Bantawala
ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ದುರ್ಬಲೀಕರಣ: ಕೇಂದ್ರ ಸರಕಾರದ ವಿರುದ್ಧ ಬಂಟ್ವಾಳದಲ್ಲಿ ನಾಳೆ ಬೃಹತ್ ಪ್ರತಿಭಟನೆ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/05/congress-1-1000x600.jpg&description=ಪಂಚಾಯತ್ ರಾಜ್ ಸಂಸ್ಥೆಗಳ ಆರ್ಥಿಕ ದುರ್ಬಲೀಕರಣ: ಕೇಂದ್ರ ಸರಕಾರದ ವಿರುದ್ಧ ಬಂಟ್ವಾಳದಲ್ಲಿ ನಾಳೆ ಬೃಹತ್ ಪ್ರತಿಭಟನೆ', 'pinterestShare', 'width=750,height=350'); return false;" title="Pin This Post">
ಬಂಟ್ವಾಳ: ಕೇಂದ್ರ ಸರಕಾರವು ಪಂಚಾಯತ್ ರಾಜ್ ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತಿರುವ ನೀತಿ ಹಾಗೂ ವಿವಿಧ ಜನವಿರೋಧಿ ವೈಫಲ್ಯಗಳನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನಾಳೆ (ಮೇ 30) ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಹಕಾರದೊಂದಿಗೆ ಈ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.
ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಬಿ. ರಮನಾಥ ರೈ ಅವರ ಮಾರ್ಗದರ್ಶನದಲ್ಲಿ ದಿನಾಂಕ 30/05/2026ರ ಶನಿವಾರ ಬೆಳಿಗ್ಗೆ 10:30ಕ್ಕೆ ಬಂಟ್ವಾಳ ತಾಲೂಕು ಆಡಳಿತ ಕಛೇರಿ ಎದುರುಗಡೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರಮನಾಥ ರೈ ಅವರ ಆಕ್ರೋಶ ಮತ್ತು ಮನವಿ: ಪ್ರತಿಭಟನೆಯ ಕುರಿತು ವೀಡಿಯೊ ಸಂದೇಶ ನೀಡಿರುವ ಮಾಜಿ ಸಚಿವ ಬಿ. ರಮನಾಥ ರೈ ಅವರು, “ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಕನಸಿನ ಕಾರ್ಯಕ್ರಮವಾಗಿದ್ದ ಪಂಚಾಯತ್ ರಾಜ್ ವ್ಯವಸ್ಥೆಗೆ ನರಸಿಂಹರಾವ್ ಸರಕಾರದ ಅವಧಿಯಲ್ಲಿ 73 ಮತ್ತು 74ನೇ ತಿದ್ದುಪಡಿ ತರುವ ಮೂಲಕ ಹೆಚ್ಚಿನ ಶಕ್ತಿ ತುಂಬಲಾಗಿತ್ತು. ಗ್ರಾಮೀಣ ಭಾಗದ ರಸ್ತೆ, ಕುಡಿಯುವ ನೀರು, ಶಿಕ್ಷಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ನೇರವಾಗಿ ಪಂಚಾಯತ್ ರಾಜ್ ವ್ಯಾಪ್ತಿಗೆ ಬರುವಂತೆ ಮಾಡಲಾಗಿತ್ತು. ಎಸ್.ಎಂ. ಕೃಷ್ಣ ಅವರ ಸರಕಾರದ ಅವಧಿಯಲ್ಲೂ ಬೇಲೂರು ಘೋಷಣೆ ಮಾಡುವ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನೇಕ ಅಧಿಕಾರಗಳನ್ನು ನೀಡಲಾಗಿತ್ತು. ಆದರೆ ಇತ್ತೀಚಿನ ದಿವಸಗಳಲ್ಲಿ ಕೇಂದ್ರ ಸರಕಾರವು ಪಂಚಾಯತ್ ರಾಜ್ ವ್ಯವಸ್ಥೆಗೆ ಶಕ್ತಿ ಕೊಡುವ ಬದಲು ಅದನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಆಡಳಿತ ನೀತಿಯ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ನಾಳೆ ಶನಿವಾರ ಬೆಳಿಗ್ಗೆ 10:30ಕ್ಕೆ ಬಿಸಿ ರೋಡ್ನ ತಾಲೂಕು ಆಫೀಸ್ ಎದುರು ಪ್ರತಿಭಟನೆ ನಡೆಯಲಿದ್ದು, ಸಾರ್ವಜನಿಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅವರು ಮನವಿ ಮಾಡಿದ್ದಾರೆ.
