F.I.R.
ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನಿಗೆ ನರಕಯಾತನೆ ನೀಡಿ ಕೊಂದ ಪಾಪಿ ತಾಯಿ ಮತ್ತು ಪ್ರೇಮಿ!
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/06/4455-1000x600.jpg&description=ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನಿಗೆ ನರಕಯಾತನೆ ನೀಡಿ ಕೊಂದ ಪಾಪಿ ತಾಯಿ ಮತ್ತು ಪ್ರೇಮಿ!', 'pinterestShare', 'width=750,height=350'); return false;" title="Pin This Post">
ಹೆತ್ತ ಕರುಳಿಗಿಂತ ಹೆಣ್ಣಿಗೆ ಕಾಮವೇ ಕಣ್ಣಾಯಿತು… ಆಶ್ರಯ ನೀಡಬೇಕಾದ ಕೈಗಳೇ ಯಮಸ್ವರೂಪಿಯಾದವು! ದೇವರ ಸ್ವಂತ ನಾಡು ಕೇರಳದಲ್ಲಿ ಮಾನವೀಯತೆಯೇ ಸಂಪೂರ್ಣವಾಗಿ ತಲೆತಗ್ಗಿಸುವಂತಹ, ಕಲ್ಲು ಹೃದಯದವರೂ ಕಣ್ಣೀರು ಸುರಿಸುವಂತಹ ಅತ್ಯಂತ ಕ್ರೂರ ಘಟನೆಯೊಂದು ತಿರುವನಂತಪುರಂ ನಿಂದ ಬೆಳಕಿಗೆ ಬಂದಿದೆ. ಮಾತು ಬಾರದ, ತನ್ನ ನೋವನ್ನು ಹೇಳಿಕೊಳ್ಳಲಾಗದ ಕೇವಲ ಒಂದೂವರೆ ವರ್ಷದ ಮುಗ್ಧ ಕಂದಮ್ಮ ಅರ್ಷಿದ್ನನ್ನು ಹೆತ್ತ ತಾಯಿ ಮತ್ತು ಆಕೆಯ ಪ್ರೇಮಿ ಸೇರಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಭೀಕರ ಕಥೆ ಇಡೀ ಸಮಾಜವನ್ನೇ ನಡುಗಿಸಿದೆ.

ಮಗುವನ್ನು ಹತ್ಯೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31) ಎಂಬ ಇಬ್ಬರು ನರರೂಪದ ರಾಕ್ಷಸರನ್ನು ನೆಡುಮಂಗಾಡ್ ಪೊಲೀಸರು ಕಬ್ಬಿಣದ ಸರಳುಗಳ ಹಿಂದೆ ತಳ್ಳಿದ್ದಾರೆ.

ಸುಳ್ಳು ಕಥೆ ಸೃಷ್ಟಿಸಿದ್ದ ಪಾಪಿಗಳು: ಪೋಸ್ಟ್ಮಾರ್ಟಮ್ನಲ್ಲಿ ಬಯಲಾಯ್ತು ಸತ್ಯ!
ಮೇ 29ರ ಶುಕ್ರವಾರದಂದು ಈ ದುರಂತ ಜಗತ್ತಿಗೆ ಗೊತ್ತಾಯಿತು. ಮಗು ಅರ್ಷಿದ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದಾಗ, ಆರೋಪಿಗಳು ನಾಟಕವಾಡಿ ಆಂಬ್ಯುಲೆನ್ಸ್ ಮೂಲಕ ಪಣವೂರಿನ ಖಾಸಗಿ ಆಸ್ಪತ್ರೆಗೆ, ಅಲ್ಲಿಂದ ಎಸ್ಎಟಿ (SAT) ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲೇ ಆ ಪುಟ್ಟ ಜೀವ ಬಾರದ ಲೋಕಕ್ಕೆ ಪಯಣಿಸಿತ್ತು.
ಆರೋಪಿ ಅಶ್ಕರ್ ಪೊಲೀಸರಿಗೆ ಹೇಳಿದ ಕಟ್ಟುಕಥೆ:
“ಮಗು ಹಾಲು, ನೀರು ಕುಡಿದು ಮಲಗಿತ್ತು. ಇದ್ದಕ್ಕಿದ್ದಂತೆ ಕೆಮ್ಮಲು ಮತ್ತು ವಾಂತಿ ಮಾಡಲು ಆರಂಭಿಸಿತು. ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿತು.”
