complaint
ವಿಟ್ಲ ಪ್ರತ್ಯೇಕ ತಾಲೂಕು ಘೋಷಣೆಗೆ ಒತ್ತಾಯ: ಶಾಸಕ ಅಶೋಕ್ ಕುಮಾರ್ ರೈಗೆ ಹೋರಾಟ ಸಮಿತಿಯಿಂದ ಮನವಿ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2026/06/452-1000x600.jpg&description=ವಿಟ್ಲ ಪ್ರತ್ಯೇಕ ತಾಲೂಕು ಘೋಷಣೆಗೆ ಒತ್ತಾಯ: ಶಾಸಕ ಅಶೋಕ್ ಕುಮಾರ್ ರೈಗೆ ಹೋರಾಟ ಸಮಿತಿಯಿಂದ ಮನವಿ', 'pinterestShare', 'width=750,height=350'); return false;" title="Pin This Post">
ವಿಟ್ಲ: ದಶಕಗಳ ಕಾಲದ ಬೇಡಿಕೆಯಾದ ವಿಟ್ಲವನ್ನು ಪ್ರತ್ಯೇಕ ತಾಲೂಕನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ವಿಟ್ಲ ತಾಲೂಕು ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಹೋರಾಟ ಸಮಿತಿಯ ಪದಾಧಿಕಾರಿಗಳು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಬಂಟ್ವಾಳ ತಾಲೂಕಿನ ಹೋಬಳಿ ಕೇಂದ್ರವಾಗಿರುವ ವಿಟ್ಲವು ಭೌಗೋಳಿಕವಾಗಿ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ತಾಲೂಕಾಗಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದು ಸಮಿತಿಯು ಶಾಸಕರ ಗಮನಕ್ಕೆ ತಂದಿದೆ.
ಅರ್ಧ ಶತಮಾನದ ಹೋರಾಟದ ಇತಿಹಾಸ (1973 ರಿಂದ):
ವಿಟ್ಲ ತಾಲೂಕು ರಚನೆಯ ಬೇಡಿಕೆಗೆ ಸುಮಾರು 53 ವರ್ಷಗಳ ಸುದೀರ್ಘ ಇತಿಹಾಸವಿದೆ ಎಂದು ಹೋರಾಟ ಸಮಿತಿ ನೆನಪಿಸಿದೆ.
1973ರ ವಾಸುದೇವ ರಾವ್ ಸಮಿತಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ತಾಲೂಕುಗಳ ರಚನೆ ಕುರಿತು ಅಧ್ಯಯನ ನಡೆಸಲು ಅಂದಿನ ಸರ್ಕಾರ ನೇಮಿಸಿದ್ದ ಶ್ರೀ ವಾಸುದೇವ ರಾವ್ ಸಮಿತಿಯು ವಿಟ್ಲ ತಾಲೂಕು ರಚನೆಯ ಅಗತ್ಯದ ಕುರಿತು ವರದಿ ನೀಡಿತ್ತು.
ದಿವಂಗತರ ಹೋರಾಟ: ದಿವಂಗತ ಬಾಬು ಶೆಟ್ಟಿ ವಿಟ್ಲ, ದಿವಂಗತ ಸಂಸದ ನಾರಾಯಣ ಭಟ್ (ಅಂದಿನ ರಾಜ್ಯ ಸರ್ಕಾರದ ಆಹಾರ ಸಚಿವರಾಗಿದ್ದವರು) ಹಾಗೂ ಶ್ರೀ ಬಿ. ವಿಠಲದಾಸ ಶೆಟ್ಟಿ ಅವರು ಅಂದಿನ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿಟ್ಲ ತಾಲೂಕು ರಚಿಸುವಂತೆ ಒತ್ತಾಯಿಸಿದ್ದರು.
1985ರ ಪುನರ್ ವಿಂಗಡನಾ ಸಮಿತಿ: ಈ ಸಮಿತಿಯು ತನ್ನ ವರದಿಯಲ್ಲಿ ವಿಟ್ಲ ತಾಲೂಕು ರಚನೆಗೆ ಶಿಫಾರಸು ಮಾಡಿತ್ತಾದರೂ ಅದು ಕಾರ್ಯಗತವಾಗಲಿಲ್ಲ.