ಪ್ರತಿಭಟನೆಯ ಪ್ರಮುಖ ಕಾರಣಗಳು: 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡದಿರುವುದು, ಉದ್ಯೋಗ ಖಾತರಿ ಯೋಜನೆಗೆ ಕಡಿವಾಣ ಹಾಕಿ ಗ್ರಾಮೀಣ ಜನರನ್ನು ಉದ್ಯೋಗ ವಂಚಿತರನ್ನಾಗಿಸಿರುವುದು, ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ನಿರಂತರ ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರಕಾರದ ವಿವಿಧ ವೈಫಲ್ಯಗಳನ್ನು ಖಂಡಿಸಿ ಈ ಹೋರಾಟ ರೂಪಿಸಲಾಗಿದೆ.
ಮುಖ್ಯ ಭಾಷಣಕಾರರು: ಈ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಖ್ಯಾತ ವಾಗ್ಮಿ ಹಾಗೂ ಕೆ.ಪಿ.ಸಿ.ಸಿ ವಕ್ತಾರ ಸುದೀರ್ ಕುಮಾರ್ ಮರೊಳ್ಳಿ ಭಾಗವಹಿಸಲಿದ್ದಾರೆ. ಕೇಂದ್ರ ಸರಕಾರದ ಆಡಳಿತ ವೈಫಲ್ಯಗಳು, ಸ್ಥಳೀಯ ಸಂಸ್ಥೆಗಳ ಹಕ್ಕುಗಳಿಗೆ ಆಗುತ್ತಿರುವ ಧಕ್ಕೆ ಹಾಗೂ ಗ್ರಾಮೀಣ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅವರು ಸಮಗ್ರವಾಗಿ ಮಾತನಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Bantawala
ಕಾಲುಸಂಕದ ತಡೆಗೋಡೆ ಕುಸಿದು ವರ್ಷ ಕಳೆದರೂ ಆಗದ ದುರಸ್ತಿ; ಸಂಪರ್ಕ ಕಡಿತಗೊಂಡು ಕೇಪುವಿನ 80ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಬಡ ಕುಟುಂಬಗಳ ಬದುಕು ದುಸ್ತರ!
ದೀವಟಿಗೆ ಡಿಜಿಟಲ್ ಮೀಡಿಯಾ ವಿಶೇಷ ವರದಿ
ಬಂಟ್ವಾಳ: ತಾಲೂಕಿನ ಕೇಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆ-ಮಣಿಯಾರಪಾದೆ ರಸ್ತೆಯ ಕಟ್ಟೆ ಎಂಬಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಕಾಲುಸಂಕದ ತಡೆಗೋಡೆ ಮತ್ತು ರಸ್ತೆ ಸಂಪೂರ್ಣವಾಗಿ ಕುಸಿದು ಬಿದ್ದು ವರ್ಷವೊಂದು ಕಳೆದರೂ, ಈವರೆಗೆ ಯಾವುದೇ ದುರಸ್ತಿ ಕಾಮಗಾರಿ ನಡೆಯದೆ ಇರುವುದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪರಿಣಾಮವಾಗಿ, ಈ ಭಾಗದ ಪರಿಶಿಷ್ಟ ಪಂಗಡದ (ST) ಕಾಲೋನಿಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಸಂಪೂರ್ಣ ಕಡಿತಗೊಂಡಿದ್ದು, ಸ್ಥಳೀಯ ಬಡ ಕುಟುಂಬಗಳ ದೈನಂದಿನ ಬದುಕೇ ಸ್ಥಗಿತಗೊಂಡಿದೆ.
