award
ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

ಬೆಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭವನ್ನು 2026 ಮೇ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿತ್ತು. ಕಾರ್ಯಕ್ರಮವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ದೀಪ ಬೆಳಗಿ ಉದ್ಘಾಟಿಸಿದರು.

ಸಮಾರಂಭದಲ್ಲಿ ತುಳು ರಂಗಭೂಮಿ ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ ಬಯ್ಯಮಲ್ಲಿಗೆ ಖ್ಯಾತಿಯ ಹಿರಿಯ ನಾಟಕಕಾರ ಡಾ.ಸಂಜೀವ ದಂಡಕೇರಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಂಡಕೇರಿಯವರ ಪತ್ನಿ ಶ್ರೀಮತಿ ಜಲಜಾಕ್ಷಿ ದಂಡಕೇರಿ ಮತ್ತು ಕುಟುಂಬ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡರು.

ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಹೆಚ್.ಎಲ್.ಎನ್. ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಶಿ, ಖ್ಯಾತ ವಿದ್ವಾಂಸ, ವಿದ್ಯಾ ವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿದ್ದರು. ಸ್ವಾಗತ ಸಮಿತಿಯ ಡಾ. ಕೆ.ಎನ್ ಅಡಿಗ ಅಡೂರು, ಗುರುರಾಜ್, ಡಾ. ಬಸವರಾಜು, ಎಚ್.ಎಸ್. ಹನುಮಂತ ರಾವ್, ಸುಮಾ, ವಿ.ನಾಗೇಂದ್ರ, ಸಂಸ್ಥೆಯ ಮಂಗಳೂರು ಪ್ರತಿನಿಧಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಆರ್ಯಭಟ ನೃತ್ಯೋತ್ಸವದೊಂದಿಗೆ ಜರಗಿದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯ,ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 72ಮಂದಿ ಹಿರಿಯ ಸಾಧಕರಿಗೆ 2025 – 26 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ವಿತರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಎಲ್.ಯನ್.ರಾವ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯದರ್ಶಿ ಡಾ.ಬಸವರಾಜು ವಂದಿಸಿದರು. ಸಾರ್ಥವಳ್ಳಿ ನಾರಾಯಣಸ್ವಾಮಿ ಮತ್ತು ಆರ್.ವೆಂಕಟರಾಜು ಕಾರ್ಯಕ್ರಮ ನಿರೂಪಿಸಿದರು.



award
ಸಾಧಕ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ: ಮಂಗಳೂರು ಕಮಿಷನರೇಟ್ನಿಂದ ಪ್ರಶಂಸನಾ ಪತ್ರ, ನಗದು ಬಹುಮಾನ ವಿತರಣೆ
ಮಂಗಳೂರು: ಕಳೆದ ಆರು ತಿಂಗಳ ಅವಧಿಯಲ್ಲಿ ಅಪರಾಧ ಪತ್ತೆ, ಸೈಬರ್ ಕ್ರೈಂ, ಮಾದಕ ದ್ರವ್ಯ ನಿಗ್ರಹ (NDPS) ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಗಿದೆ.
ದಿನಾಂಕ 20-07-2026 ರಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾನ್ಯ ಪೊಲೀಸ್ ಆಯುಕ್ತರು ಕರ್ತವ್ಯದಕ್ಷತೆ ಮೆರೆದ ಸಿಬ್ಬಂದಿಗೆ ಈ ಗೌರವ ಸಮರ್ಪಿಸಿದರು.
ಪೊಲೀಸ್ ಇಲಾಖೆಯ ಪ್ರಮುಖ ಸಾಧನೆಗಳು:
ದೀರ್ಘಕಾಲದ ಪ್ರಕರಣಗಳು (LPC) ಹಾಗೂ ವಾರಂಟ್ ಬಂಧನ: ಕಳೆದ 6 ತಿಂಗಳಲ್ಲಿ ವರ್ಷಗಳಿಂದ ತಲೆಮರೆಸಿಕೊಂಡಿದ್ದ 24 ದೀರ್ಘಕಾಲದ ಬಾಕಿ ಪ್ರಕರಣಗಳ (LPC) ಆರೋಪಿಗಳನ್ನು ಹಾಗೂ ಎನ್.ಬಿ.ಡಬ್ಲ್ಯು. (NBW) ವಾರಂಟ್ ಹೊಂದಿದ್ದ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಲಾಗಿದೆ.