2013ರ ಹೋರಾಟ: 2013 ರಲ್ಲಿ ವಿಟ್ಲ ತಾಲೂಕು ರಚನೆಗಾಗಿ ಮಾಣಿಲ ಗ್ರಾಮದ ಮುರುವ ಮಹಾಬಲ ಭಟ್ಟರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆದಿತ್ತು. ಆದರೆ, ತದನಂತರದ ದಿನಗಳಲ್ಲಿ ಜಿಲ್ಲೆಯ ಉಳ್ಳಾಲ, ಕಡಬ, ಮೂಡಬಿದ್ರೆ ಮುಂತಾದ ಹೊಸ ತಾಲೂಕುಗಳು ರಚನೆಯಾದರೂ ವಿಟ್ಲ ತಾಲೂಕು ರಚನೆ ಮಾತ್ರ ಕೇವಲ ಕನಸಾಗಿಯೇ ಉಳಿದಿದೆ.
ಯಾಕೆ ವಿಟ್ಲ ತಾಲೂಕಾಗಬೇಕು? ಪ್ರಸ್ತುತ ಸಮಸ್ಯೆಗಳು:
ಅತಿ ದೊಡ್ಡ ತಾಲೂಕಿನ ಹೊರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಬಂಟ್ವಾಳ ತಾಲೂಕು ಅತ್ಯಂತ ದೊಡ್ಡದಾಗಿದ್ದು, ಬರೋಬ್ಬರಿ 75 ಗ್ರಾಮಗಳನ್ನು ಒಳಗೊಂಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಇದನ್ನು ವಿಭಜಿಸುವುದು ಅನಿವಾರ್ಯ.
50 ಕಿ.ಮೀ ದೂರದ ಪ್ರಯಾಣ: ವಿಟ್ಲ ಹೋಬಳಿ ವ್ಯಾಪ್ತಿಯ ಕರೋಪಾಡಿ, ಕನ್ಯಾನ, ಪೆರುವಾಯಿ, ಮಾಣಿಲ, ಕೇಪು, ಪುಣಚ, ಬಿಳಿಯೂರು, ಕುಳ, ವಿಟ್ಲ, ಮುಡ್ನೂರು, ಕೊಳ್ನಾಡು, ಸಾಲೆತ್ತೂರು ಇತ್ಯಾದಿ ಗ್ರಾಮಗಳ ಸಾರ್ವಜನಿಕರು ತಮ್ಮ ಜಮೀನುಗಳಿಗೆ ಸಂಬಂಧಿಸಿದ ಪಟ್ಟಾ, ಸರ್ಕಾರಿ ಕೆಲಸಗಳು ಹಾಗೂ ಬ್ಯಾಂಕ್ ಕಚೇರಿಗಳ ಕೆಲಸಕ್ಕಾಗಿ ಸುಮಾರು 25 ರಿಂದ 50 ಕಿ.ಮೀ. ದೂರದ ಬಂಟ್ವಾಳ ತಾಲೂಕು ಕಚೇರಿಗೆ ಅಲೆಯಬೇಕಾಗಿದೆ. ಇದು ಗಡಿನಾಡಿನ ಈ ಭಾಗದ ಜನರ ಆರ್ಥಿಕ ಮತ್ತು ಸಮಯದ ನಷ್ಟಕ್ಕೆ ಕಾರಣವಾಗಿದೆ.
ಗಡಿ ಪ್ರದೇಶದ ಅಭಿವೃದ್ಧಿ: ಕೇರಳ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ವಿಟ್ಲ ಭಾಗದ ಸಮಗ್ರ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ವಿಸ್ತರಣೆಗೆ ತಾಲೂಕು ಕೇಂದ್ರದ ಅವಶ್ಯಕತೆ ಹೆಚ್ಚಿದೆ.