ಆದರೆ, ಮಗುವಿನ ಮರಣೋತ್ತರ ಪರೀಕ್ಷಾ ವರದಿ ಬರುತ್ತಿದ್ದಂತೆ ವೈದ್ಯರೇ ಬೆಚ್ಚಿಬಿದ್ದರು. ಮಗುವಿನ ತಲೆ ಹಾಗೂ ದೇಹದಾದ್ಯಂತ ತೀವ್ರ ಆಂತರಿಕ ರಕ್ತಸ್ರಾವ ಉಂಟಾಗಿದ್ದೇ ಸಾವಿಗೆ ಕಾರಣ ಎಂದು ವರದಿ ಬಹಿರಂಗಪಡಿಸಿತು. ಪಾಪಿಗಳು ಹೆಣೆದಿದ್ದ ಸುಳ್ಳಿನ ಜಾಲ ಕ್ಷಣಾರ್ಧದಲ್ಲಿ ಧೂಳೀಪಟವಾಯಿತು.
ಪುಟ್ಟ ದೇಹದ ಮೇಲೆ 50ಕ್ಕೂ ಹೆಚ್ಚು ಗಾಯಗಳು: ದಿನವೂ ನಡೆಯುತ್ತಿತ್ತು ನರಕಯಾತನೆ!
ಪೊಲೀಸ್ ತನಿಖೆ ಮುಂದುವರಿದಂತೆ ಆ ಒಂದೂವರೆ ವರ್ಷದ ಕಂದ ಪ್ರತಿದಿನ ಅನುಭವಿಸುತ್ತಿದ್ದ ನರಕಯಾತನೆಯ ಎಳೆಎಳೆಗಳು ಬಿಚ್ಚಿಕೊಳ್ಳತೊಡಗಿದವು. ತನಿಖಾಧಿಕಾರಿಗಳು ಅರ್ಷಿದ್ನ ಪುಟ್ಟ ಮತ್ತು ಕೋಮಲವಾದ ದೇಹದ ಮೇಲೆ ಬರೋಬ್ಬರಿ 50ಕ್ಕೂ ಹೆಚ್ಚು ಹಳೆಯ ಮತ್ತು ತಾಜಾ ಗಾಯಗಳನ್ನು ಪತ್ತೆಹಚ್ಚಿದ್ದಾರೆ.
ಸಿಗರೇಟ್ನಿಂದ ಸುಟ್ಟ ಗಾಯಗಳು: ಮಗುವಿನ ಇಡೀ ದೇಹದಾದ್ಯಂತ ಸಿಗರೇಟ್ ತುಂಡುಗಳಿಂದ ಸುಟ್ಟು ಹಾಕಿರುವ ದುಂಡಗಿನ ಗುರುತುಗಳಿದ್ದವು.
ಮುರಿದಿದ್ದ ಕೈಗಳು: ಈ ಹಿಂದೆ ಮಗುವಿನ ಎರಡೂ ತೋಳುಗಳು ಮುರಿದಿದ್ದವು. ಆ ಸಮಯದಲ್ಲಿ “ಮಗು ಆಟ ಆಡುತ್ತಾ ಕೆಳಗೆ ಬಿದ್ದಿದೆ” ಎಂದು ಈ ಪಾಪಿಗಳು ಜಾಣತನದಿಂದ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದರು.

ಅರ್ಷಿದ್ನ ತಂದೆ (ಅಖಿಲಾಳ ಮೊದಲ ಪತಿ) ಮೃತಪಟ್ಟ ನಂತರ ಮಗುವನ್ನು ಅಜ್ಜಿ ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಅಜ್ಜಿಯ ಮಡಿಲಲ್ಲಿ ಮಗು ಸುರಕ್ಷಿತವಾಗಿತ್ತು. ಆದರೆ, ಅಖಿಲಾ ತನಗೆ ಮಗುವನ್ನು ಸಾಕಲು ಸಾಧ್ಯವಿಲ್ಲ ಎಂದು ಹೇಳಿ, ನಂತರ ತನ್ನ ಪ್ರೇಮಿ ಅಶ್ಕರ್ ಜೊತೆ ಲಿವ್-ಇನ್ ರಿಲೇಶನ್ಶಿಪ್ನಲ್ಲಿ ವಾಸಿಸಲು ಮಗುವನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಳು. ಅಲ್ಲಿಂದಲೇ ಮಗುವಿನ ಪಾಲಿಗೆ ನರಕದ ಬಾಗಿಲು ತೆರೆದಿತ್ತು. ಹೆತ್ತ ಮಗನಿಗೆ ಅಶ್ಕರ್ ರಾಕ್ಷಸನಂತೆ ಹಿಂಸಿಸುತ್ತಿದ್ದರೂ, ಕಣ್ಣೆದುರೇ ಮಗುವಿನ ಕೈ ಮುರಿದರೂ ಅಖಿಲಾ ಮಗನನ್ನು ರಕ್ಷಿಸಲಿಲ್ಲ, ಪೊಲೀಸರಿಗೂ ಹೇಳಲಿಲ್ಲ. ಇದೇ ಕಾರಣಕ್ಕೆ ಆಕೆಯನ್ನೂ ಕೊಲೆ ಆರೋಪಿಯನ್ನಾಗಿ ಮಾಡಲಾಗಿದೆ.
