತ್ಯಂತ ಬ್ಯುಸಿ ರಸ್ತೆಯಾಗಿದ್ದು, ನಿರಂತರವಾಗಿ ನೂರಾರು ವಾಹನಗಳು ಇಲ್ಲಿ ಸಂಚರಿಸುತ್ತವೆ. ರಸ್ತೆ ಇಷ್ಟೊಂದು ಅಪಾಯಕಾರಿಯಾಗಿದ್ದರೂ ಸಂಬಂಧಪಟ್ಟ ಇಲಾಖೆಯಾಗಲಿ ಅಥವಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾಗಲಿ ಇತ್ತ ತಲೆಹಾಕದಿರುವುದು ಸ್ಥಳೀಯರ ಹಾಗೂ ವಾಹನ ಸವಾರರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
“ಯಾವುದೋ ದೊಡ್ಡ ಜೀವಹಾನಿ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸ್ಲ್ಯಾಬ್ಗಳನ್ನು ದುರಸ್ತಿಗೊಳಿಸಬೇಕು. ವಾಹನ ಸವಾರರ ಜೀವ ರಕ್ಷಿಸಬೇಕು” ಎಂದು ಸ್ಥಳೀಯರು ಮತ್ತು ಸಾಮಾಜಿಕ ಕಾರ್ಯಕರ್ತರು ಬಲವಾಗಿ ಆಗ್ರಹಿಸಿದ್ದಾರೆ.
ಮಾಹಿತಿ ನೀಡಿದವರು : ಸತೀಶ್ ಕಾಪಿಕಾಡು, ಹಿರಿಯ ವರದಿಗಾರರು



Mangaluru
ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮುಂದೆ ಡ್ರೈನೇಜ್ ಕೊಳಚೆ ನೀರಿನ “ಈಜುಕೊಳ” – ಸ್ಮಾರ್ಟ್ ಸಿಟಿ ಹೊಗಳಿಕೆಗೆ ಜನರ ಹಿಡಿಶಾಪ
ಮಂಗಳೂರು: ಮಂಗಳೂರನ್ನು ಸ್ಮಾರ್ಟ್ ಸಿಟಿ ಮಾಡುವ ಹೆಸರಿನಲ್ಲಿ ಕೋಟಿ ಕೋಟಿ ಖರ್ಚು ಮಾಡುತ್ತಿರುವ ಆಡಳಿತ ವ್ಯವಸ್ಥೆಗೆ, ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮುಂದಿನ ರಾಜ್ಯ ಹೆದ್ದಾರಿ ಬದಿಯ ಅವ್ಯವಸ್ಥೆ ಕಣ್ಣಿಗೆ ಕಾಣುತ್ತಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರ ಬಾಯಲ್ಲಿ ಕೇಳಿಬರುತ್ತಿದೆ.
ಆಸ್ಪತ್ರೆಯ ಪಕ್ಕದಲ್ಲೇ ಡ್ರೈನೇಜ್ ಕೊಳಚೆ ನೀರು ಶೇಖರಣೆಯಾಗಿ ದೊಡ್ಡ ಈಜುಕೊಳದಂತಾಗಿದೆ. ನೊರೆ, ಕಸ, ದುರ್ವಾಸನೆ ಹೊರಸೂಸುವ ಈ ನೀರಿನಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗುತ್ತಿದ್ದು, ರೋಗ ಹರಡುವ ಆತಂಕವೂ ಹೆಚ್ಚಾಗಿದೆ.

ರೋಗಿಗಳೇ ಮೂಗು ಮುಚ್ಚಿ ಸಂಚರಿಸುವ ಪರಿಸ್ಥಿತಿ
ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು, ಆಸ್ಪತ್ರೆ ಮುಂಭಾಗದ ವಾಣಿಜ್ಯ ಸಂಕೀರ್ಣಗಳಲ್ಲಿನ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ದಿನನಿತ್ಯ ಮೂಗು ಮುಚ್ಚಿ ಬದುಕುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಚಿಕಿತ್ಸೆಗಾಗಿ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಆಸ್ಪತ್ರೆ ಮುಂದೆಯೇ ಈ ಕೊಳಚೆ ನೀರಿನ ದುರ್ವಾಸನೆಯನ್ನು ಸಹಿಸಿಕೊಂಡು ನಡೆದಾಡುವ ದುಃಸ್ಥಿತಿ ಇದೆ.
“ಆಸ್ಪತ್ರೆ ಎಂದರೆ ಸ್ವಚ್ಛತೆ, ಆರೋಗ್ಯದ ಪ್ರತೀಕ. ಆದರೆ ಇಲ್ಲಿಯೇ ಡ್ರೈನೇಜ್ ನೀರು ನಿಂತು ಈಜುಕೊಳವಾಗಿದ್ದರೆ ರೋಗ ಗುಣವಾಗೋದಾ, ಇಲ್ಲಾ ಹೊಸ ರೋಗ ತಗುಲುತ್ತಾ?” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸ್ಮಾರ್ಟ್ ಸಿಟಿಗೆ ವ್ಯಂಗ್ಯ
ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆ, ಡ್ರೈನೇಜ್ ಸುಧಾರಣೆ ಆಗುತ್ತದೆ ಎಂದು ಭರವಸೆ ಕೊಟ್ಟಿದ್ದರು. ಆದರೆ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮುಂದೆಯೇ ಇಂಥ ನರಕಯಾತನೆ ಇದ್ದರೆ, ಸ್ಮಾರ್ಟ್ ಸಿಟಿ ಎಂಬುದು ಕೇವಲ ಕಾಗದ ಮೇಲಷ್ಟೇ ಎಂಬುದು ಸಾಬೀತಾಗಿದೆ ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ.
ತಕ್ಷಣ ಡ್ರೈನೇಜ್ ನೀರು ಹರಿದು ಹೋಗಲು ಕ್ರಮ ಕೈಗೊಂಡು, ಶುಚಿಗೊಳಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