ಮನವಿಯ ಮುಖ್ಯಾಂಶಗಳು:
ಬೃಹತ್ ತಾಲೂಕಿನ ವಿಭಜನೆ: ಬಂಟ್ವಾಳ ತಾಲೂಕು 75 ಗ್ರಾಮಗಳನ್ನು ಹೊಂದಿದ್ದು, ಜಿಲ್ಲೆಯಲ್ಲೇ ಅತಿ ದೊಡ್ಡ ತಾಲೂಕಾಗಿದೆ. ಆಡಳಿತಾತ್ಮಕ ಸುಲಭತೆಗಾಗಿ ಇದನ್ನು ವಿಭಜಿಸ ಬೇಕು.
ದೂರದ ಪ್ರಯಾಣ: ಕರೋಪಾಡಿ, ಕನ್ಯಾನ, ಪೆರುವಾಯಿ ಸೇರಿದಂತೆ ಗಡಿಭಾಗದ ಜನರು ಸರಕಾರಿ ಕೆಲಸಗಳಿಗಾಗಿ ಸುಮಾರು 30 ರಿಂದ 50 ಕಿ.ಮೀ ದೂರದ ಬಂಟ್ವಾಳಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ.
ಅರ್ಹತೆಗಳು: ವಿಟ್ಲ ಹೋಬಳಿಯು 65,547 ಎಕರೆ ವಿಸ್ತೀರ್ಣ ಹೊಂದಿದ್ದು, ವಾರ್ಷಿಕ ಕೋಟಿಗಟ್ಟಲೆ ಭೂ ಕಂದಾಯ ಮತ್ತು ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸುತ್ತಿದೆ. 2011ರ ಜನಗಣತಿಯಂತೆ ಸುಮಾರು 1.94 ಲಕ್ಷ ಜನಸಂಖ್ಯೆಯನ್ನು ಈ ಭಾಗ ಹೊಂದಿದೆ.
ವಿಟ್ಲ ಹೋಬಳಿಯನ್ನು ಪ್ರತ್ಯೇಕಿಸಿದರೂ ಸಹ ಬಂಟ್ವಾಳ ತಾಲೂಕು 41 ಗ್ರಾಮಗಳು ಹಾಗೂ 1,94,860 ಜನಸಂಖ್ಯೆಯೊಂದಿಗೆ ವಿಶಾಲವಾಗಿಯೇ ಉಳಿಯುತ್ತದೆ. ಆದ್ದರಿಂದ ಭೌಗೋಳಿಕ, ಜನಸಂಖ್ಯೆ ಹಾಗೂ ಸರ್ಕಾರಿ ಸೌಲಭ್ಯಗಳ ಲಭ್ಯತೆಯ ಅನುಗುಣವಾಗಿ ವಿಟ್ಲ ತಾಲೂಕು ರಚನೆ ತೀರಾ ನ್ಯಾಯಸಮ್ಮತವಾಗಿದೆ.
ಸಮಿತಿಯ ವಿನಂತಿ ಮತ್ತು ಮುಂದಿನ ನಡೆ:
ವಿಟ್ಲ ಭಾಗದ ಜನರ ಸಹಬಾಳ್ವೆ, ಸಮಪಾಲು, ಶಾಂತಿ ಸೌಹಾರ್ದತೆ ಹಾಗೂ ಈ ಮೂಲಕ ಕರ್ನಾಟಕದ ಸಮಗ್ರ ಅಭಿವೃದ್ಧಿಯ ದಿಕ್ಕಿನಲ್ಲಿ ವಿಟ್ಲ ತಾಲೂಕು ರಚನೆಯನ್ನು ಮಾಡಿಕೊಡಬೇಕಾಗಿ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಸಕರಲ್ಲಿ ವಿನಂತಿಸಿಕೊಂಡಿದ್ದಾರೆ. ಮಾನ್ಯ ಶಾಸಕರು ಕೂಡಾ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಅಧ್ಯಕ್ಷ ಬಿ ಕೆ ಬಶೀರ್, ಪ್ರ.ಕಾರ್ಯದರ್ಶಿ ರಮಾನಾಥ ವಿಟ್ಲ,ಉಪಾಧ್ಯಕ್ಷ ಹಸೈನಾರ್ ಕಡಂಬು, ಸುದರ್ಶನ್ ಪಡಿಯಾರ್, ಕಾನ ಈಶ್ವರಭಟ್, ರಾಮಣ್ಣ ಕರೋಪಾಡಿ,ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ,ರಾಮಮುಗೇರ,ಜಾಫರ್ ಖಾನ್, ಶ್ರೀಧರ್ ಶೆಟ್ಟಿ ಪೊಲ್ಯ,ಸದಾನಂದಗೌಡ ಸೇರಾಜೆ,ಇಕ್ಬಾಲ್ ವಿಟ್ಲ, ದಿನಕರ ಆಳ್ವ ವಿಟ್ಲ ಮೊದಲಾವರು ಉಪಸ್ಥಿತರಿದ್ದರು




Belthangady
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು: ಚಿನ್ನಯ್ಯ ವಿರುದ್ಧ ಎಸ್ಐಟಿಗೆ ಗಿರೀಶ್ ಮಟ್ಟಣ್ಣನವರ್ ದೂರು