ಮೊದಲ ಪತ್ನಿಯನ್ನೂ ಜೀವಚ್ಛವ ಮಾಡಿದ್ದ ಕ್ರೂರಿ ಅಶ್ಕರ್!
ಬಂಧಿತ ಆರೋಪಿ ಅಶ್ಕರ್ ಕೇವಲ ಮಗುವಿನ ಪಾಲಿಗೆ ಮಾತ್ರವಲ್ಲ, ಆತನ ಸಹವಾಸಕ್ಕೆ ಬಂದವರೆಲ್ಲರಿಗೂ ಯಮನಾಗಿದ್ದ. ಆತನ ಮೊದಲ ಪತ್ನಿ ಅಮೀನಾಳ ಕುಟುಂಬಸ್ಥರು ಮಾಧ್ಯಮಗಳ ಮುಂದೆ ಬಂದು ಆಘಾತಕಾರಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಅಶ್ಕರ್ ಇನ್ನು ಕೂಡ ಅಮೀನಾಗೆ ಅಧಿಕೃತ ವಿಚ್ಛೇದನ ನೀಡಿಲ್ಲ. ಆಕೆಯ ತಲೆಯನ್ನು ಗೋಡೆಗೆ ಬಡಿಯುವುದು, ಸೀಲಿಂಗ್ ಫ್ಯಾನ್ ಉರುಳಿಗೆ ಸಿಲುಕಿಸಲು ಯತ್ನಿಸುವಂತಹ ಘೋರ ದೈಹಿಕ ಹಿಂಸೆ ನೀಡಿದ್ದ. ಆ ಭೀಕರ ಹಲ್ಲೆಯ ಕಾರಣದಿಂದಾಗಿ ಅಮೀನಾ ಕಳೆದ ಒಂದು ವರ್ಷದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಹಾಸಿಗೆ ಹಿಡಿದಿದ್ದು, ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಹೊತ್ತಿ ಉರಿದ ಗ್ರಾಮಸ್ಥರ ಆಕ್ರೋಶ: ಆರೋಪಿಗೆ ಧರ್ಮದೇಟು ನೀಡಲು ಯತ್ನ!
ರವಿವಾರ ತನಿಖೆಯ ಭಾಗವಾಗಿ ಮಹಜರು (ಸ್ಥಳ ಪರಿಶೀಲನೆ) ನಡೆಸಲು ನೆಡುಮಂಗಾಡ್ ಪೊಲೀಸರು ಆರೋಪಿ ಅಶ್ಕರ್ನನ್ನು ಕರಿಕುಳಿಯಲ್ಲಿರುವ ಆತನ ಮನೆಗೆ ಕರೆದೊಯ್ದಾಗ ಇಡೀ ಗ್ರಾಮವೇ ಆಕ್ರೋಶದ ಜ್ವಾಲೆಯಾಗಿ ಬೀದಿಗೆ ಬಂದಿತ್ತು. ನೂರಾರು ಸ್ಥಳೀಯ ನಿವಾಸಿಗಳು, ಮಹಿಳೆಯರು ಜಮಾಯಿಸಿ ಆ ಪಾಪಿಯ ಮುಖಕ್ಕೆ ಉಗುಳಿ, ಆತನ ಮೇಲೆ ದಾಳಿ ಮಾಡಲು ಯತ್ನಿಸಿದರು. “ಆ ನರರಾಕ್ಷಸನನ್ನು ನಮಗೆ ಒಪ್ಪಿಸಿ, ಇಲ್ಲೇ ಜೀವಂತವಾಗಿ ಮುಗಿಸುತ್ತೇವೆ” ಎಂದು ಜನ ಕಿರುಚಾಡಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಹರಸಾಹಸ ಪಟ್ಟು ಕೋಪಗೊಂಡ ಜನರನ್ನು ನಿಯಂತ್ರಿಸಿ, ಆರೋಪಿಯನ್ನು ಸುರಕ್ಷಿತವಾಗಿ ಜೈಲಿನತ್ತ ಸಾಗಿಸಿದರು.