ನಡೆಯಲೂ ಸಾಧ್ಯವಿಲ್ಲದ ಬರ್ಬರ ಸ್ಥಿತಿ: ವೃದ್ಧರು, ಗರ್ಭಿಣಿಯರ ಪರದಾಟ:
ಕಟ್ಟೆ ಭಾಗದಿಂದ ಕಾಲೋನಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ವಾಹನ ಸಂಚಾರ ಹಾಗಿರಲಿ, ಮಳೆಗಾಲದಲ್ಲಿ ಶಾಲಾ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಹಾಗೂ ಗರ್ಭಿಣಿಯರು ನಡೆದುಕೊಂಡು ಹೋಗುವುದೂ ಈಗ ಸಾವು-ಬದುಕಿನ ಹೋರಾಟದಂತಾಗಿದೆ. ಸುಮಾರು 80ಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಬಡ ಕುಟುಂಬಗಳು ತಮ್ಮ ದೈನಂದಿನ ಜೀವನೋಪಾಯಕ್ಕಾಗಿ, ರೇಷನ್, ಆಸ್ಪತ್ರೆ ಹಾಗೂ ಉದ್ಯೋಗಕ್ಕಾಗಿ ಇದೇ ಏಕೈಕ ರಸ್ತೆಯನ್ನು ಅವಲಂಬಿಸಿದ್ದು, ಸಂಕದ ತಡೆಗೋಡೆ ಕುಸಿದ ಬಳಿಕ ಇವರಿಗೆ ಆತಂಕ ಎದುರಾಗಿದೆ.

ಅಧಿಕಾರಿಗಳ ಭೇಟಿ ಬರೀ ಪ್ರದರ್ಶನವೇ? ವರ್ಷ ಕಳೆದರೂ ಮೌನ!
ಕಳೆದ ಮಳೆಗಾಲದಲ್ಲಿ ಭೀಕರ ಮಳೆಹಾನಿ ಸಂಭವಿಸಿದ ಸಂದರ್ಭದಲ್ಲಿ ಕಂದಾಯ, ಮಳೆಹಾನಿ ವಿಭಾಗ ಹಾಗೂ ಇತರೆ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗೃತ ಪರಿಶೀಲನೆ ನಡೆಸಿದ್ದರು. ತದನಂತರ ಇಂಜಿನಿಯರ್ ಸ್ಥಳ ಪರಿಶೀಲಿಸಿ, ವೈಜ್ಞಾನಿಕವಾಗಿ ತಡೆಗೋಡೆ ಹಾಗೂ ರಸ್ತೆ ಪುನರ್ ನಿರ್ಮಾಣಕ್ಕಾಗಿ ಸುಮಾರು 15 ಲಕ್ಷ ರೂಪಾಯಿಗಳ ಬೃಹತ್ ಅಂದಾಜು ಪಟ್ಟಿಯನ್ನು (Estimation) ಸಿದ್ಧಪಡಿಸಿದ್ದರು. ಆದರೆ, ಇಷ್ಟೊಂದು ದೊಡ್ಡದಾದ ಮೊತ್ತದ ಕಾಮಗಾರಿಯನ್ನು ಗ್ರಾಮ ಪಂಚಾಯತ್ನ ಸೀಮಿತ ಅನುದಾನದಲ್ಲಿ ಮಾಡಲು ಸಾಧ್ಯವಾಗದ ಕಾರಣ, ಪಂಚಾಯತ್ ಮುಖಾಂತರ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಅಧಿಕೃತ ಮನವಿಯನ್ನು ಸಲ್ಲಿಸಲಾಗಿತ್ತು. ಆದರೆ ಮನವಿ ಸಲ್ಲಿಕೆಯಾಗಿ ವರ್ಷ ಕಳೆದರೂ ದುರಸ್ತಿ ಕಾರ್ಯ ಮಾತ್ರ ಮರೀಚಿಕೆಯಾಗಿದೆ.