ಧರ್ಮಸ್ಥಳದ ಬುರುಡೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಇತ್ತೀಚೆಗೆ ಮಾಸ್ಟರ್ಮ್ಯಾನ್ ಚಿನ್ನಯ್ಯ ತನ್ನದೇ ತಂಡದ ವಿರುದ್ಧ 200 ಕೋಟಿ ರೂ. ಫಂಡಿಂಗ್, ಪಿತೂರಿ ಹಾಗೂ ನಟ Prakash Raj ಹೆಸರನ್ನು ಉಲ್ಲೇಖಿಸಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ, ಇದೀಗ ಗಿರೀಶ್ ಮಟ್ಟಣ್ಣನವರ್ ಪ್ರತಿದಾಳಿ ನಡೆಸಿದ್ದಾರೆ.
ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಭೇಟಿ ನೀಡಿದ ಗಿರೀಶ್ ಮಟ್ಟಣ್ಣನವರ್, ಹೋರಾಟಗಾರ ಟಿ. ಜಯಂತ್ ಹಾಗೂ ಯೂಟ್ಯೂಬರ್ ಅಭಿಷೇಕ್ ಅವರೊಂದಿಗೆ ಚಿನ್ನಯ್ಯ ವಿರುದ್ಧ ದೂರು ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಸೇರಿದಂತೆ ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ಮಾಡಿರುವ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
“ಚಿನ್ನಯ್ಯ ನಮ್ಮ ವಿರುದ್ಧ ಮಾಡಿರುವ ಆರೋಪಗಳ ಆಧಾರದ ಮೇಲೆ ನಮ್ಮೆಲ್ಲರನ್ನೂ ತನಿಖೆಗೆ ಒಳಪಡಿಸಬೇಕು. ನನ್ನ ಬ್ರೈನ್ ಮ್ಯಾಪಿಂಗ್ ಪರೀಕ್ಷೆಯನ್ನು ಬೇಕಿದ್ದರೆ ಲೈವ್ ಆಗಿಯೇ ನಡೆಸಲಿ. ಆತ ಹೇಳಿರುವ 200 ಕೋಟಿ ರೂ. ಹಣದ ಆರೋಪ ಸೇರಿದಂತೆ ರಿಟ್ ಅರ್ಜಿಯಲ್ಲಿರುವ ಪ್ರತಿಯೊಂದು ಅಂಶವನ್ನು ಎಸ್ಐಟಿ ತನಿಖೆ ಮಾಡಬೇಕು” ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದರು.
ಅಲ್ಲದೆ, ಚಿನ್ನಯ್ಯನಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಎಸ್ಐಟಿ ಅರ್ಜಿ ಸಲ್ಲಿಸಬೇಕು ಹಾಗೂ ಆತನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂಬುದನ್ನೂ ತಮ್ಮ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಿದರು.
ಚಂದ್ರಶೇಖರ್ ಸ್ವಾಮೀಜಿ ಅವರನ್ನು ಭೇಟಿಯಾಗಿದ್ದ ವಿಚಾರವನ್ನು ಒಪ್ಪಿಕೊಂಡ ಗಿರೀಶ್ ಮಟ್ಟಣ್ಣನವರ್, “ಪಾಯಿಂಟ್ ತೋರಿಸುವ ಸಂದರ್ಭದಲ್ಲಿ ಚಿನ್ನಯ್ಯನಿಗೆ ವಿಚಿತ್ರ ಅನುಭವವಾಗುತ್ತಿದೆ ಎಂದು ಹೇಳಿದ್ದ. ಆ ಕಾರಣದಿಂದಲೇ ಮಾಟ-ಮಂತ್ರ ಸಂಬಂಧ ಸಲಹೆ ಪಡೆಯಲು ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೆವು. ಆದರೆ ಅವರು ಯಾವುದೇ ಪೊಲೀಸರಿಗೆ ಶಿಫಾರಸು ಮಾಡಿಲ್ಲ” ಎಂದು ಸ್ಪಷ್ಟಪಡಿಸಿದರು.