₹1.20 ಕೋಟಿ ಮೌಲ್ಯದ ಸೊತ್ತು ವಶ: 2026ನೇ ಸಾಲಿನಲ್ಲಿ ದಾಖಲಾದ ಕಳವು ಪ್ರಕರಣಗಳಲ್ಲಿ 88 ಪ್ರಕರಣಗಳನ್ನು ಭೇದಿಸಲಾಗಿದ್ದು, ಒಟ್ಟು ₹1,20,00,000 (1 ಕೋಟಿ 20 ಲಕ್ಷ) ಮೌಲ್ಯದ ಕಳವಾದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.
ಮಾದಕ ವಸ್ತು (Drugs) ಜಾಲದ ವಿರುದ್ಧ ಸಮರ:
ಮಾದಕ ವಸ್ತು ಮಾರಾಟ/ಸಾಗಾಟದ ವಿರುದ್ಧ 84 ಪ್ರಕರಣಗಳನ್ನು ದಾಖಲಿಸಿ, 142 ಪೆಡ್ಲರ್ಗಳನ್ನು ಬಂಧಿಸಲಾಗಿದೆ.
ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ 346 ಪ್ರಕರಣಗಳನ್ನು ದಾಖಲಿಸಿ, 443 ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ.
ಸೈಬರ್ ಅಪರಾಧ ತಡೆ ಹಾಗೂ ಅಂತರರಾಷ್ಟ್ರೀಯ ಜಾಲ ಭೇದ:
ನಗರದಲ್ಲಿ ನಿರಂತರವಾಗಿ ನಡೆಸಿದ ಅರಿವು ಕಾರ್ಯಕ್ರಮಗಳಿಂದ ಸೈಬರ್ ವಂಚನೆ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ. ‘1930’ ಸಹಾಯವಾಣಿ ಮೂಲಕ ತ್ವರಿತವಾಗಿ ಸ್ಪಂದಿಸಿ ಸಾರ್ವಜನಿಕರ ಹಣ ಮರುಪಡೆಯಲು ಶ್ರಮಿಸಿದ ಸಿಬ್ಬಂದಿಯನ್ನು ಈ ವೇಳೆ ಗೌರವಿಸಲಾಯಿತು.
ಪ್ರಮುಖ ಸಾಧನೆ: ನೇಪಾಳದಿಂದ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ‘ಇನ್ವೆಸ್ಟ್ಮೆಂಟ್ ಫ್ರಾಡ್’ (Investment Fraud) ಜಾಲವನ್ನು ಭೇದಿಸಿ, ದೇಶದ ವಿವಿಧ ರಾಜ್ಯಗಳಲ್ಲಿ ಸೈಬರ್ ಕ್ರೈಂ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಮಂಗಳೂರು ಪೊಲೀಸರು ಪ್ರಮುಖ ಪಾತ್ರ ವಹಿಸಿದ್ದಾರೆ.
ಸಾಮಾಜಿಕ ಜಾಲತಾಣ ನಿಗಾ ಮತ್ತು ಕಾನೂನು ಸುವ್ಯವಸ್ಥೆ:
ದ್ವೇಷ ಭಾಷಣಕ್ಕೆ ತಡೆ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ, ಅಪಪ್ರಚಾರ ಹಾಗೂ ದ್ವೇಷ ಭಾಷಣ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ನಗರದಲ್ಲಿ ಶಾಂತಿ ಕಾಯ್ದುಕೊಳ್ಳಲಾಗಿದೆ.