ಒಡಲಲ್ಲಿ ಹೊತ್ತು ಹೆತ್ತ ಮಗುವನ್ನೇ ಕಾಮದ ಅಮಲಿನಲ್ಲಿ ಕ್ರೂರಿಯ ಕೈಗಿಟ್ಟು ಸಾಯಿಸಿದ ಆ ತಾಯಿಗೂ, ಚಿಕ್ಕ ಕಂದಮ್ಮನಿಗೆ ಸಿಗರೇಟ್ನಿಂದ ಸುಟ್ಟು ಕೊಂದ ಆ ನರರಾಕ್ಷಸನಿಗೂ ಕಾನೂನು ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕಿದೆ. ಇಂತಹ ಘಟನೆಗಳು ಮರುಕಳಿಸದಂತೆ ಇಡೀ ಸಮಾಜವೇ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಮುಗ್ಧ ಅರ್ಷಿದ್ನ ಆತ್ಮಕ್ಕೆ ಶಾಂತಿ ಸಿಗಲಿ
crime
ವಿಟ್ಲ ಪೊಲೀಸರ ಬಲೆಗೆ ಸಿಕ್ಕ ಅಂತರ್ ರಾಜ್ಯ ಗೋ ಸಾಗಾಟಗಾರ..ಪೊಲೀಸರ ಮೇಲೆಯೇ ಕಾರು ಹಾಯಿಸಲು ಯತ್ನಿಸಿ ಪರಾರಿಯಾದ ಬಷೀರ್
ವಿಟ್ಲ: ಹಲವು ಪೊಲೀಸ್ ಠಾಣೆಗಳಲ್ಲಿ ಗೋಸಾಗಾಟ ಪ್ರಕರಣಗಳ ಆರೋಪಿಯಾಗಿರುವ ಅಂತರರಾಜ್ಯ ಗೋಸಾಗಾಟಗಾರ, ಪಂಜರಗೋಡಿ ನಿವಾಸಿ ಬಷೀರ್ ಎಂಬಾತನ ಅಕ್ರಮ ಗೋಸಾಗಾಟ ಜಾಲವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಗೆ ಯತ್ನಿಸಿ ಮುಖ್ಯ ಆರೋಪಿ ಬಷೀರ್ ಪರಾರಿಯಾಗಿದ್ದು, ಪಿಕಪ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಪಿಕಪ್ ಚಾಲಕನನ್ನು ಬಂಟ್ವಾಳ ಬಾಳೆಪುಣಿ (ಮುಡಿಪು ಸಮೀಪದ ನಾರ್ಯ) ನಿವಾಸಿ ಮೊಹಮ್ಮದ್ ಹನೀಫ್ (44) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ ಪಿಕಪ್ ವಾಹನ ಹಾಗೂ ಹಿಂಸಾತ್ಮಕವಾಗಿ ಕಟ್ಟಲಾಗಿದ್ದ ಎರಡು ಗೋವುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆದದ್ದು ಹೇಗೆ?
ಬುಧವಾರ (ಮೇ 20) ಬೆಳಗ್ಗೆ ಕಲ್ಲಡ್ಕ ಪ್ರಖಂಡ ಬಜರಂಗದಳ ಕಾರ್ಯಕರ್ತರಿಗೆ ಅಕ್ರಮ ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅವರು ತಕ್ಷಣವೇ ಈ ಕುರಿತು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸಾಲೆತ್ತೂರು ಬಳಿ ನಿಗಾ ಇರಿಸಿದ್ದರು.

ದಿನಾಂಕ 21.05.2026 ರಂದು ಮುಂಜಾನೆ ಬಂಟ್ವಾಳ ಕೊಳ್ನಾಡು ಪಂಜರಕೋಡಿ ಎಂಬಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ KA-19-D-1496 ನೋಂದಣಿಯ ಪಿಕ್ ಅಪ್ ವಾಹನ ಬರುತ್ತಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ತಡೆಯಲು ಮುಂದಾಗಿದ್ದಾರೆ.