ಚಿನ್ನಯ್ಯ ತನ್ನ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರನ್ನು ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಪ್ರಕಾಶ್ ರಾಜ್ ಕರೆ ಮಾಡಿದ್ದಾರೆಯೇ ಎಂಬ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅದಕ್ಕೆ ಅವರೇ ಉತ್ತರ ನೀಡುತ್ತಾರೆ. ಈ ಹೋರಾಟಕ್ಕೆ ನೈತಿಕವಾಗಿ ಸಾಕಷ್ಟು ಜನ ಬೆಂಬಲ ನೀಡಿದ್ದಾರೆ” ಎಂದು ಹೇಳಿದರು.
ಇದೇ ವೇಳೆ, ಚಿನ್ನಯ್ಯನಿಗೆ ಹಿಂಸೆ ನೀಡಿ ಕೈ-ಕಾಲು ಒತ್ತಿಸಿಕೊಳ್ಳುತ್ತಿದ್ದೆವು ಎಂಬ ಆರೋಪವನ್ನೂ ಗಿರೀಶ್ ಮಟ್ಟಣ್ಣನವರ್ ತಳ್ಳಿಹಾಕಿದರು. “ಚಿನ್ನಯ್ಯ ನಮ್ಮೊಂದಿಗೆ ಆತ್ಮೀಯವಾಗಿದ್ದ. ನಾವು ಬೇಡ ಎಂದರೂ ಆತನೇ ಬಂದು ಕಾಲು ಒತ್ತುತ್ತಿದ್ದ. ನನಗೆ ಕಾಲಿನ ನೋವು ಇದ್ದ ಕಾರಣ ಆತ ಸ್ವಯಂಪ್ರೇರಿತವಾಗಿ ಸಹಾಯ ಮಾಡುತ್ತಿದ್ದ. ಇದರಲ್ಲಿ ಯಾವುದೇ ಬಲವಂತ ಅಥವಾ ಹಿಂಸೆ ಇರಲಿಲ್ಲ” ಎಂದು ಸಮರ್ಥಿಸಿಕೊಂಡರು.
ಪ್ರಕರಣ ಮತ್ತಷ್ಟು ಸಂಕೀರ್ಣ
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಮತ್ತು ಆತನ ವಿರುದ್ಧ ಆರೋಪ ಕೇಳಿಬರುತ್ತಿರುವವರ ನಡುವಿನ ಪರಸ್ಪರ ಆರೋಪಗಳು ಪ್ರಕರಣವನ್ನು ಮತ್ತಷ್ಟು ಸಂಕೀರ್ಣಗೊಳಿಸಿವೆ. ಇದೀಗ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿನ ಆರೋಪಗಳು ಹಾಗೂ ಗಿರೀಶ್ ಮಟ್ಟಣ್ಣನವರ್ ನೀಡಿರುವ ದೂರಿನ ಆಧಾರದ ಮೇಲೆ ಎಸ್ಐಟಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ



Bantawala
ಕುಳ ಕಂದಾಯ ಕಛೇರಿಯಲ್ಲಿ ಧರಣ್ ದರ್ಭಾರ್..ನಾಗರಿಕರು ಹೈರಾಣ..ಜಿಲ್ಲಾಧಿಕಾರಿಗೆ ದೂರು..