ನ್ಯಾಯಾಲಯದಲ್ಲಿ ಶಿಕ್ಷೆ ಹಾಗೂ ತುರ್ತು ಸೇವೆ: ತನಿಖೆಯನ್ನು ಗುಣಮಟ್ಟದ ರೀತಿಯಲ್ಲಿ ನಡೆಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ ಅಧಿಕಾರಿಗಳು, ಬಂದೋಬಸ್ತ್ ಕರ್ತವ್ಯ ಸಫಲಗೊಳಿಸಿದವರು ಹಾಗೂ ‘112’ ತುರ್ತು ಸಹಾಯವಾಣಿ ಮತ್ತು ನಿಸ್ತಂತು (Wireless) ವಿಭಾಗದಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿದ ಸಿಬ್ಬಂದಿಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು
award
ಆರೋಪಿಗಳ ಬೇಟೆಯಲ್ಲಿ ಸೈ: ವಿಟ್ಲ ಎಎಸ್ಐ ಜಯರಾಮ ಕೆ ಅವರಿಗೆ ರಾಜ್ಯ ಪೊಲೀಸ್ ಇಲಾಖೆಯ ಪ್ರತಿಷ್ಠಿತ ಪ್ರಶಸ್ತಿ
ವಿಟ್ಲ: 2025-26ನೇ ಸಾಲಿನ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿ’ಗೆ ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯ್ಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರ ಪೈಕಿ ವಿಟ್ಲ ಪೊಲೀಸ್ ಠಾಣೆಯ ಹೆಮ್ಮೆಯ ಸಹಾಯಕ ಉಪನಿರೀಕ್ಷಕ (ಎ.ಎಸ್.ಐ) ಜಯರಾಮ ಕೆ ಅವರು ಈ ಉನ್ನತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ದಕ್ಷತೆ ಹಾಗೂ ಜನಸ್ನೇಹಿ ಸೇವೆಗೆ ಸಿಕ್ಕ ಗೌರವ: ವಾರಂಟ್ ಹಾಗೂ ಎಲ್ಪಿಸಿ (LPC) ಪ್ರಕರಣಗಳಲ್ಲಿ ರಾಜ್ಯ ಮತ್ತು ಅಂತರಾಜ್ಯ ಮಟ್ಟದಲ್ಲಿ ತಲೆಮರೆಸಿಕೊಂಡಿದ್ದ ಹಲವು ಪ್ರಮುಖ ಆರೋಪಿಗಳನ್ನು ಅತ್ಯಂತ ಚಾಣಾಕ್ಷತನದಿಂದ ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಜಯರಾಮ ಕೆ ಅವರು ಯಶಸ್ವಿಯಾಗಿದ್ದಾರೆ. ತಮ್ಮ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ, ದಕ್ಷತೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಇವರ ಅಪ್ರತಿಮ ಸಾಧನೆಯನ್ನು ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆಯು ಈ ಅತ್ಯುನ್ನತ ಗೌರವವನ್ನು ನೀಡಿ ಸನ್ಮಾನಿಸಲಿದೆ.

ಹಲವು ಠಾಣೆಗಳಲ್ಲಿ ಸೇವೆ, ಮೂರು ಬಾರಿ ಎಸ್ಪಿ ಪ್ರಶಸ್ತಿ: ಜಯರಾಮ ಕೆ ಅವರು ಈ ಹಿಂದೆಯೂ ವಾರಂಟ್ ವಿಶೇಷ ತನಿಖೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರಿಂದ ಮೂರು ಬಾರಿ ವಿಶೇಷ ಪ್ರಶಂಸನಾ ಪತ್ರವನ್ನು ಪಡೆದುಕೊಂಡಿರುವುದು ಇವರ ಕರ್ತವ್ಯ ಪ್ರಜ್ಞೆಗೆ ಸಾಕ್ಷಿಯಾಗಿದೆ. ಇಲಾಖೆಯ ವಿವಿಧ ವಿಭಾಗಗಳಲ್ಲಿ ಅಪಾರ ಅನುಭವ ಹೊಂದಿರುವ ಇವರು ಈ ಹಿಂದೆ ಉಪ್ಪಿನಂಗಡಿ, ಮಂಗಳೂರು ಸಂಚಾರ ಪೊಲೀಸ್, ಅಬಕಾರಿ, ವಿಶೇಷದಳ, ಬಂಟ್ವಾಳ ಗ್ರಾಮಾಂತರ, ಪುತ್ತೂರು ಹಾಗೂ ಸುಳ್ಯ ಠಾಣೆಗಳಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೂಲತಃ ಕುಳಗ್ರಾಮದ ಇಡ್ಕಿದು ನಿವಾಸಿಯಾಗಿರುವ ಜಯರಾಮ ಕೆ ಅವರ ಈ ಸಾಧನೆಗೆ ಇಲಾಖೆಯ ಉನ್ನತಾಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ಮತ್ತು ಅಭಿನಂದನೆಗಳ ಸುರಿಮಳೆಯಾಗುತ್ತಿದೆ.



Article
ಪುತ್ತೂರು: ಅಪರೂಪದ ಶ್ವಾನ ಪ್ರೀತಿ; ನಾಪತ್ತೆಯಾದ ನೆಚ್ಚಿನ ನಾಯಿ ‘ಚಿನ್ನು’ ಹುಡುಕಿಕೊಟ್ಟವರಿಗೆ 50 ಸಾವಿರ ರೂ. ಚೆಕ್ ಹಸ್ತಾಂತರಿಸಿದ ಮಾಲೀಕ
ಪುತ್ತೂರು: ಮೂಕ ಪ್ರಾಣಿಗಳ ಮೇಲಿನ ಪ್ರೀತಿ ಮತ್ತು ಮಾನವೀಯತೆಗೆ ಸಾಕ್ಷಿಯಾಗುವಂತಹ ಅಪರೂಪದ ಹಾಗೂ ಆಶ್ಚರ್ಯಕರ ಘಟನೆಯೊಂದು ಪುತ್ತೂರು ತಾಲೂಕಿನ ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ. ತಾನು ಪ್ರಾಣಕ್ಕಿಂತ ಹೆಚ್ಚಾಗಿ ಸಾಕಿದ್ದ ವಿಶೇಷ ಶ್ವಾನವೊಂದು ನಾಪತ್ತೆಯಾದಾಗ, ಅದನ್ನು ಹುಡುಕಿಕೊಟ್ಟವರಿಗೆ ಮಾಲೀಕರು ಬರೋಬ್ಬರಿ 50,000 ರೂಪಾಯಿ ನಗದು ಬಹುಮಾನ ನೀಡುವ ಮೂಲಕ ತಮ್ಮ ಅನನ್ಯ ಶ್ವಾನ ಪ್ರೀತಿಯನ್ನು ಮೆರೆದಿದ್ದಾರೆ.
ಹಿನ್ನೆಲೆ: ಮನೆಯಲ್ಲೇ ಇವೆ 30 ನಾಯಿಗಳು! ಪೋಳ್ಯ ನಿವಾಸಿ ಗಣೇಶ್ ಕೇರ ಅವರು ಪ್ರಾಣಿ ಪ್ರೇಮಿಯಾಗಿದ್ದು, ತಮ್ಮ ಮನೆಯಲ್ಲಿ ಸುಮಾರು 30 ನಾಯಿಗಳನ್ನು ಅತ್ಯಂತ ಪ್ರೀತಿಯಿಂದ ಸಾಕಿ ಸಲಹುತ್ತಿದ್ದಾರೆ. ಇವರ ಸಾಕುಪ್ರಾಣಿಗಳ ಪೈಕಿ ‘ಚಿನ್ನು’ ಹೆಸರಿನ ದೇಶಿ ತಳಿಯ ನಾಯಿ ಅತ್ಯಂತ ವಿಶೇಷವಾಗಿತ್ತು. ಯಾಕಂದರೆ, ಈ ‘ಚಿನ್ನು’ ಫಿಟ್ಸ್ ಸಮಸ್ಯೆಯಿಂದಾಗಿ ತನ್ನ ಕಾಲಿನ ಸ್ವಾಧೀನವನ್ನು ಕಳೆದುಕೊಂಡಿತ್ತು. ಇಂತಹ ವಿಶೇಷ ಕಾಳಜಿ ಬೇಕಾಗಿದ್ದ ನಾಯಿ ಸುಮಾರು ಮೂರು ವಾರಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು.
ಕಂಗಾಲಾಗಿದ್ದ ಮಾಲೀಕ; ಎಲ್ಲೆಡೆ ಬ್ಯಾನರ್, ಜಾಹೀರಾತು: ಮನೆಯ ಸದಸ್ಯನಂತಿದ್ದ, ಅದೂ ಕಾಲಿನ ಸ್ವಾಧೀನ ಕಳೆದುಕೊಂಡಿದ್ದ ‘ಚಿನ್ನು’ ಕಾಣೆಯಾದಾಗ ಗಣೇಶ್ ಕೆರೆ ಅವರು ತೀವ್ರ ಕಂಗಾಲಾಗಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಅವರು ಸಾಮಾಜಿಕ ಜಾಲತಾಣಗಳು ಹಾಗೂ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ, ನಾಯಿಯ ಸುಳಿವು ನೀಡಿದವರಿಗೆ ಅಥವಾ ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಅಷ್ಟೇ ಅಲ್ಲದೆ, ನಗರದ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ಈ ಕುರಿತು ಬ್ಯಾನರ್ಗಳನ್ನು ಕೂಡ ಅಳವಡಿಸಿ ಹುಡುಕಾಟ ನಡೆಸಿದ್ದರು.