ಪೊಲೀಸರ ಕೊಲೆಗೆ ಯತ್ನಿಸಿ ಎಸ್ಕೋರ್ಟ್ ಕಾರು ಪರಾರಿ!

ಈ ವೇಳೆ ಗೋಸಾಗಾಟದ ಪಿಕ್ ಅಪ್ ವಾಹನಕ್ಕೆ ಮುಂಭಾಗದಲ್ಲಿ ಬೆಂಗಾವಲಾಗಿ (ಎಸ್ಕೋರ್ಟ್) KA-21-MA-0801 ನೇ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ಮುಖ್ಯ ಆರೋಪಿ ಬಷೀರ್, ತನ್ನ ಅಕ್ರಮ ದಂಧೆಗೆ ಅಡ್ಡಿಪಡಿಸಿದ ಪೊಲೀಸರ ಪ್ರಾಣಕ್ಕೆ ಅಪಾಯವಾಗುವಂತೆ ಅವರ ಮೇಲೆಯೇ ಕಾರನ್ನು ಚಲಾಯಿಸಿಕೊಂಡು ಹೋಗಿ ಕೊಲೆಗೆ ಯತ್ನಿಸಿದ್ದಾನೆ. ಆದರೆ ಸಮಯಪ್ರಜ್ಞೆ ಮೆರೆದ ಪೊಲೀಸರು ತಕ್ಷಣವೇ ಪಕ್ಕಕ್ಕೆ ಸರಿದು ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಬಷೀರ್, ತಕ್ಷಣವೇ ಸ್ವಿಫ್ಟ್ ಕಾರಿನೊಂದಿಗೆ ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ.
ಚಾಲಕನ ಬಂಧನ – ಗೋವುಗಳ ರಕ್ಷಣೆ
ಬಷೀರ್ ಪರಾರಿಯಾದ ಬೆನ್ನಲ್ಲೇ ಪೊಲೀಸರು ಹಿಂಬದಿಯಲ್ಲಿ ಬರುತ್ತಿದ್ದ ಪಿಕ್ ಅಪ್ ವಾಹನವನ್ನು ಯಶಸ್ವಿಯಾಗಿ ತಡೆದು ನಿಲ್ಲಿಸಿದ್ದಾರೆ. ಬಳಿಕ ಪಿಕ್ ಅಪ್ ಪರಿಶೀಲಿಸಿದಾಗ ಎರಡು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆಯಾಗಿದೆ. ಈ ಬಗ್ಗೆ ಚಾಲಕ ಮೊಹಮ್ಮದ್ ಹನೀಫ್ನನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಪಡೆಯದೇ ಜಾನುವಾರುಗಳನ್ನು ವಧೆ ಮಾಡಲು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ.
ಪ್ರಕರಣ ದಾಖಲು
ಮುಂದಿನ ಕಾನೂನು ಕ್ರಮಕ್ಕಾಗಿ ಚಾಲಕನನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಎರಡು ಜಾನುವಾರುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಬಷೀರ್ ಮತ್ತು ಬಂಧಿತ ಚಾಲಕ ಮೊಹಮ್ಮದ್ ಹನೀಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 114/2026 ರಂತೆ, ಬಿ.ಎನ್.ಎಸ್-2023 (BNS) ಕಾಯ್ದೆಯ ಕಲಂ: 118(1), 109, 132 ಜೊತೆಗೆ 3(5), ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ 5, 7, 12 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ರ ಕಲಂ 11 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



F.I.R.
ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಪ್ರಕರಣ ದಾಖಲು; ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಮಂಗಳೂರು ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಸಮಾರಂಭಕ್ಕೆ ಬಂದ ವಾಹನಗಳ ಅವ್ಯವಸ್ಥಿತ ಪಾರ್ಕಿಂಗ್ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಎರಡು ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ಆಯೋಜಕರ ಮೇಲೆ ಬಜಪೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಘಟನೆಯ ವಿವರ: ದಿನಾಂಕ 12-04-2026ರಂದು ಮಧ್ಯಾಹ್ನ 12:00 ರಿಂದ 2:00 ಗಂಟೆಯ ನಡುವೆ ಗಂಜಿಮಠದ ‘ರಾಯಲ್ ಪ್ಯಾಲೇಸ್’ ಮತ್ತು’ಒಂಡೆಲಾ ಹಾಲ್‘ನಲ್ಲಿ ಮದುವೆ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಮಾರಂಭಕ್ಕೆ ಆಗಮಿಸಿದ ನೂರಾರು ವಾಹನಗಳಿಗೆ ಕಲ್ಯಾಣ ಮಂಟಪದ ಆವರಣದಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡದ ಕಾರಣ, ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಸಾಲು ಸಾಲಾಗಿ ನಿಲ್ಲಿಸಲಾಗಿತ್ತು.