ಕೇಪು ಪಂಚಾಯತ್ನಿಂದ ಶಾಸಕರಿಗೆ ಸಲ್ಲಿಕೆಯಾಗಿತ್ತು ಅಧಿಕೃತ ಮನವಿ
ಕೇಪು ಗ್ರಾಮ ಪಂಚಾಯತ್ ವತಿಯಿಂದ 29-08-2025 ರಂದೇ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಿಗೆ ಅಧಿಕೃತವಾಗಿ ಪತ್ರ ಬರೆಯಲಾಗಿದ್ದು, ಅದರಲ್ಲಿ “ಕಟ್ಟೆ-ಮಣಿಯಾರಪಾದೆ ರಸ್ತೆಯ ಕಟ್ಟೆ ಎಂಬಲ್ಲಿ ಪ್ರಾಕೃತಿಕ ವಿಕೋಪದಿಂದ ಸಂಪರ್ಕ ರಸ್ತೆಯ ಸೇತುವು ಬಳಿ ರಸ್ತೆಯು ಪೂರ್ಣ ಜರಿದು ಹೋಗಿರುತ್ತದೆ. ಈ ಪ್ರದೇಶದಲ್ಲಿ ಸುಮಾರು 50ಕ್ಕೂ ಹೆಚ್ಚು (ಪ್ರಸ್ತುತ 80ಕ್ಕೂ ಅಧಿಕ) ಜನರು ಸಂಚರಿಸುವ ರಸ್ತೆಯಾಗಿದ್ದು, ಬಡ ಜನರು ತುಂಬಾ ಕಷ್ಟದಲ್ಲಿ ಜೀವಿಸುತ್ತಿದ್ದಾರೆ. ಆದುದರಿಂದ ಪ್ರಾಕೃತಿಕ ವಿಕೋಪ ಅಡಿಯಲ್ಲಿ ಸರ್ಕಾರದ ಅನುದಾನ ಮಂಜೂರು ಮಾಡಬೇಕು” ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಮತ್ತು ಕಾರ್ಯದರ್ಶಿಗಳು ಜಂಟಿ ಸಹಿಯೊಂದಿಗೆ ಅಂದಾಜು ಪಟ್ಟಿಯನ್ನು ಲಗತ್ತಿಸಿ ವಿನಂತಿಸಿದ್ದರು. ಆದಾಗ್ಯೂ ಇಲಾಖೆಯ ಮಟ್ಟದಲ್ಲಿ ಫೈಲ್ಗಳು ಧೂಳು ಹಿಡಿಯುತ್ತಿರುವುದು ದುರದೃಷ್ಟಕರ.
ಸ್ಥಳೀಯರ ತೀವ್ರ ಆಕ್ರೋಶ: “ಮಳೆ ಬಂದರೆ ಕಾಲೋನಿ ಸಂಪೂರ್ಣ ಪ್ರತ್ಯೇಕ!”
“ಚುನಾವಣೆ ಸಂದರ್ಭದಲ್ಲಿ ವೋಟ್ ಕೇಳಲು ಬರುವ ಜನಪ್ರತಿನಿಧಿಗಳು ಮತ್ತು ಭರವಸೆ ನೀಡುವ ಅಧಿಕಾರಿಗಳು ನಮ್ಮ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ವರ್ಷವೊಂದು ಕಳೆದರೂ ನಮಗೆ ಸಿಕ್ಕಿರುವುದು ಬರೀ ಆಶ್ವಾಸನೆ ಮಾತ್ರ, ದುರಸ್ತಿ ಮಾತ್ರ ಆಗಿಲ್ಲ. ಈಗ ಮತ್ತೆ ಮಳೆಗಾಲ ಆರಂಭವಾಗಿದ್ದು, ಮಳೆ ಜೋರಾದರೆ ನಮ್ಮ ಕಾಲೋನಿಯವರ ಗತಿ ಅಧೋಗತಿ! ನಮಗೇನಾದರೂ ತುರ್ತು ಆರೋಗ್ಯ ಸಮಸ್ಯೆಯಾದರೆ ಹೊತ್ತುಕೊಂಡು ಹೋಗಲೂ ದಾರಿಯಿಲ್ಲ” ಎಂದು ಕಾಲೋನಿಯ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣದ ಮಧ್ಯಪ್ರವೇಶಕ್ಕೆ ಆಗ್ರಹ
ಈಗಲಾದರೂ ಮಾನ್ಯ ಶಾಸಕರು, ಮಳೆಹಾನಿ ನಿರ್ವಹಣಾ ವಿಭಾಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಈ ಗಂಭೀರ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಬೇಕಿದೆ. ತಕ್ಷಣವೇ ವಿಶೇಷ ಅನುದಾನ ಬಿಡುಗಡೆಗೊಳಿಸಿ, ಸಂಪರ್ಕ ಕಡಿತಗೊಂಡಿರುವ ಈ ಕಾಲುಸಂಕ ಮತ್ತು ರಸ್ತೆಯ ತಡೆಗೋಡೆಯನ್ನು ಯುದ್ಧೋಪಾದಿಯಲ್ಲಿ ದುರಸ್ತಿಗೊಳಿಸಬೇಕೆಂದು ಕೇಪು ಗ್ರಾಮಸ್ಥರು ಹಾಗೂ ಕಾಲೋನಿಯ ಬಡ ಕುಟುಂಬಗಳು ಅತ್ಯಂತ ಕಟುವಾಗಿ ಒತ್ತಾಯಿಸುತ್ತಿದ್ದಾರೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.