ಬಂಟ್ವಾಳ: ತಾಲೂಕಿನ ಕುಳ ಗ್ರಾಮದ ಆಡಳಿತ ಅಧಿಕಾರಿಯ (VA) ಕಚೇರಿಯು ಸಾರ್ವಜನಿಕರ ಸೇವೆಗೆ ಇರಬೇಕಾದ ಸರ್ಕಾರಿ ಕಚೇರಿಯೋ ಅಥವಾ ಖಾಸಗಿ ವ್ಯಕ್ತಿಗಳ ಹಣ ವಸೂಲಿ ಕೇಂದ್ರವೋ ಎನ್ನುವ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಕಾಡಲಾರಂಭಿಸಿದೆ. ಕಚೇರಿಯೊಳಗೆ ಧರಣ್ ಮಾಣಿ ಎಂಬ ಖಾಸಗಿ ಬ್ರೋಕರ್ನನ್ನು ಕಾನೂನುಬಾಹಿರವಾಗಿ ಕೂರಿಸಿಕೊಂಡು, ಅಮಾಯಕ ಗ್ರಾಮೀಣ ಜನರಿಂದ ಹಣ ಸುಲಿಗೆ ಮಾಡುತ್ತಿರುವ ಜಿಗಣೆ ದಂಧೆ ಬೆಳಕಿಗೆ ಬಂದಿದೆ.
ಕಚೇರಿ ಕೆಲಸಕ್ಕೆ ಬಂದರೆ ಜೇಬಿಗೆ ಕತ್ತರಿ!
ಕುಳ ಮತ್ತು ಇಡ್ಕಿದು ಜೋಡು ಗ್ರಾಮಗಳಾಗಿದ್ದು, ಇಲ್ಲಿನ ಕಂದಾಯ ಕಚೇರಿಗೆ ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಬಡ, ಅಮಾಯಕ ಜನರನ್ನು ಗುರಿಯಾಗಿಸಿಕೊಂಡು ಈ ದಲ್ಲಾಳಿ ಜಾಲ ಕಾರ್ಯಾಚರಣೆ ನಡೆಸುತ್ತಿದೆ. ಕಚೇರಿ ಕೆಲಸಗಳಿಗಾಗಿ ಬರುವ ಸಾರ್ವಜನಿಕರಿಂದ ರಾಜಾರೋಷವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಒಂದು ವೇಳೆ ಬೇಡಿಕೆಯಿಟ್ಟಷ್ಟು ಹಣ ನೀಡದಿದ್ದರೆ, ಅಂತವರ ಫೈಲ್ಗಳನ್ನು ಉದ್ದೇಶಪೂರ್ವಕವಾಗಿ ವಿಳಂಬ ಮಾಡಿಸಿ, ಜನ ಸಾಮಾನ್ಯರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಕುಳ ಗ್ರಾಮಸ್ಥರು ನೇರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲ್ಲಾಳಿಗೆ ಗ್ರಾಮ ಸಹಾಯಕ ರಾಘವನ ‘ಶ್ರೀರಕ್ಷೆ’!
ಈ ಇಡೀ ಅಕ್ರಮ ದಂಧೆಯ ಹಿಂದೆ ಕುಳ ಗ್ರಾಮದ ಸಹಾಯಕನಾಗಿರುವ ಇಡೀದು ಗ್ರಾಮದ ರಾಘವ ಗೌಡ ಎಂಬಾತನ ಪೂರ್ಣ ಶ್ರೀರಕ್ಷೆ ಹಾಗೂ ಶಾಮೀಲಾತಿ ಇರುವುದು ಸಾಕ್ಷ್ಯಸಮೇತ ಬಹಿರಂಗವಾಗಿದೆ. ದಿನಾಂಕ 08/06/2026 ರಂದು ಬೆಳಿಗ್ಗೆ 9:18 ರ ಸುಮಾರಿಗೆ ಸ್ಥಳೀಯ ನಾಗರಿಕರಾದ ಸಚಿನ್ ಉರಿಮಜಲು ಅವರು ಕಚೇರಿಗೆ ಭೇಟಿ ನೀಡಿದಾಗ, ಗ್ರಾಮ ಸಹಾಯಕನ ಅಧಿಕೃತ ಪೀಠದಲ್ಲೇ ಈ ಬ್ರೋಕರ್ ಧರಣ್ ಆಸೀನನಾಗಿ ದರ್ಬಾರ್ ನಡೆಸುತ್ತಿದ್ದ ದೃಶ್ಯ ಕಂಡುಬಂದಿದೆ. ಇದನ್ನು ಸಚಿನ್ ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲು ಯತ್ನಿಸಿದಾಗ, ಗ್ರಾಮ ಸಹಾಯಕ ರಾಘವ ತಕರಾರು ಎಬ್ಬಿಸಿದ್ದಲ್ಲದೆ, ಕಚೇರಿಯ ಫೈಲ್/ಪುಸ್ತಕವನ್ನು ಮುಖಕ್ಕೆ ಅಡ್ಡ ಹಿಡಿದು ಅಕ್ರಮವನ್ನು ಮುಚ್ಚಿಹಾಕಲು ಹರಸಾಹಸ ಪಟ್ಟಿದ್ದಾನೆ!