ಸಾರ್ವಜನಿಕರಿಗೆ ತೊಂದರೆ: ಹೆದ್ದಾರಿಯಲ್ಲೇ ವಾಹನಗಳನ್ನು ನಿಲ್ಲಿಸಿದ್ದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಮತ್ತು ತುರ್ತು ವಾಹನಗಳಿಗೆ ತೀವ್ರ ತೊಂದರೆಯಾಗಿದ್ದು, ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿತ್ತು.
ಪೊಲೀಸ್ ಕ್ರಮ: ನಿಯಮ ಮೀರಿ ವಾಹನ ಪಾರ್ಕಿಂಗ್ಗೆ ಅವಕಾಶ ನೀಡಿದ ಮತ್ತು ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಜಪೆ ಪೊಲೀಸರು ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲೀಕರು ಹಾಗೂ ಆಯೋಜಕರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ದಾಖಲಾದ ಪ್ರಕರಣ: ಬಜಪೆ ಪೊಲೀಸ್ ಠಾಣೆಯಲ್ಲಿ ಮೊ.ನಂ 73/2026 ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 285, 292 ಮತ್ತು ಐ.ಎಂ.ವಿ ಆಕ್ಟ್ (IMV Act) ಕಲಂ 122 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ತನಿಖೆ ಪ್ರಗತಿಯಲ್ಲಿದೆ.
ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವ ಇಂತಹ ಬೇಜವಾಬ್ದಾರಿ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸರು ಈ ಮೂಲಕ ಎಚ್ಚರಿಸಿದ್ದಾರೆ.


Bantawala
ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಹಾಗೂ ಕಿರುಕುಳ; ಮೂವರ ವಿರುದ್ಧ ಎಫ್ಐಆರ್ ದಾಖಲು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
ದೂರುದಾರರಾದ ಶೇಷಮ್ಮ (47 ವರ್ಷ) ಅವರು ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಕಳೆದ 24 ವರ್ಷಗಳಿಂದ ಸೇವೆಯಲ್ಲಿದ್ದು, ಪ್ರಸ್ತುತ ಮಾಣಿ ಶಾಖೆಯಲ್ಲಿದ್ದು, ಕಳೆದ 17 ವರ್ಷಗಳಿಂದ ಅವರು ಖಾಯಂ ಗುಮಾಸ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ದೂರಿನ ವಿವರದಂತೆ, ದಿನಾಂಕ 01.04-2026 ರಂದು ನಡೆದ ಸಿಬ್ಬಂದಿ ಸಭೆಯಲ್ಲಿ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋಧ ಅವರು ಉಪಸ್ಥಿತರಿದ್ದು, ಹಾಜರಾತಿ ವಿಚಾರವಾಗಿ ಅಂದರೆ 29.03.2026ರಂದು ಕರ್ತವ್ಯಕ್ಕೆ ಹಾಜರಾಗದ ಬಗ್ಗೆ ಪಿರ್ಯಾದಿದಾರರು ಸಕಾರಣವನ್ನು ನೀಡಿದ್ದರೂ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಅವರು ಶೇಷಮ್ಮ ಅವರನ್ನು ಪ್ರಶ್ನಿಸಿ, ಮೇಜು ಬಡಿದು ಬೆದರಿಕೆ ಹಾಕಿದ್ದಾರೆನ್ನಲಾಗಿದೆ.