accident
ಪೆರುವಾಯಿ ಪೇರಡ್ಕ ಸೇತುವೆಯಿಂದ ತೋಡಿಗೆ ಬಿದ್ದ ಆಲ್ಟೋ ಕಾರು: ಐವರು ಪ್ರಯಾಣಿಕರು ಪವಾಡಸದೃಶ ಪಾರು!
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕೆಳಗಿನ ತೋಡಿಗೆ ಬಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಪೆರುವಾಯಿ ಗ್ರಾಮದ ಪೇರಡ್ಕ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಘಟನೆಯ ವಿವರ: ಪೆರುವಾಯಿ ಕಡೆಯಿಂದ ಬೆರಿಪದವು ಕಡೆಗೆ ಐವರು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಆಲ್ಟೋ ಕಾರು ಪೇರಡ್ಕ ಸೇತುವೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ನೇರ ತೋಡಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಆಲ್ಟೋ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ರಕ್ಷಿಸಿದ ಮಳೆ ಅಭಾವ! ಸಾಮಾನ್ಯವಾಗಿ ಮುಂಗಾರು ಮಳೆಗಾಲದಲ್ಲಿ ಈ ತೋಡಿನಲ್ಲಿ ನೀರು ತುಂಬಿ ಭೋರ್ಗರೆದು ಹರಿಯುತ್ತಿರುತ್ತದೆ. ಆದರೆ ಈ ಬಾರಿ ಸಕಾಲದಲ್ಲಿ ಸರಿಯಾದ ಮಳೆ ಬಾರದ ಕಾರಣ ಹೊಳೆಯಲ್ಲಿ ನೀರಿನ ಪ್ರಮಾಣ ತೀರಾ ಕಡಿಮೆಯಿತ್ತು. ಇದೇ ಕಾರಣಕ್ಕೆ ಕಾರು ತಲೆಕೆಳಗಾಗಿ ಬಿದ್ದರೂ ನೀರಿನಲ್ಲಿ ಮುಳುಗದೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಲು ಸಾಧ್ಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಡೆಗೋಡೆ ಇಲ್ಲದ ಸೇತುವೆ: ನಿರಂತರ ಅಪಘಾತಗಳ ತಾಣ!
ಈ ಸೇತುವೆಗೆ ಯಾವುದೇ ಸುರಕ್ಷಿತ ತಡೆಗೋಡೆ (ಬ್ಯಾರಿಕೇಡ್) ಇಲ್ಲದಿರುವುದೇ ಸರಣಿ ಅಪಘಾತಗಳಿಗೆ ಮುಖ್ಯ ಕಾರಣವಾಗಿದೆ. ಕೇವಲ ಕೆಲವು ದಿನಗಳ ಹಿಂದಷ್ಟೇ (ಮೇ 31 ರಂದು) ಇದೇ ಸೇತುವೆಯಿಂದ ಕೋಳಿ ಸಾಗಾಟ ಮಾಡುತ್ತಿದ್ದ ಪಿಕ್ಅಪ್ ವಾಹನವೊಂದು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದು ಭೀಕರ ಅಪಘಾತ ನಡೆದಿತ್ತು. ಆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ.