ತನ್ನನ್ನು ವಿಎ (ಗ್ರಾಮ ಆಡಳಿತ ಅಧಿಕಾರಿ) ಮತ್ತು ರಾಘವ ಅವರೇ ಇಲ್ಲಿಗೆ ನೇಮಿಸಿದ್ದಾರೆ ಎಂದು ಸ್ವತಃ ದಲ್ಲಾಳಿ ಧರಣ್ ಒಪ್ಪಿಕೊಂಡಿರುವುದು ಕಂದಾಯ ಇಲಾಖೆಯೊಳಗಿನ ಭ್ರಷ್ಟಾಚಾರದ ಜಾಲವನ್ನು ಬಿಚ್ಚಿಟ್ಟಿದೆ.

ಜಾರಿಕೊಂಡ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್!
ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಕುರ್ಚಿ ಹಾಕಿ ದರ್ಬಾರ್ ನಡೆಸುತ್ತಿರುವ ಬಗ್ಗೆ ಪತ್ರಿಕೆಯು ಗ್ರಾಮ ಆಡಳಿತ ಅಧಿಕಾರಿ (VA) ಅನಿಲ್ ಕುಮಾರ್ ಅವರನ್ನು ಪ್ರಶ್ನಿಸಿದಾಗ, ಅವರು ಜಾರಿಕೊಳ್ಳುವ ಉತ್ತರ ನೀಡಿದ್ದಾರೆ. “ನಾನು ಕುಳ ಗ್ರಾಮದಲ್ಲಿ ವಾರಕ್ಕೆ ಎರಡು ದಿನ ಮಾತ್ರ ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಉಳಿದ ದಿನಗಳಲ್ಲಿ ಗ್ರಾಮ ಸಹಾಯಕ ರಾಘವ ಇರುತ್ತಾರೆ. ಕಚೇರಿಯೊಳಗೆ ದಲ್ಲಾಳಿ ಇರುವ ಬಗ್ಗೆ ನನಗೆ ತಿಳಿದಿಲ್ಲ, ನಾನು ಯಾರನ್ನೂ ನೇಮಿಸಿಲ್ಲ” ಎಂದು ದಿನಾಂಕ 10/06/2026 ರಂದು ಹೇಳಿಕೆ ನೀಡಿದ್ದಾರೆ. ಆದರೆ, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದರಿಂದಲೇ ಇಂತಹ ದಲ್ಲಾಳಿಗಳು ಸರ್ಕಾರಿ ಕಚೇರಿಗಳನ್ನು ತಮ್ಮ ಅಡ್ಡೆಯನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಸಾರ್ವಜನಿಕರು ಆಪಾದಿಸಿದ್ದಾರೆ.
ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು: ಹೋರಾಟದ ಎಚ್ಚರಿಕೆ
ಅಮಾಯಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಬ್ರೋಕರ್ ಧರಣ್ನನ್ನು ತಕ್ಷಣವೇ ಕಚೇರಿಯಿಂದ ತೆರವುಗೊಳಿಸಬೇಕು ಮತ್ತು ಆತನಿಗೆ ಕಚೇರಿಯೊಳಗೆ ಅಕ್ರಮವಾಗಿ ನೆಲೆಸಲು ಆಶ್ರಯ ನೀಡಿದ ಗ್ರಾಮ ಸಹಾಯಕ ರಾಘವ ವಿರುದ್ಧ ತಕ್ಷಣವೇ ಶಿಸ್ತು ಹಾಗೂ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದೂರುದಾರರಾದ ಸಚಿನ್ ಉರಿಮಜಲು ಅವರು ಬಂಟ್ವಾಳ ತಹಶೀಲ್ದಾರರಿಗೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಹಾಗೂ ಮಂಗಳೂರು ಸಹಾಯಕ ಕಮಿಷನರ್ ಅವರಿಗೆ ಜಿಪಿಎಸ್ ಫೋಟೋ ಸಾಕ್ಷ್ಯಗಳ ಸಮೇತ ಲಿಖಿತ ದೂರು ಸಲ್ಲಿಸಿದ್ದಾರೆ.
“ಸರ್ಕಾರಿ ಕಚೇರಿಯನ್ನು ಇವರು ತಮ್ಮ ಹಿರಿಯರ ಖಾಸಗಿ ಆಸ್ತಿ ಎಂದುಕೊಂಡಿದ್ದಾರೆಯೇ? ಕೂಡಲೇ ಈ ಭ್ರಷ್ಟ ಜಾಲದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮಾಧ್ಯಮ ಮಿತ್ರರನ್ನು ಕರೆಸಿ ಸಾರ್ವಜನಿಕರನ್ನು ಒಟ್ಟುಗೂಡಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ದೂರುದಾರರು ಎಚ್ಚರಿಸಿದ್ದಾರೆ.



complaint
ಅನಿತಾ ಕಾಸರಗೋಡು ವಿರುದ್ಧ ಮುಂದುವರಿದ ಆಕ್ರೋಶ: ವಿಟ್ಲ ಪೊಲೀಸ್ ಠಾಣೆ, ಉಪತಹಶೀಲ್ದಾರ್ಗೆ ಬಿಲ್ಲವ ಸಂಘಟನೆಗಳಿಂದ ದೂರು ಸಲ್ಲಿಕೆ
ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿತಾ ಕಾಸರಗೋಡು ಎಂಬವರ ವಿರುದ್ಧ ಕರಾವಳಿಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಾನೂನು ಕ್ರಮಕ್ಕೆ ಆಗ್ರಹಿಸಿ ಸರಣಿ ದೂರುಗಳು ದಾಖಲಾಗುತ್ತಿವೆ.

ನಿನ್ನೆಯಿಂದ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಹಾಗೂ ಮೂಡಬಿದ್ರೆಯಲ್ಲಿ ವಿವಿಧ ಬಿಲ್ಲವ ಸಂಘಟನೆಗಳು ದೂರು ದಾಖಲಿಸಿದ್ದು, ಇಂದು (ಜೂನ್ 09) ವಿಟ್ಲದಲ್ಲೂ ಪ್ರತಿಭಟನೆಯ ಧ್ವನಿ ಮೊಳಗಿದೆ. ವಿಟ್ಲದ ಬಿಲ್ಲವ ಸಂಘ, ಮಹಿಳಾ ಘಟಕ ಮತ್ತು ಯುವವಾಹಿನಿ ಘಟಕಗಳ ಪ್ರಮುಖರು ಒಟ್ಟಾಗಿ ಸೇರಿ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ವಿಟ್ಲ ಉಪತಹಶೀಲ್ದಾರ್ ಅವರಿಗೆ ಅಧಿಕೃತವಾಗಿ ದೂರು ಸಲ್ಲಿಸಿದರು.

ಕೋಮು ಸೌಹಾರ್ದತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಮತ್ತು ಒಂದು ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್ಗಳನ್ನು ಹಂಚಿಕೊಂಡಿರುವ ಆರೋಪಿ ಅನಿತಾ ಕಾಸರಗೋಡು ಅವರನ್ನು ತಕ್ಷಣವೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಪ್ರಮುಖರು ಒತ್ತಾಯಿಸಿದರು.
ದೂರು ನೀಡುವ ಸಂದರ್ಭದಲ್ಲಿ ಬಿಲ್ಲವ ಸಂಘ ಹಾಗೂ ಯುವವಾಹಿನಿ ಘಟಕದ ಪ್ರಮುಖ ಮುಖಂಡರು, ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident1 month agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala6 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