ದಿನಾಂಕ 02-04-2026 ರಂದು ಬೆಳಿಗ್ಗೆ ಪ್ರಭಾರ ಶಾಖಾ ವ್ಯವಸ್ಥಾಪಕ ಯತೀಶ್ ಡಿ. ಗೌಡ ಅವರು ರಜೆಯಲ್ಲಿದ್ದರೂ ಕಚೇರಿಗೆ ಬಂದು, ಶೇಷಮ್ಮ ಅವರ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. “ನೀನು ಕೆಳಜಾತಿಯವಳು, ಮೇಲಧಿಕಾರಿಗಳ ಎದುರು ಮಾತನಾಡುತ್ತೀಯಾ?” ಎಂದು ಜಾತಿ ಹಿಡಿದು ನಿಂದಿಸಿ, ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಷ್ಟೇ ಅಲ್ಲದೆ, ಶೇಷಮ್ಮ ಅವರು ಬಳಸುತ್ತಿದ್ದ ಕಂಪ್ಯೂಟರ್ ಅನ್ನು ಬ್ಲಾಕ್ ಮಾಡಿ, ಪ್ಲಗ್ ತೆಗೆದು ಅವರು ಕುಳಿತಿದ್ದ ಕುರ್ಚಿಯಿಂದ ಕೈಯಿಂದ ದೂಡಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಮನನೊಂದ ಶೇಷಮ್ಮ ಅವರಿಗೆ ಅದೇ ದಿನ ದಿನಾಂಕ 02.04.2026ರಿಂದ ಕೆಲಸಕ್ಕೆ ಗೈರು ಆಗುವಂತೆ ನೋಟಿಸ್ ನೀಡಿ ಕಿರುಕುಳವನ್ನು ಮುಂದುವರಿಸಿರುತ್ತಾರೆ. ಈ ಬಗ್ಗೆ ಸೇಸಮ್ಮ ಅವರು ಮೇಲಾಧಿಕಾರಿಗಳಿಗೆ ಮನವಿ ಮಾಡಿದಾಗ, ಅವರ ಮನವಿ ಮೇರೆಗೆ ದಿನಾಂಕ 04.04.2026ರಂದು ಮೇಲಾಧಿಕಾರಿಗಳವರು ಮಾಣಿ ಶಾಖೆಗೆ ಆಗಮಿಸಿ ಪಿರ್ಯಾದಿದಾರರಲ್ಲಿ ಮೌಖಿಕವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದ್ದರು.
ಆಸ್ಪತ್ರೆಗೆ ದಾಖಲು:
ದಿನಾಂಕ 07-04-2026 ರಂದು ಶೇಷಮ್ಮ ಅವರು ಕಚೇರಿಗೆ ಹೋದಾಗ ಮತ್ತೆ ಕಂಪ್ಯೂಟರ್ ಪಾಸ್ವರ್ಡ್ ನೀಡದೆ ಕಿರುಕುಳ ನೀಡಿದ್ದರಿಂದ, ಮಾನಸಿಕವಾಗಿ ನೊಂದುಕೊಂಡ ಅವರು ಕಚೇರಿಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಏಪ್ರಿಲ್ 10 ರವರೆಗೆ ಚಿಕಿತ್ಸೆ ಪಡೆದಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಪ್ರಭಾರ ಶಾಖಾ ವ್ಯವಸ್ಥಾಪಕ ಯತೀಶ್ ಡಿ. ಗೌಡ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶೋದಾ ಮತ್ತು ಆಡಳಿತ ಮಂಡಳಿ ಅಧ್ಯಕ್ಷ ಪುಷ್ಪರಾಜ್ ಚೌಟ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ
ಶೇಷಮ್ಮ ಅವರು ನೀಡಿದ ದೂರಿನ ಪ್ರಕಾರ, ಆರೋಪಿಗಳು ಕಚೇರಿಯ ಕೆಲಸದ ವಿಚಾರದಲ್ಲಿ ತಾರತಮ್ಯ ಎಸಗಿದ್ದಲ್ಲದೆ, ಇತರ ಸಿಬ್ಬಂದಿಗಳ ಮುಂದೆ ದೂರುದಾರರ ಜಾತಿಯನ್ನು ಎತ್ತಿ ಹಿಡಿದು ಅವಮಾನಿಸಿದ್ದಾರೆ. ಅಲ್ಲದೆ, ಕೆಲಸದಿಂದ ತೆಗೆದುಹಾಕುವ ಬೆದರಿಕೆ ಹಾಕಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ಶೇಷಮ್ಮ ಅವರು ವಿಟ್ಲ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು.
ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 74, 49 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (SC/ST Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಅವರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.ಪ್ರಸ್ತುತ ಪೊಲೀಸರು ಘಟನಾ ಸ್ಥಳದ ಮಹಜರು ನಡೆಸಿ, ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ.


-
crime2 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident3 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada5 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