ಸಾರ್ವಜನಿಕರ ಆಕ್ರೋಶ: “ಕಳೆದ ಹಲವಾರು ವರ್ಷಗಳಿಂದ ಈ ಅಪಾಯಕಾರಿ ಸೇತುವೆಗೆ ಬಲವಾದ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಹಾಗೂ ಸ್ಥಳೀಯರು ನಿರಂತರವಾಗಿ ಒತ್ತಾಯಿಸುತ್ತಾ ಬರುತ್ತಿದ್ದಾರೆ. ಆದರೆ ಲೋಕೋಪಯೋಗಿ ಇಲಾಖೆಯಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಯಾವುದೇ ಕ್ರಮ ಜರಗಿಸುತ್ತಿಲ್ಲ. ಅಧಿಕಾರಿಗಳ ಈ ಉದಾಸೀನತೆಯೇ ಸರಣಿ ಅಪಘಾತಗಳಿಗೆ ಪ್ರೇರಣೆ ನೀಡುವಂತಿದೆ” ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು, ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ದೊಡ್ಡ ಮಟ್ಟದ ಜೀವಹಾನಿಯನ್ನು ತಪ್ಪಿಸಲು ತಕ್ಷಣವೇ ಪೇರಡ್ಕ ಸೇತುವೆಗೆ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಗಂಭೀರವಾಗಿ ಆಗ್ರಹಿಸಿದ್ದಾರೆ
arrest
ವಿಟ್ಲ ಪೊಲೀಸರ ಬಲೆಗೆ ಬಿದ್ದ ಫರ್ಟಿಲೈಸರ್ ಮಾಫಿಯಾ; ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ತಂಡದಿಂದ ದಾಳಿ;ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ; ಅಕ್ರಮ ದಂಧೆ ಜಾಲ ಬೇಧಿಸಿದ ಖಾಕಿ ಪಡೆ!
Breaking News
ವಿಟ್ಲ: ರೈತರಿಗೆ ಕೇಂದ್ರ ಸರ್ಕಾರವು ರಿಯಾಯಿತಿ (ಸಬ್ಸಿಡಿ) ದರದಲ್ಲಿ ನೀಡುವ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿ, ಚೀಲಗಳನ್ನು ಬದಲಾಯಿಸಿ ಬೇರೆಡೆಗೆ ಹೆಚ್ಚಿನ ಬೆಲೆಗೆ ಸಾಗಾಟ ಮಾಡುತ್ತಿದ್ದ ರಾಜ್ಯಮಟ್ಟದ ವ್ಯವಸ್ಥಿತ ಜಾಲವೊಂದನ್ನು ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ತಂಡ ಯಶಸ್ವಿಯಾಗಿ ಬೇಧಿಸಿದೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ ಹಾಗೂ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ಬಂಧನ: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಖಂಡಿಗ ಸರ್ಕಾರಿ ಶಾಲೆಯ ಬಳಿಯ ನಿವಾಸಿ ಕೆ. ಮಹಮ್ಮದ್ ಎಂಬವರ ಪುತ್ರ ಮೊಹಮ್ಮದ್ ಅಶ್ರಫ್ (40) ಬಂಧಿತ ಆರೋಪಿಯಾಗಿದ್ದಾನೆ. ಈತ ತನ್ನ ಮನೆಯಲ್ಲೇ ಕಾನೂನುಬಾಹಿರವಾಗಿ ಯೂರಿಯಾ ರಸಗೊಬ್ಬರವನ್ನು ಸಂಗ್ರಹಿಸಿ ಈ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಖದೀಮರ ದಂಧೆಯ ಸ್ವರೂಪ: ಕೇಂದ್ರ ಸರ್ಕಾರವು ರೈತರಿಗೆ ನೀಡುವ ಸಬ್ಸಿಡಿ ಯೂರಿಯಾವನ್ನು ವಿವಿಧ ಕೃಷಿ ಪತ್ತಿನ ಸಹಕಾರಿ ಸಂಘಗಳು ಅಥವಾ ಸೊಸೈಟಿಗಳ ಮೂಲಕ ಬೇನಾಮಿ ರೈತರ ಹೆಸರಿನಲ್ಲಿ ಈ ಜಾಲವು ಖರೀದಿಸುತ್ತಿತ್ತು. ಬಳಿಕ, ಸರ್ಕಾರದ ಅಧಿಕೃತ ಮೊಹರು ಹೊಂದಿರುವ ಹಳದಿ ಚೀಲಗಳಿಂದ ಯೂರಿಯಾವನ್ನು ಹೊರತೆಗೆದು, ‘ಟೆಕ್ನಿಕಲ್ ಗ್ರೇಡ್’ ಎಂದು ನಮೂದಿಸಲಾದ 50 ಕೆಜಿಯ ಬಿಳಿ ಚೀಲಗಳಿಗೆ ತುಂಬಿಸಲಾಗುತ್ತಿತ್ತು. ಈ ರೀತಿ ಪ್ಯಾಕ್ ಮಾಡಲಾದ ರಸಗೊಬ್ಬರವನ್ನು ಕೇರಳದ ಫ್ಲೈವುಡ್ ಕಾರ್ಖಾನೆಗಳಿಗೆ ಅತ್ಯಧಿಕ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬೃಹತ್ ಪ್ರಮಾಣದ ರಸಗೊಬ್ಬರ, ಲಾರಿ ಜಪ್ತಿ: ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ತಲಾ 50 ಕಿಲೋ ತೂಕದ 342 ಚೀಲ ಯೂರಿಯಾ ರಸಗೊಬ್ಬರ ಪತ್ತೆಯಾಗಿದೆ. ಇದರೊಂದಿಗೆ ತುಮಕೂರು ಮತ್ತು ಹಾಸನ ಭಾಗಗಳಿಂದ ತಲಾ 300 ರೂಪಾಯಿಯಂತೆ ಖರೀದಿಸಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಮತ್ತೊಂದು 300 ಚೀಲ (ಒಟ್ಟು 642 ಚೀಲ) ರಸಗೊಬ್ಬರ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ KA 11 A 6017 ಸಂಖ್ಯೆಯ ಟಾಟಾ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೈತರ ಹಿತಾಸಕ್ತಿಗೆ ಕನ್ನ: ಪ್ರಸ್ತುತ ಮಾರುಕಟ್ಟೆಯಲ್ಲಿ ತಲಾ 50 ಕಿಲೋ ತೂಕದ ಯೂರಿಯಾ ಚೀಲದ ನೈಜ ಬೆಲೆ 1,457.29 ರೂ. ಆಗಿದ್ದು, ಇದಕ್ಕೆ ಕೇಂದ್ರ ಸರ್ಕಾರವು 1,190.79 ರೂ. ಸಬ್ಸಿಡಿ ನೀಡುತ್ತದೆ. ಹೀಗಾಗಿ ರೈತರಿಗೆ ಇದು ಕೇವಲ 266.50 ರೂ.ಗೆ ಲಭ್ಯವಾಗುತ್ತದೆ. ಆದರೆ, ಇಂತಹ ರಿಯಾಯಿತಿ ದರದ ರಸಗೊಬ್ಬರವನ್ನು ರಸಗೊಬ್ಬರ ಮಾರಾಟ ಕೇಂದ್ರಗಳ ಸಿಬ್ಬಂದಿಗಳ ಜೊತೆ ಶಾಮೀಲಾಗಿ ಕಳ್ಳಮಾರ್ಗದಿಂದ ಲೂಟಿ ಮಾಡುತ್ತಿರುವುದು ರೈತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
ದಾಳಿ ನಡೆದ ಸ್ಥಳಕ್ಕೆ ಬಂಟ್ವಾಳ ಕೃಷಿ ಅಧಿಕಾರಿ ನಂದನ್ ಶೆಣೈ, ಸಹಾಯಕ ನಿರ್ದೇಶಕಿ ವೀಣಾ, ಜಿಲ್ಲಾ ಜಾಗೃತ ದಳದ (ವಿಜಿಲೆನ್ಸ್) ಅಧಿಕಾರಿ ನಾಗವೇಣಿ, ಕೊಳ್ನಾಡು ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವಿನಯ್ ಕುಮಾರ್, ಗದಿಗೆಪ್ಪ, ಮಾಯಪ್ಪ, ಸಾಬು ಮಿರ್ಜಿ ಸೇರಿದಂತೆ ಪ್ರಮುಖರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮುಂದಿನ ಕಾನೂನುಕ್ರಮಕ್ಕಾಗಿ ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ಕಛೇರಿಯ ಕೃಷಿ ಅಧಿಕಾರಿಗಳಾದ ನಂದನ ಶೆಣೈ ಪಿ, (ತಾಂತ್ರಿಕ)ರವರಿಗೆ ಮಾಹಿತಿ ನೀಡಲಾಗಿ ಸದ್ರಿಯವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ : 127/2026 ಕಲಂ: 3(2)(a), 3(2)(d), 3(2)(c), 3(2)(f) ESSENTIAL COMMODITIES ACT, 1955 ಯಂತೆ ಪ್ರಕರಣ ದಾಖಲಾಗಿರುತ್ತದೆ.




-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident1 month agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala6 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