ಹುಡುಕಿಕೊಟ್ಟ ಪುರಂದರ್: ಮಾತು ಉಳಿಸಿಕೊಂಡ ಗಣೇಶ್ ಕೇರ: ಗಣೇಶ್ ಅವರ ನಿರಂತರ ಪ್ರಯತ್ನ ಮತ್ತು ಪ್ರಾಣಿ ಪ್ರೇಮಕ್ಕೆ ಕೊನೆಗೂ ಫಲ ಸಿಕ್ಕಿದೆ. ಪೋಳ್ಯ ಪರಿಸರದವರೇ ಆದ ಪುರಂದರ್ ಎಂಬುವವರು ನಾಪತ್ತೆಯಾಗಿದ್ದ ಚಿನ್ನು ನಾಯಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚಿ ಮಾಲೀಕರಿಗೆ ಒಪ್ಪಿಸಿದ್ದಾರೆ.
ತಮ್ಮ ನೆಚ್ಚಿನ ಶ್ವಾನ ಮರಳಿ ಸಿಕ್ಕಿದ ತಕ್ಷಣ ಗಣೇಶ್ ಕೇರ ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ. ಕೊಟ್ಟ ಮಾತಿನಂತೆ ತಕ್ಷಣವೇ ಅವರು ಪುರಂದರ್ ಅವರನ್ನು ತಮ್ಮ ಮನೆಗೆ ಕರೆಸಿ, ಎಲ್ಲರ ಸಮ್ಮುಖದಲ್ಲಿ 50,000 ರೂಪಾಯಿಗಳ ಚೆಕ್ ಅನ್ನು ವಿತರಿಸಿ ಕೃತಜ್ಞತೆ ಸಲ್ಲಿಸುವುದರೊಂದಿಗೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ಶ್ಲಾಘನೆ ವ್ಯಕ್ತಪಡಿಸಿದ ಸಾರ್ವಜನಿಕರು: ಪ್ರಸ್ತುತ ದಿನಗಳಲ್ಲಿ ಹಣಕ್ಕೋಸ್ಕರ ಪ್ರಾಣಿಗಳನ್ನು ಹಿಂಸಿಸುವ ಜನರ ಮಧ್ಯೆ, ಕಳೆದುಹೋದ ತನ್ನ ಸಾಕುಪ್ರಾಣಿಗಾಗಿ ಹಗಲಿರುಳು ಚಿಂತಿಸಿ, ಅದನ್ನು ಹುಡುಕಿಕೊಟ್ಟವರಿಗೆ ಇಷ್ಟೊಂದು ದೊಡ್ಡ ಮೊತ್ತದ ಬಹುಮಾನ ನೀಡಿದ ಮಾಲೀಕರ ಶ್ವಾನ ಪ್ರೀತಿ ಮತ್ತು ಪ್ರಾಮಾಣಿಕತೆಗೆ ಕರಾವಳಿಯಾದ್ಯಂತ ಸಾರ್ವಜನಿಕರು ಹಾಗೂ ಪ್ರಾಣಿ ಪ್ರೇಮಿಗಳು ಭಾರಿ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ಮೂಕ ಪ್ರಾಣಿಗಳ ಮತ್ತು ಮನುಷ್ಯನ ನಡುವಿನ ಅವಿನಾಭಾವ ಸಂಬಂಧಕ್ಕೆ ಹಿಡಿದ ಕೈಗನ್ನಡಿಯಾಗಿದೆ.



-
Bantawala3 weeks agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime6 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime4 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala4 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
accident2 weeks agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
Bantawala7 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Bantawala4 weeks agoಮಂಚಿ ಮೋಂತಿಮಾರು: ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ
